Showing posts with label ಭಾಷೆ. Show all posts
Showing posts with label ಭಾಷೆ. Show all posts

Wednesday, October 31, 2012

ಮತ್ತೇ ನಾವು ಆಂಡಯ್ಯ ಆಗುವುದು ಬೇಡ !



ಡಾ. ಸಿದ್ರಾಮ ಕಾರಣಿಕ 
 
ಕನ್ನಡ ಶಾಸ್ತ್ರಕ್ಕೆ ಯಾರು ಎಂದರೆ ನಾವು ಬಹಳ ಹಿಂದೆ ಶಂಕರಭಟ್ಟರು ಎನ್ನುತ್ತಿದ್ದೇವು ! ಆದರೆ ಇಂದು ಶಂಕರ ಭಟ್ ಅವರು ಬರೆಯುತ್ತಿರುವುದನ್ನು ಕಂಡಾಗ ಯಾಕೋ ನಮಗೇ ಮುಜುಗರು ಆಗುವ ಸಾಧ್ಯತೆಗಳು ಹೆಚ್ಚಾಗುತ್ತವೆ. ವಿದ್ವಾಂಸರು ಬರೆದುದೆನ್ನೆಲ್ಲ ಒಪ್ಪಿಕೊಂಡು ಬಿಟ್ಟರೆ ತಲೆಯಲ್ಲಿ ಪ್ರಶ್ನೆಗಳೇ ಹುಟ್ಟುವುದಿಲ್ಲ ! ಹಾಗೆ ಪ್ರಶ್ನೆಗಳು ಹುಟ್ಟದಿದ್ದರೆ ನಾವು ಮನುಷ್ಯರು ಅನ್ನಿಸಿಕೊಳ್ಳುವುದಕ್ಕೆ, ನಮಗೂ ಒಂದು ವ್ಯಕ್ತಿತ್ವ ಇದೆ ಎಂದು ಹೇಳಿಕೊಳ್ಳುವುದಕ್ಕೆ ನಾಚಿಕೆಯಾಗಬೇಕು. ಉಜಿರೆಯಲ್ಲಿ ಒಂದು ರಾಷ್ಟ್ರೀಯ ವಿಚಾರ ಸಂಕಿರಣದ ಸಂದರ್ಭದಲ್ಲಿ ಸೇರಿದ ನಮ್ಮಲ್ಲಿ ಒಂದು ಪ್ರಶ್ನೆ ಹೀಗಿತ್ತು. ಶಂಕರ ಭಟ್ಟರು ಬರೆಯುತ್ತಾರೆ. ಅವರಿಗೆ ಕನ್ನಡದ ವ್ಯಾಕರಣ ಮತ್ತು ಶಾಸ್ತ್ರಗಳ ಪರಿಚಯವಿದೆ. ಆದರೂ ಅಸಂಬದ್ಧವಾಗಿ ಬರೆಯತ್ತಾರೆ ಮತ್ತು ಅದಕ್ಕೆ ಉತ್ತರವನ್ನು ಕೇಳಿದರೆ ಅವರು ಏನನ್ನೂ ಹೇಳುವುದಿಲ್ಲ ! ಅಂದರೆ ಅವರು ಬರೆದ ಪುಸ್ತಕದ ಬಗ್ಗೆಯೇ ವಿಮರ್ಶೆ ನಡೆದಾಗಲೂ, ಪ್ರೀತಿಯಿಂದ ಆ ‘ಕಾರ್ಯ’ಕ್ಕೆ ಅವರನ್ನು ಆಹ್ವಾನಿಸಿದರೂ ಅವರು ನಮ್ಮನ್ನು ನಿರಾಸೆಗೊಳಿಸುತ್ತಾರೆ !
ರವಿವಾರದ ವಿಜಯ ಕರ್ನಾಟಕದಲ್ಲಿ (9-9-2012) ಶಂಕರಭಟ್ಟ ಅವರು ಒಂದು ಲೇಖನ ಬರೆದಿದ್ದಾರೆ. ಅದರ ಶೀರ್ಷಿಕೆ ‘ಓದುವ ಹಾಗೆಯೇ ಬರೆಯುವುದು’ ಎಂದಿದೆ. ಅಂದರೆ ಸಂಸ್ಕøತದಿಂದ ಎರವಲು ಪಡೆದ ಪದಗಳನ್ನು ನಾವು ಯಾವ ರೀತಿ ಉಚ್ಚರಿಸುತ್ತೇವೆಯೋ ಅದೇ ರೀತಿಯಲ್ಲಿ ಬರೆಯಬೇಕೆಂದು ಸೂಚಿಸುತ್ತಾರೆ ! ಇದು ಆಂಡಯ್ಯನ ವಾದ ಎಂದರೂ ನಡೆಯುತ್ತದೆ ! ಶಂಕರಭಟ್ಟರು ಹಿರಿಯರು, ವಿದ್ವಾಂಸರು ಎನ್ನುವುದು ಬೇರೆ ಮಾತು. ಆದರೆ ಅದನ್ನೇ ಮುಂದು ಮಾಡಿಕೊಂಡು ಕನ್ನಡಿಗರನ್ನು ಹಾದಿ ತಪ್ಪಿಸುವ ನಡೆಯನ್ನು ಅವರು ಮುಂದುವರಿಸಿರುವುದು ಮಾತ್ರ ಸಮಂಜಸವೆಂದು ತೋರುತ್ತಿಲ್ಲ !
ಶಂಕರ ಭಟ್ಟರು ನಮ್ಮನ್ನು ಒಂದು ರೀತಿಯಲ್ಲಿ ಕನ್‍ಫ್ಯೂಜ್ ಮಾಡುತ್ತಿದ್ದಾರೆ ಎಂದೆನಿಸುತ್ತದೆ ನನಗೆ ! ಜನಸಾಮಾನ್ಯರಿಗೆ ಏನು ಬೇಕು ಎನ್ನುವುದನ್ನು ಅರಿತುಕೊಳ್ಳದ ಮತ್ತು ಆ ಬಗ್ಗೆ ಅನುಭವ ಇಲ್ಲದಿರುವ ಅವರು ತಮ್ಮ ಗೂಡಿನೊಳಗೆ ಕುಳಿತುಕೊಂಡು ತಮಗೆ ತೋಚಿದಂತೆ ವಿಚಾರಗಳನ್ನು ಹರಿಯಬಿಡುತ್ತಿರುವುದು ಸರ್ವಥಾ ಸರಿಯಲ್ಲ. ಯಾಕೆಂದರೆ ಅವರು ಉಪಯೋಗಿಸುವ ಕನ್ನಡ ಪದಗಳೇ ಒಮ್ಮೊಮ್ಮೆ ಕನ್ನಡಿಗರಿಗೆ ಅರ್ಥವಾಗಲಾರವು ! ‘ತಿಳಿವಿಗರು’, ‘ಹೊರಪಡಿಕೆಗಳು’, ‘ಎತ್ತುಗೆ’, ‘ಬರಿಗೆ’  ಮೊದಲಾದ ಪದಗಳು ಜನಸಾಮಾನ್ಯರಿಗೆ ಹೇಗೆ ಅರ್ಥವಾಗುತ್ತವೆ ? ನಿಮ್ಮ ಬುದ್ಧಿಶಕ್ತಿ ಅಪಾರವಾಗಿರಬಹುದು. ಆದರೆ ಅದನ್ನು ದಯವಿಟ್ಟು ಜನಸಾಮಾನ್ಯರ ಮೇಲೆ ಹೇರಬೇಡಿ !
ಇಡೀ ಲೇಖನವನ್ನು ಕಂಡಾಗ ಸಂಸ್ಕøತ ಭಾಷೆಯ ಅಕ್ಷರಗಳನ್ನು ಬಳಕೆ ಮಾಡುವುದರ ಬಗ್ಗೆ ಗಂಭೀರ ಆರೋಪಗಳನ್ನು ಎತ್ತಿದ್ದಾರೆ. ಆದರೆ ತಾವೇ ತಮಗೇ ಗೊತ್ತಿಲ್ಲದಂತೆ ಅವುಗಳನ್ನು ಬಳಸುತ್ತಾರೆ ! ‘ಸುಲಭ>ಸುಲಬ, ಖುಷಿ>ಕುಶಿ, ಪೂಜ್ಯಭಾ>ಪೂಜ್ಯಬಾವ ಮೊದಲಾಗಿ ಬಳಸಿದ್ದಾರೆ. ಇದು ಕನ್ನಡ ಪ್ರೇಮವೇ ? ‘... ಮಾರ್ಪಾಡನ್ನು ಮಾಡಿರದಿದ್ದರೆ, ಇವತ್ತು ಕನ್ನಡ ಬರಹವನ್ನು ಕಲಿಯುವ ಮತ್ತು ಬಳಸುವ ಕೆಲಸ ಇನ್ನಶ್ಟು ತೊಡಕಿನದಾಗುತ್ತಿತ್ತು’ ಎನ್ನುವ ಅವರಿಗೆ ತಾವು ಮಾಡುತ್ತಿರುವುದೂ ತೊಡಕಿನ ಸೃಷ್ಟಿಯೇ ಅಂತ ಯಾಕೆ ಅನ್ನಿಸುತ್ತಿಲ್ಲ ? ಮಹಾಪ್ರಾಣವನ್ನು ತಿರಸ್ಕರಿಸುವ ಮೂಲಕ ಬಳಕೆಯಲ್ಲಿರುವ ಕನ್ನಡ ಪದಗಳ ಅರ್ಥವ್ಯತ್ಯಾಸವಾಗುವುದಿಲ್ಲವೆ ? ನಾನು ಬದಲಾವಣೆಯ ಗಾಳಿ ಬೀಸುತ್ತಿದ್ದೇನೆ ಎಂದು ಅವರು ತಿಳಿದುಕೊಂಡಿದ್ದರೆ ಯಾಕೋ ಸಮಂಜಸವೆನಿಸಲಾರದು ! ಆಡುಭಾಷೆಯನ್ನು ಹದಗೆಡಿಸಿ ಕ್ಲಿಷ್ಟ ಮಾಡುವ ಪರಿ ಒಂದು ರೀತಿಯಲ್ಲಿ ನಗುವನ್ನೂ ತರುತ್ತದೆ !
ಶಂಕರ ಭಟ್ಟರ ಲೇಖನವಷ್ಟೇ ಅಲ್ಲ. ಸಿದ್ಧರಾಜು ಬೋರೇಗೌಡ ಅವರ ಲೇಖನ ‘ಬಾರತದವರು ಅಮೆರಿಕಾದವರಿಂದ ಆಳಗ್ಗಳೆ ಮತ್ತು ಆಳೀಳಿಗೆಯ ಪಾಟ’ (ವಿಜಯ ಕರ್ನಾಟಕ : 19-09-2012) ಕೂಡ ಇದೇ ರೀತಿಯ ಗೊಂದಲಗಳನ್ನು ಹುಟ್ಟು ಹಾಕುವಂತಿದೆ. ಯಾಕೆಂದರೆ ಲೇಖಕರು ಕನ್ನಡ ಲಿಪಿ ಸುದಾರಣೆಯಲ್ಲಿ ನುಡಿಯರಿಗೆ ಶಂಕರ ಬಟ್ಟರ ಶಾಲೆಗೆ ಸೇರಿದವರು. ಅಮೆರಿಕಾದ ಸ್ಕ್ರಿಪ್ಟ್ಸ್ ಅರಕೆ ಸಂಸ್ತೆಯಲ್ಲಿ ಬುಡಕಣಗಳ ಮೇಲೆ ಪಿಎಚ್ಡಿ ಮಾಡುತ್ತಿದ್ದಾರೆ ! ಇವರು ಬಳಸುವ ಪದಗಳು ಕೂಡ ಸಾಮಾನ್ಯರಿಗೆ ಅರ್ಥವಾಗುವ ಮಟ್ಟದಲ್ಲಿ ಇಲ್ಲ. ಶೀರ್ಷಿಕೆಯಲ್ಲಿಯೇ ಇರುವ ಆಳಗ್ಗಳೆ, ಆಳೀಳಿಗೆ ಹಾಗೂ ಲೇಖನದಲ್ಲಿ ಬಂದಿರುವ ಒಪ್ಪುಕೂಟ, ಮೇಟಿಯಾಳ್ಕೆ, ಆಳ್ಕೆ, ಈಳಿಗೆ, ಬೇರ್ಮೆ ಹಲತನ, ಹೆಗ್ಗಳ, ಮಿಂಬಲೆ ಮೊದಲಾದ ಪದಗಳನ್ನು ಒತ್ತಾಯಪೂರ್ವಕವಾಗಿಯೋ ಇಲ್ಲವೆ ಹಾಗೆ ಬರೆಯಲೇ ಬೇಕು ಎಂಬ ಹಠದಿಂದಲೋ ಉಪಯೋಗಿಸಿದ್ದಾರೆ !
ಸಿದ್ಧರಾಜು ಅವರೇ ಲೇಖನದಲ್ಲಿ ಒಂದು ಕಡೆ ‘ಹೆಚ್ಚೆಣಿಕೆಯವರ ತೀಟೆಗಾಗಿ ಕೊರೆಯೆಣಿಕೆಯವರನ್ನು ತೊಂದರೆಗೀಡು ಮಾಡುವುದು ಆಳಾಳ್ಕೆಯಾಗದು’ ಎನ್ನುತ್ತಾರೆ. ಹಾಗಾದರೆ ಶಂಕರಭಟ್ಟರು ಮತ್ತು ಅವರ ಅನುಯಾಯಿಗಳಾದ ಸಿದ್ಧರಾಜು ಅವರು ಮಾಡುತ್ತಿರುವುದದರೂ ಏನು ? ಕನ್ನಡದ ಬಗ್ಗೆ ತುಂಬ ಕಾಳಜಿ ಇದೆ. ಅದು ಉಳಿಯಬೇಕು, ಬೆಳೆಯಬೇಕು ಎಂಬುದು ಎಲ್ಲ ಕನ್ನಡಿಗರ ಆಶಯವಾಗಿರುತ್ತದೆ. ಆದರೆ ಅದನ್ನು ಹೀಗೇ ಇರಬೇಕು ಎಂದು ನಿರ್ದೇಶನ ಮಾಡಿ ಜನರ ಮೇಲೆ ಹೇರುವುದು ಸರ್ವಥಾ ಸರಿಯಲ್ಲ ! ಶಂಕರ ಭಟ್ಟರಂತೂ ‘ಅಕ್ಷರ’ವನ್ನು ‘ಬರಿಗೆ’ ಎಂದೇ ಕರೆಯಲು ಆರಂಭಿಸಿದ್ದಾರೆ ! ಭಾಷೆಯೊಂದರಲ್ಲಿ ಕಡಿಮೆ ಅಕ್ಷರಗಳಿದ್ದಷ್ಟೂ ಆ ಭಾಷೆ ಬೆಳವಣಿಗೆ ಹೊಂದುತ್ತದೆ ಎಂಬ ವಿಚಾರವನ್ನು (ವಿ.ಕ. 21-10-2012) ಪ್ರತಿಪಾದಿಸತೊಡಗಿದ್ದಾರೆ. ಇಲ್ಲಿ ಹೊಸದೇನೂ ಇಲ್ಲ. ಕನ್ನಡದ್ದೇ ಎನ್ನುವ ಪದಗಳನ್ನು ಬಿಟ್ಟರೆ ವಿಚಾರವೆಲ್ಲ ಹಳೆಯದೇ. ಕೇಶಿರಾಜ ಕೂಡ ಅಕ್ಷರಗಳನ್ನು ಕಡಿಮೆ ಮಾಡಲು ಹೆಣಗಾಡಿದ್ದಾನೆ ; ಭಾಷಾಶಾಸ್ತ್ರಜ್ಞರೂ ಈ ಬಗ್ಗೆ ಈಗಾಗಲೇ ಚರ್ಚೆ ನಡೆಯಿಸಿದ್ದಾರೆ.
ಇಲ್ಲಿ ಒಂದು ವಿಚಾರವನ್ನು ಸ್ಪಷ್ಟಪಡಿಸಲೇಬೇಕು. ಭಾಷೆಯ ಜಾಯಮಾನಕ್ಕೆ ತಕ್ಕಂತೆ ಅಕ್ಷರಗಳು ರೂಪುಗೊಂಡಿರುತ್ತವೆ. ಈ ವಿಚಾರವನ್ನು ಶಂಕರ ಭಟ್ಟರು ಯಾಕೆ ಮರೆತಿದ್ದಾರೋ ತಿಳಿಯದು. ಸಮಸ್ಕøತದಲ್ಲಿ ಕಡಿಮೆ ಅಕ್ಷರಗಳಿರುವುದನ್ನು ಹೇಳಿರುವ ಅವರು ಅದೇ ದೇವನಾಗರಿ ಲಿಪಿಯನ್ನು ಬಳಸಿಕೊಂಡು ಬೆಳೆದು ಬಂದಿರುವ ಹಿಂದಿ, ಮರಾಠಿ ಬಗ್ಗೆ ಮಾತನಾಡುವುದಿಲ್ಲ. ಮರಾಠಿ ಅಥವಾ ಹಿಂದಿಯಲ್ಲಿ ‘ಇ, ಈ, ಉ, ಊ’ ಇವೆಯಾದರೂ ‘ಎ, ಒ’ಗಳು ಇಲ್ಲ. ಹೀಗಾಗಿಯೇ ಮರಾಠಿಗರು ಮಾತನಾಡುವಾಗ ‘ಹೆಡ್ಮಾಸ್ಟರ್’ ಎನ್ನುವುದನ್ನು ‘ಹೇಡಮಾಸ್ಟರ್’ ಎಂದೇ ಉಚ್ಛರಿಸುತ್ತಾರೆ. ಹಾಗೆಯೇ ‘ಒದರುವ’ ಎಂಬುದನ್ನು ‘ಓದರುವ’ ಎಂದೇ ಮಾತಿನಲ್ಲೂ ಬರವಣಿಗೆಯಲ್ಲೂ ಬಳಸುತ್ತಾರೆ. ಹೀಗಾದಾಗ ಆಯಾ ಪ್ರದೇಶದ ಭಾಷೆಗಳ ಮಿತಿಯನ್ನು ತಿಳಿದುಕೊಂಡಿರಬೇಕು. ಕೇವಲ ಆಡುಮಾತುಗಳನ್ನೇ ಇಟ್ಟುಕೊಂಡು ವಾದಕ್ಕೆ ಇಳಿಯುವ ಶಂಕರ ಭಟ್ಟರು ಇಂಥ ಸೂಕ್ಷ್ಮಗಳನ್ನೂ ಅರಿತಿರಬೇಕಾಗುತ್ತದೆ. ಅಕ್ಷರಗಳು ಹೆಚ್ಚೋ, ಕಡಿಮೆಯೋ ಎಂಬುದು ಭಾಷಾ ಬೆಳವಣಿಗೆಗೆ ಪೂರಕವಾದ ಸಂಗತಿಯಲ್ಲ ಎಂಬುದನ್ನು ಮೊದಲು ಅವರು ಗಮನಿಸಬೇಕು. ಚೀನಿ ಭಾಷೆಯಲ್ಲಿ ಎಷ್ಟು ಅಕ್ಷರಗಳಿವೆ ಎಂಬುದನ್ನು ಅವರು ಅರಿತಿದ್ದಾರೆ. ಹಾಗಂತ ಚೀನಿ ಭಾಷೆ ನಶಿಸಿದೆಯೆ ? ಇಲ್ಲ. ಇವತ್ತು ಆ ದೇಶದ ಪ್ರತಿಯೊಂದು ಉತ್ಪನ್ನಗಳ ಮೇಲೆ ಆ ಭಾಷೆಯ ಬಳಕೆ ಇದೆ. ಕನ್ನಡಕ್ಕೆ ಕುತ್ತು ಇರುವುದು ಇಂಥಲ್ಲಿಯೇ ! ವಿನಃ ಶಂಕರ ಭಟ್ಟರು ಅಥವಾ ಅವರ ಅನುಯಾಯಿಗಳು ಹೇಳುವ ಕಾರಣಗಳಿಂದಲ್ಲ ಎನ್ನುವುದನ್ನು ನಾವೆಲ್ಲ ಅರಿಯಬೇಕಿದೆ. ಒಂದು ನಾಡಿನ ಭಾಷೆಯೊಂದು ಅನ್ನ ಕೊಡುವ ತಾಕತ್ತು ಹೊಂದಿರಬೇಕು ; ಆ ನಾಡಿನಲ್ಲಿ ಉತ್ಪನ್ನವಾಗುವ ಎಲ್ಲ ವಸ್ತುಗಳ ಮೇಲೆ ಅಲ್ಲಿಯ ಭಾಷೆಯೇ ಪ್ರಮುಖವಾಗಿ ಕಾಣಿಸಬೇಕು. ಅಂದಾಗ ಮಾತ್ರ ಆ ನಾಡಿನ ಭಾಷೆ ಉಳಿಯುತ್ತದೆ ; ಬೆಳೆಯುತ್ತದೆ. ಒಣ ವೇದಾಂತಕ್ಕಿಂತ ವಾಸ್ತವವನ್ನು ತಿಳಿದುಕೊಳ್ಳುವುದು ಉತ್ತಮ.
ಇದೆಲ್ಲ ಬಿಟ್ಟು ಅಕ್ಷರಗಳನ್ನು ಕಡಿಮೆ ಮಾಡಬೇಕು. ಪದಗಳನ್ನು ‘ಹೀಗೆ’ ಪರಿವರ್ತಿಸಿಕೊಳ್ಳಬೇಕು ಎಂಬುದೆಲ್ಲ ಪ್ರಚಾರಕ್ಕಾಗಿ ಮಾಡುವ ಒಂದು ಗಿಮಿಕ್ಕಾಗಿ ತೋರುತ್ತದೆ ! ಇದರಿಂದ ಯಾರಿಗೂ ನಯಾಪೈಸೆಯ ಲಾಭವಿಲ್ಲ. ‘ಎಲ್ಲರ ಕನ್ನಡ’ ಎಂದು ಹೇಳುತ್ತಲೇ ಕನ್ನಡವನ್ನು ತೀರ ಸಂಕೀರ್ಣಗೊಳಿಸಿ ಹಾಳು ಮಾಡುತ್ತಿರುವ ಕೆಲಸ ನಿಲ್ಲಬೇಕು. ಅಂಥವರಿಗೆ ವೇದಿಕೆ ಒದಗಿಸುವ ವೇದಿಕೆಗಳೂ ಕೂಡ ನಿಷ್ಪಕ್ಷಪಾತದಿಂದ ಎಲ್ಲರ ಅಭಿಪ್ರಾಯಗಳಿಗೆ ಮನ್ನಣೆ ಕೊಡಬೇಕು.
ಹೀಗೇ ಇರಬೇಕು. ಹೀಗೆಯೇ ಬರಬೇಕು ; ಬರೆಯಬೇಕು ಎಂಬ ವಿಚಾರಗಳನ್ನೇ ಇಟ್ಟುಕೊಂಡಿದ್ದ ಆಂಡಯ್ಯ ಕೂಡ ಕಬ್ಬಿಗರ ಕಾವ ಬರೆದ. ಆದರೆ ಅದರ ಪ್ರಭಾವ ಏನಾಯಿತು ? ಏನಾದರೂ ಬದಲಾವಣೆ ಸಾಧ್ಯವಾಯಿತೇ. ಈಗ ‘ಕಬ್ಬಿಗರ ಕಾವ’ ಅರ್ಥ ಮಾಡಿಕೊಳ್ಳುವವರೆಷ್ಟು ಇದ್ದಾರೆ ? ಇಂಥ ವಿಷಯಗಳನ್ನೆಲ್ಲ ಮನಗಾಣದೇ ವಿಚಾರಗಳನ್ನು, ಅಭಿಪ್ರಾಯಗಳನ್ನು ಹೇರುವುದು ಸರ್ವಥಾ ಸರಿಯಲ್ಲ. ಬಹುಶಃ ಆಂಡಯ್ಯನ ಅನುಯಾಯಿಗಳು ಇನ್ನೂ ಇದ್ದಾರೆ ಎನ್ನುವುದೇ ಸೋಜಿಗ ! ಮತ್ತೇ ನಾವು ಆಂಡಯ್ಯ ಆಗುವುದು ಬೇಡ !

Wednesday, September 19, 2012

मातृभाषा


हल्ली विविध प्रांतीय भाषांमध्ये चौथी-पाचवीपासून इंग्रजीचा संपर्क होईल, असे पाठ्यक्रम तयार केले आहेत. उच्च शिक्षण घेतेवेळी बालकाची आकलनक्षमता वाढलेली असते. तो इंग्रजी शब्दांना सहजपणे परिचित होतो व आत्मसात करतो. अगदी लहानपणी मुलगा इंग्रजीविषयी अनभिज्ञ असतो व त्याची आकलनशक्तीही कमी असते. म्हणून त्याच्यावर परकीय भाषेचा बोझा टाकणे अयोग्य आहे. त्याने केलेले इंग्रजी पाठांतर हे नुसती घोकंपट्टी असते. आपला मुलगा मातृभाषेतून शिकला, तर तो कमजोर राहील, हा गैरसमजच पालकांनी मनातून काढून टाकला पाहिजे. शेजार्‍याचा मुलगा इंग्रजी माध्यमातून शिकतो म्हणून आपल्याही मुलाला इंग्रजीतूनच शिकवावे, ही मानसिकता बरोबर नाही. केवळ एक फॅशन म्हणून किंवा इतरांनी कौतुक करावे म्हणून पहिल्या दिवसापासून इंग्रजी माध्यमाच्या शाळेत टाकून मुलाचे नुकसान करणे योग्य नाही. आपल्या मातृभाषेवर प्रेम करणे, त्यातून शिक्षण घेणे गौरवास्पद आहे.

काही काही पालक आपल्या मुलांवर कुटुंबातील व्यक्तींशी रोजचे व्यावहारिक बोलणे सुद्धा इंग्रजीमधून करण्याची सक्ती करतात. हा तर अतिरेकच झाला म्हणायचा. हे म्हणजे आपली सांस्कृतिक अस्मिताच नष्ट करणे होय. मुलांच्या व्यक्तिमत्त्व विकासात तो मोठा अडसर ठरू शकतो.

स्वातंत्र्यपूर्व काळात असा ठराव झाला होता की, स्वतंत्र भारताची राष्ट्रभाषा हिंदी असेल. ठिकठिकाणचे लोक हिंदी शिकू लागले. आश्‍चर्याची गोष्ट म्हणजे यात तत्कालीन दक्षिणी प्रांत मद्रास, केरळ आघाडीवर होते. हिंदी भाषेला वातावरण अनुकूल होते. स्वातंत्र्यप्राप्तीनंतर केंद्रीय सचिवांचा एक गट पंतप्रधानांकडे गेला आणि विनंती केली की, देशाचा संपूर्ण कारभार राष्ट्रभाषा हिंदीतून चालविण्याची आमची तयारी आहे. आपण तशा लेखी आज्ञा द्याव्या. नोकरशाहीबद्दल सामान्यपणे अशी ओरड असते की, सरकारचे चांगले निर्णय ते अमलात आणीत नाहीत, इथे तर खुद्द नोकरशहांनीच हिंदीतून राज्यकारभार करण्याचा प्रस्ताव ठेवला होता. मग माशी कुठे शिंकली? तर आमचे लाडके पंतप्रधान पंडित जवाहरलाल नेहरू, ज्यांच्याविषयी असे म्हटल्या जाते की ते संस्कृतीने मुसलमान, शिक्षणाने इंग्रज तर केवळ अपघातानेच हिंदू होते, ते एकाएकी भडकले व म्हणाले, ‘‘छे, छे हिंदी ही काय भाषा आहे? स्वतंत्र भारताची राज्यकारभाराची भाषा इंग्रजीच राहणार.’’ स्वराज्य आलं, पण स्वभाषा न आल्यामुळे स्वराज्याचा अस्मिताविहीन प्रवास कण्हत कुंथत कसा तरी चालू आहे.

पहिल्या जागतिक महायुद्धाने (१९१४-१८) तुर्कस्थानला एक कर्तबगार महान राष्ट्रनेता दिला. त्याचं नाव कमाल पाशा. कमाल द-अतातुर्क. कमाल रणांगणावर तर तळपला होताच, पण समाजजीवन आणि राज्यकारभारातही त्याने क्रांती घडवली. कमालने तुर्कस्थानात आधुनिक सुधारणेचे युग आणले. तुर्की फेज टोपी, बुरखा, पैजामा शेरवानी, दाढी इत्यादी गोष्टी हद्दपार केल्या. शरियत कायद्याच्या जागी आधुनिक कायदा आला. युरोपियन पद्धतीचा सुटाबुटाचा पोषाख आला, स्त्रिया बुरख्याविना मोकळेपणाने फिरू लागल्या. बराचसा कारभार इंग्रजीतून चालू होता. लोकांना व अधिकार्‍यांना वाटलं की राज्यकारभाराची भाषा इंग्रजीच चालू राहील. कमालने अधिकार्‍यांशी विचारविनिमय केला आणि लेखणीच्या एका फटकार्‍यानिशी दुसर्‍याच दिवशीपासून राज्यकारभार तुर्की भाषेतून झाला पाहिजे असे आदेश दिले. सुरुवातीला थोडा त्रास झाला, पण नंतर हळूहळू सर्व सुरळीत होत गेले. समाजाची राष्ट्रीय अस्मिता जागृत ठेवण्यासाठी स्वभाषा किती निर्णायक ठरू शकते, याची पुरेपूर जाण कमाल पाशाला होती. शिवाय कुणाही भाषिक गटाला खूष करण्याची मतांचे राजकारण करण्याची त्याला गरज नव्हती. म्हणूनच राष्ट्रीय हिताचे निर्णय त्याला कणखरपणे घेता आले. राबवता आले. ती राजकीय इच्छाशक्ती कमाल पाशाजवळ होती. म्हणून तो महान नेता ठरला.

एकदा राष्ट्रीय स्वयंसेवक संघाचे शिबिर चालू होते. त्यात जिज्ञासा समाधान हा प्रश्‍नोत्तराचा कार्यक्रम होता. प्रशिक्षणार्थ्यांनी प्रश्‍न विचारायचा व सरसंघचालकांनी उत्तर देऊन समाधान करायचे, असा तो कार्यक्रम होता.

एका शिबिरार्थ्याने सरसंघचालकांना विचारले, ‘हल्लीच्या इंग्रजी भाषेच्या वाढत्या प्रभावात मातृभाषेतून शिक्षण घेणे योग्य आहे काय?’ प्रश्‍न फार चांगला होता. त्यावर सरसंघचालकांनी मार्मिक उत्तर दिले, ते असे- केवळ प्राथमिकच नव्हे, तर माध्यमिक वर्गांपर्यंतचे शिक्षण देखील मातृभाषेतून झाले पाहिजे. त्यामुळे विद्यार्थ्यांची आकलन क्षमता वाढते व विषय समजायला सोपे जाते. माध्यमिक वर्गापर्यंत ही प्रक्रिया सुरू असते. नंतर दुसर्‍या कुठल्याही भाषेतून संगणकाप्रमाणे आपला मेंदू मातृभाषेत त्याचे भाषांतर त्वरित करतो आणि निर्णयक्षमता वाढवितो.

आपले म्हणणे सोपे करून सांगण्याकरिता महाभारतातील उदाहरण देत म्हणाले, ‘महाभारतातील पितामह भीष्म, भीम यांच्याबद्दल आपल्याला माहिती असल्याने ‘भीष्मप्रतिज्ञा, भीमपराक्रम’ म्हणजे काय ते लगेच कळते. त्याचा अर्थही कळतो. ‘हरक्युलस’बद्दल माहिती असेल तर ‘हरक्युलिअन टास्क’ म्हणजे काय ते कळेल. ‘राधिके तुने मेरी बन्सुरी चुरायी.’ आता ज्याला हे पवित्र नाते ठावूक आहे त्याला यातील भावार्थ कळेल. पण ज्याला हे नाते माहिती नाही त्याला त्याचा अर्थ आणि भावार्थ कळणार नाही. आजच्या इंग्रजी माध्यमाप्रमाणे तो त्याचे भाषांतर असे करेल- ‘राधा हॅज स्टोलन माय फ्ल्यूट देन व्हॉट? गो टु पोलिस स्टेशन ऍण्ड रिपोर्ट.’ प्रश्‍न करणार्‍या शिबिरार्थ्याला त्याच्या प्रश्‍नाचे उत्तर मिळाले होते.

                                                                        वसंत वि. कुळकर्णी, नागपूर
ಕೃಪೆ : ತರುಣ ಭಾರತ (ಮರಾಠಿ ದೈನಿಕ)

Saturday, June 16, 2012

ಇಂಗ್ಲಿಷ್ ಸಂವಹನಕ್ಕಾಗಿ ಮಾತ್ರವಲ್ಲ, ಜಗತ್ತಿನ ಜ್ಞಾನ, ಸಾಹಿತ್ಯ ಗ್ರಹಿಸುವ ಕಿಟಕಿ !


                               - ಡಾ. ನಟರಾಜ್ ಹುಳಿಯಾರ್

ಎರಡು ವರ್ಷಗಳ ಕೆಳಗೆ ಗುಲ್ಬರ್ಗ ಸೆಂಟ್ರಲ್ ಯೂನಿವರ್ಸಿಟಿಯ ಇಂಗ್ಲಿಷ್ ವಿಭಾಗದ ಮುಖ್ಯಸ್ಥನಾಗಿ ಕೆಲಸ ಮಾಡುತ್ತಿದ್ದಾಗ ಒಂದು ಅಂಶವನ್ನು ಗಮನಿಸಿದ್ದೆ: ಇಂಗ್ಲಿಷ್ ಎಂ.ಎ. ಓದುತ್ತಿದ್ದ ಒಟ್ಟು ಅರವತ್ತು ವಿದ್ಯಾರ್ಥಿ, ವಿದ್ಯಾರ್ಥಿನಿಯರಲ್ಲಿ ಕೇವಲ ಇಬ್ಬರು ಮಾತ್ರ ತಪ್ಪಿಲ್ಲದೆ ಇಂಗ್ಲಿಷ್ ಮಾತಾಡಬಲ್ಲವರಾಗಿದ್ದರು.

ಇನ್ನುಳಿದ ವಿದ್ಯಾರ್ಥಿಗಳಿಗೆ ಈ ಸಾಮರ್ಥ್ಯ ಇಲ್ಲದಿರುವುದಕ್ಕೆ ಅವರ ಸಾಮಾಜಿಕ ಹಿನ್ನೆಲೆಯ ಜೊತೆಗೇ ಅವರೆಲ್ಲ ಇಂಗ್ಲಿಷ್ ಕಲಿಕೆಯನ್ನು ತಡವಾಗಿ ಆರಂಭಿಸಿದ್ದು ಕೂಡ ಕಾರಣವಾಗಿತ್ತು. ಈ ಸ್ಥಿತಿಯನ್ನು ನೋಡಿದಾಗ, ಇಂಗ್ಲಿಷ್ ಭಾಷೆಯನ್ನು ತಡವಾಗಿ ಕಲಿಯುತ್ತಿರುವವರ ಕಷ್ಟಗಳು ನನಗೆ ಮನದಟ್ಟಾಯಿತು. ಬಾಲ್ಯದಲ್ಲಿ ಎಲ್ಲ ಮಕ್ಕಳಿಗೂ ಸಾಧ್ಯವಿರುವ ಭಾಷಾಕಲಿಕೆಯ ಸಾಮರ್ಥ್ಯವನ್ನು ಸರಿಯಾಗಿ ಬಳಸಿಕೊಳ್ಳದಿರುವುದೇ ಮಕ್ಕಳ ಕಷ್ಟಕ್ಕೆ ಕಾರಣವಾಗಿತ್ತು.


ಈಗಾಗಲೇ ಸಿದ್ಧವಾಗಿರುವ ಹಾಗೆ ಬಾಲ್ಯದಲ್ಲಿ ಸಹಜವಾಗಿ ಇರುವ `ಲಿಂಗ್ವಿಸ್ಟಿಕ್ ಪ್ಲಾಸಿಸಿಟಿ` ಅಥವಾ ಭಾಷಾಕಲಿಕೆಯ ಸಾಮರ್ಥ್ಯದಿಂದಾಗಿ ಮಕ್ಕಳು ನಾಲ್ಕು ಭಾಷೆಗಳನ್ನು ಕಲಿಯಬಲ್ಲರು. ಆದರೆ ಆ ಹಂತ ದಾಟಿದ ನಂತರ ಇಂಗ್ಲಿಷ್ ಕಲಿಕೆಯನ್ನು ಆರಂಭಿಸಿದ ಮಕ್ಕಳು ಅನೇಕ ಬಗೆಯ ಹಿನ್ನಡೆ, ಕೀಳರಿಮೆಗಳನ್ನು ಅನುಭವಿಸುತ್ತಿರುವುದನ್ನು ದಿನನಿತ್ಯ ನೋಡುತ್ತಿದ್ದೇವೆ.


ಆದರೆ ನಮ್ಮ ಸರ್ಕಾರಗಳು ಖಾಸಗಿ ಶಾಲೆಗಳಲ್ಲಿ ಇಂಗ್ಲಿಷ್ ಮಾಧ್ಯಮ ಆರಂಭವಾದ ನಂತರವೂ ಎಲ್ಲ ಶಾಲೆಗಳಲ್ಲೂ ಕನ್ನಡ ಮಾಧ್ಯಮವನ್ನು ಜಾರಿಗೆ ತರುತ್ತೇವೆಂದು ಹುಸಿ ಭರವಸೆ ಕೊಡುತ್ತಾ ಕಳೆದ ಇಪ್ಪತ್ತು ವರ್ಷಗಳಿಂದ ಕಾಲ ತಳ್ಳುತ್ತಲೇ ಬಂದವು. ಸರ್ಕಾರಿ ಶಾಲೆಗಳ ಮಕ್ಕಳು ಹಿಂದುಳಿಯುತ್ತಲೇ ಬಂದವು. ಆರು ವರ್ಷಗಳ ಕೆಳಗೆ ವಿವಾದ ಕೋರ್ಟಿನಲ್ಲಿದೆ ಎಂಬ ನೆಪವೊಡ್ಡಿ ಕೆಲವರು ಸರ್ಕಾರಿ ಶಾಲೆಗಳಲ್ಲಿ ಇಂಗ್ಲಿಷನ್ನು ಒಂದು ಭಾಷೆಯಾಗಿ ಕಲಿಸಲೂ ಅಡ್ಡಗಾಲು ಹಾಕಲು ಯತ್ನಿಸಿದ್ದರು.

ಇಷ್ಟಾಗಿಯೂ ಕಳೆದ ನಾಲ್ಕು ವರ್ಷಗಳಲ್ಲಿ ಇಂಗ್ಲಿಷನ್ನು ಒಂದು ಭಾಷೆಯಾಗಿ ಸುಮಾರಾಗಿಯಾದರೂ ಕಲಿಯಲೆತ್ನಿಸಿರುವ ಮಕ್ಕಳಿಗೆ ಆರನೇ ತರಗತಿಯಿಂದ ಇಂಗ್ಲಿಷ್ ಮಾಧ್ಯಮವನ್ನು ಜಾರಿಗೆ ತರಲು ಸರ್ಕಾರ ನಿರ್ಧರಿಸಿದೆ. ಈ ನಿರ್ಧಾರ ಬದಲಾದ ಸಾಮಾಜಿಕ ಸನ್ನಿವೇಶದಲ್ಲಿ ಅನಿವಾರ್ಯವಾಗಿದೆ.


ಒಂದು ಅಂದಾಜಿನ ಪ್ರಕಾರ, ರಾಜ್ಯದಲ್ಲಿರುವ ಸುಮಾರು ಇಪ್ಪತ್ತೈದು ಸಾವಿರ ಪ್ರಾಥಮಿಕ ಸರ್ಕಾರಿ ಶಾಲೆಗಳಲ್ಲಿ ಕನ್ನಡ ಹಾಗೂ ಉರ್ದು ಮಾಧ್ಯಮದ ಶಾಲೆಗಳಿವೆ. ಹತ್ತು ಸಾವಿರಕ್ಕೂ ಹೆಚ್ಚು ಅಧಿಕೃತ, ಅನಧಿಕೃತ ಇಂಗ್ಲಿಷ್ ಮಾಧ್ಯಮ ಶಾಲೆಗಳಿವೆ.


ಅವುಗಳಲ್ಲೂ ಹಲಬಗೆಯ ಶ್ರೇಣಿಗಳಿವೆ. ಆದರೆ ಕರ್ನಾಟಕದ ಅರ್ಧ ಭಾಗಕ್ಕಿಂತ ಹೆಚ್ಚು ಮಕ್ಕಳು ಇಂಗ್ಲಿಷ್ ಮಾಧ್ಯಮದಲ್ಲಿ ಓದುತ್ತಿದ್ದಾರೆ. ಈ ಎರಡು ಬಗೆಯ ಶಾಲೆಗಳ ನಡುವಣ ಸ್ಪರ್ಧೆಗಳಲ್ಲಿ ಸರ್ಕಾರಿ ಶಾಲೆಗಳ ಮಕ್ಕಳು ಬಡತನ, ವಾತಾವರಣ ಹಾಗೂ ಇಂಗ್ಲಿಷ್ ಭಾಷೆಯ ಕೊರತೆಯ ಕಾರಣದಿಂದಾಗಿಯೂ ಹಿಂದೆ ಬಿದ್ದ್ದ್ದಿದಾರೆ.


ಮೊನ್ನೆ ತಾನೇ ಫಲಿತಾಂಶ ಪ್ರಕಟವಾಗಿರುವ ಪಿಯುಸಿ ನಂತರದ ಸಿ.ಇ.ಟಿ. ಪರೀಕ್ಷೆಯಲ್ಲಿ ಇಂಗ್ಲಿಷ್ ಮಾಧ್ಯಮದಲ್ಲಿ ಓದಿದ ತೊಂಬತ್ತರಷ್ಟು ಭಾಗದ ಮಕ್ಕಳು ರ‌್ಯಾಂಕುಗಳನ್ನು ಪಡೆದಿದ್ದಾರೆ. ಹೀಗಾಗಿ ಸರ್ಕಾರಿ ಶಾಲೆಗಳ ಮಕ್ಕಳಿಗೆ ಕೂಡ ಇಂಗ್ಲಿಷ್ ಮಾಧ್ಯಮದ ಅನುಕೂಲವನ್ನು ಒದಗಿಸುವುದು ಅನಿವಾರ್ಯ.


ಕಳೆದ ಮೂರು ವರ್ಷಗಳಲ್ಲಿ ಸರ್ಕಾರಿ ಶಾಲೆಗಳ ಶೇ.18 ಭಾಗ ಶಿಕ್ಷಕ, ಶಿಕ್ಷಕಿಯರು ಇಂಗ್ಲಿಷ್ ಮಾಧ್ಯಮದಲ್ಲಿ ಬೋಧಿಸಲು ತರಬೇತಿಗೊಂಡಿದ್ದಾರೆ; ಜೊತೆಗೆ, ಈಗಾಗಲೇ ವಿಜ್ಞಾನ ವಿಷಯಗಳನ್ನು ಇಂಗ್ಲಿಷಿನಲ್ಲಿ ಕಲಿಸುತ್ತಿರುವವರು ಹಾಗೂ ಇಂಗ್ಲಿಷ್ ಮಾಧ್ಯಮದಲ್ಲಿ ಡಿ.ಎಡ್ ಪದವಿ ಪಡೆದಿರುವವರು ಕೂಡ ಈ ಕಾರ್ಯಕ್ಕೆ ಸಿದ್ಧವಾಗಿದ್ದಾರೆ. ಆದ್ದರಿಂದ ಇಂಗ್ಲಿಷ್ ಮಾಧ್ಯಮ ಕೇವಲ ಕೆಲವು ಆಯ್ದ ಶಾಲೆಗಳಲ್ಲಿ ಮಾತ್ರ ಅಲ್ಲ; ಕರ್ನಾಟಕದಾದ್ಯಂತ ಮಾಧ್ಯಮಿಕ ಹಂತದಲ್ಲಿ ಐಚ್ಛಿಕವಾಗಿಯಾದರೂ ಆರಂಭವಾಗಬೇಕು.


ಆದರೆ, ಸರ್ಕಾರಿ ಶಾಲೆಗಳಲ್ಲಿ ಈಗಾಗಲೇ ಖಾಸಗಿ ಶಾಲೆಗಳಲ್ಲಿರುವಂತೆ ಅವೈಜ್ಞಾನಿಕವಾಗಿ, ಮಾತೃಭಾಷೆಯನ್ನು ಸಂಪೂರ್ಣವಾಗಿ ಹೊರಗಿಟ್ಟು ವಿಷಯಗಳನ್ನು ಕಲಿಸಬಾರದು. ಬದಲಿಗೆ ಮಾತೃಭಾಷೆ ಹಾಗೂ ಇಂಗ್ಲಿಷ್ ಎರಡೂ ಮಾಧ್ಯಮಗಳನ್ನು ಬೆರೆಸಿ ಕಲಿಸುವ ಕ್ರಮವನ್ನು ಆರಂಭಿಸಬೇಕು.


ಇದು ಯಾಂತ್ರಿಕ  ಅನುವಾದ ವಿಧಾನ ಅಲ್ಲ. ಬದಲಿಗೆ ಮಾತೃಭಾಷೆಯಲ್ಲಿ ವಿಷಯವನ್ನು ಗ್ರಹಿಸುವ ಹಾಗೂ ಅದನ್ನು ಎರಡು ಭಾಷೆಗಳಲ್ಲಿ ಮಂಡಿಸುವ ಸಾಮರ್ಥ್ಯವನ್ನು ಕಲಿಸುವ ವಿಧಾನ. ಅದಕ್ಕಾಗಿ ಒಂದು ಪಠ್ಯಪುಸ್ತಕದ ಎಡ ಪುಟದಲ್ಲಿ ಕನ್ನಡ ಅಥವಾ ಇನ್ನಿತರ ಮಾತೃಭಾಷೆಯಲ್ಲಿಯೂ ಹಾಗೂ ಬಲಪುಟದಲ್ಲಿ ಇಂಗ್ಲಿಷ್ ಭಾಷೆಯಲ್ಲಿಯೂ ವಿಷಯಗಳನ್ನು ಮುದ್ರಿಸಬೇಕು. ಪುಸ್ತಕ ದೊಡ್ಡದಾಗುತ್ತದೆ ಎಂಬ ಹುಸಿ ನೆಪ ಹೇಳದೆ ಈ ಕೆಲಸ ಮಾಡಬೇಕು.


ಯಾಕೆಂದರೆ ಖಾಸಗಿ ಶಾಲೆಗಳ ವಿದ್ಯಾರ್ಥಿಗಳ ಪುಸ್ತಕಗಳ ಗಾತ್ರಗಳಿಗೆ ಹೋಲಿಸಿದರೆ, ಸರ್ಕಾರಿ ಶಾಲೆಗಳ ಪುಸ್ತಕಗಳು ತೀರಾ ಕಡಿಮೆ ವಿಷಯಗಳನ್ನು ಒಳಗೊಂಡಿವೆ. ಜೊತೆಗೆ, ಉಚಿತವಾಗಿ ಕೊಡುತ್ತಿದ್ದೇವೆ ಎಂಬ ಅಹಂಕಾರದಿಂದ ಈ ಪುಸ್ತಕಗಳನ್ನು ಆಕರ್ಷಕವಾಗಿ ಮುದ್ರಿಸುತ್ತಲೂ ಇಲ್ಲ. ಸರ್ಕಾರಿ ಶಾಲೆಗಳ ಕಲಿಕೆಯ ವಾತಾವರಣವನ್ನು ಆಕರ್ಷಕವಾಗಿಸಿ, ಮಕ್ಕಳಲ್ಲಿ ಉತ್ಸಾಹ ಉಕ್ಕುವಂತೆ ಮಾಡಬೇಕಾಗಿದೆ.


ಇವತ್ತು ಸರ್ಕಾರಿ ಶಾಲೆಗಳಲ್ಲಿ ಇಂಗ್ಲಿಷ್ ಮಾಧ್ಯಮವನ್ನು ಭಾವುಕವಾಗಿ ವಿರೋಧಿಸುತ್ತಿರುವವರು ತಮಗರಿವಿಲ್ಲದೆಯೇ ಎಲ್ಲ ಜಾತಿಗಳ ಕಡುಬಡವರ ಪ್ರಗತಿಗೆ ವಿರುದ್ಧವಾಗಿದ್ದಾರೆ. ಯಾಕೆಂದರೆ ಇವತ್ತು ಮಕ್ಕಳಿಗಾಗಿ ತಿಂಗಳಿಗೆ ಕನಿಷ್ಠ ಐನೂರು ರೂಪಾಯಿಯನ್ನು ಖರ್ಚು ಮಾಡಬಲ್ಲ ಬಡ ತಂದೆ ತಾಯಂದಿರು ಕೂಡ ತಮ್ಮ ಮಕ್ಕಳನ್ನು ಎಂಥದೋ ಒಂದು ಖಾಸಗಿ ಇಂಗ್ಲಿಷ್ ಶಾಲೆಗೆ ಕಳಿಸುತ್ತಿದ್ದಾರೆ.


ಇತ್ತ ಬಹುತೇಕ ಕಾಲೇಜು, ವಿವಿಗಳ ಶಿಕ್ಷಕ, ಶಿಕ್ಷಕಿಯರು, ಅನೇಕ ಸಾಹಿತಿಗಳು ತಮ್ಮ ಮಕ್ಕಳನ್ನು ಇಂಗ್ಲಿಷ್ ಮಾಧ್ಯಮ ಶಾಲೆಗಳಿಗೆ ಕಳಿಸುತ್ತಿದ್ದಾರೆ. ಇವರ‌್ಯಾರಿಗೂ ಇಲ್ಲದ ಕನ್ನಡ ರಕ್ಷಣೆ ಜವಾಬ್ದಾರಿಯನ್ನು ಅತಿ ಬಡ ಮಕ್ಕಳು ಮತ್ತು ಅವರ ಪಾಲಕರು ಮಾತ್ರ ಯಾಕೆ ಹೊರಬೇಕು? ಹಲ ಬಗೆಯ ಪ್ರತಿಕೂಲ ವಾತಾವರಣಗಳಲ್ಲಿ ಕಲಿಯುತ್ತಾ, ಕನ್ನಡವನ್ನು ಕಾಪಾಡುತ್ತಿರುವ ಈ ಮಕ್ಕಳಿಗೆ ಆರನೆಯ ತರಗತಿಯಿಂದ ಕೂಡ ಉಳ್ಳವರ ಮಕ್ಕಳ ಜೊತೆ ಸ್ಪರ್ಧಿಸಲು ಅವಕಾಶ ಕೊಡಬಾರದೆಂದು ವಾದಿಸುವುದು ಭಯಾನಕ ಕ್ರೌರ್ಯವಾಗುತ್ತದೆ.


ಹಾಗೆ ನೋಡಿದರೆ, ಈ ಮಕ್ಕಳಿಗೆ ಭಾಷೆಯ ಬಲ ಹಾಗೂ ಆತ್ಮವಿಶ್ವಾಸ ತುಂಬುವ ಸಲುವಾಗಿ ಇಂಗ್ಲಿಷ್ ಬರವಣಿಗೆ ಹಾಗೂ ಅಭಿವ್ಯಕ್ತಿಯನ್ನು ಅತ್ಯಂತ ಸಮರ್ಥವಾಗಿ ಕಲಿಸಿ ಹೊಸ ಜಗತ್ತಿಗೆ ಅಣಿಗೊಳಿಸುವುದು ನಮ್ಮ ಆದ್ಯತೆಯಾಗಬೇಕು. ಇಂಗ್ಲಿಷನ್ನು ಸಂವಹನಕ್ಕಾಗಿ ಮಾತ್ರವಲ್ಲದೆ, ಜಗತ್ತಿನ ಜ್ಞಾನ, ಸಾಹಿತ್ಯವನ್ನು ಗ್ರಹಿಸುವ ಕಿಟಕಿಯಾಗಿಯೂ ಕಲಿಸಬೇಕು.


ಅತಿಯಾದ ಉಚ್ಚಾರಣೆಯ ಸಮಸ್ಯೆಯನ್ನು ಮೈಮೇಲೆ ಹಾಕಿಕೊಳ್ಳದೆ, ಜಗತ್ತಿನಲ್ಲಿ ಬಗೆಬಗೆಯ ಇಂಗ್ಲಿಷುಗಳಿವೆ, ಉಚ್ಚಾರಣೆಗಳಿವೆ ಎಂಬ ಅರಿವಿನಲ್ಲಿಯೂ ಇಂಗ್ಲಿಷನ್ನು ಕಲಿಸಬೇಕು. ಇಂಗ್ಲಿಷ್ ಶಿಕ್ಷಣದ ವ್ಯಾಪಾರಿಗಳ ದಂಧೆಗೆ ಕೊನೆ ಹೇಳಲು ಸರ್ಕಾರಿ ಶಾಲೆಗಳಲ್ಲಿ ಅದನ್ನು ಸರಿಯಾಗಿ ಕಲಿಸಬೇಕು.


ಈ ಸನ್ನಿವೇಶವನ್ನು ಸರಿಯಾಗಿ ಗ್ರಹಿಸಲು ಒಂದು ಉದಾಹರಣೆ ನೋಡಿ: ಹಿಂದುಳಿದ ಪ್ರದೇಶವೊಂದರಲ್ಲಿ ಎಕನಾಮಿಕ್ಸ್ ಎಂ.ಎ. ಕಲಿಯುತ್ತಿರುವ  ಬಡ ವಿದ್ಯಾರ್ಥಿಯೊಬ್ಬ ತನ್ನ ಎರಡು ವರ್ಷಗಳ ಎಂ.ಎ.ಕೋರ್ಸಿಗೆ ವಿಶ್ವವಿದ್ಯಾಲಯಕ್ಕೆ ಪಾವತಿಸುತ್ತಿರುವ ಬೋಧನಾ ಶುಲ್ಕ 1000 ರೂಪಾಯಿ; ಆದರೆ  ಖಾಸಗಿ ಸಂಸ್ಥೆಯೊಂದರಲ್ಲಿ ಎರಡು ತಿಂಗಳ ಇಂಗ್ಲಿಷ್ ಕಲಿಕೆಯ ಕೋರ್ಸಿಗೆ ಕೊಟ್ಟ ಶುಲ್ಕ 5000 ರೂಪಾಯಿ! ಅಲ್ಲಿ ಕೂಡ ಅವನು ಸಾಂದರ್ಭಿಕವಾಗಿ ಬಳಸುವ ಇಂಗ್ಲಿಷನ್ನು ತಕ್ಕಮಟ್ಟಿಗೇ ಕಲಿತನೇ ಹೊರತು ಚೆನ್ನಾಗಿಯೇನೂ ಕಲಿಯಲಿಲ್ಲ. ಬಾಲ್ಯದಲ್ಲೇ ಶಾಲೆಯಲ್ಲಿ  ಇಂಗ್ಲಿಷ್ ಭಾಷೆ ಕಲಿತಿದ್ದರೆ ಆ ಸಮಸ್ಯೆಯಿಂದ ಪಾರಾಗುತ್ತಿದ್ದನೇನೋ.


ಇದೇ ಸಂದರ್ಭದಲ್ಲಿ ಉರ್ದು ಮಾಧ್ಯಮದಲ್ಲಿ ಓದುತ್ತಿರುವ ಬಡ ಮುಸ್ಲಿಂ ಮಕ್ಕಳ ಕಷ್ಟವನ್ನು ಕೊಂಚ ವಸ್ತುನಿಷ್ಠವಾಗಿ ಗಮನಿಸಬೇಕು. ಈ ಮಕ್ಕಳಿಗೆ ಏಳನೆಯ ತರಗತಿಯ ನಂತರ ಯಾವ ವಿಷಯಗಳನ್ನೂ ಉರ್ದುವಿನಲ್ಲಿ ಕಲಿಸುತ್ತಿಲ್ಲ. ಹಾಗಾದರೆ ಈ ಮಕ್ಕಳು ಎಲ್ಲಿಗೆ ಹೋಗಬೇಕು? ಈ ಮಕ್ಕಳು ಹೈಸ್ಕೂಲ್ ಹೊತ್ತಿಗೆ ಸ್ಕೂಲು ಬಿಡುತ್ತಿವೆ ಅಥವಾ ಅನಿವಾರ್ಯವಾಗಿ ಎಲ್ಲೋ ವಿರಳವಾಗಿಯಷ್ಟೇ ಇರುವ ಇಂಗ್ಲಿಷ್ ಮಾಧ್ಯಮವನ್ನು ಹುಡುಕಿಕೊಂಡು ಹೋಗುತ್ತಿವೆ.


ಈ ಮಕ್ಕಳು ತಮ್ಮ ಆರ್ಥಿಕ ಬೆಳವಣಿಗೆಗಾಗಿಯಾದರೂ ವಿಷಯಗಳನ್ನು ಅತ್ಯಂತ ಸಮರ್ಥವಾಗಿ ಇಂಗ್ಲಿಷಿನಲ್ಲಿ ಕಲಿಯುವುದು ಅನಿವಾರ್ಯವಾಗಿದೆ. ಇನ್ನು ಇವತ್ತಿನ ಖಾಸಗಿ ಉದ್ಯೋಗಗಳ ಜಗತ್ತಿನಲ್ಲಿ ಇಂಗ್ಲಿಷನ್ನು ಚೆನ್ನಾಗಿ ಬಳಸುವ ಸಾಮರ್ಥ್ಯವನ್ನು ರಾಜ್ಯದ ಒಳಹೊರಗೆ ಬಗೆಬಗೆಯ ಉದ್ಯೋಗಗಳನ್ನು ಹುಡುಕುವ ಎಲ್ಲ ವರ್ಗದವರೂ ಪಡೆಯಬೇಕಾಗಿದೆ; ಇದು ಹೊಟ್ಟೆಪಾಡಿಗೆ ಸಂಬಂಧಿಸಿದ ಪ್ರಶ್ನೆ ಕೂಡ.


ಭಾಷೆಯೇ ಒಂದು ಆಸ್ತಿಯಾಗಿರುವ ಈ ಕಾಲದಲ್ಲಿ ಹೆಣ್ಣುಮಕ್ಕಳ ಉದ್ಯೋಗದ ಸಾಧ್ಯತೆಗಳು ಹಾಗೂ ಆತ್ಮವಿಶ್ವಾಸ ಹೆಚ್ಚಿರುವುದರಲ್ಲಿ ಇಂಗ್ಲಿಷಿನ ಪಾಲೂ ಹೆಚ್ಚಾಗಿದೆ ಎಂಬುದನ್ನು ಮರೆಯಬಾರದು.


ಇವತ್ತು ಸರ್ಕಾರಿ ಶಾಲೆಗಳಲ್ಲಿ ಇಂಗ್ಲಿಷ್ ಜಾರಿಯನ್ನು ವಿರೋಧಿಸುತ್ತಿರುವವರು  ಹಾಗೂ ಅದನ್ನು ಕನ್ನಡ ವಿರೋಧಿ ಎಂದು ತಿಳಿದವರು ನಿಜಕ್ಕೂ ಕನ್ನಡವನ್ನು ಉಳಿಸಬೇಕಾಗಿರುವುದು ಖಾಸಗಿ ಶಾಲೆಗಳಲ್ಲಿ. ಕನ್ನಡವನ್ನು ಒಂದು ಭಾಷೆಯಾಗಿ ಕೂಡ ಕಲಿಯಲು ಅವಕಾಶ ಕೊಡದ ಅನೇಕ ಶಾಲೆಗಳು ಇಂಗ್ಲಿಷ್, ಹಿಂದಿ, ಸಂಸ್ಕೃತಗಳನ್ನು ಕಲಿಸುತ್ತಿರುವುದರಿಂದ ಹಾಗೂ ಈ ಧೋರಣೆಗೆ ಕನ್ನಡ ತಂದೆತಾಯಿಗಳೇ ಕುಮ್ಮಕ್ಕು ಕೊಡುತ್ತಿರುವುದರಿಂದ ಕನ್ನಡಕ್ಕೆ ಹೆಚ್ಚಿನ ಧಕ್ಕೆಯಾಗುತ್ತಿದೆ.


ಇಂಗ್ಲಿಷ್ ಮಾಧ್ಯಮ ಶಾಲೆಗಳಲ್ಲಿ ಪ್ರತಿ ತರಗತಿಗೆ ಎರಡು ಕನ್ನಡ ಭಾಷಾಪಠ್ಯಗಳನ್ನಿಟ್ಟು ಈ ಮಕ್ಕಳು ಕನ್ನಡವನ್ನು ದಕ್ಷವಾಗಿ ಕಲಿಯುವಂತೆ ಮಾಡುವುದು ಅತ್ಯಂತ ಮುಖ್ಯವಾಗಿದೆ. ಹಾಗೆಯೇ ಕನ್ನಡ ಮಾಧ್ಯಮದ ಮಕ್ಕಳು ಕಲಿಯುತ್ತಿರುವ ಇಂಗ್ಲಿಷಿನ ಕ್ರಮವನ್ನು ಇನ್ನಷ್ಟು ಸುಧಾರಿಸಬೇಕು.


ಹಾಗೆಯೇ ಐದನೇ ತರಗತಿಯವರೆಗೆ ಹಾಗೂ ಆನಂತರ ಕನ್ನಡ ಮಾಧ್ಯಮದಲ್ಲಿ ಕಲಿತವರಿಗೆ ಸರ್ಕಾರಿ ಹುದ್ದೆಗಳನ್ನು ಹಾಗೂ ಹೆಚ್ಚು ಶೈಕ್ಷಣಿಕ ಅವಕಾಶಗಳನ್ನು ಮೀಸಲಿಟ್ಟು, ಪ್ರೋತ್ಸಾಹ ವೇತನಗಳನ್ನು ಕೂಡ ನೀಡಿ ಈ ಬಡ ಮಕ್ಕಳ ಭವಿಷ್ಯವನ್ನು ರೂಪಿಸಬೇಕು. 

ಕೃಪೆ : ಪ್ರಜಾವಾಣಿ - ಅಂತರಾಳ

ದಾಸಿಮಯ್ಯನ ವಚನ

ಒಡಲುಗೊಂಡವ ಹಸಿವ;  ಒಡಲುಗೊಂಡವ ಹುಸಿವ  ಒಡಲುಗೊಂಡವನೆಂದು  ನೀನೆನ್ನ ಜರಿದೊಮ್ಮೆ ನುಡಿಯದಿರ ನೀನೆನ್ನಂತೆ ಒಮ್ಮೆ ಒಡಲುಗೊಂಡು ನೋಡ ರಾಮನಾಥ.