Saturday, January 19, 2013

ಧಾರವಾಡ ಸಾಹಿತ್ಯ ಸಂಭ್ರಮ : ನಿಬಂಧನೆಗಳು ರದ್ದು !

ಧಾರವಾಡದಲ್ಲಿ ಹಮ್ಮಿಕೊಳ್ಳಲಾಗಿದ್ದ 'ಸಾಹಿತ್ಯ ಸಂಭ್ರಮ' ಕಾರ್ಯಕ್ರಮದ ನಿಬಂಧನೆಗಳನ್ನು ನಾಡಿನ ಹಲವಾರು ಬರಹಗಾರರು ಖಂಡಿಸುವ ಮೂಲಕ, ವಿರೋಧಿಸುವ ಮೂಲಕ ಪರ್ಯಾಯ ಕಾರ್ಯಕ್ರಮ ಮಾಡುವುದಾಗಿ ಘೋಷಿಸಿದ ಮೇಲೆ ಸಾಹಿತ್ಯ ಸಂಭ್ರಮದ ಸಂಘಟಕರು ಎಚ್ಚೆತ್ತುಕೊಂಡು ತಾವು ವಿಧಿಸಿದ್ದ ನಿಬಂಧನೆಗಳನ್ನು ರದ್ದುಪಡಿಸಿದ್ದಾರೆ. ಈ ಬಗ್ಗೆ ಪ್ರಜಾವಾಣಿ ದಿನಪತ್ರಿಕೆಯಲ್ಲಿ ಬಂದ ಸುದ್ದಿ ಇಲ್ಲಿದೆ ನೋಡಿ ;

ಇದೇ 25, 26 ಮತ್ತು 27ರಂದು ನಗರದಲ್ಲಿ ನಡೆಯಲಿರುವ `ಧಾರವಾಡ ಸಾಹಿತ್ಯ ಸಂಭ್ರಮ'ದಲ್ಲಿ ಪಾಲ್ಗೊಳ್ಳುವವರಿಗೆ ವಿಧಿಸಲಾಗಿದ್ದ ನಿಬಂಧನೆಗಳನ್ನು ರದ್ದುಪಡಿಸಲಾಗಿದೆ ಎಂದು `ಧಾರವಾಡ ಸಾಹಿತ್ಯ ಸಂಭ್ರಮ'ದ ಅಧ್ಯಕ್ಷ ಡಾ.ಗಿರಡ್ಡಿ ಗೋವಿಂದರಾಜ ಸ್ಪಷ್ಟಪಡಿಸಿದ್ದಾರೆ.
`ಈ ನಿಬಂಧನೆಗಳ ಬಗ್ಗೆ ಬಹಳಷ್ಟು ತಪ್ಪು ತಿಳಿವಳಿಕೆ ಉಂಟಾಗಿದ್ದರಿಂದ ಮತ್ತು ಇವುಗಳನ್ನೇ ಮುಖ್ಯವಾಗಿರಿಸಿಕೊಂಡು ವಿರೋಧ ವ್ಯಕ್ತವಾಗುತ್ತಿರುವುದರಿಂದ ಇವುಗಳನ್ನು ರದ್ದುಪಡಿಸಲಾಗಿದೆ. ಈ ಸಂಭ್ರಮವನ್ನು ಮೊದಲ ಪ್ರಯೋಗವಾಗಿ ಹಮ್ಮಿಕೊಳ್ಳಲಾಗಿದ್ದು, ಚರ್ಚಿಸಬೇಕಾಗಿರುವ ಸಾಕಷ್ಟು ವಿಷಯಗಳನ್ನು ಮುಂಬರುವ ಸಂಭ್ರಮಗಳಲ್ಲಿ ಎತ್ತಿಕೊಳ್ಳಲು ಅವಕಾಶ ಇದ್ದೇ ಇದೆ. 60 ಸಂಪನ್ಮೂಲ ವ್ಯಕ್ತಿಗಳು ಮತ್ತು ಸುಮಾರು 60 ವಿಶೇಷ ಆಮಂತ್ರಿತರು ವಿವಿಧ ಗೋಷ್ಠಿಗಳಲ್ಲಿ ಪಾಲ್ಗೊಳ್ಳುತ್ತಿದಾರೆ'.
`ಅವರಿಗೆ ಯಾವುದೇ ಶುಲ್ಕ ಇರುವುದಿಲ್ಲ. 300 ಪ್ರತಿನಿಧಿಗಳು ಭಾಗವಹಿಸುವ ನಿರೀಕ್ಷೆ ಇದೆ. ಸರ್ಕಾರ ಕೊಡುವ ಅನುದಾನ ಸಾಲದೇ ಇದ್ದುದರಿಂದ ಸಂಭ್ರಮದ ಖರ್ಚು ವೆಚ್ಚಗಳನ್ನು ನಿಭಾಯಿಸಲು ಪ್ರತಿನಿಧಿ ಶುಲ್ಕ ಆಕರಿಸಲಾಗುತ್ತಿದೆ. ಕೆಲವರು ತಪ್ಪು ತಿಳಿವಳಿಕೆಯಿಂದ ಆರೋಪಿಸುತ್ತಿರುವಂತೆ ಇದರಿಂದ ಯಾವುದೇ ಹಣ ಮಾಡಿಕೊಳ್ಳುವ ಉದ್ದೇಶ ಖಂಡಿತವಾಗಿಯೂ ಇಲ್ಲ. ಸಂಭ್ರಮದ ವೆಚ್ಚ ಸುಮಾರುರೂ 16ರಿಂದರೂ 18 ಲಕ್ಷದಷ್ಟು ಎಂದು ಅಂದಾಜಿಸಲಾಗಿದೆ. ಆದರೆ ಕೆಲವರು ಆರೋಪಿಸುತ್ತಿರುವಂತೆರೂ 40ರಿಂದರೂ 50 ಲಕ್ಷ ಸಂಗ್ರಹಿಸಲಾಗಿಲ್ಲ. ಸಂಭ್ರಮ ಮುಗಿದ ಕೆಲವೇ ದಿನಗಳೊಳಗಾಗಿ ಇದರ ಖರ್ಚು ವೆಚ್ಚವನ್ನು ಪಾರದರ್ಶಕವಾಗಿ ಪ್ರಕಟಿಸಲಾಗುವುದು' ಎಂದು ಡಾ.ಗಿರಡ್ಡಿ ತಿಳಿಸಿದ್ದಾರೆ.

No comments:

Post a Comment

ದಾಸಿಮಯ್ಯನ ವಚನ

ಒಡಲುಗೊಂಡವ ಹಸಿವ;  ಒಡಲುಗೊಂಡವ ಹುಸಿವ  ಒಡಲುಗೊಂಡವನೆಂದು  ನೀನೆನ್ನ ಜರಿದೊಮ್ಮೆ ನುಡಿಯದಿರ ನೀನೆನ್ನಂತೆ ಒಮ್ಮೆ ಒಡಲುಗೊಂಡು ನೋಡ ರಾಮನಾಥ.