Showing posts with label ಬರಗೂರು ರಾಮಚಂದ್ರಪ್ಪ. Show all posts
Showing posts with label ಬರಗೂರು ರಾಮಚಂದ್ರಪ್ಪ. Show all posts

Tuesday, January 22, 2013

ಹಿಂದು ಉಗ್ರವಾದ ನಿಜ: ಬರಗೂರು ರಾಮಚಂದ್ರಪ್ಪ



'ಹಿಂದೂ ಧರ್ಮದ ಹೆಸರಿನಲ್ಲೂ ಕೆಲ ವ್ಯಕ್ತಿಗಳು ಹಾಗೂ ಸಂಘಟನೆಗಳಿಂದ ಭಯೋತ್ಪಾದನೆ ನಡೆಯುತ್ತಿರುವುದು ಸತ್ಯ. ಆದರೆ, ಬಿಜೆಪಿ ಮತ್ತು ಆರೆಸ್ಸೆಸ್‌ ಸಂಘಟನೆಯಿಂದಲೇ ಅದು ನಡೆಯುತ್ತಿದೆ ಎಂಬುದನ್ನು ನಾನು ಹೇಳಲಾರೆ' ಎಂದು ಸಾಹಿತಿ ಪ್ರೊ| ಬರಗೂರು ರಾಮಚಂದ್ರಪ್ಪ ಹೇಳಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭಯೋತ್ಪಾದನೆ ಇಂದು ಯಾವೊಂದು ಧರ್ಮಕ್ಕೆ ಸೀಮಿತವಾಗಿಲ್ಲ. ಮುಸ್ಲಿಂ ಧರ್ಮಕ್ಕೆ ಸೇರಿದ ಹಾದಿ ತಪ್ಪಿದ ಕೆಲವರು ಭಯೋತ್ಪಾದನಾ ಚಟುವಟಿಕೆಗಳಲ್ಲಿ ತೊಡಗುತ್ತಿದ್ದಾರೆ ಎಂಬ ಆರೋಪ ಇತ್ತು. ಆದರೆ, ಈಗ ಹಿಂದೂ ಧರ್ಮದ ಹೆಸರಿನಲ್ಲೂ ಕೆಲ ವ್ಯಕ್ತಿ ಮತ್ತು ಸಂಘಟನೆಗಳು ಭಯೋತ್ಪಾದನಾ ಚಟುವಟಿಕೆಗಳಲ್ಲಿ ತೊಡಗಿವೆ ಎಂದು ಹೇಳಿದರು.

ಹಿಂದೂಗಳ ಹೆಸರಿನಲ್ಲಿ ನಡೆಯುತ್ತಿರುವ ಭಯೋತ್ಪಾದನಾ ಚಟುವಟಿಕೆಗಳ ಹಿಂದೆ ಬಿಜೆಪಿ ಅಥವಾ ಆರೆಸ್ಸೆಸ್‌ ಇದೆ ಎಂದು ಹೇಳುವುದು ಕಷ್ಟ. ಹೀಗೆ ಹೇಳಿರುವ ಕೇಂದ್ರ ಗೃಹ ಸಚಿವ ಸುಶೀಲ್‌ಕುಮಾರ್‌ ಶಿಂಧೆ ಬಳಿ ಈ ಕುರಿತು ಯಾವುದಾದರೂ ದಾಖಲೆಗಳಿದ್ದರೆ ಬಹಿರಂಗ ಪಡಿಸುವುದು ಸೂಕ್ತ. ಈ ಬಗ್ಗೆ ನನ್ನ ಬಳಿ ಯಾವುದೇ ಸ್ಪಷ್ಟ ದಾಖಲೆಗಳು ಇಲ್ಲ ಎಂದು ರಾಮಚಂದ್ರಪ್ಪ ಅಭಿಪ್ರಾಯಪಟ್ಟರು. 

ಕೃಪೆ : ಉದಯವಾಣಿ : 22-01-2013

ದಾಸಿಮಯ್ಯನ ವಚನ

ಒಡಲುಗೊಂಡವ ಹಸಿವ;  ಒಡಲುಗೊಂಡವ ಹುಸಿವ  ಒಡಲುಗೊಂಡವನೆಂದು  ನೀನೆನ್ನ ಜರಿದೊಮ್ಮೆ ನುಡಿಯದಿರ ನೀನೆನ್ನಂತೆ ಒಮ್ಮೆ ಒಡಲುಗೊಂಡು ನೋಡ ರಾಮನಾಥ.