Showing posts with label ಧಾರವಾಡ. Show all posts
Showing posts with label ಧಾರವಾಡ. Show all posts

Friday, March 15, 2013

ಕರ್ನಾಟಕ ಜನಸಾಹಿತ್ಯ ಸಮಾವೇಶ ಆಹ್ವಾನ ಪತ್ರಿಕೆ







ಕರ್ನಾಟಕ ಜನಸಾಹಿತ್ಯ ಸಮಾವೇಶ
ಮಾರ್ಚ್ ೨೩ ಮತ್ತು ೨೪, ೨೦೧೩.
ಪಾಟೀಲ ಪುಟ್ಟಪ್ಪ ಸಭಾಭವನ, ಕರ್ನಾಟಕ ವಿದ್ಯಾವರ್ಧಕ ಸಂಘ, ಧಾರವಾಡ

ಮಾ.೨೩. ಬೆ. ೧೦.೩೦-೧೧.೩೦:

೧. ಆಶಯ ನುಡಿ

ಪ್ರಸ್ತಾವನೆ : ಡಾ. ಎಂ ಡಿ ಒಕ್ಕುಂದ
ಆಶಯ ಮಾತು :
ಲಕ್ಷ್ಮಣ  ಗಾಯಕವಾಡ, ಮರಾಠಿ ದಲಿತ ಲೇಖಕರು
ಬಾನು ಮುಷ್ತಾಕ್,
ಸಂಯೋಜನೆ: ಡಾ. ಸಂಜೀವ ಕುಲಕರ್ಣಿ


೨. ವರ್ತಮಾನದ ಬಿಕ್ಕಟ್ಟು; ವಿವಿಧ ನೋಟಗಳು ೧೧.೩೦-೨.೦೦

ದು. ಸರಸ್ವತಿ
ಡಾ. ನಾಗೇಶ ಹೆಗಡೆ
ಡಾ. ಬಂಜಗೆರೆ ಜಯಪ್ರಕಾಶ
ಡಾ. ಎಸ್.ಬಿ.ಜೋಗುರ
ಸ್ಪಂದನ : ಡಾ. ಮುಜಾಫರ್ ಅಸ್ಸಾದಿ
ಸಂಯೋಜನೆ : ಡಾ. ಜಗದೀಶ ಕೊಪ್ಪ


೩. ಸಮಾಜ ಮತ್ತು  ನನ್ನ ಬರಹ   ಮ. ೩.೦೦ - ೫.೦೦
ಸರ್ಜಾಶಂಕರ್ ಹರಳಿಮಠ
ಬಿ.ಪೀರ್‌ಬಾಷಾ
ವೀರಣ್ಣ ಮಡಿವಾಳರ
ಡಾ. ಅನಸೂಯಾ ಕಾಂಬಳೆ
ವಸಂತ ಬನ್ನಾಡಿ
ಜ್ಯೋತಿ ಚೇಳಾಯರು
ಡಾ. ಮಲ್ಲಿಕಾರ್ಜುನ ಮೇಟಿ
ಟಿ ಕೆ ದಯಾನಂದ
ಬಾಲ ಗುರುಮೂರ್ತಿ
ರಮೇಶ ಅರೋಲಿ


ಸ್ಪಂದನ : ಡಾ. ಕುಂ. ವೀರಭದ್ರಪ್ಪ
ಸಂಯೋಜನೆ : ಡಾ. ಕಾ. ವೆಂ. ಶ್ರೀನಿವಾಸಮೂರ್ತಿ


೪. ಕವಿಗೋಷ್ಠಿ  ಸಂಜೆ ೫.೩೦ - ೮.೦೦

ಸುಬ್ಬು ಹೊಲೆಯಾರ್
ವಿ. ಎಂ. ಮಂಜುನಾಥ
ವಿ. ಆರ್. ಕಾರ್ಪೆಂಟರ್
ಡಾ. ಅರುಣ ಜೋಳದ ಕೂಡ್ಲಿಗಿ
ಪ್ರವರ ಕೊಟ್ಟೂರ
ಶರೀಫ್ ಹಸಮಕಲ್
ಸ್ಮಿತಾ ಮಾಕಳ್ಳಿ
ಸೈಫ್ ಜಾನ್ಸೆ ಕೊಟ್ಟೂರು
ಸೀಮಾ ಸಮತಳ
ಕಾವ್ಯ. ಪಿ. ಕೆ
ಗಂಗಪ್ಪ ತಳವಾರ
ಬಸವರಾಜ ಹಳ್ಳಿ
ಹೃದಯಶಿವ
ಸತ್ಯಮಂಗ ಮಹಾದೇವ
ವಿ. ಹರಿನಾಥ ಬಾಬು
ಗಣೇಶ್ ಹೊಸ್ಮನೆ
ಭವ್ಯ. ಎಚ್. ಸಿ
ಕಾವ್ಯಶ್ರೀ
ಟಿ. ಎಸ್. ಗೊರವರ
ಚೈತ್ರ ಬೇವಿನಗಿಡದ
ಕುಂಸಿ ಉಮೇಶ
ಅಬ್ಬಾಸ ಮೇಲಿನಮನಿ
ಮಂಜುನಾಥ ಡೊಳ್ಳಿನ
ಬಿ. ಶ್ರೀನಿವಾಸ
ಶ್ರೀದೇವಿ ಕಳಸದ
ಬಸವರಾಜ ಹೂಗಾರ
ಕೆ. ಅಕ್ಷತಾ
ಮಂಜುಳಾ ಮಾದರ
ಶಿವಕುಮಾರ ಕಂಪ್ಲಿ
ದೊಡ್ಡನಿಂಗಪ್ಪ ಆಲೂರ್
ಡಿ. ಕೆ. ರಮೇಶ್
ಕುಮಾರ್. ಎಸ್
ಕಲ್ಲೇಶ್ ಕುಂಬಾರ
ಚನ್ನಪ್ಪ ಅಂಗಡಿ
ಅಪ್ಪಗೆರೆ ಸೋಮಶೇಖರ್
ನಾಗರಾಜ ಹರಪನಹಳ್ಳಿ
ರೇಣುಕಾ ಹೆಳವರ
ಡಾ. ಟಿ ಎಂ ಉಷಾರಾಣಿ

ಸ್ಪಂದನ : ಡಾ. ಎಸ್. ಜಿ. ಸಿದ್ಧರಾಮಯ್ಯ

ಸಂಯೋಜನೆ: ಅಶೋಕ್ ಶೆಟ್ಟರ

ರಾತ್ರಿ ೮.೦೦ ಸಾಂಸ್ಕೃತಿಕ ಕಾರ್ಯಕ್ರಮ
ಚಾಲನೆ - ಜನಾರ್ದನ್ (ಜನ್ನಿ)
ಕೇಸರಿ ಹರವೂ ನಿರ್ದೇಶನದ
’ನಗರ ಮತ್ತು ನದೀ ಕಣಿವೆ’ ಸಾಕ್ಷ್ಯಚಿತ್ರ ಪ್ರದರ್ಶನ

ಮಾರ್ಚ್ ೨೪, ಬೆಳಿಗ್ಗೆ ೯.೩೦ - ೧೦.೩೦

೫. ಹೊಸತಲೆಮಾರಿನ ಸಾಹಿತ್ಯ
ಕಾವ್ಯ

ತಾರಿಣಿ ಶುಭದಾಯಿನಿ
ಡಾ. ಎಚ್.ಎಸ್.ಅನುಪಮಾ

ಸ್ಪಂದನ - ಕೆ. ಪಿ. ಸುರೇಶ್ಸಂಯೋಜನೆ : ಜಗದೀಶ ಮಂಗಳೂರಮಠ

ಕತೆ:   ೧೦.೩೦ - ೧೧.೩೦.

ಮಂಜುನಾಥ್ ಲತಾ
ಮಹಾಂತೇಶ್ ನವಲಕಲ್

ಸ್ಪಂದನ:  ಎಸ್. ಗಂಗಾಧರಯ್ಯ
ಸಂಯೋಜನೆ : ಸುನಂದಾ ಕಡಮೆ

ಸಮಾಜ ವಿಜ್ಞಾನ ಬರೆಹ ಮತ್ತು ಸಂಸ್ಕೃತಿ ಚಿಂತನೆ: ೧೧.೩೦ - ೧೨.೩೦
ದೇವು ಪತ್ತಾರ
ಡಾ. ರಂಗನಾಥ ಕಂಟನಕುಂಟೆ

ಸ್ಪಂದನ: ಕೆ.ಫಣಿರಾಜ್ಸಂಯೋಜನೆ : ಡಾ. ಸಿದ್ರಾಮ ಕಾರಣಿಕ

೬ ಹೊಸ ತಲೆಮಾರು : ನಮ್ಮ ಗ್ರಹಿಕೆ ೧೨.೩೦-೨.೩೦
ಜಿ ಪಿ ಬಸವರಾಜು
ಡಾ. ನಟರಾಜ್ ಬೂದಾಳು
ಡಾ ಬಿ. ಎನ್. ಸುಮಿತ್ರಾಬಾಯಿ
ಡಾ. ಸಬಿಹಾ ಭೂಮಿಗೌಡ
ಕೆ. ನೀಲಾ

ಸಂಯೋಜನೆ: ಶಂಕರ ಹಲಗತ್ತಿ

೭ ಹೊಸ ಸಾಹಿತ್ಯ ಚಳುವಳಿಯ ಸಾಧ್ಯತೆ: ಮ. ೩.೩೦ - ೫.೩೦
ಡಾ. ಸಿದ್ಧನಗೌಡ ಪಾಟೀಲ್
ಡಾ. ವಿನಯಾ
ಡಾ. ಬಿ. ಎಂ ಪುಟ್ಟಯ್ಯ
ಡಾ. ರಹಮತ್ ತರೀಕೆರೆ

ಸಂಯೋಜನೆ: ಡಾ. ಕೆ ಆರ್ ದುರ್ಗಾದಾಸ

ಚಿತ್ರಕಲಾ ಪ್ರದರ್ಶನ

ನಮ್ಮೊಂದಿಗೆ:
ಹಸನ್‌ನಯೀಂ ಸುರಕೋಡ,   ಡಾ. ಎಚ್.ಟಿ. ಪೋತೆ,  ಡಾ.ಎಚ್ ನಾಗವೇಣಿ,  ರಾಮಚಂದ್ರ ಕುಲಕರ್ಣಿ,  ಹನಮಂತ ಹಾಲಗೇರಿ,  ಶಶಿಧರ ಹೆಮ್ಮಾಡಿ,  ಚಂದ್ರಕಾಂತ ಪೋಕಳೆ,  ಡಾ. ಶ್ರೀಶೈಲ್ ಹುದ್ದಾರ,  ಡಾ. ಸುಮಾ ಎಂಬಾರ್, ಸಂವರ್ಥ ಸಾಹಿಲ್,  ಡಾ. ಎಂ.ವಿ. ವಸು, ಕೆ.ಪಿ. ನಟರಾಜ, ಕೆ. ವೆಂಕಟೇಶ್, ನಾಮದೇವ ಕಾಗದಗಾರ, ಲಕ್ಷ್ಮೀಕಾಂತ ಮಿರಜಕರ, ದಾದಾಪೀರ್ ನವಲೇಹಾಳ್, ರಮೇಶ ಗಬ್ಬೂರ, ಡಾ. ಜಾಜಿ ದೇವೇಂದ್ರಪ್ಪ, ಬಿ.ಎಸ್.ಸೊಪ್ಪಿನ್, ಬಿ.ಆಯ್. ಇಳಿಗೇರ, ಮಹಾಂತೇಶ ಮಸ್ಕಿ, ಶ್ರೀದೇವಿ ಕೆರೆಮನೆ , ವೀರೇಶ ಸೌದ್ರಿ, ಶಿವಕುಮಾರ ಕಣಸೋಗಿ, ಎನ್, ಚಂದ್ರಶೇಖರ್, ಜಗನ್ನಾಥ ಮಾಸ್ತಿ, ವೈ.ಗ.ಜಗದೀಶ್, ಎಂ. ಎಫ್.ನದಾಪ, ಡಾ. ಸುನಂದಮ್ಮ, ಡಾ. ಸಬಿತಾ ಬನ್ನಾಡಿ, ಮಹಾಲಿಂಗಪ್ಪ ಅಲಬಾಳ್, ಸಿ.ಜಿ. ಹಿರೇಮಠ, ಸುರೇಶ ತಾಂಡೇಲ, ಮಾಧವಿ ಭಂಡಾರಿ, ಡಾ. ನಟರಾಜ ಹುಳಿಯಾರ್, ಸರಜೂ ಕಾಟಕರ, ಸತೀಶ ಕುಲಕರ್ಣಿ, ಡಿ.ಎಸ್.ಚೌಗಲೆ, ಭೀಮನಗೌಡ ಇಟಗಿ, ವಿಠ್ಠಪ್ಪ ಗೊರಂಟ್ಲಿ, ಡಾ. ಎ.ಎಸ್. ಪ್ರಭಾಕರ್, ಡಾ. ಎಚ್.ಡಿ. ಪ್ರಶಾಂತ್, ಡಾ. ರಾಜಪ್ಪ ದಳವಾಯಿ, ಶ್ರೀಪಾದ ಭಟ್, ಡಾ. ಗವಿಸಿದ್ದ ಪಾಟೀಲ, ಗವಿಸಿದ್ದ ಹೊಸಮನಿ, ಜಿ.ಎನ್.ಮೋಹನ್, ಬಸವರಾಜ ಕೆಂಚರಡ್ಡಿ, ಎಸ್.ಜಿ.ಚಿಕ್ಕನರಗುಂದ, ಜೆ. ಪಿ. ಶೆಟ್ಟಿ, ಸುಭಾಸ ರಾಜಮಾನೆ, ಡಾ. ವಿಠ್ಠಲ ಭಂಡಾರಿ, ಡಾ. ಮೀನಾಕ್ಷಿ ಬಾಳಿ, ಲಿಂಗಾರಡ್ಡಿ ಶೇರಿ, ಪ್ರಭು ಖಾನಾಪುರೆ, ಕಾಶೀನಾಥ ಅಂಬಲಗೆ, ಡಾ.ಎಚ್.ಬಿ.ಕೋಲ್ಕಾರ, ಲಕ್ಷ್ಮಣ ಕಾಪಸೆ, ಡಾ. ಮೈನುದ್ದೀನ ರೇವಡಿಗಾರ, ಡಾ. ಪ್ರಕಾಶ ಖಾಡೆ, ಶಿವಸುಂದರ, ಸತೀಶ್ ಶಿಲೆ, ವೀರಣ್ಣ ಮಂಟಾಳಕರ್, ಡಾ. ದಸ್ತಗೀರ್‌ಸಾಬ್ ದಿನ್ನಿ, ಮೇಟಿ ಕೊಟ್ರಪ್ಪ, ಹುಸೇನ್ ಪಾಶಾ, ಬಸವರಾಜ ಶೀಲವಂತರ್, ರಮೇಶ ನಾಯಕ, ಎಂ. ಚಂದ್ರಪ್ಪ, ಡಾ. ಆಂಜನಪ್ಪ, ವಿರುಪಾಕ್ಷಪ್ಪ ಪಡಿಗೋದಿ, ಸದಾನಂದ ಮೋದಿ, ಪ್ರಮೋದ ತುರ್ವಿಹಾಳ, ಡಾ. ವೈ.ಎಂ.ಭಜಂತ್ರಿ, ಡಾ. ಎಲ್.ಆರ್ ಅಂಗಡಿ, ಡಾ. ವೈ ಬಿ ಹಿಮ್ಮಡಿ, ಪಾರ್ವತೇಶ್, ಮುಂತಾದ ಹಿರಿಯರು ಮತ್ತು ಕಿರಿಯರು
ಬನ್ನಿ, ಗೆಳೆಯರ ಜತೆಗೆ..

Saturday, January 19, 2013

ಧಾರವಾಡ ಸಾಹಿತ್ಯ ಸಂಭ್ರಮ : ನಿಬಂಧನೆಗಳು ರದ್ದು !

ಧಾರವಾಡದಲ್ಲಿ ಹಮ್ಮಿಕೊಳ್ಳಲಾಗಿದ್ದ 'ಸಾಹಿತ್ಯ ಸಂಭ್ರಮ' ಕಾರ್ಯಕ್ರಮದ ನಿಬಂಧನೆಗಳನ್ನು ನಾಡಿನ ಹಲವಾರು ಬರಹಗಾರರು ಖಂಡಿಸುವ ಮೂಲಕ, ವಿರೋಧಿಸುವ ಮೂಲಕ ಪರ್ಯಾಯ ಕಾರ್ಯಕ್ರಮ ಮಾಡುವುದಾಗಿ ಘೋಷಿಸಿದ ಮೇಲೆ ಸಾಹಿತ್ಯ ಸಂಭ್ರಮದ ಸಂಘಟಕರು ಎಚ್ಚೆತ್ತುಕೊಂಡು ತಾವು ವಿಧಿಸಿದ್ದ ನಿಬಂಧನೆಗಳನ್ನು ರದ್ದುಪಡಿಸಿದ್ದಾರೆ. ಈ ಬಗ್ಗೆ ಪ್ರಜಾವಾಣಿ ದಿನಪತ್ರಿಕೆಯಲ್ಲಿ ಬಂದ ಸುದ್ದಿ ಇಲ್ಲಿದೆ ನೋಡಿ ;

ಇದೇ 25, 26 ಮತ್ತು 27ರಂದು ನಗರದಲ್ಲಿ ನಡೆಯಲಿರುವ `ಧಾರವಾಡ ಸಾಹಿತ್ಯ ಸಂಭ್ರಮ'ದಲ್ಲಿ ಪಾಲ್ಗೊಳ್ಳುವವರಿಗೆ ವಿಧಿಸಲಾಗಿದ್ದ ನಿಬಂಧನೆಗಳನ್ನು ರದ್ದುಪಡಿಸಲಾಗಿದೆ ಎಂದು `ಧಾರವಾಡ ಸಾಹಿತ್ಯ ಸಂಭ್ರಮ'ದ ಅಧ್ಯಕ್ಷ ಡಾ.ಗಿರಡ್ಡಿ ಗೋವಿಂದರಾಜ ಸ್ಪಷ್ಟಪಡಿಸಿದ್ದಾರೆ.
`ಈ ನಿಬಂಧನೆಗಳ ಬಗ್ಗೆ ಬಹಳಷ್ಟು ತಪ್ಪು ತಿಳಿವಳಿಕೆ ಉಂಟಾಗಿದ್ದರಿಂದ ಮತ್ತು ಇವುಗಳನ್ನೇ ಮುಖ್ಯವಾಗಿರಿಸಿಕೊಂಡು ವಿರೋಧ ವ್ಯಕ್ತವಾಗುತ್ತಿರುವುದರಿಂದ ಇವುಗಳನ್ನು ರದ್ದುಪಡಿಸಲಾಗಿದೆ. ಈ ಸಂಭ್ರಮವನ್ನು ಮೊದಲ ಪ್ರಯೋಗವಾಗಿ ಹಮ್ಮಿಕೊಳ್ಳಲಾಗಿದ್ದು, ಚರ್ಚಿಸಬೇಕಾಗಿರುವ ಸಾಕಷ್ಟು ವಿಷಯಗಳನ್ನು ಮುಂಬರುವ ಸಂಭ್ರಮಗಳಲ್ಲಿ ಎತ್ತಿಕೊಳ್ಳಲು ಅವಕಾಶ ಇದ್ದೇ ಇದೆ. 60 ಸಂಪನ್ಮೂಲ ವ್ಯಕ್ತಿಗಳು ಮತ್ತು ಸುಮಾರು 60 ವಿಶೇಷ ಆಮಂತ್ರಿತರು ವಿವಿಧ ಗೋಷ್ಠಿಗಳಲ್ಲಿ ಪಾಲ್ಗೊಳ್ಳುತ್ತಿದಾರೆ'.
`ಅವರಿಗೆ ಯಾವುದೇ ಶುಲ್ಕ ಇರುವುದಿಲ್ಲ. 300 ಪ್ರತಿನಿಧಿಗಳು ಭಾಗವಹಿಸುವ ನಿರೀಕ್ಷೆ ಇದೆ. ಸರ್ಕಾರ ಕೊಡುವ ಅನುದಾನ ಸಾಲದೇ ಇದ್ದುದರಿಂದ ಸಂಭ್ರಮದ ಖರ್ಚು ವೆಚ್ಚಗಳನ್ನು ನಿಭಾಯಿಸಲು ಪ್ರತಿನಿಧಿ ಶುಲ್ಕ ಆಕರಿಸಲಾಗುತ್ತಿದೆ. ಕೆಲವರು ತಪ್ಪು ತಿಳಿವಳಿಕೆಯಿಂದ ಆರೋಪಿಸುತ್ತಿರುವಂತೆ ಇದರಿಂದ ಯಾವುದೇ ಹಣ ಮಾಡಿಕೊಳ್ಳುವ ಉದ್ದೇಶ ಖಂಡಿತವಾಗಿಯೂ ಇಲ್ಲ. ಸಂಭ್ರಮದ ವೆಚ್ಚ ಸುಮಾರುರೂ 16ರಿಂದರೂ 18 ಲಕ್ಷದಷ್ಟು ಎಂದು ಅಂದಾಜಿಸಲಾಗಿದೆ. ಆದರೆ ಕೆಲವರು ಆರೋಪಿಸುತ್ತಿರುವಂತೆರೂ 40ರಿಂದರೂ 50 ಲಕ್ಷ ಸಂಗ್ರಹಿಸಲಾಗಿಲ್ಲ. ಸಂಭ್ರಮ ಮುಗಿದ ಕೆಲವೇ ದಿನಗಳೊಳಗಾಗಿ ಇದರ ಖರ್ಚು ವೆಚ್ಚವನ್ನು ಪಾರದರ್ಶಕವಾಗಿ ಪ್ರಕಟಿಸಲಾಗುವುದು' ಎಂದು ಡಾ.ಗಿರಡ್ಡಿ ತಿಳಿಸಿದ್ದಾರೆ.

Friday, January 18, 2013

ಧಾರವಾಡ ಸಾಹಿತ್ಯ ಸಂಭ್ರಮ : ಅಧ್ಯಕ್ಷರಿಗೊಂದು ಅಶೋಕ ಶೆಟ್ಟರ್ ಬಹಿರಂಗ ಪತ್ರ

 ಡಾ. ಗಿರಡ್ಡಿ ಗೋವಿಂದರಾಜ
ಅಧ್ಯಕ್ಷರು, ಧಾರವಾಡ ಸಾಹಿತ್ಯ ಸಂಭ್ರಮ (ರಿ)
ಇವರಿಗೆ


ಡಿಯರ್ ಸರ್,

ಇದೇ (ಜನವರಿ, ೨೦೧೩) ೨೫, ೨೬, ೨೭ ರಂದು ತಾವು ಆಯೋಜಿಸಿರುವ ಮೂರು ದಿನಗಳ ಸಾಹಿತ್ಯ ಸಂಭ್ರಮದಲ್ಲಿ ವಿಶೇಷ ಆಮಂತ್ರಿತನಾಗಿ ನಾನು ಪಾಲ್ಗೊಳ್ಳಬೇಕೆಂದು ಕೋರಿ ತಾವು ಕಳಿಸಿದ ಮುದ್ರಿತ ಓಲೆ ತಲುಪಿದೆ. ಮೊದಲಿಗೆ ತಮ್ಮ ಆತ್ಮೀಯ ಆಹ್ವಾನಕ್ಕೆ ನನ್ನ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ. ಸದರಿ ಸಮಾವೇಶದಲ್ಲಿ ಪಾಲ್ಗೊಳ್ಳಲು ನಾನು ಇಚ್ಛಿಸುವದಿಲ್ಲ. ಕರ್ನಾಟಕ ಸರಕಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಧನಸಹಾಯ ಪಡೆದಿರುವ ಈ ಮತ್ತು ಇಂಥ ಯಾವುದೇ ಸಾಹಿತ್ಯಿಕ ಸಾಂಸ್ಕೃತಿಕ ಸಮಾವೇಶಗಳು ಸಾರ್ವಜನಿಕ ಡೊಮೈನ್ ನಲ್ಲಿ ಇರುವಂಥವಾದ್ದರಿಂದ ಇದರಲ್ಲಿ ಪಾಲ್ಗೊಳ್ಳಲು ಸಾಧ್ಯವಾಗದ್ದರ ಬಗ್ಗೆ ನನಗೆ ವಿಷಾದವೇಕಿಲ್ಲ ಎಂಬುದನ್ನು ಸಾರ್ವಜನಿಕವಾಗಿಯೇ ಹೇಳಬಹುದೆನ್ನಿಸುತ್ತದೆ.

ತಾವು ತಮ್ಮ ಪತ್ರದಲ್ಲಿ ಸರಿಯಾಗಿಯೇ ಹೇಳಿರುವಂತೆ ಧಾರವಾಡ ನಗರ ಅನೇಕ ಜನ ಸಾಹಿತಿ-ಕಲಾವಿದರ ನೆಲೆ. ಇಂದಿಗೂ ತನ್ನ ಹಿರಿಯ ಪರಂಪರೆಯನ್ನು ಕ್ರಿಯಾಶೀಲವಾಗಿ ಮುಂದುವರಿಸಿಕೊಂಡು ಬಂದಿರುವ ಊರು. ಧಾರವಾಡದ ಈ ಪರಂಪರೆಯ ವಾರಸುದಾರಿಕೆ ಯಾವೊಬ್ಬ ವ್ಯಕ್ತಿ, ಮನೆತನ, ಗುಂಪು, ಜಾತಿ, ಪಂಥಕ್ಕೆ ಸೇರಿದ್ದಲ್ಲ. ವಾಸ್ತವವಾಗಿ ಅದು ಬರಿದೇ ಧಾರವಾಡಕ್ಕೆ ಸೀಮಿತವಾದದ್ದೂ ಅಲ್ಲ. ಧಾರವಾಡ ನೆಲದಿಂದ ಹೊಮ್ಮಿದ ಸಾಹಿತ್ಯ, ಸಂಗೀತ, ವಿಮರ್ಶೆ, ಚಿತ್ರಕಲೆ, ರಂಗಪ್ರಯೋಗಗಳೇ ಮೊದಲಾದ ಸಮೃದ್ಧಿಯನ್ನು, ಅದರ ಜೊತೆಜೊತೆಗೇ ಇಲ್ಲಿಯ ಸ್ನೇಹ, ಪ್ರೀತಿ, ಸಂಘರ್ಷ, ಪ್ರತಿಭಟನೆ, ಹೊಸತನದ ಹುಡುಕಾಟಗಳ ವಿಶಿಷ್ಟ ಪರಂಪರೆಯ ಕುರಿತು ಹೆಮ್ಮೆ-ಮೆಚ್ಚುಗೆಗಳನ್ನು ಇಟ್ಟುಕೊಂಡವರು ಧಾರವಾಡದ ಹೊರಗೂ ಇದ್ದಾರೆ. ಜೈಪುರದ ಸಾಹಿತ್ಯಹಬ್ಬದಿಂದ ಪ್ರೇರಿತರಾಗಿ ತಾವು “ಇನ್ನೊಂದು ಹೊಸ ಪ್ರಯೋಗ” ವೆಂದು ವ್ಯಾಖ್ಯಾನಿಸಿಕೊಂಡಿರುವ ಸಾಹಿತ್ಯ ಸಂಭ್ರಮದ ಒಟ್ಟಾರೆ ಸ್ವರೂಪ, ಧಾಟಿ-ಧೋರಣೆ ಮತ್ತು ವಿಶೇಷವಾಗಿ ಅದರ ನಿಯಮ ನಿಬಂಧನೆಗಳು ಅಂಥ ಹಲವಾರು ಜನರನ್ನು ನಿರಾಶೆಗೊಳಿಸಿವೆ. ಧಾರವಾಡದಂಥ ಅನೌಪಚಾರಿಕವೂ ಆತ್ಮೀಯವೂ ಆದ ಸಾಹಿತ್ಯಿಕ ಸಾಂಸ್ಕೃತಿಕ ಚಟುವಟಿಕೆಗಳ ಪರಂಪರೆಗೆ ವ್ಯತಿರಿಕ್ತವಾದ ವಿಲಕ್ಷಣ ನಿಯಮಾವಳಿಗಳನ್ನು ಓದಿ ನಿರಾಶೆಗೊಂಡವರಲ್ಲಿ ನಾನೂ ಒಬ್ಬ. ಕಾರ್ಪೊರೇಟ್ ಜಗತ್ತು ಮತ್ತು ಕನ್ನಡ ಸಾಹಿತ್ಯ ಎಂಬ ಒಂದು ಗೋಷ್ಠಿಯನ್ನೂ ಒಳಗೊಂಡಿರುವ ಈ ಸಮಾವೇಶ ವಾಸ್ತವವಾಗಿ ಕನ್ನಡ ಸಾಹಿತ್ಯ ಸೃಜನೆ-ವಿಮರ್ಶೆಗಳ ಲೋಕದ ಕಾರ್ಪೊರೇಟೀಕರಣದಂತೇ ಭಾಸವಾಗುತ್ತಿದೆ. ಇದನ್ನು ಕನ್ನಡದ ಮನಸು ಸೈರಿಸಿಕೊಳ್ಳುತ್ತದೆಂದು ನನಗನಿಸುವುದಿಲ್ಲ.

ಸಾಹಿತಿ ಸಾಹಿತಿಗಳ ನಡುವೆ ಮತ್ತು ಲೇಖಕ ಓದುಗರ ನಡುವೆ ಆತ್ಮೀಯ ಸಂಬಂಧವನ್ನು ಬೆಳೆಸುವ ಉದ್ದೇಶವೂ ಈ ಸಂಭ್ರಮಕ್ಕಿದೆ ಎಂದು ನೀವು ಹೇಳಿದ್ದೀರಿ. ಸರಿಯೇ. ಆದರೆ ಸಂಘಟಕರು ಮತ್ತು ಸಾವಿರದೈನೂರು ರೂಪಾಯಿ ಪ್ರತಿನಿಧಿ ಶುಲ್ಕ ಪಾವತಿಸಿ ನೋಂದಾಯಿಸಿಕೊಂಡ ಪ್ರತಿನಿಧಿಗಳ ನಡುವೆಯೂ ಒಂದು ಆತ್ಮೀಯ ಸಂಬಂಧ ಇರಬೇಕೆಂಬುದು ತಮಗೆ ತೋಚಿಲ್ಲವೆಂಬುದಕ್ಕೆ ನಿಯಮ ನಿಬಂಧನೆಗಳ ಒಕ್ಕಣೆಯೇ ಸಾಕ್ಷಿ. “ಮೊದಲಿಗೇ ಅಲ್ಲಮ ಪ್ರಭುವಿಗೆ ಶರಣಾರ್ಥಿ, ಕೂಡಿ ಕುಂತ ಜನಕೆಲ್ಲ ನಮ್ಮ ನಮನ ಎಂದು ಕಂಬಾರರ ಒಂದು ಹಾಡಿನಲ್ಲಿ ಬರುವಂತೆ ರಂಗದ ಮೇಲೆ ದೇವಾಧಿದೇವತೆಗಳ ಪಾತ್ರವಹಿಸುವವರೂ ಮೊದಲಿಗೆ ದೈವಕ್ಕೆ ಅಂದರೆ ಎದುರಿಗೆ ಕುಳಿತ ಪ್ರೇಕ್ಷಕ ಗಣಕ್ಕೆ ಕೈ ಮುಗಿದು ಆಟ ಪ್ರಾರಂಭಿಸುವ ಜಾನಪದೀಯ ಪರಂಪರೆ ನಮ್ಮದು. ಜೈಪುರ ಲಿಟರರಿ ಫೆಸ್ಟಿವಲ್ ನಂಥವುಗಳಲ್ಲಿ ಅಂಥ ನಿಯಮ ನಿಬಂಧನೆಗಳು ಇರಲು ಕಾರಣವಾದ ಹಿನ್ನೆಲೆಗಳಿವೆ. ಧಾರವಾಡದಲ್ಲಿ ತಾವು ಹಲವಾರು ದಶಕಗಳಿಂದ ಇದ್ದೀರಿ. ಸಾವಿರಾರು ಸಾಹಿತ್ಯಿಕ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಾಕ್ಷಿಯಾಗಿದ್ದೀರಿ. ಎಷ್ಟು ಕಾರ್ಯಕ್ರಮಗಳಲ್ಲಿ ಅನುಚಿತವಾಗಿ ಅಸಭ್ಯವಾಗಿ ವರ್ತನೆಯನ್ನು ಕಂಡಿದ್ದೀರಿ ? ಅವಮಾನಕರ, ಅಪಕೀರ್ತಿಗೊಳಿಸುವ, ಹಕ್ಕುಚ್ಯುತಿಗೊಳಿಸುವ, ಅಸಭ್ಯ, ಕಾನೂನುಬಾಹಿರ ವಿಷಯಗಳನ್ನು, ಮಾಹಿತಿಗಳನ್ನು ಕರಪತ್ರಗಳ ಮೂಲಕ ಹಂಚಿದ್ದನ್ನು ನೋಡಿದ್ದೀರಿ ? ಪ್ರಚಾರ ಸಾಮಗ್ರಿಯನ್ನು ಕಾರ್ಯಕ್ರಮದ ಸ್ಥಳ,ಪ್ರದೇಶ,ಸಭಾಂಗಣದಲ್ಲಿ ತಂದದ್ದನ್ನು ಅನುಭವಿಸಿದ್ದೀರಿ? ಕಾರ್ಯಕ್ರಮದ ಸ್ಥಳದಲ್ಲಿ ಆಸ್ತಿ-ಪಾಸ್ತಿಗಳಿಗೆ ಯಾರಾದರೂ ಧಕ್ಕೆ ಉಂಟು ಮಾಡಿದ ಎಷ್ಟು ಉದಾಹರಣೆಗಳು ಧಾರವಾಡದಂಥ ಒಂದು ಸಭ್ಯರ ಊರ ಪರಂಪರೆಯಲ್ಲಿವೆ ? ಕಾರ್ಯಕ್ರಮದ ಸ್ಥಳದಲ್ಲಿ ಮದ್ಯ-ಮಾದಕವಸ್ತುಗಳನ್ನು ತಂದು ಸೇವಿಸುವಂಥ ಅರಾಜಕರೆ ಧಾರವಾಡದ ಮಂದಿ ? ಕಾರ್ಯಕ್ರಮದ ಪ್ರವೇಶಸ್ಥಳ/ಸಭಾಂಗಣದಲ್ಲಿ ಯಾವುದೇ ರೀತಿಯ ಶಸ್ತ್ರಾಸ್ತ್ರಗಳನ್ನು ತರಬಾರದೆಂಬ ನಿಬಂಧನೆಯಂತೂ ಇವೆಲ್ಲವುಗಳ ಕಳಶ. ಇಂಥದೇನೂ ಎಂದೂ ಇಲ್ಲದ ಧಾರವಾಡದಲ್ಲಿ ಯಾಕಾಗಿ ಇಂಥ ಡಿಫೆನ್ಸಿವ್ ಕವಚದ ಅಗತ್ಯ ತಮಗೆ ಕಂಡಿತು ? ಏಕೆ ಇಂಥ ಹಾಸ್ಯಾಸ್ಪದ ಒಕ್ಕಣೆಯಿಂದ ಧಾರವಾಡವನ್ನು ಅವಮಾನಿಸಿದ್ದೀರಿ ?

ಭಾವಚಿತ್ರವಿರುವ ಗುರುತಿನ ಚೀಟಿಯನ್ನು ಪಡೆದು ಕಡ್ಡಾಯವಾಗಿ ಕೊರಳಲ್ಲಿ ಧರಿಸಲು ನಿರ್ಬಂಧಿತರಾದ ಪ್ರತಿನಿಧಿಗಳು ಕಾರ್ಯಕ್ರಮದಲ್ಲಿ ಭಾಗವಹಿಸುವ ಭಾಷಣಕಾರರಲ್ಲ, ಅವರಿಗೆ ರಾತ್ರಿ ಭೋಜನ ವ್ಯವಸ್ಥೆ ಇರುವುದಿಲ್ಲ ; ಅದನ್ನು ಅವರು ತಾವೇ ವ್ಯವಸ್ಥೆ ಮಾಡಿಕೊಳ್ಳಬೇಕು, ಪರ ಊರಿನ ಪ್ರತಿನಿಧಿಗಳು ತಾವು ನಿಗದಿಗೊಳಿಸಿದ ಹೊಟೆಲ್ ಗಳ ಲಿಸ್ಟ್ ನಲ್ಲಿರುವ ಹೊಟೆಲ್ ಗಳ ವ್ಯವಸ್ಥಾಪಕರನ್ನು ಕಂಡು ತಮ್ಮ ವಸತಿ ವ್ಯವಸ್ಥೆಯನ್ನೂ ತಾವೇ ಮಾಡಿಕೊಳ್ಳಬೇಕು, ಪ್ರತಿನಿಧಿಗಳಿಗೆ ವಾಹನ ಸೌಕರ್ಯ ಇರುವದಿಲ್ಲ ; ತಮ್ಮ ವ್ಯವಸ್ಥೆಯನ್ನು ತಾವೇ ಮಾಡಿಕೊಳ್ಳಬೇಕು ..... ! ಹೇಳಿ, ಇಂಥ ವರಸೆಯ ಸ್ವಾಗತ ಎಂಥ ಆತ್ಮೀಯತೆಯನ್ನು ಮೂಡಿಸಬಲ್ಲದು?

ಸಾಹಿತ್ಯದಲ್ಲಿ ಸಂಭ್ರಮದ ಒಂದು ಆಯಾಮ ಇದ್ದೇ ಇದೆ. ಆದರೆ ಸಂಭ್ರಮಿಸಲು ತಕ್ಕುದಾದ ಮನಸ್ಥಿತಿಯೂ ಸನ್ನಿವೇಶವೂ ಇರಬೇಕಾಗುತ್ತದೆ. ನಮ್ಮ ಇಂದಿನ ಸನ್ನಿವೇಶದಲ್ಲಿ ತಾವು ಸಂಭ್ರಮಿಸಬಯಸುತ್ತಿದ್ದೀರಿ. ತಮ್ಮ ಸಂಭ್ರಮಕ್ಕೆ ಶುಭವಾಗಲಿ
ಅಶೋಕ ಶೆಟ್ಟರ್
 ಧಾರವಾಡ
 ೧೬ ಜನವರಿ ೨೦೧೩

ದಾಸಿಮಯ್ಯನ ವಚನ

ಒಡಲುಗೊಂಡವ ಹಸಿವ;  ಒಡಲುಗೊಂಡವ ಹುಸಿವ  ಒಡಲುಗೊಂಡವನೆಂದು  ನೀನೆನ್ನ ಜರಿದೊಮ್ಮೆ ನುಡಿಯದಿರ ನೀನೆನ್ನಂತೆ ಒಮ್ಮೆ ಒಡಲುಗೊಂಡು ನೋಡ ರಾಮನಾಥ.