Showing posts with label ಕರ್ನಾಟಕ ಜನಸಾಹಿತ್ಯ ಸಮಾವೇಶ. Show all posts
Showing posts with label ಕರ್ನಾಟಕ ಜನಸಾಹಿತ್ಯ ಸಮಾವೇಶ. Show all posts

Tuesday, March 26, 2013

ಯಾವ ಸಂಘಟನೆಗಳು ವಸೂಲಿಗೆ ಇಳಿದಿವೆ ?


ಧಾರವಾಡದಲ್ಲಿ ಭಾನುವಾರ ನಡೆದ ಜನಸಾಹಿತ್ಯ ಸಮಾವೇಶದಲ್ಲಿ `ಸಮಾಜ ವಿಜ್ಞಾನ ಬರಹ ಮತ್ತು ಸಂಸ್ಕೃತಿ ಚಿಂತನೆ' ಕುರಿತು ಕೆ.ಫಣಿರಾಜ್ ಮಾತನಾಡಿದರು. ಸಿದ್ರಾಮ ಕಾರಣಿಕ, ಡಾ.ರಂಗನಾಥ್ ಕಂಟನಕುಂಟೆ ಇದ್ದಾರೆ
ಧಾರವಾಡ: `ಎಡಗೈ-ಬಲಗೈ ನೆಪದಲ್ಲಿ ಸಂಘರ್ಷಕ್ಕೆ ಇಳಿದಿರುವ ದಲಿತ ಸಂಘಟನೆಗಳು, ವಶೀಲಿಬಾಜಿ ಭರದಲ್ಲಿ ದಲಿತರ ಸಮಸ್ಯೆಗಳಿಗೆ ಸ್ಪಂದಿಸುತ್ತಿಲ್ಲ' ಎಂಬ ಹೇಳಿಕೆ ಭಾನುವಾರ ಇಲ್ಲಿ ನಡೆದ ಕರ್ನಾಟಕ ಜನಸಾಹಿತ್ಯ ಸಮಾವೇಶದಲ್ಲಿ ಗಂಭೀರ ಚರ್ಚೆಗೆ ಗ್ರಾಸವಾಯಿತು.
ಲೇಖಕ ಡಾ. ಲಕ್ಷ್ಮೀನಾರಾಯಣ ಅವರು, ಸಮಾವೇಶದ ಸಂವಾದದ ವೇಳೆ `ಉತ್ತರ ಪ್ರದೇಶದಲ್ಲಿ ದಲಿತರ ಪರವಾದ ಬಿಎಸ್‌ಪಿ ಸರ್ಕಾರ ಅಧಿಕಾರಕ್ಕೆ ಬಂದಿತ್ತು. ಆದರೆ ಕರ್ನಾಟದಕದಲ್ಲಿನ ದಲಿತ ಸಂಘಟನೆಗಳ ವಶೀಲಿ ಬಾಜಿಯಿಂದಾಗಿ ದಲಿತ ಚಳವಳಿ ತನ್ನ ಅಸ್ತಿತ್ವ ಕಳೆದುಕೊಂಡಿತು. ದಲಿತ ಚಳವಳಿ ಮೂರ್ತ ರೂಪ ಪಡೆದು ರಾಜಕೀಯ ಶಕ್ತಿ ಆಗಲೇ ಇಲ್ಲ' ಎಂದರು.
ಆಗ ವೇದಿಕೆ ಏರಿದ ದಲಿತ ಸಂಘರ್ಷ ಸಮಿತಿ ಮುಖಂಡ ಲಕ್ಷ್ಮೀನಾರಾಯಣ ನಾಗವಾರ, `ಯಾವ ಸಂಘಟನೆಗಳು ವಸೂಲಿಗೆ ಇಳಿದಿವೆ ಎಂಬುದನ್ನು ಸಾಬೀತುಪಡಿಸಿ, ಇಲ್ಲದಿದ್ದರೆ ಆ ಮಾತು ವಾಪಸ್ ಪಡೆಯಬೇಕು. ಪ್ರಗತಿಪರರು ಎನಿಸಿಕೊಂಡವರೇ ದಲಿತ ಸಂಘಟನೆಗಳ ಬಗೆಗೆ ಹೀಗೆ ಮಾತನಾಡಿದರೆ ಹೇಗೆ?' ಎಂದು ಪ್ರಶ್ನಿಸಿದರು.
ನಾಗವಾರ ಪ್ರಶ್ನೆಗೆ ಪೂರಕವಾಗಿ ಮಾತನಾಡಿದ ಹಿರಿಯ ಸಾಹಿತಿ ರಾಜಪ್ಪ ದಳವಾಯಿ, `ದಲಿತ ಸಂಘಟನೆಗಳು ತಮ್ಮ ಅಸ್ತಿತ್ವ ಕಳೆದುಕೊಂಡಿವೆ ಅಥವಾ ವಿಘಟನೆಗೊಂಡಿವೆ ಎನ್ನುವ ಮೂಲಕ ಕೆಲವರು ಜನಸಾಮಾನ್ಯರಲ್ಲಿ ಅಪನಂಬಿಕೆ ಹುಟ್ಟಿಸುತ್ತಿದ್ದಾರೆ. ಯಾರಾದರೂ ದಲಿತರ ಹಿತಾಸಕ್ತಿಗೆ ವಿರುದ್ಧವಾದ ಒಂದು ಹೇಳಿಕೆ ಕೊಟ್ಟು ನೋಡಲಿ. ಆಗ ದಲಿತರು ಏನು ಎಂಬುದು ಗೊತ್ತಾಗುತ್ತದೆ' ಎಂದು ಪರೋಕ್ಷ ಎಚ್ಚರಿಕೆ ನೀಡಿದರು.
`ದಲಿತರಲ್ಲಿ ಎಡಗೈ-ಬಲಗೈ ವಿಚಾರ ದೊಡ್ಡದು ಮಾಡುವ ಕೆಲವು ಪ್ರಗತಿಪರರೇ ಮೊದಲು ಸಮಾಜವನ್ನೇ ಅರ್ಥಮಾಡಿಕೊಂಡಿಲ್ಲ. ಇನ್ನು ಚಳವಳಿಯನ್ನು ಹೇಗೆ ಅರ್ಥ ಮಾಡಿಕೊಳ್ಳುತ್ತಾರೆ' ಎಂದು ಪ್ರಶ್ನಿಸಿದರು.
`ದಲಿತರನ್ನು ಇನ್ನೂ ಎಡಗೈ, ಬಲಗೈ ಎಂದು ಒಡೆದು ಆಳಲಾಗುತ್ತಿದೆ. ಮೇಲ್ಜಾತಿಗಳಲ್ಲಿ ಒಳಪಂಗಡಗಳು ಇದ್ದು, ಹೊಡೆದಾಟ-ಕೊಲೆಗಳೇ ನಡೆದಿದ್ದರೂ ಅದನ್ನು ಅಷ್ಟಾಗಿ  ಪರಿಗಣಿಸದ ಕೆಲವರು ದಲಿತರನ್ನು ಈ ರೀತಿ ಗುರುತಿಸುತ್ತಿದ್ದಾರೆ' ಎಂಬ ದಲಿತ ಮುಖಂಡರ ಆಕ್ರೋಶವೂ ವ್ಯಕ್ತವಾಯಿತು. ಇದಕ್ಕೂ ಮುನ್ನ ನಡೆದ `ಹೊಸ ತಲೆಮಾರಿನ ಕಥಾ ಸಾಹಿತ್ಯ'  ಗೋಷ್ಠಿಯಲ್ಲಿ ಎಸ್.ಗಂಗಾಧರಯ್ಯ, `ಪ್ರಶಸ್ತಿ ನೀಡಲು ಪರಿಗಣಿಸುವ ಸಂದರ್ಭದಲ್ಲಿ ಅರ್ಹತೆ ಇದ್ದವರನ್ನು ಅಸ್ಪೃಶ್ಯರಂತೆ ಕಾಣಲಾಗುತ್ತಿದೆ ' ಎಂದು ಹೇಳಿದ್ದು ಬಿಸಿ ಚರ್ಚೆಗೆ ಕಾರಣವಾಯಿತು. ಗೋಷ್ಠಿ ಮುಗಿಯುತ್ತಿದ್ದಂತೆಯೇ ವೇದಿಕೆಗೆ ಬಂದ ಲಕ್ಷ್ಮೀನಾರಾಯಣ ನಾಗವಾರ, `ಅಸ್ಪೃಶ್ಯರು' ಎಂಬ ಪದ ಬಳಕೆ ಸರಿಯಲ್ಲ. ಆ ಮೂಲಕ ಗಂಗಾಧರಯ್ಯ ದಲಿತರನ್ನು ಅವಮಾನಿಸುತ್ತಿದ್ದಾರೆ. ಆ ಪದ ಹಿಂದಕ್ಕೆ ಪಡೆಯಬೇಕು ಎಂದು ಒತ್ತಾಯಿಸಿದರು.
ನಾಗವಾರ ಅವರ ಆಕ್ಷೇಪಕ್ಕೆ ಸ್ಪಷ್ಟನೆ ನೀಡಿದ ಗಂಗಾಧರಯ್ಯ, `ಅಸ್ಪಶ್ಯರು' ಎಂಬ ಪದ ಬಳಕೆ ಮಾಡಿದ್ದು ಯಾರನ್ನೋ ನೋಯಿಸಲು ಅಲ್ಲ. ಬದಲಿಗೆ ಪ್ರಶಸ್ತಿಗೆ ಆಯ್ಕೆಯ ರಾಜಕೀಯ ಬಿಚ್ಚಿಡುವಾಗ ಮಾತಿನ ಭರದಲ್ಲಿ ಹೇಳಿದ್ದು, ಅದು ನೋವುಂಟು ಮಾಡಿದ್ದರೆ ವಿಷಾದ ವ್ಯಕ್ತಪಡಿಸುವುದಾಗಿ ಹೇಳಿದರು.

ಕೃಪೆ : ಮನೋಜ್‌ಕುಮಾರ್ ಗುದ್ದಿ, ಪ್ರಜಾವಾಣಿ 

Friday, March 15, 2013

ಕರ್ನಾಟಕ ಜನಸಾಹಿತ್ಯ ಸಮಾವೇಶ ಆಹ್ವಾನ ಪತ್ರಿಕೆ







ಕರ್ನಾಟಕ ಜನಸಾಹಿತ್ಯ ಸಮಾವೇಶ
ಮಾರ್ಚ್ ೨೩ ಮತ್ತು ೨೪, ೨೦೧೩.
ಪಾಟೀಲ ಪುಟ್ಟಪ್ಪ ಸಭಾಭವನ, ಕರ್ನಾಟಕ ವಿದ್ಯಾವರ್ಧಕ ಸಂಘ, ಧಾರವಾಡ

ಮಾ.೨೩. ಬೆ. ೧೦.೩೦-೧೧.೩೦:

೧. ಆಶಯ ನುಡಿ

ಪ್ರಸ್ತಾವನೆ : ಡಾ. ಎಂ ಡಿ ಒಕ್ಕುಂದ
ಆಶಯ ಮಾತು :
ಲಕ್ಷ್ಮಣ  ಗಾಯಕವಾಡ, ಮರಾಠಿ ದಲಿತ ಲೇಖಕರು
ಬಾನು ಮುಷ್ತಾಕ್,
ಸಂಯೋಜನೆ: ಡಾ. ಸಂಜೀವ ಕುಲಕರ್ಣಿ


೨. ವರ್ತಮಾನದ ಬಿಕ್ಕಟ್ಟು; ವಿವಿಧ ನೋಟಗಳು ೧೧.೩೦-೨.೦೦

ದು. ಸರಸ್ವತಿ
ಡಾ. ನಾಗೇಶ ಹೆಗಡೆ
ಡಾ. ಬಂಜಗೆರೆ ಜಯಪ್ರಕಾಶ
ಡಾ. ಎಸ್.ಬಿ.ಜೋಗುರ
ಸ್ಪಂದನ : ಡಾ. ಮುಜಾಫರ್ ಅಸ್ಸಾದಿ
ಸಂಯೋಜನೆ : ಡಾ. ಜಗದೀಶ ಕೊಪ್ಪ


೩. ಸಮಾಜ ಮತ್ತು  ನನ್ನ ಬರಹ   ಮ. ೩.೦೦ - ೫.೦೦
ಸರ್ಜಾಶಂಕರ್ ಹರಳಿಮಠ
ಬಿ.ಪೀರ್‌ಬಾಷಾ
ವೀರಣ್ಣ ಮಡಿವಾಳರ
ಡಾ. ಅನಸೂಯಾ ಕಾಂಬಳೆ
ವಸಂತ ಬನ್ನಾಡಿ
ಜ್ಯೋತಿ ಚೇಳಾಯರು
ಡಾ. ಮಲ್ಲಿಕಾರ್ಜುನ ಮೇಟಿ
ಟಿ ಕೆ ದಯಾನಂದ
ಬಾಲ ಗುರುಮೂರ್ತಿ
ರಮೇಶ ಅರೋಲಿ


ಸ್ಪಂದನ : ಡಾ. ಕುಂ. ವೀರಭದ್ರಪ್ಪ
ಸಂಯೋಜನೆ : ಡಾ. ಕಾ. ವೆಂ. ಶ್ರೀನಿವಾಸಮೂರ್ತಿ


೪. ಕವಿಗೋಷ್ಠಿ  ಸಂಜೆ ೫.೩೦ - ೮.೦೦

ಸುಬ್ಬು ಹೊಲೆಯಾರ್
ವಿ. ಎಂ. ಮಂಜುನಾಥ
ವಿ. ಆರ್. ಕಾರ್ಪೆಂಟರ್
ಡಾ. ಅರುಣ ಜೋಳದ ಕೂಡ್ಲಿಗಿ
ಪ್ರವರ ಕೊಟ್ಟೂರ
ಶರೀಫ್ ಹಸಮಕಲ್
ಸ್ಮಿತಾ ಮಾಕಳ್ಳಿ
ಸೈಫ್ ಜಾನ್ಸೆ ಕೊಟ್ಟೂರು
ಸೀಮಾ ಸಮತಳ
ಕಾವ್ಯ. ಪಿ. ಕೆ
ಗಂಗಪ್ಪ ತಳವಾರ
ಬಸವರಾಜ ಹಳ್ಳಿ
ಹೃದಯಶಿವ
ಸತ್ಯಮಂಗ ಮಹಾದೇವ
ವಿ. ಹರಿನಾಥ ಬಾಬು
ಗಣೇಶ್ ಹೊಸ್ಮನೆ
ಭವ್ಯ. ಎಚ್. ಸಿ
ಕಾವ್ಯಶ್ರೀ
ಟಿ. ಎಸ್. ಗೊರವರ
ಚೈತ್ರ ಬೇವಿನಗಿಡದ
ಕುಂಸಿ ಉಮೇಶ
ಅಬ್ಬಾಸ ಮೇಲಿನಮನಿ
ಮಂಜುನಾಥ ಡೊಳ್ಳಿನ
ಬಿ. ಶ್ರೀನಿವಾಸ
ಶ್ರೀದೇವಿ ಕಳಸದ
ಬಸವರಾಜ ಹೂಗಾರ
ಕೆ. ಅಕ್ಷತಾ
ಮಂಜುಳಾ ಮಾದರ
ಶಿವಕುಮಾರ ಕಂಪ್ಲಿ
ದೊಡ್ಡನಿಂಗಪ್ಪ ಆಲೂರ್
ಡಿ. ಕೆ. ರಮೇಶ್
ಕುಮಾರ್. ಎಸ್
ಕಲ್ಲೇಶ್ ಕುಂಬಾರ
ಚನ್ನಪ್ಪ ಅಂಗಡಿ
ಅಪ್ಪಗೆರೆ ಸೋಮಶೇಖರ್
ನಾಗರಾಜ ಹರಪನಹಳ್ಳಿ
ರೇಣುಕಾ ಹೆಳವರ
ಡಾ. ಟಿ ಎಂ ಉಷಾರಾಣಿ

ಸ್ಪಂದನ : ಡಾ. ಎಸ್. ಜಿ. ಸಿದ್ಧರಾಮಯ್ಯ

ಸಂಯೋಜನೆ: ಅಶೋಕ್ ಶೆಟ್ಟರ

ರಾತ್ರಿ ೮.೦೦ ಸಾಂಸ್ಕೃತಿಕ ಕಾರ್ಯಕ್ರಮ
ಚಾಲನೆ - ಜನಾರ್ದನ್ (ಜನ್ನಿ)
ಕೇಸರಿ ಹರವೂ ನಿರ್ದೇಶನದ
’ನಗರ ಮತ್ತು ನದೀ ಕಣಿವೆ’ ಸಾಕ್ಷ್ಯಚಿತ್ರ ಪ್ರದರ್ಶನ

ಮಾರ್ಚ್ ೨೪, ಬೆಳಿಗ್ಗೆ ೯.೩೦ - ೧೦.೩೦

೫. ಹೊಸತಲೆಮಾರಿನ ಸಾಹಿತ್ಯ
ಕಾವ್ಯ

ತಾರಿಣಿ ಶುಭದಾಯಿನಿ
ಡಾ. ಎಚ್.ಎಸ್.ಅನುಪಮಾ

ಸ್ಪಂದನ - ಕೆ. ಪಿ. ಸುರೇಶ್ಸಂಯೋಜನೆ : ಜಗದೀಶ ಮಂಗಳೂರಮಠ

ಕತೆ:   ೧೦.೩೦ - ೧೧.೩೦.

ಮಂಜುನಾಥ್ ಲತಾ
ಮಹಾಂತೇಶ್ ನವಲಕಲ್

ಸ್ಪಂದನ:  ಎಸ್. ಗಂಗಾಧರಯ್ಯ
ಸಂಯೋಜನೆ : ಸುನಂದಾ ಕಡಮೆ

ಸಮಾಜ ವಿಜ್ಞಾನ ಬರೆಹ ಮತ್ತು ಸಂಸ್ಕೃತಿ ಚಿಂತನೆ: ೧೧.೩೦ - ೧೨.೩೦
ದೇವು ಪತ್ತಾರ
ಡಾ. ರಂಗನಾಥ ಕಂಟನಕುಂಟೆ

ಸ್ಪಂದನ: ಕೆ.ಫಣಿರಾಜ್ಸಂಯೋಜನೆ : ಡಾ. ಸಿದ್ರಾಮ ಕಾರಣಿಕ

೬ ಹೊಸ ತಲೆಮಾರು : ನಮ್ಮ ಗ್ರಹಿಕೆ ೧೨.೩೦-೨.೩೦
ಜಿ ಪಿ ಬಸವರಾಜು
ಡಾ. ನಟರಾಜ್ ಬೂದಾಳು
ಡಾ ಬಿ. ಎನ್. ಸುಮಿತ್ರಾಬಾಯಿ
ಡಾ. ಸಬಿಹಾ ಭೂಮಿಗೌಡ
ಕೆ. ನೀಲಾ

ಸಂಯೋಜನೆ: ಶಂಕರ ಹಲಗತ್ತಿ

೭ ಹೊಸ ಸಾಹಿತ್ಯ ಚಳುವಳಿಯ ಸಾಧ್ಯತೆ: ಮ. ೩.೩೦ - ೫.೩೦
ಡಾ. ಸಿದ್ಧನಗೌಡ ಪಾಟೀಲ್
ಡಾ. ವಿನಯಾ
ಡಾ. ಬಿ. ಎಂ ಪುಟ್ಟಯ್ಯ
ಡಾ. ರಹಮತ್ ತರೀಕೆರೆ

ಸಂಯೋಜನೆ: ಡಾ. ಕೆ ಆರ್ ದುರ್ಗಾದಾಸ

ಚಿತ್ರಕಲಾ ಪ್ರದರ್ಶನ

ನಮ್ಮೊಂದಿಗೆ:
ಹಸನ್‌ನಯೀಂ ಸುರಕೋಡ,   ಡಾ. ಎಚ್.ಟಿ. ಪೋತೆ,  ಡಾ.ಎಚ್ ನಾಗವೇಣಿ,  ರಾಮಚಂದ್ರ ಕುಲಕರ್ಣಿ,  ಹನಮಂತ ಹಾಲಗೇರಿ,  ಶಶಿಧರ ಹೆಮ್ಮಾಡಿ,  ಚಂದ್ರಕಾಂತ ಪೋಕಳೆ,  ಡಾ. ಶ್ರೀಶೈಲ್ ಹುದ್ದಾರ,  ಡಾ. ಸುಮಾ ಎಂಬಾರ್, ಸಂವರ್ಥ ಸಾಹಿಲ್,  ಡಾ. ಎಂ.ವಿ. ವಸು, ಕೆ.ಪಿ. ನಟರಾಜ, ಕೆ. ವೆಂಕಟೇಶ್, ನಾಮದೇವ ಕಾಗದಗಾರ, ಲಕ್ಷ್ಮೀಕಾಂತ ಮಿರಜಕರ, ದಾದಾಪೀರ್ ನವಲೇಹಾಳ್, ರಮೇಶ ಗಬ್ಬೂರ, ಡಾ. ಜಾಜಿ ದೇವೇಂದ್ರಪ್ಪ, ಬಿ.ಎಸ್.ಸೊಪ್ಪಿನ್, ಬಿ.ಆಯ್. ಇಳಿಗೇರ, ಮಹಾಂತೇಶ ಮಸ್ಕಿ, ಶ್ರೀದೇವಿ ಕೆರೆಮನೆ , ವೀರೇಶ ಸೌದ್ರಿ, ಶಿವಕುಮಾರ ಕಣಸೋಗಿ, ಎನ್, ಚಂದ್ರಶೇಖರ್, ಜಗನ್ನಾಥ ಮಾಸ್ತಿ, ವೈ.ಗ.ಜಗದೀಶ್, ಎಂ. ಎಫ್.ನದಾಪ, ಡಾ. ಸುನಂದಮ್ಮ, ಡಾ. ಸಬಿತಾ ಬನ್ನಾಡಿ, ಮಹಾಲಿಂಗಪ್ಪ ಅಲಬಾಳ್, ಸಿ.ಜಿ. ಹಿರೇಮಠ, ಸುರೇಶ ತಾಂಡೇಲ, ಮಾಧವಿ ಭಂಡಾರಿ, ಡಾ. ನಟರಾಜ ಹುಳಿಯಾರ್, ಸರಜೂ ಕಾಟಕರ, ಸತೀಶ ಕುಲಕರ್ಣಿ, ಡಿ.ಎಸ್.ಚೌಗಲೆ, ಭೀಮನಗೌಡ ಇಟಗಿ, ವಿಠ್ಠಪ್ಪ ಗೊರಂಟ್ಲಿ, ಡಾ. ಎ.ಎಸ್. ಪ್ರಭಾಕರ್, ಡಾ. ಎಚ್.ಡಿ. ಪ್ರಶಾಂತ್, ಡಾ. ರಾಜಪ್ಪ ದಳವಾಯಿ, ಶ್ರೀಪಾದ ಭಟ್, ಡಾ. ಗವಿಸಿದ್ದ ಪಾಟೀಲ, ಗವಿಸಿದ್ದ ಹೊಸಮನಿ, ಜಿ.ಎನ್.ಮೋಹನ್, ಬಸವರಾಜ ಕೆಂಚರಡ್ಡಿ, ಎಸ್.ಜಿ.ಚಿಕ್ಕನರಗುಂದ, ಜೆ. ಪಿ. ಶೆಟ್ಟಿ, ಸುಭಾಸ ರಾಜಮಾನೆ, ಡಾ. ವಿಠ್ಠಲ ಭಂಡಾರಿ, ಡಾ. ಮೀನಾಕ್ಷಿ ಬಾಳಿ, ಲಿಂಗಾರಡ್ಡಿ ಶೇರಿ, ಪ್ರಭು ಖಾನಾಪುರೆ, ಕಾಶೀನಾಥ ಅಂಬಲಗೆ, ಡಾ.ಎಚ್.ಬಿ.ಕೋಲ್ಕಾರ, ಲಕ್ಷ್ಮಣ ಕಾಪಸೆ, ಡಾ. ಮೈನುದ್ದೀನ ರೇವಡಿಗಾರ, ಡಾ. ಪ್ರಕಾಶ ಖಾಡೆ, ಶಿವಸುಂದರ, ಸತೀಶ್ ಶಿಲೆ, ವೀರಣ್ಣ ಮಂಟಾಳಕರ್, ಡಾ. ದಸ್ತಗೀರ್‌ಸಾಬ್ ದಿನ್ನಿ, ಮೇಟಿ ಕೊಟ್ರಪ್ಪ, ಹುಸೇನ್ ಪಾಶಾ, ಬಸವರಾಜ ಶೀಲವಂತರ್, ರಮೇಶ ನಾಯಕ, ಎಂ. ಚಂದ್ರಪ್ಪ, ಡಾ. ಆಂಜನಪ್ಪ, ವಿರುಪಾಕ್ಷಪ್ಪ ಪಡಿಗೋದಿ, ಸದಾನಂದ ಮೋದಿ, ಪ್ರಮೋದ ತುರ್ವಿಹಾಳ, ಡಾ. ವೈ.ಎಂ.ಭಜಂತ್ರಿ, ಡಾ. ಎಲ್.ಆರ್ ಅಂಗಡಿ, ಡಾ. ವೈ ಬಿ ಹಿಮ್ಮಡಿ, ಪಾರ್ವತೇಶ್, ಮುಂತಾದ ಹಿರಿಯರು ಮತ್ತು ಕಿರಿಯರು
ಬನ್ನಿ, ಗೆಳೆಯರ ಜತೆಗೆ..

ದಾಸಿಮಯ್ಯನ ವಚನ

ಒಡಲುಗೊಂಡವ ಹಸಿವ;  ಒಡಲುಗೊಂಡವ ಹುಸಿವ  ಒಡಲುಗೊಂಡವನೆಂದು  ನೀನೆನ್ನ ಜರಿದೊಮ್ಮೆ ನುಡಿಯದಿರ ನೀನೆನ್ನಂತೆ ಒಮ್ಮೆ ಒಡಲುಗೊಂಡು ನೋಡ ರಾಮನಾಥ.