Showing posts with label ಮನುವಾದ. Show all posts
Showing posts with label ಮನುವಾದ. Show all posts

Wednesday, February 27, 2013

ಮನುಷ್ಯರನ್ನು ಮನುಷ್ಯರಂತೆ ಕಾಣೋಣ !


                                                          -ಸರೋವರ್ ಬೆಂಕೀಕೆರೆ. 


ಭೂಮಿಯಲ್ಲಿ ಎಷ್ಟೋ ಜೀವಿಗಳು ಬದುಕಿವೆ, ಎಲ್ಲ ಪ್ರಾಣಿ ಪಕ್ಷಿಗಳು ಜಾತಿ, ಮತ, ಧರ್ಮ ಎನ್ನದೆ ಸಂತೋಷದಿಂದ ಬದುಕುತ್ತಿವೆ, ಮೊನ್ನೆ ಪತ್ರಿಕೆಯಲ್ಲಿ ಕಂಡೆ ಹಸುವು ತನ್ನ ಕರು ಅಲ್ಲದ, ತನ್ನ ಜಾತಿಗೆ ಸೇರದ ಕೊಳಚೆಯಲ್ಲಿ ವಾಸಿಸುವ ಹಂದಿಮರಿಯೊಂದಕ್ಕೆ ಹಾಲುಣಿಸಿ ಮಾನವೀಯತೆ ಮೆರೆಯಿತೆಂದು ! ನನ್ನಲ್ಲಿ ಪ್ರಶ್ನೆ ಹಾಕಿಕೊಂಡೆ ಮಾನವೀಯತೆ ಹಾಗೆಂದರೆ ? ಓಹ್ ಮಾನವ ಧರ್ಮ !..... ಮಾನವ ಧರ್ಮ ಏನು ? ಹಸುವನ್ನು ದೇವರು ಎನ್ನುವ, ಹಸುವನ್ನು ಪೂಜೆ ಮಾಡುವ ಮಾನವ ಅದರ ಜಾತ್ಯತೀತ ಮನಸ್ಸನ್ನು ಅರಿಯದೆ, ಬಾಯಿ ಮಾತಲ್ಲಿ ದೇವರು ಎಂದು ಸ್ವತಃ ಜಾತಿಯನ್ನು ಕಟ್ಟುತ್ತಾನೆ, ದೇವಸ್ಥಾನದಲ್ಲೆ ಪಂಕ್ತಿ ಭೇದ ಮಾಡುತ್ತಾನೆ, ಮನುಷ್ಯನನ್ನೆ ಅನ್ಯ ಜಾತಿಯ ಪ್ರಾಣಿಯಂತೆ ಕಾಣುತ್ತಾನೆ, ಕೊಲೆ, ಅತ್ಯಾಚಾರ, ಭ್ರಷ್ಟಾಚಾರ, ಹೀಗೆ……, ಹಾಗಾದರೆ ಇದೇನಾ ಮಾನವೀಯತೆ ಆ ಹಸುವು ಹಂದಿ ಮರಿಗೆ ಹಾಲುಣಿಸಿ ಮೇರೆದ ಮಾನವೀಯತೆ ಅಂದರೆ ಇದೇನಾ?

ಮತ್ತೆ ಅದೇ ಪತ್ರಿಕೆಗಳಲ್ಲಿ ಲೇಖನಗಳು ಓದಿದೆ ; ಡೆಲ್ಲಿಯಲ್ಲಿ ಹುಡುಗಿಯ ಮೇಲೆ ಅತ್ಯಾಚಾರವೆಸಗಿ ಪ್ರಾಣಿಯಂತೆ ವರ್ತಿಸಿದ್ದಾರೆ  ಎಂದು ! ಆದರೆ ವಿಚಿತ್ರ ನೋಡಿ, ಪ್ರಾಣಿ ಮಾನವೀಯತೆ ಮೆರೆಯುತ್ತದೆ ಮತ್ತು ಮನುಷ್ಯ ಪ್ರಾಣಿಯಂತೆ ವರ್ತಿಸುತ್ತಾನಂತೆ ? ನಿಜಕ್ಕೂ ಈ ಮಾನವೀಯತೆ ಅನ್ನುವ ಪದವೇ ಬದಲಾಗಬೇಕು ಎಂದು ನನ್ನಲ್ಲಿ ಅನಿಸುತ್ತಿದೆ.

ಹೀಗೆ ನನಗೊಂದು ಚಿಕ್ಕ ಕಥೆ ನೆನಪಾಗುತ್ತದೆ, ಒಂದು ಹೆಣ್ಣು ನಾಯಿ ಮಧ್ಯ ರಾತ್ರಿ ಹಾದಿಯಲ್ಲಿ ಹೋಗುವಾಗ 5 ಗಂಡು ನಾಯಿ ಆ ಹೆಣ್ಣು ನಾಯಿಯನ್ನು ಬೆನ್ನ ಹತ್ತಿದವು, ಹೆಣ್ಣು  ನಾಯಿ ಭಯದಲ್ಲಿ ಓಡಲು ಶುರು ಮಾಡಿತ್ತು, ನಂತರ ಆ 5 ಗಂಡು ನಾಯಿ ಎದುರಿಗೆ  ಬಂದು ಹೇಳಿದವು, “ಹೆದರಬೇಡ ನಾವು ನಾಯಿಗಳು ಮನುಷ್ಯರಲ್ಲ!” ಇದನ್ನು ಓದಿದ ನನಗೆ ನಗು ಬರುವ ಬದಲು, ಮೊದಲ ಬಾರಿಗೆ ಅಯ್ಯೋ ನಾನು ಕೂಡ ಮನುಷ್ಯನಲ್ಲವೆ ಎಂದು ಚಡಪಡಿಸಿದೆ, ಪ್ರಾಣಿ ಪಕ್ಷಿಗಳು ಎಂದು ಕೊಲೆ ಮಾಡುವುದಿಲ್ಲ, ಅತ್ಯಚಾರದ ದೂರು ಕೂಡ ಎದುರಿಸಿಲ್ಲ. ನಾನು ಪ್ರಾಣಿ ಆಗಿದ್ದರೆ ?
ಇದನ್ನೆಲ್ಲ ನೆನೆಯಲು ಒಂದು ಕಾರಣವಿದೆ, ನಮ್ಮ ಕಾಲೇಜಿನಲ್ಲಿ ನನ್ನ ನೆಚ್ಚಿನ ಶಿಕ್ಷಕರು ಇದ್ದರು, ಅವರು ನನ್ನನ್ನು ಯಾವಾಗಲೂ ಆತ್ಮೀಯತೆಯಿಂದ ಮಾತನಾಡಿಸುತ್ತಿದ್ದರು ನನಗೂ ಅವರೆಂದರೆ ತುಂಬಾ ಗೌರವ, ಅವರ ಮನೆ ನಮ್ಮ ಹಾಸ್ಟಲ್  ಹತ್ತಿರ ಇದ್ದರಿಂದ, ಅವರ ಮನೆಗೆ ಮನೆ ಪಾಠಕ್ಕೆಂದು ಕರೆದಿದ್ದರು. ನಾನು ಮನೆ ಪಾಠಕ್ಕೆಂದು ದಿನವೂ ಹೋಗುತ್ತಿದ್ದೆ, ಒಂದು ದಿನ ಅವರ ಮನೆ  ಮುಂದೆ ಕೆಲವು ಮಕ್ಕಳು ಆಟವಾಡುತ್ತಿದ್ದರು, ಅವರಲ್ಲಿ ನಮ್ಮ ಶಿಕ್ಷಕರ ಅಕ್ಕನ ಮಗೂ ಕೂಡ ಆಡುತ್ತಿತ್ತು, ಆ ಮಗುವೊಂದು ಬಿಟ್ಟು, ಉಳಿದ ಮಕ್ಕಳು ಅಲ್ಲೆ ಗಾರೆ ಕೆಲಸ ಮಾಡುವವರ ಮಕ್ಕಳಾಗಿದ್ದರು, ಅವರು ಯಾರೂ ಶಾಲೆಗೆ ಹೋಗದವರಾಗಿದ್ದರು. ನಮ್ಮ ಶಿಕ್ಷಕರ ಮನೆಯಿಂದ ಕೂಗು ಬಂದಿತು, 'ಏ ಸೋನು ( ನಮ್ಮ ಶಿಕ್ಷಕರ ಅಕ್ಕನ ಮಗು), ನೀನು ಅವರೊಡನೆ ಆಡಬಾರದು. ಬಾ ಇಲ್ಲಿ' ಎಂದು ಆ ಮಗುವನ್ನು ಕರೆದುಕೊಂಡು ಹೋದರು. ಆಡುತ್ತಿದ್ದ ಸೋನುವಿನ ಗಮನ ಆ ಮಕ್ಕಳ ಕಡೆಗೆ  ಇತ್ತು. ಚಿಕ್ಕ ಗುಡಿಸಲಿನ ಮುಂದೆ ಆಡುತ್ತಿದ್ದ ಮಕ್ಕಳ ಕಣ್ಣು ಆ ದೊಡ್ಡ ಮನೆಯ ಕಡೆಯೇ ಹರಿದಿತ್ತು.

ಸ್ವಲ್ಪ ಹೊತ್ತಿಗೆ ನನಗೆ ಪಾಠ ಶುರುವಾಗಿದ್ದರಿಂದ ನಾನು ಮನೆಯೊಳಗೆ ಹೋದೆ, ಪಾಠ ಮುಗಿಸಿಕೊಂಡು ಹೊರಗೆ ಬಂದೆ, ಮನೆಯ ಬಾಗಿಲಲ್ಲಿ ಆ ಗುಡಿಸಲಿನ ಮಕ್ಕಳು ಕೂತು ಪಿಳಿ ಪಿಳಿ ಕಣ್ಣು ಬಿಡುತ್ತಾ ಟಿ.ವಿ ನೋಡುತ್ತಿದ್ದರು, ನಾನು ಮನೆಗೆ ಹೊಸಬನಾಗಿದ್ದರಿಂದ ನನ್ನ ಗೆಳೆಯನಿಗೆ ಕೇಳಿದೆ, 'ಇವರು ಹೊರಗೆ ಏಕೆ  ಕೂತಿದ್ದಾರೆ ?' ನನ್ನ ಸ್ನೇಹಿತ ಹೇಳಿದ, 'ಅವರು ಕೆಳ ಜಾತಿಯವರಲ್ಲವೆ ಅದಕ್ಕೆ' ಎಂದ ! ನಾನು  ಒಳಗೆ ಇಣುಕಿದೆ, ನಾಯಿ ಮರಿ ಮನೆಯಲ್ಲೇ ಆಡುತ್ತಿತ್ತು, ಆದರೆ ಮನುಷ್ಯರ ಜಾತಿಯಲ್ಲೇ ಹುಟ್ಟಿದ ಕೆಳ ವರ್ಗದ ಮಕ್ಕಳು ಮಾತ್ರ ಚಪ್ಪಲಿ ಬಿಡುವ ಸ್ಥಳದಲ್ಲಿ ಕೂತಿದ್ದರು. ಇದರಿಂದ ನನಗೆ ತಿಳಿದಿದ್ದು ನಾಯಿಗೆ ಕೂಡ ಮನೆಯಲ್ಲಿ ಪ್ರವೇಶವಿದೆ ; ಆದರೆ ಕೆಳ ಜಾತೀಯ ಮನುಷ್ಯರಿಗಿಲ್ಲ.!

ನನಗೆ ಒಳ ಒಳಗೆ ಭಯ ಶುರುವಾಗಿತ್ತು, ನಾನು ಕೂಡ ಕೆಳ ಜಾತಿಯವನು, ಮಾಂಸ ತಿನ್ನುವ ಕುಲದವನು ಎಂದು ತಿಳಿದರೆ ನನಗೂ ಮನೆಯ ಒಳಗೆ ಪ್ರವೇಶವಿಲ್ಲ! ನಂತರ ನನಗೆ ನಾನೇ ಸಮಾಧಾನಿಸಿಕೊಂಡು, ಚಿಂತಿಸಿದೆ...... ನಾನು ಯಾರಲ್ಲಿಗೆ ಪಾಠ ಕಲಿಯಲು ಬರುತ್ತಿರುವೆ? (ನಿಜ ಹೇಳಬೇಕೆಂದರೆ ಆ ಶಿಕ್ಷಕರು ತುಂಬಾ ಚೆನ್ನಾಗಿಯೆ ಪಾಠ ಮಾಡುತ್ತಿದ್ದರು) ಇವರು ನಿಜವಾಗಿಯೂ ಗುರುಗಳೇ ? ಇವರಲ್ಲಿ ನಾನು ಕಲಿತು ಜೀವನ ರೂಪಿಸಿಕೊಳ್ಳಲು ಸಾಧ್ಯವೆ ? ಹಾಗಾದರೆ ನನ್ನ ಪಾಠಗಳು ಯಾವವು? ನಾನು ಓದುತ್ತಿರುವುದು ಏನನ್ನು ? ಮಾನವೀಯತೆ ಇಲ್ಲದ ಈ ಶಿಕ್ಷಕರು ನನಗೇನು ಹೇಳಿಕೊಟ್ಟಾರು ? ನನ್ನ ಶಿಕ್ಷಕ ಹಾಗೂ ಮಾನವೀಯತೆಯ ಪಾಠ ಹೇಳಿ ಕೂಡದ ನನ್ನ ಶಿಕ್ಷಣದ ಮೇಲೆ ಇಲ್ಲದ ಕೋಪ ಹುಟ್ಟಿತು.

ಹಾಗಾದರೆ ಇದೇ ಕೆಳ ಜಾತಿಯ ಮಕ್ಕಳ ಜೊತೆ ಆಟವಾಡುತ್ತಿದ್ದ ಸೋನು ಮುಂದೆ ಹೇಗಿರುತ್ತಾಳೆ ? ಅವಳ ಮಾನವೀಯತೆ ? ಆ ಮಗುವು ನಮ್ಮ ಶಿಕ್ಷಕರ ಮನೆಯ ವಾತಾವರಣದಲ್ಲಿ ಬೆಳೆಯುತ್ತಿದೆ. ಮುಂದೊಂದು ದಿನ ಅವಳ ಮನೆಯಲ್ಲಿ ಕೆಳ ಜಾತಿಯವರಿಗೆ ಪ್ರವೇಶ ಇಲ್ಲ ಎಂದಾಯಿತು.
 ಇದೆಲ್ಲ ಮಾನವ ಧರ್ಮ, ಮಾನವೀಯತೆ ಎಂದಾದರೆ, ಪ್ರಾಣಿಗಳು ಇಂತಹ ಮಾನವೀಯತೆ ತೋರದಿರಲಿ, ಮಾನವ ಧರ್ಮಕ್ಕಿಂತ ಪ್ರಾಣಿಧರ್ಮವೆ ಮೇಲು ಅಲ್ಲವೆ!.

ಉದ್ಯೋಗ, ಸಂಬಳಕ್ಕೇಂದೇ  ಇರುವ ಇಂತಹ ಡಿಪ್ಲೋಮ, ಇಂಜನಿಯರಿಂಗ್, ಪದವಿಗಳಿಗಿಂತ ಪ್ರಾಣಿಗಳಿಂದ ಸಿಗುವ ಪಾಠ ಎಷ್ಟು ಉತ್ತಮವಲ್ಲವೆ, ಇಂತಹ ವೃತ್ತಿಪರ ಶಿಕ್ಷಣದ ಜೊತೆಗೆ ಜಾತ್ಯಾತೀತತೆ, ಸೌಹಾರ್ದತೆ, ಪ್ರೀತಿಯನ್ನು ಕಲಿಸುವ ಪ್ರಾಣಿಯತೆಯ! (ಮಾನವೀಯತೆಯ ಮೌಲ್ಯಗಳು) ಪಠ್ಯವು ಸೇರಿಸಬೇಕೆಂದು ಅನ್ನಿಸುತ್ತಿದೆ.

ಮನುಷ್ಯರನ್ನು ಮನುಷ್ಯರಂತೆ ಕಾಣೋಣ !   
                       

                          

Friday, February 08, 2013

ದೇವರು : ಹೆಸರು ಮತ್ತು ವಿವಾದ !

ಡಾ. ಸಿದ್ರಾಮ ಕಾರಣಿಕ
ಯಾವುದೋ ಸಿನೇಮಾ ಹಾಡೊಂದರಲ್ಲಿ 'ಶ್ರೀ ರಾಮ'ನ ಹೆಸರು ಬಂದಿದೆಯೆಂದು ತಗಾದೆ ತೆಗೆದ ಬಗ್ಗೆ ಪಬ್ಲಿಕ್ ಟಿ.ವ್ಹಿ.ಯಲ್ಲಿ ಚರ್ಚೆ ಆರಂಭವಾಗಿದೆ. ಆ ಹಾಡಿಗೆ ವ್ಯಕ್ತಪಡಿಸುವವರು ಕನಕದಾಸರ ಹರಿಭಕ್ತಸಾರವನ್ನು ಒಮ್ಮೆ ಓದಬೇಕು.

ಅಲ್ಲಿ ಕನಕದಾಸರು ಹರಿಯ ಅನುಗ್ರಹವೊಂದಿದ್ದರೆ ಜಗತ್ತಿನಲ್ಲಿ ಯಾವುದೂ ಅಸಾಧ್ಯವಲ್ಲ ಎಂದು ತಿಳಿಸುತ್ತ ಇಡೀ ಜೀವಮಾನದಲ್ಲೆಲ್ಲ ಪಾಪಗಳನ್ನೇ ಮಾಡುತ್ತ ಬಂದ ಅಜಾಮಿಳ ಎಂಬಾತ ಸಾಯುವಾಗ ತನ್ನ ಮಗ ನಾರಾಯಣನ ಹೆಸರನ್ನೂ ಕರೆದರೂ ಹರಿ ಆತನಿಗೆ ಸದ್ಗತಿ ನೀಡಿದ ಎನ್ನುವ ಮೂಲಕ ತನ್ನ ದೈವ ಜಗತ್ತಿನಲ್ಲಿಯೇ ಸರ್ವಶ್ರೇಷ್ಟ ಎಂಬುದನ್ನು ಪರಗಣಿಸುತ್ತಾರೆ. ಇದಲ್ಲದೇ, ಹೆತ್ತ ಮಗಳನ್ನು ಮದುವೆಯಾದ ಬ್ರಹ್ಮ, ಗುರುಪತ್ನಿಯ ಮೇಲೆ ಕಣ್ಣು ಹಾಕಿದ ಚಂದ್ರ, ಮಾವನಿಗೆ ಕೃತಘ್ನನಾದ ಕಾಮ, ಮುನಿವರ್ಯನ ಮಡದಿಯನ್ನು ಕೆಡಿಸಿದ ಇಂದ್ರ ಮೊದಲಾದವರು ಜಗಮೀರಿದ ಹಾದರ ಮಾಡಿದರೂ ಹರಿ ಅವರಿಗೆ ಕೈವಲ್ಯ ನೀಡಿದ್ದು ಕನಕದಾಸರಿಗೆ ಅಚ್ಚರಿಯನ್ನುಂಟು ಮಾಡಿದರೂ ಅಂಥವರನ್ನೆಲ್ಲ ಎತ್ತಿ ಹಿಡಿದ ಹರಿ ನಮ್ಮನ್ನೂ ರಕ್ಷಿಸಲಿ ಎಂದು ಪ್ರಾರ್ಥಿಸಿಕೊಳ್ಳುತ್ತಾರೆ.

ಇನ್ನು ಮುಂದೆ ರಾಮ, ಕೃಷ್ಣ, ಶಿವ ಮೊದಲಾದ ಗಂಡು ದೇವರುಗಳ ಮತ್ತು ಸೀತಾ, ರುಕ್ಮಿಣಿ, ದ್ರೌಪದಿ, ಲಕ್ಷ್ಮಿ, ಸರಸ್ವತಿ, ಪಾರ್ವತಿ ಮೊದಲಾದ ಹೆಣ್ಣು ದೇವರ ಹೆಸರುಗಳನ್ನು ಇಟ್ಟುಕೊಳ್ಳುವಂತಿಲ್ಲ. ಯಾಕೆಂದರೆ ಟಿ.ವ್ಹಿ. ಮುಂದೆ ಕುಳಿತ ಸ್ವಾಮಿಜಿಯೊಬ್ಬರು 'ಶ್ರೀ ರಾಮ ಅಂದ್ರೆ ಅರ್ಥ ಏನು ಗೊತ್ತಾ ? ಹೆಸರಿನ ಅರ್ಥ ಗೊತ್ತಿಲ್ಲದಿದ್ದರೆ ಹ್ಯಾಗೆ ಹೆಸರಿಡ್ತೀರಿ ?' ಎಂದು ಜೋರಾಗಿಯೇ ಫರ್ಮಾನು ಹೊರಡಿಸಿದರು !

ಅಯ್ಯೋ ಸ್ವಾಮಿ, ಇದು ಬಿಟ್ಟು ಬಿಡಿ ; ಇನ್ನು ಮುಂದೆ ಕಲ್ಲವ್ವ, ಕಲ್ಲಪ್ಪ ಮೊದಲಾದ ಹೆಸರುಗಳನ್ನೂ ಇಡುವಂತಿಲ್ಲವೇನೋ ? ಯಾಕೆಂದರೆ 'ನಮ್ಮ ದೇವರು ಕಲ್ಲಿನ ರೂಪದಲ್ಲಿದೆ. ಆ ಹೆಸರನ್ನು ಬಳಸಬಾರದು' ಎಂದು ಜೋಲಿ ಹೊಡೆಯುತ್ತಾರೋ ಏನೋ ?

ಯಾಕೋ ಇತ್ತೀಚಿಗೆ ಇಂಥ ಪ್ರಕ್ರಿಯೆಗಳು ತುಂಬ ಜೋರಾಗಿಯೇ ನಡೆದಿವೆ. ಹೀಗಿರಬಾರದು ; ಹೀಗಿರಬೇಕು ; ಹೀಗೆಯೇ ಇರಬೇಕು ಎನ್ನುವ ಯಜಮಾನ್ಯ ಸಂಸ್ಕೃತಿ ಮತ್ತೇ ವಿಜ್ರಂಬಿಸಲು ಆರಂಭವಾಗಿದೆಯೇ ? ಪ್ರಜ್ಞಾವಂತರು ಯೋಚಿಸಬೇಕು ಸ್ವಾಮಿ ! ಏನಂತೀರಿ ?

Thursday, February 07, 2013

ಮನುಸ್ಮೃತಿ ಇನ್ನೂ ಸುಟ್ಟಿಲ್ಲ ಸುಡಬೇಕಿದೆ !

ಡಾ. ಸಿದ್ರಾಮ ಕಾರಣಿಕ

ಈ ದೇಶದಲ್ಲಿ ಸ್ತ್ರೀಯರನ್ನು ‘ದೇವತೆ’ ಎಂದೇ ತಿಳಿಯಲಾಗುತ್ತದೆ ಎಂದು ಷರಾ ಬರೆಯತ್ತಲೇ ಆ ‘ದೇವತೆ’ಯ ಮೇಲೆ ನಿರಂತರವಾಗಿ ಅತ್ಯಾಚಾರ ನಡೆಸಲಾಗುತ್ತದೆ. ಪುರುಷ ಪ್ರಧಾನ ಸಮಾಜದಲ್ಲಿ ಆಕೆ ಇನ್ನೂ ಮೇಲೆರಲು ಸಾಧ್ಯವಾಗಿಯೇ ಇಲ್ಲ. ಯಾಕೆಂದರೆ ಆ ‘ದೇವತೆ’ ಹೀಗೇ ಇರಬೇಕು ; ಇದನ್ನೇ ತೊಡಬೇಕು ; ಇದನ್ನೇ ಉಣ್ಣಬೇಕು ; ಇಂಥದ್ದನ್ನೇ ಮಾಡಬೇಕು ಮತ್ತು ಇಂಥದ್ದನ್ನು ಮಾಡಬಾರದು ಎಂಬ ಬಿಗಿಯಾದ ಕಟ್ಟಳೆಗಳು ಈ ದೇಶದಲ್ಲಿವೆ. ಈ ದೇಶದಲ್ಲಿ ಆ ‘ದೇವತೆ’ಯನ್ನು ಮೂರ್ಖಳು ಎಂದು ಭಾವಿಸಲಾಗುತ್ತದೆ ; ತಿಳುವಳಿಕೆ ಇಲ್ಲದವಳು ಎಂದು ಹಂಗಿಸಲಾಗುತ್ತದೆ ! ಈ ದೇಶದಲ್ಲಿ ಆ ‘ದೇವತೆ’ಯನ್ನು ಕೇವಲ ಹೇರುವ ಯಂತ್ರವನ್ನಾಗಿ ಮಾತ್ರ ನೋಡಲಾಗುತ್ತದೆ ; ಪುರುಷರ ದೈಹಿಕ ಹಸಿವನ್ನು ತೀರಿಸಿಕೊಳ್ಳಲು ಇರುವ ಒಂದು ಸಾಧನವನ್ನಾಗಿ ಪರಿಗಣಿಸಲಾಗುತ್ತದೆ ! 

ಹೀಗಾಗಿಯೇ ಆ ‘ದೇವತೆ’ಯ ಮೇಲೆ ನಿರಂತರ ಶೋಷಣೆಗಳು ನಡೆಯುತ್ತವೆ ; ಹೇಯವಾದ ಅತ್ಯಾಚಾರಗಳಾಗುತ್ತವೆ ! ಯಾವತ್ತೂ ಪುರುಷರ ಆಧೀನದಲ್ಲಿಯೇ ಆ ‘ದೇವತೆ’ ಇರಬೇಕು ಎಂಬ ಮನೋಭಾವ ತುಂಬಿಕೊಂಡಿದೆ ; ಏನೇ ಆದರೂ ‘ತಾಳಿ’ಕೊಳ್ಳಬೇಕು ಎಂಬ ತತ್ವಗಾರಿಕೆ ಇದೆ ! ಹೀಗಾಗಿಯೇ ಆ ‘ದೇವತೆ’ ಇಂದು ಮಾರಾಟದ ಸರಕಾಗಿದ್ದಾಳೆ ; ಭ್ರೂಣದಲ್ಲಿಯೇ ಸಾಯುತ್ತಿದ್ದಾಳೆ !

ಹೌದು, ಇದು ನನ್ನದು ಎಂದು ಹೇಳಿಕೊಳ್ಳುತ್ತಿರುವ ದೇಶದಲ್ಲಿಯೇ ನಡೆಯುತ್ತದೆ ! ಯಾಕೆಂದರೆ ಮನುಷ್ಯ ಸಂಬಂಧಗಳನ್ನೇ ಪರಗಣಿಸದ ವೈದಿಕಶಾಹಿ ವ್ಯವಸ್ಥೆ ಇನ್ನೂ ಜೀವಂತವಾಗಿದೆ ; ಡಾ. ಬಾಬಾಸಾಹೇಬ ಅಂಬೇಡ್ಕರ್‍ರು ಅಂದು ಸುಟ್ಟು ಹಾಕಿದ ಮನುಸ್ಮೃತಿ ಇನ್ನೂ ಬೂದಿಯಾಗಿಯೇ ಇಲ್ಲ ; ಅದು ಈ ದೇಶದಲ್ಲಿ ಇನ್ನೂ ಉರಿಯುತ್ತಲೇ ಇದೆ ! ಸಾಮಾಜಿಕ ಅಸಮಾನತೆಗೆ ಕಾರಣವಾಗಿ, ಬ್ರಾಹ್ಮಣ್ಯಶಾಹಿಯನ್ನು ಈ ದೇಶದ ಜನರ ಮೇಲೆ ಹೇರಿ ಯಜಮಾನಿಕೆ ವಿಕೃತಿಯನ್ನು ಮುಂದುವರಿಸುವ ಮೂಲವೇ ಮನುಸ್ಮೃತಿ ! 

ಇದನ್ನು ಅರಿತುಕೊಂಡ ಡಾ. ಬಾಬಾಸಾಹೇಬ ಅಂಬೇಡ್ಕರ್‍ರು 1927 ಡಿಸೆಂಬರ್ 20 ರಂದು ಆ ಮನುಸ್ಮೃತಿಯನ್ನು ಬಹಿರಂಗವಾಗಿ ಸುಟ್ಟು ಹಾಕಿದರು ; ಇಡೀ ಜಗತ್ತು ಒಂದಾಗಿ ಬದುಕಬೇಕಾದ ಸಂದೇಶವನ್ನು ರವಾನಿಸಿದರು. ಆದರೆ ಡಾ. ಬಾಬಾಸಾಹೇಬ ಅಂಬೇಡ್ಕರ್‍ರ ನಂತರ ಕೆಲವೇ ದಿನಗಳಲ್ಲಿ ಆ ಮನುಸ್ಮೃತಿ ಮತ್ತೇ ಚಿಗಿತುಕೊಳ್ಳತೊಡಗಿತ್ತು ! ಯಾಕೆಂದರೆ ಅದಾಗಲೇ ಈ ದೇಶದ ಎಲ್ಲರ ತಲೆಯಲ್ಲಿ ಬೀಜವನ್ನು ಬಿತ್ತಿ ರಾಶಿ ಮಾಡುವ ಹವಣಿಕೆಯಲ್ಲಿತ್ತು ! ಹೀಗಾಗಿಯೇ ಮರಾಠಿಯ ಪ್ರಗತಿಪರ ಬರಹಗಾರ ಪ್ರದೀಪ ದೇಶಪಾಂಡೆ ಹೇಳುತ್ತಾರೆ ; ‘ಮನುಸ್ಮೃತಿ ಅಜೂನಹೀ ಜಾಳತೇಚ ಆಹೆ !’ (ಮನುಸ್ಮೃತಿ ಇಂದಿಗೂ ಉರಿಯುತ್ತಲೇ ಇದೆ !)
 
ಈ ಮಾತನ್ನು ಸ್ಪಷ್ಟೀಕರೀಸಲು ಮನುಸ್ಮೃತಿಯಲ್ಲಿ ಹೇಳಿದ ಕೆಲವು ಮಾತುಗಳನ್ನು ಇಲ್ಲಿ ಉದ್ದರಿಸುತ್ತಿರುವೆ. (ಧಾರವಾಡದ ಸಮಾಜ ಪುಸ್ತಕಾಲಯ 2003 ರಲ್ಲಿ ಮೂರನೇ ಮುದ್ರಣವಾಗಿ ಪ್ರಕಟಿಸಿರುವ ಶೇಷ ನವರತ್ನ ಅವರು ಅನುವಾದಿಸಿರುವ ಮನುಸ್ಮೃತಿಯಿಂದ ಇಲ್ಲಿಯ ಉದ್ಧರಣೆಗಳನ್ನು ನೀಡಲಾಗಿದೆ) ಮನುಸ್ಮೃತಿಯ ಎರಡನೇ ಅಧ್ಯಾಯದ 213 ಮತ್ತು 214ನೇ ಶ್ಲೋಕಗಳು ಹೆಣ್ಣುಮಕ್ಕಳ ಬಗ್ಗೆ ಕೆಟ್ಟದಾಗಿ ವ್ಯಾಖ್ಯಾನ ಮಾಡುತ್ತವೆ ;

ಸ್ವಭಾವ ಏಷ ನಾರೀಣಾಮಿಹ ದೂಷಣಂ I
ಅತೋರ್ಥಾನ್ನ ಪ್ರಮಾದ್ಯಂತಿ ಪ್ರಮದಾಸು ವಿಪಶ್ಚಿತಃ’ II213 II

ಎಂದರೆ ಪುರುಷರ ಮನಸ್ಸನ್ನು ಕೆಡಿಸುವುದೇ ನಾರಿಯರ ಸ್ವಭಾವವಾಗಿದೆ. ಆದ್ದರಿಂದ ತಿಳುವಳಿಕೆಯುಳ್ಳ ಪ್ರಾಜ್ಞರು ಸ್ತ್ರೀಯರ ವಿಷಯದಲ್ಲಿ ಎಚ್ಚರ ತಪ್ಪಿ ನಡೆಯುವುದಿಲ್ಲ ಎನ್ನುವುದು ಇಲ್ಲಿಯ ಅರ್ಥ !

‘ಅವಿದ್ಯಾಂಸಮಲಂ ಲೋಕೇ ವಿದ್ವಾಂಸಮಪಿ ವಾ ಪುನಃ I
ಪ್ರಮದಾ ಹ್ಯುತ್ಪಥಂ ನೇತು ಕಾಮಕ್ರೋಧವಶಾನುಗಂ’ II214 II

ಅಂದರೆ ಕಾಮ ಕ್ರೋಧಗಳಿಂದ ವಶನಾದ ಮನುಷ್ಯನನ್ನು ಅವನು ಪಂಡಿತನೇ ಇರಲಿ, ಪಾಮರನೇ ಇರಲಿ, ದಾರಿ ತಪ್ಪಿಸಲು ಸ್ತ್ರೀಯರು ಸಮರ್ಥರಾಗಿರುತ್ತಾರೆ ಎನ್ನಲಾಗಿದೆ !

‘ಸ್ತ್ರೀಯೋ ರತ್ನಾನ್ಯಥೋ ವಿದ್ಯಾ ಧರ್ಮಃ ಶೌಚ ಸುಭಾಷಿತಂ I
ವಿವಿಧಾನಿ ಚ ಶಿಲ್ಪ ಸಮಾದೇಯಾನಿ ಸರ್ವತಃ’ II229 II

ಸ್ತ್ರೀಯರು, ರತ್ನಗಳು, ಧರ್ಮ, ಶೌಚ, ಸುಭಾಷಿತ, ಶಿಲ್ಪಗಳು ಇವು ಎಲ್ಲಿದ್ದರೂ ಸಹ ಅವನ್ನು ಪಡೆದುಕೊಳ್ಳಲು ಮುಂದಾಗಬೇಕು ಎಂಬುದು ಮೇಲಿನ ಶ್ಲೋಕಕ್ಕೆ ನೀಡಿರುವ ಅರ್ಥವಾಗಿದೆ.

ಇವೆಲ್ಲವುಗಳನ್ನೂ ಹೇಳಿದ ಮೇಲೆ ಮೂರನೇ ಅಧ್ಯಾಯದಲ್ಲಿ,

‘ಯತ್ರ ನಾರ್ಯಸ್ತು ಪೂಜ್ಯಂತೇ ರಮಂತೇ ತತ್ರ ದೇವತಾಃ I
ಯತ್ರೈತಾಸ್ತು ನ ಪೂಜಂತೇ ಸರ್ವಾಸ್ತತ್ರಾಫಲಾಃ ಕ್ರಿಯಾಃ’ II56 II

ಎಲ್ಲಿ ಸ್ತ್ರೀಯರಿಗೆ ಗೌರವ ಸನ್ಮಾನಗಳು ದೊರೆಯುತ್ತವೆಯೋ ಅಲ್ಲಿ ದೇವತೆಗಳು ಪ್ರಸನ್ನರಾಗುತ್ತಾರೆ. ಯಾವ ಮನೆಯಲ್ಲಿ ಸ್ತ್ರೀಯರು ಗೌರವಿಸಲ್ಪಡುವುದಿಲ್ಲವೋ ಅಲ್ಲಿ ಮಾಡುವ ಎಲ್ಲ ಯಜ್ಞ-ಪೂಜೆಗಳು ನಿಷ್ಫಲವಾಗುತ್ತವೆ !’ ಎಂದು ಹೇಳಿಕೊಂಡಿರುವುದು ಇದು ತಿಪ್ಪೆ ಸಾರಿಸುವ ಕೆಲಸವಲ್ಲದೆ ಮತ್ತೇನೂ ಅಲ್ಲ ! 

ಇಂಥ ಮನುಸ್ಮೃತಿ ಈ ದೇಶದ ಜನರೆಲ್ಲರ ಮನಸ್ಸನ್ನು ಕೆಡಿಸಿ ಹಾಕಿದೆ.
ಸಂವಿಧಾನಬದ್ಧವಾಗಿರುವ ಈ ದೇಶದ ಆಡಳಿತ ಕೂಡ ಮನುಸ್ಮøತಿಯ ನೆರಳಿನಲ್ಲಿಯೇ ಇಂದಿಗೂ ಸಾಗಿ ಬಂದಿರುವುದು ನಮ್ಮ ದೇಶದ ದುರಂತವೇ ಸರಿ. ಬರೀ ಆಡಳಿತಗಾರರು, ಸನಾತನಿ ಪುರೋಹಿತಶಾಹಿಗಳು ಮಾತ್ರವಲ್ಲ ಈ ದೇಶದ ಪ್ರತಿಶತ ತೊಂಬತ್ತರಷ್ಟು ಜನ ಮನುಸ್ಮೃತಿಯ ಪ್ರಕಾರವೇ ಬದುಕು ನಡೆಸುತ್ತಿದ್ದಾರೆ. ಇಂದಿಗೂ ಭಾರತೀಯ ಸಾಮಾಜಿಕ ಮತ್ತು ಸಾಂಸ್ಕøತಿಕ ಬದುಕು ಮನುಸ್ಮೃತಿಯ ಚೌಕಟ್ಟಿನಲ್ಲಿಯೇ ಬಂಧಿಯಾಗಿದೆ ಎನ್ನುವುದರಲ್ಲಿ ಯಾವುದೇ ಅತಿಶಯೋಕ್ತಿ ಇಲ್ಲ ! 

ಹೀಗಾಗಿಯೇ ಈ ದೇಶದ ದೀನ-ದಲಿತರು, ಮಹಿಳೆಯರು ಪ್ರತಿನಿತ್ಯ ಶೋಷಣೆಗೆ ಈಡಾಗಿ ನೋವು ಉಣ್ಣುತ್ತಿದ್ದಾರೆ ! ದಲಿತರ ಮೇಲೆ ನಡೆಯುವ ದೌರ್ಜನ್ಯಗಳು, ಬಹಿಷ್ಕಾರಗಳು, ಮಹಿಳೆಯರ ಮೇಲೆ ನಡೆಯುವ ಹಲ್ಲೆಗಳು, ಅತ್ಯಾಚಾರಗಳು, ಅನಾಗರಿಕ ವರ್ತನೆಗಳು ಈ ಕಾರಣಕ್ಕಾಗಿಯೇ ಇಂದು ಹೆಚ್ಚಾಗುತ್ತಲೇ ಇವೆ !
ಈ ದೇಶದ ಹೆಣ್ಣುಮಕ್ಕಳು ಇಂದು ಎಲ್ಲ ರಂಗಗಳಲ್ಲಿಯೂ ಮುಕ್ತವಾಗಿ ಭಾಗವಹಿಸುವ ಆಸಕ್ತಿಯನ್ನು ಹೊಂದಿದ್ದಾರೆ. ಶಿಕ್ಷಣದ ಮೂಲಕ ಹೊಸ ಹೊಸ ಅವಕಾಶಗಳೊಂದಿಗೆ ಹೊಸ ಬದುಕನ್ನು ಕಟ್ಟಿಕೊಳ್ಳುವ ಹವಣಿಕೆಯಲ್ಲಿ ಇದ್ದಾರೆ. ಕೆಲವು ಜನ ಇದರಲ್ಲಿ ಯಶಸ್ಸನ್ನೂ ಪಡೆದಿದ್ದಾರೆ. ಭಾರತೀಯ ಸಮಾಜ ಇಂದು ಬದಲಾಗಿದೆ ಎಂದು ಎದೆ ತಟ್ಟಿಕೊಂಡು ಭಾಷಣ ಬಿಗಿಯುವ ಮಂದಿಯೂ ನಮ್ಮ ನಡುವೆಯೂ ಇದ್ದಾರೆ. ಆದರೆ ಬದಲಾವಣೆ ಎನ್ನುವುದು ಹೊರಗಿನ ರೂಪ ಮಾತ್ರ ! ಹೆಣ್ಣುಮಕ್ಕಳ ವಿಷಯದಲ್ಲಿ ಇಂದಿಗೂ ಅದೇ ಹಳೆಯ ಮನೋಭಾವಗಳು ನಮ್ಮಲ್ಲಿ ಇಂದಿಗೂ ಜೀವಂತವಾಗಿವೆ ! ಯಾಕೆಂದರೆ ಈ ದೇಶದಲ್ಲಿ ಮನುಸ್ಮೃತಿ ಪೂರ್ಣವಾಗಿ ಸುಟ್ಟು ಹೋಗಿಲ್ಲ !

‘ವರ್ಣಾಶ್ರಮ ಮತ್ತು ಜಾತಿ ವ್ಯವಸ್ಥೆಯಿಂದ ಬಿಗಿಯಲ್ಪಟ್ಟ ಬಂಧನದಲ್ಲಿಯೇ ಇಂದಿಗೂ ನಾವು ಬದುಕು ನಡೆಸುತ್ತಿದ್ದೇವೆ … … ಸ್ಥಳಾಂತರದ ಜೊತೆಗೆ ವೃತ್ತಿಯಾಂತರವನ್ನೂ ಮಾಡಲಾಗಿದೆ ಎಂಬುದೇನೋ ನಿಜ. ಆದರೆ ಮದುವೆ ಮಾಡುವಾಗ ಮಾತ್ರ ಇಂದಿಗೂ ಜಾತಿಯೇ ಪ್ರಧಾನ ಪಾತ್ರವಹಿಸುತ್ತದೆ. ಈ ದೃಷ್ಟಿಕೋನ ಮನುಸ್ಮೃತಿಯ ಪ್ರಭಾವದಿಂದಲೇ ಚಾಲ್ತಿಯಲ್ಲಿದೆ’ ಎನ್ನುವ ಪ್ರದೀಪ ದೇಶಪಾಂಡೆಯವರ ಮಾತುಗಳನ್ನು ಗಮನಿಸಿದಾಗ ಮನುಸ್ಮೃತಿಯ ಬೇರುಗಳು ಎಷ್ಟೊಂದು ಆಳಕ್ಕಿಳಿದು ನಮ್ಮನ್ನು ಆಳುತ್ತಿವೆ ಎಂಬುದರ ಅರಿವಾಗುತ್ತದೆ.

ಪ್ರದೀಪ ದೇಶಪಾಂಡೆಯವರ ಮಾತುಗಳನ್ನೇ ಮುಂದುವರಿಸಿ ಹೇಳುವುದಾದರೆ ಹೆಣ್ಣುಮಕ್ಕಳನ್ನು ತಮ್ಮ ಆಧೀನ ಎಂದುಕೊಳ್ಳುವ ಪ್ರವೃತ್ತಿ ಇಂದು ನಮ್ಮನ್ನೆಲ್ಲ ಆವರಿಸಿಕೊಂಡು ಬಿಟ್ಟಿದೆ. ‘ಗಂಡು’ ಶ್ರೇಷ್ಠ – ಹೆಣ್ಣು ಕನಿಷ್ಠ ಎನ್ನುವ ವಿಚಾರಗಳು ನಮ್ಮ ತಲೆಯಲ್ಲಿಯೂ ಹಾಗೆಯೇ ಉಳಿದುಕೊಂಡಿವೆ. ಮದುವೆಯ ಸಂದರ್ಭದಲ್ಲಿ ಮದುಮಗನ ಕಡೆಯವರೇ ಎಲ್ಲ ಗೌರವಕ್ಕೂ ಅರ್ಹರು ; ಹೆಣ್ಣಿನ ಕಡೆಯವರು ಗೌಣ ! ಮದುವೆಯಾದ ನಂತರ ವಧುವಿನ ಹೆಸರು ಬದಲಾಗುತ್ತದೆ ; ಅಡ್ಡಹೆಸರೂ ಬದಲಾಗುತ್ತದೆ ! ಮಕ್ಕಳಾದಾಗಲೂ ಹೀಗೆಯೇ ನಮ್ಮ ವರ್ತನೆ ಇರುತ್ತದೆ – ಗಂಡು ಹುಟ್ಟಿದರೆ ಫೇಡೆ ಹಮಚುತ್ತೇವೆ ; ಹೆಣ್ಣುಮಗುವಾಗಿದ್ದರೆ ಜಿಲೇಬಿ ಅಥವಾ ಬರ್ಫಿ ಹಂಚುತ್ತೇವೆ (ಕೆಲವು ಸಲ ಅದೂ ಇಲ್ಲ !) ಮನೆಯಲ್ಲಿ ಹೆಂಡತಿಯಾದಾಕೆ ಗಂಡನನ್ನು ‘ರೀ’ ಎಂದೇ ಕರೆಯಬೇಕು ; ಗಂಡನಾದವನು ಮಾತ್ರ ಹೆಂಡತಿಯನ್ನು ‘ಏಯ್’ ಎಂದೇ ಮಾತನಾಡಿಸುತ್ತಾನೆ !
 
ಗಂಡಸರು ಏನು ಮಾಡಿದರೂ ‘ಅಂವಾ ಗಂಡ್ಸು ; ಮಾಡಿದರ ನಡೀತದ ಬಿಡ’ ಅನ್ನುವ ಮಾತು ಸಾಮಾನ್ಯ ; ಅದೇ ಹೆಂಗಸು ಒಂದು ಸಣ್ಣ ತಪ್ಪು ಮಾಡಿದರೂ ಕೂಡ ‘ಗಂಡುಭೀರಿ’ ಎನಿಸಿಕೊಳ್ಳುತ್ತಾಳೆ ; ವ್ಯಭಿಚಾರಿಣಿ ಪಟ್ಟ ಕಟ್ಟಲಾಗುತ್ತದೆ ! ಅನೈತಿಕ ಸಂಬಂಧ ಮಾಡಿದ ಕೆಟ್ಟ ಹುಳು ಎಂದು ದೂರೀಕರಿಸುತ್ತೇವೆ ! ನಮ್ಮ ದೇಶದಲ್ಲಿ ಹೆಣ್ಣುಮಕ್ಕಳು ಶವ ಸಂಸ್ಕಾರ ಮಾಡುವಂತಿಲ್ಲ ; ವಿಧವೆಯಾದರೆ ಪೂಜೆ-ಪುನಸ್ಕಾರ-ಮದುವೆ-ಮುಂಜಿ-ಸಾರ್ವಜನಿಕ ಸಮಾರಂಭಗಳಲ್ಲಿ ಭಾಗವಹಿಸುವಂತಿಲ್ಲ ; ಎರಡನೆಯ ಮದುವೆಗೂ ನೂರಾರು ವಿಘ್ನ ! ಗಂಡಸಾದರೆ ಆತ ವಿಧುರನಾದರೂ ಎಲ್ಲದರಲ್ಲೂ ಭಾಗವಹಿಸಬಹುದು ; ಎರಡನೆಯ ಮದುವೆಯನ್ನೂ (ಯಾಕೆ ಮೂರನೆಯ ಮದುವೆಯನ್ನೂ) ಮಾಡಿಕೊಳ್ಳಬಹುದು – ಇದಕ್ಕೆ ಯಾವುದೇ ತಕರಾರುಗಳು ಇಲ್ಲ ! ಮನೆಯಲ್ಲಿ ಗಂಡನಾದವನು ಆರಾಮಾಗಿ ಕುಳಿತಾಗ ಹೆಂಡತಿಯಾದವಳು ಮನೆಯ ಕೆಲಸವನ್ನೆಲ್ಲ ಅಚ್ಚಕಟ್ಟಾಗಿ ಮಾಡಿ ಮುಗಿಸಬೇಕು ; ಹೆಚ್ಚು-ಕಡಿಮೆಯಾದರೆ ಬೈಗುಳಗಳ ಸುರಿಮಳೆ ; ಬುದ್ಧಿಯಿಲ್ಲದವಳು ಎಂಬ ತೆಗಳಿಕೆ !

ಈ ಎಲ್ಲ ಕಾರಣಗಳಿಂದಲೇ ಕೆಲವು ಮುಖಂಡರು, ಸನ್ಯಾಸಿಗಳು ಹೆಣ್ಣಿನ ಬಗ್ಗೆ ಬಾಯಿಗೆ ಬಂದಂತೆ ಮಾತನಾಡತೊಡಗಿದ್ದಾರೆ. ಯಾರೋ ಒಬ್ಬರು ಹೆಣ್ಣುಮಕ್ಕಳು ಹೊರಗೆ ಹೋಗಬಾರದು ; ತಗ್ಗಿ-ಬಗ್ಗಿ ನಡೆಯಬೇಕು. ಯಾವುದೇ ಅಲಂಕಾರ ಮಾಡಿಕೊಳ್ಳಬಾರದು ; ಹೊಸ ಬದುಕಿಗೆ ಹಾತೊರೆಯಬಾರದು ; ಬಟ್ಟೆಗಳನ್ನು ಮೈ ತುಂಬ ಧರಿಸಬೇಕು ಎಂದು ಮೊದಲಾಗಿ ಒದರಿ, ಹೆಣ್ಣುಮಕ್ಕಳು ಹೀಗಿದ್ದರೆ ಅವರ ಮೇಲೆ ಅತ್ಯಾಚಾರಗಳು ನಡೆಯುವುದಿಲ್ಲ ಎಂದು ಭವಿಷ್ಯ ನುಡಿದರು. ನಗರಗಳಲ್ಲಿ ಹೆಣ್ಣುಮಕ್ಕಳು ವಿದೇಶಿ ಸಂಸ್ಕೃತಿಯಿಂದ ಪ್ರಭಾವಿತರಾಗಿರುವುದರಿಂದ ಚೆಲ್ಲು ಚೆಲ್ಲಾಗಿರುತ್ತಾರೆ. ಹೀಗಾಗಿ ಸಹಜವಾಗಿಯೇ ಅತ್ಯಾಚಾರ ಪ್ರಮಾಣ ಹೆಚ್ಚು ಎಂದು ಕರಬುತ್ತಾರೆ ! ಯಾಕೆ ಹಳ್ಳಿಗಳಲ್ಲಿಯೂ ಹೆಣ್ಣುಮಕ್ಕಳ ಮೇಲೆ ಅತ್ಯಾಚಾರ ನಡೆಯುವುದಿಲ್ಲವೆ ! ಅಲ್ಲಿ ಪ್ರಚಾರ ಸಿಗುವುದಿಲ್ಲ ; ನಗರಗಳಲ್ಲಿ ಸುದ್ದಿ ಬಹುಬೇಗ ಹಬ್ಬುತ್ತದೆ ಅಷ್ಟೆ ! ಹಾಗೆ ನೋಡಿದರೆ ಇಂಥ ಎಲ್ಲಿ ವಿಕೃತಿ ಇರುತ್ತದೆಯೋ ಅಂಥಲ್ಲೆಲ್ಲ ಇವು ನಡೆಯುತ್ತಲೇ ಇರುತ್ತವೆ.

ಇನ್ನೊಬ್ಬರು ಬಾಯಿ ಬಾಯಿ ಪಡೆದುಕೊಂಡು ಅತ್ಯಾಚಾರಿಗಳು ಎದುರಿಗೆ ಬಂದಾಗ ಹೆಣ್ಣುಮಕ್ಕಳು ಅವರಿಗೆ ಕೈ ಮುಗಿದು. ‘ಅಣ್ಣಾ, ಅಪ್ಪಾ’ ಎನ್ನಬೇಕು. ಆಗ ಅತ್ಯಾಚಾರಿಗಳ ಮನಃಪರಿವರ್ತನೆಯಾಗುತ್ತದೆ ಎಂಬುದಾಗಿ ಪ್ರವಚನ ಹೇಳತೊಡಗಿದರು ! ಹೆಣ್ಣನ್ನು ಎಷ್ಟೊಂದು ಹೀನಾಯವಾಗಿ ನಡೆಯಿಸಿಕೊಳ್ಳುತ್ತದೆಯಲ್ಲ ಈ ದೇಶ ! ವಿಕೃತ ಮನಸ್ಸಿನವರ ಮುಂದೆ ಕೈ ಕಾಲು ಹಿಡಿದು ಕಾಪಾಡಿ ಎಂದರೆ ರಕ್ಷಣೆ ಸಿಗಲು ಸಾಧ್ಯವೆ ! ಇಂಥ ಮಾತುಗಳೆಲ್ಲ ಹೆಣ್ಣುಮಕ್ಕಳನ್ನು ಇನ್ನೊಂದಿಷ್ಟು ಭ್ರಮಾವಲಯದಲ್ಲಿ ಕೆಡವಲು ಮಾಡುವ ಹುನ್ನಾರಗಳೇ ಆಗಿವೆ ! ಇದಕ್ಕೆಲ್ಲ ಮೂಲ ಕಾರಣ ಮನುಸ್ಮೃತಿ ಇನ್ನೂ ಉರಿಯುತ್ತಲೇ ಇದೆ ! ಅದನ್ನು ಮತ್ತೊಮ್ಮೆ ನಾವೆಲ್ಲ ಸೇರಿ ನಮ್ಮ ಮನೆಗಳಿಂದ-ಮನಗಳಿಂದ ಹೊರ ತಂದು ಸಂಪೂರ್ಣವಾಗಿ ಸುಡಬೇಕಿದೆ ; ಸುಟ್ಟು ಇನ್ನೆಂದೂ ಚಿಗಿಯದಂತೆ ಬೂದಿ ಮಾಡಬೇಕಿದೆ.

Sunday, November 04, 2012

ಅಂಬೇಡ್ಕರರನ್ನು ಸಂವಿಧಾನ ಶಿಲ್ಪಿಎಂಬ ಪಟ್ಟದಿಂದ ಕೆಳಕ್ಕಿಳಿಸುವ ಷಡ್ಯಂತ್ರ !



- ರಘೋತ್ತಮ ಹೊ.ಬ, ಚಾಮರಾಜನಗರ

ಇತ್ತೀಚೆಗೆ ಅಥವಾ 1950 ಜನವರಿ 26ರಿಂದಲೂ ಈ ದೇಶದಲ್ಲಿ ಒಂದು ಷಡ್ಯಂತ್ರ ನಡೆಯುತ್ತಾ ಬಂದಿದೆ. ಅದು ಅಂಬೇಡ್ಕರರನ್ನು ಸಂವಿಧಾನ ಶಿಲ್ಪಿ ಎಂಬ ಪಟ್ಟದಿಂದ ಕೆಳಕ್ಕಿಳಿಸುವುದು! ಅರುಣ್ ಶೌರಿ ಇರಬಹುದು ಅಥವಾ ಮತ್ಯಾರೋ ಆರ್ಯ ಶೂರ ಇರಬಹುದು, ಒಟ್ಟಾರೆ ಎಲ್ಲರ ಟಾರ್ಗೆಟ್ ಒಂದೇ. ಅಂಬೇಡ್ಕರ ರಿಂದ ಸಂವಿಧಾನ ಶಿಲ್ಪಿ ಎಂಬ ಟೈಟಲ್ಲನ್ನು ಕಿತ್ತುಕೊಳ್ಳುವುದು ಅಥವಾ ಅವರು ಸಂವಿಧಾನ ಬರೆದೇ ಇಲ್ಲ ಎಂದು ಸಾಧಿಸಿ ತೋರಿಸುವುದು!

ಇದು ಎಷ್ಟು ಸಾಧ್ಯ? ಅಥವಾ ಎಷ್ಟು ಅಸಾಧ್ಯ? ಅದನ್ನು ಕಾಲವೇ ನಿರ್ಣಯಿಸುತ್ತಿದೆ. ಯಾಕೆಂದರೆ ಹಿಂದೆಲ್ಲಾ ಇದು ಅಂದರೆ ಅವರು ಇವರು ಎನ್ನುವುದು ಅಥವಾ ಇವರು ಅವರೇ ಅಲ್ಲ ಎಂದು ಸಾಧಿಸಿ ತೋರಿಸುವುದು ಅಥವಾ ಸಾಧಿಸಿಯೇ ಬಿಡುವುದು ಆಗಾಗ ನಡೆಯುತ್ತಾ ಬಂದಿದೆ. ಉದಾ: ಬುದ್ಧನನ್ನು ವಿಷ್ಣು ಎನ್ನುವುದು, ಶಿವಾಜಿಯನ್ನು ಮುಸ್ಲಿಂ ದ್ವೇಷಿ ಎನ್ನುವುದು ಇತ್ಯಾದಿ.

ಹಾಗಿದ್ದರೆ ಹೀಗೆಯೇ ಅಂದರೆ ಬುದ್ಧನನ್ನು ವಿಷ್ಣು ಎಂದ ಹಾಗೆ ಸಂವಿಧಾನ ಶಿಲ್ಪಿ ಅಂಬೇಡ್ಕರರನ್ನು ಸಂವಿಧಾನ ಶಿಲ್ಪಿ ಅಲ್ಲ ಎಂದು ಸಾಧಿಸಲು ಸಾಧ್ಯವೇ? ಜನಸಾಮಾನ್ಯರೆ ಇದನ್ನು ತೀರ್ಮಾನಿಸಬೇಕು.ಯಾಕೆಂದರೆ ತಮಗೆ ಬೇಕೆಂದವರನ್ನು ಇಂದ್ರ ಚಂದ್ರ ಎನ್ನುವುದು, ತಮಗೆ ಬೇಡ ಎಂದವರನ್ನು ಹೀಗಳೆವುದು, ಇದು ಈ ದೇಶದ ಬ್ರಾಹ್ಮಣವಾದಿ ಚರಿತ್ರಕಾರರು ಮಾಡಿಕೊಂಡು ಬಂದಿರುವ ಪದ್ಧತಿ. ಅಂತಹ ಪದ್ಧತಿಯ ಮುಂದುವರಿದ ಭಾಗವಾಗಿಯೇ ಅಂಬೇಡ್ಕರರನ್ನು ಸಂವಿಧಾನ ಶಿಲ್ಪಿಅಲ್ಲ ಎಂದು ಸಾಧಿಸುವ ಈ ವ್ಯರ್ಥಾಲಾಪ. ಅಂದಹಾಗೆ ಅದುನಡೆದಿರುವುದು ಸುಭಾಷ್ ಕಶ್ಯಪ್ ಎಂಬ ಸಂವಿಧಾನ ತಜ್ಞ ಎನಿಸಿಕೊಂಡವರು ಬರೆದಿರುವ “Our Constitution”  ಎಂಬ ಕೃತಿಯಲ್ಲಿ.ಹಾಗೆ ಸಾಧಿಸ ಹೊರಟವರು ಮೊದಲು ಹೇಳುವುದು ಸಂವಿಧಾನದ ಪ್ರಥಮ ಕರಡನ್ನು ಸಿದ್ಧಪಡಿಸಿದವರು ಬಿ.ಎನ್.ರಾವ್ ಎಂಬವವರು ಎಂದು!

ಅಂದರೆ ಆಗಸ್ಟ್ 29, 1947ರಂದು ಕರಡು ಸಮಿತಿ ರಚಿಸಲ್ಪಟ್ಟರೆ ಅದು ರಚಿಸಲ್ಪಟ್ಟ ಒಂದೇ ತಿಂಗಳಲ್ಲಿ ಅಂದರೆ ಅಕ್ಟೋಬರ್ 1947ರಲ್ಲಿ ಅದರ ಸದಸ್ಯರಲ್ಲೋರ್ವರಾದ ಬಿ.ಎನ್.ರಾವ್‌ರವರು ಪ್ರಥಮ ಕರಡು ರಚಿಸಿದರಂತೆ, ಅವರು ರಚಿಸಿದ ಕರಡನ್ನು ಅಂಬೇಡ್ಕರ್ ನೇತೃತ್ವದ ಸಮಿತಿ ಬರೀ ಪರಿಶೀಲಿಸಿತಂತೆ! ಇದು ಸುಭಾಷ್ ಕಶ್ಯಪ್‌ರಂತಹ ಬ್ರಾಹ್ಮಣ ಚರಿತ್ರಾಕಾರರ ಅಂಬೋಣ. ಆದರೆ ಅದೇ ಸುಭಾಷ್ ಕಶ್ಯಪ್ ತಮ್ಮ“Our Constitution” ಕೃತಿಯ ಅದೇ ಪುಟಗಳಲ್ಲಿ ಅಂಬೇಡ್ಕರರ ಹೇಳಿಕೆಯೊಂದನ್ನು ಉಲ್ಲೇಖಿಸುತ್ತಾರೆ.

ಆ ಹೇಳಿಕೆಯಲ್ಲಿ ಸ್ವತಃ ಅಂಬೇಡ್ಕರರೇ 1947 ಆಗಸ್ಟ್‌ರಿಂದ 1949 ಅಕ್ಟೋಬರ್‌ವರೆಗೆ ಕರಡು ಸಮಿತಿ ಅನೇಕ ಸಭೆಗಳನ್ನು ನಡೆಸಿ ಸಂವಿಧಾನದ ಕರಡಿನ ಅಂತಿಮ ಪ್ರತಿಯನ್ನು 1949 ನವೆಂಬರ್ ತಿಂಗಳಲ್ಲಿ ಸಂವಿಧಾನ ಸಭೆಗೆ ಸಲ್ಲಿಸಿತು ಎನ್ನುತ್ತಾರೆ. ಹಾಗಿದ್ದರೆ 1949 ನವೆಂಬರ್ ತಿಂಗಳಲ್ಲಿ, ಎರಡು ವರ್ಷಗಳ ಸತತ ಪ್ರಯತ್ನದಲ್ಲಿ ಸಂವಿಧಾನ ಸಿದ್ಧಗೊಂಡಿತೆಂದರೆ ಅದರ ಶ್ರೇಯಸ್ಸು ಸಲ್ಲಬೇಕಾದ್ದು ಯಾರಿಗೆ? ಸಮಿತಿಯ ಅಧ್ಯಕ್ಷರಾದ ಅಂಬೇಡ್ಕರರಿಗೆ ತಾನೆ? ಅಂದಹಾಗೆ 1947ರ ಆರಂಭದಲ್ಲಿ ಕೇಳಿಬರುವ ಬಿ.ಎನ್.ರಾವ್ ಎಂಬವವರ ಹೆಸರು ಸಂವಿಧಾನ ರಚಿಸಲು ತೆಗೆದುಕೊಂಡ ಮುಂದಿನ ಆ ಎರಡು ವರ್ಷಗಳ ಸಮಯದಲ್ಲಿ ಅಂದರೆ 1948, 1949ರಲ್ಲಿ ಎಲ್ಲಿಯೂ ಕೇಳಿಬರುವುದಿಲ್ಲ! (ಇತ್ತೀಚೆಗೆ ಹಿಂದುತ್ವವಾದಿಗಳಿಂದ ಕೇಳಿ ಬರುತ್ತಿರುವುದನ್ನೊರತು ಪಡಿಸಿದರೆ!).

ಇದಕ್ಕೆ ಪೂರಕವಾಗಿ ಸಂವಿಧಾನ ಸಭೆಯಲ್ಲಿ ಮಾತನಾಡಿರುವ ಸಮಿತಿಯ ಸದಸ್ಯ ಟಿ.ಟಿ.ಕೃಷ್ಣಮಾಚಾರಿಯವರು ಹೇಳಿರುವುದನ್ನು ನೋಡಿ ಸಂವಿಧಾನದ ಕರಡು ಸಮಿತಿಯಲ್ಲಿದ್ದ ಒಬ್ಬರು ತೀರಿಕೊಂಡರು, ಅವರ ಸ್ಥಾನಕ್ಕೆ ಮರುನೇಮಕ ಆಗಲಿಲ್ಲ. ಒಂದಿಬ್ಬರು ವಿದೇಶದಲ್ಲಿ ನೆಲೆಸಿದ್ದರಿಂದ ಅವರಿಗೆ ಕರಡು ರಚನೆ ಕಾರ್ಯದಲ್ಲಿ ಭಾಗವಹಿಸಲಾಗಲಿಲ್ಲ. ಮಗದೊಬ್ಬರು ಸದಸ್ಯರು ದಿಲ್ಲಿಯಿಂದ ದೂರದಲ್ಲಿದ್ದುದರಿಂದ ಅವರು ಕೂಡ ಅದರಲ್ಲಿ ಭಾಗವಹಿಸಲಿಲ್ಲ. ಅಂತಿಮವಾಗಿ ಸಂವಿಧಾನ ರಚನೆಯ ಪೂರ್ಣ ಜವಾಬ್ದಾರಿ ಅಂಬೇಡ್ಕರರ ಮೇಲೆ ಬಿದ್ದಿತು. ಅಂದಹಾಗೆ ಕೃಷ್ಣಾಮಾಚಾರಿಯವರ ಹೇಳಿಕೆಯ ಪ್ರಕಾರ ಸುಭಾಷ್ ಕಶ್ಯಪ್‌ರವರು ಹೇಳಿರುವ ಕರಡು ಸಮಿತಿ ಸದಸ್ಯರಾದ ಆ ಬಿ.ಎನ್.ರಾವ್ ಎಲ್ಲಿ ಹೋದರು? ವಿದೇಶಕ್ಕೋ ಅಥವಾ ನೇರ ಸ್ವರ್ಗಕ್ಕೋ?

ಅಂಬೇಡ್ಕರರು ಸಂವಿಧಾನ ಶಿಲ್ಪಿ ಅಲ್ಲ ಎಂದು ಹೇಳುವವರು ಇದನ್ನು ಸ್ಪಷ್ಟಪಡಿಸಬೇಕು.ಸಂವಿಧಾನ ಅರ್ಪಿತವಾದ ಆ ಸಂಧರ್ಭದಲ್ಲಿ ಅಂದರೆ ನವೆಂಬರ್ 26,1949ರಲ್ಲಿ ಸಭೆಯ ಅಧ್ಯಕ್ಷರಾದ ಡಾ.ಬಾಬು ರಾಜೇಂದ್ರ ಪ್ರಸಾದ್‌ರವರು ಡಾ.ಅಂಬೇಡ್ಕರ್‌ರವರಿಗೆ ಸಂವಿಧಾನ ರಚಿಸಲು ಪೂರ್ಣ ಸ್ವಾತಂತ್ರ ನೀಡಿದ್ದಿದ್ದರೆ, ಅವರು ಖಂಡಿತವಾಗಿಯೂ ತಮ್ಮದೇ ಆದ ಮತ್ತು ಭಿನ್ನವಾದ ಸಂವಿಧಾನವನ್ನು ಈ ದೇಶಕ್ಕೆ ನೀಡುತ್ತಿದ್ದರು. ಇದರಲ್ಲಿ ಯಾವುದೇ ಅನುಮಾನವಿಲ್ಲ ಎಂದಿದ್ದಾರೆ. ಅಂದಹಾಗೆ ರಾಜೇಂದ್ರ ಪ್ರಸಾದರ ಈ ಹೇಳಿಕೆ ಅರ್ಥೈಸುವುದೇನನ್ನು? ಸಂವಿಧಾನ ರಚಿಸುವ ಪೂರ್ಣ ಹೊಣೆ ಅಂಬೇಡ್ಕರರ ಮೇಲೆ ಬಿದ್ದಿತ್ತು ಆದರೆ ಅವರಿಗೆ ಕೆಲವು ತಡೆಗಳಿದ್ದವು ಎಂದು ತಾನೆ? ಅದೇನೆ ಇರಲಿ ಅಂಬೇಡ್ಕರ್ ಸಂವಿಧಾನ ಶಿಲ್ಪಿ ಎಂದು ಘಂಟಾಘೋಷವಾಗಿ ಹೇಳಲು ಡಾ.ಬಾಬು ರಾಜೇಂದ್ರಪ್ರಸಾದ್ ಮತ್ತು ಟಿ.ಟಿ.ಕೃಷ್ಣಾಮಾಚಾರಿಯವರ ಇದಿಷ್ಟು ಹೇಳಿಕೆ ಮಾತ್ರ ಸಾಕು.

ಯಾಕೆಂದರೆ ಇವರಿಬ್ಬರು ಸಂವಿಧಾನದ ರಚನೆಯ ಜೊತೆ ಜೊತೆಯಲ್ಲೆ ಬೆಳೆದವರು, ಅರುಣ್ ಶೌರಿ ಮತ್ತು ಸುಭಾಷ್ ಕಶ್ಯಪ್‌ರ ಹಾಗೆ ಅದನ್ನು ಅದರ ಇತಿಹಾಸವನ್ನು ದೂರದಿಂದ ಹಿಂದುತ್ವದ ದೃಷ್ಟಿಯಿಂದ ಕೆದಕಿದವರಲ್ಲ! ಮುಂದುವರಿದು ಅಂಬೇಡ್ಕರರ ಸಂವಿಧಾನ ರಚನೆಯ ಕಾರ್ಯದ ಬಗ್ಗೆ ಆಕ್ಷೇಪಿಸುವವರು ಹೇಳುವುದು ಸಂವಿಧಾನ ಎಂಬುದು ಕತೆಯಲ್ಲ, ಕಾದಂಬರಿಯಲ್ಲ ಅದನ್ನು ಅಂಬೇಡ್ಕರರೊಬ್ಬರೇ ಬರೆದಿದ್ದಾರೆ ಎನ್ನುವುದು ಎಷ್ಟು ಸರಿ? ಎಂದು. ನಿಜ, ಸಂವಿಧಾನ ಕತೆಯಲ್ಲ, ಕಾದಂಬರಿಯೂ ಅಲ್ಲ. ಹಾಗೆಯೇ ಸ್ವಾತಂತ್ರ ಎಂಬುದೂ ಕೂಡ ಕಡ್ಲೆಪುರಿಯಲ್ಲ! ಏಕೆಂದರೆ ಗಾಂಧೀಜಿಯವರನ್ನು ದೇಶಕ್ಕೆ ಸ್ವಾತಂತ್ರ ತಂದುಕೊಟ್ಟವರು ಎಂದು ಪ್ರಶ್ನಾತೀತವಾಗಿ ಒಪ್ಪಿಕೊಳ್ಳಲಾಗಿದೆ.

ಇದನ್ನು ಯಾರೂ ಗಾಂಧೀಜಿ ಸ್ವಾತಂತ್ರವನ್ನು ಯಾವಾಗ, ಯಾವ ಟೈಮಲ್ಲಿ, ಯಾರ ಕೈಗೆ ತಂದುಕೊಟ್ಟರು ಎಂದು ಎಲ್ಲಿಯೂ ಪ್ರಶ್ನಿಸುವುದಿಲ್ಲ! ಅಂಬೇಡ್ಕರ್‌ರವರು ರಚಿಸಿದ ಸಂವಿಧಾನಕ್ಕೆ ಸಾಕ್ಷಿಯಾಗಿ ಸಂವಿಧಾನದ ಆ ಮೂಲ ಪ್ರತಿ ಇದೆ. ಅದರ ರಚನೆಯ ಹೊಣೆ ಹೊತ್ತ ಕರಡು ಸಮಿತಿಯ ಅಧ್ಯಕ್ಷರು ಅವರು ಎಂಬುದಕ್ಕೆ ದಾಖಲೆ ಇದೆ. ಆದರೆ ಗಾಂಧೀಜಿ ಸ್ವಾತಂತ್ರ ತಂದುಕೊಟ್ಟರೆಂಬುದಕ್ಕೆ ಏನು ದಾಖಲೆ ಇದೆ? ಹಾಗೆ ಹೇಳುವುದಾದರೆ ದೇಶಕ್ಕೆ ಸ್ವಾತಂತ್ರ ಬಂದ ದಿನ ಗಾಂಧೀಜಿ ದೇಶದ ರಾಜಧಾನಿ ದಿಲ್ಲಿಯಲ್ಲಿ ಇರಲೇ ಇಲ್ಲ. ದೂರದ ಕಲ್ಕತ್ತಾದಲ್ಲಿ ಇದ್ದರು! ಹಾಗಿದ್ದರೂ ಈ ದೇಶ ಅವರನ್ನು ದೇಶಕ್ಕೆ ಸ್ವಾತಂತ್ರ ತಂದುಕೊಟ್ಟವರು ಎಂದು ಒಪ್ಪಿಕೊಂಡಿಲ್ಲವೆ?

ಗಾಂಧೀಜಿ ದೇಶಕ್ಕೆ ಸ್ವಾತಂತ್ರ ತಂದುಕೊಟ್ಟವರು ಎಂಬುದನ್ನು ಒಪ್ಪಿಕೊಳ್ಳಬಹುದಾದರೆ ಅಂಬೇಡ್ಕರರನ್ನು ಸಂವಿಧಾನಶಿಲ್ಪಿ ಎಂದು ಒಪ್ಪಿಕೊಳ್ಳಲು ಏನಡ್ಡಿ? ಯಾಕೆ, ಅಂಬೇಡ್ಕರರು ಅಸ್ಪಶ್ಯರು ಎಂಬ ಕಾರಣಕ್ಕೆ ಅವರಿಗೆ ಅಂತಹ ಗೌರವವನ್ನು ನೀಡಲು ಈ ದೇಶದ ಪಟ್ಟಭದ್ರ ಹಿತಾಸಕ್ತಿಗಳಿಗೆ ಮನಸ್ಸಾಗುತ್ತಿಲ್ಲವೆ? ಸತ್ಯ ಹೇಳಿದರೆ ನಾವೇನು ಬೇಜಾರು ಮಾಡಿಕೊಳ್ಳುವುದಿಲ್ಲ. ಬೇಕಿದ್ದರೆ ನೇರವಾಗಿ ಹೇಳಲಿ, ಅಂಬೇಡ್ಕರ್ ಅಸ್ಪಶ್ಯರು ; ಆದ್ದರಿಂದ ಅವರು ಸಂವಿಧಾನ ಶಿಲ್ಪಿಯಲ್ಲ ಎಂದು !
ಕೃಪೆ : ವಾರ್ತಾಭಾರತಿ
  
 

Sunday, September 02, 2012

Kaksparsh : Potential Wasted ( Marathi Movie Review)

Kaksparsh is easily one of the most promoted Marathi films in recent times. Zee Talkies having taken up the distribution have gone all out in securing the film a good release in cinema halls as well. The film has entered the 3rd week and still the shows are running housefull which is certainly a rarity for a marathi movie. Though it is heartening to see a marathi film getting such publicity what it also does is half convince the people about the film even before watching it.

I have had a rather hectic last half a month or so which has actually helped me keep a little distance from the heavy publicity and thus maintain my objectivity. And I feel that the film is definitely not as good as its makers are proclaiming it to be or even the general consensus amongst the people tells you.
Kaksparsh is a period film set in the 1930s-1950s Konkan Mahrashtra.  Haridada, the patriarch of a Brahmin family, is like a father to his kid brother Mahadev. He decides to get Mahadev married off to a very young Durga who is later renamed by Mahadev as Uma. But tragedy strikes as Mahadev dies even before consummating their marriage.
According to Hindu rituals, as a part of last rites a bowl of rice and sesame seeds is offered to a crow which is supposed to represent the deceased soul. The soul of the departed is only supposed to receive ‘mukti’ when the crow actually eats out from food the offered. During Mahadev’s last rites, as no crow seems to be willing to touch or eat the food offered, Haridada murmurs something and a crow does finally oblige. We come to know what Haridada actually murmured only towards the end in the film.
As per the custom prevalent in Pre-Independence days a widow is supposed to shave off her hair. But Haridada objects to Uma’s hair being shaven off without giving an explanation of this decision of his, much to the disappointment and anger of the society at large. He then over a period of time keeps taking decisions with respect to the widowed Uma which keeps baffling his family and makes everybody and even the audience believe(rather misleadingly) that he has developed feelings for the young Uma.
The plot surely is interesting but then the director Mahesh Manjrekar or even the scriptwriter Girish Joshi doesn’t deserve credit for it as the film is an adaptation of the book by the same name written by Usha Datar. Rather an opportunity to make a truly memorable film has been wasted.
The biggest issue with the film, especially the first half, is that it feels rushed. The film is like a saga across generations unfolding on the screen. However, such tales work only when they take their own sweet time to develop the plot and its characters. Mahesh Manjrekar, here, seems to be a lot worried about the attention span of his audience and swiftly proceeds forward from one scene to another. Also, at times it feels as if the movie has been re-edited to fit into the 2 hour bracket just to suit the need of the multiplexes and other exhibitors.
Girish Joshi’s script narrates the film in flashbacks which don’t always seem smooth. It also has a tendency to spoon feed the audience. The character played by Vaibhav Mangale as the Upadhyay of the village is almost a caricature.
What works in the favor of the film is primarily the pre-independence Konkan set-up. Ajit Reddy’s camerawork deserves major credit for it. The costumes, the language all are quite authentic and you do feel transported to a bygone era.  Another major plus of the film is the performances. Sachin Khedekar as the patriarch of the family is simply brilliant. So is Megha Manjrekar who plays his wife. Others like Savita Malpekar who plays the bitter old widow(Namu Attya) and Haridada’s friend Balwant played Sanjay Khapare are also impressive. But Ketaki Mategaonkar, who is steadily developing a fan following, isn’t that convincing as the very young bride turned widow. Also, there are some interesting things that you learn from the film like in those times marriage was supposed to be consummated only on an auspicious occasion.
The film also does have a few memorable scenes like the one where the old widow Namu Attya tries to make Uma understand how fortunate she is as Haridada treats her in a much better manner than what widows in those times were normally subjected to. Another striking scene is that of Uma, a widow completely deprived of any sexual pleasure, secretly enjoying the sound of Haridada’s newly married son Sankarshan and his wife making love to each other.
Though the above points make the film worth a watch the cons of the film surely outweigh the pros. For me personally the wasted potential is what majorly makes the film a dampener. The film has enough material to blow you away but the makers are content with scratching the surface. Now, another project which Zee Talkies is associated with after Natrang will be added to my list of the most overrated marathi films of recent times.

Marathi, Regional Tadka — By Rasik on May 22, 2012

Tuesday, July 31, 2012

ಮಂಗಳೂರ ಹಿಂಸೆಯಲ್ಲಿ ನಮ್ಮ ಪಾಲುದಾರಿಕೆ…



                                                                  -ಬಿ. ಶ್ರೀಪಾದ್ ಭಟ್ 

ಮಂಗಳೂರಿನಲ್ಲಿ ಅಟ್ಟಹಾಸ ಮೆರೆದ ‘ನೈತಿಕ ಪೊಲೀಸರು’

ನಿನ್ನೆ ಮಂಗಳೂರಿನಲ್ಲಿ ಹಿಂದೂ ಸಂಘಟನೆಯ ಹುಡುಗರು ಹೆಣ್ಣುಮಕ್ಕಳ ಮೇಲೆ ನಡೆಸಿದ ಹಲ್ಲೆ ಅಮಾನವೀಯವಾದದ್ದು ಹಾಗೂ ಅತ್ಯಂತ ಕ್ರೌರ್ಯವಾದದ್ದು. ಆದರೆ ಇದು ಹೊಸದಾಗಿ ನಡೆಯುತ್ತಿದೆ ಎಂದು ನಾವು ಗಾಬರಿಗೊಂಡರೆ ಅದು ನಮ್ಮ ಆತ್ಮವಂಚನೆಯಷ್ಟೆ. ಕಳೆದ ಇಪ್ಪತ್ತು ವರ್ಷಗಳಲ್ಲಿ ಇದು ದೇಶಾದ್ಯಾಂತ ನೂರಾರು ಬಾರಿ ನಡೆದಿದೆ. ಈ ಮತೀಯವಾದಿ ಆರೆಸ್ಸೆಸ್ ಸಂಘಟನೆ “ಗರ್ವ್ ಸೆ ಕಹೋ ಹಂ ಹಿಂದೂ ಹೈ” ಎನ್ನುವ ಘೋಷಣೆಯನ್ನು ಹುಟ್ಟು ಹಾಕಿದಾಗಲೇ ಈ ಹಲ್ಲೆಯ ಕ್ರೌರ್ಯದ ಬೀಜಗಳು ಮೊಳಕೆಯೊಡೆದದ್ದು.. ನಂತರ “ಏಕ್ ಧಕ್ಕ ಔರ್ ದೋ” ಎನ್ನುವ ಫ್ಯಾಸಿಸ್ಟ್ ಮನಸ್ಥಿತಿ ಚಲನಶೀಲಗೊಂಡಾಗ ಈ ಕ್ರೌರ್ಯದ ಅನೇಕ ಮುಖಗಳು ಅನಾವರಣಗೊಂಡವು. ಈ ಬಗೆಯ ಕ್ರೌರ್ಯಕ್ಕೆ ನೀರೆರೆದು ಪೋಷಿಸಿದ ಅಡ್ವಾನಿ ಹಾಗೂ ಮತ್ತೊಬ್ಬ ಫ್ಯಾಸಿಸ್ಟ್ ನರೇಂದ್ರ ಮೋದಿ ಇಂದು ಭವಿಷ್ಯದ ಪ್ರಧಾನಿ ಪಟ್ಟದ ಸ್ಪರ್ಧೆಗಳು. ಇವರನ್ನು ಹಾಗೂ ಇವರ ಫ್ಯಾಸಿಸ್ಟ್ ಮಾತೃ ಪಕ್ಷ ಆರೆಸ್ಸೆಸ್ ಅನ್ನು ಸಹಿಸಿಕೊಂಡ ಘೋರವಾದ ತಪ್ಪಿಗೆ ಸಮಾಜ ಈ ಬಗೆಯ ಹಲ್ಲೆಗಳನ್ನು ಕಾಲಕಾಲಕ್ಕೆ ಎದುರುನೋಡಬಹುದು. ಇವರ ಹಿಂದುತ್ವದ ಕ್ರೌರ್ಯದ ಹುಸಿಚಿಂತನೆಗೆ ದೇಶವೊಂದರ, ರಾಜ್ಯವೊಂದರ ಸಾಂಸ್ಕೃತಿಕ ಸಮಾಜ ಹಾಗೂ ಪ್ರಜಾಪ್ರಭುತ್ವವನ್ನು ಒಪ್ಪಿಕೊಂಡ ವ್ಯವಸ್ಥೆ ತೆರಬೇಕಾದ ಬೆಲೆ ಅಪಾರವಾದದ್ದು. ಚಿಂತಕ ಗ್ರಾಮ್ಷಿ ಹೇಳಿದ ಹಾಗೆ “ನಾವು ಮೇಲ್ನೋಟಕ್ಕೆ ವೇದಾಂತಿಗಳಾಗಿಯೂ,ಸಿದ್ಧಾಂತವಾದಿಗಳಾಗಿ ಕಾಣಿಸಿಕೊಳ್ಳುತ್ತೇವೆ. ಆದರೆ ಈ ಮುಗ್ಧ ವೇದಾಂತಗಳೇ ನಮ್ಮಲ್ಲಿ ನಮಗೆ ಗೊತ್ತಿಲ್ಲದ ಹಾಗೆ ನಮ್ಮೊಳಗೆ ಫ್ಯಾಸಿಸ್ಟ್ ಸಂಸೃತಿಯನ್ನು ಹುಟ್ಟಿಹಾಕುತ್ತವೆ”. ಈ ಮಾತುಗಳು ನಾಗರಿಕ ಸಮಾಜದಲ್ಲಿ ಅತ್ಯಂತ ಕ್ರೌರ್ಯದಿಂದ ಅಸಹಾಯಕ ಹೆಣ್ಣುಮಕ್ಕಳ ಮೇಲೆ ಅನಾಗರಿಕವಾಗಿ ಹಲ್ಲೆ ನಡೆಸಿದ ಆ ಘಾತುಕ ಹುಡುಗರಿಗೂ ಅನ್ವಯಿಸುತ್ತದೆ, ಈ ಅಮಾನವೀಯ,ಅನಾಗರೀಕ ಹಲ್ಲೆಯನ್ನು ಹಿಂದೂ ಸಂಸ್ಕೃತಿಯ ಹೆಸರಿನಲ್ಲಿ ಸಮರ್ಥಿಸಿಕೊಳ್ಳುತ್ತಿರುವ ಜನಸಾಮಾನ್ಯರಿಗೂ ಅನ್ವಯಿಸುತ್ತದೆ, ನಮ್ಮ ಕಾಲಘಟ್ಟದಲ್ಲಿ ಈ ತರಹದ ಅನಾಗರಿಕ ಘಟನೆಗಳು ನಡೆದಾಗಲೆಲ್ಲ ಅಸಹಾಯಕತೆಯಿಂದ ಪತ್ರಿಕಾ ಹೇಳಿಕೆಗಳ ಮೂಲಕ, ಲೇಖನಗಳ ಮೂಲಕ ಖಂಡಿಸುವ ನಮಗೂ ಅನ್ವಯಿಸುತ್ತದೆ.
ಈ ಫ಼್ಯಾಸಿಸ್ಟ್ ಧೋರಣೆಗಳಿಂದ ಮುಕ್ತಿಗಾಗಿ ರಾಜಕೀಯ ಚಿಂತಕ ’ಗ್ರಾಮ್ಷಿ’ ಯು “ಸಾಂಸ್ಕೃತಿಕ ಯಜಮಾನ್ಯ”ವನ್ನು ಪ್ರತಿಪಾದಿಸುತ್ತಾನೆ (Cultural hegemony). ಈ ಸಾಂಸ್ಕೃತಿಕ ಯಜಮಾನ್ಯದಲ್ಲಿ ಗ್ರಾಮ್ಷಿಯು ದುಡಿಯುವ ವರ್ಗಗಳು ಕೇವಲ ಆರ್ಥಿಕ ಬೆಳವಣಿಗೆಯ ಮುಖಾಂತರವಾಗಲೀ, ಕೇವಲ ರಾಜಕೀಯ ಅಧಿಕಾರದ ಮುಖಾಂತರವಾಗಲೀ ಒಂದು ಸಮಾಜವನ್ನು ಕಟ್ಟಲು ಸಾಧ್ಯವಿಲ್ಲ, ಬದಲಾಗಿ ಈ ದುಡಿಯುವ ಜನತೆ ಸಾಂಸ್ಕೃತಿಕವಾಗಿ ಬುದ್ಧಿಜೀವಿಗಳಾಗಿಯೂ ರೂಪಗೊಂಡಾಗ ಆಗ ವ್ಯವಸ್ಥೆಯಲ್ಲಿ ಸಮತೋಲನ, ಸಹನೆ ಒಡಮೂಡುತ್ತದೆ ಎಂದು ಚಿಂತಿಸುತ್ತಾನೆ. ಇಲ್ಲದೇ ಹೋದಲ್ಲಿ ಪಟ್ಟಭದ್ರ ಹಿತಾಸಕ್ತಿಯುಳ್ಳ ಪ್ರಭುತ್ವವು ತನ್ನದೇ ಆದ ಬೂರ್ಜ್ವಾ ಯಜಮಾನಿಕೆಯನ್ನು ಸಂಸ್ಕೃತಿಯ ಹೆಸರಿನಲ್ಲಿ ಸಮಾಜದ ಮೇಲೆ ಹೇರುತ್ತದೆ ಎಂದು ಗ್ರಾಮ್ಷಿಯ ಖಚಿತವಾದ ಅಭಿಪ್ರಾಯ.
ಇಂದು ದೇಶದಲ್ಲಿ, ನಿನ್ನೆ ಹಾಗೂ ನಿರಂತರವಾಗಿ ಕೆಲವು ವರ್ಷಗಳಿಂದ ಮಂಗಳೂರು ಹಾಗು ಮಂಗಳೂರು ಮತ್ತು ಉಡುಪಿ ಜಿಲ್ಲೆಯಲ್ಲಿ ಸಂಸ್ಕೃತಿಯ ಹೆಸರಿನಲ್ಲಿ ನಡೆದ ಹಲ್ಲೆಯ ಹಿಂದಿನ ಕ್ರೌರ್ಯದ ಮನಸ್ಥಿತಿಯನ್ನು ಈ ಸಾಂಸ್ಕೃತಿಕ ಯಜಮಾನ್ಯದ ಪರಿಭಾಷೆಯಲ್ಲಿ ಅರ್ಥೈಸಬೇಕು. ನಾವೆಲ್ಲ ನಮ್ಮ ನೆಲದ ಮಾನವೀಯ ಸಂಸ್ಕೃತಿಯನ್ನು, ಜೀವಪರವಾದ ಅವೈದಿಕ ಸಂಸ್ಕೃತಿಯ ಯಜಮಾನ್ಯವನ್ನು ವ್ಯವಸ್ಥೆಯೊಳಗೆ ಚಲನಶೀಲವಾಗಿ, ನಿರಂತರವಾಗಿ ನೆಲೆಗೊಳ್ಳಲು ಪ್ರಯತ್ನಿಸಿಲ್ಲದ ತಪ್ಪಿಗಾಗಿ ಇಂದು ಸಂಘಪರಿವಾರದ ವಿಕೃತಿ ಚಿಂತನೆಯನ್ನು ಮೈಗೂಡಿಸಿಕೊಂಡ ಹಿಂದೂ ಸಂಸ್ಕೃತಿಯ ಹೆಸರಿನಲ್ಲಿ ನಿರಂತರವಾದ ಹಲ್ಲೆ ಇಂದು ನಮ್ಮ ಕಣ್ಣೆದುರಿಗೆ ನಡೆಯುತ್ತಿದೆ. ಇಲ್ಲಿ ಆಧುನಿಕ ಬುದ್ಧಿಜೀವಿಗಳು ಕೇವಲ ಮಾತುಗಾರರಾಗದೆ ಬಹಿರಂಗವಾಗಿ ಸಾಮಾನ್ಯ ಜನತೆಯೊಂದಿಗೆ ಬೆರೆತು ಅವರನ್ನು ಬುದ್ಧಿಜೀವಿಗಳನ್ನಾಗಿ ರೂಪಿಸುವಲ್ಲಿ ಸೋತಂತಹ ಜಾಗದಲ್ಲಿ ಸಂಘಪರಿವಾರದ ವಿಕೃತಿ ಚಿಂತನೆಗಳು ಆ ಖಾಲಿಯಾದ ಜಾಗವನ್ನು ಆಕ್ರಮಿಸಿಕೊಳ್ಳುತ್ತವೆ ಹಾಗೂ ತಮ್ಮ ಯಜಮಾನಿಕೆಯನ್ನು ಪ್ರತಿಷ್ಠಾಪಿಸುತ್ತವೆ. ಇಂದು ಅಸಹಾಯಕ ಹೆಣ್ಣುಮಕ್ಕಳ ಮೇಲೆ ಹಲ್ಲೆ ಮಾಡಿದ ಆ ಅನಾಗರಿಕ ಯುವಕರು, ಹಿಂದೂ ಸಂಘಟನೆಗಳು ಮತ್ತು ಜನಸಾಮಾನ್ಯರು ಆ ದುಷ್ಕೃತ್ಯವನ್ನು ಹಿಂದೂ ಸಂಸ್ಕೃತಿಯ ಹೆಸರಿನಲ್ಲಿ ಪದೇ ಪದೇ ಸಮರ್ಥಿಸಿಕೊಳ್ಳುತ್ತಿರುವುದಕ್ಕೆ ಕಾರಣ ನಮ್ಮೆಲ್ಲರ ಸಾಂಸ್ಕೃತಿಕ ನಿಷ್ಕ್ರಿಯತೆ ಮತ್ತು ಸಿನಿಕತೆ. ನಾವೆಲ್ಲ ಸಾಂಸ್ಕೃತಿಕವಾಗಿ ನಿಷ್ಕ್ರಿಯಗೊಂಡಾಗ ಸಂಘಪರಿವಾರ ಪ್ರೇರಿತ ಬಲು ಸುಲಭವಾಗಿ ಸರಳೀಕೃತಗೊಂಡ ದೇವರುಗಳನ್ನು, ನಂಬಿಕೆಗಳನ್ನು ಒಳಗೊಂಡ ಏಕರೂಪಿ ಕಲ್ಪಿತ ಹಿಂದೂ ಸಂಸ್ಕೃತಿ ಬಂದು ನೆಲೆಯೂರುತ್ತದೆ. ಇಂತಹ ವ್ಯವಸ್ಥೆಯಲ್ಲಿ ಒಂದು ಬಗೆಯ ಒಪ್ಪಿತ ಗುಲಾಮಿಗಿರಿ ನೆಲೆಗೊಳ್ಳುತ್ತದೆ. ಈ ಗುಲಾಮಿಗಿರಿ ಧರ್ಮವನ್ನು ಸಾರ್ವಜನಿಕವಾಗಿ ಚರ್ಚಿಯನ್ನು ಆರಂಭಿಸಲು ಪ್ರೇರೇಪಿಸುತ್ತದೆ. ಈ ಬಗೆಯ ಪಟ್ಟಭದ್ರ ನೆಲೆಯಲ್ಲಿ ಚರ್ಚೆಗೊಂಡ ಧಾರ್ಮಿಕತೆಯು ಕಡೆಗೆ ಸನಾತನ ಧರ್ಮಗಳ ಸಂಕೇತಗಳಾಗಿ ರೂಪಗೊಂಡು ಕ್ರಮೇಣವಾಗಿ ಜೀವವಿರೋಧಿ ಸಂಕೇತಗಾಗಿ ಬಿಡುತ್ತವೆ. ಆಗಲೇ ಗ್ರಾಮ್ಷಿ ಹೇಳಿದ ಹಾಗೆ ನಮ್ಮ ಕಾಲ ಬುಡದಲ್ಲಿ ನೆಲ ಕುಸಿಯುತ್ತಿದ್ದರೂ ನಾವು ಅದನ್ನು ಅರಿಯಲಾರದಷ್ಟು ಮೈಮರೆತಿರುತ್ತೇವೆ. ಆಗ ಈ ಜೀವ ವಿರೋಧಿ ಕ್ಷುಲ್ಲಕತನದ ಧಾರ್ಮಿಕತೆಯು ಕ್ರಮೇಣವಾಗಿ ಇಡೀ ಸಮಾಜವನ್ನು ವ್ಯಾಪಕವಾಗಿ ಆಕ್ರಮಿಸಿಕೊಂಡುಬಿಡುತ್ತದೆ. ಇದರ ಸಾಕ್ಷಿಯಾಗಿ ಮಂಗಳೂರಿನಲ್ಲಿ ನಡೆದ ಹಲ್ಲೆಯನ್ನು ಜನತೆಯು ಸಮರ್ಥಿಸಿಕೊಳ್ಳುವಂತಹ ಅನಾಗರಿಕ ಮಾನವವಿರೋಧಿ ವ್ಯವಸ್ಥೆ ಸೃಷ್ಟಿಗೊಂಡಿರುವುದು. ಇಲ್ಲಿ ’ದಯವೇ ಧರ್ಮದ ಮೂಲವಯ್ಯ’ ಎಂದು ಹೇಳಿದ ವಚನಕಾರರ ಜೀವಪರ ಮಾತುಗಳು ನಾಮಾವಶೇಷಗೊಳ್ಳುತ್ತವೆ. ಆಗ ಸಮಾಜದಲ್ಲಿ ಪ್ರಗತಿಪರರಾಗುವ ಹಂಬಲ ಮತ್ತು ತುಡಿತ ಕ್ರಮೇಣವಾಗಿ ಕಣ್ಮರೆಯಾಗುತ್ತದೆ.
ಇಂದು ಈ ಬಿಜೆಪಿ ಪಕ್ಷದ ಫ್ಯಾಸಿಸ್ಟ್ ಧೋರಣೆಗೆ, ಅದರ ದಿಕ್ಕು ತಪ್ಪಿದ ಭ್ರಷ್ಟ ಆಡಳಿತಕ್ಕೆ ವ್ಯಾಪಕವಾಗಿ ಖಂಡನೆಗಳು ವ್ಯಕ್ತವಾಗುತ್ತಿದೆ. ಆದರೆ ಈ ಅಸಹನೆ ಒಂದು ಜನಪರ ಚಳುವಳಿಯಾಗಿ ರೂಪಿತವಾಗುತ್ತಿಲ್ಲ. ಇದರ ದುರ್ಲಾಭವನ್ನು ಆಡಳಿತ ಪಕ್ಷಗಳು ಮತ್ತು ಸಮಾಜದ ಲುಂಪೆನ್ ಗುಂಪುಗಳು ಸರಿಯಾಗಿಯೇ ದುರುಪಯೋಗಪಡಿಸಿಕೊಳ್ಳುತ್ತವೆ. ನಾಗರಿಕ ಸಮಾಜದ ಈ ನಿಷ್ಕ್ರಿಯತೆಯ ಫಲವಾಗಿಯೇ ಮಂಗಳೂರಿನಲ್ಲಿ ಇಂತಹ ಅನಾಗರಿಕ ಕೃತ್ಯ ನಡೆದರೂ ಇಲ್ಲಿನ ಸೋ ಕಾಲ್ಡ್ ಸಂಭಾವಿತ ಮುಖ್ಯಮಂತ್ರಿ ನಗುತ್ತಲೇ ಸಮಾಧಾನದಿಂದ ಉತ್ತರಿಸುತ್ತಾರೆ. ಇಲ್ಲಿನ ಭ್ರಷ್ಟ ಗೃಹಮಂತ್ರಿಗಳು ಇದೇನು ಅಂತಹ ದೊಡ್ಡ ವಿಷಯವೇ ಎಂಬಂತೆ ಜಾರಿಕೊಳ್ಳುತ್ತಾರೆ. ಈ ಅಧಪತನಕ್ಕೆ ನಾವೆಲ್ಲ ನಮ್ಮೊಳಗಿನ ಭಯವನ್ನು, ಹಿಂಜರಿಕೆಯನ್ನು ಮತ್ತು ಸಿನಿಕತನವನ್ನು ಕಿತ್ತೊಗೆಯುವ ಮೂಲಕ ಉತ್ತರಿಸಬೇಕಾಗಿದೆ. ಇಲ್ಲಿ ಗಾಂಧಿ ಹೇಳಿದಂತೆ ಅಹಿಂಸೆಯೆಂದರೆ, ಮಾನವೀಯತೆಯೆಂದರೆ ಹಿಂಸಾಕೃತ್ಯಗಳಲ್ಲಿ ತೊಡಗದಿರುವುದಷ್ಟೇ ಅಲ್ಲ, ಈ ಹಿಂಸೆಯನ್ನು ವಿರೋಧಿಸುವುದು ಸಹ ಅಹಿಂಸೆಯಾಗುತ್ತದೆ. ಇಲ್ಲದಿದ್ದರೆ ಈ ಮೌನವು ಆ ದುಷ್ಕೃತ್ಯದಲ್ಲಿ ಪಾಲ್ಗೊಳ್ಳುವಿಕೆಯ ಲಕ್ಷಣವೂ ಆಗುತ್ತದೆ. ಇಂತಹ ಸಂದರ್ಭದಲ್ಲಿ ನಿರ್ಲಿಪ್ತತೆ ಎಂದರೆ ಮೂಕ ಸಾಕ್ಷಿಗಳು ಮಾತ್ರವಲ್ಲ, ಈ ಹಿಂಸೆಯಲ್ಲಿ ಪಾಲುದಾರರೂ ಸಹ.

ಕೃಪೆ : ವರ್ತಮಾನ : (ಫೋಟೋ : ವಿಜಯ ಕರ್ನಾಟಕ)

ದಾಸಿಮಯ್ಯನ ವಚನ

ಒಡಲುಗೊಂಡವ ಹಸಿವ;  ಒಡಲುಗೊಂಡವ ಹುಸಿವ  ಒಡಲುಗೊಂಡವನೆಂದು  ನೀನೆನ್ನ ಜರಿದೊಮ್ಮೆ ನುಡಿಯದಿರ ನೀನೆನ್ನಂತೆ ಒಮ್ಮೆ ಒಡಲುಗೊಂಡು ನೋಡ ರಾಮನಾಥ.