Showing posts with label ದಲಿತ. Show all posts
Showing posts with label ದಲಿತ. Show all posts

Friday, November 21, 2014

'ಕೋರೆಗಾಂವ...' ನಾಟಕದ ಒಂದು ಸಂಭಾಷಣೆ

ಡಾ. ಸಿದ್ರಾಮ ಕಾರಣಿಕ
----------------------------------
 

ಮುದುಕ : ಯಾಕಿಲ್ಲೋ ಹುಡುಗಾ ! ನಿಮ್ಮ ನಡುವ ಕುಂತಾನಲ್ಲ ಈ ಸಿದ್ಧನಾಕ... ಇವರ ಅಜ್ಜ ಸಂಭಾಜಿ ಮಾರಾಜರ ಸತ್ತ ನಂತರದ ಕಾಲದಾಗ ಅಂವ್ನೂ ನಿಮ್ಮಂಥವ್ರ ಟೋಳಿ ಕಟ್ಕೊಂಡ ಮರಾಠಾ ಸೇನಾದಾಗ ಇದ್ದ. ನಿಮಗ ಗೊತ್ತಿಲ್ಲ... ಅಂವ್ನ ಹೆಸರೂ ಸಿದ್ಧನಾಕನss ! ದಿಲ್ಲಿ ಮುಸಲೇರ ಸುದ್ದಾ ಅಂವ್ಗ ಅಂಜತಿದ್ರು ! ಸಾಹು ಮಾರಾಜನ ಕಾಲದಾಗ ಆ ಸಿದ್ಧನಾಕ ತನ್ನ ಪರಾಕ್ರಮ ತೋರಿ ಸನ್ಮಾನ ಪಡ್ಕೊಂಡಿದ್ದ... ಪಲ್ಲಕ್ಕಿಯೊಳಗ ಕುಂಡ್ರಿಸಿ ಅಂವ್ನನ್ನ ಮೆರವಣಿಗಿ ಮಾಡಿದ್ರು ಸಾಹು ಮಾರಾಜರು... ಜಾಗೀರದಾರಕೀ ಇನಾಮ ಪಡ್ಕೊಂಡಿದ್ದ ಅಂವಾ...

ರಾಮನಾಕ : ಮತ್ತ ನೀನೂ ಅಂವ್ನ ಜೋಡಿ ಹೋಗ್ಬೇಕಿತ್ತಿಲ್ಲೋ ?

ಮುದುಕ : ಅದೆಲ್ಲಿ ನನ್ನ ಹಣಿಬರದಾಗ ಬರ್ದೇತಿ ? ಅಂವಾ ಭಾಳ ಕರ್ದss ಕರ್ದ ಸಾಕಾದ... ನಾನss ಹೋಗ್ಲಿಲ್ಲ. ಕೂಡಿ ಹೋರಾಟ ಮಾಡಿದರ ಏನ ಬೇಕಾದ್ದ ಮಾಡಬೋದು ಅಂತ ನಾ ಆವಾಗ ತಿಳ್ಕೊಲಿಲ್ಲ... ಮಜಾ ಮಾಡ್ಕೊಂತ ತಿರಗಾಡಿದ್ನಿ... ಈಗ ಕೆಟ್ಟ ಅನ್ನಿಸ್ತೇತಿ... ಕೆಟ್ಟ ಮ್ಯಾಲ ಬುದ್ಧಿ ಬಂದ್ರ ಏನ ಉಪಯೋಗ ಹೇಳ್ರ್ಯಲಾ ? ಹುಡುಗೋರ್ಯಾ, ನೀವು ನನ್ನ ಹಾಂಗ ಮಾಡಬ್ಯಾಡ್ರಿ... ನಮ್ಮ ಜಾತ್ಯಾಗss ಖರೇ ತಾಕತ್ ಏತಿ... ಈ ಬೆನ್ನ ಹಿಂದ ಕಟ್ಕೊಂಡ ಕೊರಿ, ಕೊಳ್ಳಾಗಿನ ಪಟ್ಟಿ ಬಿಚ್ಚಬೇಕು...

ಸಿದ್ಧನಾಕ : ಅಷ್ಟss ಅಲ್ಲೋ ಅಜ್ಜಾ... ಇದೆಲ್ಲ ಆದದ್ದು ಈ ಪೇಶ್ವೆಗಳಿಂದ. ಭಾಳ ದೊಡ್ಡ ಕುತಂತ್ರ ಮಾಡಿ ನಮ್ಮನ್ನ ತುಳಿಯಾಕತ್ತಾರು... ಅವ್ರನ್ನ ನಿರ್ನಾಮ ಮಾಡಬೇಕು ಅನ್ನೋ ನಿರ್ಧಾರಕ ನಾವೆಲ್ಲ ಬಂದೇವಿ.

ಮುದುಕ : ಚೊಲೋ ಆತ ಬಿಡಪಾ... ನಿಮ್ಮಜ್ಜ ಮತ್ತ ನಿನ್ನ ರೂಪದಾಗ ಹುಟ್ಟಿ ಬಂದಾನು... ಜಾತಿ ಹೆಸರ ಮ್ಯಾಲ ನಮ್ಮನ್ನ ಹಾಳ ಮಾಡಿದಾವ್ರನ್ನ ದಿಕ್ಕಾಪಾಲ ಆಗೂಹಂಗ ಮಾಡೂ ಛಲಾ ಇರ್ಲಿ...

Thursday, January 16, 2014

ಮರಾಠಿ ದಲಿತ ಕವಿ ; ಸಂಘಟಕ ನಾಮದೇವ ಢಸಾಳರಿಗೆ ಶ್ರದ್ಧಾಂಜಲಿ

ಪದ್ಮಶ್ರೀ ನಾಮದೇವ ಢಸಾಳ

ಡಾ. ಸಿದ್ರಾಮ ಕಾರಣಿಕ
ಮರಾಠಿಯ ಬಹುದೊಡ್ಡ ದಲಿತ ಬರಹಗಾರ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ನಾಮದೇವ ಢಸಾಳರು ನಿನ್ನೆ (15-01-2014) ಬಾಂಬೆ ಆಸ್ಪತ್ರೆಯಲ್ಲಿ ತೀರಿಕೊಂಡರು. ಮಹಾರಾಷ್ಟ್ರದ ಪುಣೆ ಸಮೀಪದ ಒಂದು ಹಳ್ಳಿಯಲ್ಲಿ 15-02-1949 ರಲ್ಲಿ ಜನಿಸಿದ ನಾಮದೇವರು ಆನಂತರ ತಮ್ಮ ತಂದೆಯೊಂದಿಗೆ ಮುಂಬಾಯಿಗೆ ಬಂದರು. ಅಲ್ಲಿ ಗೋಲಪೀಠಾ ಎನ್ನುವ ರೆಡ್ ಲೈಟ್ ಪ್ರದೇಶದ ಜೋಪಡಿಯಲ್ಲಿ ಬೆಳೆದರು. ಕೇವಲ ಮ್ಯಾಟ್ರಿಕ್ (ಎಸ್.ಎಸ್.ಎಲ್.ಸಿ) ವರೆಗೆ ಮಾತ್ರ ಶಿಕ್ಷಣ ಪಡೆದ ಅವರು ತಮ್ಮ ಹರಿತವಾದ ಲೇಖನಿಯ ಮೂಲಕ ಮರಾಠಿ ದಲಿತ ಸಾಹಿತ್ಯ ಸಂವೇದನೆಯನ್ನು ತೀವ್ರವಾಗಿ ಹಿಡಿದಿಟ್ಟವರು. ಕೆಲವು ಕಾಲ ಮುಂಬಾಯಿಯಲ್ಲಿ ಟ್ಯಾಕ್ಸಿ ಚಾಲಕರಾಗಿ ದುಡಿದ ಅವರು ಆನಂತರದಲ್ಲಿ ಅಂಬೇಡ್ಕರ್ ಚಳುವಳಿಯಲ್ಲಿ ಗುರುತಿಸಿಕೊಂಡು, ಅಮೇರಿಕೆಯ 'ಬ್ಯಾಕ್ ಪ್ಯಾಂಥರ್' ಪ್ರೇರಣೆಯಿಂದ ಮಹಾರಾಷ್ಟ್ರದಲ್ಲಿ 'ದಲಿತ ಪ್ಯಾಂಥರ್' ಹುಟ್ಟು ಹಾಕಿದರು. ಕಾಲಾನಂತರದಲ್ಲಿ ಆ 'ಪ್ಯಾಂಥರ್' ಕೂಡ ಹೋಳಾಯಿತು. ಒಂದು ಗುಂಪಿಗೆ ಇವರೇ ನಾಯಕರಾಗಿದ್ದರು. ಕೆಲವು ಕಾಲಗಳಿಂದ ಮಾಯಸ್ಥೇನಿಯಾ ಗ್ರ್ಯಾವೀಸ್ ಎನ್ನುವ ಕ್ಯಾನ್ಸರ್ ರೋಗ ಅವರನ್ನು ಬಾಧಿಸುತ್ತಿತ್ತು. ಆದರೂ ಕ್ರಿಯಾಶೀಲರಾಗಿದ್ದರು.
ಬುಧವಾರ (15-01-2014) ನಸುಕಿನ ನಾಲ್ಕು ಗಂಟೆ ಸುಮಾರಿಗೆ ತೀರಿಕೊಂಡ ನಾಮದೇವ ಢಸಾಳರನ್ನು ಇಂದು (16-01-2014) ಚೈತ್ಯಭೂಮಿಯಲ್ಲಿ ಅಂತ್ಯ ಸಂಸ್ಕಾರ ಮಾಡಲಾಯಿತು.
ನಾಮದೇವ ಢಸಾಳರ ಸಾವು ದಲಿತ ಹೋರಾಟಕ್ಕೆ, ಬಂಡಾಯದ ಕೆಚ್ಚಿಗೆ ಮತ್ತು ಬಂಡಾಯ ಸಾಹಿತ್ಯಕ್ಕೆ ತುಂಬಲಾರದ ಹಾನಿ. ಅವರ ಪ್ರೇರಣೆ ಸದಾ ನಮ್ಮ ಮೇಲೆ ಇರಲಿ. ಅವರಿಗೆ ಗೌರವದ ವಂದನೆ.

Saturday, December 07, 2013

ಡಾ. ಬಾಬಾಸಾಹೇಬ ಅಂಬೇಡ್ಕರ್ ಅವರನ್ನು ನೆನಪಿಸಿಕೊಳ್ಳುತ್ತ... ...


ಡಾ. ಸಿದ್ರಾಮ ಕಾರಣಿಕ

‘ಪ್ರಜಾಪ್ರಭುತ್ವವು ಸಫಲವಾಗಬೇಕಾದರೆ ಸಮಾಜದಲ್ಲಿ ಕಣ್ಣು ಕುಕ್ಕುವ ಅಸಮಾನತೆ ಇರಬಾರದು. ದಬ್ಬಾಳಿಕೆ ಮಾಡುವ ವರ್ಗವಿರಬಾರದು. ದಮನಕ್ಕೆ ಒಳಗಾದ ವರ್ಗವೂ ಇರಬಾರದು. ಎಲ್ಲ ಸೌಲಭ್ಯಗಳನ್ನು ಹೊಂದಿ ಬರೀ ಸುಖದಲ್ಲೇ ಇರುವಂಥವರೂ ಇರಬಾರದು ಮತ್ತು ಕೇವಲ ಕಷ್ಟಗಳನ್ನೇ ಅನುಭವಿಸುವಂಥವರೂ ಇರಬಾರದು’ ಎನ್ನುವ ಮೂಲಕ ಸಾಮಾಜಿಕ ಸಮಾನತೆಯ ಕ್ರಾಂತಿಯನ್ನು ಮೊಳಗಿಸಿದ ಡಾ. ಬಾಬಾಸಾಹೇಬ ಅಂಬೇಡ್ಕರರು ನೆನಪಾಗುವುದು ಅವರ ಕ್ರಾಂತಿಯ ಇಂಥ ನಡೆ ಮತ್ತು ನುಡಿಗಳಿಂದಲೇ. ನೋವಿನಲ್ಲೂ ನಲಿವು ಕಂಡ ಈ ದೇಶದ ಮಹಾನ್ ಪುರುಷ ಅವರು. ಸುಸಂಬದ್ಧವಾದ ಸಂವಿಧಾನವನ್ನು ಈ ದೇಶಕ್ಕೆ ನೀಡಿದ ಮಹಾನ್ ಚೇತನ ಅವರು. ಸ್ವಾಭಿಮಾನವನ್ನೇ ಉಸಿರಾಗಿಸಿಕೊಂಡು ಬದುಕಿದ ಕೆಚ್ಚೆದೆಯ ಹೋರಾಟಗಾರ ಅವರು. ಅವರ ದಿಟ್ಟತನದ ಹೋರಾಟ, ದಣಿವರಿಯದ ಚಳುವಳಿ ಇಂದಿಗೂ ಹೋರಾಟಗಾರರ ದಾರಿದೀಪ.
ಇಂಥ ಹೋರಾಟಗಾರನ ಬದುಕಿನಲ್ಲಿ ಬಹುಪಾಲು ನೋವುಗಳೇ ತುಂಬಿದ್ದವು. ಅವು ಯಾವಾಗಲೂ ಅವರನ್ನು ಕಾಡುತ್ತಲೇ ಇದ್ದವು. ಕೆಲವು ಸಲ ಅವರು ಮಾನಸಿಕವಾಗಿ ಜರ್ಜಿರಿತರಾಗಿದ್ದರು. 1908 ರಲ್ಲಿ ಮಾತೋಶ್ರೀ ರಮಾಯಿಯೊಂದಿಗೆ ವಿವಾಹವಾಯಿತು. ಮುಂದೆ ಹುಟ್ಟಿದ ಐದು ಮಕ್ಕಳಲ್ಲಿ ನಾಲ್ಕು ಮಕ್ಕಳು ಒಂದು, ಒಂದುವರೆ ವರ್ಷಗಳಲ್ಲೇ ತೀರಿಕೊಂಡಿದ್ದು ಅವರಿಗೆ ಆಘಾತವನ್ನುಂಟು ಮಾಡಿತ್ತು. ಮೊದಲ ಮಗ ಯಶವಂತನನ್ನು ಹೊರತುಪಡಿಸಿದರೆ, ರಮೇಶ, ಇಂದುಮತಿ, ಗಂಗಾಧರ, ರಾಜರತ್ನ ಇನ್ನಿಲ್ಲವಾಗಿದ್ದರು. ಹಾಗಾಗಿಯೇ ಯಶವಂತನನ್ನು ಡಾ. ಬಾಬಾಸಾಹೇಬ ಅಂಬೇಡ್ಕರ್‍ರು ಯಾವುದಕ್ಕೂ ಹೆಚ್ಚು ಒತ್ತಾಯಿಸಲಿಲ್ಲ. ಇರುವ ಒಬ್ಬ ಮಗನಾದರೂ ಕಣ್ಣಮುಂದೆ ಸುಖವಾಗಿ ಇರಲಿ ಎಂಬುದು ಅವರ ಆಶಯವಾಗಿತ್ತು. 1935 ರಲ್ಲಿ ಮಾತೋಶ್ರೀ ರಮಾಯಿ ತೀರಿಕೊಂಡಾಗಲಂತೂ ಡಾ. ಬಾಬಾಸಾಹೇಬ ಅಂಬೇಡ್ಕರ್‍ರ ತಲೆ ಮೇಲೆ ಆಕಾಶವೇ ಕಳಚಿ ಬಿದ್ದಂತಾಗಿತ್ತು. ತಾನು ನೆಚ್ಚಿದ ಹೆಂಡತಿ, ತನ್ನನ್ನು, ತನ್ನ ಸಂಸಾರವನ್ನು ಸಂಭಾಳಿಸಿದ ಮಹಾಮಾತೆ ಇನ್ನಿಲ್ಲವಾದಾಗ ಅವರ ರೋಧನ ಮುಗಿಲು ಮುಟ್ಟಿತ್ತು. ಎಷ್ಟೋ ಸಲ ರಮಾಯಿಯನ್ನು ಅಂತ್ಯಸಂಸ್ಕಾರ ಮಾಡಿದ ಸ್ಥಳಕ್ಕೆ ಹೋಗಿ ಮನಸ್ಸು ಬಿಚ್ಚಿ ಕಣ್ಣೀರು ಹಾಕುತ್ತಿದ್ದರು. ಆನಂತರದಲ್ಲಿ ಸುಧಾರಿಸಿಕೊಂಡ ಡಾ. ಬಾಬಾಸಾಹೇಬ ಅಂಬೇಡ್ಕರ್‍ರು ಮತ್ತೇ ಹೋರಾಟದ ಹಾದಿಗೆ ಮರಳಿದರು.
ದಲಿತರು ಸ್ವಾಭಿಮಾನಿಯಾಗಿ ಬದುಕಬೇಕು. ಸಾಮಾಜಿಕವಾಗಿ ಸಮಾನತೆಯಿಂದ ನಳಿನಳಿಸಬೇಕು ಎಂಬ ವಿಚಾರದಿಂದ ಬಿಡುವಿಲ್ಲದ ಹೋರಾಟ ಅವರದಾಗಿತ್ತು. ಕೆಲವು ಸಂಘಟನೆಗಳನ್ನು ಕಟ್ಟಿ ಬೆಳೆಸಿದಂತೆ ರಾಜಕೀಯ ಪಕ್ಷಗಳನ್ನೂ ಕಟ್ಟಿದರು. ಕೇಂದ್ರ ಸರಕಾರದಲ್ಲಿ ಮಂತ್ರಿಯೂ ಆದರು. ಆದರೆ ಪಟ್ಟಭದ್ರರ ಸಚಿವ ಸಂಪುಟದಲ್ಲಿ ಅವರು ಬಹಳ ಕಾಲ ಇರಲಾಗಲಿಲ್ಲ. ರಾಜಕೀಯ ಮತ್ತು ಸಾಮಾಜಿಕ ಹೋರಾಟಗಳಲ್ಲಿ ಸಂಪ್ರದಾಯಿಕ ಜನರನ್ನು ಅವರು ಎದುರಿಸಿದರು. ಇನ್ನೊಂದು ಮಹತ್ವದ ವಿಚಾರವೆಂದರೆ ಡಾ. ಬಾಬಾಸಾಹೇಬ ಅಂಬೇಡ್ಕರ್‍ರ ಜೊತೆ ಹೆಜ್ಜೆ ಹಾಕಬೇಕಾದ ಎಷ್ಟೋ ದಲಿತ-ದಮನಿತರೂ ದ್ವೇಷವನ್ನು ಸಾಧಿಸತೊಡಗಿದ್ದು ! ಎರಡೂ ಕಡೆಯ ವಿರೋಧಕ್ಕೆ ಡಾ. ಬಾಬಾಸಾಹೇಬ ಅಂಬೇಡ್ಕರ್‍ರು ತಕ್ಕ ಪ್ರತಿಕ್ರಿಯೆ ನೀಡುತ್ತಲೇ ದೃಢವಾಗಿ ನಿಂತರು. ಕೆಲವರು ಡಾ. ಬಾಬಾಸಾಹೇಬ ಅಂಬೇಡ್ಕರ್‍ರ ವಿರುದ್ಧ ನಿರಂತರವಾಗಿ ಮಸಲತ್ತು ನಡೆಸಿಯೇ ಇದ್ದರು. ಆದರೆ ಯಾವುದಕ್ಕೂ ಡಾ. ಬಾಬಾಸಾಹೇಬ ಅಂಬೇಡ್ಕರ್‍ರು ಧೃತಿಗೆಡಲಿಲ್ಲ. ಆದರೂ ಚುನಾವಣೆಗಳಲ್ಲಿ ಅವರು ಸೋಲು ಅನುಭವಿಸಬೇಕಾಯಿತು.
ಈ ಎಲ್ಲ ಸಂಗತಿಗಳ ಜೊತೆಗೆ ಡಾ. ಬಾಬಾಸಾಹೇಬ ಅಂಬೇಡ್ಕರ್‍ರ ಆರ್ಥಿಕ ಪರಿಸ್ಥಿತಿ ಕೂಡ ತುಂಬ ಹದಗೆಟ್ಟಿತ್ತು. ಆದರೂ ಹೋರಾಟದ ಹಾದಿಯನ್ನು ಬಿಡದೇ ಸಾಲ ಮಾಡಿಕೊಂಡೇ ದಲಿತ-ದಮನಿತರ ಹಕ್ಕಿಗಾಗಿ ಹೋರಾಟ ನಡೆಸಿದರು ; ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡರು.
ದಲಿತ-ದಮನಿತರ ಆಶಾಕಿರಣವಾಗಿದ್ದ ಡಾ. ಬಾಬಾಸಾಹೇಬ ಅಂಬೇಡ್ಕರ್‍ರು 6ನೆಯ ಡಿಸೆಂಬರ್ 1956 ರಂದು ದೆಹಲಿಯಲ್ಲಿ ತೀರಿಕೊಂಡಾಗ ಅವರು ಮಂತ್ರಿ ಪದವಿಗೆ ರಾಜೀನಾಮೆ ಕೊಟ್ಟು ಐದು ವರ್ಷಗಳೂ ಗತಿಸಿರಲಿಲ್ಲ. ಅವರ ಪಾರ್ಥಿವ ಶರೀರವನ್ನು ಮುಂಬಾಯಿಗೆ ತೆಗೆದುಕೊಂಡು ಹೋಗಲು ಮನೆಯಲ್ಲಿ ಹಣವೇ ಇರಲಿಲ್ಲ ! ಈ ದೇಶದ ಸಂವಿಧಾನ ರಚಿಸಿದ ಮಹಾನ್ ಚಿಂತಕ ಎಂಬುದನ್ನೂ ಲಕ್ಷ್ಯಕ್ಕೆ ತೆಗೆದುಕೊಳ್ಳದ ಅಂದಿನ ಸಾರಿಗೆ ಮತ್ತು ಸಂಪರ್ಕ ಖಾತೆಯ ಮಂತ್ರಿಗಳು ದೇಹ ಸಾಗಿಸಲು ಹಣ ಬರಿಸುವಂತೆ ಕೇಳಿದ್ದರು ; ಆ ಮಂತ್ರಿ ಕೂಡ ದಲಿತರೇ ಆಗಿದ್ದರು ಎಂಬುದು ಮಾತ್ರ ಇತಿಹಾಸದ ವ್ಯಂಗ್ಯ ! ಇದು ಈ ದೇಶದ ರಾಜಕೀಯ ಸಂವಿಧಾನಶಿಲ್ಪಿಗೆ ತೋರಿದ ಅಗೌರವ ಕೂಡ.
‘ಜನರು ಆದರ್ಶಗಳಿಗಾಗಿ ಭವಿಷ್ಯದತ್ತ ನೋಡುವ ಬದಲು ಇತಿಹಾಸದತ್ತ ನೋಡಬೇಕು. ಜನರು ಸ್ವತಂತ್ರವಾಗಿ ಚಿಂತನೆ ಮಾಡದೆ, ಅನುಭವಗಳಿಂದ ಪಾಠ ಕಲಿಯದೇ ಕರಾಳಮಾರ್ಗದಲ್ಲಿ ನಡೆಯುತ್ತಿರುವುದು ಅಜ್ಞಾನವೇ ಸರಿ. ಇದು ಪ್ರಜಾಪ್ರಭುತ್ವದ ದುರಂತ’ ಎನ್ನುವ ಡಾ. ಬಾಬಾಸಾಹೇಬ ಅಂಬೇಡ್ಕರ್‍ರ ಮಾತುಗಳು ಇಂದಿಗೂ ನಮ್ಮ ಅರಿವಿನ ಪರಿಧಿಯನ್ನು ವಿಸ್ತರಿಸಬಲ್ಲವು.
ಡಾ. ಬಾಬಾಸಾಹೇಬ ಅಂಬೇಡ್ಕರ್‍ರು ಕ್ರಾಂತಿಸೂರ್ಯ. ತಮ್ಮನ್ನೇ ಸುಟ್ಟುಕೊಂಡು ಜಗತ್ತಿಗೆ ಬೆಳಕು ನೀಡಿದ ನಿಜಸೂರ್ಯ. 65ನೆಯ ವಯಸ್ಸಿನಲ್ಲಿಯೇ ಅವರ ಮಹಾಪರಿನಿರ್ವಾಣವಾಯಿತು. ಕ್ರಾಂತಿಸೂರ್ಯ ಅಸ್ತಂಗತನಾದಾಗ ದಲಿತ-ದಮನಿತರ ಪಾಲಿಗೆ ಕತ್ತಲೆ ಕವಿಯಿತು. ಆದರೆ ಡಾ. ಬಾಬಾಸಾಹೇಬ ಅಂಬೇಡ್ಕರ್‍ರ ವಿಚಾರಗಳು ಇಂದಿಗೂ ನಮ್ಮೆಲ್ಲರ ಪಾಲಿನ ಸ್ಫೂರ್ತಿಯ ಸೆಲೆಗಳಾಗಿವೆ. ಆ ಮೂಲಕ ಅವರು ಇಂದಿಗೂ ನಮ್ಮೊಂದಿಗೆ ಇದ್ದಾರೆ ಎಂದುಕೊಳ್ಳುವ ಮನಸ್ಸು ನಮ್ಮದಾಗಬೇಕು. 

Friday, September 06, 2013

ನಾನು ಅಸ್ಪ್ರಶ್ಯತೆ ಎಂಬ ಪೆಡಂಬೂತಕ್ಕೆ ಒಳಗಾದವನು !

Nagaraj Hettur

ನನ್ನ ಸಾಕಷ್ಟು (ಫೆಸ್ ಬುಕ್ ) ಗೆಳೆಯರು ಆಗಾಗ ಕೇಳುತ್ತಿರುತ್ತಾರೆ.... ನೀವೇಕೆ ಯಾವಾಗಲೂ ಹಿಂದೂ ವಿರೋಧಿಯಂತೆ ವರ್ತಿಸುತ್ತೀರಲ್ಲಾ...? ಅದರ ವಿರುದ್ಧವೇ ಮಾತನಾಡುತ್ತೀರಲ್ಲಾ...? ಹಿಂದೂ ಧರ್ಮದ ಬಗ್ಗೆ ಪ್ರಶ್ನಿಸಿದಂತೆ ಮುಸ್ಲಿಂ ಧರ್ಮದ ಬಗ್ಗೆಯಾಗಲೀ ಅಥವಾ ಕ್ರಿಶ್ಚಿಯನ್ ಬಗ್ಗೆಯಾಗಲೀ ಮಾತನಾಡಿ ನೋಡೋಣ ಎನ್ನುತ್ತಾರೆ. 
ಅದಕ್ಕೆ ನನ್ನು ಉತ್ತರ ಇಷ್ಟು...!
ನೋಡಿ ನಾನು ಹಿಂದೂ ಧರ್ಮದಲಿದ್ದವನು. ಅದರಲ್ಲು ಹಿಂದೂ ಧರ್ಮ ಒಪ್ಪಿಕೊಂಡ ಅಸ್ಪ್ರಶ್ಯತೆ ಎಂಬ ಪೆಡಂಬೂತಕ್ಕೆ ಒಳಗಾದವನು. ಅದರಿಂದ ನೊಂದವನು, ಬೆಂದವನು ಇನ್ನೂ ಕೂಡ ಅನುಭವಿಸುತ್ತಿರುವವನು, ನಮ್ಮದೇ ಊರುಗಳಲ್ಲಿ, ಹಳ್ಳಿಗಳಲ್ಲಿ ನಗರಗಳಲ್ಲಿ ಇದೇ ಹಿಂದೂ ಧರ್ಮದ ಕಟ್ಟಕಡೆಯ ಎನಿಸಿಕೊಂಡ ದಲಿತ ಅಥವಾ ಅಸ್ಪೃಶ್ಯ ಎನಿಸಿಕೊಂಡವರು ಒಂದೊಂದು ಥರದಲ್ಲಿ ಸಾಮಾಜಿಕ ಅಸಮಾನತೆ, ಕಿರುಕುಳ, ನೋವನ್ನು ಈ ಧರ್ಮದಿಂದ ಲಕ್ಷಾಂತರ ಜನರು ಇಂದಿಗೂ ಅನುಭವಿಸುತ್ತಿದ್ದಾರೆ. ಆ ನೋವು, ಅಸ್ಪೃಶ್ಯತೆಯ ಅನುಭವಕ್ಕೆ ಉಳಿದ ಯಾವ ನೋವು ಸಾಟಿಯಾಗಲಾರದು.
ಅದಕ್ಕೆ ಕಾರಣ ಈ ಧರ್ಮ ಮತ್ತು ಅದರಲ್ಲಿನ ವರ್ಣ ವ್ಯವಸ್ಥೆ. ಅದನ್ನು ಅನುಭವಿಸಿದವರಿಗೇ ಗೊತ್ತು ಅದರ ಕಠೋರತೆ. ಮನಷ್ಯತ್ವವನ್ನು ಒಪ್ಪಿಕೊಳ್ಳದಿದ್ದರೆ ಅದು ಒಂದು ಧರ್ಮ ಎನಿಸಿಕೊಳ್ಳುತ್ತದೆಯೇ...?

ಹಾಗೆಯೇ ಜಾತಿ ವಿನಾಶದ ಬಗ್ಗೆ ಮಾತನಾಡುವವರು ಇನ್ನೊಂದು ಧರ್ಮದ ಬಗ್ಗೆ ಅವರನ್ನು ದ್ವೇಷಿಸಿ ನೋಡಿ ಎನ್ನುವ ಬದಲು ಮೊದಲು ನಮ್ಮ ಧರ್ಮದಲ್ಲಿನ ಹುಳುಕುಗಳ ಬಗ್ಗೆ ಮೊದಲು ಸರಿಪಡಿಸಿಕೊಳ್ಳಲಿ... ಅಂದ ಹಾಗೆ ಕೆಲವರು ಸೋಕಾಲ್ಡ್ ಜಾತಿ ವಿರೋಧಿಗಳು ಹೇಳುತ್ತಿರುತ್ತಾರೆ. ಈಗ ಜಾತಿ ವ್ಯವಸ್ಥೆ ಇಲ್ಲ ನೀವು ಅದನ್ನು ಮರೆತು ಹೊರಬನ್ನಿ ಎನ್ನುತ್ತಾರೆ. ವಿಪರ್ಯಾಸ ಎಂದರೆ ಆ ಮಹಾನುಭವರು ದಲಿತರನ್ನು ಹೊರಬನ್ನಿ ಎನ್ನುತ್ತಾರೆಯೇ ಹೊರತು ತಾವು ಮೇಲ್ಜಾತಿಯಿಂದ ಹೊರಬಂದು ಯಾವತ್ತೂ ದಲಿತನಾಗಲು ಇಷ್ಟಪಡುವುದಿಲ್ಲ... ಇಂಥಹವರು ಜಾತಿಯ ವಿರುದ್ಧ ಹೋರಾಡುತ್ತಾರೆ....! ಹಿಂದೂ ಧರ್ಮದಲ್ಲಿನ ಅಸ್ಪ್ರಶ್ಯತೆ ಮತ್ತು ಜಾತಿಯತೆ ಇಡೀ ಸಮಾಜಕ್ಕೆ ಅಂಟಿದ ರೋಗ. ಹಾಗಾಗಿ ಅದನ್ನು ಆ ಧರ್ಮದಲಿದ್ದು ಅನುಭವಿಸುವರು ತಾನೇ ಅದರ ವಿರುದ್ಧ ಮಾತನಾಡಬೇಕು... ಗೊತ್ತಿಲ್ಲದ ಬೇರೆಯ ಧರ್ಮದ ಬಗ್ಗೆ ಮಾತನಾಡಿ ಫಲವೇನು ಅಲ್ಲವೇ...?

Saturday, April 20, 2013

हिंदू पुरुषांच्या ब-याचशा दुष्ट चालींचा उगम........... -प्रबोधनकार ठाकरे


 - Prashanth M. Gaikwad 


हि नोट पब्लिश करण्यामागचा माझा  हेतू सगळ्यांना समजलाच असेल
''धम्मात स्त्रीचे स्थान अतिशय आदरणीय आहे …! '' हे वाचून झालच असेल हे पण एकदा वाचा .. 

हिंदुजनांचा –हास आणि अधःपात
प्रबोधनकार ठाकरे भाग ८

आपली लहान मुले कर्तव्यशील व्हावीत म्हणून हिंदू मातापितरे त्यांच्याजवळून रामायण वाचून घेतात. राम, सीता, लक्ष्मण यांची माहिती बहुतेकांस लहानपणीच होते. रामायण वाचणा-या या मुलांच्या मनांवर, इतर काही गोष्टींचा ठसा उमटो, वा न उमटो, पण त्यातील एक गोष्ट सर्वांच्या लक्षात ठळकपणे राहते. ती कोणती?

रावणाच्या बंदीतून सीता सोडविल्यानंतर सर्व सैनिकांसमक्ष सीतेने अग्निप्रेवश करून आपले पावित्र्य निष्कलंक असल्याचे सिद्ध करून दाखविल्यानंतर रामाने तिचा स्वीकार केला होता. पण पुढे अयोध्येस आल्यावर कोणा एका सामान्य मनुष्याने सीतेच्या शुद्ध शीलाबद्दल किंचित संशय व्यक्त करताच, रामाने पुढचा मागचा काहीत विचार न करता, सीता पूर्ण नऊ महिन्यांची गरोदर आहे हेही विचारात न घेता, तिला ताबडतोब अरण्यात हाकलून दिली. आणि हे इतके का ?

तर प्रजेची एक छचोर लहर सांभाळण्यासाठी! दैवी रामरायाने जे हे मोठे शतकृत्य केले त्याचे अनुकरण तुमची कर्तव्यशील हिंदु बाळे करावयास चुकतील अशी का तुमची समजूत आहे? असेल तर ती साफ चुकीची आहे. किती तरी बालसीता यापूर्वी या हिंदुस्थानात शोकभाराने मृत्युवश झाल्या आहेत. आणि मी खात्रीलायक सांगतो की, आजही कित्येक कजाग सासवा व नणंदा यांच्या वृथा संशयाला बळी पडलेल्या शेकडो बालसीता आपले अभागी आयुष्य रडण्यात कंठीत आहेत.

आजच्य आधुनिक कर्तव्यपरायण रामांची हृदये कठीण करण्याकरता अयोध्येच्या कुटाळ प्रजेची भूमिका या आजकालच्या सासवा आणि नणंदा घेत असतात.

असल्या रानटी व राक्षसी चित्राला रामायणात दैवी रंग चढविल्यामुळे किती तरी हिंदुंच्या संसारांचा हकनाहक नाश झालेला आहे. आणि किती तरी मुग्ध बालिकांच्या जीवनसर्वस्वाचा होम झालेला आहे.

असल्या पवित्र ग्रंथातील भूमिकेवर हिंदु-भारतवर्षाचे आजचे गृहजीवन उभारलेले आहे. धार्मिक भावनाशील किंवा आदर्शपूजना करणारे लोक यांचा यांच्यात फारसा दोष नाही. त्यांना बालपणापासून जे शिक्षण दिलेले असते, त्याची त्यांच्या मनःपटलावर जी चित्रे कोरली जातात, तीच कायम ठशाने जन्मभर तेथेच टिकून राहतात.ज्या ब्राह्मण लेखकाने रामाला अशा रानटी स्वरूपात जनतेपुढे उभा केला आहे. त्याकडे वास्तविक खरा दोष येतो. त्यातही पुन्हा या रामायणाचे सुद्धा प्रसंगाप्रमाणे आणि सोईप्रमाणे कित्येक वेळ शोधन आणि नवीन संपादन झालेले आहेच.
आज आमच्या हातात पडणारे रामायण हे खास काही मूळचे वाल्मिक रामायण नाही आणि विद्वानांच्या मते हल्ली उत्तररामचरित्र या नावाने जो भाग प्रसिद्ध केला आहे तो तर हमखास कुठल्या तरी दूर धोरणाने मागाहून कोणीतरी घुसडून दिलेला असला पाहिजे. हे दूर धोरण काय असावे याची आपण लवकरच मीमांसा करू.

ज्या शहाण्याने हे उत्तररामचरित्र निर्माण केले, त्याला सीतादेवी वरच्या नसत्या संशयाची पुनरावृत्ती टाळता आलीच नसती काय? अग्निदिव्याने संशयाची निवृत्ती जनजाहीर झाली असताही त्या लेखकाने काढलेले गरीबा बिचा-या सीतामाईचे पुढचे धिंडवडे त्याला का टाळता आले नाहीत? त्यात त्याने काय साधले? सीतामाईविषयीच्या संशयाचा पुनश्च पराचा कावळा करून नाचविण्याचा या उत्तररामचरित्रवाल्याचा हेतू, हिंदू स्त्रियांना एक सणसणीत कायमचा दम भरून ठेवण्यात आढळतो. त्याला स्त्रीजातीला बजावून ठेवावयाचे होते की, याद राखा, तुम्ही कितीही शुद्ध आणि सद्गुणी असलातरी तुमच्याविरुद्ध लवमात्रही वेडावाकडा शब्द ऐकू आला तर, तुम्हाला बिलकूल दयामाया न दाखविता, तुमची चौकशीसुद्धा न करता केवढी भयंकर शिक्षा तुमच्या नव-यांकडून फर्माविण्यात येईल, हे नीट ध्यानात ठेवा. संशयाच्या नुसत्या चुटपुटत्या कल्पनेचाही वारा तुमच्या बाबतीत आम्हा पुरुषांना क्षणमात्र खपणार नाही.उपदेश करण्याच्या दिमाखाने चितारलेल्या या खोडसाळ शब्दचित्राने सीतामाईच्या चारित्र्याला मुळीच धक्का लागलेला नाही. ते कमलपात्राप्रमाणे निष्कलंक आणि अवधूतच राहिले. स्त्रीजातीच्या सद्गुणांची दिव्य प्रतिमा म्हणून तिचा महिमा युगानुयुगे अधिकाधिक प्रकाशमानच होत आहे. पण – पण त्या तुमच्या आदर्शभूत दैवी रामाच्या पौरुषाचे घाणेरडे चित्र म्हणजे हिंदुस्थानाच्या पौरुषत्वाला नामुष्की आणणारी एक चिरंजीव शरमेची बात होऊन बसले आहे.

रामाला अनेक इतर ठिकाणी नीतिमत्तेचा आणि आत्मत्यागाचा केवळ पुतळा असा रंगविलेला आहे. त्या रंगवटीला अनुसरूनच, रामायण-लेखकाने खालच्या सारखे त्याचे चित्र रंगविले असते, तर किती तरी चांगले झाले असते? अयोध्येच्या लोकांनी सीतेच्या पावित्र्याबद्दल शंका घेताच, रामाने ताबडतोब एक जंगी दरबार भरवून लोकांना जाहीररीतीने सांगायचे होते की ``नागरिक जनहो, तुम्हाला माझ्या महाराणीबद्दल काही संशय येत आहे. माझ्याबरोबर सिंहासनी तिने बसू नये, असे तुम्हाला वाटत आहे काय? ठीक आहे. तर मग मला या राज्याचीच पर्वा नाही. आत्ताच्या आत्ता सर्व राज्यसूत्रे भरताच्या स्वाधीन करून सीतेसह मीच अरण्यवासाचा रस्ता पत्करतो. तुमचा संशय काहीही असला तरी सीतेच्य पावित्र्याबद्दल माझी बालंबाल खात्री झालेली आहे. मला इतरांच्या कुटाळक्यांकडे लक्ष देण्याचे मुळीच कारण नाही. प्रजाजनहो नीट विचार करा. सीतादेवी माझी वाग्दत्त विवाहबद्ध पत्नी आहे. ती पूर्ण दिवसांची गर्भवती असून, लवकरच तिला मातृपदही प्राप्त होणार आहे. अशा अवस्थेत केवळ तुमच्या संशयाच्या लहरीचे रंजन करण्यासाठी मी जर तिचा त्याग करीन तर राक्षसात आणि माझ्यात फरक तो काय?’’ मी जसा तुमचा राजा हे, तसा सीतेचाही राजा आहे. तुमच्याप्रमाणेच तिनेही जर न्यायाची मागणी केली, तर राजा या नात्याने कोणत्या तोंडाने मला ती नाकारता येईल सांगा. मी जर ही तिची न्यायाची मागणीच मान्य केली नाही, तर राजपदालाच काय, पण माणुसकीलाही मी नालायक ठरेन.’’
अशा त-हेने रामाची भूमिका जर रंगविली असती, तर रामायणातला राम आमच्या हिंदू राष्ट्राचा एक नमुनेदार पुरुषोत्तम (हीरो) म्हणून खास शोभून दिसला नसता काय?

लक्ष्मणाचीही मोठी स्तुती गाण्यात येते. का? तर म्हणे रावणाची बहीण जी शूर्पणखा, तिने लक्ष्मणाशी प्रेमाचा लघळपणा केला म्हणून त्याने तिचे नाक-कान छाटले. या गोष्टीचा आमच्या तरुणांच्या मनांवर किती घाणेरडा विकृत परिणाम होत असतो. याची कोणाला कल्पना तरी आहे काय? शूर्पणखेने स्त्रीस्वभावानुसार कितीही लघळपणा केला, तरी लक्षअमणाला त्या स्त्रीशी सौजन्याने दयाळूपणाने व दिलदारपणाने खास वागता आले असते. वाटेल त्या क्षुद्र कारणांवरून बायकांची नाके कापणे, किंवा इतर रीतीने त्यांना विद्रूप करणे, हा हिंदू पुरुषाचा मर्दपणा एकंदरीत बराच प्राचीन लौकिकाचा आहे
.
हेच काय, पण बायकांना पशुप्रमाणे क्रूर रीतीने वागविण्याच्या हिंदू पुरुषांच्या ब-याचशा दुष्ट चालींचा उगम, आदर्श म्हणून डंका पिटलेल्या या राम लक्ष्मणाच्या जोडीच्या चरित्रचित्रातच सापडतो. उत्तररामचरित्राच्या शेवटी लक्ष्मणाबद्दल एक दुःखद गोष्ट वर्णन केलेली आहे. राम कोणातरी ति-हाईताशी एकांतात बोलत बसला होता. राज्यकारभाराच्या काही महत्त्वाच्या गोष्टींबद्दल लक्ष्मणाला भेट घ्यायची होती. भानगड तर मोठी जरूरीची. क्षणाचाही विलंब नको होता. म्हणून लक्ष्मण तसाच आत गेला. झाले, रामरायाचा एकांत बिघडला. लक्ष्मणाने केलेल्या या भयंकर अपराधाबद्दल त्याला शिक्षा ठोठावण्यात आली की `मरेपर्यंत पुन्हा मला तोंड दाखवू नकोस.’

रामासाठी सारा जन्म लक्ष्मणाने जे अकृत्रिम बंधुप्रेम व भक्तीची निस्सीम सेवा केली, ती निमिषार्धात क्षुल्लक गैरसमजासाठी चुलीत गेली! या असल्या `पवित्र’ उदाहरणांचा परिणाम हिंदू समाजावर कसा झाला व होत आहे, हे पाहायचे असेल तर जरा हायकोर्टाच्या आणि स्मॉल कॉजेस कोर्टांच्या खटलेबाजीकडे लक्ष द्या. वडिलार्जित इस्टेटीच्या तुकड्यांसाठी एकमेकांच्या उरावर बसणा-या शेकडो राम-लक्ष्मणांच्या जोड्या तेथे तुम्हाला भेटतील. `

प्रबोधनकार ठाकरे या महापुरुषाला लाख-लाख प्रणाम.



Tuesday, March 26, 2013

ಯಾವ ಸಂಘಟನೆಗಳು ವಸೂಲಿಗೆ ಇಳಿದಿವೆ ?


ಧಾರವಾಡದಲ್ಲಿ ಭಾನುವಾರ ನಡೆದ ಜನಸಾಹಿತ್ಯ ಸಮಾವೇಶದಲ್ಲಿ `ಸಮಾಜ ವಿಜ್ಞಾನ ಬರಹ ಮತ್ತು ಸಂಸ್ಕೃತಿ ಚಿಂತನೆ' ಕುರಿತು ಕೆ.ಫಣಿರಾಜ್ ಮಾತನಾಡಿದರು. ಸಿದ್ರಾಮ ಕಾರಣಿಕ, ಡಾ.ರಂಗನಾಥ್ ಕಂಟನಕುಂಟೆ ಇದ್ದಾರೆ
ಧಾರವಾಡ: `ಎಡಗೈ-ಬಲಗೈ ನೆಪದಲ್ಲಿ ಸಂಘರ್ಷಕ್ಕೆ ಇಳಿದಿರುವ ದಲಿತ ಸಂಘಟನೆಗಳು, ವಶೀಲಿಬಾಜಿ ಭರದಲ್ಲಿ ದಲಿತರ ಸಮಸ್ಯೆಗಳಿಗೆ ಸ್ಪಂದಿಸುತ್ತಿಲ್ಲ' ಎಂಬ ಹೇಳಿಕೆ ಭಾನುವಾರ ಇಲ್ಲಿ ನಡೆದ ಕರ್ನಾಟಕ ಜನಸಾಹಿತ್ಯ ಸಮಾವೇಶದಲ್ಲಿ ಗಂಭೀರ ಚರ್ಚೆಗೆ ಗ್ರಾಸವಾಯಿತು.
ಲೇಖಕ ಡಾ. ಲಕ್ಷ್ಮೀನಾರಾಯಣ ಅವರು, ಸಮಾವೇಶದ ಸಂವಾದದ ವೇಳೆ `ಉತ್ತರ ಪ್ರದೇಶದಲ್ಲಿ ದಲಿತರ ಪರವಾದ ಬಿಎಸ್‌ಪಿ ಸರ್ಕಾರ ಅಧಿಕಾರಕ್ಕೆ ಬಂದಿತ್ತು. ಆದರೆ ಕರ್ನಾಟದಕದಲ್ಲಿನ ದಲಿತ ಸಂಘಟನೆಗಳ ವಶೀಲಿ ಬಾಜಿಯಿಂದಾಗಿ ದಲಿತ ಚಳವಳಿ ತನ್ನ ಅಸ್ತಿತ್ವ ಕಳೆದುಕೊಂಡಿತು. ದಲಿತ ಚಳವಳಿ ಮೂರ್ತ ರೂಪ ಪಡೆದು ರಾಜಕೀಯ ಶಕ್ತಿ ಆಗಲೇ ಇಲ್ಲ' ಎಂದರು.
ಆಗ ವೇದಿಕೆ ಏರಿದ ದಲಿತ ಸಂಘರ್ಷ ಸಮಿತಿ ಮುಖಂಡ ಲಕ್ಷ್ಮೀನಾರಾಯಣ ನಾಗವಾರ, `ಯಾವ ಸಂಘಟನೆಗಳು ವಸೂಲಿಗೆ ಇಳಿದಿವೆ ಎಂಬುದನ್ನು ಸಾಬೀತುಪಡಿಸಿ, ಇಲ್ಲದಿದ್ದರೆ ಆ ಮಾತು ವಾಪಸ್ ಪಡೆಯಬೇಕು. ಪ್ರಗತಿಪರರು ಎನಿಸಿಕೊಂಡವರೇ ದಲಿತ ಸಂಘಟನೆಗಳ ಬಗೆಗೆ ಹೀಗೆ ಮಾತನಾಡಿದರೆ ಹೇಗೆ?' ಎಂದು ಪ್ರಶ್ನಿಸಿದರು.
ನಾಗವಾರ ಪ್ರಶ್ನೆಗೆ ಪೂರಕವಾಗಿ ಮಾತನಾಡಿದ ಹಿರಿಯ ಸಾಹಿತಿ ರಾಜಪ್ಪ ದಳವಾಯಿ, `ದಲಿತ ಸಂಘಟನೆಗಳು ತಮ್ಮ ಅಸ್ತಿತ್ವ ಕಳೆದುಕೊಂಡಿವೆ ಅಥವಾ ವಿಘಟನೆಗೊಂಡಿವೆ ಎನ್ನುವ ಮೂಲಕ ಕೆಲವರು ಜನಸಾಮಾನ್ಯರಲ್ಲಿ ಅಪನಂಬಿಕೆ ಹುಟ್ಟಿಸುತ್ತಿದ್ದಾರೆ. ಯಾರಾದರೂ ದಲಿತರ ಹಿತಾಸಕ್ತಿಗೆ ವಿರುದ್ಧವಾದ ಒಂದು ಹೇಳಿಕೆ ಕೊಟ್ಟು ನೋಡಲಿ. ಆಗ ದಲಿತರು ಏನು ಎಂಬುದು ಗೊತ್ತಾಗುತ್ತದೆ' ಎಂದು ಪರೋಕ್ಷ ಎಚ್ಚರಿಕೆ ನೀಡಿದರು.
`ದಲಿತರಲ್ಲಿ ಎಡಗೈ-ಬಲಗೈ ವಿಚಾರ ದೊಡ್ಡದು ಮಾಡುವ ಕೆಲವು ಪ್ರಗತಿಪರರೇ ಮೊದಲು ಸಮಾಜವನ್ನೇ ಅರ್ಥಮಾಡಿಕೊಂಡಿಲ್ಲ. ಇನ್ನು ಚಳವಳಿಯನ್ನು ಹೇಗೆ ಅರ್ಥ ಮಾಡಿಕೊಳ್ಳುತ್ತಾರೆ' ಎಂದು ಪ್ರಶ್ನಿಸಿದರು.
`ದಲಿತರನ್ನು ಇನ್ನೂ ಎಡಗೈ, ಬಲಗೈ ಎಂದು ಒಡೆದು ಆಳಲಾಗುತ್ತಿದೆ. ಮೇಲ್ಜಾತಿಗಳಲ್ಲಿ ಒಳಪಂಗಡಗಳು ಇದ್ದು, ಹೊಡೆದಾಟ-ಕೊಲೆಗಳೇ ನಡೆದಿದ್ದರೂ ಅದನ್ನು ಅಷ್ಟಾಗಿ  ಪರಿಗಣಿಸದ ಕೆಲವರು ದಲಿತರನ್ನು ಈ ರೀತಿ ಗುರುತಿಸುತ್ತಿದ್ದಾರೆ' ಎಂಬ ದಲಿತ ಮುಖಂಡರ ಆಕ್ರೋಶವೂ ವ್ಯಕ್ತವಾಯಿತು. ಇದಕ್ಕೂ ಮುನ್ನ ನಡೆದ `ಹೊಸ ತಲೆಮಾರಿನ ಕಥಾ ಸಾಹಿತ್ಯ'  ಗೋಷ್ಠಿಯಲ್ಲಿ ಎಸ್.ಗಂಗಾಧರಯ್ಯ, `ಪ್ರಶಸ್ತಿ ನೀಡಲು ಪರಿಗಣಿಸುವ ಸಂದರ್ಭದಲ್ಲಿ ಅರ್ಹತೆ ಇದ್ದವರನ್ನು ಅಸ್ಪೃಶ್ಯರಂತೆ ಕಾಣಲಾಗುತ್ತಿದೆ ' ಎಂದು ಹೇಳಿದ್ದು ಬಿಸಿ ಚರ್ಚೆಗೆ ಕಾರಣವಾಯಿತು. ಗೋಷ್ಠಿ ಮುಗಿಯುತ್ತಿದ್ದಂತೆಯೇ ವೇದಿಕೆಗೆ ಬಂದ ಲಕ್ಷ್ಮೀನಾರಾಯಣ ನಾಗವಾರ, `ಅಸ್ಪೃಶ್ಯರು' ಎಂಬ ಪದ ಬಳಕೆ ಸರಿಯಲ್ಲ. ಆ ಮೂಲಕ ಗಂಗಾಧರಯ್ಯ ದಲಿತರನ್ನು ಅವಮಾನಿಸುತ್ತಿದ್ದಾರೆ. ಆ ಪದ ಹಿಂದಕ್ಕೆ ಪಡೆಯಬೇಕು ಎಂದು ಒತ್ತಾಯಿಸಿದರು.
ನಾಗವಾರ ಅವರ ಆಕ್ಷೇಪಕ್ಕೆ ಸ್ಪಷ್ಟನೆ ನೀಡಿದ ಗಂಗಾಧರಯ್ಯ, `ಅಸ್ಪಶ್ಯರು' ಎಂಬ ಪದ ಬಳಕೆ ಮಾಡಿದ್ದು ಯಾರನ್ನೋ ನೋಯಿಸಲು ಅಲ್ಲ. ಬದಲಿಗೆ ಪ್ರಶಸ್ತಿಗೆ ಆಯ್ಕೆಯ ರಾಜಕೀಯ ಬಿಚ್ಚಿಡುವಾಗ ಮಾತಿನ ಭರದಲ್ಲಿ ಹೇಳಿದ್ದು, ಅದು ನೋವುಂಟು ಮಾಡಿದ್ದರೆ ವಿಷಾದ ವ್ಯಕ್ತಪಡಿಸುವುದಾಗಿ ಹೇಳಿದರು.

ಕೃಪೆ : ಮನೋಜ್‌ಕುಮಾರ್ ಗುದ್ದಿ, ಪ್ರಜಾವಾಣಿ 

Sunday, March 10, 2013

ಮಹಾಶಿವರಾತ್ರಿ : ಬೇಡರ ಕಣ್ಣಪ್ಪನ ನೆನಪು !

 ಡಾ. ಸಿದ್ರಾಮ ಕಾರಣಿಕ
ಮಹಾಶಿವರಾತ್ರಿ ಶುಭಾಶಯ.... ಮಹಾಶಿವರಾತ್ರಿ ಎಲ್ಲರಿಗೂ ಒಳ್ಳೇದು ಮಾಡಲಿ ಅನ್ಕೊಂತನss ಶಿವರಾತ್ರಿ ಮಹಿಮಾ ಬಗ್ಗಿ ಮಾತಾಡೂ ಮಂದಿ ಒಂದುಕ್ಷಣ 'ಬೇಡರ ಕಣ್ಣಪ್ಪ'ನ ನೆನಪು ಮಾಡಿಕೋಬೇಕು. ಮೇಲು ಮೇಲಿನ ಆಡಂಬರದ ಭಕ್ತಿ-ಪೂಜೆಗಿಂತ ಮನಸ್ಸು ಸರಳಾಗಿರಬೇಕು ; ಅಂತರಂಗದ ಶುದ್ಧಿ ಇರಬೇಕು ಎಂಬೋದು ತಿಳಿದುಕೊಳ್ಳೋದು ಲೇಸಲ್ಲವೆ ?

Friday, March 01, 2013

ಅತ್ಯಾಚಾರ : ಮಾನವೀಯ ಮೌಲ್ಯಗಳ ಅಧಃಪತನ !


ಸರೋವರ್ ಬೆಂಕೀಕೆರೆ

ಮಗುವು ತಾಯಿಂದ ಜನ್ಮ ಪಡೆದಾಗ ಅದು ಹೆಣ್ಣಾಗಲಿ, ಗಂಡಾಗಲಿ ಸಹಜವಾಗಿಯೇ ಯಾವುದೇ ಹಣೆಪಟ್ಟಿಗಳಿಲ್ಲದೆ ಬೆಳೆದಿರುತ್ತದೆ. ಆ ರೀತಿ ಬೆಳೆದ ಗಂಡು ಮಗುವಿಗೆ, ‘ನೀನು ಬೆಳೆದು ಮುಂದೊಂದು ದಿನ ಅತ್ಯಾಚಾರವೆಸಗುವ ಮೃಗವಾಗಬೇಕೆಂದಾಗಲಿ’ ಅಥವಾ ಹೆಣ್ಣುಮಗುವಿಗೆ ‘ನೀನು ಅಧೈರ್ಯಳಾಗಿ ಗಂಡಿಗೆ ತಗ್ಗಿ ಬಗ್ಗಿ ಹೆದರಿ ಬದುಕಬೇಕೆಂದಾಗಲಿ’ ಅವರ ತಲೆಯಲ್ಲಿ ಯಾರು ತುಂಬಿ ಕಳಿಸಿರುವುದಿಲ್ಲ. ಹಾಗಾದರೆ ಇಂತಹ ಅತ್ಯಾಚಾರಗಳು ನಡೆಯಲು ನಮ್ಮ ಸಮಾಜದ ಅನಾರೋಗ್ಯಕರ ವಾತಾವರಣ ಮತ್ತು ಈ ವ್ಯವಸ್ಥೆ ಎಂದಾಯ್ತು ತಾನೇ?
ನಾವು ಗಮನಿಸಬೇಕಾದ ಒಂದು ಅಂಶವಿದೆ, ದೇಶದಲ್ಲೆ ಅತ್ಯಾಚಾರ ಪ್ರಕರಣದಲ್ಲಿ ಮುಂದಿರುವ ರಾಜ್ಯಾ ಹರಿಯಾಣ. ಇಲ್ಲಿನ ಅಂಕಿಯಾಂಶ ಗಮನಿಸಿದರೆ 80 ರಿಂದ 90 ರಷ್ಟು ಅತ್ಯಾಚಾರ ನಡೆದಿರುವುದು ದಲಿತರ ಮೇಲೆಯೇ ಆಗಿದೆ. ಇದನ್ನು ನಡೆಸುವವರು ಮೇಲುವರ್ಗದವರು ಅಥವಾ ಅಧಿಕಾರದಲ್ಲಿರುವವರು, ಅಥವಾ ಆರ್ಥಿಕವಾಗಿ ಸಬಲರಾಗಿರುವವರು. ಅತ್ಯಾಚಾರ ನಡೆಯುವುದು ಯಾವುದೇ ಒಂದು ಪ್ರಚೋದನಕಾರಿ ಉಡುಪಿನಿಂದಾಗಾಲಿ ಅಥವಾ ಮಹಿಳೆಯ ನಡತೆಯಿಂದಲ್ಲ. ಇದರ ಹಿಂದೆ ಮಾನಸಿಕ ವ್ಯಗ್ರತೆಯ ಅಪರಾಧಿತನ ಇದೆ.
ಇನ್ನು ನಮ್ಮ ಧರ್ಮ, ಧರ್ಮ ಗುರುಗಳು ಹೇಳುವಂತೆ ಹೆಣ್ಣು ಬಾಲ್ಯದಲ್ಲಿ ತಂದೆಯ, ಯೌವನದಲ್ಲಿ ಗಂಡನ ಮತ್ತು ಮುಪ್ಪಿನಲ್ಲಿ ಮಗನನ್ನು ಆಶ್ರಯಿಸಬೇಕು ಎನ್ನುತ್ತದೆ. (ಎಲ್ಲ ಧರ್ಮಗ್ರಂಥಗಳೂ ಪುರುಷನೆ ಬರೆದಿರುವುದನ್ನು ಗಮನಿಸಬೇಕಿದೆ) ವಾಸ್ತವವಾಗಿ ದಿಲ್ಲಿಯ ಪ್ರಕರಣವನ್ನೇ ತೆಗುದುಕೊಂಡರೆ “ಯುವತಿ ತಾನು ಮದುವೆಯಾಗಬೇಕ್ಕಿದ್ದ ಹುಡುಗನ ಆಶ್ರಯದಲ್ಲಿದ್ದೇ ಇಂತಹ ಹೇಯ ಕೃತ್ಯ ನಡೆದುಹೋಗಿತ್ತು.! ಈ ಅತ್ಯಾಚಾರ ಒಂದು ಹೆಣ್ಣಿನ ಮೇಲೆ ಆದದ್ದಲ್ಲ. ಬದಲಿಗೆ ಅಕ್ಷರಶಃ ನಮ್ಮ ಕಾನೂನಿನ ಮೇಲೆ, ಪ್ರಜಾಪ್ರಭುತ್ವದ ಮೇಲೆ, ಮಾನವೀಯ ಮೌಲ್ಯಗಳ ಮೇಲೆ ನಡೆದಿದ್ದಾಗಿದೆ!!
ಅರಾಸಾರಾ ಬಾಬಾ ಹಾಗೂ ಇನ್ನಿತರ ಸಂಘಟನೆಗಳ ಹೆಣ್ಣುದ್ವೇಷಿ ಪದಾಧಿಕಾರಿಗಳೆಲ್ಲ ಹೆಣ್ಣು ಸಂಜೆ ಆರು ಘಂಟೆಯೊಳಗೆ ಮನೆ ಸೇರಬೇಕು, ಮೈ ತುಂಬ ಬಟ್ಟೆ ತೊಡಬೇಕು, ಅತ್ಯಾಚಾರ ಮಾಡಲು ಬಂದವರಿಗೆ ಅಣ್ಣ, ಅಪ್ಪ ಎಂದು ವಿನಂತಿಸಬೇಕೆಂದು ಹೇಳುತಾರೆಂದರೆ, ನಾವು ಇಂಥವರ ಅನುಯಾಯಿಗಳಿಂದ ಅತ್ಯಾಚಾರಗಳನ್ನು ನಿರೀಕ್ಷಿಸಬಹುದೇನೋ(?!). ಮಹಿಳೆಯರು ಯಾವಾಗ ಬೇಕಂದಾಗ ಒಡಾಡಿದರೆ ನಾವು ರಕ್ಷಣೆ ಕೊಡಲು ಹೇಗೆ ಸಾಧ್ಯ ಎಂದು ಪೋಲಿಸರೆ ಕೇಳುತ್ತಾರೆಂದರೆ ಏನರ್ಥ ? ಅತ್ಯಾಚಾರಿಗಳನ್ನು ಅಪರಾಧಿಗಳಾಗಿ ನೋಡುವ ಬದಲು, ಅತ್ಯಾಚಾರಕ್ಕೆ ಒಳಗಾದವರನ್ನೆ ಅಪರಾಧಿಗಳಂತೆ ನೋಡಿ ಹೆಣ್ಣನ್ನೇ ಹದ್ದುಬಸ್ತಿನಲ್ಲಿ ಇಡಲು ಯತ್ನಿಸುತ್ತಾರೆ...!
ಆರೋಪಿಗಳನ್ನು ನಪಂಪಸಕರನ್ನಾಗಿಸಿ, ಅಥವಾ ಉಗ್ರ ಶಿಕ್ಷೆಯನ್ನು ಕೊಡಬೇಕೆಂಬ ವಾದಗಳಿವೆ. ಇದರಿಂದ ಪರಿಹಾರ ಸಾಧ್ಯವೇ ? ಖಂಡಿತ ಇಲ್ಲ. ಹೆಣ್ಣನ್ನು ಮನಷ್ಯಳಂತೆ, ತನ್ನಂತೆ ಎಲ್ಲ ಹಕ್ಕುಗಳನ್ನು ಹೊಂದಿರುವ ನಾಗರಿಕಳೆಂದು ಸಮಾಜ ಪರಿಗಣಿಸಬೇಕು. ಇಂತಹ ನೈತಿಕ, ಮಾನವೀಯ ಮೌಲ್ಯಗಳು ಸಮಾಜದಲ್ಲಿ ಬೆರೆತಾಗ ಮಾತ್ರ ಪರಿಹಾರ ಸಾಧ್ಯ. ಪಠ್ಯದಲ್ಲಿ ಧರ್ಮೋಪದೇಶಗಳನ್ನು ತುರುಕುವ ಬದಲು ಇಂತಹ ಮಾನವೀಯ ಮೌಲ್ಯಗಳನ್ನು ಸೇರಿಸಬೇಕೆಂದು ಅನಿಸುತ್ತದೆ.
                          

Wednesday, February 27, 2013

ಮನುಷ್ಯರನ್ನು ಮನುಷ್ಯರಂತೆ ಕಾಣೋಣ !


                                                          -ಸರೋವರ್ ಬೆಂಕೀಕೆರೆ. 


ಭೂಮಿಯಲ್ಲಿ ಎಷ್ಟೋ ಜೀವಿಗಳು ಬದುಕಿವೆ, ಎಲ್ಲ ಪ್ರಾಣಿ ಪಕ್ಷಿಗಳು ಜಾತಿ, ಮತ, ಧರ್ಮ ಎನ್ನದೆ ಸಂತೋಷದಿಂದ ಬದುಕುತ್ತಿವೆ, ಮೊನ್ನೆ ಪತ್ರಿಕೆಯಲ್ಲಿ ಕಂಡೆ ಹಸುವು ತನ್ನ ಕರು ಅಲ್ಲದ, ತನ್ನ ಜಾತಿಗೆ ಸೇರದ ಕೊಳಚೆಯಲ್ಲಿ ವಾಸಿಸುವ ಹಂದಿಮರಿಯೊಂದಕ್ಕೆ ಹಾಲುಣಿಸಿ ಮಾನವೀಯತೆ ಮೆರೆಯಿತೆಂದು ! ನನ್ನಲ್ಲಿ ಪ್ರಶ್ನೆ ಹಾಕಿಕೊಂಡೆ ಮಾನವೀಯತೆ ಹಾಗೆಂದರೆ ? ಓಹ್ ಮಾನವ ಧರ್ಮ !..... ಮಾನವ ಧರ್ಮ ಏನು ? ಹಸುವನ್ನು ದೇವರು ಎನ್ನುವ, ಹಸುವನ್ನು ಪೂಜೆ ಮಾಡುವ ಮಾನವ ಅದರ ಜಾತ್ಯತೀತ ಮನಸ್ಸನ್ನು ಅರಿಯದೆ, ಬಾಯಿ ಮಾತಲ್ಲಿ ದೇವರು ಎಂದು ಸ್ವತಃ ಜಾತಿಯನ್ನು ಕಟ್ಟುತ್ತಾನೆ, ದೇವಸ್ಥಾನದಲ್ಲೆ ಪಂಕ್ತಿ ಭೇದ ಮಾಡುತ್ತಾನೆ, ಮನುಷ್ಯನನ್ನೆ ಅನ್ಯ ಜಾತಿಯ ಪ್ರಾಣಿಯಂತೆ ಕಾಣುತ್ತಾನೆ, ಕೊಲೆ, ಅತ್ಯಾಚಾರ, ಭ್ರಷ್ಟಾಚಾರ, ಹೀಗೆ……, ಹಾಗಾದರೆ ಇದೇನಾ ಮಾನವೀಯತೆ ಆ ಹಸುವು ಹಂದಿ ಮರಿಗೆ ಹಾಲುಣಿಸಿ ಮೇರೆದ ಮಾನವೀಯತೆ ಅಂದರೆ ಇದೇನಾ?

ಮತ್ತೆ ಅದೇ ಪತ್ರಿಕೆಗಳಲ್ಲಿ ಲೇಖನಗಳು ಓದಿದೆ ; ಡೆಲ್ಲಿಯಲ್ಲಿ ಹುಡುಗಿಯ ಮೇಲೆ ಅತ್ಯಾಚಾರವೆಸಗಿ ಪ್ರಾಣಿಯಂತೆ ವರ್ತಿಸಿದ್ದಾರೆ  ಎಂದು ! ಆದರೆ ವಿಚಿತ್ರ ನೋಡಿ, ಪ್ರಾಣಿ ಮಾನವೀಯತೆ ಮೆರೆಯುತ್ತದೆ ಮತ್ತು ಮನುಷ್ಯ ಪ್ರಾಣಿಯಂತೆ ವರ್ತಿಸುತ್ತಾನಂತೆ ? ನಿಜಕ್ಕೂ ಈ ಮಾನವೀಯತೆ ಅನ್ನುವ ಪದವೇ ಬದಲಾಗಬೇಕು ಎಂದು ನನ್ನಲ್ಲಿ ಅನಿಸುತ್ತಿದೆ.

ಹೀಗೆ ನನಗೊಂದು ಚಿಕ್ಕ ಕಥೆ ನೆನಪಾಗುತ್ತದೆ, ಒಂದು ಹೆಣ್ಣು ನಾಯಿ ಮಧ್ಯ ರಾತ್ರಿ ಹಾದಿಯಲ್ಲಿ ಹೋಗುವಾಗ 5 ಗಂಡು ನಾಯಿ ಆ ಹೆಣ್ಣು ನಾಯಿಯನ್ನು ಬೆನ್ನ ಹತ್ತಿದವು, ಹೆಣ್ಣು  ನಾಯಿ ಭಯದಲ್ಲಿ ಓಡಲು ಶುರು ಮಾಡಿತ್ತು, ನಂತರ ಆ 5 ಗಂಡು ನಾಯಿ ಎದುರಿಗೆ  ಬಂದು ಹೇಳಿದವು, “ಹೆದರಬೇಡ ನಾವು ನಾಯಿಗಳು ಮನುಷ್ಯರಲ್ಲ!” ಇದನ್ನು ಓದಿದ ನನಗೆ ನಗು ಬರುವ ಬದಲು, ಮೊದಲ ಬಾರಿಗೆ ಅಯ್ಯೋ ನಾನು ಕೂಡ ಮನುಷ್ಯನಲ್ಲವೆ ಎಂದು ಚಡಪಡಿಸಿದೆ, ಪ್ರಾಣಿ ಪಕ್ಷಿಗಳು ಎಂದು ಕೊಲೆ ಮಾಡುವುದಿಲ್ಲ, ಅತ್ಯಚಾರದ ದೂರು ಕೂಡ ಎದುರಿಸಿಲ್ಲ. ನಾನು ಪ್ರಾಣಿ ಆಗಿದ್ದರೆ ?
ಇದನ್ನೆಲ್ಲ ನೆನೆಯಲು ಒಂದು ಕಾರಣವಿದೆ, ನಮ್ಮ ಕಾಲೇಜಿನಲ್ಲಿ ನನ್ನ ನೆಚ್ಚಿನ ಶಿಕ್ಷಕರು ಇದ್ದರು, ಅವರು ನನ್ನನ್ನು ಯಾವಾಗಲೂ ಆತ್ಮೀಯತೆಯಿಂದ ಮಾತನಾಡಿಸುತ್ತಿದ್ದರು ನನಗೂ ಅವರೆಂದರೆ ತುಂಬಾ ಗೌರವ, ಅವರ ಮನೆ ನಮ್ಮ ಹಾಸ್ಟಲ್  ಹತ್ತಿರ ಇದ್ದರಿಂದ, ಅವರ ಮನೆಗೆ ಮನೆ ಪಾಠಕ್ಕೆಂದು ಕರೆದಿದ್ದರು. ನಾನು ಮನೆ ಪಾಠಕ್ಕೆಂದು ದಿನವೂ ಹೋಗುತ್ತಿದ್ದೆ, ಒಂದು ದಿನ ಅವರ ಮನೆ  ಮುಂದೆ ಕೆಲವು ಮಕ್ಕಳು ಆಟವಾಡುತ್ತಿದ್ದರು, ಅವರಲ್ಲಿ ನಮ್ಮ ಶಿಕ್ಷಕರ ಅಕ್ಕನ ಮಗೂ ಕೂಡ ಆಡುತ್ತಿತ್ತು, ಆ ಮಗುವೊಂದು ಬಿಟ್ಟು, ಉಳಿದ ಮಕ್ಕಳು ಅಲ್ಲೆ ಗಾರೆ ಕೆಲಸ ಮಾಡುವವರ ಮಕ್ಕಳಾಗಿದ್ದರು, ಅವರು ಯಾರೂ ಶಾಲೆಗೆ ಹೋಗದವರಾಗಿದ್ದರು. ನಮ್ಮ ಶಿಕ್ಷಕರ ಮನೆಯಿಂದ ಕೂಗು ಬಂದಿತು, 'ಏ ಸೋನು ( ನಮ್ಮ ಶಿಕ್ಷಕರ ಅಕ್ಕನ ಮಗು), ನೀನು ಅವರೊಡನೆ ಆಡಬಾರದು. ಬಾ ಇಲ್ಲಿ' ಎಂದು ಆ ಮಗುವನ್ನು ಕರೆದುಕೊಂಡು ಹೋದರು. ಆಡುತ್ತಿದ್ದ ಸೋನುವಿನ ಗಮನ ಆ ಮಕ್ಕಳ ಕಡೆಗೆ  ಇತ್ತು. ಚಿಕ್ಕ ಗುಡಿಸಲಿನ ಮುಂದೆ ಆಡುತ್ತಿದ್ದ ಮಕ್ಕಳ ಕಣ್ಣು ಆ ದೊಡ್ಡ ಮನೆಯ ಕಡೆಯೇ ಹರಿದಿತ್ತು.

ಸ್ವಲ್ಪ ಹೊತ್ತಿಗೆ ನನಗೆ ಪಾಠ ಶುರುವಾಗಿದ್ದರಿಂದ ನಾನು ಮನೆಯೊಳಗೆ ಹೋದೆ, ಪಾಠ ಮುಗಿಸಿಕೊಂಡು ಹೊರಗೆ ಬಂದೆ, ಮನೆಯ ಬಾಗಿಲಲ್ಲಿ ಆ ಗುಡಿಸಲಿನ ಮಕ್ಕಳು ಕೂತು ಪಿಳಿ ಪಿಳಿ ಕಣ್ಣು ಬಿಡುತ್ತಾ ಟಿ.ವಿ ನೋಡುತ್ತಿದ್ದರು, ನಾನು ಮನೆಗೆ ಹೊಸಬನಾಗಿದ್ದರಿಂದ ನನ್ನ ಗೆಳೆಯನಿಗೆ ಕೇಳಿದೆ, 'ಇವರು ಹೊರಗೆ ಏಕೆ  ಕೂತಿದ್ದಾರೆ ?' ನನ್ನ ಸ್ನೇಹಿತ ಹೇಳಿದ, 'ಅವರು ಕೆಳ ಜಾತಿಯವರಲ್ಲವೆ ಅದಕ್ಕೆ' ಎಂದ ! ನಾನು  ಒಳಗೆ ಇಣುಕಿದೆ, ನಾಯಿ ಮರಿ ಮನೆಯಲ್ಲೇ ಆಡುತ್ತಿತ್ತು, ಆದರೆ ಮನುಷ್ಯರ ಜಾತಿಯಲ್ಲೇ ಹುಟ್ಟಿದ ಕೆಳ ವರ್ಗದ ಮಕ್ಕಳು ಮಾತ್ರ ಚಪ್ಪಲಿ ಬಿಡುವ ಸ್ಥಳದಲ್ಲಿ ಕೂತಿದ್ದರು. ಇದರಿಂದ ನನಗೆ ತಿಳಿದಿದ್ದು ನಾಯಿಗೆ ಕೂಡ ಮನೆಯಲ್ಲಿ ಪ್ರವೇಶವಿದೆ ; ಆದರೆ ಕೆಳ ಜಾತೀಯ ಮನುಷ್ಯರಿಗಿಲ್ಲ.!

ನನಗೆ ಒಳ ಒಳಗೆ ಭಯ ಶುರುವಾಗಿತ್ತು, ನಾನು ಕೂಡ ಕೆಳ ಜಾತಿಯವನು, ಮಾಂಸ ತಿನ್ನುವ ಕುಲದವನು ಎಂದು ತಿಳಿದರೆ ನನಗೂ ಮನೆಯ ಒಳಗೆ ಪ್ರವೇಶವಿಲ್ಲ! ನಂತರ ನನಗೆ ನಾನೇ ಸಮಾಧಾನಿಸಿಕೊಂಡು, ಚಿಂತಿಸಿದೆ...... ನಾನು ಯಾರಲ್ಲಿಗೆ ಪಾಠ ಕಲಿಯಲು ಬರುತ್ತಿರುವೆ? (ನಿಜ ಹೇಳಬೇಕೆಂದರೆ ಆ ಶಿಕ್ಷಕರು ತುಂಬಾ ಚೆನ್ನಾಗಿಯೆ ಪಾಠ ಮಾಡುತ್ತಿದ್ದರು) ಇವರು ನಿಜವಾಗಿಯೂ ಗುರುಗಳೇ ? ಇವರಲ್ಲಿ ನಾನು ಕಲಿತು ಜೀವನ ರೂಪಿಸಿಕೊಳ್ಳಲು ಸಾಧ್ಯವೆ ? ಹಾಗಾದರೆ ನನ್ನ ಪಾಠಗಳು ಯಾವವು? ನಾನು ಓದುತ್ತಿರುವುದು ಏನನ್ನು ? ಮಾನವೀಯತೆ ಇಲ್ಲದ ಈ ಶಿಕ್ಷಕರು ನನಗೇನು ಹೇಳಿಕೊಟ್ಟಾರು ? ನನ್ನ ಶಿಕ್ಷಕ ಹಾಗೂ ಮಾನವೀಯತೆಯ ಪಾಠ ಹೇಳಿ ಕೂಡದ ನನ್ನ ಶಿಕ್ಷಣದ ಮೇಲೆ ಇಲ್ಲದ ಕೋಪ ಹುಟ್ಟಿತು.

ಹಾಗಾದರೆ ಇದೇ ಕೆಳ ಜಾತಿಯ ಮಕ್ಕಳ ಜೊತೆ ಆಟವಾಡುತ್ತಿದ್ದ ಸೋನು ಮುಂದೆ ಹೇಗಿರುತ್ತಾಳೆ ? ಅವಳ ಮಾನವೀಯತೆ ? ಆ ಮಗುವು ನಮ್ಮ ಶಿಕ್ಷಕರ ಮನೆಯ ವಾತಾವರಣದಲ್ಲಿ ಬೆಳೆಯುತ್ತಿದೆ. ಮುಂದೊಂದು ದಿನ ಅವಳ ಮನೆಯಲ್ಲಿ ಕೆಳ ಜಾತಿಯವರಿಗೆ ಪ್ರವೇಶ ಇಲ್ಲ ಎಂದಾಯಿತು.
 ಇದೆಲ್ಲ ಮಾನವ ಧರ್ಮ, ಮಾನವೀಯತೆ ಎಂದಾದರೆ, ಪ್ರಾಣಿಗಳು ಇಂತಹ ಮಾನವೀಯತೆ ತೋರದಿರಲಿ, ಮಾನವ ಧರ್ಮಕ್ಕಿಂತ ಪ್ರಾಣಿಧರ್ಮವೆ ಮೇಲು ಅಲ್ಲವೆ!.

ಉದ್ಯೋಗ, ಸಂಬಳಕ್ಕೇಂದೇ  ಇರುವ ಇಂತಹ ಡಿಪ್ಲೋಮ, ಇಂಜನಿಯರಿಂಗ್, ಪದವಿಗಳಿಗಿಂತ ಪ್ರಾಣಿಗಳಿಂದ ಸಿಗುವ ಪಾಠ ಎಷ್ಟು ಉತ್ತಮವಲ್ಲವೆ, ಇಂತಹ ವೃತ್ತಿಪರ ಶಿಕ್ಷಣದ ಜೊತೆಗೆ ಜಾತ್ಯಾತೀತತೆ, ಸೌಹಾರ್ದತೆ, ಪ್ರೀತಿಯನ್ನು ಕಲಿಸುವ ಪ್ರಾಣಿಯತೆಯ! (ಮಾನವೀಯತೆಯ ಮೌಲ್ಯಗಳು) ಪಠ್ಯವು ಸೇರಿಸಬೇಕೆಂದು ಅನ್ನಿಸುತ್ತಿದೆ.

ಮನುಷ್ಯರನ್ನು ಮನುಷ್ಯರಂತೆ ಕಾಣೋಣ !   
                       

                          

Friday, January 04, 2013

Udham Singh, a revolutionary nationalist .....


                                                                                  From : apnaorg.com/articles/udhamsingh
Udham Singh, a revolutionary nationalist, was born Sher Singh on 26 December 1899, at Sunam, in the then princely state of Patiala. His father, Tahal Singh, was at that time working as a watchman on a railway crossing in the neighbouring village of Upall. Sher Singh lost his parents before he was seven years and was admitted along with his brother Mukta Singh to the Central Khalsa Orphanage at Amritsar on 24 October 1907. As both brothers were administered the Sikh initiatory rites at the Orphanage, they received new names, Sher Singh becoming Udham Singh and Mukta Singh Sadhu Singh. In 1917, Udham Singh's brother also died, leaving him alone in the world.

Udham Singh left the Orphanage after passing the matriculation examination in 1918. He was present in the Jallianvala Bag on the fateful Baisakhi day, 13 April 1919, when a peaceful assembly of people was fired upon by General Reginald Edward Harry Dyer, killing over one thousand people. The event which Udham Singh used to recall with anger and sorrow, turned him to the path of revolution. Soon after, he left India and went to the United States of America. He felt thrilled to learn about the militant activities of the Babar Akalis in the early 1920's, and returned home. He had secretly brought with him some revolvers and was arrested by the police in Amritsar, and sentenced to four years imprisonment under the Arms Act. On release in 1931, he returned to his native Sunam, but harassed by the local police, he once again returned to Amritsar and opened a shop as a signboard painter, assuming the name of Ram Muhammad Singh Azad. This name, which he was to use later in England, was adopted to emphasize the unity of all the religious communities in India in their struggle for political freedom.

Udham Singh was deeply influenced by the activities of Bhagat Singh and his revolutionary group. In 1935, when he was on a visit to Kashmlr, he was found carrying Bhagat Singh's portrait. He invariably referred to him as his guru. He loved to sing political songs, and was very fond of Ram Prasad Bismal, who was the leading poet of the revolutionaries. After staying for some months in Kashmlr, Udham Singh left India. He wandered about the continent for some time, and reached England by the mid-thirties. He was on the lookout for an opportunity to avenge the Jalliavala Bagh tragedy. The long-waited moment at last came on 13 March 1940. On that day, at 4.30 p.m. in the Caxton Hall, London, where a meeting of the East India Association was being held in conjunction with the Royal Central Asian Society, Udham Singh fired five to six shots from his pistol at Sir Michael O'Dwyer, who was governor of the Punjab when the Amritsar massacre had taken place. O'Dwyer was hit twice and fell to the ground dead and Lord Zetland, the Secretary of State for India, who was presiding over the meeting was injured. Udham Singh was overpowered with a smoking revolver. He in fact made no attempt to escape and continued saying that he had done his duty by his country.

On 1 April 1940, Udham Singh was formally charged with the murder of Sir Michael O'Dwyer. On 4 June 1940, he was committed to trial, at the Central Criminal Court, Old Bailey, before Justice Atkinson, who sentenced him to death. An appeal was filed on his behalf which was dismissed on 15 July 1940. On 31 July 1940, Udham Singh was hanged in Pentonville Prison in London.

Udham Singh was essentially a man of action and save his statement before the judge at his trial, there was no writing from his pen available to historians. Recently, letters written by him to Shiv Singh Jauhal during his days in prison after the shooting of Sir Michael O'Dwyer have been discovered and published. These letters show him as a man of great courage, with a sense of humour. He called himself a guest of His Majesty King George, and he looked upon death as a bride he was going to wed. By remaining cheerful to the last and going joyfully to the gallows, he followed the example of Bhagat Singh who had been his beau ideal. During the trial, Udham Singh had made a request that his ashes be sent back to his country, but this was not allowed. In 1975, however, the Government of India, at the instance of the Punjab Government, finally succeeded in bringing his ashes home. Lakhs of people gathered on the occasion to pay homage to his memory.

BIBLIOGRAPHY 
Copyright © Harbans Singh "The encyclopedia of Sikhism. "
The word "militant" on this document was replaced on the request of Mr. Bhupinder Singh (bhupinder787@yahoo.com).

Sunday, November 04, 2012

ಅಂಬೇಡ್ಕರರನ್ನು ಸಂವಿಧಾನ ಶಿಲ್ಪಿಎಂಬ ಪಟ್ಟದಿಂದ ಕೆಳಕ್ಕಿಳಿಸುವ ಷಡ್ಯಂತ್ರ !



- ರಘೋತ್ತಮ ಹೊ.ಬ, ಚಾಮರಾಜನಗರ

ಇತ್ತೀಚೆಗೆ ಅಥವಾ 1950 ಜನವರಿ 26ರಿಂದಲೂ ಈ ದೇಶದಲ್ಲಿ ಒಂದು ಷಡ್ಯಂತ್ರ ನಡೆಯುತ್ತಾ ಬಂದಿದೆ. ಅದು ಅಂಬೇಡ್ಕರರನ್ನು ಸಂವಿಧಾನ ಶಿಲ್ಪಿ ಎಂಬ ಪಟ್ಟದಿಂದ ಕೆಳಕ್ಕಿಳಿಸುವುದು! ಅರುಣ್ ಶೌರಿ ಇರಬಹುದು ಅಥವಾ ಮತ್ಯಾರೋ ಆರ್ಯ ಶೂರ ಇರಬಹುದು, ಒಟ್ಟಾರೆ ಎಲ್ಲರ ಟಾರ್ಗೆಟ್ ಒಂದೇ. ಅಂಬೇಡ್ಕರ ರಿಂದ ಸಂವಿಧಾನ ಶಿಲ್ಪಿ ಎಂಬ ಟೈಟಲ್ಲನ್ನು ಕಿತ್ತುಕೊಳ್ಳುವುದು ಅಥವಾ ಅವರು ಸಂವಿಧಾನ ಬರೆದೇ ಇಲ್ಲ ಎಂದು ಸಾಧಿಸಿ ತೋರಿಸುವುದು!

ಇದು ಎಷ್ಟು ಸಾಧ್ಯ? ಅಥವಾ ಎಷ್ಟು ಅಸಾಧ್ಯ? ಅದನ್ನು ಕಾಲವೇ ನಿರ್ಣಯಿಸುತ್ತಿದೆ. ಯಾಕೆಂದರೆ ಹಿಂದೆಲ್ಲಾ ಇದು ಅಂದರೆ ಅವರು ಇವರು ಎನ್ನುವುದು ಅಥವಾ ಇವರು ಅವರೇ ಅಲ್ಲ ಎಂದು ಸಾಧಿಸಿ ತೋರಿಸುವುದು ಅಥವಾ ಸಾಧಿಸಿಯೇ ಬಿಡುವುದು ಆಗಾಗ ನಡೆಯುತ್ತಾ ಬಂದಿದೆ. ಉದಾ: ಬುದ್ಧನನ್ನು ವಿಷ್ಣು ಎನ್ನುವುದು, ಶಿವಾಜಿಯನ್ನು ಮುಸ್ಲಿಂ ದ್ವೇಷಿ ಎನ್ನುವುದು ಇತ್ಯಾದಿ.

ಹಾಗಿದ್ದರೆ ಹೀಗೆಯೇ ಅಂದರೆ ಬುದ್ಧನನ್ನು ವಿಷ್ಣು ಎಂದ ಹಾಗೆ ಸಂವಿಧಾನ ಶಿಲ್ಪಿ ಅಂಬೇಡ್ಕರರನ್ನು ಸಂವಿಧಾನ ಶಿಲ್ಪಿ ಅಲ್ಲ ಎಂದು ಸಾಧಿಸಲು ಸಾಧ್ಯವೇ? ಜನಸಾಮಾನ್ಯರೆ ಇದನ್ನು ತೀರ್ಮಾನಿಸಬೇಕು.ಯಾಕೆಂದರೆ ತಮಗೆ ಬೇಕೆಂದವರನ್ನು ಇಂದ್ರ ಚಂದ್ರ ಎನ್ನುವುದು, ತಮಗೆ ಬೇಡ ಎಂದವರನ್ನು ಹೀಗಳೆವುದು, ಇದು ಈ ದೇಶದ ಬ್ರಾಹ್ಮಣವಾದಿ ಚರಿತ್ರಕಾರರು ಮಾಡಿಕೊಂಡು ಬಂದಿರುವ ಪದ್ಧತಿ. ಅಂತಹ ಪದ್ಧತಿಯ ಮುಂದುವರಿದ ಭಾಗವಾಗಿಯೇ ಅಂಬೇಡ್ಕರರನ್ನು ಸಂವಿಧಾನ ಶಿಲ್ಪಿಅಲ್ಲ ಎಂದು ಸಾಧಿಸುವ ಈ ವ್ಯರ್ಥಾಲಾಪ. ಅಂದಹಾಗೆ ಅದುನಡೆದಿರುವುದು ಸುಭಾಷ್ ಕಶ್ಯಪ್ ಎಂಬ ಸಂವಿಧಾನ ತಜ್ಞ ಎನಿಸಿಕೊಂಡವರು ಬರೆದಿರುವ “Our Constitution”  ಎಂಬ ಕೃತಿಯಲ್ಲಿ.ಹಾಗೆ ಸಾಧಿಸ ಹೊರಟವರು ಮೊದಲು ಹೇಳುವುದು ಸಂವಿಧಾನದ ಪ್ರಥಮ ಕರಡನ್ನು ಸಿದ್ಧಪಡಿಸಿದವರು ಬಿ.ಎನ್.ರಾವ್ ಎಂಬವವರು ಎಂದು!

ಅಂದರೆ ಆಗಸ್ಟ್ 29, 1947ರಂದು ಕರಡು ಸಮಿತಿ ರಚಿಸಲ್ಪಟ್ಟರೆ ಅದು ರಚಿಸಲ್ಪಟ್ಟ ಒಂದೇ ತಿಂಗಳಲ್ಲಿ ಅಂದರೆ ಅಕ್ಟೋಬರ್ 1947ರಲ್ಲಿ ಅದರ ಸದಸ್ಯರಲ್ಲೋರ್ವರಾದ ಬಿ.ಎನ್.ರಾವ್‌ರವರು ಪ್ರಥಮ ಕರಡು ರಚಿಸಿದರಂತೆ, ಅವರು ರಚಿಸಿದ ಕರಡನ್ನು ಅಂಬೇಡ್ಕರ್ ನೇತೃತ್ವದ ಸಮಿತಿ ಬರೀ ಪರಿಶೀಲಿಸಿತಂತೆ! ಇದು ಸುಭಾಷ್ ಕಶ್ಯಪ್‌ರಂತಹ ಬ್ರಾಹ್ಮಣ ಚರಿತ್ರಾಕಾರರ ಅಂಬೋಣ. ಆದರೆ ಅದೇ ಸುಭಾಷ್ ಕಶ್ಯಪ್ ತಮ್ಮ“Our Constitution” ಕೃತಿಯ ಅದೇ ಪುಟಗಳಲ್ಲಿ ಅಂಬೇಡ್ಕರರ ಹೇಳಿಕೆಯೊಂದನ್ನು ಉಲ್ಲೇಖಿಸುತ್ತಾರೆ.

ಆ ಹೇಳಿಕೆಯಲ್ಲಿ ಸ್ವತಃ ಅಂಬೇಡ್ಕರರೇ 1947 ಆಗಸ್ಟ್‌ರಿಂದ 1949 ಅಕ್ಟೋಬರ್‌ವರೆಗೆ ಕರಡು ಸಮಿತಿ ಅನೇಕ ಸಭೆಗಳನ್ನು ನಡೆಸಿ ಸಂವಿಧಾನದ ಕರಡಿನ ಅಂತಿಮ ಪ್ರತಿಯನ್ನು 1949 ನವೆಂಬರ್ ತಿಂಗಳಲ್ಲಿ ಸಂವಿಧಾನ ಸಭೆಗೆ ಸಲ್ಲಿಸಿತು ಎನ್ನುತ್ತಾರೆ. ಹಾಗಿದ್ದರೆ 1949 ನವೆಂಬರ್ ತಿಂಗಳಲ್ಲಿ, ಎರಡು ವರ್ಷಗಳ ಸತತ ಪ್ರಯತ್ನದಲ್ಲಿ ಸಂವಿಧಾನ ಸಿದ್ಧಗೊಂಡಿತೆಂದರೆ ಅದರ ಶ್ರೇಯಸ್ಸು ಸಲ್ಲಬೇಕಾದ್ದು ಯಾರಿಗೆ? ಸಮಿತಿಯ ಅಧ್ಯಕ್ಷರಾದ ಅಂಬೇಡ್ಕರರಿಗೆ ತಾನೆ? ಅಂದಹಾಗೆ 1947ರ ಆರಂಭದಲ್ಲಿ ಕೇಳಿಬರುವ ಬಿ.ಎನ್.ರಾವ್ ಎಂಬವವರ ಹೆಸರು ಸಂವಿಧಾನ ರಚಿಸಲು ತೆಗೆದುಕೊಂಡ ಮುಂದಿನ ಆ ಎರಡು ವರ್ಷಗಳ ಸಮಯದಲ್ಲಿ ಅಂದರೆ 1948, 1949ರಲ್ಲಿ ಎಲ್ಲಿಯೂ ಕೇಳಿಬರುವುದಿಲ್ಲ! (ಇತ್ತೀಚೆಗೆ ಹಿಂದುತ್ವವಾದಿಗಳಿಂದ ಕೇಳಿ ಬರುತ್ತಿರುವುದನ್ನೊರತು ಪಡಿಸಿದರೆ!).

ಇದಕ್ಕೆ ಪೂರಕವಾಗಿ ಸಂವಿಧಾನ ಸಭೆಯಲ್ಲಿ ಮಾತನಾಡಿರುವ ಸಮಿತಿಯ ಸದಸ್ಯ ಟಿ.ಟಿ.ಕೃಷ್ಣಮಾಚಾರಿಯವರು ಹೇಳಿರುವುದನ್ನು ನೋಡಿ ಸಂವಿಧಾನದ ಕರಡು ಸಮಿತಿಯಲ್ಲಿದ್ದ ಒಬ್ಬರು ತೀರಿಕೊಂಡರು, ಅವರ ಸ್ಥಾನಕ್ಕೆ ಮರುನೇಮಕ ಆಗಲಿಲ್ಲ. ಒಂದಿಬ್ಬರು ವಿದೇಶದಲ್ಲಿ ನೆಲೆಸಿದ್ದರಿಂದ ಅವರಿಗೆ ಕರಡು ರಚನೆ ಕಾರ್ಯದಲ್ಲಿ ಭಾಗವಹಿಸಲಾಗಲಿಲ್ಲ. ಮಗದೊಬ್ಬರು ಸದಸ್ಯರು ದಿಲ್ಲಿಯಿಂದ ದೂರದಲ್ಲಿದ್ದುದರಿಂದ ಅವರು ಕೂಡ ಅದರಲ್ಲಿ ಭಾಗವಹಿಸಲಿಲ್ಲ. ಅಂತಿಮವಾಗಿ ಸಂವಿಧಾನ ರಚನೆಯ ಪೂರ್ಣ ಜವಾಬ್ದಾರಿ ಅಂಬೇಡ್ಕರರ ಮೇಲೆ ಬಿದ್ದಿತು. ಅಂದಹಾಗೆ ಕೃಷ್ಣಾಮಾಚಾರಿಯವರ ಹೇಳಿಕೆಯ ಪ್ರಕಾರ ಸುಭಾಷ್ ಕಶ್ಯಪ್‌ರವರು ಹೇಳಿರುವ ಕರಡು ಸಮಿತಿ ಸದಸ್ಯರಾದ ಆ ಬಿ.ಎನ್.ರಾವ್ ಎಲ್ಲಿ ಹೋದರು? ವಿದೇಶಕ್ಕೋ ಅಥವಾ ನೇರ ಸ್ವರ್ಗಕ್ಕೋ?

ಅಂಬೇಡ್ಕರರು ಸಂವಿಧಾನ ಶಿಲ್ಪಿ ಅಲ್ಲ ಎಂದು ಹೇಳುವವರು ಇದನ್ನು ಸ್ಪಷ್ಟಪಡಿಸಬೇಕು.ಸಂವಿಧಾನ ಅರ್ಪಿತವಾದ ಆ ಸಂಧರ್ಭದಲ್ಲಿ ಅಂದರೆ ನವೆಂಬರ್ 26,1949ರಲ್ಲಿ ಸಭೆಯ ಅಧ್ಯಕ್ಷರಾದ ಡಾ.ಬಾಬು ರಾಜೇಂದ್ರ ಪ್ರಸಾದ್‌ರವರು ಡಾ.ಅಂಬೇಡ್ಕರ್‌ರವರಿಗೆ ಸಂವಿಧಾನ ರಚಿಸಲು ಪೂರ್ಣ ಸ್ವಾತಂತ್ರ ನೀಡಿದ್ದಿದ್ದರೆ, ಅವರು ಖಂಡಿತವಾಗಿಯೂ ತಮ್ಮದೇ ಆದ ಮತ್ತು ಭಿನ್ನವಾದ ಸಂವಿಧಾನವನ್ನು ಈ ದೇಶಕ್ಕೆ ನೀಡುತ್ತಿದ್ದರು. ಇದರಲ್ಲಿ ಯಾವುದೇ ಅನುಮಾನವಿಲ್ಲ ಎಂದಿದ್ದಾರೆ. ಅಂದಹಾಗೆ ರಾಜೇಂದ್ರ ಪ್ರಸಾದರ ಈ ಹೇಳಿಕೆ ಅರ್ಥೈಸುವುದೇನನ್ನು? ಸಂವಿಧಾನ ರಚಿಸುವ ಪೂರ್ಣ ಹೊಣೆ ಅಂಬೇಡ್ಕರರ ಮೇಲೆ ಬಿದ್ದಿತ್ತು ಆದರೆ ಅವರಿಗೆ ಕೆಲವು ತಡೆಗಳಿದ್ದವು ಎಂದು ತಾನೆ? ಅದೇನೆ ಇರಲಿ ಅಂಬೇಡ್ಕರ್ ಸಂವಿಧಾನ ಶಿಲ್ಪಿ ಎಂದು ಘಂಟಾಘೋಷವಾಗಿ ಹೇಳಲು ಡಾ.ಬಾಬು ರಾಜೇಂದ್ರಪ್ರಸಾದ್ ಮತ್ತು ಟಿ.ಟಿ.ಕೃಷ್ಣಾಮಾಚಾರಿಯವರ ಇದಿಷ್ಟು ಹೇಳಿಕೆ ಮಾತ್ರ ಸಾಕು.

ಯಾಕೆಂದರೆ ಇವರಿಬ್ಬರು ಸಂವಿಧಾನದ ರಚನೆಯ ಜೊತೆ ಜೊತೆಯಲ್ಲೆ ಬೆಳೆದವರು, ಅರುಣ್ ಶೌರಿ ಮತ್ತು ಸುಭಾಷ್ ಕಶ್ಯಪ್‌ರ ಹಾಗೆ ಅದನ್ನು ಅದರ ಇತಿಹಾಸವನ್ನು ದೂರದಿಂದ ಹಿಂದುತ್ವದ ದೃಷ್ಟಿಯಿಂದ ಕೆದಕಿದವರಲ್ಲ! ಮುಂದುವರಿದು ಅಂಬೇಡ್ಕರರ ಸಂವಿಧಾನ ರಚನೆಯ ಕಾರ್ಯದ ಬಗ್ಗೆ ಆಕ್ಷೇಪಿಸುವವರು ಹೇಳುವುದು ಸಂವಿಧಾನ ಎಂಬುದು ಕತೆಯಲ್ಲ, ಕಾದಂಬರಿಯಲ್ಲ ಅದನ್ನು ಅಂಬೇಡ್ಕರರೊಬ್ಬರೇ ಬರೆದಿದ್ದಾರೆ ಎನ್ನುವುದು ಎಷ್ಟು ಸರಿ? ಎಂದು. ನಿಜ, ಸಂವಿಧಾನ ಕತೆಯಲ್ಲ, ಕಾದಂಬರಿಯೂ ಅಲ್ಲ. ಹಾಗೆಯೇ ಸ್ವಾತಂತ್ರ ಎಂಬುದೂ ಕೂಡ ಕಡ್ಲೆಪುರಿಯಲ್ಲ! ಏಕೆಂದರೆ ಗಾಂಧೀಜಿಯವರನ್ನು ದೇಶಕ್ಕೆ ಸ್ವಾತಂತ್ರ ತಂದುಕೊಟ್ಟವರು ಎಂದು ಪ್ರಶ್ನಾತೀತವಾಗಿ ಒಪ್ಪಿಕೊಳ್ಳಲಾಗಿದೆ.

ಇದನ್ನು ಯಾರೂ ಗಾಂಧೀಜಿ ಸ್ವಾತಂತ್ರವನ್ನು ಯಾವಾಗ, ಯಾವ ಟೈಮಲ್ಲಿ, ಯಾರ ಕೈಗೆ ತಂದುಕೊಟ್ಟರು ಎಂದು ಎಲ್ಲಿಯೂ ಪ್ರಶ್ನಿಸುವುದಿಲ್ಲ! ಅಂಬೇಡ್ಕರ್‌ರವರು ರಚಿಸಿದ ಸಂವಿಧಾನಕ್ಕೆ ಸಾಕ್ಷಿಯಾಗಿ ಸಂವಿಧಾನದ ಆ ಮೂಲ ಪ್ರತಿ ಇದೆ. ಅದರ ರಚನೆಯ ಹೊಣೆ ಹೊತ್ತ ಕರಡು ಸಮಿತಿಯ ಅಧ್ಯಕ್ಷರು ಅವರು ಎಂಬುದಕ್ಕೆ ದಾಖಲೆ ಇದೆ. ಆದರೆ ಗಾಂಧೀಜಿ ಸ್ವಾತಂತ್ರ ತಂದುಕೊಟ್ಟರೆಂಬುದಕ್ಕೆ ಏನು ದಾಖಲೆ ಇದೆ? ಹಾಗೆ ಹೇಳುವುದಾದರೆ ದೇಶಕ್ಕೆ ಸ್ವಾತಂತ್ರ ಬಂದ ದಿನ ಗಾಂಧೀಜಿ ದೇಶದ ರಾಜಧಾನಿ ದಿಲ್ಲಿಯಲ್ಲಿ ಇರಲೇ ಇಲ್ಲ. ದೂರದ ಕಲ್ಕತ್ತಾದಲ್ಲಿ ಇದ್ದರು! ಹಾಗಿದ್ದರೂ ಈ ದೇಶ ಅವರನ್ನು ದೇಶಕ್ಕೆ ಸ್ವಾತಂತ್ರ ತಂದುಕೊಟ್ಟವರು ಎಂದು ಒಪ್ಪಿಕೊಂಡಿಲ್ಲವೆ?

ಗಾಂಧೀಜಿ ದೇಶಕ್ಕೆ ಸ್ವಾತಂತ್ರ ತಂದುಕೊಟ್ಟವರು ಎಂಬುದನ್ನು ಒಪ್ಪಿಕೊಳ್ಳಬಹುದಾದರೆ ಅಂಬೇಡ್ಕರರನ್ನು ಸಂವಿಧಾನಶಿಲ್ಪಿ ಎಂದು ಒಪ್ಪಿಕೊಳ್ಳಲು ಏನಡ್ಡಿ? ಯಾಕೆ, ಅಂಬೇಡ್ಕರರು ಅಸ್ಪಶ್ಯರು ಎಂಬ ಕಾರಣಕ್ಕೆ ಅವರಿಗೆ ಅಂತಹ ಗೌರವವನ್ನು ನೀಡಲು ಈ ದೇಶದ ಪಟ್ಟಭದ್ರ ಹಿತಾಸಕ್ತಿಗಳಿಗೆ ಮನಸ್ಸಾಗುತ್ತಿಲ್ಲವೆ? ಸತ್ಯ ಹೇಳಿದರೆ ನಾವೇನು ಬೇಜಾರು ಮಾಡಿಕೊಳ್ಳುವುದಿಲ್ಲ. ಬೇಕಿದ್ದರೆ ನೇರವಾಗಿ ಹೇಳಲಿ, ಅಂಬೇಡ್ಕರ್ ಅಸ್ಪಶ್ಯರು ; ಆದ್ದರಿಂದ ಅವರು ಸಂವಿಧಾನ ಶಿಲ್ಪಿಯಲ್ಲ ಎಂದು !
ಕೃಪೆ : ವಾರ್ತಾಭಾರತಿ
  
 

Wednesday, August 29, 2012

बाबासाहेब आणि भारतीय संविधान

 
 
डॉ. संदीप नंदेश्वर, नागपूर ९२२६७३४०९१
बाबासाहेब संविधान अमलात येण्याच्या आधीच भारतीय घटनेचे शिल्पकार बनले होते.

महावीर सांगलीकर हा बाळबोध भट आजकाल भारतीय संविधान आणि बाबासाहेबांच्या योगदानावर बरळतो आहे...त्याला उत्तर द्यावे इतकी त्याची लायकी नाही... पण आज संविधानाच्या संबंधाने काही प्रश्न उपस्थित होतात म्हणून संविधानाविषयी निर्माण झालेला संभ्रम दूर व्हायला हवा....

भारतीय संविधानाची निर्मिती प्रक्रिया १९०९ च्या मोर्ले-मिंटो सुधारणा कायद्यापासून सुरु झाली आहे. आणि शेवट हा २६ नोव्हेंबर १९४९ ला संविधान सभेच्या संविधान स्वीकारापर्यंत ती चालली आहे. या मध्यंतरीच्या काळात १९१९ चा montague - Chemsford सुधारणा कायदा महत्वाचा आहे. ज्या कायद्याने भारतीयांना मर्यादित राजकीय, आर्थिक, सामाजिक स्वातंत्र्य बहाल केले. हा १९१९ चा कायदा बनण्याआधी साउथबुरो कमिशन १९१८ समोर डॉ. बाबासाहेबांनी निवेदन देऊन साक्ष दिली होती. त्यात ज्या मागण्या प्रामुख्याने बाबासाहेबांनी केल्या होत्या त्या १९१९ च्या montague - Chemsford सुधारणा कायदात समाविष्ट करण्यात आल्या होत्या. बाबासाहेब वगळता तिथे या देशातील कुठल्याही अन्य व्यक्ती वा संघटनांचा समावेश का झाला नाही. फक्त डॉ. बाबासाहेब आंबेडकर यांनाच या देशाच्या स्वातंत्र्याची आणि या देशातल्या जनतेच्या हिताची काळजी होती हेच दिसून येते.

त्यानंतर १९२७ ला सायमन कमिशन इथल्या परिस्थितीचा अभ्यास करायला भारतात आले. त्या कमिशन ला महात्मा गांधीच्या नेतृत्वातील कॉंग्रेस ने विरोध केला. आणि Go Back सायमन चा नारा लावला. कॉंग्रेस ने कुठलेही सहकार्य या कमिशन ला केले नाही. परंतु बाबासाहेबांनी या कमिशन ला सुद्धा आपल्या मागण्यांचे निवेदन सदर केले. त्या निवेदनात इथल्या अस्पृश्यांच्या कल्याणासाठी इंग्रज सरकारने काय केले पाहिजे यासोबतच भारतातील संविधान निर्मितीसाठी आणि राजकीय प्रांतिक विधीमंडळाची मांडणी व रचना कशी असावी याविषयी सुद्धा मार्गदर्शन केले होते. तेव्हा कॉंग्रेस काय; गांधी काय; तर या देशातले इतर अन्य महा-(पुरुष), संस्था-संघटना निष्काम कर्मयोगाच्या समाधी अवस्थेत बसल्या होत्या.

१९२७ च्या सायमन कमिशन ने केलेल्या शिफारशीनुसारच इंग्रज संसदेने गोलमेज परिषद बोलावली. त्यात प्रामुख्याने बाबासाहेबांना पुनःच्या आमंत्रित करण्यात आले. या पहिल्या गोलमेज परिषदेला गांधीप्रणीत कॉंग्रेस ने बहिष्कार घातला. परंतु बाबासाहेबांनी गोलमेज परिषदेत हजेरी देत इंग्रज सरकारला या देशाला कश्याप्रकारच्या कायद्याची गरज आहे. हे पटवून दिले. भारतातील प्रांतिक आणि केंद्रीय विधीमंडळांची रचना कशी असावी हे सुद्धा पटवून दिले. हे गांधी आणि कॉंग्रेस ला माहित झाल्याने गांधी व कॉंग्रेस चे महत्व टिकून राहावे म्हणून गांधी दुस-या गोलमेज परिषदेला हजार झाले. तिथेही गांधी आणि बाबासाहेब यांच्यात भारतीय सामाजिक परिस्थिती लक्षात घेता आवश्यक असणा-या तरतुदी संबंधाने मोठ्या प्रमाणात खडाजंगी झाली. शेवटी गोलमेज परिषदेने बाबासाहेबांच्या बाजूने ठराव घेतला. गांधींना त्यात सपशेल अपयश पचवावे लागले आणि बाबासाहेबांपुढे घुताने टेकावे लागले. (कृपया पुणे कराराच्या संबधाचा जो विषय आहे त्यावर मी बोलत नाही. तो विषय वगळता अन्य ठरावावर मी बोलत आहे) याच गोलमेज परिषदेने घेतलेल्या ठरावांचा जाहीरनामा प्रसिद्ध करण्यात आला. आणि त्याचेच रुपांतर पुढे १९३५ च्या कायद्यात झाले. म्हणजेच याही कायद्यात बाबासाहेबांचे योगदान मोठे आहे.

पुढे भारतीय संविधान निर्मितीच्या प्रक्रियेला इंग्रज सरकारकडून प्रयत्न करण्यात आले. त्यासाठी त्यांनी विविध आयोगांना भारतात पाठविले. त्यातलेच पहिले १९४२ ला परत सायमन कमिशन भारतात आले. तेव्हाही गांधीप्रणीत कॉंग्रेस ने त्याला विरोध केला. परंतु बाबासाहेबांनी मात्र सहकार्य केले. आपल्या मागण्यांचे निवेदन देत राहिले. त्यानंतर पुन्हा संविधान निर्मितीच्या संबंधाने निर्णय घेण्यासाठी क्रिप्स मिशन (त्रीमंत्री योजना म्हणून प्रसिद्ध) भारतात आले. तेव्हा थोडीशी कॉंग्रेस ची भूमिका मवाळ झाली होती. कारण प्रत्येक वेळेस बाबासाहेब आपल्या मागण्या इंग्रजांकडून मान्य करवून घेत होते. परत १९४६ ला माउंटबेटन च्या नेतृत्वात एक आयोग भारतात आले. जो संविधान सभेच्या निर्मितीसाठी शेवटचा आयोग ठरला. या सर्व इतिहासात बाबासाहेबांचे मोठे योगदान राहिले आहे. कॉंग्रेस किंवा गांधी किंवा अन्य कुणापेक्षा पेक्षा जास्त योगदान संविधान निर्मितीच्या पूर्वइतिहासात डॉ. बाबासाहेब आंबेडकरांचे राहिलेले आहे.

माउंटबेटन ने दिलेल्या अंतिम सूचनेवरून संविधान सभेच्या निवडणुका सुरु झाल्या. बाबासाहेब पश्चिम बंगाल प्रांतातून संविधान सभेवर निवडून आले. (तेव्हाही कॉंग्रेस ने बाबासाहेब संविधान सभेवर निवडून येऊ नये म्हणून प्रयत्नांची पराकाष्टा केली होती. कारण पूर्वइतिहास त्यांना माहित असल्याने...कॉंग्रेस चे काहीही चालले नसते म्हणून) ९ डिसेंबर १९४६ ला संविधान सभेची पहिली बैठक बोलाविण्यात आली. आणि भारतीय संविधानाचे प्रारूप कसे असावे यावर दीर्घ चर्चा झाली. या चर्चेत प्रत्येकच सदस्याला मते मांडण्याची संधी देण्यात आली. बाबासाहेबांना आपली मते मांडण्यासाठी वाट पहावी लागत होती.

अखेर १३ डिसेंबर १९४६ ला बाबासाहेबांना संविधान सभेसमोर संविधानाच्या प्रारुपावर मत मांडण्यासाठी अचानक आमंत्रित करण्यात आले. (अचानक यासाठी कि अनेक सदस्य बाकी असल्याने बाबासाहेबांना याची कल्पनाच नव्हती कि त्यांना या दिवशी आपली मते मांडवी लागतील म्हणून...) बाबासाहेबांनी सुरवातीलाच याचा उल्लेख केला कि "माझा नंबर आज लागेल याची मला कल्पना नव्हती. तशी पूर्वसूचना मला मिळाली असती तर मी पूर्वतयारीनिशी माझे मत मांडले असते. पण तरीही मी माझे मत मांडणार आहे..." बाबासाहेबांचे ते संविधान सभेतील पहिले भाषण सुरु झाले. संपूर्ण सभागृह अवाक होऊन अतिशय एकाग्रचित्त झाले होते.

बाबासाहेब एकावर एक मुद्दे आपल्या बुद्धिचातुर्याने संविधान सभेसमोर मांडत होते. सभागृहातील एकही सदस्य त्या बाबासाहेबाच्या भाषणाच्या वेळी उठला नाही कि जागचा हलला सुद्धा नाही. बाबासाहेबांच्या मुखातून जणू काही भविष्याचे संविधानाच बाहेर पडत होते. ज्यात संपूर्ण मानवजातीच्या कल्याणाची एक आचारसंहिताच लिहिली जात होती. बाबासाहेबांचे भाषण झाल्यावर सभागृह टाळ्यांच्या गळगळाटांने निनादून उठले. संपूर्ण सभागृहातील सदस्यांनी बाबासाहेबांच्या विद्वत्तेपुढे मानच झुकविली. बाबासाहेबांचे विरोधकही त्या भाषणाने इतके प्रभावी झाले कि त्यांच्या तोंडून कौतुकाचे शब्दही फुटत नव्हते.

अश्यातच भारत आणि पाकिस्थानाची फाळणी होण्याचे संकेत होते. ती झाली. बाबासाहेबांचा मतदार संघ पाकिस्तानात गेला. त्यामुळे संविधान सभेतील त्यांचे सदस्यत्व धोक्यात येणार होते. अश्या परिस्थितीत बाबासाहेबांचे समर्थक आणि संविधान सभेतील अन्य सभासद ज्यांनी बाबासाहेबांचे १३ डिसेंबर १९४६ चे भाषण ऐकले होते त्यांचा कॉंग्रेस वर दबाव निर्माण झाला. कॉंगेस ला पण बाबासाहेबांना संविधान सभेतील कामकाजापासून अलिप्त ठेवता येत नव्हते. कारण इतकी प्रचंड विद्वत्ता आणि कल्याणाचा जाहीरनामा संपूर्ण कॉंग्रेस मध्ये कुणाकडेही नव्हते. भारताचे संविधान बाबासाहेबंशिवाय बनणे अशक्यप्राय होते हे कॉंग्रेस चांगल्याने जाणून होती. म्हणून शेवटी बी जी खेरांना पत्र लिहून जयकरांचे मुंबई प्रांतातील संविधान सभेतील सदस्यत्व अन्य कारणाने रद्द करण्यात आले. आणि त्या टिकाणी बाबासाहेबांना संविधान सभेवर निवडून आणण्यात आले. कॉंग्रेस, संविधान सभा, भारत देश या सर्वांचीच ती गरज होती. बाबासाहेब संविधान सभेवर निवडून जाने सर्वांच्याच हिताचे होते. त्यानंतर बाबासाहेबांनी संविधानाच्या मसुदा समितीच्या अध्यक्षपदावरून केलेली कामगिरी आणि त्यांची संविधान सभेतील सर्व कलमांवर केलेली भाषणे म्हणजे या देशाचे भवितव्यच होते.

संविधान निर्मितीचा हा पूर्ण इतिहास आपण लक्षात घेतला तर बाबासाहेब संविधान अमलात येण्याच्या आधीच भारतीय घटनेचे शिल्पकार बनले होते. परंतु काही बांडगुळे ठराविक अंतराने बाबासाहेब आणी भारतीय संविधानावर चिखलफेक करतात. ती मोडून काढण्यासाठी हा इतिहास आम्ही लक्षात घेतला पाहिजे. या देशात संविधान किती माणसांपर्यंत पोहचला आहे ? हे पाहायचे असेल तर अलीकडच्या काळात अनेक उदाहरणे डोळ्यासमोर येत आहेत. इथली माणसे INDIAN PINAL CODE, HINDU LAW, COMPANY LAW, FAMILY LAW, CONTRACT LAW etc. अश्या अनेक कायद्यांची भेसळ भारतीय संविधानाशी करतात. उदा. "कसाबला लवकर फाशी होत नाही कारण संविधान जबाबदार आहे." "भ्रष्टाचार्यांना रोकता येत नाही. कारण संविधान जबाबदार आहे." सर्व प्रश्नांसाठी वेगळे कायदे असतांना ही बाळबोध माणसे सरसकट भारतीय संविधानाला आणि बाबासाहेबांना जबाबदार ठरवितात. हे किती हास्यास्पद आहे. आणि या देशातल्या अश्या बाळबोध माणसांमध्ये किती संविधानिक जागृती झाली आहे हे आपल्या लक्षात येईल.

बाबासाहेब आणि भारतीय संविधान यावर बोटे ठेवून उलटसुलट इतिहास मांडणा-या, वाचना-या, लिहिणा-या, सांगणा-या बाल्बोधांनी हा इतिहास वाचवा आणि नंतरच चर्चा करावी.


Wednesday, July 25, 2012

ವಡ್ಡರ ವೇದನೆ ; ನನ್ನ ಮಾತು !


'ಉಚಲ್ಯಾ' ಆತ್ಮಕತೆಯ ಮೂಲಕ ನಮ್ಮೆಲ್ಲರಿಗೆ ಪರಿಚಿತವಾಗಿರುವ ಮರಾಠಿ ಲೇಖಕ ಲಕ್ಷ್ಮಣ ಗಾಯಕವಾಡ ಅವರ 'ವಡಾರ ವೇದನಾ' ಎನ್ನುವ ಕಾದಂಬರಿಯನ್ನು 'ವಡ್ಡರ ವೇದನೆ' ಎಂಬುದಾಗಿ ನಾನು ಕನ್ನಡೀಕರಿಸಿದ್ದೇನೆ. (ಕಣ್ವ ಪ್ರಕಾಶನ, ಬೆಂಗಳೂರು : 2011) ಆ ಕಾದಂಬರಿಯಲ್ಲಿ ನಾನು ಹೇಳಿದ ಮಾತುಗಳು ಇಲ್ಲಿವೆ ...

ಸೃಜನ ಮತ್ತು ಸೃಜನೇತರ ಎಂದು ವಿಭಾಗಿಸಿ ಸಾಹಿತ್ಯವನ್ನು ಅಧ್ಯಯನ ಮಾಡುವುದಕ್ಕೆ ಅಭ್ಯಂತರವಿಲ್ಲ. ಆದರೆ ಅದನ್ನೇ ಮುಂದಿಟ್ಟುಕೊಂಡು ಅದು ಹೆಚ್ಚು ; ಇದು ಕಡಿಮೆ ಎನ್ನುವಂತಹ ವಾದಗಳಿಗೆ ಜೋತು ಬಿದ್ದರೆ ಅದು ಕೇವಲ ಒಣ ಹರಟೆಯಾಗುತ್ತದೆ ಎಂಬುದರಲ್ಲಿ ಯಾವುದೇ ಸಂದೇಹವಿಲ್ಲ. ಅನುವಾದವನ್ನು ಸೃಜನೇತರ ಸಾಹಿತ್ಯವೆಂದು ಅಲ್ಲಗಳೆಯುವ, ಅನನುಮಾನಿಸುವ, ಅವಹೇಳನ ಮಾಡುವ, ಅಣಕಿಸಿ ಕಿಚಿಪಿಚಿ ಎನ್ನುವವರಿಗೆ ಈ ಮಾತನ್ನು ಅನ್ವಯಿಸಿ ಹೇಳಲಾಗಿದೆ. ಅನುವಾದವೂ ಒಂದು ಕಲೆಯಾಗಿರುವಾಗ ಅದನ್ನು ಸೃಜನೇತರ ಎನ್ನುವುದು ಏಕೆ ಎಂಬುದೇ ತಿಳಿಯುತ್ತಿಲ್ಲ. ಅನುವಾದವೂ ಕೂಡ ಒಂದು ಸೃಜನಶೀಲವಾದ ಸಾಹಿತ್ಯವೇ ಆಗಿದೆ. ಸ್ವತಃ ಬರೆಯುವುದು ಶ್ರೇಷ್ಟವೆಂದೂ ಬೇರೆ ಭಾಷೆಯಿಂದ ಅನುವಾದ ಮಾಡುವುದು ಕನಿಷ್ಟವೆಂದು ಪರಿಭಾವಿಸುವಿಕೆ ಕೇವಲ ಮೂರ್ಖತನವಾಗುತ್ತದೆ ಅಷ್ಟೆ.
ಅನುವಾದವನ್ನು ಯಾರು ಬೇಕಾದರೂ ಮಾಡಬಹುದು ಎಂಬ ಕಲ್ಪನೆಯೇ ತಪ್ಪು. ಒಬ್ಬ ಅನುವಾದಕ ತನ್ನ ಸಂಸ್ಕೃತಿಯ ಜೊತೆಗೆ ಅನುವಾದಿಸಬೇಕಾದ ಕೃತಿಯಲ್ಲಿರುವ ಸಂಸ್ಕೃತಿಯನ್ನೂ ಅರಿಯಬೇಕಾಗುತ್ತದೆ. ಕೇವಲ ಅರಿಯುವುದು ಮಾತ್ರವಲ್ಲ ; ಅದರಲ್ಲಿ ಪರಕಾಯ ಪ್ರವೇಶ ಪಡೆಯಬೇಕಾಗುತ್ತದೆ. ಭಿನ್ನ ಸಂಸ್ಕೃತಿ ಮತ್ತು ಭಾಷೆಯ ಜಾಯಮಾನವನ್ನು ಅರಿಯದೇ ಮಾಡುವ ಅನುವಾದ, ಅನುವಾದ ಎನಿಸಿಕೊಳ್ಳಲಾರದು. ಒಳ್ಳೆಯ ಅನುವಾದ ಈ ಗ್ರಹಿಕೆಯನ್ನು ಅನುಸರಿಸುತ್ತದೆ. ಒಂದು ಭಾಷೆಯಿಂದ ಇನ್ನೊಂದು ಭಾಷೆಗೆ ಸಾಹಿತ್ಯ ಅನುವಾದವಾಗುವಾಗ ಮೂಲ ಲೇಖಕನ ಅನುಭವಗಳ ಮೂಲವನ್ನೂ ತಿಳಿದುಕೊಳ್ಳುವ ಪ್ರಯತ್ನವನ್ನು ಅನುವಾದಕ ಮಾಡಬೇಕಾಗಿರುತ್ತದೆ.
ಮೂಲಕೃತಿಯ ಸಂಸ್ಕೃತಿಯ ಅರಿವು, ಪ್ರಾದೇಶಿಕ, ಸಾಮಾಜಿಕ, ಮತ್ತು ಜನಾಂಗೀಯ ಭಾಷೆಗಳ ಅಧ್ಯಯನ ಮೊದಲಾದ ಅಂಶಗಳನ್ನು ಒಬ್ಬ ಅನುವಾದಕ ಹೊಂದಿದ್ದು, ಸ್ವಭಾಷೆಯಲ್ಲಿ ಅದನ್ನು ತನ್ನದಾಗಿಸಿಕೊಳ್ಳುವ ಕಾರ್ಯತತ್ಪರತೆ ಮೊದಲಾದ ಅಂಶಗಳು ಒಬ್ಬ ಅನುವಾದಕನಲ್ಲಿ ಇದ್ದರೆ ಉತ್ಕೃಷ್ಟವಾದ ಅನುವಾದವೊಂದು ಹೊರಬರಲು ಸಾಧ್ಯವಾಗುತ್ತದೆ. ಈ ಎಲ್ಲ ಮಾತುಗಳ ಹಿನ್ನೆಲೆಯಲ್ಲಿಯೇ ನಾನು ಮರಾಠಿಯನ್ನು ಕನ್ನಡೀಕರಿಸುತ್ತೇನೆ.
ಮರಾಠಿ ದಲಿತ ಸಾಹಿತ್ಯದಲ್ಲಿ ಪ್ರಮುಖವಾಗಿರುವ ಲಕ್ಷ್ಮಣ ಗಾಯಕವಾಡ ಅವರನ್ನು ನಾನು ಭೇಟಿಯಾದಾಗ ಅವರು ವೊಟ್ಟವೊದಲು ಸೂಚಿಸಿದ್ದು ಅವರ ಆತ್ಮಚರಿತ್ರೆ ‘ಉಚಲ್ಯಾ’ವನ್ನು ಮತ್ತೊಮ್ಮೆ ಅನುವಾದಿಸಬೇಕೆಂದು. ಆದರೆ ಈಗಾಗಲೇ ಅದು ಕನ್ನಡಕ್ಕೆ ಬಂದಿರುವುದರಿಂದ ನಾನು ನಿರಾಕರಿಸಿದೆ.  ಆದರೂ ಅವರು ಒತ್ತಾಯ ಮುಂದುವರಿದೇ ಇತ್ತು. ಈಗಲೂ ಫೋನಿಸಿದಾಗ ಅವರು ಅದನ್ನೇ ಹೇಳುತ್ತಾರೆ. ಆಗ ನಾನೇ ಒಂದು ಪ್ರಸ್ತಾಪ ಮಾಡಿ ‘ಉಚಲ್ಯಾ’ ಬಂದ ನಂತರ ಆದ ಅನುಭವಗಳನ್ನೇ ಬರೆಯಿರಿ ; ಬೇಕಾದರೆ ನಾನು ಅದನ್ನು ‘ಆಪ್ಟರ್ ಉಚಲ್ಯಾ’ ಎಂದು ಹೆಸರಿಸಿ ಅನುವಾದ ಮಾಡುತ್ತೇನೆ ಎಂದೆ. ಆಗ ಅವರು ತಮ್ಮ ಮತ್ತೊಂದು ಕೃತಿ, ‘ವಡಾರ ವೇದನಾ’ ಅನುವಾದ ಮಾಡುವಂತೆ ಹೇಳಿದರು. ನಾನು ಖುಷಿಯಿಂದಲೇ ಒಪ್ಪಿಕೊಂಡೆ.
ವಡಾರ ವೇದನಾ ಕಾದಂಬರಿಯನ್ನು ನಾನು ಓದುತ್ತ ಹೋದಂತೆಲ್ಲ ಮೊದ ಮೊದಲು ನನಗೆ ರೋಮಾಂಚನವೇ ಆಯಿತು. ಮಹಾರಾಷ್ಟ್ರದಲ್ಲಿ ಅಲೆಮಾರಿ ಬುಡಕಟ್ಟಿನ ವಡ್ಡರ ಸಮಾಜದ ಬಗ್ಗೆ ಇರುವ ಕಾದಂಬರಿಯಲ್ಲಿ ಆ ಸಮಾಜದ ಸಂಸ್ಕೃತಿಯ ಚಿತ್ರಣವೂ ಸೇರಿದೆ. ಅನುವಾದಕ್ಕಿಳಿದಾಗ ಒಂದಿಷ್ಟು ಹಿಂಜರಿಕೆ ಕೂಡ ಆಯಿತು. ಯಾಕೆಂದರೆ ಕಾದಂಬರಿಯಲ್ಲಿ ಹೆಚ್ಚಾಗಿ ಬಳಕೆಯಾಗಿದ್ದು ಗ್ರಾಮ್ಯ ಮರಾಠಿ ಭಾಷೆ ಅನ್ನುವುದಕ್ಕಿಂತ ತಳಮಟ್ಟದ ಸಮಾಜವೊಂದರ ಆಡುನುಡಿ ಎನ್ನುವುದು ಸಮಂಜಸವಾದೀತು. ಗೊಂದಲ ಹುಟ್ಟಿಸುವ ಕೆಲ ಕ್ಲಿಷ್ಟ ಪದಗಳು ಯಾವ ಡಿಕ್ಷನರಿಯಲ್ಲಿ ಹುಡುಕಿದರೂ ಸಿಗಲಾರವು. ಜೊತೆಗೆ ಅಲ್ಲಲ್ಲಿ ಮರಾಠಿ ಮಿಶ್ರಿತ ವಡ್ಡರ ಸಮಾಜದ ತೆಲುಗು ಭಾಷೆ ಬೇರೆ !
ನಾನು ಹಠ ಬಿಡಲಿಲ್ಲ ; ಸೋಲು ಒಪ್ಪಿಕೊಳ್ಳುವ ಜಾಯಮಾನವೇ ನನ್ನದಲ್ಲ.  ಕನ್ನಡ-ಮರಾಠಿ ಗಡಿಭಾಗದವನಾದ ನನಗೆ ಮರಾಠಿ ಗ್ರಾಮ್ಯದ ಅನುಭವ ಇತ್ತು. ಜನಾಂಗೀಯ ಭಾಷೆಯ ಒಡನಾಟವೂ ಇತ್ತು. ಜೊತೆಗೆ ತೆಲುಗು ಭಾಷೆಯನ್ನೂ ಅಲ್ಪ-ಸ್ವಲ್ಪ ಕಲಿತಿದ್ದೆ. ಯಾರಾದರೂ ಸಿಕ್ಕರೆ ‘ಏಮ ಚೆಪ್ಪತಾವು ಚೆಪ್ಪು’ ಎಂದೇ ಮಾತನ್ನು ಆರಂಭಿಸುವ ಪರಿಪಾಠವೂ ಬೆಳೆದು ಬಂದಿತ್ತು. ಹೀಗೆ ಎಲ್ಲವೂ ಸಕಾರಾತ್ಮಕ ಅಂಶಗಳಿದ್ದುದ್ದರಿಂದಲೇ ನಾನು ತುಂಬ ಎದೆಗಾರಿಕೆಯಿಂದಲೇ ಅನುವಾದಕ್ಕೆ ಇಳಿದೆ. ಎಲ್ಲ ಸರಾಗವಾಯಿತು ; ಸಾಂಗವಾಗಿ ನೆರವೇರಿತು. ಅನುವಾದಿಸಿದ ಮೇಲೆ ಮತ್ತೊಮ್ಮೆ ಓದಿ ತಿದ್ದುಪಾಟು ಮಾಡಿದೆ. ಮಹಾರಾಷ್ಟ್ರ ನೆಲದಲ್ಲಿ ನಡೆದ ಕನ್ನಡ ಕಥೆಯೇನೋ ಎನ್ನುವಷ್ಟರ ಮಟ್ಟಿಗೆ ಅದನ್ನು ಕಟ್ಟಿದ್ದೇನೆ ಎಂಬ ಸಾರ್ಥಕ ಭಾವವೂ ಮನದಲ್ಲಿ ಸುಳಿದಾಡಿತು.


(ಈ ಅನುವಾದಿತ ಕಾದಂಬರಿಗೆ ಅಮೂಲ್ಯವಾದ ಮುನ್ನುಡಿಯನ್ನು ಸಂಸ್ಕೃತ ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ. ಮಲ್ಲೇಪುರಂ ವೆಂಕಟೇಶ ಅವರು ಬರೆದಿದ್ದಾರೆ)

Sunday, July 22, 2012

ಮರಾಠಿ ಹಿರಿಯ ಬರಹಗಾರ ಉತ್ತಮ ಕಾಂಬಳೆ

ಡಾ. ಸಿದ್ರಾಮ ಕಾರಣಿಕ

(ಮರಾಠಿಯ ಶ್ರೇಷ್ಟ ಹಿರಿಯ ಸಾಹಿತಿ, ವಿಚಾರವಾದಿ, ವಿಮರ್ಶಕ ಉತ್ತಮ ಕಾಂಬಳೆಯವರ 'ದೇವದಾಸಿ ಮತ್ತು ಬೆತ್ತಲೆ ಸೇವೆ' ಕೃತಿಯನ್ನು ಮರಾಠಿಯಿಂದ ಅನುವಾದ ಮಾಡಿದಾಗ ನಾನು ಬರೆದ ಮೊದಲ ಮಾತುಗಳು)


“ಹಲೋ ಸರ್... ನಾನು, ಧಾರವಾಡದಿಂದ ಡಾ. ಸಿದ್ರಾಮ ಕಾರಣಿಕ’”
“ಹೇಳ್ರಿ ಸಿದ್ರಾಮ, ಆರಾಮಾಗಿದ್ದೀರಿ ?”
“ಆರಾಮಾಗಿದ್ದೇನ್ರಿ ಸರ್. ನಿಮಗ ಅಭಿನಂದನೆಗಳು ಸರ್”
“ಥ್ಯಾಂಕ್ಸ್... ಭಾಳ ಸಂತೋಷ ಆತು”
“ಇದು ನಮಗೆ ಸಂದ ಜಯ ಸರ್”
“ಹೌದ... ಹೌದ್ರಿ... ಥ್ಯಾಂಕ್ಯೂ ಥ್ಯಾಂಕ್ಯೂ ... ಏಳನೇ ತಾರೀಕಕ ನಾ ಬೆಳಗಾಂವಕ ಬರಾಕತ್ತೇನಿ. ಸಾಧ್ಯ ಆದ್ರ ಬರ್ರಿ”
“ಬರತೇನ್ರಿ ಸರ್. ತಮ್ಮ ಪುಸ್ತಕದ ಅನುವಾದ ಮುಗಿದಿದೆ ಸರ್. ಡಿಸೆಂಬರ್ದೊಳಗ ಬಿಡುಗಡೆ ಆಗ್ತೇತಿ.”
“ಹೌದಾ ! ಭಾಳ ಖುಷಿ ಆತು ಥ್ಯಾಂಕ್ಯೂ ...”
“ಸರ್, ಮತ್ತೊಮ್ಮಿ ನಿಮಗ ಅಭಿನಂದನೆಗಳು”
“ಥ್ಯಾಂಕ್ಯೂ ಥ್ಯಾಂಕ್ಯೂ ...”
*****
ಇದು ಉತ್ತಮ ಕಾಂಬಳೆಯವರು ಅಖಿಲ ಭಾರತ ಮರಾಠಿ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಆಯ್ಕೆಯಾದ ಸಂದರ್ಭದಲ್ಲಿ ಅವರೊಂದಿಗೆ ನಾನು ಮಾತನಾಡಿದ ಪ್ರಸಂಗ. ಹೌದು ಉತ್ತಮ ಕಾಂಬಳೆಯವರು ತುಂಬ ಎತ್ತರದ ವ್ಯಕ್ತಿತ್ವ ಉಳ್ಳವರು. ತಕ್ಷಣವೇ ಆತ್ಮೀಯರಾಗಿ ಬಿಡುತ್ತಾರೆ. ಮರಾಠಿ ಸಾಹಿತ್ಯದಲ್ಲಿ ತುಂಬ ಹೆಸರು ಮಾಡಿರುವ ಅವರ ನಯ-ವಿನಯ, ಆತ್ಮೀಯತೆ, ವಿಚಾರಶೀಲತೆ, ತೀವ್ರವಾದ ವೈಚಾರಿಕತೆ ದಂಗು ಬಡಿಸುವಂಥದ್ದು.
ಸುಮಾರು ತಿಂಗಳಗಳ ಹಿಂದೆ ಉತ್ತಮ ಕಾಂಬಳೆಯವರ ‘ದೇವದಾಸಿ ಆಣೀ ನಗ್ನಪೂಜಾ’ ಎಂಬ ಸಂಶೋಧನಾತ್ಮಕ ಕೃತಿಯನ್ನು ನಾನು ಅನುವಾದ ಮಾಡತೊಡಗಿದ್ದೆ. ಆಗಲೂ ಅವರೊಂದಿಗೆ ಮಾತನಾಡಿದ್ದೆ. ನನ್ನ ಆಗ್ರಹದಿಂದ ತಮ್ಮ ಫೋಟೋವನ್ನೂ, ಬಯೋಡಾಟಾವನ್ನೂ ನನಗೆ ಕಳುಹಿಸಿ ಕೊಟ್ಟರಲ್ಲದೇ ಮುಂಬಾಯಿಯ ಪ್ರಕಾಶನದ ವತಿಯಿಂದ ಮತ್ತೊಂದು ಕೃತಿಯ ಪ್ರತಿಯನ್ನೂ ಚಿತ್ರಗಳನ್ನು ಒಳಗೊಂಡ ಸಿ.ಡಿ.ಯನ್ನೂ ಕಳುಹಿಸಿಕೊಟ್ಟರು. ಅವರ ಆತ್ಮೀಯತೆಗೆ, ಸಹಕಾರಕ್ಕೆ ಬರೆಯಬೇಕೆಂದರೂ ಪದಗಳು ದಕ್ಕುವುದಿಲ್ಲ !
ಮೂಲತಃ ಕರ್ನಾಟಕದವರೇ ಆದ ಉತ್ತಮ ಕಾಂಬಳೆಯವರು ಸ್ಪಷ್ಟವಾಗಿ ಕನ್ನಡ ಮಾತನಾಡಬಲ್ಲರು. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಶಿರಗುಪ್ಪಿ ಎಂಬ ಗ್ರಾಮ ಅವರ ಹುಟ್ಟೂರು. ತೀರ ಬಡತನದ ಕುಟುಂಬ ಶಾಲೆ ಕಲಿಯಬೇಕೆಂಬ ಅವರಿಗೆ ಆರ್ಥಿಕ ಅಡಚಣೆ ತುಂಬ ಇತ್ತು. ಕೆಲವು ದಿನ ಹಮಾಲಿ ಮಾಡಿದರು ; ಕೆಲವು ದಿನ ಗೋಡೆ ಕಟ್ಟುವ ಗೌಂಡಿಗಳ ಕೈ ಕೆಳಗೆ ಆಳಾಗಿ ದುಡಿದರು ; ದಿನಪತ್ರಿಕೆಗಳನ್ನು ಕೈಯಲ್ಲಿ ಹಿಡಿದುಕೊಂಡು ದೊಡ್ಡದಾಗಿ ಒದರುತ್ತ ಮಾರುವ ಹುಡುಗ ಆಗಿದ್ದರು ! ಸೇಲ್ಸ್ಮನ್ ಆಗಿದ್ದವರು ; ಕೆಲವೊಂದಿಷ್ಟು ದಿನ ಯಾವುದೋ ಡಾಕ್ಟರರಲ್ಲಿ ಕಂಪೌಂಡರ್ ಆಗಿ ಕೆಲಸ ಮಾಡಿದ್ದೂ ಇದೆ ! ಇಷ್ಟೆಲ್ಲ ಮಾಡುತ್ತಲೇ ಶಿಕ್ಷಣ ಪೂರೈಸಿದ ಉತ್ತಮ ಕಾಂಬಳೆಯವರ ಬದುಕು ಹೋರಾಟದ ಹಾದಿ. ಅವರು ರಾಜ್ಯಶಾಸ್ತ್ರದಲ್ಲಿ ಪದವಿ ಪಡೆದಾಗ ಅನುಭವಿಸಿದ ಆನಂದ ಹೇಳತೀರದಷ್ಟು ! ಯಾಕೆಂದರೆ ಅವರ ಮನೆತನದಲ್ಲಿಯೇ ಶಾಲೆ ಕಲಿತ ವೊದಲ ವ್ಯಕ್ತಿ ಅವರು !
ಬದುಕಿನ ಹಾದಿಯನ್ನು ಕಂಡುಕೊಳ್ಳಬೇಕಾದ ಸಂದರ್ಭದಲ್ಲಿ ಒಂದು ದಿನಪತ್ರಿಕೆಯ ಸಾಮಾನ್ಯ ವರದಿಗಾರರಾಗಿ ಕೆಲಸಕ್ಕೆ ಸೇರಿಕೊಂಡ ಉತ್ತಮ ಕಾಂಬಳೆಯವರು ಇಂದು ಮರಾಠಿಯ ಪ್ರಮುಖ ದಿನಪತ್ರಿಕೆ `ಸಕಾಳ’ ಸಮೂಹದ ಪ್ರಧಾನ ಸಂಪಾದಕರಾಗಿದ್ದಾರೆ ! ಹತ್ತು ಪೈಸೆ ಕಮಿಶನ್ ಸಿಗುತ್ತದೆ ಎಂದು ಪತ್ರಿಕೆಗಳ ಕಟ್ಟನ್ನು ಹಿಡಿದು ಒದರುತ್ತ ಪತ್ರಿಕೆ ಮಾರುತ್ತಿದ್ದ ಹುಡುಗನೊಬ್ಬ ಇಂದು ಪ್ರಮುಖ ಪತ್ರಿಕೆಯೊಂದ ಮುಖ್ಯಸ್ಥನಾಗುತ್ತಾನೆ ಎಂದರೆ ಅದಕ್ಕೆ ಆತನ ಪ್ರಯತ್ನ, ಪರಿಶ್ರಮ ಮತ್ತು ನಿರ್ದಿಷ್ಟ ಗುರಿಯನ್ನು ಸಾಧಿಸುವ ಛಲವೇ ಕಾರಣ. ಇದು ಉತ್ತಮ ಕಾಂಬಳೆಯವರ ಬದುಕಿನ ಪರಿ. ಅಷ್ಟೇ ಅಲ್ಲ ಸಾಹಿತ್ಯ ಕ್ಷೇತ್ರದಲ್ಲೂ ಅವರ ಕೃಷಿ ಬಹುದೊಡ್ಡದು. ಇದೀಗ  81ನೇ ಅಖಿಲ ಭಾರತ ಮರಾಠಿ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ ಎಂದರೆ ಅವರ ಕಾರ್ಯವ್ಯಾಪ್ತಿ ಕಣ್ಮುಂದೆ ಸುಳಿಯಬಲ್ಲದು.
ಇಲ್ಲಿಯವರೆಗೆ ಎರಡು ಕಾದಂಬರಿಗಳು, ಐದು ಕಥಾಸಂಕಲನಗಳು, ಐದು ಸಂಶೋಧನಾತ್ಮಕ ಕೃತಿಗಳು, ಎರಡು ಕಾವ್ಯ ಸಂಕಲನಗಳು, ಏಳು ಸಂಪಾದಿತ ಕೃತಿಗಳು, ತಮ್ಮ ಆತ್ಮಕತೆಯನ್ನೇ ಹೊಂದಿರುವ ಮೂರು ಕೃತಿಗಳು ಹೀಗೆ ಸುಮಾರು ಐವತ್ತಕ್ಕಿಂತಲೂ ಹೆಚ್ಚು ಕೃತಿಗಳನ್ನು ಉತ್ತಮ ಕಾಂಬಳೆಯವರು ರಚಿಸಿದ್ದಾರೆ ಎಂದರೆ ಬರವಣಿಗೆಯ ಅಗಾಧತೆ ಅರಿವಿಗೆ ನಿಲುಕುತ್ತದೆ.
ಪತ್ರಕರ್ತನಾಗಿ 23 ಮತ್ತು ಸಾಹಿತಿಯಾಗಿ 30 ಒಟ್ಟು ನಲವತ್ಮೂರು ಪ್ರಶಸ್ತಿಗಳು ಅವರನ್ನು ಅರಸಿ ಬಂದಿವೆ. ಸಧ್ಯ ಮಹಾರಾಷ್ಟ್ರದ ನಾಶಿಕದಲ್ಲಿ `ಚಾರ್ವಾಕಾಶಯ’ ಹೆಸರಿನ ಮನೆಯಲ್ಲಿ ವಾಸವಾಗಿರುವ ಉತ್ತಮ ಕಾಂಬಳೆಯವರು ಸವ್ಮೋಹಕ ವ್ಯಕ್ತಿತ್ವದವರಾಗಿದ್ದಾರೆ.

Saturday, July 21, 2012

ಜಾತಿಸೂತಕ ಆತಂಕಗಳು !


ಡಾ. ಸಿದ್ರಾಮ ಕಾರಣಿಕ
ಭಾರತೀಯ ಸಮಾಜದಲ್ಲಿ ಸನಾತನಾವಾದಿ ಬೇರುಗಳು ಸಡಿಲುಗೊಳ್ಳುವಂತೆ ಘರ್ಜಿಸಿದವರು ಡಾ. ಬಾಬಾಸಾಹೇಬ ಅಂಬೇಡ್ಕರ್ ಅವರು. ಅವರ ವೈಚಾರಿಕ ಸಿದ್ಧಾಂತಗಳು, , ವಸ್ತುನಿಷ್ಟ ವಿಮರ್ಶೆಗಳು, ವೈಜ್ಞಾನಿಕ ವ್ಯಾಖ್ಯಾನಗಳು ಭಾರತ ದೇಶದ ವೈದಿಕ ಸಂಪ್ರದಾಯವನ್ನು ಅಲುಗಾಡಿಸಿದ್ದು ನಿಜ. ಆದರೆ ವರ್ತಮಾನದಲ್ಲಿ ನಿಂತುಕೊಂಡು ಇಂದಿನ ವ್ಯವಸ್ಥೆಯನ್ನು ಅವಲೋಕಿಸಿದರೆ ಡಾ. ಬಾಬಾಸಾಹೇಬ ಅಂಬೇಡ್ಕರ್ ಅವರ ಆಶಯದ ಸಾರ್ಥಕತೆಗೆ ಅಡ್ಡಗಾಲಾಗಿ ನಿಂತ ದೊಡ್ಡ ಪಡೆಯೊಂದು ರೂಪ ಬದಲಾಯಿಸುತ್ತ ಮುಂದುವರಿಯುತ್ತಿರುವ ವಾಸ್ತವ ಕಣ್ಣಿಗೆ ರಾಚುತ್ತದೆ.
ಜಾತಿಯನ್ನು ಮೂಲವಾಗಿಟ್ಟುಕೊಂಡು ಸದಾ ಸಂಶಯ ಮತ್ತು ಅಪನಂಬಿಕೆಗಳ ಮೂಲಕ ದಲಿತರನ್ನು ಇಂದಿಗೂ ವ್ಯವಸ್ಥಿತವಾಗಿ ತುಳಿಯುವ ಹುನ್ನಾರಗಳು ನಿರಾಂತಕವಾಗಿ ನಿರಂತರವಾಗಿ ನಡೆಯುತ್ತಿರುವುದು ಈ ದೇಶದ ಸನಾತನಿ ಸಂಪ್ರದಾಯದ ಶೋಕಿಯಾಗುತ್ತಿದೆಯೇನೋ ಎನ್ನುವಷ್ಟರ ಮಟ್ಟಿಗೆ ಆತಂಕಕಾರಿಯಾಗಿದೆ. ಮನುಷ್ಯನನ್ನು, ಮನುಷ್ಯನನ್ನಾಗಿ ಪರಿಗಣಿಸದ ಧರ್ಮಗಳಿಗೆ ಜೋತು ಬಿದ್ದ ಮಂದಿಯು ಹೊಸ ಹೊಸ ಪರಿಕ್ರಮಗಳ ಮೂಲಕ ಜಾತಿ ವ್ಯವಸ್ಥೆಯನ್ನು ಚಾಲ್ತಿಯಲ್ಲಿ ಇಟ್ಟಿರುವುದು ವಾಸ್ತವದ ವರ್ತಮಾನ ಎಂಬುದರಲ್ಲಿ ಎರಡು ಮಾತಿಲ್ಲ. ಯಾವ ಬದಲಾವಣೆಗಳಿಗೂ ಆಸ್ಪದ ಇರಬಾರದು ಎಂಬ ಆಸಕ್ತಿಯನ್ನೇ ಇಟ್ಟುಕೊಂಡು ವರ್ತಿಸುವುದನ್ನು ಕಂಡುಂಡು ವಿವೇಚಿಸಿದಾಗ ವಿಷಾದ ತುಂಬಿಕೊಳ್ಳುತ್ತಲೇ ಆವೇಶದ ವಿಚಾರಗಳೂ ಮನದಲ್ಲಿ ಮೂಡುತ್ತವೆ.
ಪಾಶ್ಚಾತ್ಯರ ಪ್ರಭಾವ ಮತ್ತು ಸಂಪರ್ಕದಿಂದಾಗಿ ಭಾರತೀಯ ಸಮಾಜದಲ್ಲಿ ತುಂಬ ಕ್ರಾಂತಿಕಾರಿ ಎನಿಸುವಷ್ಟರಮಟ್ಟಿಗಿನ ಬದಲಾವಣೆಗಳೇನೋ ಆಗಿವೆ ನಿಜ. ಆದರೆ ಭಾರತೀಯ ಮನಸ್ಸುಗಳು ಮಾತ್ರ ಬದಲಾಗಿಲ್ಲ. ತೋರಿಕೆಯ ಹೂಟಗಳು ಹಲವು ಒಳಗೊಳಗೇ ಜಾತಿಯನ್ನು ಬಲವಾಗಿ ಹಿಡಿದುಕೊಂಡು ಹಠ ಹಿಡಿದಂತೆ ಕುಳಿತುಕೊಂಡಿರುವುದು ಸುಳ್ಳಲ್ಲ. ‘ಜಾತಿಯಿಂದ ಹಿಂದೂಗಳ ನೀತಿ ಶೋಚನೀಯ ಅವಸ್ಥೆಗೆ ಮುಟ್ಟಿದೆ. ಜಾತಿ ಸಾರ್ವಜನಿಕ ಭಾವನೆಯನ್ನು ನಾಶಗೊಳಿಸಿದೆ ; ಹೃದಯ ವೈಶಾಲ್ಯತೆಯನ್ನು ಹಾಳು ಮಾಡಿದೆ ; ಸಾರ್ವಜನಿಕ ಅಭಿಪ್ರಾಯಗಳಿಗೆ ಅವಕಾಶವಿಲ್ಲದಂತೆ  ಮಾಡಿದೆ. ಹಿಂದುವಿನ ಸಮಾಜ  ಹಾಗೂ ಹೊಣೆಗಾರಿಕೆ ಅವರ ಜಾತಿಗೆ ಸೀಮಿತವಾದವು. ಅವನ ನಿಷ್ಠೆ ಜಾತಿಗೆ ಪರಿಮಿತವಾಗಿದೆ’ (ಡಾ. ಬಾಬಾಸಾಹೇಬ ಅಂಬೇಡ್ಕರ್ ಅವರ ಬರಹಗಳು ಮತ್ತು ಭಾಷಣಗಳು : ಸಂಪುಟ-5 : ಪು-) ಎನ್ನುವ ಡಾ. ಬಾಬಾಸಾಹೇಬ ಅಂಬೇಡ್ಕರ್ ಅವರ ಮಾತುಗಳು ಇಂದಿಗೂ ಪ್ರಸ್ತುತತೆಯನ್ನು ಉಳಿಸಿಕೊಂಡಿವೆ.
ಡಾ. ಬಾಬಾಸಾಹೇಬ ಅಂಬೇಡ್ಕರ್ ಅವರ ವಿಚಾರಗಳು ಇಂದಿಗೂ ಯಾಕೆ ಮತ್ತೇ ಮತ್ತೇ ಪ್ರಸ್ತುತವಾಗುತ್ತವೆ ಎಂದರೆ ಪರಿಸ್ಥಿತಿಗಳು ಹಾಗಿವೆ. ಜಾತಿಯೆಂಬುದು ಒಂದು ಸೂತಕ ಎಂದು ಭಾವಿಸಿರುವ ಬಹಳಷ್ಟು ಮಂದಿ, ಆ ಜಾತಿಯೇ ಬಹಳಷ್ಟು ಅವಘಡಗಳನ್ನು ಸೃಷ್ಟಿಸಿದೆ ಎಂಬುದನ್ನು ಅರಿತುಕೊಳ್ಳುವ ಅವಶ್ಯಕತೆಯಿದೆ.
ಶಿಕ್ಷಣದ ಹಕ್ಕು ದೊರೆತಾಗ ದಲಿತರು ಒಂದಿಷ್ಟು ಅತ್ತ ವಾಲಿಕೊಂಡು ಒಂದಿಷ್ಟು ಕಲಿತು, ಉದ್ಯೋಗ ಮಾಡುತ್ತ ಒಳ್ಳೆಯ ಬದುಕನ್ನು ತಮ್ಮದಾಗಿಸಿಕೊಳ್ಳಲು ದಾಪುಗಾಲು ಇಡುತ್ತಿರುವುದು ಮತ್ತು ಸಮಾಜದಲ್ಲಿ ಒಳ್ಳೆಯ ಸ್ಥಾನಮಾನ ಸಂಪಾದಿಸುತ್ತಿರುವುದನ್ನು ಗಮನಿಸಿದಾಗ ಭಾರತೀಯ ಸಮಾಜವು ನಿಜವಾಗಿಯೂ ಬದಲಾಗಿಯೇ ಬಿಟ್ಟಿತು ಎಂದು ಭ್ರಮಿಸಿದವರೂ ಸಂಭ್ರಮಿಸಿದವರೂ ಇದ್ದಾರೆ. ಆದರೆ ವಾಸ್ತವ ಹಾಗಿಲ್ಲ ಎಂದರೆ ಅಚ್ಚರಿಯಾದೀತು ! ದಲಿತನೊಬ್ಬ ಶಿಕ್ಷಣ ಪಡೆದುಕೊಂಡು ಉನ್ನತ ಹಂತ ತಲುಪಿದರೂ ವೈದಿಕಶಾಹಿ ಹೇರಿದ ಜಾತಿ ಸೂತಕ ಆತನನ್ನು ಬಿಡಲಾರದು. ಈ ದೇಶದಲ್ಲಿ ಮೇಲ್ಜಾತಿಯವರೆನಿಸಿಕೊಂಡವರು ಆತನೊಡನೆ ಗೌರವಪೂರ್ವಕವಾಗಿ ಸಂಪರ್ಕ ಸಾಧಿಸುತ್ತಾರೆ ಎಂಬುದು ನಿಜವಾಗಿದ್ದರೂ ಅವರ ಮನದ ಮೂಲೆಯಲ್ಲಿ ಜಾತಿ ಮನೆ ಮಾಡಿ ಕುಳಿತ್ತಿರುತ್ತದೆ. ಹೊರಗೆ ಏನೆಲ್ಲ ಮಾಡಿದರೂ ದಲಿತನೊಬ್ಬ ತಮ್ಮ ಮನೆಗೆ ಬಂದಾಗ ಮೇಲ್ಜಾತಿಯವರೆನಿಸಿಕೊಂಡವರ ಚಟುವಟಿಕೆಗಳು ಆಚರಣೆಗಳ ಹೆಸರಿನಲ್ಲಿ ‘ದೂರ’ ಇಡುವ ವರ್ತನೆಗಳಲ್ಲಿ ವ್ಯಕ್ತವಾಗುತ್ತವೆ. ಮನಸ್ಸುಗಳು ಇಂದಿಗೂ ಬದಲಾಗಿಲ್ಲ ಎನ್ನುವುದು ಈ ಕಾರಣಕ್ಕಾಗಿಯೇ.
ಇದು ಶಿಕ್ಷಣ ಪಡೆದ, ಉದ್ಯೋಗದಲ್ಲಿರುವ, ಆರ್ಥಿಕವಾಗಿ ಸಬಲರಾಗಿರುವ, ಒಳ್ಳೆಯ ಬದುಕನ್ನು ತಮ್ಮದಾಗಿಸಿಕೊಂಡಿರುವ ದಲಿತರನ್ನು ನಡೆಯಿಸಿಕೊಳ್ಳುವ ಪರಿಯಾದರೆ ಅಕ್ಷರದ ಅರಿವಿಲ್ಲದ, ಆರ್ಥಿಕವಾಗಿ ತೀರ ಕೆಳಮಟ್ಟದಲ್ಲಿರುವ ದಲಿತರು ಈ ದೇಶದಲ್ಲಿ ಬಹುಸಂಖ್ಯಾತರಾಗಿದ್ದು, ಇವರ ಬದುಕು ಇಂದಿಗೂ ಬದಲಾವಣೆಯಾಗಿಲ್ಲ. ಮೇಲ್ಜಾತಿಯವರೆನಿಸಿಕೊಂಡವರ ಶೋಷಣೆಗೆ ಇವರು ನಿರಂತರವಾಗಿ ಬಲಿಯಾಗುತ್ತಲೇ ಇದ್ದಾರೆ. ಇನ್ನೂ ಕೆಲವು ಕಡೆ ಅಸ್ಪೃಶ್ಯತೆ ತುಂಬ ಘೋರವಾಗಿಯೇ ಆಚರಣೆಯಲ್ಲಿದೆ. ಕುಡಿಯುವ ನೀರು, ತಿನ್ನುವ ಅನ್ನ, ಪೂಜಿಸುವ ದೈವಗಳ ಸಂದರ್ಭದಲ್ಲಿ ಇನ್ನೂ ಮೇಲು-ಕೀಳುತನ, ಮಡಿ-ಮೈಲಿಗೆಗಳು ಕಾಣಿಸಿಕೊಳ್ಳುತ್ತಲೇ ಇವೆ. ದಿನವೂ ದಿನಪತ್ರಿಕೆ ಓದುವವರಿಗೆ, ಟ.ವಿ. ನೋಡುಗರಿಗೆ ಈ ಸುದ್ದಿಗಳ ಮಾಹಿತಿ ಇದ್ದೇ ಇದೆ ; ಇದಕ್ಕೆ ಬೇರೊಂದು ಉದಾಹರಣೆ ನೀಡುವ ಅವಶ್ಯಕತೆಯಿಲ್ಲ. ದಲಿತರನ್ನು ಬಹಿಷ್ಕಾರ ಹಾಕುವುದು, ಸಾರ್ವಜನಿಕವಾಗಿ ಅವಮಾನಿಸುವುದು, ಗುಂಡಾಗಿರಿ ಮಾಡಿ ಹಲ್ಲೆ ಮಾಡುವುದು, ನಿರ್ದಾಕ್ಷಣ್ಯವಾಗಿ ದಲಿತರ ಮಾರಣಹೋಮ ನಡೆಸುವುದು, ದಲಿತ ಮಹಿಳೆಯರನ್ನು ಬೆತ್ತಲೆ ಮಾಡುವುದು ಇಲ್ಲವೆ ಅತ್ಯಾಚಾರ ಮಾಡುವುದು ಇನ್ನೂ ನಿರಂತರವಾಗಿವೆ ಎಂದರೆ ಪ್ರಜಾಪ್ರಭುತ್ವದ ಈ ದೇಶದ ಪ್ರಜೆಗಳಿಗೆ ನಾಚಿಕೆಯಾಗಬೇಕು !
ಇವೆಲ್ಲವುಗಳ ನಡುವೆ ಮಾನಸಿಕ ಗುಲಾಮಗಿರಿಯನ್ನು ಇಂದಿಗೂ ಪಾಲಿಸಿಕೊಂಡು ಬಂದಿರುವ ದಲಿತರೂ ಇದ್ದಾರೆ. ಅವರು ಕಲಿತವರಿರಬಹುದು, ಸ್ಥಿತಿವಂತರಿರಬಹುದು ಅಥವಾ ಏನೇನೂ ಇಲ್ಲದವರೂ ಆಗಿರಬಹುದು. ಈ ಮಾನಸಿಕ ಗುಲಾಮಗಿರಿಗೆ ಈಡಾಗಿರುವ ದಲಿತರು ಸಾಮಾಜಿಕ ಬದಲಾವಣೆಯನ್ನು ಬಯಸುವ ಸಂದರ್ಭದಲ್ಲಿ ತುಂಬ ಅಪಾಯಕಾರಿ. ತಮ್ಮದೇ ತಪ್ಪು ಎಂಬ ತಲಾಂತರದ ಕರ್ಮ ಸಿದ್ಧಾಂತಕ್ಕೆ ಬಲಿಯಾಗಿರುವ ಇಂಥ ದಲಿತರನ್ನು ಎಚ್ಚರಗೊಳಿಸಬೇಕಾದ ಅನಿವಾರ್ಯತೆಯೂ ನಮ್ಮ ಮುಂದಿದೆ. ಯಾಕೆಂದರೆ ಮೇಲ್ಜಾತಿಯವರೆನಿಸಿಕೊಂಡವರೊಂದಿಗೆ ಗುರುತಿಸಿಕೊಳ್ಳುವ ಬಲಿತ ದಲಿತರೂ ಭೂಮಿತತ್ವವನ್ನು ಮರೆಯುತ್ತಾರೆ ಮತ್ತು ತಾವು ದಲಿತರೆಂದು ಹೇಳಿಕೊಳ್ಳಲು ಸಹ ಸಂಕೋಚಪಡುತ್ತಾರೆ. ಕನಿಷ್ಟ ದಲಿತರನ್ನು ಆದಷ್ಟು ದೂರ ಇಡುವ ಪ್ರಯತ್ನವನ್ನೂ ಬಲಿತ ದಲಿತರು ಮಾಡುತ್ತಾರೆ. ಬಲಿತ ದಲಿತರ ಈ ಗುಪ್ತ ಗುಲಾಮಗಿರಿಯಿಂದಲೇ ಡಾ. ಬಾಬಾಸಾಹೇಬ ಅಂಬೇಡ್ಕರ್ ಅವರ ತತ್ವ-ಸಿದ್ಧಾಂತಗಳನ್ನು ದೂರೀಕರಿಸುವ ಪ್ರಯತ್ನಗಳೂ ಸಾಕಷ್ಟು ನಡೆದಿವೆ ಮತ್ತು ನಡೆಯುತ್ತಿವೆ.
ಹೀಗಾಗಿಯೇ ಈ ದೇಶದಲ್ಲಿ ದಲಿತರು ಇನ್ನೂ ಶೋಷಣೆಯ ಅನುಭೋಗಿಗಳೇ ಆಗಿದ್ದಾರೆ. ತಿದ್ದಿಕೊಳ್ಳದಿದ್ದರೆ ಆ ಶೋಷಣೆ ಮುಂದುವರಿಯುತ್ತಲೇ ಇರುತ್ತದೆ. ಇದೇ ಕಾರಣಕ್ಕೆ ಮೇಲ್ಜಾತಿಯವರೆನಿಸಿಕೊಂಡವರು ದಲಿತರಲ್ಲಿ ಬಹಿಷ್ಕಾರದ ಭಯವನ್ನು ಬಿತ್ತುತ್ತಾರೆ ಮಾತ್ರವಲ್ಲ ಭಂಡತನಕ್ಕಿಳಿದು ಮೇಲ್ಮೆಯನ್ನು ಸಾಧಿಸಿಕೊಳ್ಳುತ್ತಾರೆ.
ಇದೆಲ್ಲವುಗಳ ಜೊತೆಗೆ ಇತ್ತೀಚೆಗೆ ಡಾ. ಬಾಬಾಸಾಹೇಬ ಅಂಬೇಡ್ಕರ್ ಅವರ ಪರಿಶ್ರಮ ಮತ್ತು ಪರಾಕ್ರಮವನ್ನೂ ಸಾಧನೆ-ಸಿದ್ಧಿಯನ್ನೂ ಅಲ್ಲಗೆಳೆಯುವ ಹುನ್ನಾರಗಳು ವ್ಯವಸ್ಥಿತವಾಗಿ ನಡೆಯುತ್ತಿರುವುದು ಆಘಾತಕಾರಿ ಬೆಳವಣಿಗೆಯೇ ಆಗಿದೆ. ಇದಕ್ಕೆ ಕೇವಲ ದಲಿತೇತರರು ಮಾತ್ರವಲ್ಲ ಬಲಿತ ದಲಿತರೂ ಕಾರಣಕರ್ತರು ಎನ್ನುವುದು ಇನ್ನಷ್ಟು ಆತಂಕಕಾರಿಯಾದ ಸಂಗತಿಯೇ ಆಗಿದೆ. ಯಾರೋ ಒಬ್ಬರು ಡಾ. ಬಾಬಾಸಾಹೇಬ ಅಂಬೇಡ್ಕರ್ ಅವರು ಸಂವಿಧಾನ ರಚನೆ ಮಾಡಿದವರಲ್ಲಿ ಒಬ್ಬರೇ ಹೊರತು ಇಡೀ ಸಂವಿಧಾನ ರಚನೆಯನ್ನು ಅವರು ಮಾಡಿಲ್ಲ ಎಂಬುದನ್ನು ಮಾಧ್ಯಮಗಳಲ್ಲಿ ಹರಿಯಬಿಟ್ಟು ತಮ್ಮ ಉರಿಯನ್ನು ತಣ್ಣಗಾಗಿಸಿಕೊಳ್ಳುವಲ್ಲಿ ತೃಪ್ತಿಪಟ್ಟುಕೊಂಡರೆ, ಇನ್ನೂ ಕೆಲವರು ಡಾ. ಬಾಬಾಸಾಹೇಬ ಅಂಬೇಡ್ಕರ್ ಅವರು ರಾಷ್ಟ್ರವಿರೋಧಿ ಎನಿಸುವ ಕಾರ್ಯ ಮಾಡಿದ್ದಾರೆ ಎಂಬ ಪುಕಾರು ಎಬ್ಬಿಸುತ್ತಿದ್ದಾರೆ. ಮತ್ತೂ ಕೆಲವರು ಡಾ. ಬಾಬಾಸಾಹೇಬ ಅಂಬೇಡ್ಕರ್ ಅವರ ಹೋರಾಟ 1930 ಆಸುಪಾಸಿನಲ್ಲಿ ಆರಂಭವಾಯಿತು ಎಂದು ಘೋಷಿಸಿ ಬೇರೆಯವರ ತಲೆ ಹಿಡಿಯುವ ಕೆಲಸ ಮಾಡುತ್ತಿದ್ದಾರೆ !
ಇವೆಲ್ಲವುಗಳಿಗಿಂತಲೂ ಹೇಯವಾದ ನಡುವಳಿಕೆ ಎಂದರೆ ಡಾ. ಬಾಬಾಸಾಹೇಬ ಅಂಬೇಡ್ಕರ್ ಅವರನ್ನು ಇಂದಿಗೂ ತಮ್ಮ ಶುದ್ಧ ವೈರಿ ಎಂದು ಭಾವಿಸುವ ಗುಂಪೊಂದು ಡಾ. ಬಾಬಾಸಾಹೇಬರ ಅಂಬೇಡ್ಕರ್ ಅವರ ವಿಚಾರಗಳನ್ನು ತಿರುಚುತ್ತ, ಅವರ ಮೂರ್ತಿಗಳನ್ನು, ಸ್ಮಾರಕಗಳನ್ನು ಭಗ್ನಗೊಳಿಸುವಲ್ಲಿ ‘ಆತ್ಮ’ ತೃಪ್ತಿಯನ್ನು ಅನುಭವಿಸುತ್ತ ವಿಜ್ರಂಭಿಸುವ ಸ್ವರತಿಗೆ ಮುಂದಾಗುತ್ತಿರುವುದು ! ಇನ್ನೂ ಕೆಲವರು ಡಾ. ಬಾಬಾಸಾಹೇಬ ಅಂಬೇಡ್ಕರ್ ಅವರು ಕೇವಲ ‘ಹೊಲೆಯ’ ಎಂಬುದನ್ನಷ್ಟೇ ಪರಿಗಣಿಸಿ, ಅವರ ಇಡೀ ಸಾಧನೆಯನ್ನು ಒಂದು ಜಾತಿಗೆ ಸೀಮಿತಗೊಳಿಸಿ ‘ಸಂಘಟನೆ’ ಮಾಡಿಕೊಂಡು ಹುಯಿಲೆಬ್ಬಿಸುತ್ತ ದಲಿತ ಶಕ್ತಿಯನ್ನು ಹಾಳು ಮಾಡುವಲ್ಲಿ ಸಾಫಲ್ಯ ಸಾಧಿಸುವ ಹಠಮಾರಿತನದಲ್ಲಿ ಅಂಡಲೆಯುತ್ತಿದ್ದಾರೆ !
ಇಂಥವುಗಳೆಲ್ಲ ಯಾಕೆ ನಡೆಯುತ್ತಿವೆ ಎಂದರೆ ಅದು ನಮ್ಮಲ್ಲಿ ಇರುವ ಅರಿವಿನ ಅಭಾವ ಎನ್ನಬೇಕಾಗುತ್ತದೆ. ಅರಿವಿನ ಅಭಾವದಿಂದ ಉದ್ಭವಿಸಿದ ಅಸಹನೆಯೇ ಇಷ್ಟಕ್ಕೆಲ್ಲ ಕಾರಣ ಎನ್ನದೆ ಬೇರೆ ಮಾರ್ಗವಿಲ್ಲ. ಜೊತೆಗೆ ಡಾ. ಬಾಬಾಸಾಹೇಬ ಅಂಬೇಡ್ಕರ್ ಅವರ ಸಂಘರ್ಷ-ಸಮನ್ವಯ ಸಿದ್ಧಾಂತ, ಸಾಂಘಿಕ ಬದುಕಿನ ಸದಾಶಯಗಳ ಫಲಾನುಭವಿಗಳಾಗಿರುವ ಬಹಳಷ್ಟು ಮಂದಿ ಬಲಿತ ದಲಿತರು ಉಂಡ ತಾಟಿನಲ್ಲೇ ಹೇಸಿಗೆ ಮಾಡಿಕೊಂಡು ಉಳ್ಳಾಡುತ್ತಿರುವುದು ಕೂಡ ಇಂತಹ ಅವಘಡಗಳಿಗೆ ಕೆಂಪು ಹಾಸಿಗೆ ಹಾಸಿದಂತಾಗಿದೆ !
ಡಾ. ಬಾಬಾಸಾಹೇಬ ಅಂಬೇಡ್ಕರ್ ಅವರು ಕೇವಲ ದಲಿತರ ಪರವಾಗಿ ಮಾತ್ರ ಹೋರಾಟ ಮಾಡಲಿಲ್ಲ. ದಲಿತ ಅಸ್ಮಿತೆಯ ಹೋರಾಟದೊಂದಿಗೆ ಸ್ತ್ರೀ ಸ್ವಾತಂತ್ರ್ಯ ಮತ್ತು ಸಮಾನತೆ ಪರವಾಗಿಯೂ ಬಹುದೊಡ್ಡ ಚಳುವಳಿಯನ್ನು ಹುಟ್ಟು ಹಾಕಿದವರು. ಈ ದೇಶದ ಪ್ರತಿಯೊಬ್ಬ ಹಿಂದುಳಿದ, ಅಲ್ಪಸಂಖ್ಯಾತರ ಪರವಾಗಿಯೂ ಹೋರಾಟ ಮಾಡಿ ಯಶಸ್ಸು ಗಳಿಸಿದವರು. ಜೊತೆಗೆ ಮಹಾತ್ಮ ಫುಲೆಯವರು ಆರಂಭಿಸಿದ ರೈತರ ಪರವಾದ ಉಗ್ರ ಹೋರಾಟವನ್ನೂ ಮಾಡಿ ನ್ಯಾಯ ದೊರಕಿಸಿ ಕೊಡುವ ಕೈಂಕರ್ಯ ತೊಟ್ಟವರು. ಇವೆಲ್ಲವುಗಳನ್ನೂ ಮರೆ ಮಾಚಿ ಸುಳ್ಳು ಸುದ್ದಿಯನ್ನು ಹರಡುತ್ತಿರುವ ಕೆಲವು ಮನೋವಿಕಲ್ಪಕ್ಕೆ ಒಳಗಾದ ಜನರ ಚಟುವಟಿಕೆಗಳು ತೀರ ಅಕ್ಷಮ್ಯ. ಡಾ. ಬಾಬಾಸಾಹೇಬ ಅಂಬೇಡ್ಕರ್ ಅವರು ಮಾಡಿದ ಸಾಧನೆ-ಸಿದ್ಧಿಗಳ ಅರಿವನ್ನು ಅಥವಾ ಕನಿಷ್ಟ ಪರಿಚಯವನ್ನಾದರೂ ಕಿಲುಬುಗಟ್ಟಿರುವ ಇಡೀ ಭಾರತೀಯ ಸಮಾಜಕ್ಕೆ ತಿಳಿಯಪಡಿಸುವ ಜವಾಬ್ದಾರಿಯನ್ನು ಪ್ರಜ್ಞಾವಂತರಾದವರೆಲ್ಲರೂ ಹೊತ್ತುಕೊಳ್ಳಬೇಕಾದ ಅನಿವಾರ್ಯತೆ ನಮ್ಮ ಮುಂದಿದೆ. ಅರ್ಥವಾಯಿತು ಅಂದುಕೊಂಡಿದ್ದೇನೆ !

Sunday, June 17, 2012

ದಲಿತ ರಾಜಕಾರಣಕ್ಕೆ ಯಾರು ಮಾದರಿ? - ದಿನೇಶ ಅಮೀನಮಟ್ಟು

`ನಾ ವು ರಾಜಕೀಯ ಕ್ಷೇತ್ರದಲ್ಲಿ ಸಮಾನತೆ ಪಡೆಯಲಿದ್ದೇವೆ. ಆದರೆ ಸಾಮಾಜಿಕ ಮತ್ತು ಆರ್ಥಿಕ ಕ್ಷೇತ್ರದ ಅಸಮಾನತೆ ಎಂದಿನಂತೆ ಮುಂದುವರಿಯಲಿದೆ. ಈ ವಿರೋಧಾಭಾಸವನ್ನು ನಿವಾರಿಸಿಕೊಳ್ಳದೆ ಹೋದರೆ ಅಸಮಾನತೆಯಿಂದ ನೊಂದವರು ಮುಂದೊಂದು ದಿನ ರಾಜಕೀಯ ಪ್ರಜಾಪ್ರಭುತ್ವವನ್ನು ಕಿತ್ತೊಗೆಯಲಿದ್ದಾರೆ` ಎಂದು 1950ರ ಜನವರಿ 26ರಂದು ಭಾರತ ಸಂವಿಧಾನವನ್ನು ಒಪ್ಪಿಕೊಂಡ ದಿನವೇ ಬಿ.ಆರ್.ಅಂಬೇಡ್ಕರ್ ಹೇಳಿದ್ದರು.

ಸಮಾನತೆಯನ್ನು ಸಾರುವ ಪ್ರಜಾಪ್ರಭುತ್ವ ಮತ್ತು ಅಸಮಾನತೆಯೇ ಸಾರವಾಗಿರುವ ಸಾಮಾಜಿಕ ವ್ಯವಸ್ಥೆಯ ನಡುವಿನ ವೈರುಧ್ಯದ ಅರಿವು ಅವರಿಗಿದ್ದ ಕಾರಣದಿಂದಲೇ ಕಟ್ಟಾ ಪ್ರಜಾಪ್ರಭುತ್ವ ಪ್ರೇಮಿಯಾಗಿದ್ದ ಅಂಬೇಡ್ಕರ್ ಕೂಡಾ ಇಂತಹ ಕಟುಮಾತುಗಳನ್ನು ಆಡಿದ್ದರು. ಅರವತ್ತೆರಡು ವರ್ಷಗಳ ನಂತರವಾದರೂ ಪರಿಸ್ಥಿತಿ ಬದಲಾಗಿದೆಯೇ?
ಸಂಸದೀಯ ಪ್ರಜಾಪ್ರಭುತ್ವದಲ್ಲಿ ಸಂಖ್ಯಾಬಲವೇ ಎಲ್ಲವನ್ನೂ ನಿರ್ಣಯಿಸುತ್ತದೆ ಎಂದು ಹೇಳುವವರಿದ್ದಾರೆ.

ರಾಜಕೀಯ ನಾಯಕರ ಯಶಸ್ಸಿನಲ್ಲಿ ಜಾತಿ ಬಹುದೊಡ್ಡ ಪಾತ್ರವನ್ನು ವಹಿಸುತ್ತದೆ ಎಂದು ವಿಶ್ಲೇಷಿಸುವವರಿದ್ದಾರೆ. ಹೀಗಿದ್ದರೂ ದೇಶದ ಜನಸಂಖ್ಯೆಯಲ್ಲಿ ಶೇಕಡಾ 16.2ರಷ್ಟಿರುವ ಪರಿಶಿಷ್ಟ ಜಾತಿಯವರಲ್ಲಿ ಯಾರೊಬ್ಬರೂ ಪ್ರಧಾನಮಂತ್ರಿ ಆಗಲಿಲ್ಲ. ಪ್ರಧಾನಿಯಾಗುವ ಅರ್ಹತೆಯನ್ನು ಸಾಧನೆಯ ಬಲದಿಂದಲೇ ಹೊಂದಿದ್ದ ಬಾಬು ಜಗಜೀವನರಾಂ ಅವರಿಗೆ ಪ್ರಧಾನಿ ಪಟ್ಟದ ಸಮೀಪವೂ ಸುಳಿಯಲೂ ಸಾಧ್ಯವಾಗಲಿಲ್ಲ.


ಆಂಧ್ರಪ್ರದೇಶ (ಸಂಜೀವಯ್ಯ), ರಾಜಸ್ತಾನ (ಜಗನ್ನಾಥ ಪಹಾಡಿಯಾ), ಉತ್ತರ ಪ್ರದೇಶ (ಮಾಯಾವತಿ), ಬಿಹಾರ (ರಾಮಸುಂದರ ದಾಸ್) ಮತ್ತು ಮಹಾರಾಷ್ಟ್ರವನ್ನು (ಸುಶೀಲ್‌ಕುಮಾರ್ ಶಿಂಧೆ) ಹೊರತುಪಡಿಸಿದರೆ ಬೇರೆ ಯಾವ ರಾಜ್ಯಗಳಲ್ಲಿಯೂ ದಲಿತರು ಮುಖ್ಯಮಂತ್ರಿಯಾಗಲಿಲ್ಲ. ಹಿಮಾಚಲಪ್ರದೇಶ, ಪಶ್ಚಿಮ ಬಂಗಾಳ, ಹರಿಯಾಣ ಮತ್ತು ತಮಿಳುನಾಡು ರಾಜ್ಯಗಳಲ್ಲಿ ಪರಿಶಿಷ್ಟ ಜಾತಿಯ ಜನಸಂಖ್ಯೆ ರಾಷ್ಟ್ರೀಯ ಸರಾಸರಿಗಿಂತ ಹೆಚ್ಚಿದ್ದರೂ ಆ ರಾಜ್ಯಗಳಲ್ಲಿ ಯಾರೂ ಮುಖ್ಯಮಂತ್ರಿ ಆಗಲಿಲ್ಲ.

ಮಹಾರಾಷ್ಟ್ರವನ್ನು ಹೊರತುಪಡಿಸಿದರೆ ದಲಿತ ಚಳವಳಿ ಹೆಚ್ಚು ಸಕ್ರಿಯವಾಗಿರುವ ಕರ್ನಾಟಕದಲ್ಲಿಯೂ ದಲಿತರೂ ಮುಖ್ಯಮಂತ್ರಿಯಾಗಲಿಲ್ಲ. ಪ್ರಧಾನಿ ಇಲ್ಲವೇ ಮುಖ್ಯಮಂತ್ರಿಗಳ ಸ್ಥಾನ ಒತ್ತಟ್ಟಿಗಿರಲಿ, ಉತ್ತರಪ್ರದೇಶವೊಂದನ್ನು ಹೊರತುಪಡಿಸಿ ಬೇರೆ ಯಾವ ರಾಜ್ಯಗಳ ರಾಜಕೀಯದಲ್ಲಿಯೂ ದಲಿತರು ನಿರ್ಣಾಯಕ ಸ್ಥಾನದಲ್ಲಿ ಇಲ್ಲ.

ಇವೆಲ್ಲವನ್ನು ಮೊದಲೇ ತಿಳಿದುಕೊಂಡಿದ್ದ ಪ್ರವಾದಿಯಂತೆ ಅಂಬೇಡ್ಕರ್ ತಮ್ಮ ಜೀವಿತಾವಧಿಯಲ್ಲಿ ಮಾತನಾಡಿದ್ದರು.

1952ರಲ್ಲಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ ಹೊಸ ಪಕ್ಷವೊಂದನ್ನು ಕಟ್ಟಿ ಚುನಾವಣೆ ಎದುರಿಸಿದ ಅವರು ಜಲಂಧರ್ ನಡೆದ ಪ್ರಚಾರಸಭೆಯಲ್ಲಿ ದಲಿತ ರಾಜಕೀಯದ ಭವಿಷ್ಯದ ಹೊಳಹುಗಳನ್ನು ನೀಡಿದ್ದರು. ಕಾಂಗ್ರೆಸ್ ಪಕ್ಷದಿಂದ ಲೋಕಸಭೆಗೆ ಆಯ್ಕೆಯಾಗಿದ್ದ ದಲಿತರನ್ನು ಅವರು `ಕಾಂಗ್ರೆಸ್‌ನ ಗುಲಾಮರು` ಎಂದು ಚುಚ್ಚಿದ್ದರು. `ಬಹಳಷ್ಟು ಅಸ್ಪೃಶ್ಯರು ಕಾಂಗ್ರೆಸ್ ಟಿಕೆಟ್‌ನಿಂದ ಗೆದ್ದು ಲೋಕಸಭೆ ಪ್ರವೇಶಿಸಿದ್ದಾರೆ.


ಅಂತಹ 30 ಸದಸ್ಯರಿದ್ದಾರೆ. ಇವರು ಎಂದಾದರೂ ಸದನದಲ್ಲಿ ಯಾವುದಾದರೂ ಪ್ರಶ್ನೆಗಳನ್ನು ಕೇಳಿದ್ದಾರೆಯೇ? ಯಾವುದಾದರೂ ಗೊತ್ತುವಳಿ ಇಲ್ಲವೇ ಮಸೂದೆಯನ್ನು ಮಂಡಿಸಿದ್ದಾರೆಯೇ? ತಮಗೆ ಅನಿಸಿದ್ದನ್ನು ಮುಲಾಜಿಲ್ಲದೆ ಹೇಳುವ ಧೈರ್ಯ ತೋರಿದ್ದಾರೆಯೇ? ಕಾಂಗ್ರೆಸ್ ಪಕ್ಷಕ್ಕೆ ಅರ್ಹ ದಲಿತರು ಬೇಕಾಗಿಲ್ಲ, ಗುಲಾಮರು ಬೇಕಾಗಿದೆ. ಇಂತಹ ಪಕ್ಷದ ಗುಲಾಮರು ದಲಿತರ ಪ್ರತಿನಿಧಿಗಳು ಹೇಗಾಗುತ್ತಾರೆ?` ಎಂದು ಅವರು ಪ್ರಶ್ನಿಸಿದ್ದರು.


ಸ್ವಾತಂತ್ರ್ಯಾನಂತರದ ಭಾರತದಲ್ಲಿ ರಾಜಕೀಯವಾಗಿ ದಲಿತರ ಸ್ಥಿತಿ ಏನಾಗಲಿದೆ ಎಂಬ ಸ್ಪಷ್ಟ ಅರಿವು ಅಂಬೇಡ್ಕರ್ ಅವರಿಗಿತ್ತು. ಅದಕ್ಕಾಗಿಯೇ ಅವರು `ದಲಿತ ಪ್ರತಿನಿಧಿಗಳನ್ನು ದಲಿತ ಮತದಾರರೇ ಆಯ್ಕೆ ಮಾಡುವಂತಹ ಪ್ರತ್ಯೇಕ ಮತದಾನದ ಹಕ್ಕನ್ನು ನೀಡುವಂತೆ ದುಂಡುಮೇಜಿನ ಪರಿಷತ್‌ನಲ್ಲಿ ವಾದಿಸಿದ್ದರು. ದಲಿತ ಮತದಾರರು ಉಳಿದೆಲ್ಲರ ಜತೆಯಲ್ಲಿ ಸೇರಿ ಸಾಮಾನ್ಯ ಅಭ್ಯರ್ಥಿಗೆ ಮತದಾನ ಮಾಡುವ ಜತೆಯಲ್ಲಿ, ಕೇವಲ ತಮ್ಮ ಮತದಿಂದಲೇ ದಲಿತ ಅಭ್ಯರ್ಥಿಯನ್ನು ಚುನಾಯಿಸುವ ಅಧಿಕಾರವೂ ಇರಬೇಕು.


ಇಲ್ಲದೆ ಹೋದರೆ ದಲಿತ ಜನಪ್ರತಿನಿಧಿಗಳು ರಾಜಕೀಯ ಪಕ್ಷಗಳ ಗುಲಾಮರಾಗುತ್ತಾರೆ` ಎಂದು ಅವರು ಪ್ರತಿಪಾದಿಸಿದ್ದರು. ಕೊನೆಗೂ ಬ್ರಿಟಿಷ್ ಪ್ರಧಾನಿ ರಾಮ್ಸೆ ಮ್ಯಾಕ್‌ಡೊನಾಲ್ಡ್ ಅಂಬೇಡ್ಕರ್ ಅಭಿಪ್ರಾಯವನ್ನು ಒಪ್ಪಿಕೊಂಡರೂ ಗಾಂಧೀಜಿಯವರ ವಿರೋಧದಿಂದಾಗಿ ಅದು ಕಾರ್ಯರೂಪಕ್ಕೆ ಬರಲಿಲ್ಲ.

ದಲಿತರಿಗೆ ಪ್ರತ್ಯೇಕ ಮತದಾನದ ಹಕ್ಕು ನೀಡುವುದನ್ನು ವಿರೋಧಿಸಿ ಗಾಂಧೀಜಿ ಪ್ರಾರಂಭಿಸಿದ್ದ ಆಮರಣಾಂತ ಉಪವಾಸಕ್ಕೆ ಮಣಿದ ಅಂಬೇಡ್ಕರ್ ಒಲ್ಲದ ಮನಸ್ಸಿನಿಂದಲೇ ತಮ್ಮ ಬೇಡಿಕೆಯನ್ನು ಕೈಬಿಟ್ಟು `ಪೂನಾ ಒಪ್ಪಂದ`ಕ್ಕೆ ಸಹಿ ಹಾಕಿದ್ದರು. ಇದರ ಪರಿಣಾಮ ತಿಳಿದುಕೊಳ್ಳಲು ಬಹಳ ಕಾಲವೇನೂ ಬೇಕಾಗಲಿಲ್ಲ. ಸ್ವತಂತ್ರಭಾರತದಲ್ಲಿ ಸ್ವಂತ ಪಕ್ಷ ಕಟ್ಟಿ ಸ್ಪರ್ಧಿಸಿದ್ದ ಎರಡೂ ಚುನಾವಣೆಗಳಲ್ಲಿ ಅಂಬೇಡ್ಕರ್ ಸೋಲಬೇಕಾಯಿತು.


ಈಗಲಾದರೂ ಪರಿಸ್ಥಿತಿ ಬದಲಾಗಿದೆಯೇ? ಬೇರೆಬೇರೆ ರಾಜ್ಯಗಳಲ್ಲಿ ದಲಿತ ಸಮುದಾಯಕ್ಕೆ ಸೇರಿರುವ ಐದು ಮಂದಿ ಮುಖ್ಯಮಂತ್ರಿಗಳಾದರೂ ಅವರಲ್ಲಿ ನಾಲ್ಕು ಮಂದಿ ಕಾಂಗ್ರೆಸ್ ಪಕ್ಷದ ಶಿಸ್ತಿನ ಸಿಪಾಯಿಗಳು. ಅವರೆಲ್ಲ ಮುಖ್ಯಮಂತ್ರಿಯಾಗಿದ್ದು ಸ್ವಂತ ಬಲದಿಂದ ಅಲ್ಲ, ಕಾಂಗ್ರೆಸ್ ಬೆಂಬಲದಿಂದ. ಇದಕ್ಕೆ ಹೊರತಾದವರೆಂದರೆ ಉತ್ತರ ಪ್ರದೇಶದ ಮುಖ್ಯಮಂತ್ರಿಯಾಗಿದ್ದ ಮಾಯಾವತಿಯವರೊಬ್ಬರೇ.


ಈ ಕಾರಣದಿಂದಲೇ ದಲಿತ ರಾಜಕೀಯದ ಯಶಸ್ವಿ ಮಾದರಿ -ಉತ್ತರ ಪ್ರದೇಶದ ಬಹುಜನ ಸಮಾಜ ಪಕ್ಷದ್ದು ಮಾತ್ರ. ಕಳೆದ ಚುನಾವಣೆಯಲ್ಲಿ ಬಿಎಸ್‌ಪಿ ಪರಾಭವಗೊಂಡಿದ್ದರೂ ತಳ್ಳಿಹಾಕಿ ಬಿಡುವಂತಹ ಪಕ್ಷ ಅದಲ್ಲ ಎನ್ನುವುದು ಅದರ ಬೆಳವಣಿಗೆಯನ್ನು ಗಮನಿಸುತ್ತ ಬಂದವರಿಗೆಲ್ಲರಿಗೂ ಗೊತ್ತು. ಅದರ ಈ ಶಕ್ತಿಯನ್ನು ತಿಳಿದುಕೊಳ್ಳಬೇಕಾದರೆ  ಆ ಪಕ್ಷದ ಸ್ಥಾಪಕರಾದ ಕಾನ್ಸಿರಾಮ್ ಅವರನ್ನು ಮೊದಲು ಅರ್ಥಮಾಡಿಕೊಳ್ಳಬೇಕು.


ಅಂಬೇಡ್ಕರ್ ಅವರ ನಂತರದ ಬಹುಮುಖ್ಯ ದಲಿತ ರಾಜಕೀಯ ನಾಯಕ ಕಾನ್ಸಿರಾಮ್ ಎನ್ನುವುದರಲ್ಲಿ ಅನುಮಾನ ಇಲ್ಲ. ವಿದ್ಯೆಯಲ್ಲಿಯಾಗಲಿ, ವಿದ್ವತ್‌ನಲ್ಲಿಯಾಗಲಿ  ಅಂಬೇಡ್ಕರ್ ಅವರಿಗೆ ಕಾನ್ಸಿರಾಮ್ ಸಮ ಅಲ್ಲ. ಆದರೆ ರಾಜಕೀಯವಾಗಿ ಅಂಬೇಡ್ಕರ್ ಅವರಿಗಿಂತಲೂ ಕಾನ್ಸಿರಾಮ್ ಯಶಸ್ವಿ ರಾಜಕಾರಣಿ.


1918ರಿಂದ 1930ರ ವರೆಗಿನ ಅಂಬೇಡ್ಕರ್ ಅವರ ಜೀವನದ ಮೊದಲ ಘಟ್ಟದಲ್ಲಿ ಬಹಿಷ್ಕೃತ ಹಿತಕರಣೆ ಸಭಾ ಸ್ಥಾಪನೆ, ಮಹಾಡ್ ಸತ್ಯಾಗ್ರಹ, ಪೂನಾದ ಪಾರ್ವತಿ ದೇವಸ್ಥಾನ ಮತ್ತು ನಾಸಿಕ ಕಾಳಾರಾಮ ದೇವಸ್ಥಾನ ಪ್ರವೇಶ ಹೋರಾಟಗಳಲ್ಲಿ ತೊಡಗಿಸಿಕೊಳ್ಳುವ ಮೂಲಕ ಸಾಮಾಜಿಕ ಚಳವಳಿಯನ್ನು ಮುನ್ನಡೆಸಿದ್ದ ಅಂಬೇಡ್ಕರ್, ನಂತರ 1930ರಿಂದ 1951ರ ವರೆಗಿನ ಅವಧಿಯಲ್ಲಿ ತಮ್ಮನ್ನು ರಾಜಕೀಯವಾಗಿ ತೊಡಗಿಸಿಕೊಂಡಿದ್ದರು.


ಈ ಅವಧಿಯಲ್ಲಿ ಸ್ವತಂತ್ರ ಕಾರ್ಮಿಕ ಪಕ್ಷ, ಪರಿಶಿಷ್ಟ ಜಾತಿ ಒಕ್ಕೂಟ ಮತ್ತು ಭಾರತೀಯ ರಿಪಬ್ಲಿಕನ್ ಪಕ್ಷ ಎಂಬ ಮೂರು ರಾಜಕೀಯ ಪಕ್ಷಗಳನ್ನೂ ಅವರು ಕಟ್ಟಿದ್ದರು. ಆದರೆ ಅಂಬೇಡ್ಕರ್ ಅವರಿಗೆ ರಾಜಕೀಯ ಯಶಸ್ಸು ಸಿಗಲೇ ಇಲ್ಲ. ಈ ವೈಫಲ್ಯಕ್ಕೆ ಅಂಬೇಡ್ಕರ್ ಅವರ ಕಡು ಸೈದ್ಧಾಂತಿಕ ನಿಷ್ಠೆ ಮತ್ತು ದಲಿತ ಕೇಂದ್ರಿತ ರಾಜಕಾರಣದ ಮಿತಿಯೂ ಕಾರಣವಾಗಿರಬಹುದು. ಇದನ್ನು ಇನ್ನಷ್ಟು ಸ್ಪಷ್ಟಪಡಿಸಿಕೊಳ್ಳಬೇಕಾದರೆ ಕಾನ್ಸಿರಾಮ್ ರಾಜಕಾರಣವನ್ನು ಇನ್ನಷ್ಟು ಒಳಹೊಕ್ಕು ನೋಡಬೇಕಾಗುತ್ತದೆ.


ಶುದ್ಧ ಸೈದ್ಧಾಂತಿಕ ರಾಜಕಾರಣದ ಬಗ್ಗೆ ಕಾನ್ಸಿರಾಮ್ ಅವರಿಗೆ ನಂಬಿಕೆ ಇರಲಿಲ್ಲ ಎಂದು ಹೇಳಲಾಗದು. ಆದರೆ ಅದರ ಬಗ್ಗೆ ಅವರು ಸಾರ್ವಜನಿಕವಾಗಿ ಮಾತನಾಡುತ್ತಿದ್ದದ್ದು ಕಡಿಮೆ. ಅವರದ್ದು ವಾಸ್ತವದ ನೆಲೆಗಟ್ಟಿನ ರಾಜಕಾರಣ. ಈ ಮೂಲಕ ಅವರು ದಲಿತರು ಮತ್ತು ಬಹುಜನರ ನಡುವಿನ ಸಂಬಂಧದ ವ್ಯಾಕರಣವನ್ನೇ ಬದಲಿಸಿದ್ದರು. ಜೀವನದ ಪ್ರಾರಂಭದ ದಿನಗಳಲ್ಲಿ ಅವರು ಮಹಾರಾಷ್ಟ್ರದಲ್ಲಿ ಒಂದಷ್ಟು ಕಾಲ ಭಾರತೀಯ ರಿಪಬ್ಲಿಕನ್ ಪಕ್ಷದ (ಆರ್‌ಪಿಐ) ಜತೆಯಿದ್ದರೂ ಆ ಪಕ್ಷದ ದಲಿತ ಕೇಂದ್ರಿತ ರಾಜಕಾರಣವನ್ನು ಇಷ್ಟಪಡುತ್ತಿರಲಿಲ್ಲ.


ಹಿಂದುಳಿದ ಜಾತಿ ಮತ್ತು ಅಲ್ಪಸಂಖ್ಯಾತ ಸಮುದಾಯ `ಬಹುಜನ ಸಮಾಜ`ದ ಭಾಗವೆಂದೇ ಅವರು ಹೇಳುತ್ತಿದ್ದರು. ಇದರಿಂದಾಗಿ ಅವರು ಪ್ರಾರಂಭದಲ್ಲಿ ಕಟ್ಟಿದ `ಅಖಿಲ ಭಾರತ ಹಿಂದುಳಿದ (ಎಸ್‌ಸಿ, ಎಸ್‌ಟಿ, ಒಬಿಸಿ) ಮತ್ತು ಅಲ್ಪಸಂಖ್ಯಾತ ಸಮುದಾಯದ ನೌಕರರ ಒಕ್ಕೂಟ` (ಬಿಎಎಂಸಿಇಎಫ್) ವಾಗಲಿ, ಅದರ ನಂತರ ಸ್ಥಾಪಿಸಿದ್ದ `ದಲಿತ್ ಶೋಷಿತ್ ಸಮಾಜ್ ಸಂಘರ್ಷ ಸಮಿತಿ, ಇಲ್ಲವೇ ಡಿಎಸ್-4 ಆಗಲಿ ಕೊನೆಗೆ ಸ್ಥಾಪಿಸಿದ ಬಹುಜನ ಸಮಾಜ ಪಕ್ಷವಾಗಲಿ (ಬಿಎಸ್‌ಪಿ) ಕೇವಲ ದಲಿತ ಕೇಂದ್ರಿತ ಸಂಘಟನೆಗಳಾಗಿರಲಿಲ್ಲ.

ಮೀಸಲಾತಿಯ ಕಾರಣದಿಂದಾಗಿ ಎಷ್ಟೋ ಕಡೆ ಹಿಂದುಳಿದ ಜಾತಿಗಳಿಗಿಂತ ದಲಿತರು ಉತ್ತಮ ಸ್ಥಿತಿಯಲ್ಲಿದ್ದಾರೆ ಎಂದು ಅವರು ತಮ್ಮ ಭಾಷಣಗಳಲ್ಲಿ ಹೇಳುತ್ತಿದ್ದರು.  ಬಿಎಸ್‌ಪಿಯ ಬ್ಯಾನರ್, ಪೋಸ್ಟರ್ ಇಲ್ಲವೇ ಲೆಟರ್‌ಹೆಡ್‌ಗಳಲ್ಲಿ ಕಡ್ಡಾಯವಾಗಿ ಅಂಬೇಡ್ಕರ್ ಅವರ ಜತೆಯಲ್ಲಿ ಜ್ಯೋತಿಬಾ ಪುಲೆ, ಸಾಹು ಮಹಾರಾಜ್, ಪೆರಿಯಾರ್ ಮತ್ತು ನಾರಾಯಣ ಗುರುಗಳ ಭಾವಚಿತ್ರ ಅಚ್ಚುಹಾಕಿಸುವುದನ್ನು ಅವರು ಕಡ್ಡಾಯಗೊಳಿಸಿದ್ದರು.


1995ರಲ್ಲಿ ಮುಖ್ಯಮಂತ್ರಿಯಾದ ಮಾಯಾವತಿ ತಮ್ಮ ಬಜೆಟ್‌ನ ಶೇಕಡಾ 27ರಷ್ಟು ಹಣವನ್ನು ಹಿಂದುಳಿದ ಜಾತಿಗಳಿಗೆ ಮೀಸಲಿಟ್ಟಿದ್ದರು. ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ ನೀಡುತ್ತಿದ್ದ ಎಲ್ಲ ಸೌಲಭ್ಯಗಳನ್ನು ಮುಸ್ಲಿಮ್ ವಿದ್ಯಾರ್ಥಿಗಳಿಗೂ ವಿಸ್ತರಿಸಿದ್ದರು. ಸರ್ಕಾರಿ ನೌಕರಿಗಳಲ್ಲಿ ಮುಸ್ಲಿಮರಲ್ಲಿರುವ ಹಿಂದುಳಿದ ಸಮುದಾಯಗಳಿಗೂ ಮೀಸಲಾತಿ ನೀಡಬೇಕೆಂಬ ಉತ್ತರಪ್ರದೇಶ ಹಿಂದುಳಿದ ಜಾತಿಗಳ ಒಕ್ಕೂಟದ ವರದಿಯನ್ನು ಮಾಯಾವತಿ ಜಾರಿಗೊಳಿಸಿದ್ದರು.


ಹಿಂದುಳಿದ ಜಾತಿಗಳ ಶೇಕಡಾ 27ರ ಮೀಸಲಾತಿಯಲ್ಲಿ ಶೇಕಡಾ ಎಂಟರಷ್ಟನ್ನು ಮುಸ್ಲಿಮರಲ್ಲಿನ ಹಿಂದುಳಿದ ಜಾತಿಗಳಿಗೆ ನೀಡಿದ್ದರು. 1996ರ ವಿಧಾನಸಭಾ ಚುನಾವಣೆಯಲ್ಲಿನ ಬಿಎಸ್‌ಪಿ ಅಭ್ಯರ್ಥಿಗಳಲ್ಲಿ ಶೇಕಡಾ 29ರಷ್ಟು ಮಾತ್ರ ಪರಿಶಿಷ್ಟ ಜಾತಿಗೆ ಸೇರಿದವರಿದ್ದರು. ಉಳಿದಂತೆ ಶೇಕಡಾ 34ರಷ್ಟು ಹಿಂದುಳಿದ ಜಾತಿಗಳು, ಶೇಕಡಾ 18ರಷ್ಟು ಮುಸ್ಲಿಮರಿದ್ದರು.


ಆಂತರಿಕ ಪ್ರಜಾಪ್ರಭುತ್ವವೇ ಇಲ್ಲದ ಬಿಎಸ್‌ಪಿಯಲ್ಲಿ ಮಾಯಾವತಿಯವರೇ ಎಲ್ಲವೂ ಆಗಿದ್ದರೂ ಪಕ್ಷದ ಪದಾಧಿಕಾರಗಳನ್ನು ಜಾತಿಜನಸಂಖ್ಯೆಗೆ ಅನುಗುಣವಾಗಿ ನೀಡುತ್ತಾ ಬಂದಿದ್ದಾರೆ. ಹಿಂದುಳಿದ ಜಾತಿಗಳಲ್ಲಿ ಮುಖ್ಯವಾಗಿ ಅತೀ ಹಿಂದುಳಿದಿರುವ ನಿಷಾದ್, ಸೈನಿ, ಶಾಖ್ಯ, ಬಗೇಲ್, ಕಶ್ಯಪ್ ಮತ್ತು ರಾಜ್‌ಭರ್ ಸಮುದಾಯಕ್ಕೆ ಬಿಎಸ್‌ಪಿಯಲ್ಲಿ ಈಗಲೂ ಹೆಚ್ಚಿನ ಪ್ರಾತಿನಿಧ್ಯ ಇದೆ.


ವಿಧಾನಸಭೆ ನಮ್ಮ ಸುತ್ತಲಿನ ಸಮಾಜದ ರಚನೆಯನ್ನು ಪ್ರತಿಬಿಂಬಿಸುವಂತಿರಬೇಕು ಎನ್ನುವುದು ಕಾನ್ಸಿರಾಮ್ ಅವರ ಚಿಂತನೆಯಾಗಿತ್ತು. ಈ ಕಾರಣದಿಂದಾಗಿಯೇ ಮೇಲ್ಜಾತಿಯೂ ಸೇರಿದಂತೆ ಎಲ್ಲರಿಗೂ ಅವರ ಜಾತಿ ಜನಸಂಖ್ಯೆಯ ಆಧಾರದಲ್ಲಿ ಪ್ರಾತಿನಿಧ್ಯ ನೀಡಬೇಕೆಂದು ಅವರು ಹೇಳುತ್ತಿದ್ದದ್ದು ಮಾತ್ರವಲ್ಲ, 2002ರ ವಿಧಾನಸಭಾ ಚುನಾವಣಾ ಸಂದರ್ಭದಲ್ಲಿ ಹೇಳಿದಂತೆ ಮಾಡಿಯೂ ತೋರಿಸಿದ್ದರು. ನಂತರದ ದಿನಗಳಲ್ಲಿ ಮಾಯಾವತಿಯವರೂ ಆ ಸೂತ್ರವನ್ನು ಪಾಲಿಸಿಕೊಂಡು ಬಂದಿದ್ದಾರೆ.


ಮಾಯಾವತಿಯವರೂ ಸೇರಿದಂತೆ ಸ್ಪರ್ಧಿಸಿದ್ದ ಎಲ್ಲ ಅಭ್ಯರ್ಥಿಗಳು ಠೇವಣಿ ಕಳೆದುಕೊಂಡಿದ್ದ ಮೊದಲ ಚುನಾವಣೆಯಿಂದ ಸ್ವಂತ ಬಲದಿಂದ ಸರ್ಕಾರ ರಚಿಸುವಷ್ಟು ಬಹುಮತ ಗಳಿಸಿದ್ದ 2007ರ ಚುನಾವಣೆಯ ವರೆಗೆ ಬಿಎಸ್‌ಪಿ ಸಾಗಿ ಬಂದ ಹಾದಿಯನ್ನು ನೋಡುತ್ತಾ ಬಂದರೆ ಉದ್ದಕ್ಕೂ ಈ ರೀತಿ ತನ್ನ ನೆಲೆಯನ್ನು ವಿಸ್ತರಿಸುತ್ತಾ ಬಂದಿರುವುದನ್ನು ಕಾಣಬಹುದು.


ಬಿಜೆಪಿ ಜತೆಗಿನ ಮೈತ್ರಿ, `ಬ್ರಾಹ್ಮಣ್ ಜೋಡೋ`-ಎಲ್ಲವೂ ಈ ಕಾರ್ಯತಂತ್ರದ ಭಾಗವೇ ಆಗಿತ್ತು. ಇದರಿಂದ ಬಿಎಸ್‌ಪಿ ಗಳಿಸಿದ್ದು ಹೆಚ್ಚು ಕಳೆದುಕೊಂಡದ್ದು ಬಹಳ ಕಡಿಮೆ. ಈ ಬಾರಿಯ ಚುನಾವಣೆಯಲ್ಲಿಯೂ ಬಿಎಸ್‌ಪಿ ಸೋಲಿಗೆ ಗೆಲುವಿನ ಮದದಿಂದ ನಡೆಸಿದ ವೈಯಕ್ತಿಕ ಹುಚ್ಚಾಟಗಳೇ ಕಾರಣ ಹೊರತು, ಅದರ ರಾಜಕೀಯ ಕಾರ್ಯತಂತ್ರದ ವೈಫಲ್ಯ ಅಲ್ಲ.


ಇದರಿಂದಾಗಿಯೇ ರಾಜಕೀಯ ಪಕ್ಷಗಳ ಗುಲಾಮಗಿರಿಯಿಂದ ಹೊರತಾದ ಸ್ವತಂತ್ರ ಮತ್ತು ಸ್ವಾಭಿಮಾನಿ ದಲಿತ ರಾಜಕಾರಣಕ್ಕೆ ಅಂಬೇಡ್ಕರ್ ಪ್ರೇರಣೆ ಒದಗಿಸಬಹುದು, ಆದರೆ ಮಾದರಿಯಾಗಿ ಕಾನ್ಸಿರಾಮ್ ಅವರನ್ನೇ ಸ್ವೀಕರಿಸಬೇಕಾಗುತ್ತದೆ.
ಕೃಪೆ : ಪ್ರಜಾವಾಣಿ 

Saturday, June 16, 2012

ಇಂಗ್ಲಿಷ್ ಸಂವಹನಕ್ಕಾಗಿ ಮಾತ್ರವಲ್ಲ, ಜಗತ್ತಿನ ಜ್ಞಾನ, ಸಾಹಿತ್ಯ ಗ್ರಹಿಸುವ ಕಿಟಕಿ !


                               - ಡಾ. ನಟರಾಜ್ ಹುಳಿಯಾರ್

ಎರಡು ವರ್ಷಗಳ ಕೆಳಗೆ ಗುಲ್ಬರ್ಗ ಸೆಂಟ್ರಲ್ ಯೂನಿವರ್ಸಿಟಿಯ ಇಂಗ್ಲಿಷ್ ವಿಭಾಗದ ಮುಖ್ಯಸ್ಥನಾಗಿ ಕೆಲಸ ಮಾಡುತ್ತಿದ್ದಾಗ ಒಂದು ಅಂಶವನ್ನು ಗಮನಿಸಿದ್ದೆ: ಇಂಗ್ಲಿಷ್ ಎಂ.ಎ. ಓದುತ್ತಿದ್ದ ಒಟ್ಟು ಅರವತ್ತು ವಿದ್ಯಾರ್ಥಿ, ವಿದ್ಯಾರ್ಥಿನಿಯರಲ್ಲಿ ಕೇವಲ ಇಬ್ಬರು ಮಾತ್ರ ತಪ್ಪಿಲ್ಲದೆ ಇಂಗ್ಲಿಷ್ ಮಾತಾಡಬಲ್ಲವರಾಗಿದ್ದರು.

ಇನ್ನುಳಿದ ವಿದ್ಯಾರ್ಥಿಗಳಿಗೆ ಈ ಸಾಮರ್ಥ್ಯ ಇಲ್ಲದಿರುವುದಕ್ಕೆ ಅವರ ಸಾಮಾಜಿಕ ಹಿನ್ನೆಲೆಯ ಜೊತೆಗೇ ಅವರೆಲ್ಲ ಇಂಗ್ಲಿಷ್ ಕಲಿಕೆಯನ್ನು ತಡವಾಗಿ ಆರಂಭಿಸಿದ್ದು ಕೂಡ ಕಾರಣವಾಗಿತ್ತು. ಈ ಸ್ಥಿತಿಯನ್ನು ನೋಡಿದಾಗ, ಇಂಗ್ಲಿಷ್ ಭಾಷೆಯನ್ನು ತಡವಾಗಿ ಕಲಿಯುತ್ತಿರುವವರ ಕಷ್ಟಗಳು ನನಗೆ ಮನದಟ್ಟಾಯಿತು. ಬಾಲ್ಯದಲ್ಲಿ ಎಲ್ಲ ಮಕ್ಕಳಿಗೂ ಸಾಧ್ಯವಿರುವ ಭಾಷಾಕಲಿಕೆಯ ಸಾಮರ್ಥ್ಯವನ್ನು ಸರಿಯಾಗಿ ಬಳಸಿಕೊಳ್ಳದಿರುವುದೇ ಮಕ್ಕಳ ಕಷ್ಟಕ್ಕೆ ಕಾರಣವಾಗಿತ್ತು.


ಈಗಾಗಲೇ ಸಿದ್ಧವಾಗಿರುವ ಹಾಗೆ ಬಾಲ್ಯದಲ್ಲಿ ಸಹಜವಾಗಿ ಇರುವ `ಲಿಂಗ್ವಿಸ್ಟಿಕ್ ಪ್ಲಾಸಿಸಿಟಿ` ಅಥವಾ ಭಾಷಾಕಲಿಕೆಯ ಸಾಮರ್ಥ್ಯದಿಂದಾಗಿ ಮಕ್ಕಳು ನಾಲ್ಕು ಭಾಷೆಗಳನ್ನು ಕಲಿಯಬಲ್ಲರು. ಆದರೆ ಆ ಹಂತ ದಾಟಿದ ನಂತರ ಇಂಗ್ಲಿಷ್ ಕಲಿಕೆಯನ್ನು ಆರಂಭಿಸಿದ ಮಕ್ಕಳು ಅನೇಕ ಬಗೆಯ ಹಿನ್ನಡೆ, ಕೀಳರಿಮೆಗಳನ್ನು ಅನುಭವಿಸುತ್ತಿರುವುದನ್ನು ದಿನನಿತ್ಯ ನೋಡುತ್ತಿದ್ದೇವೆ.


ಆದರೆ ನಮ್ಮ ಸರ್ಕಾರಗಳು ಖಾಸಗಿ ಶಾಲೆಗಳಲ್ಲಿ ಇಂಗ್ಲಿಷ್ ಮಾಧ್ಯಮ ಆರಂಭವಾದ ನಂತರವೂ ಎಲ್ಲ ಶಾಲೆಗಳಲ್ಲೂ ಕನ್ನಡ ಮಾಧ್ಯಮವನ್ನು ಜಾರಿಗೆ ತರುತ್ತೇವೆಂದು ಹುಸಿ ಭರವಸೆ ಕೊಡುತ್ತಾ ಕಳೆದ ಇಪ್ಪತ್ತು ವರ್ಷಗಳಿಂದ ಕಾಲ ತಳ್ಳುತ್ತಲೇ ಬಂದವು. ಸರ್ಕಾರಿ ಶಾಲೆಗಳ ಮಕ್ಕಳು ಹಿಂದುಳಿಯುತ್ತಲೇ ಬಂದವು. ಆರು ವರ್ಷಗಳ ಕೆಳಗೆ ವಿವಾದ ಕೋರ್ಟಿನಲ್ಲಿದೆ ಎಂಬ ನೆಪವೊಡ್ಡಿ ಕೆಲವರು ಸರ್ಕಾರಿ ಶಾಲೆಗಳಲ್ಲಿ ಇಂಗ್ಲಿಷನ್ನು ಒಂದು ಭಾಷೆಯಾಗಿ ಕಲಿಸಲೂ ಅಡ್ಡಗಾಲು ಹಾಕಲು ಯತ್ನಿಸಿದ್ದರು.

ಇಷ್ಟಾಗಿಯೂ ಕಳೆದ ನಾಲ್ಕು ವರ್ಷಗಳಲ್ಲಿ ಇಂಗ್ಲಿಷನ್ನು ಒಂದು ಭಾಷೆಯಾಗಿ ಸುಮಾರಾಗಿಯಾದರೂ ಕಲಿಯಲೆತ್ನಿಸಿರುವ ಮಕ್ಕಳಿಗೆ ಆರನೇ ತರಗತಿಯಿಂದ ಇಂಗ್ಲಿಷ್ ಮಾಧ್ಯಮವನ್ನು ಜಾರಿಗೆ ತರಲು ಸರ್ಕಾರ ನಿರ್ಧರಿಸಿದೆ. ಈ ನಿರ್ಧಾರ ಬದಲಾದ ಸಾಮಾಜಿಕ ಸನ್ನಿವೇಶದಲ್ಲಿ ಅನಿವಾರ್ಯವಾಗಿದೆ.


ಒಂದು ಅಂದಾಜಿನ ಪ್ರಕಾರ, ರಾಜ್ಯದಲ್ಲಿರುವ ಸುಮಾರು ಇಪ್ಪತ್ತೈದು ಸಾವಿರ ಪ್ರಾಥಮಿಕ ಸರ್ಕಾರಿ ಶಾಲೆಗಳಲ್ಲಿ ಕನ್ನಡ ಹಾಗೂ ಉರ್ದು ಮಾಧ್ಯಮದ ಶಾಲೆಗಳಿವೆ. ಹತ್ತು ಸಾವಿರಕ್ಕೂ ಹೆಚ್ಚು ಅಧಿಕೃತ, ಅನಧಿಕೃತ ಇಂಗ್ಲಿಷ್ ಮಾಧ್ಯಮ ಶಾಲೆಗಳಿವೆ.


ಅವುಗಳಲ್ಲೂ ಹಲಬಗೆಯ ಶ್ರೇಣಿಗಳಿವೆ. ಆದರೆ ಕರ್ನಾಟಕದ ಅರ್ಧ ಭಾಗಕ್ಕಿಂತ ಹೆಚ್ಚು ಮಕ್ಕಳು ಇಂಗ್ಲಿಷ್ ಮಾಧ್ಯಮದಲ್ಲಿ ಓದುತ್ತಿದ್ದಾರೆ. ಈ ಎರಡು ಬಗೆಯ ಶಾಲೆಗಳ ನಡುವಣ ಸ್ಪರ್ಧೆಗಳಲ್ಲಿ ಸರ್ಕಾರಿ ಶಾಲೆಗಳ ಮಕ್ಕಳು ಬಡತನ, ವಾತಾವರಣ ಹಾಗೂ ಇಂಗ್ಲಿಷ್ ಭಾಷೆಯ ಕೊರತೆಯ ಕಾರಣದಿಂದಾಗಿಯೂ ಹಿಂದೆ ಬಿದ್ದ್ದ್ದಿದಾರೆ.


ಮೊನ್ನೆ ತಾನೇ ಫಲಿತಾಂಶ ಪ್ರಕಟವಾಗಿರುವ ಪಿಯುಸಿ ನಂತರದ ಸಿ.ಇ.ಟಿ. ಪರೀಕ್ಷೆಯಲ್ಲಿ ಇಂಗ್ಲಿಷ್ ಮಾಧ್ಯಮದಲ್ಲಿ ಓದಿದ ತೊಂಬತ್ತರಷ್ಟು ಭಾಗದ ಮಕ್ಕಳು ರ‌್ಯಾಂಕುಗಳನ್ನು ಪಡೆದಿದ್ದಾರೆ. ಹೀಗಾಗಿ ಸರ್ಕಾರಿ ಶಾಲೆಗಳ ಮಕ್ಕಳಿಗೆ ಕೂಡ ಇಂಗ್ಲಿಷ್ ಮಾಧ್ಯಮದ ಅನುಕೂಲವನ್ನು ಒದಗಿಸುವುದು ಅನಿವಾರ್ಯ.


ಕಳೆದ ಮೂರು ವರ್ಷಗಳಲ್ಲಿ ಸರ್ಕಾರಿ ಶಾಲೆಗಳ ಶೇ.18 ಭಾಗ ಶಿಕ್ಷಕ, ಶಿಕ್ಷಕಿಯರು ಇಂಗ್ಲಿಷ್ ಮಾಧ್ಯಮದಲ್ಲಿ ಬೋಧಿಸಲು ತರಬೇತಿಗೊಂಡಿದ್ದಾರೆ; ಜೊತೆಗೆ, ಈಗಾಗಲೇ ವಿಜ್ಞಾನ ವಿಷಯಗಳನ್ನು ಇಂಗ್ಲಿಷಿನಲ್ಲಿ ಕಲಿಸುತ್ತಿರುವವರು ಹಾಗೂ ಇಂಗ್ಲಿಷ್ ಮಾಧ್ಯಮದಲ್ಲಿ ಡಿ.ಎಡ್ ಪದವಿ ಪಡೆದಿರುವವರು ಕೂಡ ಈ ಕಾರ್ಯಕ್ಕೆ ಸಿದ್ಧವಾಗಿದ್ದಾರೆ. ಆದ್ದರಿಂದ ಇಂಗ್ಲಿಷ್ ಮಾಧ್ಯಮ ಕೇವಲ ಕೆಲವು ಆಯ್ದ ಶಾಲೆಗಳಲ್ಲಿ ಮಾತ್ರ ಅಲ್ಲ; ಕರ್ನಾಟಕದಾದ್ಯಂತ ಮಾಧ್ಯಮಿಕ ಹಂತದಲ್ಲಿ ಐಚ್ಛಿಕವಾಗಿಯಾದರೂ ಆರಂಭವಾಗಬೇಕು.


ಆದರೆ, ಸರ್ಕಾರಿ ಶಾಲೆಗಳಲ್ಲಿ ಈಗಾಗಲೇ ಖಾಸಗಿ ಶಾಲೆಗಳಲ್ಲಿರುವಂತೆ ಅವೈಜ್ಞಾನಿಕವಾಗಿ, ಮಾತೃಭಾಷೆಯನ್ನು ಸಂಪೂರ್ಣವಾಗಿ ಹೊರಗಿಟ್ಟು ವಿಷಯಗಳನ್ನು ಕಲಿಸಬಾರದು. ಬದಲಿಗೆ ಮಾತೃಭಾಷೆ ಹಾಗೂ ಇಂಗ್ಲಿಷ್ ಎರಡೂ ಮಾಧ್ಯಮಗಳನ್ನು ಬೆರೆಸಿ ಕಲಿಸುವ ಕ್ರಮವನ್ನು ಆರಂಭಿಸಬೇಕು.


ಇದು ಯಾಂತ್ರಿಕ  ಅನುವಾದ ವಿಧಾನ ಅಲ್ಲ. ಬದಲಿಗೆ ಮಾತೃಭಾಷೆಯಲ್ಲಿ ವಿಷಯವನ್ನು ಗ್ರಹಿಸುವ ಹಾಗೂ ಅದನ್ನು ಎರಡು ಭಾಷೆಗಳಲ್ಲಿ ಮಂಡಿಸುವ ಸಾಮರ್ಥ್ಯವನ್ನು ಕಲಿಸುವ ವಿಧಾನ. ಅದಕ್ಕಾಗಿ ಒಂದು ಪಠ್ಯಪುಸ್ತಕದ ಎಡ ಪುಟದಲ್ಲಿ ಕನ್ನಡ ಅಥವಾ ಇನ್ನಿತರ ಮಾತೃಭಾಷೆಯಲ್ಲಿಯೂ ಹಾಗೂ ಬಲಪುಟದಲ್ಲಿ ಇಂಗ್ಲಿಷ್ ಭಾಷೆಯಲ್ಲಿಯೂ ವಿಷಯಗಳನ್ನು ಮುದ್ರಿಸಬೇಕು. ಪುಸ್ತಕ ದೊಡ್ಡದಾಗುತ್ತದೆ ಎಂಬ ಹುಸಿ ನೆಪ ಹೇಳದೆ ಈ ಕೆಲಸ ಮಾಡಬೇಕು.


ಯಾಕೆಂದರೆ ಖಾಸಗಿ ಶಾಲೆಗಳ ವಿದ್ಯಾರ್ಥಿಗಳ ಪುಸ್ತಕಗಳ ಗಾತ್ರಗಳಿಗೆ ಹೋಲಿಸಿದರೆ, ಸರ್ಕಾರಿ ಶಾಲೆಗಳ ಪುಸ್ತಕಗಳು ತೀರಾ ಕಡಿಮೆ ವಿಷಯಗಳನ್ನು ಒಳಗೊಂಡಿವೆ. ಜೊತೆಗೆ, ಉಚಿತವಾಗಿ ಕೊಡುತ್ತಿದ್ದೇವೆ ಎಂಬ ಅಹಂಕಾರದಿಂದ ಈ ಪುಸ್ತಕಗಳನ್ನು ಆಕರ್ಷಕವಾಗಿ ಮುದ್ರಿಸುತ್ತಲೂ ಇಲ್ಲ. ಸರ್ಕಾರಿ ಶಾಲೆಗಳ ಕಲಿಕೆಯ ವಾತಾವರಣವನ್ನು ಆಕರ್ಷಕವಾಗಿಸಿ, ಮಕ್ಕಳಲ್ಲಿ ಉತ್ಸಾಹ ಉಕ್ಕುವಂತೆ ಮಾಡಬೇಕಾಗಿದೆ.


ಇವತ್ತು ಸರ್ಕಾರಿ ಶಾಲೆಗಳಲ್ಲಿ ಇಂಗ್ಲಿಷ್ ಮಾಧ್ಯಮವನ್ನು ಭಾವುಕವಾಗಿ ವಿರೋಧಿಸುತ್ತಿರುವವರು ತಮಗರಿವಿಲ್ಲದೆಯೇ ಎಲ್ಲ ಜಾತಿಗಳ ಕಡುಬಡವರ ಪ್ರಗತಿಗೆ ವಿರುದ್ಧವಾಗಿದ್ದಾರೆ. ಯಾಕೆಂದರೆ ಇವತ್ತು ಮಕ್ಕಳಿಗಾಗಿ ತಿಂಗಳಿಗೆ ಕನಿಷ್ಠ ಐನೂರು ರೂಪಾಯಿಯನ್ನು ಖರ್ಚು ಮಾಡಬಲ್ಲ ಬಡ ತಂದೆ ತಾಯಂದಿರು ಕೂಡ ತಮ್ಮ ಮಕ್ಕಳನ್ನು ಎಂಥದೋ ಒಂದು ಖಾಸಗಿ ಇಂಗ್ಲಿಷ್ ಶಾಲೆಗೆ ಕಳಿಸುತ್ತಿದ್ದಾರೆ.


ಇತ್ತ ಬಹುತೇಕ ಕಾಲೇಜು, ವಿವಿಗಳ ಶಿಕ್ಷಕ, ಶಿಕ್ಷಕಿಯರು, ಅನೇಕ ಸಾಹಿತಿಗಳು ತಮ್ಮ ಮಕ್ಕಳನ್ನು ಇಂಗ್ಲಿಷ್ ಮಾಧ್ಯಮ ಶಾಲೆಗಳಿಗೆ ಕಳಿಸುತ್ತಿದ್ದಾರೆ. ಇವರ‌್ಯಾರಿಗೂ ಇಲ್ಲದ ಕನ್ನಡ ರಕ್ಷಣೆ ಜವಾಬ್ದಾರಿಯನ್ನು ಅತಿ ಬಡ ಮಕ್ಕಳು ಮತ್ತು ಅವರ ಪಾಲಕರು ಮಾತ್ರ ಯಾಕೆ ಹೊರಬೇಕು? ಹಲ ಬಗೆಯ ಪ್ರತಿಕೂಲ ವಾತಾವರಣಗಳಲ್ಲಿ ಕಲಿಯುತ್ತಾ, ಕನ್ನಡವನ್ನು ಕಾಪಾಡುತ್ತಿರುವ ಈ ಮಕ್ಕಳಿಗೆ ಆರನೆಯ ತರಗತಿಯಿಂದ ಕೂಡ ಉಳ್ಳವರ ಮಕ್ಕಳ ಜೊತೆ ಸ್ಪರ್ಧಿಸಲು ಅವಕಾಶ ಕೊಡಬಾರದೆಂದು ವಾದಿಸುವುದು ಭಯಾನಕ ಕ್ರೌರ್ಯವಾಗುತ್ತದೆ.


ಹಾಗೆ ನೋಡಿದರೆ, ಈ ಮಕ್ಕಳಿಗೆ ಭಾಷೆಯ ಬಲ ಹಾಗೂ ಆತ್ಮವಿಶ್ವಾಸ ತುಂಬುವ ಸಲುವಾಗಿ ಇಂಗ್ಲಿಷ್ ಬರವಣಿಗೆ ಹಾಗೂ ಅಭಿವ್ಯಕ್ತಿಯನ್ನು ಅತ್ಯಂತ ಸಮರ್ಥವಾಗಿ ಕಲಿಸಿ ಹೊಸ ಜಗತ್ತಿಗೆ ಅಣಿಗೊಳಿಸುವುದು ನಮ್ಮ ಆದ್ಯತೆಯಾಗಬೇಕು. ಇಂಗ್ಲಿಷನ್ನು ಸಂವಹನಕ್ಕಾಗಿ ಮಾತ್ರವಲ್ಲದೆ, ಜಗತ್ತಿನ ಜ್ಞಾನ, ಸಾಹಿತ್ಯವನ್ನು ಗ್ರಹಿಸುವ ಕಿಟಕಿಯಾಗಿಯೂ ಕಲಿಸಬೇಕು.


ಅತಿಯಾದ ಉಚ್ಚಾರಣೆಯ ಸಮಸ್ಯೆಯನ್ನು ಮೈಮೇಲೆ ಹಾಕಿಕೊಳ್ಳದೆ, ಜಗತ್ತಿನಲ್ಲಿ ಬಗೆಬಗೆಯ ಇಂಗ್ಲಿಷುಗಳಿವೆ, ಉಚ್ಚಾರಣೆಗಳಿವೆ ಎಂಬ ಅರಿವಿನಲ್ಲಿಯೂ ಇಂಗ್ಲಿಷನ್ನು ಕಲಿಸಬೇಕು. ಇಂಗ್ಲಿಷ್ ಶಿಕ್ಷಣದ ವ್ಯಾಪಾರಿಗಳ ದಂಧೆಗೆ ಕೊನೆ ಹೇಳಲು ಸರ್ಕಾರಿ ಶಾಲೆಗಳಲ್ಲಿ ಅದನ್ನು ಸರಿಯಾಗಿ ಕಲಿಸಬೇಕು.


ಈ ಸನ್ನಿವೇಶವನ್ನು ಸರಿಯಾಗಿ ಗ್ರಹಿಸಲು ಒಂದು ಉದಾಹರಣೆ ನೋಡಿ: ಹಿಂದುಳಿದ ಪ್ರದೇಶವೊಂದರಲ್ಲಿ ಎಕನಾಮಿಕ್ಸ್ ಎಂ.ಎ. ಕಲಿಯುತ್ತಿರುವ  ಬಡ ವಿದ್ಯಾರ್ಥಿಯೊಬ್ಬ ತನ್ನ ಎರಡು ವರ್ಷಗಳ ಎಂ.ಎ.ಕೋರ್ಸಿಗೆ ವಿಶ್ವವಿದ್ಯಾಲಯಕ್ಕೆ ಪಾವತಿಸುತ್ತಿರುವ ಬೋಧನಾ ಶುಲ್ಕ 1000 ರೂಪಾಯಿ; ಆದರೆ  ಖಾಸಗಿ ಸಂಸ್ಥೆಯೊಂದರಲ್ಲಿ ಎರಡು ತಿಂಗಳ ಇಂಗ್ಲಿಷ್ ಕಲಿಕೆಯ ಕೋರ್ಸಿಗೆ ಕೊಟ್ಟ ಶುಲ್ಕ 5000 ರೂಪಾಯಿ! ಅಲ್ಲಿ ಕೂಡ ಅವನು ಸಾಂದರ್ಭಿಕವಾಗಿ ಬಳಸುವ ಇಂಗ್ಲಿಷನ್ನು ತಕ್ಕಮಟ್ಟಿಗೇ ಕಲಿತನೇ ಹೊರತು ಚೆನ್ನಾಗಿಯೇನೂ ಕಲಿಯಲಿಲ್ಲ. ಬಾಲ್ಯದಲ್ಲೇ ಶಾಲೆಯಲ್ಲಿ  ಇಂಗ್ಲಿಷ್ ಭಾಷೆ ಕಲಿತಿದ್ದರೆ ಆ ಸಮಸ್ಯೆಯಿಂದ ಪಾರಾಗುತ್ತಿದ್ದನೇನೋ.


ಇದೇ ಸಂದರ್ಭದಲ್ಲಿ ಉರ್ದು ಮಾಧ್ಯಮದಲ್ಲಿ ಓದುತ್ತಿರುವ ಬಡ ಮುಸ್ಲಿಂ ಮಕ್ಕಳ ಕಷ್ಟವನ್ನು ಕೊಂಚ ವಸ್ತುನಿಷ್ಠವಾಗಿ ಗಮನಿಸಬೇಕು. ಈ ಮಕ್ಕಳಿಗೆ ಏಳನೆಯ ತರಗತಿಯ ನಂತರ ಯಾವ ವಿಷಯಗಳನ್ನೂ ಉರ್ದುವಿನಲ್ಲಿ ಕಲಿಸುತ್ತಿಲ್ಲ. ಹಾಗಾದರೆ ಈ ಮಕ್ಕಳು ಎಲ್ಲಿಗೆ ಹೋಗಬೇಕು? ಈ ಮಕ್ಕಳು ಹೈಸ್ಕೂಲ್ ಹೊತ್ತಿಗೆ ಸ್ಕೂಲು ಬಿಡುತ್ತಿವೆ ಅಥವಾ ಅನಿವಾರ್ಯವಾಗಿ ಎಲ್ಲೋ ವಿರಳವಾಗಿಯಷ್ಟೇ ಇರುವ ಇಂಗ್ಲಿಷ್ ಮಾಧ್ಯಮವನ್ನು ಹುಡುಕಿಕೊಂಡು ಹೋಗುತ್ತಿವೆ.


ಈ ಮಕ್ಕಳು ತಮ್ಮ ಆರ್ಥಿಕ ಬೆಳವಣಿಗೆಗಾಗಿಯಾದರೂ ವಿಷಯಗಳನ್ನು ಅತ್ಯಂತ ಸಮರ್ಥವಾಗಿ ಇಂಗ್ಲಿಷಿನಲ್ಲಿ ಕಲಿಯುವುದು ಅನಿವಾರ್ಯವಾಗಿದೆ. ಇನ್ನು ಇವತ್ತಿನ ಖಾಸಗಿ ಉದ್ಯೋಗಗಳ ಜಗತ್ತಿನಲ್ಲಿ ಇಂಗ್ಲಿಷನ್ನು ಚೆನ್ನಾಗಿ ಬಳಸುವ ಸಾಮರ್ಥ್ಯವನ್ನು ರಾಜ್ಯದ ಒಳಹೊರಗೆ ಬಗೆಬಗೆಯ ಉದ್ಯೋಗಗಳನ್ನು ಹುಡುಕುವ ಎಲ್ಲ ವರ್ಗದವರೂ ಪಡೆಯಬೇಕಾಗಿದೆ; ಇದು ಹೊಟ್ಟೆಪಾಡಿಗೆ ಸಂಬಂಧಿಸಿದ ಪ್ರಶ್ನೆ ಕೂಡ.


ಭಾಷೆಯೇ ಒಂದು ಆಸ್ತಿಯಾಗಿರುವ ಈ ಕಾಲದಲ್ಲಿ ಹೆಣ್ಣುಮಕ್ಕಳ ಉದ್ಯೋಗದ ಸಾಧ್ಯತೆಗಳು ಹಾಗೂ ಆತ್ಮವಿಶ್ವಾಸ ಹೆಚ್ಚಿರುವುದರಲ್ಲಿ ಇಂಗ್ಲಿಷಿನ ಪಾಲೂ ಹೆಚ್ಚಾಗಿದೆ ಎಂಬುದನ್ನು ಮರೆಯಬಾರದು.


ಇವತ್ತು ಸರ್ಕಾರಿ ಶಾಲೆಗಳಲ್ಲಿ ಇಂಗ್ಲಿಷ್ ಜಾರಿಯನ್ನು ವಿರೋಧಿಸುತ್ತಿರುವವರು  ಹಾಗೂ ಅದನ್ನು ಕನ್ನಡ ವಿರೋಧಿ ಎಂದು ತಿಳಿದವರು ನಿಜಕ್ಕೂ ಕನ್ನಡವನ್ನು ಉಳಿಸಬೇಕಾಗಿರುವುದು ಖಾಸಗಿ ಶಾಲೆಗಳಲ್ಲಿ. ಕನ್ನಡವನ್ನು ಒಂದು ಭಾಷೆಯಾಗಿ ಕೂಡ ಕಲಿಯಲು ಅವಕಾಶ ಕೊಡದ ಅನೇಕ ಶಾಲೆಗಳು ಇಂಗ್ಲಿಷ್, ಹಿಂದಿ, ಸಂಸ್ಕೃತಗಳನ್ನು ಕಲಿಸುತ್ತಿರುವುದರಿಂದ ಹಾಗೂ ಈ ಧೋರಣೆಗೆ ಕನ್ನಡ ತಂದೆತಾಯಿಗಳೇ ಕುಮ್ಮಕ್ಕು ಕೊಡುತ್ತಿರುವುದರಿಂದ ಕನ್ನಡಕ್ಕೆ ಹೆಚ್ಚಿನ ಧಕ್ಕೆಯಾಗುತ್ತಿದೆ.


ಇಂಗ್ಲಿಷ್ ಮಾಧ್ಯಮ ಶಾಲೆಗಳಲ್ಲಿ ಪ್ರತಿ ತರಗತಿಗೆ ಎರಡು ಕನ್ನಡ ಭಾಷಾಪಠ್ಯಗಳನ್ನಿಟ್ಟು ಈ ಮಕ್ಕಳು ಕನ್ನಡವನ್ನು ದಕ್ಷವಾಗಿ ಕಲಿಯುವಂತೆ ಮಾಡುವುದು ಅತ್ಯಂತ ಮುಖ್ಯವಾಗಿದೆ. ಹಾಗೆಯೇ ಕನ್ನಡ ಮಾಧ್ಯಮದ ಮಕ್ಕಳು ಕಲಿಯುತ್ತಿರುವ ಇಂಗ್ಲಿಷಿನ ಕ್ರಮವನ್ನು ಇನ್ನಷ್ಟು ಸುಧಾರಿಸಬೇಕು.


ಹಾಗೆಯೇ ಐದನೇ ತರಗತಿಯವರೆಗೆ ಹಾಗೂ ಆನಂತರ ಕನ್ನಡ ಮಾಧ್ಯಮದಲ್ಲಿ ಕಲಿತವರಿಗೆ ಸರ್ಕಾರಿ ಹುದ್ದೆಗಳನ್ನು ಹಾಗೂ ಹೆಚ್ಚು ಶೈಕ್ಷಣಿಕ ಅವಕಾಶಗಳನ್ನು ಮೀಸಲಿಟ್ಟು, ಪ್ರೋತ್ಸಾಹ ವೇತನಗಳನ್ನು ಕೂಡ ನೀಡಿ ಈ ಬಡ ಮಕ್ಕಳ ಭವಿಷ್ಯವನ್ನು ರೂಪಿಸಬೇಕು. 

ಕೃಪೆ : ಪ್ರಜಾವಾಣಿ - ಅಂತರಾಳ

ದಾಸಿಮಯ್ಯನ ವಚನ

ಒಡಲುಗೊಂಡವ ಹಸಿವ;  ಒಡಲುಗೊಂಡವ ಹುಸಿವ  ಒಡಲುಗೊಂಡವನೆಂದು  ನೀನೆನ್ನ ಜರಿದೊಮ್ಮೆ ನುಡಿಯದಿರ ನೀನೆನ್ನಂತೆ ಒಮ್ಮೆ ಒಡಲುಗೊಂಡು ನೋಡ ರಾಮನಾಥ.