Showing posts with label ವಿಚಾರ. Show all posts
Showing posts with label ವಿಚಾರ. Show all posts

Saturday, July 27, 2013

‘ಅನಂತನ್‌’ ಅವಾಂತರ : ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ ಗುದಮುರುಗಿ !

RCUB Anantan-Cartoon
ಅವಧಿ ಮುಗಿದರೂ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಕುಲಪತಿ ಹುದ್ದೆಯಲ್ಲಿ ಪ್ರೊ.ಬಿ.ಆರ್. ಅನಂತನ್ ವಿರಾಜಮಾನರಾಗಿದ್ದಾರೆ.
ರಾಜ್ಯಪಾಲರು ಹಾಗೂ ಉನ್ನತ ಶಿಕ್ಷಣ ಇಲಾಖೆ ಆದೇಶದನುಸಾರ ಅನಂತನ್ ಅವರ ಅಧಿಕಾರಾವಧಿ 2013ರ ಮೇ 2ಕ್ಕೆ ಮುಗಿದಿದೆ.
ಆದರೆ ಕಳೆದ 2 ತಿಂಗಳಿಂದ ಅನಧಿಕೃತವಾಗಿ ಕುಲಪತಿ ಹುದ್ದೆಯಲ್ಲಿ ಅನಂತನ್ ಮುಂದುವರಿದಿದ್ದಾರೆ. ಆದರೆ ಉನ್ನತ ಶಿಕ್ಷಣ ಸಚಿವರು ಹಾಗೂ ರಾಜ್ಯಪಾಲರು ಮಾತ್ರ ಕುಲಪತಿ ನೇಮಕ ಹಾಗೂ ಶೋಧನಾ ಸಮಿತಿ ರಚನೆ ಕುರಿತಂತೆ ಮೌನವಹಿಸಿದ್ದಾರೆ.
ಕಳೆದ 2010ರಲ್ಲಿ ರಾಜ್ಯ ಸರ್ಕಾರ ಹೊರಡಿಸಿದ ಆದೇಶದ ಪ್ರಕಾರ ಪ್ರೊ. ಅನಂತನ್ ಅವರು 4 ವರ್ಷದ ಅವಧಿಗೆ ಅಥವಾ 65 ವರ್ಷ ಆಗುವವರೆಗೆ ರಾಣಿ ಚೆನ್ನಮ್ಮ ವಿವಿಯ ಪ್ರಥಮ ಕುಲಪತಿಯಾಗಿರುತ್ತಾರೆ. ಇದಲ್ಲದೇ ಆದೇಶದಲ್ಲಿ ಸ್ಪಷ್ಟವಾಗಿ ತಿಳಿಸಿದ್ದು, 4 ವರ್ಷದ ಸೇವಾವಧಿ ಅಥವಾ 65 ವರ್ಷಗಳಲ್ಲಿ ಯಾವುದು ಮೊದಲಾಗುತ್ತದೆಯೋ ಅದನ್ನು ಪರಿಗಣಿಸಲಾಗುವುದು ಎಂದು. ಆದರೆ ಪ್ರೊ.ಅನಂತನ್ ಅವರು ಬೇರೆ ಲೆಕ್ಕಾಚಾರ ಮಾಡುತ್ತಿದ್ದು, ತಮ್ಮ ಸೇವಾವಧಿ ಇನ್ನು 2 ವರ್ಷವಿದೆ ಎಂದು ಅಕ್ರಮವಾಗಿ ವಿವಿಯಲ್ಲಿ ಠಿಕಾಣಿ ಹೂಡಿದ್ದಾರೆ.
ವಿಚಿತ್ರವೆಂದರೆ ರಾಜ್ಯಪಾಲರು ಹಾಗೂ ರಾಜ್ಯ ಸರ್ಕಾರ ಈ ಬಗ್ಗೆ ಚಕಾರವೆತ್ತುತ್ತಿಲ್ಲ. ಈ ಬಗ್ಗೆ ತಿಳಿದಿದ್ದರೂ ಯಾವುದೇ ಕ್ರಮತೆಗೆದುಕೊಳ್ಳುತ್ತಿಲ್ಲ ಎಂದು ಉನ್ನತ ಶಿಕ್ಷಣ ಇಲಾಖೆಯ ಅಧಿಕಾರಿಗಳೇ ಹೇಳುತ್ತಾರೆ. ನೂತನ ವಿಶ್ವವಿದ್ಯಾಲಯದ ಮೊದಲ ಕುಲಪತಿಯೇ ಇಂತಹ ನೀತಿಗಳಿಗೆ ನಾಂದಿ ಹಾಡಿದರೆ ವಿವಿಯ ಸ್ಥಿತಿ ಅಧೋಗತಿಗೆ ತಲುಪುವುದರಲ್ಲಿ ಅನುಮಾನವಿಲ್ಲ ಎಂಬುದುದ ಅವರ ಅಭಿಪ್ರಾಯ.
ಸರ್ಕಾರದ ಆದೇಶದಲ್ಲೇನಿದೆ?: ಉನ್ನತ ಶಿಕ್ಷಣ ಇಲಾಖೆಯ ಅಧೀನ ಕಾರ್ಯದರ್ಶಿ ಯು.ಬಿ.ಉಳವಿ ಅವರು 2010ರ ಅಗಸ್ಟ್ 16ರಂದು ಹೊರಡಿಸಿದ ಆದೇಶ ಹೀಗಿದೆ, ‘ಕರ್ನಾಟಕ ವಿಶ್ವವಿದ್ಯಾಲಯ ಕಾಯಿದೆ ಪ್ರಕಾರ ಪ್ರೊ.ಬಿ.ಆರ್. ಅನಂತನ್ ಅವರನ್ನು ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ ಪ್ರಥಮ ಕುಲಪತಿಯನ್ನಾಗಿ 4 ವರ್ಷಗಳ ಅವಧಿಗೆ ಅಥವಾ ಸದರಿಯವರಿಗೆ 65ವರ್ಷಗಳು ವಯಸ್ಸಾಗುವುವರೆಗೆ, ಇವುಗಳಲ್ಲಿ ಯಾವುದು ಮೊದಲೋ ಅಲ್ಲಿಯವರೆಗೆ ನೇಮಿಸಲಾಗಿದೆ’.
ಈ ಆದೇಶದಲ್ಲಿ ಒಂದಂಶವನ್ನು ಸರ್ಕಾರ ಸೇರಿಸಿದೆ. ‘ಕರ್ನಾಟಕ ರಾಜ್ಯ ವಿವಿ ಅಧಿನಿಯಮದ 14(5) ಮತ್ತು 14(6)ನ್ನು ಓದಿಕೊಂಡು’ ಎಂದು ಹೇಳಲಾಗಿದೆ. ಇದು ಗೊಂದಲಕ್ಕೆ ಕಾರಣವಾಗಿದೆ.
ತಿದ್ದುಪಡಿಯೇನು?: ಕಳೆದ 2011ರ ಫೆಬ್ರುವರಿಯಲ್ಲಿ ಅಧಿನಿಯಮಕ್ಕೆ ತಿದ್ದುಪಡಿ ತಂದು, ಕುಲಪತಿಯಾಗಲು ಇರುವ ವಯೋವುತಿಯನ್ನು 67ಕ್ಕೆ ಏರಿಸಲಾಯಿತು. ಇದನ್ನೇ ನೆಪವಾಗಿರಿಸಿಕೊಂಡಿರುವ ಅನಂತನ್ ಇನ್ನು ಹುದ್ದೆಯಲ್ಲಿ ಮುಂದುವರಿದಿದ್ದಾರೆ.
ಉನ್ನತ ಶಿಕ್ಷಣ ಇಲಾಖೆಯ ಅಧೀನ ಕಾರ್ಯದರ್ಶಿಯೊಬ್ಬರು ಹೇಳಿದ ಪ್ರಕಾರ, ‘ಅನಂತನ್ ಅವರ ನೇಮಕವು 2010ರಲ್ಲಿ ಆಗಿದೆ. ಆದರೆ ಈ ತಿದ್ದುಪಡಿಯಾಗಿರುವುದು 2011ರಲ್ಲಿ. ಆದ್ದರಿಂದ ಅವರ ಅಧಿಕಾರವಧಿ 2013ರ ಮೇ ತಿಂಗಳಿನಲ್ಲಿಯೇ ಕೊನೆಯಾಗುತ್ತದೆ. ರಾಜ್ಯ ಸರ್ಕಾರಕ್ಕೆ ಈ ಗೊಂದಲದ ಅರಿವಿದ್ದರೂ ಯಾವುದೆ ಕ್ರಮ ತೆಗೆದುಕೊಂಡಿಲ್ಲ’.
ಆದರೆ 2010ರ ಅ.16 ರಂದು ಹೊರಡಿಸಿದ ಅಧಿಸೂಚನೆ ಹಾಗೂ ಅ.17ರಂದು ಹೊರಡಿಸಿದ ಸರ್ಕಾರಿ ಆದೇಶವು ವಿಭಿನ್ನವಾಗಿದೆ. ಅ.17ರಂದು ಪ್ರಕಟವಾಗಿರುವ ಸರ್ಕಾರಿ ಆದೇಶದಲ್ಲಿ ‘ಕರ್ನಾಟಕ ರಾಜ್ಯ ವಿವಿ ಅಧಿನಿಯಮದ 14(5) ಮತ್ತು 14(6)ನ್ನು ಓದಿಕೊಂಡು’ ಎಂಬಂಶ ಪ್ರಕಟವಾಗಿಲ್ಲ. ಈ ಹಿನ್ನೆಲೆಯಲ್ಲಿ ಅನಂತನ್ ಅವರ ವಾದಕ್ಕೆ ಮನ್ನಣೆ ದೊರಕುವುದಿಲ್ಲ.
ಹುಟ್ಟಿದ ದಿನಾಂಕದ ದಾಖಲೆ ನೀಡಿಲ್ಲ!
ವಿವಿಯ ವಿಶೇಷಾಧಿಕಾರಿ ಹಾಗೂ ಕುಲಪತಿಗಳಾಗಿ ನೇಮಕವಾದ ಬಳಿಕ ಹುಟ್ಟಿದ ದಿನಾಂಕದ ಮಾಹಿತಿಯನ್ನು ಇಲಾಖೆಗೆ ನೀಡಿಲ್ಲ ಎಂದು ಉನ್ನತ ಶಿಕ್ಷಣ ಇಲಾಖೆಯ ಅಧಿಕಾರಿಯೊಬ್ಬರು ಹೇಳಿದ್ದಾರೆ. ಈ ಕಾರಣದಿಂದ ಅವರ ನಿವೃತ್ತಿ ವಯಸ್ಸು ತಿಳಿದಿಲ್ಲ ಎಂಬ ವಾದವನ್ನು ಇಲಾಖೆ ಹೇಳುತ್ತಿದೆ. ಆದರೆ ‘ಕನ್ನಡಪ್ರಭ’ಕ್ಕೆ ಈ ಕುರಿತ ದಾಖಲೆಗಳು ದೊರೆತಿದ್ದು, 1948ರ ಮೇ 2ರಂದು ಪ್ರೊ.ಅನಂತನ್ ಅವರು ಜನಿಸಿದ್ದಾರೆ.
ಕೃಪೆ : ಕನ್ನಡಪ್ರಭ 16 Jul 2013 02:00:00 AM IST

Monday, January 07, 2013

ಅಕ್ಷರಹೀನ ವಚನಕಾರರು ?


                                ಡಾ. ಸಿದ್ರಾಮ ಕಾರಣಿಕ
                           
    ಹನ್ನೆರಡನೇ ಶತಮಾನದಲ್ಲಿ ವಚನಗಳ ಮೂಲಕ ಸಾಮಾಜಿಕ ಕ್ರಾಂತಿ ಸಂಭವಿಸಿತು. ಜಾತಿ-ಜಾತಿಗಳಲ್ಲಿದ್ದ ಅಂತರವನ್ನು ದೂರ ಮಾಡಿ, ಪುರೋಹಿತಶಾಹಿ ವರ್ಗದ ವಿರುದ್ಧ ಸಿಡಿದು ನಿಂತು ಮಾಡಿದ ಕ್ರಾಂತಿಯ ಹೆಜ್ಜೆ ಯಾವತ್ತಿಗೂ ಅನುಕರಣೀಯವೇ ಆಗಿದೆ. ಆದರೆ ಅದೇ ಸಂದರ್ಭದಲ್ಲಿ ಅಕ್ಷರ ವಂಚಿತ ಸಮುದಾಯ ಕೂಡ ಅಕ್ಷರ ಕಲಿತು ವಚನ ರಚಿಸಿದರು ಎಂಬುದು ಒಪ್ಪತಕ್ಕ ಮಾತು ಅಲ್ಲ ; ಒಪ್ಪಿಕೊಳ್ಳಲು ಸಾಧ್ಯವೂ ಇಲ್ಲ. ಹೀಗೆ ಹೇಳುತ್ತಿರುವುದನ್ನು ಒಪ್ಪದ ಕೆಲ `ಬುದ್ಧಿಜೀವಿಗಳು', `ಪಂಡಿತರು', ವಿದ್ವಾಂಸರು' ಅಪಸ್ವರ ಎತ್ತಿ ಹಾಡಲು ಸುರು ಮಾಡಬಹುದು ! ಈ ವಾದವು ಪರಾಂಪರಾಗತ ನಂಬಿಕೆಯೊಂದನ್ನು ಬುಡಮೇಲು ಮಾಡುವ ಹುನ್ನಾರ ಎಂದು ಹುಯಿಲೆಬ್ಬಿಸಬಹುದು ! ಆದರೆ ವಾಸ್ತವ ವಾಸ್ತವೇ ! ಇತಿಹಾಸದ ಸತ್ಯವನ್ನು ಒಪ್ಪಿಕೊಳ್ಳದೇ ಇರಲು ಸಾಧ್ಯವೇ ಇಲ್ಲ.
    ವೈದಿಕ ಧರ್ಮದಲ್ಲಿ ದಲಿತರು, ಶೂದ್ರರು ಅಕ್ಷರ ಕಲಿಯುವಿಕೆಯನ್ನು ನಿರಾಕರಿಸಲಾಗಿದೆ. ಕೇವಲ ಪಠನ ಮಾಡಿದರೆ ಸಾಕು ನಾಲಿಗೆಯನ್ನೇ ಕಿತ್ತಿ ಹಾಕುವ, ವೇದ-ಮಂತ್ರಗಳನ್ನು ಕೇಳಿದರೆ ಸಾಕು ಕಿವಿಯಲ್ಲಿ ಕಾದ ಸೀಸವನ್ನು ಸುರಿಯುವ ಪದ್ಧತಿಯನ್ನು ಪ್ರಾಚೀನ ಕಾಲದಲ್ಲಿ ಪಾಲಿಸಿಕೊಂಡು ಬರಲಾಗುತ್ತಿತ್ತು. ಈ ಪರಿಕ್ರಮಕ್ಕೆ ಹನ್ನೆರಡನೇ ಶತಮಾನವೂ ಕೂಡ ಹೊರತಾಗಿರಲಿಲ್ಲ ಎಂದರೆ ಅತಿಶಯೋಕ್ತಿ ಆಗಲಾರದು. ಬಸವಣ್ಣ ತೋರಿದ ಕ್ರಾಂತಿಕಾರಿ ನಿಲುವಿಗೆ ಸನಾತನವಾದಿಗಳು ತೋರಿದ ತೀವ್ರ ವಿರೋಧವನ್ನು ಗಮನಿಸಬೇಕು. ಹೀಗೆಲ್ಲ ಇರುವಾಗ ಒಂದು ಸೀಮಿತ ಅವಧಿಯಲ್ಲಿ ಅಕ್ಷರ ಹೀನ ದಲಿತರು, ಶೂದ್ರರು ಮತ್ತು ಮಹಿಳೆಯರು ಅಕ್ಷರ ಕಲಿತು ಪಾಂಡಿತ್ಯ ಗಳಿಸಿದರು ಎಂದರೆ ಅದೇನು ಪವಾಡವೇ ?
    `ಪುರುಷರೇ ಅಕ್ಷರಜ್ಞಾನದಿಂದ ವಂಚಿತರಾಗಿದ್ದ ಆ ಕಾಲದಲ್ಲಿ ನೂರಾರು ಜನ ಸ್ತ್ರೀಯರು, ಅದರಲ್ಲೂ ದಲಿತ ವರ್ಗದ ಸ್ತ್ರೀಯರು ಸಾಹಿತ್ಯ ನಿರ್ಮಿತಿಯಲ್ಲಿ ತೊಡಗುವುದುರ ಮೂಲಕ ಬಹುದೊಡ್ಡ ಪ್ರಸಾರ ಮಾಧ್ಯಮವೊಂದು ವರಿಷ್ಠರ ವಜ್ರಮುಷ್ಠಿಯಿಂದ ಕನಿಷ್ಠ ವರ್ಗದ ಪುರುಷರ ಕೈಗೆ, ಸ್ತ್ರೀಯರ ಕೈಗೂ ಇಳಿದು ಬಂದದ್ದು ತೀವ್ರ ಗಮನಿಸಬೇಕಾದ ಅಂಶವಾಗಿದೆ.'1 ಎನ್ನುವ ಡಾ. ಎಂ. ಎಂ. ಕಲ್ಬುರ್ಗಿಯವರ ಮಾತಿನಲ್ಲಿರುವ `ಸಾಹಿತ್ಯ ನಿರ್ಮಿತಿ' ಬಂದದ್ದು ಕೇವಲ ಅನುಭಾವದಿಂದಾಗಿಯೇ ಹೊರತು ಅಕ್ಷರಜ್ಞಾನದಿಂದ ಅಲ್ಲವೇ ಅಲ್ಲ.
    `........ಪ್ರಾಚೀನ ಮಹಿಳಾ ಶಿಕ್ಷಣವನ್ನು ಗಮನಿಸಿದರೆ ಹೆಣ್ಣು ಸಾಂಸ್ಕøತಿಕವಾಗಿ ದಾಖಲಾಗಿರುವುದು ಗಮನಾರ್ಹ ವಸ್ತವಾಗಿದೆಯೇ ಹೊರತು ವಿದ್ಯಾವತಿಯಾಗಿ ಅಲ್ಲ'2 ಎನ್ನುವ ಡಾ. ಚೆನ್ನಕ್ಕ ಪಾವಟೆಯವರ ಮಾತುಗಳನ್ನು ದಲಿತ ಮತ್ತು ಶೂದ್ರರಿಗೂ ಅನ್ವಯಿಸಿಕೊಂಡು ಅವಲೋಕಿಸಿದಾಗ ಲೇಖನದ ಈ ವಾದಕ್ಕೆ ಸಾಕ್ಷ್ಯ ದೊರೆಯುತ್ತದೆ. ಆದರೆ ಈ ಮಟ್ಟಿಗಿನ ವಾದವನ್ನು ಬೆಳೆಸಲು ಬಹಳಷ್ಟು ಜನ ಹಿಂಜರಿಯುವುದೇ ಹೆಚ್ಚು. ಮತಾಂಧತೆಯ ಭಾರತದಲ್ಲಿ ಇದು ಸಹಜ ಕೂಡ !
    `ಯಾವ ದಲಿತರು ಅಜ್ಞಾನಿಗಳಾಗಿದ್ದರೋ ಅಂಥವರು ವಚನ ಚಳುವಳಿಯ ಸಂದರ್ಭದಲ್ಲಿ ವಿಚಾರವಂತರಾದರು. ವಿಚಾರವಾದಕ್ಕೆ ವ್ಯಾಖ್ಯೆಯನ್ನು ಬರೆದರು. ಯಾರನ್ನು ಈ ವ್ಯವಸ್ಥೆಯಲ್ಲಿ ಪಶು-ಪ್ರಾಣಿಗಳಿಗಿಂತ ಕೀಳಾಗಿ ಕಾಣುತ್ತಿತ್ತೋ ಅಂತಹವರೇ ಹೊಸ ಸಂಸ್ಕøತಿಯ ಹರಿಕಾರರಾದರು. ಯಾರು ಭಯದಿಂದ ತತ್ತರಿಸಿ, ಕೀಳರಿಮೆಯಿಂದ ಮುದುಡಿಕೊಂಡಿದ್ದರೋ ಅಂಥವರೇ ಅನ್ಯಾಯದ ವಿರುದ್ಧ ಪ್ರತಿಭಟಿಸಿ, ಝಳಪಳಿಸುವ ಖಡ್ಗಗಳಾದರು. ಇದು ವಚನ ಚಳುವಳಿಯ ಅತ್ಯಂತ ಮಹತ್ವದ ಸಾಧನೆ.'3 ಎನ್ನುವ   ಡಾ. ಬಸವರಾಜ ಸಬರದ ಅವರ ವಿವರಣೆ ಪಾರಂಪರಿಕವಾಗಿ ಪ್ರಚುರಪಡಿಸುತ್ತ ಬಂದಿರುವಂಥದ್ದೇ ಆಗಿದೆ. ಈ ಮೊದಲು ನಾವು ಕೂಡ ಈ ವಿಚಾರವನ್ನೇ ಅಧಿಕೃತವಾಗಿ ಒಪ್ಪಿಕೊಳ್ಳುತ್ತಿದ್ದೇವು. ಆದರೆ ಇಲ್ಲಿರುವ ಮಾತುಗಳನ್ನು ಸೂಕ್ಷ್ಮವಾಗಿ ನೋಡಿದಾಗ ವಚನ ಚಳುವಳಿ ಮೌಖಿಕ ಪರಂಪರೆಯ ಸಾಧನೆಯೇ ಆಗಿದೆ ಎಂಬುದು ಸಾಧಿತ ಅಂಶವಾಗಿ ಹೊರಹೊಮ್ಮುತ್ತದೆ.
    ಬಸವಣ್ಣನ ನಾಯಕತ್ವದಲ್ಲಿ ಜಾಗೃತಿ ಅಭಿಯಾನ ಆರಂಭವಾದಾಗ ಕೆಲವು ದಲಿತರು, ಶೂದ್ರರು ಮತ್ತು ಮಹಿಳೆಯರು ಸಾಂಪ್ರದಾಯಿಕ ಸಮಾಜವನ್ನು ಧಿಕ್ಕರಿಸಿ, ಹೊಸ ಸಮಾಜದ ಅಸ್ತಿತ್ವಕ್ಕಾಗಿ ಸಂಘಟನಾತ್ಮಕ ಶಕ್ತಿಯಾಗಿ ಹೊರಹೊಮ್ಮಿದರಷ್ಟೇ ಅಲ್ಲ, ತಮ್ಮ ವಿಚಾರಗಳನ್ನು ದಿಟ್ಟವಾಗಿ ಪ್ರತಿಪಾದಿಸುವ ಮೂಲಕ ಇನ್ನುಳಿದ ತಮ್ಮ ಬಾಂಧವರಿಗೆ ಅರಿವನ್ನುಂಟು ಮಾಡಲು ಮುಂದಾದರು. ಆದರೆ ಅವರಿಗೆ ಅಕ್ಷರದ ಅರಿವು ಇರಲಿಲ್ಲ. ಅವರ ಹೆಸರಿನಲ್ಲಿರುವ ವಚನಗಳು ಬೇರೆ ಯಾರೋ ಲಿಪೀಕರಣ ಮಾಡಿದರ ಫಲ ಮಾತ್ರ. ಆದರೆ ಆ ವಚನಗಳಲ್ಲಿ ಇರುವ ವಿಚಾರ ಮಾತ್ರ ಆ ವಚನಕಾರರದೇ ಆಗಿದೆ. ಅಂದರೆ ವಚನಕಾರರೆಲ್ಲ ಪ್ರಾಜ್ಞರೇ ಆಗಿದ್ದರೂ ಅಕ್ಷರವನ್ನು ಬಲ್ಲವರಾಗಿರಲಿಲ್ಲ.
    ಜಾನಪದ ಪರಂಪರೆಯನ್ನು ಗಮನಿಸಿದಾಗ ಈ ಪ್ರಕ್ರಿಯೆ ಬಹು ಹಿಂದಿನಿಂದಲೇ ಹೊರಹೊಮ್ಮಿ ಬಂದಿದೆ ಎನ್ನುವದು ಸ್ಪಷ್ಟವಾಗುತ್ತದೆ. ಈ ವಿಚಾರದಿಂದ ಜನಪದರು ಸೃಷ್ಟಿಸಿದ ಜಾನಪದ ಸಾಹಿತ್ಯ ಕೂಡ ಗಟ್ಟಿಕಾಳೇ ಆಗಿದೆ ಎನ್ನುವುದು ಸಾಬೀತಾಗುತ್ತದೆ. ಹೀಗಾಗಿ ಹನ್ನೆರಡನೇ ಶತಮಾನದ ಬಸವಣ್ಣ, ಚೆನ್ನಬಸವಣ್ಣ ಮೊದಲಾದ ಆಯ್ದ ಕೆಲವರನ್ನು ಬಿಟ್ಟರೆ ಇನ್ನುಳಿದವರೆಲ್ಲ ಮೌಖಿಕ ಪರಂಪರೆಯವರು ಎಂಬುದು ಖಚಿತ.
    ಈ ವಾದಕ್ಕೆ ಇನ್ನಷ್ಟು ನಿಖರತೆಯನ್ನು ನೀಡಲು ಅಲ್ಲಮ ಪ್ರಭು ಮತ್ತು ಅಕ್ಕ ಮಹಾದೇವಿ ಅವರನ್ನು ಅಧ್ಯಯನ ಮಾಡಬೇಕಾಗುತ್ತದೆ. ಯಾವುದೇ ಪುರಾಣ, ಕಥೆ, ಐತಿಹ್ಯ ತೆಗೆದು ನೋಡಿದರೂ ಅವುಗಳಲ್ಲಿ ಈ ಇಬ್ಬರು ಒಂದೇ ಕಡೆ ಹೆಚ್ಚು ಕಾಲ ಸ್ಥಾಯಿಯಾಗಿ ನೆಲೆ ನಿಂತವರಲ್ಲ ಎಂಬ ಪ್ರಸ್ತಾಪ ಕಂಡು ಬರುತ್ತದೆ. ಮಾಯಾ ಮೋಹವನ್ನೇ ತಿರಸ್ಕರಿಸಿ, ವಿಚಿತ್ರ ವೇಷದಲ್ಲಿ ದೇಶ ಸಂಚಾರ ಮಾಡಿದ ಅಲ್ಲಮ ಮತ್ತು ಭವದ ಬದುಕನ್ನೇ ತಿರಸ್ಕರಿಸಿ, ಕೇಶಾಂಬರಿಯಾಗಿ ಸಂಚಾರ ಮಾಡಿದ ಅಕ್ಕಮಹಾದೇವಿ ಜಂಗಮತ್ವವನ್ನು ಅಪ್ಪಿಕೊಂಡವರು. ಇಂದು ಇಲ್ಲಿದ್ದರೆ ನಾಳೆ ಮತ್ತೆಲ್ಲೋ ! ಅಲೆದಾಟದಲ್ಲಿಯೇ ತಮ್ಮ ಇಡೀ ಜೀವನವನ್ನು ಕಳೆದ ಇವರು ಸಂದರ್ಭಕ್ಕೆ ತಕ್ಕಂತೆ ಅನುಭಾವದ ನೆಲೆಯಲ್ಲಿ ತಮ್ಮ ವಿಚಾರಗಳನ್ನು ಬಿತ್ತರಿಸುತ್ತ ಹೋಗಿದ್ದಾರೆ. ಅವೆಲ್ಲ ಅವರು ಬರೆದಿಟ್ಟ ವಿಚಾರಗಳಲ್ಲ ಅಥವಾ ಆನಂತರದಲ್ಲಿ ಅವುಗಳನ್ನು ಬರೆದುಕೊಂಡವರೂ ಅಲ್ಲ. ಬರೆದಿಡುವುದು ಸಾಧ್ಯವೂ ಇರಲಿಲ್ಲ.
    ಇದಕ್ಕೆ ಪೂರಕವಾಗಿ ಒಂದು ಮೂಲಭೂತವಾಗಿ ಉದ್ಭವಿಸುವ ಕೆಲವು ಪ್ರಶ್ನೆಗಳನ್ನು ಇಲ್ಲಿ ಕೇಳಲೇಬೇಕಾಗುತ್ತದೆ ; ಅಲೆದಾಟದಲ್ಲಿದ್ದ ಅಲ್ಲಮ ಪ್ರಭು ಮತ್ತು ಅಕ್ಕ ಮಹಾದೇವಿ ತಾವಾಡಿದ ಮಾತುಗಳನ್ನು ಬರೆದಿಟ್ಟುಕೊಳ್ಳಲು ತಮ್ಮ ಹತ್ತಿರ ಬರೆಯುವ ಹಾಳೆ, ತಾಳೆಗರಿ, ಲೆಕ್ಕಣಿಕೆ, ದೌತಿಗಳನ್ನು ಖಾಯಮ್ಮಾಗಿ ಇಟ್ಟುಕೊಂಡಿರುತ್ತಿದ್ದರೆ ? ಅನುಭಾವದ ವಿಚಾರಗಳನ್ನು ಹೇಳಿಯಾದ ಮೇಲೆ ಅವುಗಳನ್ನು ಲಿಪಿಬದ್ಧಗೊಳಿಸುತ್ತಿದ್ದರೆ ? ಹಾಗಾದರೆ ಅವರು ತಾವು ಬರೆದ ವಚನಗಳನ್ನು ಎಲ್ಲಿ ಸಂಗ್ರಹಿಸಿ ಇಡುತ್ತಿದ್ದರು ? ತಮ್ಮ ಜೊತೆಯಲ್ಲಿಯೇ ಗಂಟು ಕಟ್ಟಿಕೊಂಡು ತಿರುಗುತ್ತಿದ್ದರೆ ? ಅರಿವೆಯ ಅರಿವೇ ಇಲ್ಲದೇ ಅಲೆದಾಡುತ್ತಿದ್ದ ಇವರು ಹೀಗೆಲ್ಲ ಮಾಡಲು ಸಾಧ್ಯವೇ ?
    ಈ ಎಲ್ಲ ಪ್ರಶ್ನೆಗಳಿಗೆ ಉತ್ತರಿಸುವುದು ಸಾಧ್ಯವೇ ಇಲ್ಲ. ಅದೂ ಅಲ್ಲದೇ `ಅಕ್ಕನ ದಿಗಂಬರತ್ವವನ್ನು ಕುರಿತ ಚರ್ಚೆ-ಪ್ರತಿಚರ್ಚೆಯನ್ನು ಬೆಳೆಯಿಸಿದ `ಶೂನ್ಯ ಸಂಪಾದನೆ'ಗಳಲ್ಲಿ ಬಂದಿರುವ ಅಲ್ಲಮನ ಹಾಗೂ ಅಕ್ಕನ ಉಕ್ತಿಗಳು (ವಚನಗಳು) ಈ ಸಂದರ್ಭದ ನಾಟಕೀಯತೆಗಾಗಿ ನಿರ್ಮಿತಿಯಾದವುಗಳೇ ಹೊರತು ಅವು ಅಲ್ಲಮ ಹಾಗೂ ಅಕ್ಕನ `ಮೂಲ ವಚನ'ಗಳಾಗಿರಲಾರವು.'4 ಎನ್ನುವ ಡಾ. ಜಿ.ಎಸ್. ಶಿವರುದ್ರಪ್ಪ ಅವರ ಮಾತಿನಲ್ಲಿ ವಚನಗಳನ್ನು ಬರೆದಿರುವ ಬಗ್ಗೆ ಗುಮಾನಿ ಇದೆ. ಆ ಸಂದರ್ಭದಲ್ಲಷ್ಟೇ ಅಲ್ಲ ಅವರ ಹೆಸರಿನಲ್ಲಿರುವ ಯಾವ ವಚನಗಳೂ ಅವರ ಮೂಲ ವಚನಗಳೇ ಅಲ್ಲ. ಯಾಕೆಂದರೆ ಅವರು ಮೌಖಿಕ ಪರಂಪರೆಯ ಪ್ರತಿನಿಧಿಗಳು.
    ಹಾಗಾದರೆ ವಚನಗಳನ್ನು ಲಿಪೀಕರಣ ಮಾಡಿದ್ದು ಯಾರು ಎಂಬ ಪ್ರಶ್ನೆ ಕೂಡ ಇಲ್ಲಿ ತಲೆ ತಿನ್ನುತ್ತದೆ. ಅದಕ್ಕೆ ಉತ್ತರವೂ ಇದೆ. ಪ್ರಾಚೀನ ಕಾಲದಲ್ಲಿ ಬರವಣಿಗೆ ಒಂದು ನಿರ್ದಿಷ್ಟ ಜಾತಿಯ ಕೆಲಸವಾಗಿತ್ತು. ಅವರು ಇತರರು (ಬರವಣಿಗೆಯ ಚೌಕಟ್ಟಿಗೆ ಸಂಬಂಧಿಸಿದವರು) ಹೇಳಿದ್ದನ್ನು ಲಿಪಿಬದ್ಧಗೊಳಿಸುತ್ತಿದ್ದರು. ಇದು ಒಂದು ವೃತ್ತಿಯೇ ಆಗಿತ್ತೆಂದರೆ ತಪ್ಪಾಗುವುದಿಲ್ಲ. ಇದರ ಜೊತೆಗೆ ಈ ಲಿಪೀಕರಣ ವ್ಯಕ್ತಿಯೊಬ್ಬನ ಆಸಕ್ತಿ ಕೂಡ ಆಗಿತ್ತು. ಬುದ್ಧನ ಕಾಲದಲ್ಲಿ ಬುದ್ಧನ ಆಚಾರ-ವಿಚಾರಗಳನ್ನು, ಬೋಧನೆಗಳನ್ನು ಬರೆದಿಡಲು `ಭಾಣಕರು' ಎನ್ನುವವರು ಇದ್ದರು. ಹನ್ನೆರಡನೇ ಶತಮಾನದಲ್ಲಿ ಕೂಡ ಇಂಥ ಪದ್ಧತಿ ಚಾಲ್ತಿಯಲ್ಲಿರುವ ಸಾಧ್ಯತೆಯನ್ನು ಅಲ್ಲಗೆಳೆಯಲು ಬಾರದು.
    ಅನುಭವ ಮಂಟಪದಲ್ಲಿ ನಡೆಯುತ್ತಿದ್ದ ಚರ್ಚೆ-ಸಂವಾದಗಳನ್ನು ಬರೆದಿಡುವ ಕಾಯಕದವರೂ ಇದ್ದರು. `ಪ್ರತಿಯೊಂದು ವಚನವೂ ಆಯಾ ವಚನಕಾರನ ಇಷ್ಟ ದೈವದ ಸಾಕ್ಷಿಯಲ್ಲಿ ನುಡಿದ ಮಾತು'5 ಆಗಿರುವುದರಿಂದ ಆ ವಚನಕಾರ ತನ್ನ ಮಾತನ್ನು ಇಷ್ಟದೈವದ ಹೆಸರಿನೊಂದಿಗೆ ನುಡಿಯುತ್ತಿದ್ದರಿರಬೇಕು. ಇಲ್ಲವೆ ವಚನಕಾರನ ಇಷ್ಟದೇವದ ಹೆಸರುಗಳನ್ನು ಅರಿತ ಲಿಪಿಕಾರ ವಚನಕಾರನ ಮಾತಿನ ಕೊನೆಯಲ್ಲಿ ಸೇರಿಸಿ ಬರೆಯುವ ರೂಢಿ ಇಟ್ಟುಕೊಂಡಿರಬೇಕು. ಇದನ್ನೇ ನಾವು ಮುದ್ರಿಕೆಗಳು ಎನ್ನುವುದು. ಈ ಬಗ್ಗೆ ಇನ್ನೂ ಹೆಚ್ಚು ಹೆಚ್ಚು ಅಧ್ಯಯನಗಳು ನಡೆಯಬೇಕಿದೆ. ಆವಾಗ ಮೂಲ ಹಸ್ತಪ್ರತಿಯ ಲಿಪಿಕಾರ ಯಾರು ಎನ್ನುವುದು ತಿಳಿಯಲು ಸಾದ್ಯವಾಗಬಹುದು.
    ಅಲ್ಲಮ ಪ್ರಭು ಮತ್ತು ಅಕ್ಕ ಮಹಾದೇವಿಯರ ವಚನಗಳಿಗೆ ಈ ಮಾತು ಸರಿ ಹೊಂದಲಾರದು. ಅವರು ಅನುಭವ ಮಂಟಪದಲ್ಲಿದ್ದಾಗ ಅವರ ನುಡಿಗಳನ್ನು ಲಿಪಿಬದ್ಧಗೊಳಿಸಿರುವ ಲಿಪಿಕಾರ ಇಷ್ಟದೈವದ ಸೇರಿಸಿದ್ದರೆ, ಅವರು ಜಂಗಮತ್ವವನ್ನು ಹೊಂದಿ ನಿರಂತರ ತಿರುಗಾಟದಲ್ಲಿ ಇದ್ದಾಗ ಅವರ ಅಂಕಿತ ಅವರ ವಚನಗಳಿಗೆ ಹೇಗೆ ಬಂತು ಎಂಬ ಪ್ರಶ್ನೆಯೂ ವಿದ್ವಾಂಸರಿಂದ ಉದ್ಭವಿಸುತ್ತದೆ.
    ಇದಕ್ಕೂ ಸರಳವಾದ ಉತ್ತರವಿದೆ. ಮೇಲೆ ಹೇಳಿದಂತೆ ಇವರು ನುಡಿಯನ್ನು ಮುಗಿಸಬೇಕಾದರೆ ಇಷ್ಟದೈವದ ಹೆಸರನ್ನು ಹೇಳುತ್ತಿರಬೇಕು. ಹೀಗೆ ಅವರು ಹೇಳುತ್ತ ಹೋದಂತೆ ಆಸಕ್ತರಾಗಿರುವ ಕೆಲವು ಜನರು ಅವರ ವಿಚಾರಗಳಿಂದ ಪ್ರಭಾವಿತರಾಗಿ ಯಥಾವತ್ ಅಲ್ಲದಿದ್ದರೂ ನುಡಿಯ ಸಾರ ಮತ್ತು ಅಂಕಿತವನ್ನು ಲಿಪಿಬದ್ಧಗೊಳಿಸಿರಬೇಕು. ಈ ಕಾರಣದಿಂದಲೇ ವಚನಗಳ ಸಂಖ್ಯೆಯನ್ನು ನಿರ್ಣಯಿಸುವ ಕಾರ್ಯ ಇಂದಿಗೂ ಕಷ್ಟದಾಯಕವಾಗಿಯೇ ಇದೆ. ಯಾಕೆಂದರೆ ಭಿನ್ನ ಅಂಕಿತಗಳು ಇರುವ ಒಂದೇ ರೀತಿಯ ವಚನಗಳೂ ಇಂದು ನಮ್ಮ ನಡುವೆ ಇವೆ.ಯಾವುದು ಯಾರ ವಚನ ಎನ್ನುವುದನ್ನು ನಿರ್ಣಯಿಸುವಲ್ಲಿ ಇನ್ನೂ ಗೊಂದಲಗಳಿವೆ.  ಲಿಪಿಕಾರ ಮತ್ತು ಪ್ರತಿ ಲಿಪಿಕಾರನ ತಪ್ಪಿನಿಂದಲೇ ಇಂತಹ ಅವಘಡಗಳು ಸಂಭವಿಸಿವೆ.
    ಇದಕ್ಕಿಂತ ಮುಖ್ಯವಾಗಿ ವಚನಗಳನ್ನು ಸಾಮಾನ್ಯವಾಗಿ ನುಡಿ, ಮಾತು, ಸೂಳ್ನುಡಿ ಮೊದಲಾದವುಗಳಿಂದಲೇ ಸೂಚಿಸಲಾಗಿದೆ ಹೊರತು ಬೇರೆ ರೀತಿಯಲ್ಲಿ ಹೇಳಿಲ್ಲ. `ನುಡಿದರೆ ಮುತ್ತಿನ ಹಾರದಂತಿರಬೇಕು' ಎಂಬುದಾಗಿ ಹೇಳಲಾಗಿದೆಯೇ ಹೊರತು `ಬರೆದರೆ.....' ಎಂದು ಹೇಳಲಾಗಿಲ್ಲ. ಈ ವಾದ ತುಂಬ ಬಾಲಿಶ ಎನಿಸಬಹುದಾದರೂ ಕೂಡ ಅದೇ ಸತ್ಯವನ್ನು ತೋರುವ ಮಾರ್ಗವೂ ಆಗಬಲ್ಲದು ಎಂಬುದನ್ನು ಮಾತ್ರ ನಾವು ಮರೆಯುವಂತಿಲ್ಲ.
    ಈ ಎಲ್ಲ ಅಂಶಗಳನ್ನು ಅರ್ಥಪೂರ್ಣವಾಗಿ ಮನನ ಮಾಡಿಕೊಂಡು ಮಥಿಸಿದಾಗ ವಚನಕಾರರೆಲ್ಲರೂ ಅಕ್ಷರ ಕಲಿತವರಾಗಿರಲಿಲ್ಲ ಎಂಬ ವಾದ ಸಾಧಿತವಾಗುತ್ತದೆ. ಹೀಗಾಗಿ ವಚನ ಸಾಹಿತ್ಯ ಮೌಖಿಕ ಪರಂಪರೆಯ ಜಾನಪದ ಸಾಹಿತ್ಯ ಎಂದು ಪರಿಗಣಿಸಲು ಯಾವುದೇ ಅಡ್ಡಿಗಳಿಲ್ಲ ಅಲ್ಲವೇ ?

ಅಡಿ ಟಿಪ್ಪಣಿಗಳು :
1. ಮಾರ್ಗ ಸಂ-1 : ಡಾ. ಎಂ.ಎಂ.ಕಲ್ಬುರ್ಗಿ : 1995 : ಪು-260
2. ಅನುಗ್ರಹ : ಡಾ. ಚೆನ್ನಕ್ಕ ಪಾವಟೆ : 1999 : ಪು-217
3. ಸಮುದಾಯ ಮತ್ತು ಸಂಸ್ಕøತಿ : ಡಾ. ಬಸವರಾಜ ಸಬರದ : 2002 : ಪು-130
4. ಸಾಹಿತ್ಯ ವಿಮರ್ಶೆ-1992 : ಸಂ-ಡಾ. ರಹಮತ್ ತರೀಕೆರೆ : 1993 : (ಅಡಿ ಟಿಪ್ಪಣಿ)      ಪು-124
                    ********

Tuesday, November 13, 2012

`ಮಾರ್ಕ್ಸ್‌ವಾದದ ಯಾಂತ್ರಿಕತೆಯಿಂದ ಬಿಡಿಸಿಕೊಂಡ ಬರಹ ನನ್ನದು'


ಶ್ರೀಲಂಕಾದ ಚೆಕಾಫ್ ಜಯತಿಲಕೆ ಕಮ್ಮಲ್ಲವೀರ ಸಂದರ್ಶನ 
                                                                                - ಡಿ.ಕೆ. ರಮೇಶ್



* ರಾಜಕೀಯ ಹೋರಾಟಗಾರರಾದ ನೀವು ಸಾಹಿತ್ಯದತ್ತ ಮುಖ ಮಾಡಿದ್ದು ಹೇಗೆ?ಚಿಕ್ಕಂದಿನಿಂದ ನನ್ನ ಒಲವು ಸಾಹಿತ್ಯದತ್ತಲೇ. ಉಳ್ಳವರು ಮತ್ತು ಉಳ್ಳದವರ ನಡುವಿನ ಘರ್ಷಣೆಯಿಂದಾಗಿ ಸಮತಾವಾದ ಶ್ರೀಲಂಕಾದಲ್ಲಿ ಬೇರು ಬಿಡುತ್ತಿತ್ತು. ಚಹಾ ತೋಟಗಳ ಕಾರ್ಮಿಕರು, ಬಂದರು ಕೆಲಸಗಾರರು ಸಂಘಟಿತರಾಗುತ್ತಿದ್ದರು. ಆಗ ದೇಶದ ತುಂಬಾ ರಷ್ಯಾ ಸಾಹಿತ್ಯದ ಅಲೆಯಿತ್ತು. ಬಡತನದ ಕಾರಣಕ್ಕೆ ಚಿಕ್ಕಂದಿನಿಂದಲೇ ಶಾಲೆ ತೊರೆದ ನಾನು ಅಂತಹ ಅನೇಕ ಸಾಹಿತ್ಯ ಕೃತಿಗಳನ್ನು ಓದತೊಡಗಿದೆ. ಹದಿನೇಳನೇ ವಯಸ್ಸಿಗೆ ಬರೆಯಲು ಆರಂಭಿಸಿದೆ. ಆ ಬಳಿಕ ನವ ಸಮ ಸಮಾಜದಲ್ಲಿ ದುಡಿದೆ. ಅದರಿಂದ ಸಾಕಷ್ಟು ಅನುಭವಗಳಾದವು. ಶ್ರೀಲಂಕಾದ ಹಳ್ಳಿ ಹಳ್ಳಿಗಳನ್ನು ತಿರುಗುವುದು, ಜನರ ನೋವು ನಲಿವುಗಳನ್ನು ಹತ್ತಿರದಿಂದ ನೋಡುವುದು ಸಾಧ್ಯವಾಯಿತು.


ಕೆಲ ಸೈದ್ಧಾಂತಿಕ ಭಿನ್ನಾಭಿಪ್ರಾಯಗಳ ಕಾರಣದಿಂದಾಗಿ ಬಳಿಕ ಸಂಘಟನೆಯಿಂದ ದೂರ ಉಳಿದೆ. ಸಾಹಿತ್ಯದ ಕೆಲಸಗಳಲ್ಲಿ ಹೆಚ್ಚು ಮಗ್ನನಾದೆ. ದಕ್ಷಿಣ ಅಮೆರಿಕ, ಆಫ್ರಿಕಾ, ಭಾರತೀಯ ಸಾಹಿತ್ಯವನ್ನು ಓದುತ್ತಾ ಹೋದೆ. ಜತೆಗೆ ಬರವಣಿಗೆಯೂ ಸಾಗಿತು.
ಬರೆವ ಬೆರಗಿನ ಕುರಿತು ಒಂದಿಷ್ಟು...
ಕೆಲ ಕಾದಂಬರಿಗಳನ್ನು ಬರೆದಿದ್ದರೂ ಸೃಜನಶೀಲ ಬರವಣಿಗೆಯಲ್ಲಿ ಸಣ್ಣಕತೆಯೇ ನನ್ನ ನೆಚ್ಚಿನ ಪ್ರಕಾರ. ಇಡೀ ಶ್ರೀಲಂಕಾದಲ್ಲಿ ಕಾದಂಬರಿಕಾರನಿಗಿಂತಲೂ ಹೆಚ್ಚಾಗಿ ನನ್ನೊಳಗಿನ ಕತೆಗಾರನನ್ನು ಸಹೃದಯಿಗಳು ಗುರುತಿಸಿದ್ದಾರೆ. ಸೃಜನಶೀಲ ಬರವಣಿಗೆಯಲ್ಲಿ ಕತೆ ಅತ್ಯಂತ ಪ್ರಭಾವಶಾಲಿಯಾದುದು ಎಂದು ನಂಬಿದ್ದೇನೆ. ಅಲ್ಲದೆ ಇದು ಸಾಹಿತ್ಯದ ನವಿರು ಕಸರತ್ತು ಕೂಡ. ಒಂದೊಳ್ಳೆಯ ಕತೆ ಒಳ್ಳೆಯ ಕಾವ್ಯದಂತೆಯೇ ಮಧುರ. ಕತೆಯನ್ನು ಓದುವುದರಿಂದಲೇ ಸಾಹಿತ್ಯದ ಒಂದು ಅಭ್ಯಾಸ ಆರಂಭವಾಗುತ್ತದೆ. ಕತೆಯ ಪದ ಅಥವಾ ವಾಕ್ಯಗಳನ್ನು ಓದುವುದಕ್ಕಿಂತ ಅವುಗಳ ಧ್ವನಿಯನ್ನು ಗುರುತಿಸುವುದು ಮುಖ್ಯ.

ಇಂಗ್ಲಿಷ್‌ನಲ್ಲಿ eading between the lines ಎನ್ನುತ್ತಾರಲ್ಲಾ ಹಾಗೆ. ಅಲ್ಲಿನ ಉಪಮೆ, ಪ್ರತೀಕ, ಕಾಣ್ಕೆಗಳನ್ನು ಸಂದರ್ಭಕ್ಕೆ ಸರಿಯಾಗಿ ಗ್ರಹಿಸಿದಾಗಲೇ ಒಂದೊಳ್ಳೆ ರಸಾನುಭವ ಸಾಧ್ಯ. ಕತೆ ಬರೆಯುವಾಗ ಶೈಲಿ, ನಿರೂಪಣೆ ಕೂಡ ಅಷ್ಟೇ ಮುಖ್ಯ.

ಹೀಗಾಗಿ ನನ್ನ ಬರವಣಿಗೆಯಲ್ಲಿ ಬರೆವ ಶೈಲಿ, ಬಳಸುವ ಭಾಷೆ ಹಾಗೂ ನಿರೂಪಣೆಯ ವಿನ್ಯಾಸಕ್ಕೆ ಹೆಚ್ಚಿನ ಆದ್ಯತೆ. ಇದು ಕೂಡ ಕತೆಯ ವಸ್ತುವಿನಷ್ಟೇ ಮಹತ್ವದ್ದು. ಸಾಂದರ್ಭಿಕ ಅರ್ಥಗಳು, ಪದಗಳ ಸಾಂಕೇತಿಕ ಪ್ರಸ್ತುತತೆ ಹಾಗೂ ಭಾಷೆಯ ಲಯವನ್ನು ವಿಶೇಷವಾಗಿ ಗಮನಿಸುತ್ತೇನೆ. ಏಕೆಂದರೆ ಎಲ್ಲಾ ಕತೆಗಳನ್ನು ಒಂದೇ ಶೈಲಿ ಹಾಗೂ ಲಯದಲ್ಲಿ ಬರೆಯಲು ಸಾಧ್ಯವಿಲ್ಲ. ಒಂದು ಭಾಷೆಗೆ ಇರುವ ಲಯವನ್ನು ಕಂಡುಕೊಳ್ಳುವುದು ಲೇಖಕನಿಗಿರಬೇಕಾದ ಮುಖ್ಯ ಗುಣ. ಜತೆಗೆ ಓದುಗರೂ ಬರೆದದ್ದನ್ನು ಅರ್ಥ ಮಾಡಿಕೊಳ್ಳುವಷ್ಟು ಮುಂದುವರಿದಿರಬೇಕು. ಅವರ ಅಭಿರುಚಿಯೂ ಬರಹಗಾರನಷ್ಟೇ ಎತ್ತರದಲ್ಲಿರಬೇಕು. ಅನುಭವ ಹಾಗೂ ಭಾಷೆಯ ಸೂಕ್ಷ್ಮತೆಯನ್ನು ಗಮನಿಸುವ ಕೆಲಸ ಅವರಿಂದಾಗಬೇಕು.
* ನಿಮ್ಮ ಕತೆಗಳ ಒಟ್ಟು ದನಿ?
ಬಹುಶಃ ಕಪ್ಪು ಬಿಳುಪು ರೀತಿಯಲ್ಲಿ ಇದಮ್ಮಿತ್ತಂ ಎಂದು ನನ್ನ ಕತೆಗಳ ಆಶಯವನ್ನು ಹೇಳಿಕೊಳ್ಳಲಾಗದು. ಕಾಲ- ದೇಶಗಳಲ್ಲಿ ನಡೆದ ಸಾಹಿತ್ಯ ಕೃಷಿ ಮನುಷ್ಯ ಪರವಾಗಿರುವಂತೆಯೇ ನನ್ನ ಕತೆಗಳು ಕೂಡ ಅದರತ್ತಲೇ ತುಡಿಯುತ್ತವೆ. ಮಾರ್ಕ್ಸ್‌ವಾದದ ಹಿನ್ನೆಲೆಯಿಂದ ಬಂದವನಾದರೂ ಅದರ ಯಾಂತ್ರಿಕತೆಯಿಂದ ಬಿಡಿಸಿಕೊಂಡ ಬರವಣಿಗೆ ನನ್ನದಾಯಿತು ಎಂದು ಹೇಳಬಹುದೇನೋ.
*  ಜನಾಂಗೀಯ ಕಲಹದ ಬಳಿಕ ಶ್ರೀಲಂಕಾದ ತಮಿಳು ಹಾಗೂ ಸಿಂಹಳ ಸಾಹಿತ್ಯದಲ್ಲಿ ಎಂಥ ಬದಲಾವಣೆಗಳಾದವು?
ತಮಿಳು ಸಾಹಿತ್ಯ ನನಗೆ ಅಷ್ಟು ಆಳವಾಗಿ ಗೊತ್ತಿಲ್ಲದ ಕಾರಣ ಅದರ ಕುರಿತು ಪ್ರಸ್ತಾಪಿಸುವುದಿಲ್ಲ. ಆದರೆ ಸಿಂಹಳ ಕವಿತೆ, ಸಣ್ಣಕತೆ ಹಾಗೂ ಕಾದಂಬರಿ ಪ್ರಕಾರಗಳ ಕುರಿತು ಪ್ರತಿಕ್ರಿಯಿಸಬಲ್ಲೆ. ಕದನದ ಸಮಯದಲ್ಲಿ ಕೂಡ ಬಹುತೇಕ ಸಿಂಹಳ ಬರಹಗಾರರು ಜನಾಂಗೀಯ ಕಲಹ ಕುರಿತು ಸೂಕ್ಷ್ಮಜ್ಞರಾಗಿರಲಿಲ್ಲ. ಸಮರೋತ್ತರ ಸಂದರ್ಭವಾದ ಈ ದಿನಗಳಲ್ಲಿಯೂ ನನಗೆ ಅಂಥ ಮಹತ್ವದ ಬದಲಾವಣೆಗಳು ಕಂಡು ಬರುತ್ತಿಲ್ಲ. ಹಾಗೆಂದು ಅಂತಹ ಸೂಕ್ಷ್ಮತೆಯಿಂದ ಎಲ್ಲರೂ ಹೊರತಾಗಿದ್ದಾರೆ ಎಂದರ್ಥವಲ್ಲ. ಹಾಗೆ ಸೃಜನಾತ್ಮಕವಾಗಿ ಸ್ಪಂದಿಸಿದ ಕೆಲವರ ಕೃತಿಗಳು ತುಂಬಾ ಶಕ್ತಿಶಾಲಿಯಾಗಿಯೇ ಇವೆ.

ಸಿಂಹಳ ಸಿನಿಮಾಗಳಲ್ಲಿ ಮಾತ್ರ ಅಲ್ಪಮಟ್ಟಿನ ಬದಲಾವಣೆಗಳುಂಟಾದವು. ಯುದ್ಧದ ಸಂದರ್ಭಗಳಲ್ಲಿ ಕದನವನ್ನು ವಿಮರ್ಶಿಸಿ ಕೆಲವು ಚಿತ್ರಗಳು ತಯಾರಾದವು. ಆ ಚಿತ್ರಗಳ ಕೆಲವು ಕಲಾವಿದರನ್ನು ಬೆದರಿಸಲಾಯಿತು, ಅವಮಾನಿಸಲಾಯಿತು. ಆದರೆ ಅಂತಹ ಕಲಾವಿದರು ಅಂತರರಾಷ್ಟ್ರೀಯ ನೆಲೆಯಲ್ಲಿ ಗುರುತಿಸಿಕೊಂಡರು. ವಿಚಿತ್ರವೆಂದರೆ ಯುದ್ಧ ಮುಗಿವ ಹೊತ್ತಿಗೆ ಇಡೀ ಸಂಘರ್ಷವನ್ನು ವೀರಗಾಥೆಯಂತೆ, ದೇಶಭಕ್ತಿಯ ಸಂಕೇತವೆಂಬಂತೆ ಬಿಂಬಿಸಲಾಯಿತು. ಕಲಾತ್ಮಕ ಅಂಶಗಳಿಲ್ಲದಿದ್ದರೂ ಕೂಡ ಅಂತಹ ಚಿತ್ರಗಳಿಗೆ ಸರ್ಕಾರದ ಮನ್ನಣೆ ದೊರೆಯಿತು. ಈಗ ಜನಾಂಗೀಯವಾದಿ ಚಲನಚಿತ್ರಗಳತ್ತಲೇ ಹೆಚ್ಚು ಒಲವು ಇದ್ದಂತಿದೆ.
ತಮಿಳರ ಬದುಕು ನಿಮ್ಮನ್ನು ಕಾಡಲು ಕಾರಣ?
ತೀರಾ ಹತ್ತಿರದಿಂದ ತಮಿಳರ ಬದುಕನ್ನು ನೋಡಿದ್ದೆ. ಸಾಮಾನ್ಯ ಸಿಂಹಳ ವ್ಯಕ್ತಿಯ ನೋವುಗಳಿಗೂ ಅವರ ನೋವುಗಳಿಗೂ ಅಂಥ ವ್ಯತ್ಯಾಸ ಇರಲಿಲ್ಲ. ಎಲ್‌ಟಿಟಿಇಯ ತೀವ್ರಗಾಮಿ ಹೋರಾಟ ತಮಿಳರ ನೋವುಗಳಿಗೆ ನಿಜವಾಗಿ ಸ್ಪಂದಿಸಲಿದೆಯೇ ಎಂಬ ಅನುಮಾನ ನನ್ನೊಳಗೂ ಇತ್ತು. ಶ್ರೀಲಂಕಾಕ್ಕೆ ಸ್ವಾತಂತ್ರ್ಯ ದೊರೆತ ನಂತರ ಎಲ್ಲಾ ಸರ್ಕಾರಗಳೂ ತಮಿಳರನ್ನು ಮೂಲೆಗುಂಪು ಮಾಡಿದವು. ವೈವಿಧ್ಯತೆಗೆ ಅವಕಾಶ ನೀಡದೆ ಸಿಂಹಳೀಯರಿಗೆ ಮಾತ್ರ ಮಣೆ ಹಾಕಲಾಯಿತು. ತಮಿಳರ ದಮನಕ್ಕೆ ಇದೂ ಒಂದು ಕಾರಣ. ಶ್ರೀಲಂಕಾದ ಉತ್ತರ ಹಾಗೂ ಪೂರ್ವ ಭಾಗಗಳ ಬದುಕು ದೊಡ್ಡಮಟ್ಟದಲ್ಲಿ ಅನಾವರಣಗೊಂಡಿರುವುದು ನನ್ನ ಕಾದಂಬರಿ `ಸಿಯೋತ್ ತತು ಸಿಂಧ`ದಲ್ಲಿ.
*  ನೀವು ಕಂಡುಕೊಂಡಂತೆ ಎರಡೂ ದೇಶಗಳ ನಡುವೆ ಇರುವ ಸಾರಸ್ವತ ಲೋಕದ ವ್ಯತ್ಯಾಸ?
ನಮ್ಮ ದೇಶದಲ್ಲಿ ಕೆಲವು ಪ್ರಗತಿಪರ ಸಾಹಿತ್ಯಕ ಹೋರಾಟಗಳು ನಡೆದಿವೆ. ಆದರೆ ಕನ್ನಡದಲ್ಲಿ ಅಥವಾ ಭಾರತದ ಕೆಲ ಭಾಷೆಗಳಲ್ಲಿ ಆಗಿರುವಂತೆ ನವೋದಯ, ಪ್ರಗತಿಶೀಲ, ನವ್ಯ, ದಲಿತ- ಬಂಡಾಯ ಹೀಗೆ ವಿವಿಧ ಕಾಲಘಟ್ಟಗಳ ಚಳವಳಿ ಸಾಧ್ಯವಾಗಿಲ್ಲ. ಈ ಚಳವಳಿಗಳ ಆಶಯ ನಮ್ಮ ಸಾಹಿತ್ಯದಲ್ಲಿ ಸಮಗ್ರವಾಗಿ ಅಡಕವಾಗಿವೆಯೇ ಹೊರತು ಒಡೆದು ಕಾಣುವ ಪ್ರತ್ಯೇಕತೆ ತೋರದು.

ಮೇಲಾಗಿ ಭಾರತದ ಜಾತಿ ಪದ್ದತಿ ಹಾಗೂ ದೊಡ್ಡ ಧಾರ್ಮಿಕ ಅಂತರ ನಮ್ಮಲ್ಲಿಲ್ಲ. ಬಹುತೇಕ ಹೋರಾಟಗಳು ನಮ್ಮ ದೇಶದಲ್ಲಿ ಆರ್ಥಿಕ ಅಸಮಾನತೆಯ ವಿರುದ್ಧ ನಡೆದಿವೆ. ಹೀಗಾಗಿ ಭಾರತದ ಯು.ಆರ್. ಅನಂತಮೂರ್ತಿ, ರವೀಂದ್ರನಾಥ ಟ್ಯಾಗೋರ್, ಕಮಲಾದಾಸ್, ಸಾದತ್ ಹಸನ್ ಮಾಂಟೊ, ಅರುಂಧತಿ ರಾಯ್, ಸಲ್ಮಾನ್ ರಶ್ದಿ ಮುಂತಾದವರು ಹೆಚ್ಚು ವೈವಿಧ್ಯಮಯವಾಗಿ ತೋರುತ್ತಾರೆ.

ಇನ್ನು ರಚನೆಯ ವಿಚಾರಕ್ಕೆ ಬಂದರೆ ನಮ್ಮಲ್ಲಿ ಕಾವ್ಯ ಬೆಳೆದಷ್ಟು ಇತರ ಸಾಹಿತ್ಯ ಪ್ರಕಾರಗಳು ಬೆಳೆದಿಲ್ಲ. ಕತೆ, ಕಾದಂಬರಿಗಳಂತಹ ಗದ್ಯ ಪ್ರಕಾರದಲ್ಲಿ ಸಾಕಷ್ಟು ಕೃಷಿ ನಡೆಯಬೇಕಿದೆ. ವಿವಿಧ ಭಾಷೆಗಳ ಅನುವಾದಿತ ಸಾಹಿತ್ಯ ಶ್ರೀಲಂಕಾದಲ್ಲಿ ವಿಫುಲವಾಗಿ ದೊರೆಯುತ್ತದೆ. ಆದರೆ ಸಿಂಹಳ ಸಾಹಿತ್ಯವನ್ನು ಜಗತ್ತಿಗೆ ಪರಿಚಯಿಸುವಂತಹ ಅನುವಾದಕರ ಕೊರತೆ ಇದೆ. ಬಹುತೇಕ ದೇಶಗಳಲ್ಲಿ ನಡೆಯುವಂತೆ ಸಾಹಿತ್ಯದ ಬೆಳವಣಿಗೆ ಕುರಿತು ನಮ್ಮ ಸರ್ಕಾರದ ಗಮನ ಅಷ್ಟಕ್ಕಷ್ಟೇ.

ಕೃಪೆ : ಪ್ರಜಾವಾಣಿ  

Wednesday, September 19, 2012

मातृभाषा


हल्ली विविध प्रांतीय भाषांमध्ये चौथी-पाचवीपासून इंग्रजीचा संपर्क होईल, असे पाठ्यक्रम तयार केले आहेत. उच्च शिक्षण घेतेवेळी बालकाची आकलनक्षमता वाढलेली असते. तो इंग्रजी शब्दांना सहजपणे परिचित होतो व आत्मसात करतो. अगदी लहानपणी मुलगा इंग्रजीविषयी अनभिज्ञ असतो व त्याची आकलनशक्तीही कमी असते. म्हणून त्याच्यावर परकीय भाषेचा बोझा टाकणे अयोग्य आहे. त्याने केलेले इंग्रजी पाठांतर हे नुसती घोकंपट्टी असते. आपला मुलगा मातृभाषेतून शिकला, तर तो कमजोर राहील, हा गैरसमजच पालकांनी मनातून काढून टाकला पाहिजे. शेजार्‍याचा मुलगा इंग्रजी माध्यमातून शिकतो म्हणून आपल्याही मुलाला इंग्रजीतूनच शिकवावे, ही मानसिकता बरोबर नाही. केवळ एक फॅशन म्हणून किंवा इतरांनी कौतुक करावे म्हणून पहिल्या दिवसापासून इंग्रजी माध्यमाच्या शाळेत टाकून मुलाचे नुकसान करणे योग्य नाही. आपल्या मातृभाषेवर प्रेम करणे, त्यातून शिक्षण घेणे गौरवास्पद आहे.

काही काही पालक आपल्या मुलांवर कुटुंबातील व्यक्तींशी रोजचे व्यावहारिक बोलणे सुद्धा इंग्रजीमधून करण्याची सक्ती करतात. हा तर अतिरेकच झाला म्हणायचा. हे म्हणजे आपली सांस्कृतिक अस्मिताच नष्ट करणे होय. मुलांच्या व्यक्तिमत्त्व विकासात तो मोठा अडसर ठरू शकतो.

स्वातंत्र्यपूर्व काळात असा ठराव झाला होता की, स्वतंत्र भारताची राष्ट्रभाषा हिंदी असेल. ठिकठिकाणचे लोक हिंदी शिकू लागले. आश्‍चर्याची गोष्ट म्हणजे यात तत्कालीन दक्षिणी प्रांत मद्रास, केरळ आघाडीवर होते. हिंदी भाषेला वातावरण अनुकूल होते. स्वातंत्र्यप्राप्तीनंतर केंद्रीय सचिवांचा एक गट पंतप्रधानांकडे गेला आणि विनंती केली की, देशाचा संपूर्ण कारभार राष्ट्रभाषा हिंदीतून चालविण्याची आमची तयारी आहे. आपण तशा लेखी आज्ञा द्याव्या. नोकरशाहीबद्दल सामान्यपणे अशी ओरड असते की, सरकारचे चांगले निर्णय ते अमलात आणीत नाहीत, इथे तर खुद्द नोकरशहांनीच हिंदीतून राज्यकारभार करण्याचा प्रस्ताव ठेवला होता. मग माशी कुठे शिंकली? तर आमचे लाडके पंतप्रधान पंडित जवाहरलाल नेहरू, ज्यांच्याविषयी असे म्हटल्या जाते की ते संस्कृतीने मुसलमान, शिक्षणाने इंग्रज तर केवळ अपघातानेच हिंदू होते, ते एकाएकी भडकले व म्हणाले, ‘‘छे, छे हिंदी ही काय भाषा आहे? स्वतंत्र भारताची राज्यकारभाराची भाषा इंग्रजीच राहणार.’’ स्वराज्य आलं, पण स्वभाषा न आल्यामुळे स्वराज्याचा अस्मिताविहीन प्रवास कण्हत कुंथत कसा तरी चालू आहे.

पहिल्या जागतिक महायुद्धाने (१९१४-१८) तुर्कस्थानला एक कर्तबगार महान राष्ट्रनेता दिला. त्याचं नाव कमाल पाशा. कमाल द-अतातुर्क. कमाल रणांगणावर तर तळपला होताच, पण समाजजीवन आणि राज्यकारभारातही त्याने क्रांती घडवली. कमालने तुर्कस्थानात आधुनिक सुधारणेचे युग आणले. तुर्की फेज टोपी, बुरखा, पैजामा शेरवानी, दाढी इत्यादी गोष्टी हद्दपार केल्या. शरियत कायद्याच्या जागी आधुनिक कायदा आला. युरोपियन पद्धतीचा सुटाबुटाचा पोषाख आला, स्त्रिया बुरख्याविना मोकळेपणाने फिरू लागल्या. बराचसा कारभार इंग्रजीतून चालू होता. लोकांना व अधिकार्‍यांना वाटलं की राज्यकारभाराची भाषा इंग्रजीच चालू राहील. कमालने अधिकार्‍यांशी विचारविनिमय केला आणि लेखणीच्या एका फटकार्‍यानिशी दुसर्‍याच दिवशीपासून राज्यकारभार तुर्की भाषेतून झाला पाहिजे असे आदेश दिले. सुरुवातीला थोडा त्रास झाला, पण नंतर हळूहळू सर्व सुरळीत होत गेले. समाजाची राष्ट्रीय अस्मिता जागृत ठेवण्यासाठी स्वभाषा किती निर्णायक ठरू शकते, याची पुरेपूर जाण कमाल पाशाला होती. शिवाय कुणाही भाषिक गटाला खूष करण्याची मतांचे राजकारण करण्याची त्याला गरज नव्हती. म्हणूनच राष्ट्रीय हिताचे निर्णय त्याला कणखरपणे घेता आले. राबवता आले. ती राजकीय इच्छाशक्ती कमाल पाशाजवळ होती. म्हणून तो महान नेता ठरला.

एकदा राष्ट्रीय स्वयंसेवक संघाचे शिबिर चालू होते. त्यात जिज्ञासा समाधान हा प्रश्‍नोत्तराचा कार्यक्रम होता. प्रशिक्षणार्थ्यांनी प्रश्‍न विचारायचा व सरसंघचालकांनी उत्तर देऊन समाधान करायचे, असा तो कार्यक्रम होता.

एका शिबिरार्थ्याने सरसंघचालकांना विचारले, ‘हल्लीच्या इंग्रजी भाषेच्या वाढत्या प्रभावात मातृभाषेतून शिक्षण घेणे योग्य आहे काय?’ प्रश्‍न फार चांगला होता. त्यावर सरसंघचालकांनी मार्मिक उत्तर दिले, ते असे- केवळ प्राथमिकच नव्हे, तर माध्यमिक वर्गांपर्यंतचे शिक्षण देखील मातृभाषेतून झाले पाहिजे. त्यामुळे विद्यार्थ्यांची आकलन क्षमता वाढते व विषय समजायला सोपे जाते. माध्यमिक वर्गापर्यंत ही प्रक्रिया सुरू असते. नंतर दुसर्‍या कुठल्याही भाषेतून संगणकाप्रमाणे आपला मेंदू मातृभाषेत त्याचे भाषांतर त्वरित करतो आणि निर्णयक्षमता वाढवितो.

आपले म्हणणे सोपे करून सांगण्याकरिता महाभारतातील उदाहरण देत म्हणाले, ‘महाभारतातील पितामह भीष्म, भीम यांच्याबद्दल आपल्याला माहिती असल्याने ‘भीष्मप्रतिज्ञा, भीमपराक्रम’ म्हणजे काय ते लगेच कळते. त्याचा अर्थही कळतो. ‘हरक्युलस’बद्दल माहिती असेल तर ‘हरक्युलिअन टास्क’ म्हणजे काय ते कळेल. ‘राधिके तुने मेरी बन्सुरी चुरायी.’ आता ज्याला हे पवित्र नाते ठावूक आहे त्याला यातील भावार्थ कळेल. पण ज्याला हे नाते माहिती नाही त्याला त्याचा अर्थ आणि भावार्थ कळणार नाही. आजच्या इंग्रजी माध्यमाप्रमाणे तो त्याचे भाषांतर असे करेल- ‘राधा हॅज स्टोलन माय फ्ल्यूट देन व्हॉट? गो टु पोलिस स्टेशन ऍण्ड रिपोर्ट.’ प्रश्‍न करणार्‍या शिबिरार्थ्याला त्याच्या प्रश्‍नाचे उत्तर मिळाले होते.

                                                                        वसंत वि. कुळकर्णी, नागपूर
ಕೃಪೆ : ತರುಣ ಭಾರತ (ಮರಾಠಿ ದೈನಿಕ)

Saturday, September 08, 2012

ಸಮಾಜ ಒಡೆಯುವ ಹುನ್ನಾರ

 * ಡಾ. ಸಿದ್ರಾಮ ಕಾರಣಿಕ
ಏಜಾಜ್ ಆಶ್ರಫ್ ಅವರು ತುಂಬ ಓದಿಕೊಂಡಿರಬಹುದು. ಹಲವಾರು ವಿಷಯಗಳನ್ನು ತಿಳಿದುಕೊಂಡಿರಬಹುದು. ಆದರೆ ಭಾರತೀಯ ಮನೋಸ್ಥಿತಿಗಳ ನಿಜವಾದ ಅರಿವು ಇಟ್ಟುಕೊಳ್ಳದೇ ಲೇಖನಿಯನ್ನು ಆಡಿಸುವ, ಹಾದಿ ತಪ್ಪಿಸುವ ವಿಚಾರವನ್ನು ಇಟ್ಟುಕೊಂಡಿರುವುದಂತೂ ಸ್ಪಷ್ಟ ! ವಿಜಯ ಕರ್ನಾಟಕ ದಿನಪತ್ರಿಕೆಯ ಶುಕ್ರವಾರ ದಿನಾಂಕ : 31-08-2012 ರಂದು ಪತ್ರಕರ್ತ ಏಜಾಜ್ ಆಶ್ರಫ್ ಅವರು ವಿ.ಪಿ.ಸಿಂಗ್ ಮತ್ತು ಮಹಾನ್ ಭಾರತೀಯರು' ಎಂಬ ಶೀರ್ಷಿಕೆಯಲ್ಲಿ ಬರೆದ ಲೇಖನವು ತುಂಬ ಮಾರ್ಮಿಕವಾಗಿ ಮೂಡಿ ಬಂದಿದೆ. ಆದರೆ ವಿಷಯವನ್ನು ವಿಶ್ಲೇಷಣೆ ಮಾಡುವಾಗ ಬರಹಗಾರ ಯಾವುದನ್ನೋ ಮನಸ್ಸಿನಲ್ಲಿ ಗುಪ್ತವಾಗಿಟ್ಟುಕೊಂಡು, ತಲೆ ಕೆಡಿಸಿಕೊಂಡು ಲಂಗು-ಲಗಾಮಿಲ್ಲದೆ ತಮ್ಮ ವಿಚಾರ ಲಹರಿಯನ್ನು ಹರಿಯ ಬಿಟ್ಟಿದ್ದಾರೆ.

ಸಿಎನ್‌ಎನ್-ಐಬಿಎನ್, ಹಿಸ್ಟರಿ ಟಿವಿ 18, ಔಟ್‌ಲುಕ್ ಕೈಗೊಂಡ ಮಹಾತ್ಮಾ ಗಾಂಧಿಯ ನಂತರ ಅತಿಮಾನ್ಯ ಭಾರತೀಯ' ಎಂಬ ಹುಡುಕಾಟದಲ್ಲಿ ಮೊಟ್ಟ ಮೊದಲು ಹೆಸರು ಇರುವುದು ಡಾ. ಬಾಬಾಸಾಹೇಬ ಅಂಬೇಡ್ಕರ್ ಅವರದು. ಹಾಗೇ ನೋಡಿದರೆ, ಗಾಂಧಿಗಿಂತ ಒಂದು ಕೈ ಮೇಲಾಗಿಯೇ ಸಾಧನೆ ಮಾಡಿದವರು ಅಂಬೇಡ್ಕರ್. ಸ್ವತಂತ್ರ ಭಾರತದ ಅತಿಮಾನ್ಯ ಭಾರತೀಯ' ಎಂದು ಹೆಸರು ನೀಡಿ ಹುಡುಕಾಟ ನಡೆಸಿದ್ದರೂ ಅಂಬೇಡ್ಕರ್ ಅವರೇ ಮೊದಲಿಗರಾಗಿ ಇರುತ್ತಿದ್ದರು. ಆದರೆ ತಿಳಿಯಲಾರದವರು ಮಾಡಿದ ಅಥವಾ ತಿಳಿದೂ ತಿಳಿದು ಮಾಡಿದ ಮಹಾನ್ ಶೋಧ ಇದು ಎಂದು ಭಾವಿಸಿಕೊಂಡಿರುವ ಏಜಾಜ್ ಆಶ್ರಫ್ ಅವರು ಡಾ. ಬಾಬಾಸಾಹೇಬ ಅಂಬೇಡ್ಕರ್ ಅವರನ್ನೇ ಗುರಿಯಾಗಿಸಿಕೊಂಡು ಈ ಲೇಖನ ಬರೆದಿರುವಂತೆ ತೋರುತ್ತದೆ. ಇಲ್ಲಿ ಅವರೇ ಹೇಳುವ ಹಾಗೆ ಸಾಧಾರಣವಾಗಿ ರಾಜಕೀಯ ಪೂರ್ವಾಗ್ರಹಗಳು ಕಾಣಿಸುತ್ತವೆ !'

ಇಡೀ ಲೇಖನದಲ್ಲಿ ವಿ.ಪಿ. ಸಿಂಗ್ ಅವರನ್ನು ನೆನಪಿಸಿಕೊಳ್ಳುತ್ತಲೇ ಡಾ. ಬಾಬಾಸಾಹೇಬ ಅಂಬೇಡ್ಕರ್ ಅವರನ್ನು ಪ್ರತ್ಯೇಕಿಸುವ ಕೆಲಸವನ್ನು ಲೇಖನದಲ್ಲಿ ಮಾಡಲಾಗಿದೆ. 'ನೂರು ಗಣ್ಯ ವ್ಯಕ್ತಿಗಳಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಮೊದಲಿಗರಾದರು. ಗಣ್ಯ ವ್ಯಕ್ತಿಗಳನ್ನು ಜಾತಿ ಮಸೂರದಲ್ಲಿ ನೋಡದಿದ್ದರೂ ಸಹ ಅಂಬೇಡ್ಕರ್ ಜನಪ್ರಿಯ ಅನುಮೋದನೆಯನ್ನು ಶ್ಲಾಘಿಸಿ ಸಮರ್ಥಿಸಿಕೊಳ್ಳಬಹುದು' ಎಂದು ಆರಂಭದಲ್ಲಿ ಹೇಳುವ ಲೇಖಕರು, ಆನಂತರದಲ್ಲಿ ಸಮಕಾಲೀನ ರಾಷ್ಟ್ರೀಯ ಸಂದರ್ಭದಲ್ಲಿ ಯಾವುದೇ ಪ್ರಮಾಣದಲ್ಲಾಗಲೀ, ಅಂಬೇಡ್ಕರ್‌ರಿಗೆ ಭಾರತ ರತ್ನ' ಪ್ರಶಸ್ತಿಯನ್ನು ಮರಣೋತ್ತರವಾಗಿ ಕೊಡುವ ಮೂಲಕ ಅವರನ್ನು ದಲಿತರ ದೇವತೆಯನ್ನಾಗಿ ಮಾಡಿದ ವಿಪಿ ಸಿಂಗ್ ಅವರ ಹೆಸರನ್ನು ಸಿಎನ್‌ಎನ್ ಐಬಿಎನ್ ಸಿದ್ಧಪಡಿಸಿದ ನೂರು ಜನರ ಪಟ್ಟಿಯಲ್ಲಿ ಸೇರಿಸದೇ ಇರುವುದು ದೊಡ್ಡ ವಿಪರ್ಯಾಸ' ಎನ್ನುತ್ತಾರೆ. ಅಷ್ಟೇ ಅಲ್ಲ ಇಂದು ನಾವು ವಿಪಿ ಸಿಂಗ್ ಅವರನ್ನು ರಾಜಕೀಯವಾಗಿ ಒಪ್ಪಿಕೊಳ್ಳುವುದಕ್ಕಿಂತ ಅಂಬೇಡ್ಕರ್ ಅವರನ್ನು ಒಪ್ಪಿಕೊಳ್ಳುವುದು ಅನುಕೂಲಕರವಿರಬಹುದೇ ?' ಎಂಬುದಾಗಿ ಪ್ರಶ್ನೆ ಎಸೆದಿದ್ದಾರೆ !

ಏಜಾಜ್ ಆಶ್ರಫ್ ಅವರ ಒಟ್ಟು ಲೇಖನದಲ್ಲಿ ವಿಪಿ ಸಿಂಗ್ ಅವರನ್ನು ಮರೆತ ಬಗ್ಗೆ ಖೇದವಿದೆ. ಸಿಂಗ್ ಅವರ ಕಾರ್ಯ ವೈಖರಿಯನ್ನು ಸಾಧ್ಯಂತವಾಗಿ ಅವರು ಬಿಡಿಸಿ ಇಟ್ಟಿದ್ದಾರೆ. ಯಾವುದೇ ಸಂದರ್ಭದಲ್ಲಿ ವಿಪಿ ಸಿಂಗ್ ಅವರನ್ನು ನಾವು ವಿರೋಧಿಸಲು ಕಾರಣಗಳೇ ಇಲ್ಲ. ರಾಜಕೀಯದಲ್ಲಿ ಇಡೀ ದೇಶ ಮೆಚ್ಚುವ ಕೆಲಸ ಮಾಡಿದವರು ಸಿಂಗ್. ಅವರ ಬಗ್ಗೆ ಗೌರವವಿದೆ. ಆದರೆ ಏಜಾಜ್ ಅವರಂಥವರು ಪರೋಕ್ಷವಾಗಿ ಆ ಭೇದಗಳನ್ನು ಹುಟ್ಟು ಹಾಕುವಂತಿದೆ. ಅವರು ಇನ್ನುಳಿದ ಯಾರ ಹೆಸರನ್ನಾದರೂ ತೆಗೆದುಕೊಂಡು ಚರ್ಚೆ ಮಾಡಬಹುದಿತ್ತು. ಸಮಾಜವನ್ನು ಸೂಕ್ಷ್ಮವಾಗಿ ಒಡೆಯುವ ಹುನ್ನಾರ ಏಜಾಜ್ ಅವರ ಮನದಲ್ಲಿ ಮನೆ ಮಾಡಿರುವುದು ಮೇಲುನೋಟಕ್ಕೆ ಕಂಡುಬರುವ ಸತ್ಯ.

ವಿಪಿ ಸಿಂಗ್ ಅವರ ಆಡಳಿತಾವಧಿಯಲ್ಲಿ ಡಾ. ಬಾಬಾಸಾಹೇಬ ಅಂಬೇಡ್ಕರ್ ಅವರಿಗೆ ಮರಣೋತ್ತರ ಭಾರತರತ್ನ' ದೊರೆತದ್ದು, ಕೆ.ಆರ್. ನಾರಾಯಣನ್ ಅವರು ರಾಷ್ಟ್ರಪತಿಯಾದುದ್ದನ್ನು ತಳಕು ಹಾಕಿ ನೋಡಿರುವ ಕ್ರಮವಂತೂ ಏಜಾಜ್ ಅವರ ಕೆಳಮಟ್ಟದ ವಿಚಾರ ಸರಣಿಯೇ ಆಗಿದೆ ಎಂಬುದನ್ನು ಬಿಡಿಸಿ ಹೇಳುವ ಅವಶ್ಯಕತೆಯಿಲ್ಲ.

ಗುಪ್ತ ಗುಲಾಮಗಿರಿಯಲ್ಲಿ ಇನ್ನೂ ಇರಬೇಕೆಂಬ ಮಾತು ಅವರ ಇಡೀ ಲೇಖನ ಪ್ರತಿನಿಸುತ್ತದೆ. ಪರಿಪೂರ್ಣವಾಗಿ ಅಂಬೇಡ್ಕರ್ ಅವರನ್ನು ಅರಿತುಕೊಳ್ಳದೇ ಮನಸ್ಸಿಗೆ ಬಂದುದನ್ನು ಗೀಚುವ ಮೂಲಕ ಒಂದೀಡಿ ಸಮಾಜದ ದಿಕ್ಕೂ ತಪ್ಪಿಸುವ ಏಜಾಜ್ ಅವರ ಪರಿಕ್ರಮ ನಿಜಕ್ಕೂ ವಿಪರ್ಯಾಸ !

Wednesday, September 05, 2012

ಸಿನೆಮಾ ಮುಗಿದಮೇಲೆ ಚೇತನಾ ಬರೆದದ್ದು

                                      ಚೇತನಾ ತೀರ್ಥಹಳ್ಳಿ 

ಅಗೋ ಅಲ್ಲಿ.. !
ಕೆಂಪುಕೋಟೆಯ ಮೇಲೆ ಹೀಗೊಬ್ಬ ಪಾಪ!
ಹೆಜ್ಜೆ ಮುಂದೆ ಹೆಜ್ಜೆ ಇಟ್ಟು ನಡೆಯುತ್ತಿದ್ದ. ‘ಘೋಷ’ದ ತಾಳಕ್ಕೆ ತಪ್ಪಬಾರದ ಕಾಳಜಿ ಜೊತೆಗೆ! ಅವನ ಕೈಲೊಂದು ಕಮಲದ ಹೂವು.
‘ಗರ್ದೀ’, ‘ದರ್ದೀ’... ‘ಗರ್ದೀ’, ‘ದರ್ದೀ’... ಎಂದೆನ್ನುತ್ತ ಒಂದೊಂದೆ ಪಕಳೆಗಳನ್ನು ಕೆಳಗೆಸೆಯುತ್ತಿದ್ದ. ಕೋಟೆ ಮೇಲಿನ ಕಾಂಪೌಂಡು ಮುಗಿಯುವ ಹೊತ್ತಿಗೆ ಉದುರಿಸುವ ಪಕಳೆ ‘ಗರ್ದೀ’ಯಾಗಿದ್ದರೆ ತನಗೆ ಖುರ್ಚಿ ಗ್ಯಾರೆಂಟಿ!
‘ಇಲ್ಲವಾದರೆ?’- ಯೋಚಿಸುವ ಉಸಾಬರಿಗೇ ಹೋಗಿರಲಿಲ್ಲ...

ಹಾಗೆ ಪಕಳೆ ಬೀಳಿಸುತ್ತ, ನಡೆಯುತ್ತ ನಡೆಯುತ್ತ ಕಾಂಪೌಂಡು ಇನ್ನೂ ಅಷ್ಟುದ್ದ ಇದೆ ಅನ್ನುವಾಗ...
ಕೈಯಲ್ಲಿನ ಕಮಲ ದಳವೇ ಖಾಲಿ!!
ಆತ ತ್ರಿಶಂಕುವಿನ ಹಾಗೆ ನಿಂತುಬಿಟ್ಟ...

******

ಇನ್ನೊಂಚೂರು ಈಚೆ... ಸ್ವಲ್ಪ ಆಚೆ...
ಸರ್ಕಸ್ ಕಂಪೆನಿಯೊಂದು ಗುಡಾರ ಹೂಡಿತ್ತು. ಕೆಂಪು ಟೀಶರ್ಟಿನ ರಿಂಗ್ ಮಾಸ್ಟರ್, ಆನೆಗೆ ‘ಸಿಟ್’ ‘ಸ್ಟ್ಯಾಂಡ್’ ಕಸರತ್ತು ಮಾಡಿಸಲು ಹೆಣಗಾಡುತ್ತಿದ್ದ. ಅವನ ಪರದಾಟಕ್ಕೆ ನಗಲು ತೋಚದ ಜೋಕರ್, ಗಡದ್ದು ಉಂಡು ಮಲಗಿಬಿಟ್ಟಿದ್ದ.

ಈ ಆನೆಯೋ! ಒಂದಕ್ಕೆ ಹನ್ನೊಂದು ಮಾಡುತ್ತ, ನಖರಾ ಆಡುತ್ತ, ಬೇಕೆಂದೇ ಕಾಡುತ್ತ ಹೈರಾಣು ಮಾಡಿತ್ತು. ತಾನು ರೇಸಿಗೆ ಸೇರಿದ್ದೇ ಸಾಧನೆಯೆನ್ನುತ್ತ ಬೀಗತೊಡಗಿತ್ತು. ರಿಂಗ್ ಮಾಸ್ಟರನ್ನ ಕಾಡಲಂತಲೇ ಸಿಟ್ ಅಂದಾಗ ಸ್ಟ್ಯಾಂಡಾಗಿ, ಸ್ಟ್ಯಾಂಡ್ ಅಂದಾಗ ‘ಸಿಟ್ಟು’ಕೊಂಡು ದೊಂಬರಾಟ ನಡೆಸಿತ್ತು.

ತಾಲೀಮು ನಡೆದಿದ್ದಾಗಲೇ ಧಬಾರನೆ ಕಿವಿ ಹಾರುವ ಸದ್ದು!
ಆನೆ ಕನಸಿನ ಖುರ್ಚಿ ಮುರಿದುಬಿದ್ದಿತ್ತು...

******

ಈ ಎಲ್ಲ ಸಂತೆಯಿಂದ ಹೊರಗೆ, ಅಲ್ಲಿ ಅಮ್ಮಾಯಿಯೊಬ್ಬಳು ಹಣೆಗೆ ಲಾಲ್ ಗಂಧ ತೀಡುತ್ತ ಕುಂತಿದ್ದಳು. ಮ್ಯೂಸಿಕಲ್ ಛೇರಿನಲ್ಲಿ ಮೈಹೊತ್ತು ಓಡಲಾಗದ ಸಂಕಟ ಅವಳಿಗೆ. ಆದರೇನು? ತನ್ನ ದಾಳದ ಪಾಳಿಗಾಗಿ ಕಾದುಕೊಂಡಿದ್ದಳು.

ಆ ದಿನಕ್ಕೆ ತಾನು ಯಾವ ಸೀರೆ, ಯಾವ ಚಪ್ಪಲಿ, ಯಾವ ಪರ್ಫ್ಯೂಮು, ಯಾವ ವ್ಯಾನಿಟಿ...
ಆಯ್ದುಕೊಳ್ಳುವ ಗಲಿಬಿಲಿಯಲ್ಲಿ ಪಗಡೆಹಾಸು ಎತ್ತಿಟ್ಟಿದ್ದು ಅವಳಿಗೆ ಗೊತ್ತೇ ಆಗಲಿಲ್ಲ!

********

ಇನ್ನೀಗ ಅಂವ ಕೆಂಪು ಕೋಟೆಯಿಂದಿಳಿದು ಬಂದ. “ಕಡಿಮೆ ದಳದ ಕಮಲ ಸರಬರಾಜಾಗಿದ್ದು ಗುಜರಾತಿನಿಂದ"- ಇಂಟೆಲಿಜೆನ್ಸ್ ರಿಪೋರ್ಟು!
ನಗು ಹೊತ್ತ ಮುಖವಾಡಗಳು ಹಾದಿಗುಂಟ ಬಿದ್ದಿದ್ದವು. ಇಕ್ಕೆಲದ ಇಟ್ಟಿಗೆ ಸಾಲು ಸಾಲು, ಉಳಿದ ಕಮಲ ದಂಟಿಗೆ ಸ್ಮಾರಕ ಕಟ್ಟಲು ಕಾಯ್ತಿದ್ದವು...

ಇತ್ತ ಸರ್ಕಸ್ ಕಂಪೆನಿಯ ಕಂಬ ಉರುಳಿಬಿದ್ದಿತ್ತು. ಆಟ ಬರಖಾಸ್ತುಗೊಂಡು ಎಲ್ಲರೂ ತಂತಮ್ಮ ಗಂಟು ಕಟ್ಟತೊಡಗಿದರು.
ಜೋಕರ್ ಮಾತ್ರ, “ಇನ್ನೂ ಐದು ವರ್ಷ ಇಲ್ಲೇ ಮಲಗಬೇಕಲ್ಲ?" ಅನ್ನುತ್ತಾ ಚಾಪೆ ಕೊಡವಿಕೊಂಡ...

******

ಅಲ್ಲಿ, ನಂ.೧೦, ಜನಪಥದ ರಾಣೀವಾಸದಲ್ಲಿ ಸಂಭ್ರಮವೋ ಸಂಭ್ರಮ. ರಾಣಿಯ ಕಿರೀಟ ಭದ್ರ ನಿಂತಿತ್ತು. ಮಹಾಮಂತ್ರಿಯ... ಅಲ್ಲಲ್ಲ... ಪ್ರಧಾನ ಮಂತ್ರಿಯ ಸಾಧನೆ, ಕೋಟೆ ಉಳಿಸಿಕೊಟ್ಟಿತ್ತು.

ಅದರಲ್ಲಿನ್ನು ಯುವ ರಾಜ ಸುಭದ್ರ. ಮಹರಾಜನಾಗುವವರೆಗೆ ಎಲ್ಲವೂ ನಿರುಮ್ಮಳ!

******

ಈ ಚೂರು ಚೂರು ಚಿತ್ರಗಳನ್ನ ತೇಪೆ ಹಾಕಿ ಅವನೊಬ್ಬ ಸಿನೆಮಾ ತೆಗೆದ. ಎಲ್ಲ ಮುಗಿದು, ಮೇಕಪ್ಪು ತೊಟ್ಟಿದ್ದವರು ಮುಖ ತೊಳೆದುಕೊಂಡರು. ಬಣ್ಣಗಳು ಕರಗಿ ಕೊಚ್ಚೆಯಾಗಿ ಹರಿಯಿತು.
ಕಾಯ್ದಿಟ್ಟ ಟಿಕೀಟುಗಳಲ್ಲಿ ಅರ್ಧ ಮಾತ್ರ ತುಂಬಿ, ಎಲ್ಲ ಖಾಲಿ ಖಾಲಿ...

ನೋಡ ಬಂದವರು ಬಟ್ಟೆ ಹರಕೊಂಡು ಓಡಿಹೋದರು. ಹಾಗೇ ಉಳಿದವರು ಹುಚ್ಚು ಹತ್ತಿ ತಲೆ ಚಚ್ಚಿಕೊಂಡರು.

ಥಿಯೇಟರಿನತ್ತ ಮುಖ ಮಾಡದವರು ಮಾತ್ರ ಯಾವತ್ತಿನ ಹಾಗೆ ಹರಟುತ್ತ, ಉಗಿದ ಚೂಯಿಂಗಮ್ಮು ಜಗಿಯುತ್ತ ಕುಳಿತುಬಿಟ್ಟರು !

ಕೃಪೆ : ಕೆಂಡಸಂಪಿಗೆ

Tuesday, September 04, 2012

ಭಾರತದ ಅಲಿಖಿತ ಸಂವಿಧಾನ – ಜಾತಿ ಪದ್ಧತಿ !

-ಡಾ. ಮೂಡ್ನಾಕೂಡು ಚಿನ್ನಸ್ವಾಮಿ


 ”ಜಾತಿಯ ಗೋಡೆಯನ್ನು ಕೆಡವಿ”
‘ಜಾತಿಯ ಗೋಡೆಯನ್ನು ಕೆಡವಿ’ ಎಂಬ ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಹೈಕಮಿಷನರ್ ನವಿ ಪಿಳ್ಳೆ  ಹೊರಡಿಸಿರುವ ಪತ್ರ ಕಠಿಣ ಶಬ್ದಗಳಿಂದ ಕೂಡಿದ್ದು ಹಲವಾರು ದೇಶಗಳಲ್ಲಿ ಸಂಚಲನ ಮೂಡಿಸಿದೆ.  ಜಾತಿಪದ್ಧತಿಯಿಂದುಂಟಾಗುವ  ಮಾನವ ಹಕ್ಕು ಉಲ್ಲಂಘನೆಯನ್ನು  ಅವರು ಗುಲಾಮಗಿರಿ ಹಾಗೂ ಅಪಾರ್ಥೀಡ್‍ಗಳಿಗೆ ಹೋಲಿಸಿದ್ದಾರೆ. ಮಾನವ ಜನಾಂಗದ ಆ ಎರಡು ಕಪ್ಪುಚುಕ್ಕೆಗಳನ್ನು ಹೋಗಲಾಡಿಸಿದಂತೆಯೇ ಜಾತಿಪದ್ಧತಿಯನ್ನು ಸಹ ನಿರ್ಮೂಲನ ಗೊಳಿಸಬೇಕು ಎಂದು ಕರೆ ನೀಡಿದ್ದಾರೆ.  ಅದಕ್ಕಾಗಿ ಎಲ್ಲ ದೇಶಗಳ ಸಹಕಾರವನ್ನು ಅವರು ಬಯಸುತ್ತಾರೆ. ಒಂದು ಅಂದಾಜಿನ ಪ್ರಕಾರ ಸುಮಾರು 260 ಮಿಲಿಯನ್ ಜನರು ಪ್ರಪಂಚದಾದ್ಯಂತ ಜಾತಿ ಪದ್ಧತಿಯ ದೌರ್ಜನ್ಯಗಳಿಂದ ಬಳಲುತ್ತಿದ್ದಾರೆ.  ಭಾರತ ಪ್ರಮುಖವಾಗಿ ಕಾಣಿಸಿಕೊಂಡರೂ ನೇಪಾಳ, ಬಾಂಗ್ಲಾ ದೇಶ, ಪಾಕಿಸ್ತಾನ, ದಕ್ಷಿಣ ಆಫ್ರಿಕಾದ ಕೆಲವು ಪ್ರದೇಶಗಳಲ್ಲಿ ವಿಶೇಷವಾಗಿ ಭಾರತೀಯ ವಸಾಹತು ಸ್ಥಳಗಳಲ್ಲಿ ಜಾತಿಭೇದ ನೀತಿ ಇನ್ನೂ ಚಲಾವಣೆಯಲ್ಲಿದೆ ಎಂದು ನವಿ ಪಿಳ್ಳೆ ಬರೆಯುತ್ತಾರೆ.
ಹುಬ್ಬಳ್ಳಿಯ ಕೆಲವು ಗೆಳೆಯರು ‘ಮಾನವ ಹಕ್ಕು ಪ್ರತಿಪಾದನಾ ಸಂಸ್ಥೆ’ ಎಂಬ ಸಂಸ್ಥೆಯೊಂದನ್ನು ಹುಟ್ಟುಹಾಕಿದ್ದಾರೆ.  ಏಪ್ರಿಲ್ 2008 ರಲ್ಲಿ ನಡೆದ ಅದರ ಉದ್ಛಾಟನಾ ಸಮಾರಂಭದಲ್ಲಿ ನಾನು ಒಂದು ಮಾತು ಹೇಳಿದ್ದೆ.  ‘ಭಾರತದ ಸಂವಿಧಾನದಲ್ಲಿ ಅಸ್ಪೃಶ್ಯತೆಯ ಆಚರಣೆಯನ್ನು ಅಪರಾಧವೆಂದು ಪರಗಣಿಸಲಾಗಿದೆ.  ಆದರೆ ವಾಸ್ತವದಲ್ಲಿ ಹಳ್ಳಿ, ಪಟ್ಟಣವೆನ್ನದೆ ಅದಿನ್ನೂ ಜೀವಂತವಾಗಿದೆ.  ಅದರ ಮಾತೃಗರ್ಭವಾದ ಜಾತಿ ಪದ್ಧತಿ ಅಳಿಯದ ಹೊರತು ಅಸ್ಪೃಶ್ಯತೆ ನಾಶವಾಗುವುದಿಲ್ಲ. ಆದ್ದರಿಂದ ಜಾತಿ ಪದ್ದತಿಯ ಆಚರಣೆಯನ್ನು ಸಂವಿಧಾನದಲ್ಲಿ ಅಪರಾಧವೆಂದು ಪರಿಗಣಿಸಿ ತಿದ್ದುಪಡಿ ತರಬೇಕು. ಆಗ ಅದರ ಪಾಪದ ಪಿಂಡವಾದ ಅಸ್ಪೃಶ್ಯತೆ ನಿವಾರಣೆಗೆ ಪ್ರಯತ್ನಿಸಬಹುದು’ ಎಂದು. ಆ ಸಂದರ್ಭದಲ್ಲಿ ಉಪಸ್ಥಿತರಾಗಿದ್ದ ರಾಜ್ಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರಾದ ಶ್ರೀ ಎಸ್.ಆರ್.ನಾಯಕ್ ರವರು ಆ ಮಾತನ್ನು  ಅನುಮೋದಿಸಿದ್ದರು ಮತ್ತು ನಂತರ ಬೆಂಗಳೂರಿನಲ್ಲಿ ನಡೆದ ಇನ್ನೊಂದು ಸಭೆಯಲ್ಲಿ ಜಾತಿ ಪದ್ದತಿ ಆಚರಣೆಯನ್ನು ಸಂವಿಧಾನ ಮೂಲಕ ಅಳಿಸಿಹಾಕಬೇಕು ಎಂಬ ಕರೆಯನ್ನು ಸಹ ಕೊಟ್ಟಿದ್ದರು.  ಇದರ ನೆನಪು ಈ ಸಂದರ್ಭದಲ್ಲಿ ಪ್ರಸ್ತುತವೆಂದು ಉಲ್ಲೇಖಿಸುತ್ತಿದ್ದೇನೆ.
ಜಾತಿಯಾಧಾರಿತ ತಾರತಮ್ಯ – ಮಾನವ ಹಕ್ಕು ಉಲ್ಲಂಘನೆ:
ವಿಶ್ವಸಂಸ್ಥೆಯ ಮಾನವಹಕ್ಕುಗಳ ಪರಿಷತ್  ಜಿನೀವಾದಲ್ಲಿ ನಡೆದ ಸಭೆಯಲ್ಲಿ ಜಾತಿಯಾಧಾರಿತ ತಾರತಮ್ಯವನ್ನು  ಮಾನವ ಹಕ್ಕುಗಳ ಉಲ್ಲಂಘನೆಯೆಂದು ಪರಿಗಣಿಸಿ ಠರಾವು ಪಾಸುಮಾಡಿದೆ. ಅದಕ್ಕೆ ನೇಪಾಳ ಬೆಂಬಲ ನೀಡಿದೆ. ನೇಪಾಳ ದೇಶವು ನೀಡಿದ ಬೆಂಬಲವು ಮಹತ್ವದ್ದು ಎಂಬುದು ವಿಶೇಷ. ಯಾಕೆಂದರೆ ಇತ್ತೀಚಿನವರೆಗೂ ವಿಶ್ವದ ಏಕೈಕ ಹಿಂದೂ ರಾಷ್ಟ್ರ್ರವಾಗಿದ್ದ ನೇಪಾಳದಲ್ಲಿ ಭಾರತದಲ್ಲಿರುವಂತೆಯೆ ಹಿಂದೂಗಳು ಬಹುಸಂಖ್ಯಾತರು ಮತ್ತು ಅಲ್ಲಿಯೂ ಜಾತಿಪದ್ಧತಿ ಮತ್ತು ಅಸ್ಪೃಶ್ಯತೆಗಳು ಬೇರು ಬಿಟ್ಟು ಸಮಾಜವನ್ನು ಕುರೂಪಗೊಳಿಸಿವೆ.  ವಿಪರ್ಯಾಸವೆಂದರೆ ಭಾರತ ಈ ಠರಾವನ್ನು ವಿರೋಧಿಸುತ್ತಿದೆ.  ಜಾತಿಪದ್ಧತಿ ಎಂಬುದು ಹಿಂದೂ ಧರ್ಮದಲ್ಲಿ ಕುಟುಂಬ ವ್ಯವಸ್ಥೆಯಾಗಿದ್ದು ಅದು ದೇಶದ ಆಂತರಿಕ ವಿಚಾರವೆಂದೂ, ಅದರ ನೇತ್ಯಾತ್ಮಕ ಅಂಶಗಳಾದ ಅಸ್ಪೃಶ್ಯತೆ, ಇತ್ಯಾದಿಯನ್ನು ಸಂವಿಧಾನದ ಮೂಲಕ ಹೋಗಲಾಡಿಸಿಕೊಂಡಿದೆಯೆಂದು ವಾದಿಸುತ್ತಾ ಬಂದಿದೆ.
ಭಾರತ ಯಾಕೆ ಈ ನೀತಿ ಅನುಸರಿಸುತ್ತಿದೆ ಎಂಬುದು ಅರ್ಥವಾಗದ ವಿಷಯ. ಜಾತಿ ವೃತ್ತಿ ಸಂಬಂಧಿತವಲ್ಲ ಎಂಬುದು, ಆನುವಂಶಿಕವಲ್ಲ ಎಂಬುದು ಭ್ರಮಾತ್ಮಕವಾದುದು.  ಈ ನಿಲುವು ನೈತಿಕವಾದುದಲ್ಲ ಎಂದು ಮೇಲ್ನೋಟಕ್ಕೆ ತಿಳಿಯುತ್ತದೆ.  ಇಂಥ ಧೋರಣೆಯಿಂದ ಭಾರತ ಸಾಧಿಸ ಬೇಕಾಗಿರುವುದಾದರೂ ಏನನ್ನು.? ದೇಶದೊಳಗಿನ ಇಂಥ ಗಂಭೀರ ಸಮಸ್ಯೆಯೊಂದರ ಬಗ್ಗೆ ತನ್ನ ಅಂತರರಾಷ್ಟ್ರೀಯ ನಿಲುವು ಸತ್ಯಕ್ಕೆ ನಿಷ್ಠವಾಗಿರಬೇಕಾದ ಅನಿವಾರ್ಯತೆಯನ್ನು ಮರೆತು ಭಾರತ ವರ್ತಿಸುತ್ತಿದೆಯೆ? ಅದರ ಪರಿಣಾಮಗಳನ್ನು ಯೋಚಿಸಿದೆಯೆ?  ವಿಶ್ವಸಂಸ್ಥೆಯು ಜನಾಂಗೀಯ ಭೇದ ವಿನಾಶ ಸಮಿತಿಯೊಂದನ್ನು (Committee on Elimination of Racial Discrimination – CERD) ರಚಿಸಿದೆ.  ಅದು ಎಲ್ಲಾ ವಿಧದ ಜನಾಂಗೀಯ ಭೇದಗಳ ವಿನಾಶದ ಕುರಿತು 1968 ರಲ್ಲಿ  ಏರ್ಪಟ್ಟ ಅಂತರರಾಷ್ಟ್ರೀಯ ಒಡಂಬಡಿಕೆಗೆ ಅನುಗುಣವಾಗಿ ರಚನೆಯಾಗಿದೆ.  ಆ ಒಡಂಬಡಿಕೆಗೆ ಭಾರತವೂ ಸಹಿ ಮಾಡಿದೆ.  ಆ ಒಡಂಬಡಿಕೆಯ ಪ್ರಕಾರ  ವಿಶ್ವಸಂಸ್ಥೆಯು ಜನಾಂಗ, ವರ್ಣ, ಅನುವಂಶೀಯ ಅಥವಾ ಕುಲಸಂಬಂಧೀ ಭೇದಗಳ ವಿರುದ್ಧ ರಕ್ಷಣೆಯ ಭರವಸೆಯನ್ನು ತನ್ನ ಸದಸ್ಯ ರಾಷ್ಟ್ರೀಯ ಪ್ರಜೆಗಳಿಗೆ ನೀಡುತ್ತದೆ.  1996 ರಲ್ಲಿ  ಜನಾಂಗೀಯ ಭೇದ ವಿನಾಶ ಸಮಿತಿಯು ದಲಿತರ ವಿರುದ್ಧ ನಡೆಸಲಾಗುವ ಭೇದವನ್ನು ಸಹ ಅನುವಂಶೀಯ ಆಧಾರದ ಭೇದ ನಿಷೇಧದ ಅಡಿಯಲ್ಲಿ ಪರಿಗಣಿಸಬಹುದು ಎಂದು ತೀರ್ಮಾನಿಸಿದೆ. ಒಬ್ಬ ಸಹಿದಾರನಾಗಿ ಭಾರತ ಒಡಂಬಡಿಕೆಯಲ್ಲಿ ಭೇದ ನೀತಿಗೊಳಪಡುವವರ ರಕ್ಷಣೆಗಾಗಿ ತೆಗೆದುಕೊಂಡಿರುವ ಕ್ರಮಗಳನ್ನು ಕಾಲಕಾಲಕ್ಕೆ ವರದಿಗಳ ಮೂಲಕ ನೀಡಬೇಕಾಗಿರುತ್ತದೆ.  ಅದನ್ನು ಸಮಿತಿಯು ಪರಿಶೀಲನಾ ಸಭೆಗಳಲ್ಲಿ ಪರಾಂಬರಿಸಿ ರಚನಾತ್ಮಕ ವಾಗ್ವಾದಗಳನ್ನು ನಡೆಸುತ್ತದೆ ಮತ್ತು ಸುಧಾರಣಾ ಸಲಹೆಗಳನ್ನು ನೀಡುತ್ತದೆ.
ಇಂತಹ ಒಂದು ಠರಾವನ್ನು 1996 ರಿಂದಲೂ ಭಾರತ ವಿರೋಧಿಸುತ್ತಾ ಬಂದಿದೆ.  ಭಾರತವು ಹತ್ತು ವರ್ಷಗಳ ನಂತರ ಫೆಬ್ರವರಿ 2007 ರಲ್ಲಿ ಈ ಠರಾವಿಗೆ ಉತ್ತರ ನೀಡಿದೆ.  ವಿಚಿತ್ರವೆಂದರೆ, ಅದರಲ್ಲಿ ದಲಿತರ ವಿರುದ್ಧ ನಡೆಯುತ್ತಿರುವ ದೌರ್ಜನ್ಯಗಳ ಬಗ್ಗೆ ಒಂದು ಚಕಾರವೂ ಇಲ್ಲ. ಪ್ರತಿ ಘಂಟೆಗೆ ಇಬ್ಬರು ದಲಿತರನ್ನು ಥಳಿಸಲಾಗುತ್ತದೆ. ಮೂವರು ದಲಿತ ಮಹಿಳೆಯರು ಅತ್ಯಾಚಾರಕ್ಕೆ ಒಳಪಡುತ್ತಾರೆ.  ಇಬ್ಬರು ದಲಿತರು ಕೊಲ್ಲಲ್ಪಡುತ್ತಾರೆ  ಎರಡು ದಲಿತರ ಮನೆಗಳನ್ನು ಸುಡಲಾಗುತ್ತದೆ, ಎಂಬ ಅಂಕಿಅಂಶಗಳು ಅಧಿಕೃತವಾಗಿ ಲಭ್ಯವಿವೆ.  ಸಫಾಯಿ ಕರ್ಮಚಾರಿ ಆಂದೋಲನವು ಮೇ 2009 ರಲ್ಲಿ ದೆಹಲಿಯೊಂದರಲ್ಲೇ 1085 ಬರಿಗೈ ಜಾಡಮಾಲಿಗಳು ಇರುವರೆಂಬ ವಸ್ತುಸ್ಥಿತಿಯನ್ನು  ಮಾಹಿತಿ ಹಕ್ಕುಗಳ ಕಾಯಿದೆ ಅಡಿಯಲ್ಲಿ ಪಡೆದು ಸರ್ವೊಚ್ಚ ನ್ಯಾಯಾಲಯಕ್ಕೆ ಸಲ್ಲಿಸಿತು.  ಸರ್ಕಾರದ ಕಡತಗಳಲ್ಲೆ ಕಂಡು ಬರುವ ಇಂಥ ಬರ್ಬರ ಸತ್ಯಗಳನ್ನು  ಅಂತರರಾಷ್ಟ್ರೀಯ ವೇದಿಕೆಗಳಲ್ಲಿ ಹೇಗೆ ಅಲ್ಲಗಳೆಯಲಾಗಿದೆ ಎಂಬುದು ಸೋಜಿಗವೂ, ವಿಷಾದನೀಯವೂ ಆಗಿದೆ.
ಕೇವಲ ವಿಶ್ವಸಂಸ್ಥೆಯಷ್ಟೆ ಅಲ್ಲ, ಭಾರತದ ಜಾತಿಯಾಧಾರಿತ ಭೇದವನ್ನು ಖಂಡಿಸಿ ಯೂರೋಪು ಒಕ್ಕೂಟವೂ ಠರಾವು ಪಾಸು ಮಾಡಿದೆ.  ಯೂರೋಪು ಸಂಸದೀಯ ಮಾನವ ಹಕ್ಕು 2000, 2002, 2003 ಮತ್ತು 2005ರ ವರದಿಗಳಲ್ಲಿ ಜಾತಿಭೇದದ ಕುರಿತು, ದಲಿತರ ಸ್ಥಿತಿಗತಿ ಕುರಿತು ಉಲ್ಲೇಖಗಳಿವೆ.  ಈ ವರದಿಗಳು ವ್ಯಾಪಕವಾಗಿ ವಿತರಿಸಲ್ಪಡುತ್ತವೆ.  ವಿಶ್ವಸಂಸ್ಥೆಯ ಅಂಗ ಸಂಸ್ಥೆಗಳಷ್ಟೆ ಅಲ್ಲದೆ ಯೂರೋಪು ಸದಸ್ಯ ರಾಷ್ಟ್ರಗಳು, ಐಎಲ್ಓ, ಯುನಿಸೆಫ್,  ಮುಂತಾದ ಸಂಸ್ಥೆಗಳನ್ನು ವರದಿ ತಲುಪುತ್ತದೆ.  ಆದರೂ ದೇಶದಾದ್ಯಂತ ಎಗ್ಗಿಲ್ಲದೆ ನಡೆಯುತ್ತಿರುವ ದಲಿತರ ದಮನವನ್ನು  ಮರೆಮಾಚಲು ಭಾರತ ಪ್ರಯತ್ನಿಸುತ್ತಲೇ ಇದೆ.
ಭಾರತದ ಅಲಿಖಿತ ಸಂವಿಧಾನ – ಜಾತಿ ಪದ್ಧತಿ :
ಉತ್ತರ ಭಾರತದ ಹಳ್ಳಿಗಳಲ್ಲಿ ಕೆಲವು ಅಂತರ್ಜಾತೀಯ  ವಿವಾಹಗಳು ಇಂದಿಗೂ ಕೊಲೆಯಲ್ಲಿ ಪರ್ಯವಸಾನವಾಗುತ್ತವೆ. ಅಸಮಾನತೆಯೆ ತತ್ವವಾಗಿರುವ ಜಾತಿ ಪದ್ಧತಿ ಮತ್ತು ಸಮಾನತೆ ಹಾಗೂ ಭ್ರಾತೃತ್ವವನ್ನು ಬೋಧಿಸುವ  ಪ್ರಜಾಪ್ರಭುತ್ವ ಪರಸ್ಪರ ಎಣ್ಣೆ ಸೀಗೆಕಾಯಿ ಸಂಬಂಧ ಹೊಂದಿದ ವಿರೋಧೀ ಭಾವಗಳು. ಆದ್ದರಿಂದ ಭಾರತದ ಆತ್ಮ ಅಲಿಖಿತ ಸಂವಿಧಾನವಾಗಿರುವ ಜಾತಿಪದ್ದತಿಯೆಂದರೆ ತಪ್ಪಾಗಲಾರದು. ದುರದೃಷ್ಟವಶಾತ್ ಭಾರತದ ಒಳಗಡೆ ಚರ್ಚೆಗೊಳಗಾಗುವ ವಿಷಯ ಜಾತಿಪದ್ಧತಿ ಒಡಲುಗೊಂಡಿರುವ ಅಸ್ಪೃಶ್ಯತೆಯನ್ನು ಕುರಿತು ಮಾತ್ರ. ಇದು ಮಾನವತೆಗೆ ಅಂಟಿಕೊಂಡ ದೊಡ್ಡ ಕಳಂಕ ಎಂದು ವರ್ಣಿಸಿ ಎಲ್ಲ ಜಾತಿಯವರು ಖಂಡಿಸಲು ಇಚ್ಛಿಸುತ್ತಾರೆ. ಆದರೆ ಹುಟ್ಟುತ್ತಲೇ ಮೇಲು ಕೀಳನ್ನು ನಿರ್ಧರಿಸಿ ಬಿಡುವ ಜಾತಿಯೆ ಮಾನವತೆಗೆ ದೊಡ್ಡ ಕಳಂಕ ಎಂದು ಖಂಡಿಸಲು ಹಿಂಜರಿಯುತ್ತಾರೆ. ಇದಕ್ಕೆ ಕಾರಣ ವರ್ಣಾಶ್ರಮಕ್ಕೆ ಸಿಕ್ಕ ಗಾಂಧೀಜಿಯವರ ಬೆಂಬಲ ಜಾತಿಪದ್ಧತಿಗೂ ಪರೋಕ್ಷವಾಗಿ ಸಿಕ್ಕಿತೆಂಬ ನಂಬಿಕೆ. ಜಾತಿ ಪದ್ಧತಿಯ ಎಲ್ಲಾ ಅವಘಡಗಳನ್ನು ಭಾರತ ದಿನನಿತ್ಯ ಅನುಭವಿಸುತ್ತಲೇ ಸಾಮಾಜಿಕವಾಗಿ, ರಾಜಕೀಯವಾಗಿ ಕುಬ್ಜವಾಗಿದೆ. ದೇಶ ಆರ್ಥಿಕವಾಗಿ ಬಲಿಷ್ಠವಾಗಿದೆ ಎಂದು ಯಾವ ಸಮಾಜವಾದಿಯೂ ಹೇಳಲಾರ. ಅಂಬೇಡ್ಕರರನ್ನು ಹೊರತುಪಡಿಸಿ ಜಾತಿ ಪದ್ಧತಿಯ ಅನಿಷ್ಟಗಳನ್ನು ತಳ ಸ್ಪರ್ಶಿಯಾಗಿ ಅಭ್ಯಸಿಸಿದವರು ರಾಮಮನೋಹರ ಲೋಹಿಯಾ. ಜಾತಿ ಪದ್ಧತಿಯಿಂದ ಆಡಳಿತ ರಂಗ ಕಲುಷಿತಗೊಳ್ಳುತ್ತಿದೆ ಎಂಬ ಒಳ ನೋಟವಿದ್ದ ಲೋಹಿಯಾ ‘ಶೂದ್ರ ದ್ವಿಜರ ನಡುವೆ ಮದುವೆಯಾಗುವುದು ಆಡಳಿತ ರಂಗ, ಸಶಸ್ತ್ರ ಪಡೆಗಳ ನೇಮಕಾತಿಗೆ ಉಳಿದವುಗಳೊಂದಿಗೆ ಒಂದು ಅರ್ಹತೆಯೆಂದೂ, ಜೊತೆಗೂಡಿ ಊಟ ಮಾಡಲು ನಿರಾಕರಿಸುವುದನ್ನು ಒಂದು ಅನರ್ಹತೆಯೆಂದೂ ಕಟ್ಟಳೆಯಾದ ದಿನವೇ ಜಾತಿ ವಿರುದ್ಧ ಪ್ರಾಮಾಣಿಕ ಹೋರಾಟ ಪ್ರಾರಂಭವಾಗುತ್ತದೆ. ಆ ದಿನ ಇನ್ನೂ ಬರಬೇಕಿದೆ’ ಎನ್ನುತ್ತಾರೆ.
ಜಾತಿ ಶ್ರಮವನ್ನು ಮಾತ್ರ ವಿಭಜಿಸುವುದಿಲ್ಲ ಶ್ರಮಿಕರನ್ನೂ ವಿಭಜಿಸುತ್ತದೆ ಎಂದು ಡಾ.ಅಂಬೇಡ್ಕರ್ ಹೇಳುತ್ತಾರೆ. ಇದು ಅಕ್ಷರಷಹಃ ಸತ್ಯ. ವಿಭಜಿತ ಜಾತಿಗಳು ತಮ್ಮದೇ ಗೋಡೆಗಳನ್ನು ನಿರ್ಮಿಸಿಕೊಂಡು ಕೂಪ ಮಂಡೂಕಗಳಾಗಿವೆ. ಹಳ್ಳಿಗಳಲ್ಲಿ ಇನ್ನೂ ಒಂದು ಜಾತಿಯ ಜೀವನ ಪದ್ಧತಿ ಇನ್ನೊಂದು ಜಾತಿಗೆ ಅಪರಿಚಿತವಾಗಿದೆ. ಸಮಾಜ ನಿರ್ಮಾಣ ಸಮರೂಪವಾಗಿರಲು ಇದು ಅಡಚಣೆಯಾಗುತ್ತದೆ. ಕೊಡು ಕೊಳ್ಳುವಿಕೆ ಇಲ್ಲದೆ ಸಂಸ್ಕೃತಿ ಬೆಳೆಯಲಾರದು. ಕುರುಬ ಜಾತಿಯ ಮಿತ್ರರೊಬ್ಬರು ‘ನಾವು ಸ್ಪೃಶ್ಯ ದಲಿತರು’ ಎಂದು ಹೇಳುತ್ತಿದ್ದುದು ನೆನಪಿಗೆ ಬರುತ್ತದೆ. ಊರಿನ ಜಾತ್ರೆಯಲ್ಲಿ ಪಲ್ಲಕ್ಕಿ ಹೊರಲು ಇವರು ಬೇಕಾಗಿದ್ದರಂತೆ. ಡೊಳ್ಳು ಬಾರಿಸಲು, ವಾದ್ಯ ಊದಲು, ಪಂಜು ಹಿಡಿಯಲು, ಹಲಗೆ ಬಡಿಯಲು ಒಂದೊಂದು ಜಾತಿಗಳಿವೆ.   ದೇಗುಲ, ಮಠ ಯಾವುದೇ ಆದರೂ ಕೈ ಸೇವೆಗಳ ಅಗತ್ಯವಿರುವುದರಿಂದ ಸ್ಪೃಶ್ಯ ಕೆಳ ಜಾತಿಗಳ ಅವಶ್ಯಕತೆಯಿದೆ. ಶೋಷಣೆಯೇ ಜಾತಿ ಪದ್ಧತಿಯ ಜೀವಾಳ. ಸಾಮಾಜಿಕ ಅಸಮಾನತೆಯಿಂದ ಅವಮಾನವನ್ನೂ ಆರ್ಥಿಕ ಅಸಮಾನತೆಯಿಂದ ಹಸಿವನ್ನೂ ಕೆಳಜಾತಿಗಳು ಅನುಭವಿಸುತ್ತಿವೆ.
ಪ್ರತಿಯೊಂದು ಜಾತಿಗೂ ಒಂದು ಅಘೋಷಿತ ಸಾರ್ವಜನಿಕ ನಡವಳಿಕೆಯಿದೆ. ಅದು ಅನೀತಿಯದಾಗಿದೆ. ಜಾತಿಯೆ ಅನೀತಿಯ ಕಟ್ಟಳೆಯಾಗಿರುವಾಗ ಅದರ ಪರಿಣಾಮಗಳು ಅನೀತಿಯುತವಾಗಿರುವುದರಲ್ಲಿ ಆಶ್ಚರ್ಯವಿಲ್ಲ. ರಾಷ್ಟ್ರಾಧ್ಯಕ್ಷರೊಬ್ಬರು ಕಾಶಿಯಲ್ಲಿ ಸಾರ್ವಜನಿಕವಾಗಿ 200 ಜನ ಬ್ರಾಹ್ಮಣರ ಪಾದಗಳನ್ನು ತೊಳೆದರು. ಅದನ್ನು ಲೋಹಿಯಾ ಚಿತ್ತಭ್ರಮೆ, ಅಸಭ್ಯತನ ಎಂದು ಬಹುವಾಗಿ ಖಂಡಿಸಿದರು, ಆದರೆ ನೆಹರೂ ಅದನ್ನು ಸಮರ್ಥಿಸಿಕೊಂಡರು, ಇನ್ನೊಬ್ಬ ರಾಷ್ಟ್ರಪತಿಗಳು ತಿರುಪತಿಯಲ್ಲಿ ತಲೆಬೋಳಿಸಿಕೊಂಡರು. ಈಗ ಮಂತ್ರಿಗಳು ತಮ್ಮ ಚೇಂಬರಿನೊಳಗೆ ಹೋಮ, ಹವನ ಮಾಡಿಸುತ್ತಾರೆ. ಕೆಳಜಾತಿಗಳು ಮಾರಮ್ಮನಿಗೆ ಕೊಡುವ ಕೋಣನ ಬಲಿಗೆ ಅವರದೇ ಆದ ಸಮರ್ಥನೆಗಳಿರುತ್ತವೆ. ಇವೆಲ್ಲವೂ ಸಂವಿಧಾನದ ಜಾತ್ಯತೀತ ನಿಲುವಿಗೆ ಒಗ್ಗುವುದಿಲ್ಲವಾದರೂ ಧರ್ಮದ ಕವಚ ತೊಟ್ಟುಕೊಳ್ಳುವುದರಿಂದ ಅಧಿಕಾರಸ್ಥರು ಖಂಡಿಸಲಾರರು. ಇಂದಿಗೂ ಸಹ ಆಡಳಿತದ ಎಲ್ಲ ರಂಗಗಳಲ್ಲಿಯೂ ಇಂಥ ಅಪಸರಣಗಳನ್ನು (aberrations) ನೋಡಬಹುದು. ಒಂದು ಕಛೇರಿಯಲ್ಲಿ ಶುಕ್ರವಾರದ ಪೂಜೆಯನ್ನು ಮಾಡುವ  ನೌಕರ ಬ್ರಾಹ್ಮಣನೇ ಯಾಕಾಗಬೇಕು? ಇಂಥ ಅಲಿಖಿತ ಕಟ್ಟಳೆಗಳನ್ನು ವಿಸ್ತರಿಸಿಕೊಂಡು ಹೋಗಲು ಲೇಖನದ ಮಿತಿಯೊಳಗೆ ಸಾಧ್ಯವಾಗಲಾರದು. ನನ್ನ ಜಾತಿಯವರು ಹೆಚ್ಚು ಸಮಾನರು ಎಂಬುದೇ ಜಾತಿಪದ್ಧತಿಯ ಧೋರಣೆ. ಇಲ್ಲದಿದ್ದರೆ ಒಬ್ಬ ಕುಲಪತಿ ತನ್ನ ಆಧಿಕಾರಾವಧಿಯಲ್ಲಿ ತನ್ನ ಜಾತಿಯ ಸಿಬ್ಬಂದಿಯನ್ನೆ ಹೆಚ್ಚು ನೇಮಕ ಮಾಡುವುದು, ಒಬ್ಬ ಪ್ರಾಧ್ಯಾಪಕ ತನ್ನ ಜಾತಿಯ ವಿದ್ಯಾರ್ಥಿಗಳಿಗೆ ಹೆಚ್ಚು ಅಂಕಗಳನ್ನು ನೀಡುವುದು ಸಾಧ್ಯವಾಗುವುದಿಲ್ಲ. ಜಾತಿ, ಭ್ರಷ್ಟಾಚಾರಕ್ಕಿಂತಲೂ ಹೆಚ್ಚು ಅಪಾಯಕಾರಿ ಎಂಬುದನ್ನು ಈ ದೇಶ ಅರಿತುಕೊಳ್ಳಬೇಕಾಗಿದೆ. ಒಬ್ಬ ಕಡು ಭ್ರಷ್ಟನೂ ಸಹ ಕಡತ ತನ್ನ ಜಾತಿಯವನಿಗೆ ಸಂಬಂಧಿಸಿದ್ದರೆ ಅದನ್ನು ಸ್ವಲ್ಪ ಅನುಕಂಪದಿಂದಲೇ ನೋಡುತ್ತಾನೆ. ಪಕ್ಷಪಾತ ನೀತಿಗೆ ಬಲಿಷ್ಠ, ದುರ್ಬಲ ಜಾತಿ ಎಂಬುವುದಿಲ್ಲ. ಕುರ್ಚಿ ದಕ್ಕಿದಾಗ ಬಲಿಷ್ಠ ದುರ್ಬಲನ ವಿರುದ್ಧವೂ, ದುರ್ಬಲ ಬಲಿಷ್ಠನ ವಿರದ್ಧವೂ ಸೇಡು ತೀರಿಸಿಕೊಳ್ಳುತ್ತಿರುತ್ತಾನೆ.
ರಾಜಕೀಯ ವ್ಯವಸ್ಥೆಯಲ್ಲಿ ‘ನನ್ನ ಜಾತಿಯವನು ಗೆಲ್ಲಲಿ’ ಎಂಬ ವಾಂಛೆ ಬಲಿಷ್ಠ ಜಾತಿಗಳ ಒಗ್ಗೂಡುವಿಕೆಗೆ ಕಾರಣವಾಗಿದೆ. ಅದೊಂದು ಸಾಂಕೇತಿಕ ಒಗ್ಗೂಡುವಿಕೆ ಅಷ್ಟೆ. ಆ ಕಾರಣದಿಂದಾಗಿ ಆ ಜಾತಿಯ ಎಲ್ಲರೂ ಫಲಾನುಭವಿಗಳಾಗಲು ಸಾಧ್ಯವಿಲ್ಲ ಅಥವಾ ಕನಿಷ್ಠ ಪ್ರತಿಫಲ ಪಡೆಯಲು (ರುಸುವತ್ತು ಹೊರತು) ಎಲ್ಲರಿಗೂ ಸಾಧ್ಯವಾಗುವುದಿಲ್ಲ. ಆದರೂ ಪ್ರತಿಭೆ (ಮೆರಿಟ್) ಯನ್ನು ಮೆಟ್ಟಿ ಜಾತಿ ಸಮೂಹ  ತನ್ನ ನಾಯಕನನ್ನು ಆರಿಸುತ್ತದೆ. ಶತಮಾನಗಳಿಂದ ಅವಕಾಶ ವಂಚಿತ ಜಾತಿಗಳಿಗೆ ಕಾನೂನಿನ ಮೂಲಕ ನೀಡಿರುವ ಮೀಸಲಾತಿಯನ್ನು ಮೆರಿಟ್‍ನ ನೆಪವೊಡ್ಡುತ್ತಾ ವಿರೋಧಿಸುವ ದೇಶದ ಪ್ರತಿಷ್ಠಿತ ವಿಶ್ವವಿದ್ಯಾಲಯಗಳ ಪಂಡಿತರು ಜಾತಿಪದ್ಧತಿಯಿಂದ ನಿರಂತರವಾಗಿ ಹತವಾಗುತ್ತಿರುವ ಪ್ರತಿಭೆಯ ಬಗ್ಗೆ ಮಾತಾಡುವುದಿಲ್ಲ, ಜಾಣ  ಮೌನವಹಿಸುತ್ತಾರೆ.  ಪ್ರಾಯಶಃ ಇಂದು ಎಲ್ಲ ಪಕ್ಷಗಳು ವಂಶಾಡಳಿತಕ್ಕೆ ಜೋತು ಬಿದ್ದಿರುವುದು ಜಾತಿಪದ್ಧತಿಯಲ್ಲಿ ಪೂರ್ವಗ್ರಹವಿಲ್ಲದ(ದೆ) ಒಬ್ಬ ನಿಜ ನಾಯಕನನ್ನು ಆರಿಸಲು ಸಾಧ್ಯವಾಗದಿರುವ ಕಾರಣದಿಂದ ಎಂದು ಕಾಣುತ್ತದೆ.
ಇಂಥ ವ್ಯವಸ್ಥೆಯಲ್ಲಿ ಬಹು ಸಂಖ್ಯಾತರಾಗಿರುವ ಅಸಂಘಟಿತ ಸಣ್ಣ ಜಾತಿಗಳಿಗೆ ಆಗುತ್ತಿರುವ ಅನ್ಯಾಯ ಹೇಳತೀರದು. ಜಾತಿ ಲೆಕ್ಕಾಚಾರದಂತೆಯೆ ರಾಜಕೀಯ ನೇತೃತ್ವ ಪಡೆಯುತ್ತಿರುವ ಈ ದೇಶದಲ್ಲಿ ಅವರು ಹೆಚ್ಚೆಂದರೆ ಕೆಳಮಧ್ಯಮ ವರ್ಗದಲ್ಲಿ ತೃಪ್ತಿಪಟ್ಟುಕೊಳ್ಳಬೇಕಾಗಿದೆ. ಸ್ವಾತಂತ್ರ್ಯಾನಂತರದ 62 ವರ್ಷಗಳಲ್ಲಿ ದಲಿತ, ಹಿಂದುಳಿದ ಜಾತಿಗಳು ಬಂಡವಾಳ ಶಾಹಿಗಳ ಪಟ್ಟಿಯಲ್ಲಿ ಹೆಸರು ದಾಖಲಿಸಲು ಸಾಧ್ಯವಾಗದಿರುವುದಕ್ಕೆ ಕಾರಣ ಜಾತಿ ಪದ್ಧತಿಯೆಂಬ  ದುರಂತ ವ್ಯವಸ್ಥೆ. ಈ ಭಸ್ಮಾಸುರ ಸ್ವರೂಪೀ ಜಾತಿಯ ಸೃಷ್ಟಿಗೆ ಕಾರಣವಾದ ‘ವೈದಿಕತೆ’ ಇಂದು ಎಷ್ಟು ಅಸಹಾಯಕವಾಗಿದೆ ಎಂದರೆ ತನ್ನನ್ನು ಓಲೈಸಿ ಬಂದ ಕಾರಣಗಳಿಗೆ ಬೇಡಿದ ವರವನ್ನು ದಯಪಾಲಿಸಿ ತಾನೇ ಪೇಚಿಗೆ ಸಿಕ್ಕಿ ಪರದಾಡುವ ಪರಶಿವನಂತಾಗಿದೆ.
ಕೇವಲ ಆಂತರಿಕ ಸಮಸ್ಯೆಗಳೆ? :
ಭಾರತ ಸರ್ಕಾರವು ಜಾತಿಪದ್ಧತಿ ಮತ್ತು ಅಸ್ಪೃಶ್ಯತೆಗಳನ್ನು  ಕೇವಲ ಆಂತರಿಕ ಸಮಸ್ಯಗಳೆಂದು ತಿಳಿದರೆ ಸಾಲದು.  ಈ ಸಮಸ್ಯೆಗಳು ಜನರ ಮನದಾಳದಲ್ಲಿ ಸ್ಥಾಪಿತವಾಗಿರುವುದು ಶತಶತಮಾನಗಳಿಂದ ಸ್ವಾರ್ಥ ಹಿತಾಸಕ್ತಿಗಳು ಭಿತ್ತಿದ ಮೌಢ್ಯದಿಂದ  ಮತ್ತು ಅದು ಗಟ್ಟಿಗೊಳ್ಳುತ್ತಿರುವುದು ಧಾರ್ಮಿಕ ಒತ್ತಾಸೆಯಿಂದ.  ಇದು ದೇಶಕ್ಕೂ ಮತ್ತು ಧರ್ಮಕ್ಕೂ ಒಂದು ಕಳಂಕವಾಗಿರುವುದು ಸತ್ಯ. ಆದ್ದರಿಂದ ಅದನ್ನು ತೊಳೆದುಕೊಳ್ಳುವುದಕ್ಕೆ ದೇಶವು ಮತ್ತು ಧರ್ಮವು ಕಟು ಬದ್ಧವಾಗಬೇಕು.  ಅದಕ್ಕಾಗಿ ವಿಶ್ವಸಂಸ್ಥೆಯಂಥ ಹೊರಗಿನ ಸ್ವಾಯತ್ತ ಸಂಸ್ಥೆಗಳ ಸಹಾಯ ಪಡೆಯುವುದಕ್ಕೆ ಹಿಂಜರಿಯಬಾರದು.  ರೋಗಿಯೊಬ್ಬನು ವೈದ್ಯನ ಮುಂದೆ ತನ್ನ ರೋಗನ್ನು ಹೇಳಿಕೊಳ್ಳಲೇಬೇಕು. ಆಗಲೇ ಚಿಕಿತ್ಸೆ ಸಾಧ್ಯ ಹಾಗೂ ಸುಲಭ.  ಸಂಕೋಚಪಟ್ಟುಕೊಂಡರೆ ರೋಗವು ಉಲ್ಬಣಿಸುತ್ತದೆ, ರೋಗಿಯನ್ನೆ ತಿನ್ನುತ್ತದೆ.  ವಿಶ್ವಸಂಸ್ಥೆ ಇರುವುದೇ ಜಾಗತಿಕ ನೆಲೆಯಲ್ಲಿ ಸಮಸ್ಯೆಗಳನ್ನು  ಎತ್ತಿಕೊಂಡು ನೊಂದ ದೇಶಗಳಿಗೆ ಸಹಾಯ ಹಸ್ತ ಚಾಚುವುದು.  ಮಾನವನ ಮೂಲಭೂತ ಹಕ್ಕುಗಳ ವಿಷಯದಲ್ಲಿ ಭಾರತದಲ್ಲಾಗುತ್ತಿರುವ ಕುಲಸಂಬಂಧೀ (ethnic) ಒಳ ಹಿಂಸೆಗಳು ಅಪಾರ ಮತ್ತು ಅನನ್ಯ. ವಂಶ ಪಾರಂಪರ್ಯವಾಗಿ ಕೆಲವು ಕೆಳಜಾತಿಗಳು  ಮಾಡುತ್ತಿರುವ ಕೆಲಸಗಳು ಖಂಡನೀಯವು ಮತ್ತು ಅಮಾನವೀಯವೂ ಆಗಿವೆ.
ದೇಶದಾದ್ಯಂತ ಇಂದಿಗೂ ಬರಿಗೈಯಲ್ಲಿ ಕಕ್ಕಸು ತೊಳೆಯುವ, ತಲೆಯ ಮೇಲೆ ಮಲ ಹೊರುವವರ ಸಂಖ್ಯೆ 3.40 ಲಕ್ಷಕ್ಕೂ ಅಧಿಕವಾಗಿದೆ ಎಂದು ಹೇಳಲಾಗಿದೆ.  ದೇಶದ ರಾಜಧಾನಿಯೂ ಸೇರಿದಂತೆ ಮುಂದುವರೆದ ಅನೇಕ ರಾಜ್ಯಗಳಲ್ಲಿ ಈ ಪದ್ಧತಿ ಇನ್ನೂ ಜಾರಿಯಲ್ಲಿದೆ. ಸತ್ತ ದನವನ್ನು  ಸುಲಿಯುವುದಕ್ಕೆ, ಚರ್ಮ  ಹದ ಮಾಡುವುದಕ್ಕೆ, ಚಪ್ಪಲಿ ಹೊಲಿಯುವುದಕ್ಕೆ ಒಂದೊಂದು ಜಾತಿಗಳಿರುವುದು ಅವು ಇನ್ನೂ ಅನೂಚಾನವಾಗಿ ಮುಂದುವರೆದಿರುವುದು ಗುಟ್ಟಿನ ವಿಷಯಗಳಲ್ಲ.  ಇಂಡಿಯಾದ ಸಂಸತ್ತು ಮತ್ತು ವಿಧಾನ ಸಭೆಗಳು ಕಣ್ಣುಮುಚ್ಚಿ ಬಿಡುವುದರೊಳಗೆ ಮಾನವ ಹಕ್ಕುಗಳನ್ನು ಕುರಿತ ಮಸೂದೆಗಳನ್ನು ಮಂಡಿಸಿ ಪಾಸುಮಾಡಿ ಕಾನೂನು ಹೊರಡಿಸುತ್ತವೆ.  ಆದರೆ ಅವು ಜಾರಿಯಾಗುವ ಸಾಧ್ಯತೆಗಳು ಕಡಿಮೆ.  ಮಾಹಿತಿ ತಂತ್ರಜ್ಞಾನದ ಮೂಲಕ ಅತಿ ಶೀಘ್ರವಾಗಿ ಅಂಗೈ ಪರದೆಯಲ್ಲಿ ಮೂಡುವ ಸತ್ಯ ದರ್ಶನಗಳನ್ನು ಅಲ್ಲಗಳೆಯಲು ಇನ್ನೂ ಸಾಧ್ಯವಿಲ್ಲ.  ಆದ್ದರಿಂದ ಸಂಕೋಚಗಳನ್ನು, ಮುಜುಗರಗಳನ್ನು ಬದಿಗಿಟ್ಟು ಜಾತಿ ಪದ್ಧತಿ ಮತ್ತು ಅಸ್ಪೃಶ್ಯತೆಗಳಿಂದ ನಲುಗುತ್ತಿರುವ ಭಾರತ ಠರಾವನ್ನು ಬೆಂಲಿಸುವ ಜಾಣ್ಮೆ ತೋರಬೇಕು. ನೇಪಾಳದಂತಹ ನೆರೆರಾಜ್ಯ ಸಮಿತಿಯ ಠರಾವನ್ನು ಬೆಂಬಲಿಸಿರುವುದು ಭಾರತಕ್ಕೆ ನುಂಗಲಾರದ ತುತ್ತಾಗಿದೆ. ಬೆಂಬಲ ನೀಡದಿರುವುದಕ್ಕೆ ಕಾರಣ ರಹಿತವಾಗಿರುವ ಭಾರತ ವಿಶ್ವದ ಇತರ ರಾಷ್ಟ್ರಗಳ ಎದುರು ತಲೆ ತಗ್ಗಿಸುವಂತಾಗುತ್ತದೆ.  ಆದ್ದರಿಂದ ಈಗ ಒತ್ತಡ ಹೆಚ್ಚಾಗಿದೆ.  ಜಾತಿ ಪದ್ಧದತಿಯ ಮೂಲ ಹಿಂದೂ ಧರ್ಮವೇ ಎಂಬುದು ಕಹಿಯಾದರೂ ಸತ್ಯ.  ಒಂದು ಜಾತಿ ಇನ್ನೊಂದು ಜಾತಿಯ ಮೇಲೆ ಅಥವಾ ಕೆಳಗೆ ಇರುವುದರಿಂದ ಭೇದ ನೀತಿಯನ್ನು ಅಲ್ಲಗಳೆಯಲು ಸಾಧ್ಯವಾಗುವುದಿಲ್ಲ. ವಿಶ್ವಸಂಸ್ಥೆಯು  ಜನಾಂಗೀಯ ಭೇದ ವಿನಾಶ ಸಮಿತಿಯನ್ನು ರಚಿಸಿರುವ ಉದ್ದೇಶವೇ ತಾರತಮ್ಯ ನೀತಿಯನ್ನು ಗುರುತಿಸಿ ನಿರ್ಮೂಲನ ಮಾಡುವ  ಕಾರಣವಾಗಿರುವುದರಿಂದ ಇದನ್ನು ಕೈಬಿಡಲು ಅಥವಾ ಮರೆಮಾಚಲು ಸಹ ಸಮಿತಿಗೆ ಸಾಧ್ಯವಾಗುವುದಿಲ್ಲ.
ಸಮಾನತೆ ಇಲ್ಲದೆಡೆಯಲ್ಲಿ ಸಮಾನ ಅವಕಾಶಗಳು ಇರಲಾರವು.  ಹುಟ್ಟಿನ ಮೂಲದ ಆಧಾರದ ಮೇಲೆ ಸಮಾನ ಅವಕಾಶಗಳಿಂದ ವಂಚಿತರಾದವರು ಮಾನವ ಹಕ್ಕುಗಳ ವಂಚಿತರು ಅಷ್ಟೇ ಅಲ್ಲ, ದೌರ್ಜನ್ಯಕ್ಕೆ ಒಳಗಾದವರೂ ಆಗಿರುತ್ತಾರೆ.  ಆದ್ದರಿಂದ ವಿಶ್ವಸಂಸ್ಥೆಯ ನಿಲುವನ್ನು ಒಪ್ಪಲೇ ಬೇಕಾಗುತ್ತದೆ.  ಜಾತಿಭೇದ ನೀತಿಯನ್ನು ಖಂಡಿಸಲೇಬೇಕಾಗುತ್ತದೆ.  ಇದನ್ನು ಭಾರತ ಅರಿಯಬೇಕಾಗಿದೆ. 2001 ರಲ್ಲಿ ದರ್ಬಾನ್‍ನಲ್ಲಿ ನಡೆದ ಜನಾಂಗೀಯ ಮತ್ತು ಇತರ ಭೇದ ನೀತಿ ಕುರಿತ ವಿಶ್ವ ಸಮ್ಮೇಳನದಲ್ಲಿ  ಶ್ರುತಪಡಿಸಿದ  ಡರ್ಬಾನ್  ಪ್ರಕಟಣೆಯ ಕಾರ್ಯಸೂಚಿಯಲ್ಲಿದು ಸ್ಪಷ್ಟವಾಗಿದೆ. 2001 ರ ಡರ್ಬಾನ್  ಸಮ್ಮೇಳನದಲ್ಲಿ ಜಾತಿ ತಾರತಮ್ಯವನ್ನು ಚರ್ಚೆಗೆ ತರಲು ಸಾಧ್ಯವಾಗಲಿಲ್ಲ.  ಆದರೂ ಅದು  ದಲಿತರು ನಡೆಸಿದ ಸಂಘಟಿತ ಒತ್ತಡ ತಂತ್ರದಿಂದ  ಅನುವಂಶೀಯ ವೃತ್ತಿ ತಾರತಮ್ಯ ಎಂಬ ಹೆಸರಿನಲ್ಲಿ ತುಸು ಚರ್ಚೆಗೊಳಾಯಿತು. ಈಗ ಚರ್ಚೆ ಗೆತ್ತುಕೊಂಡಿರುವುದು ಅದರ ಅನುಸರಣಾ ವರದಿ.
ಶೌಚಾಲಯದ ಮುರುಕು ಗೋಡೆಯ ಇಟ್ಟಿಗೆಯ ಚೂರು:
ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಹೈಕಮಿಷನರ್ ಆಗಿರುವ ನವಿ ಪಿಳ್ಳೆ, ತಮಿಳು ಮೂಲದ ದಕ್ಷಿಣ ಆಫ್ರಿಕಾದವರು. ಅವರಿಗೆ ಜಾತಿಪದ್ಧತಿಯ ಉಪದ್ರವಗಳು ಮತ್ತು ದಕ್ಷಿಣ ಏಷಿಯಾ ದೇಶಗಳ ಸಾಮಾಜಿಕ ನೀತಿ ಚೆನ್ನಾಗಿ ತಿಳಿದಿದೆ. ಅವರು ಠರಾವಿಗೆ ಬೆಂಬಲ ನೀಡಿದ  ನೇಪಾಳದ ವಿದೇಶಾಂಗ ಸಚಿವರನ್ನು ಅಭಿನಂದಿಸಿ ಇದು ಜಾತಿಪದ್ಧತಿಯ ಸಮಸ್ಯೆಗಳನ್ನು ಸ್ವತಃ  ಹೊತ್ತಿರುವ ದೇಶ ಇಟ್ಟ ಮಹತ್ವದ ಹೆಜ್ಜೆ, ಇದನ್ನು ಇತರರು ಪಾಲಿಸಬೇಕು ಎಂದು ಹೇಳಿದ್ದಾರೆ.
ಮಾನವ ಹಕ್ಕುಗಳ ಅಂತಃ ಸತ್ವವೆಂದರೆ ಮನುಷ್ಯ ಮನುಷ್ಯನ ನಡುವೆ ಸಮಾನತೆ ಮತ್ತು  ಸಮಾನ ಅವಕಾಶಗಳು ಇರುವಂತೆ ನೋಡಿಕೊಳ್ಳುವುದು. ಜಾತಿಪದ್ಧತಿ ಈ ಮೂಲ ಹಕ್ಕುಗಳನ್ನೆ ನಿರಾಕರಿಸುತ್ತದೆ. ಆದ್ದರಿಂದ ಅದು ಮಾನವ ಹಕ್ಕಿನ ಉಲ್ಲಂಘನೆಯ ಪರಿಧಿಯೊಳಗೆ ಬರುತ್ತದೆ. ವಿಶ್ವಸಂಸ್ಥೆಯ ಜನಾಂಗೀಯ ಭೇದ ವಿನಾಶ ಸಮಿತಿ ತೆಗೆದುಕೊಂಡಿರುವ ನಿಲುವು ಸರಿಯಾಗಿದೆ. ಮಾನವ ಹಕ್ಕುಗಳ ಹೈ ಕಮಿಷನರ್ ನವಿ ಪಿಳ್ಳೆ ‘ಜಾತಿ ಎಂಬ ನಾಚಿಕೆಗೇಡು ಪರಿಕಲ್ಪನೆಯನ್ನು ನಾಶ ಮಾಡುವ ಕಾಲ ಕೂಡಿಬಂದಿದೆ’ ಎಂದು ಆವೇಶ ಭರಿತರಾಗಿ ಹೇಳುತ್ತಾರೆ. ಇದಕ್ಕೆ ಕಾರಣ ಜಾತಿಯಿಂದ ನೊಂದ ಕೆಲವು ಜನರು ಇತ್ತೀಚೆಗೆ ಅವರನ್ನು ಭೇಟಿ ಮಾಡಿ ಮುರಿದು ಬಿದ್ದ ಶೌಚಾಲಯದ ಗೋಡೆಯ ಇಟ್ಟಿಗೆಯ ಚೂರೊಂದನ್ನು ಕೊಟ್ಟರಂತೆ.  ಆ ಇಟ್ಟಿಗೆ ಚೂರು ಬರಿಗೈಯಲ್ಲಿ ಕಕ್ಕಸು ತೊಳೆಯುವ ಕೆಳಜಾತಿ ಜನರ ಜಾಗತಿಕ ಹೋರಾಟದ ಸಂಕೇತವಾಗಿ ಅವರಿಗೆ ಕಂಡಿತಂತೆ.  ಇದು ಆ ಜನ ತಾವು ಬಯಸಿ ಮಾಡುತ್ತಿರುವುದಲ್ಲ.  ಕೆಳಜಾತಿಯ ಹುಟ್ಟಿನ ಕಾರಣದಿಂದ ಮಾಡುತ್ತಿರುವುದು. ಅದನ್ನು ತಮ್ಮ  ಪೂರ್ವಜರಿಂದ ಬಳುವಳಿಯಾಗಿ  ಪಡೆದದ್ದು, ಈ ಕಾರಣಕ್ಕಾಗಿಯೆ ಜೀವನ ಪರ್ಯಂತ ‘ಮೈಲಿಗೆ’ ಅನುಭವಿಸುತ್ತಿರುವುದು ಮತ್ತು ಹೊರಗೆ ಹಾಕಲ್ಪಟ್ಟು  ಮುಟ್ಟಿಸಿಕೊಳ್ಳಬಾರದವರಾಗಿರುವುದು.
ಕಾಂಗ್ರೆಸ್‍ನ ಯುವ ನೇತಾರ ಚುನಾವಣೆಗಳ ಗೆಲುವಿನ ಶಿಲ್ಪಿ ಎಂದೇ ಖ್ಯಾತರಾಗಿರುವ  ರಾಹುಲ್ ಗಾಂಧಿ ಇತ್ತೀಚೆಗೆ ದಲಿತರ ಮನೆಗಳಲ್ಲಿ ವಾಸ್ತವ್ಯ ಹೂಡುತ್ತಿದ್ದಾರೆ.  ಅಕ್ಟೋಬರ್ 2, ಗಾಂಧಿ ಜಯಂತಿಯಂದು ಉತ್ತರ ಪ್ರದೇಶದಲ್ಲಿ ಇಡೀ ಪಕ್ಷದ ಜನ ಪ್ರತಿನಿಧಿಗಳಿಗೆ ರಾಜ್ಯಾದಾದ್ಯಂತ ಹಳ್ಳಿಗಳ ದಲಿತರ ಮನೆಗಳಲ್ಲಿ ವಾಸ್ತವ್ಯ ಹೂಡಲು  ಕರೆ ನೀಡಿದ್ದರು. ಅದು ವಿಫಲವಾಯಿತೆಂಬುದು ಬೇರೆ ಮಾತು.  ಆದರೆ ಅವರ ಉದ್ದೇಶ ಮತ್ತು ದಲಿತರ ಬಗೆಗೆ ತೋರುತ್ತಿರುವ ಕಳಕಳಿ ಅವರ ವೈರಿಗಳ ಪ್ರಶಂಸೆಯನ್ನು ಗಳಿಸುತ್ತಿದೆ. ಅವರೊಮ್ಮೆ ಭಾರತಕ್ಕೆ ಹಲವು ಸಲ ಭೇಡಿ ನೀಡಿದ್ದ ಇಂಗ್ಲೆಂಡಿನ ಪತ್ರಕರ್ತ ಮಿತ್ರರೊಬ್ಬರನ್ನು ಉತ್ತರ ಪ್ರದೇಶದ ಹಳ್ಳಿಯೊಂದಕ್ಕೆ ಕರೆದೊಯ್ದು ದಲಿತರ ಮನೆಯಲ್ಲಿ ವಾಸ್ತವ್ಯ ಹೂಡಿದ್ದರು. ಆಗ ಆ ಮಿತ್ರರು ಈ ಭಾರತದ ಪರಿಚಯವೇ ನನಗಿರಲಿಲ್ಲ ಎಂದು ಉದ್ಗರಿಸಿದ್ದರು! ಈ ಹೊತ್ತಿನಲ್ಲಿ ರಾಹುಲ್ ಗಾಂಧಿಯವರಿಗೆ ದಲಿತೋದ್ಧಾರದ ನೈಜ ಕಳಕಳಿ ಇದ್ದಲ್ಲಿ ವಿಶ್ವಸಂಸ್ಥೆಯ ಠರಾವನ್ನು ಬೆಂಬಲಿಸಲು ಸರ್ಕಾರದ ಮೇಲೆ ಒತ್ತಡ ತರಬೇಕು. ಈ ಸಂಸ್ಕೃತಿಯ ಕುರೂಪತೆಯನ್ನು ತೊಡೆದು ಹಾಕಲು ರಾಜಕೀಯ ಬೆರೆಸದೆ ನಿರ್ಧಾರಗಳನ್ನು ತೆಗೆದುಕೊಳ್ಳಬೇಕು.
ಜಾತಿ ಎನ್ನುವುದು ಕೇವಲ ದಲಿತರ ಸಮಸ್ಯೆಯಾಗಿ ಉಳಿದರೆ ಜಾತಿ ನಾಶವಾಗಲಾರದು. 1936 ರಲ್ಲಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್‌‌‌‌‌‌‌ರವರು ಲಾಹೋರ್‌‌‌‌‌‌‌ನಲ್ಲಿ  ‘ಜಾತ್ ಪಾತ್ ತೋಡಕ್ ಸಮಿತಿ’ ಏರ್ಪಡಿಸಿದ್ದ ಸಭೆಗಾಗಿ ಸಿದ್ಧಪಡಿಸಿದ  ಜಾತಿ ವಿನಾಶ ಕುರಿತ ಐತಿಹಾಸಿಕ ಭಾಷಣ ಹಿಂದೂ ಮುಖಂಡರುಗಳನ್ನು ತಲ್ಲಣಗೊಳಿಸಿತು. ಅದು ದಲಿತೇತರ ಹಿಂದುಗಳನ್ನು  ಕುರಿತು ಬರೆದ ಭಾಷಣ.  ಗಾಂಧೀಜಿಯವರು ಸಹ ಜಾತಿ ಭೇದವನ್ನು ಅಳಿಸಲು ಮೇಲುಜಾತಿಯ ಮನಸ್ಸುಗಳ ಬದಲಾವಣೆಯನ್ನು ಬಯಸಿದ್ದರು.  ಆದ್ದರಿಂದ, ಶ್ರೇಣೀಕೃತ ಜಾತಿ ವ್ಯವಸ್ಥೆಯಲ್ಲಿ ಬ್ರಾಹ್ಮಣರಿಂದ ಹಿಡಿದು ಭಂಗಿ ಜನರವರೆಗೆ ಎಲ್ಲರೂ ಒಟ್ಟಾಗಿ ಹೋರಾಡಿದಾಗ ಮಾತ್ರ ಜಾತಿ ಭೇದ ಮತ್ತು ಅಸ್ಪೃಶ್ಯತೆಯ ನಾಶ ಸಾಧ್ಯವಾಗಬಹುದು.

ಸಂವಿಧಾನ-60 : ಸಾಮಾಜಿಕ ನ್ಯಾಯ ಮತ್ತು ಕರ್ನಾಟಕ” ಪುಸ್ತಕದಿಂದ.
ಕೃಪೆ : ವರ್ತಮಾನ

Sunday, September 02, 2012

Kaksparsh : Potential Wasted ( Marathi Movie Review)

Kaksparsh is easily one of the most promoted Marathi films in recent times. Zee Talkies having taken up the distribution have gone all out in securing the film a good release in cinema halls as well. The film has entered the 3rd week and still the shows are running housefull which is certainly a rarity for a marathi movie. Though it is heartening to see a marathi film getting such publicity what it also does is half convince the people about the film even before watching it.

I have had a rather hectic last half a month or so which has actually helped me keep a little distance from the heavy publicity and thus maintain my objectivity. And I feel that the film is definitely not as good as its makers are proclaiming it to be or even the general consensus amongst the people tells you.
Kaksparsh is a period film set in the 1930s-1950s Konkan Mahrashtra.  Haridada, the patriarch of a Brahmin family, is like a father to his kid brother Mahadev. He decides to get Mahadev married off to a very young Durga who is later renamed by Mahadev as Uma. But tragedy strikes as Mahadev dies even before consummating their marriage.
According to Hindu rituals, as a part of last rites a bowl of rice and sesame seeds is offered to a crow which is supposed to represent the deceased soul. The soul of the departed is only supposed to receive ‘mukti’ when the crow actually eats out from food the offered. During Mahadev’s last rites, as no crow seems to be willing to touch or eat the food offered, Haridada murmurs something and a crow does finally oblige. We come to know what Haridada actually murmured only towards the end in the film.
As per the custom prevalent in Pre-Independence days a widow is supposed to shave off her hair. But Haridada objects to Uma’s hair being shaven off without giving an explanation of this decision of his, much to the disappointment and anger of the society at large. He then over a period of time keeps taking decisions with respect to the widowed Uma which keeps baffling his family and makes everybody and even the audience believe(rather misleadingly) that he has developed feelings for the young Uma.
The plot surely is interesting but then the director Mahesh Manjrekar or even the scriptwriter Girish Joshi doesn’t deserve credit for it as the film is an adaptation of the book by the same name written by Usha Datar. Rather an opportunity to make a truly memorable film has been wasted.
The biggest issue with the film, especially the first half, is that it feels rushed. The film is like a saga across generations unfolding on the screen. However, such tales work only when they take their own sweet time to develop the plot and its characters. Mahesh Manjrekar, here, seems to be a lot worried about the attention span of his audience and swiftly proceeds forward from one scene to another. Also, at times it feels as if the movie has been re-edited to fit into the 2 hour bracket just to suit the need of the multiplexes and other exhibitors.
Girish Joshi’s script narrates the film in flashbacks which don’t always seem smooth. It also has a tendency to spoon feed the audience. The character played by Vaibhav Mangale as the Upadhyay of the village is almost a caricature.
What works in the favor of the film is primarily the pre-independence Konkan set-up. Ajit Reddy’s camerawork deserves major credit for it. The costumes, the language all are quite authentic and you do feel transported to a bygone era.  Another major plus of the film is the performances. Sachin Khedekar as the patriarch of the family is simply brilliant. So is Megha Manjrekar who plays his wife. Others like Savita Malpekar who plays the bitter old widow(Namu Attya) and Haridada’s friend Balwant played Sanjay Khapare are also impressive. But Ketaki Mategaonkar, who is steadily developing a fan following, isn’t that convincing as the very young bride turned widow. Also, there are some interesting things that you learn from the film like in those times marriage was supposed to be consummated only on an auspicious occasion.
The film also does have a few memorable scenes like the one where the old widow Namu Attya tries to make Uma understand how fortunate she is as Haridada treats her in a much better manner than what widows in those times were normally subjected to. Another striking scene is that of Uma, a widow completely deprived of any sexual pleasure, secretly enjoying the sound of Haridada’s newly married son Sankarshan and his wife making love to each other.
Though the above points make the film worth a watch the cons of the film surely outweigh the pros. For me personally the wasted potential is what majorly makes the film a dampener. The film has enough material to blow you away but the makers are content with scratching the surface. Now, another project which Zee Talkies is associated with after Natrang will be added to my list of the most overrated marathi films of recent times.

Marathi, Regional Tadka — By Rasik on May 22, 2012

Wednesday, August 29, 2012

बाबासाहेब आणि भारतीय संविधान

 
 
डॉ. संदीप नंदेश्वर, नागपूर ९२२६७३४०९१
बाबासाहेब संविधान अमलात येण्याच्या आधीच भारतीय घटनेचे शिल्पकार बनले होते.

महावीर सांगलीकर हा बाळबोध भट आजकाल भारतीय संविधान आणि बाबासाहेबांच्या योगदानावर बरळतो आहे...त्याला उत्तर द्यावे इतकी त्याची लायकी नाही... पण आज संविधानाच्या संबंधाने काही प्रश्न उपस्थित होतात म्हणून संविधानाविषयी निर्माण झालेला संभ्रम दूर व्हायला हवा....

भारतीय संविधानाची निर्मिती प्रक्रिया १९०९ च्या मोर्ले-मिंटो सुधारणा कायद्यापासून सुरु झाली आहे. आणि शेवट हा २६ नोव्हेंबर १९४९ ला संविधान सभेच्या संविधान स्वीकारापर्यंत ती चालली आहे. या मध्यंतरीच्या काळात १९१९ चा montague - Chemsford सुधारणा कायदा महत्वाचा आहे. ज्या कायद्याने भारतीयांना मर्यादित राजकीय, आर्थिक, सामाजिक स्वातंत्र्य बहाल केले. हा १९१९ चा कायदा बनण्याआधी साउथबुरो कमिशन १९१८ समोर डॉ. बाबासाहेबांनी निवेदन देऊन साक्ष दिली होती. त्यात ज्या मागण्या प्रामुख्याने बाबासाहेबांनी केल्या होत्या त्या १९१९ च्या montague - Chemsford सुधारणा कायदात समाविष्ट करण्यात आल्या होत्या. बाबासाहेब वगळता तिथे या देशातील कुठल्याही अन्य व्यक्ती वा संघटनांचा समावेश का झाला नाही. फक्त डॉ. बाबासाहेब आंबेडकर यांनाच या देशाच्या स्वातंत्र्याची आणि या देशातल्या जनतेच्या हिताची काळजी होती हेच दिसून येते.

त्यानंतर १९२७ ला सायमन कमिशन इथल्या परिस्थितीचा अभ्यास करायला भारतात आले. त्या कमिशन ला महात्मा गांधीच्या नेतृत्वातील कॉंग्रेस ने विरोध केला. आणि Go Back सायमन चा नारा लावला. कॉंग्रेस ने कुठलेही सहकार्य या कमिशन ला केले नाही. परंतु बाबासाहेबांनी या कमिशन ला सुद्धा आपल्या मागण्यांचे निवेदन सदर केले. त्या निवेदनात इथल्या अस्पृश्यांच्या कल्याणासाठी इंग्रज सरकारने काय केले पाहिजे यासोबतच भारतातील संविधान निर्मितीसाठी आणि राजकीय प्रांतिक विधीमंडळाची मांडणी व रचना कशी असावी याविषयी सुद्धा मार्गदर्शन केले होते. तेव्हा कॉंग्रेस काय; गांधी काय; तर या देशातले इतर अन्य महा-(पुरुष), संस्था-संघटना निष्काम कर्मयोगाच्या समाधी अवस्थेत बसल्या होत्या.

१९२७ च्या सायमन कमिशन ने केलेल्या शिफारशीनुसारच इंग्रज संसदेने गोलमेज परिषद बोलावली. त्यात प्रामुख्याने बाबासाहेबांना पुनःच्या आमंत्रित करण्यात आले. या पहिल्या गोलमेज परिषदेला गांधीप्रणीत कॉंग्रेस ने बहिष्कार घातला. परंतु बाबासाहेबांनी गोलमेज परिषदेत हजेरी देत इंग्रज सरकारला या देशाला कश्याप्रकारच्या कायद्याची गरज आहे. हे पटवून दिले. भारतातील प्रांतिक आणि केंद्रीय विधीमंडळांची रचना कशी असावी हे सुद्धा पटवून दिले. हे गांधी आणि कॉंग्रेस ला माहित झाल्याने गांधी व कॉंग्रेस चे महत्व टिकून राहावे म्हणून गांधी दुस-या गोलमेज परिषदेला हजार झाले. तिथेही गांधी आणि बाबासाहेब यांच्यात भारतीय सामाजिक परिस्थिती लक्षात घेता आवश्यक असणा-या तरतुदी संबंधाने मोठ्या प्रमाणात खडाजंगी झाली. शेवटी गोलमेज परिषदेने बाबासाहेबांच्या बाजूने ठराव घेतला. गांधींना त्यात सपशेल अपयश पचवावे लागले आणि बाबासाहेबांपुढे घुताने टेकावे लागले. (कृपया पुणे कराराच्या संबधाचा जो विषय आहे त्यावर मी बोलत नाही. तो विषय वगळता अन्य ठरावावर मी बोलत आहे) याच गोलमेज परिषदेने घेतलेल्या ठरावांचा जाहीरनामा प्रसिद्ध करण्यात आला. आणि त्याचेच रुपांतर पुढे १९३५ च्या कायद्यात झाले. म्हणजेच याही कायद्यात बाबासाहेबांचे योगदान मोठे आहे.

पुढे भारतीय संविधान निर्मितीच्या प्रक्रियेला इंग्रज सरकारकडून प्रयत्न करण्यात आले. त्यासाठी त्यांनी विविध आयोगांना भारतात पाठविले. त्यातलेच पहिले १९४२ ला परत सायमन कमिशन भारतात आले. तेव्हाही गांधीप्रणीत कॉंग्रेस ने त्याला विरोध केला. परंतु बाबासाहेबांनी मात्र सहकार्य केले. आपल्या मागण्यांचे निवेदन देत राहिले. त्यानंतर पुन्हा संविधान निर्मितीच्या संबंधाने निर्णय घेण्यासाठी क्रिप्स मिशन (त्रीमंत्री योजना म्हणून प्रसिद्ध) भारतात आले. तेव्हा थोडीशी कॉंग्रेस ची भूमिका मवाळ झाली होती. कारण प्रत्येक वेळेस बाबासाहेब आपल्या मागण्या इंग्रजांकडून मान्य करवून घेत होते. परत १९४६ ला माउंटबेटन च्या नेतृत्वात एक आयोग भारतात आले. जो संविधान सभेच्या निर्मितीसाठी शेवटचा आयोग ठरला. या सर्व इतिहासात बाबासाहेबांचे मोठे योगदान राहिले आहे. कॉंग्रेस किंवा गांधी किंवा अन्य कुणापेक्षा पेक्षा जास्त योगदान संविधान निर्मितीच्या पूर्वइतिहासात डॉ. बाबासाहेब आंबेडकरांचे राहिलेले आहे.

माउंटबेटन ने दिलेल्या अंतिम सूचनेवरून संविधान सभेच्या निवडणुका सुरु झाल्या. बाबासाहेब पश्चिम बंगाल प्रांतातून संविधान सभेवर निवडून आले. (तेव्हाही कॉंग्रेस ने बाबासाहेब संविधान सभेवर निवडून येऊ नये म्हणून प्रयत्नांची पराकाष्टा केली होती. कारण पूर्वइतिहास त्यांना माहित असल्याने...कॉंग्रेस चे काहीही चालले नसते म्हणून) ९ डिसेंबर १९४६ ला संविधान सभेची पहिली बैठक बोलाविण्यात आली. आणि भारतीय संविधानाचे प्रारूप कसे असावे यावर दीर्घ चर्चा झाली. या चर्चेत प्रत्येकच सदस्याला मते मांडण्याची संधी देण्यात आली. बाबासाहेबांना आपली मते मांडण्यासाठी वाट पहावी लागत होती.

अखेर १३ डिसेंबर १९४६ ला बाबासाहेबांना संविधान सभेसमोर संविधानाच्या प्रारुपावर मत मांडण्यासाठी अचानक आमंत्रित करण्यात आले. (अचानक यासाठी कि अनेक सदस्य बाकी असल्याने बाबासाहेबांना याची कल्पनाच नव्हती कि त्यांना या दिवशी आपली मते मांडवी लागतील म्हणून...) बाबासाहेबांनी सुरवातीलाच याचा उल्लेख केला कि "माझा नंबर आज लागेल याची मला कल्पना नव्हती. तशी पूर्वसूचना मला मिळाली असती तर मी पूर्वतयारीनिशी माझे मत मांडले असते. पण तरीही मी माझे मत मांडणार आहे..." बाबासाहेबांचे ते संविधान सभेतील पहिले भाषण सुरु झाले. संपूर्ण सभागृह अवाक होऊन अतिशय एकाग्रचित्त झाले होते.

बाबासाहेब एकावर एक मुद्दे आपल्या बुद्धिचातुर्याने संविधान सभेसमोर मांडत होते. सभागृहातील एकही सदस्य त्या बाबासाहेबाच्या भाषणाच्या वेळी उठला नाही कि जागचा हलला सुद्धा नाही. बाबासाहेबांच्या मुखातून जणू काही भविष्याचे संविधानाच बाहेर पडत होते. ज्यात संपूर्ण मानवजातीच्या कल्याणाची एक आचारसंहिताच लिहिली जात होती. बाबासाहेबांचे भाषण झाल्यावर सभागृह टाळ्यांच्या गळगळाटांने निनादून उठले. संपूर्ण सभागृहातील सदस्यांनी बाबासाहेबांच्या विद्वत्तेपुढे मानच झुकविली. बाबासाहेबांचे विरोधकही त्या भाषणाने इतके प्रभावी झाले कि त्यांच्या तोंडून कौतुकाचे शब्दही फुटत नव्हते.

अश्यातच भारत आणि पाकिस्थानाची फाळणी होण्याचे संकेत होते. ती झाली. बाबासाहेबांचा मतदार संघ पाकिस्तानात गेला. त्यामुळे संविधान सभेतील त्यांचे सदस्यत्व धोक्यात येणार होते. अश्या परिस्थितीत बाबासाहेबांचे समर्थक आणि संविधान सभेतील अन्य सभासद ज्यांनी बाबासाहेबांचे १३ डिसेंबर १९४६ चे भाषण ऐकले होते त्यांचा कॉंग्रेस वर दबाव निर्माण झाला. कॉंगेस ला पण बाबासाहेबांना संविधान सभेतील कामकाजापासून अलिप्त ठेवता येत नव्हते. कारण इतकी प्रचंड विद्वत्ता आणि कल्याणाचा जाहीरनामा संपूर्ण कॉंग्रेस मध्ये कुणाकडेही नव्हते. भारताचे संविधान बाबासाहेबंशिवाय बनणे अशक्यप्राय होते हे कॉंग्रेस चांगल्याने जाणून होती. म्हणून शेवटी बी जी खेरांना पत्र लिहून जयकरांचे मुंबई प्रांतातील संविधान सभेतील सदस्यत्व अन्य कारणाने रद्द करण्यात आले. आणि त्या टिकाणी बाबासाहेबांना संविधान सभेवर निवडून आणण्यात आले. कॉंग्रेस, संविधान सभा, भारत देश या सर्वांचीच ती गरज होती. बाबासाहेब संविधान सभेवर निवडून जाने सर्वांच्याच हिताचे होते. त्यानंतर बाबासाहेबांनी संविधानाच्या मसुदा समितीच्या अध्यक्षपदावरून केलेली कामगिरी आणि त्यांची संविधान सभेतील सर्व कलमांवर केलेली भाषणे म्हणजे या देशाचे भवितव्यच होते.

संविधान निर्मितीचा हा पूर्ण इतिहास आपण लक्षात घेतला तर बाबासाहेब संविधान अमलात येण्याच्या आधीच भारतीय घटनेचे शिल्पकार बनले होते. परंतु काही बांडगुळे ठराविक अंतराने बाबासाहेब आणी भारतीय संविधानावर चिखलफेक करतात. ती मोडून काढण्यासाठी हा इतिहास आम्ही लक्षात घेतला पाहिजे. या देशात संविधान किती माणसांपर्यंत पोहचला आहे ? हे पाहायचे असेल तर अलीकडच्या काळात अनेक उदाहरणे डोळ्यासमोर येत आहेत. इथली माणसे INDIAN PINAL CODE, HINDU LAW, COMPANY LAW, FAMILY LAW, CONTRACT LAW etc. अश्या अनेक कायद्यांची भेसळ भारतीय संविधानाशी करतात. उदा. "कसाबला लवकर फाशी होत नाही कारण संविधान जबाबदार आहे." "भ्रष्टाचार्यांना रोकता येत नाही. कारण संविधान जबाबदार आहे." सर्व प्रश्नांसाठी वेगळे कायदे असतांना ही बाळबोध माणसे सरसकट भारतीय संविधानाला आणि बाबासाहेबांना जबाबदार ठरवितात. हे किती हास्यास्पद आहे. आणि या देशातल्या अश्या बाळबोध माणसांमध्ये किती संविधानिक जागृती झाली आहे हे आपल्या लक्षात येईल.

बाबासाहेब आणि भारतीय संविधान यावर बोटे ठेवून उलटसुलट इतिहास मांडणा-या, वाचना-या, लिहिणा-या, सांगणा-या बाल्बोधांनी हा इतिहास वाचवा आणि नंतरच चर्चा करावी.


Tuesday, August 14, 2012

ದೊಡ್ಡ ಚಳವಳಿಗಳ ಕಾಲ ಮುಗಿದುಹೋಗಿದೆ

                                ದಿನೇಶ ಅಮೀನಮಟ್ಟು
ಮಳೆ ನಿಂತರೂ ಒಂದಷ್ಟು ಹೊತ್ತು ಮಳೆಹನಿ ನಿಲ್ಲುವುದಿಲ್ಲ. ಅಣ್ಣಾ ತಂಡವನ್ನು ಬರ್ಖಾಸ್ತುಗೊಳಿಸಲಾಗಿದ್ದರೂ ಅದು ಪ್ರಾರಂಭಿಸಿದ್ದ ಚಳವಳಿ ಬಗ್ಗೆ ಚರ್ಚೆ-ವಿಶ್ಲೇಷಣೆಗಳು ನಿಂತಿಲ್ಲ, ಇದು ಇನ್ನಷ್ಟು ಕಾಲ ಮುಂದುವರಿಯಲಿದೆ.

ಮಿಂಚಿಮರೆಯಾಗಿ ಹೋದ ಈ ಚಳವಳಿಯ ಗರ್ಭಪಾತಕ್ಕೆ ಕಾರಣರಾದ ಖಳನಾಯಕರು ಯಾರು ಎನ್ನುವುದನ್ನು ಗುರುತಿಸುವ ಕೆಲಸ ಈಗ ಪ್ರಾರಂಭವಾಗಿದೆ. ಕಳೆದ ಕೆಲವು ದಿನಗಳಿಂದ ಎಲ್ಲರೂ ಅಣ್ಣಾತಂಡದ ಪ್ರಮುಖ ಸದಸ್ಯರಾದ ಅರವಿಂದ್ ಕೇಜ್ರಿವಾಲ್, ಕಿರಣ್‌ಬೇಡಿ ಮತ್ತು ಪ್ರಶಾಂತ್ ಭೂಷಣ್ ಮೇಲೆ ಎರಗಿಬಿದ್ದಿದ್ದಾರೆ.


`ಸೃಷ್ಟಿ, ಪಾಲನೆ ಮತ್ತು ಲಯ`ದ ಮೂರೂ ಕೆಲಸಗಳನ್ನು ಈ ತ್ರಿಮೂರ್ತಿಗಳೇ ಮಾಡಿದ್ದು ಎಂದು ಅಣ್ಣಾಬೆಂಬಲಿಗರು ಆರೋಪಿಸತೊಡಗಿದ್ದಾರೆ. ಚಳವಳಿ ಹಾದಿ ತಪ್ಪಲು ಕಾರಣವಾದ ಇವರ ಪಾತ್ರ  ಕ್ಷಮಿಸಿ ಬಿಡುವಂತಹದ್ದು ಖಂಡಿತ ಅಲ್ಲ.


ಆದರೆ ಇವರಷ್ಟೇ ಖಳನಾಯಕರೇ? ಹಾಗೆಂದು ತೀರಾ ಸರಳವಾಗಿ ತೀರ್ಮಾನಿಸಿಬಿಟ್ಟರೆ ಈ ಚಳವಳಿಯ ಸೋಲು-ಗೆಲುವುಗಳನ್ನು ವಸ್ತುನಿಷ್ಠವಾಗಿ ಅರ್ಥಮಾಡಿಕೊಳ್ಳಲು ಸಾಧ್ಯವಾಗಲಾರದು.

ಈ ತ್ರಿಮೂರ್ತಿಗಳಷ್ಟೇ ಖಳರು ಅಲ್ಲದೆ ಇದ್ದರೆ ಬೇರೆ ಯಾರು ? ಕೆಲವರು ಅಣ್ಣಾಹಜಾರೆಯವರನ್ನೇ ಹೆಸರಿಸುತ್ತಾರೆ. ಸ್ವಲ್ಪ ಮಟ್ಟಿಗೆ ಇದು ನಿಜ ಕೂಡಾ. ಹಜಾರೆ ಅವರು ಸಜ್ಜನ, ಪ್ರಾಮಾಣಿಕ, ನಿಸ್ವಾರ್ಥಿ, ಸರಳಜೀವಿ ಎನ್ನುವುದರ ಬಗ್ಗೆ ಬಹಳ ಮಂದಿಗೆ ಅನುಮಾನ ಇಲ್ಲ.


ಆದರೆ ಈ ಗುಣಗಳಿಂದಷ್ಟೇ ನಾಯಕನಾಗಲು ಸಾಧ್ಯವೇ ಎನ್ನುವುದು ಪ್ರಶ್ನೆ. ಸ್ವಾತಂತ್ರ್ಯಪೂರ್ವದಲ್ಲಿ ಮತ್ತು ನಂತರದಲ್ಲಿ ನಡೆದ ಎರಡು ಪ್ರಮುಖ ಚಳವಳಿಗಳನ್ನು ಮುನ್ನಡೆಸಿದ್ದ ಗಾಂಧೀಜಿ ಮತ್ತು ಜಯಪ್ರಕಾಶ್ ನಾರಾಯಣ್ ಕೇವಲ ಸಜ್ಜನರು ಮತ್ತು ಪ್ರಾಮಾಣಿಕರಾಗಿರಲಿಲ್ಲ.


ಅವರು ಬುದ್ದಿವಂತರೂ ಆಗಿದ್ದರು.  ವಿಸ್ತಾರವಾದ ಓದು, ರಾಷ್ಟ್ರ-ಅಂತರರಾಷ್ಟ್ರೀಯ ವಿದ್ಯಮಾನಗಳ ಬಗ್ಗೆ ಅರಿವು, ಪ್ರವಾಸ ಮತ್ತು ಜನರ ಜತೆಗಿನ ಒಡನಾಟ ಅವರಿಗೆ ಜನರ ನಾಡಿಮಿಡಿತವನ್ನು ಅರ್ಥಮಾಡಿಕೊಳ್ಳುವ ತೀಕ್ಷ್ಣಗ್ರಹಣಶಕ್ತಿಯನ್ನು ತಂದು ಕೊಟ್ಟಿತ್ತು.  ಒಂದು ಅನ್ನದ ಅಗುಳನ್ನು ಮುಟ್ಟಿಯೇ ಪಾತ್ರೆಯಲ್ಲಿದ್ದ ಅನ್ನ ಬೆಂದಿದೆಯೇ ಇಲ್ಲವೇ ಎನ್ನುವುದನ್ನು ಹೇಳುವಷ್ಟು ಸಮಾಜದ ನಾಡಿಮಿಡಿತವನ್ನ್ನು ಬಲ್ಲವರಾಗಿದ್ದರು.

ಜನಪ್ರಿಯತೆಯಲ್ಲಿ ತೇಲಿಹೋಗದೆ ಅದನ್ನು ತಮ್ಮ ಉದ್ದೇಶ ಸಾಧನೆಗೆ ಬಳಸಿಕೊಳ್ಳುವ ನಿರ್ವಹಣಾ ಶಕ್ತಿ ಮತ್ತು ಸಂಯಮ ಅವರಲ್ಲಿತ್ತು. ಜಾತಿ,ಧರ್ಮ,ಪ್ರದೇಶಗಳಲ್ಲಿ ಒಳಗಿಂದೊಳಗೆ ಒಡೆದುಹೋಗಿರುವ ದೇಶದಲ್ಲಿ ಒಂದು ಸಾಮೂಹಿಕ ಚಳವಳಿಯನ್ನು ಮುನ್ನಡೆಸಿಕೊಂಡು ಹೋಗಲು ಇಂತಹ ಸಾಮರ್ಥ್ಯಬೇಕಾಗುತ್ತದೆ. ಈ ಗುಣಗಳು ಅಣ್ಣಾಹಜಾರೆಯವರಲ್ಲಿ ಇದ್ದಿದ್ದರೆ ಭ್ರಷ್ಟಾಚಾರ ವಿರೋಧಿ ಚಳವಳಿ ನಡುಹಾದಿಯಲ್ಲಿಯೇ ಅಪಘಾತಕ್ಕೆ ಈಡಾಗುತ್ತಿರಲಿಲ್ಲ.

ಅಣ್ಣಾಚಳವಳಿ ಹಾದಿ ತಪ್ಪಲು ಮಾಧ್ಯಮರಂಗ ವಹಿಸಿದ ಖಳನಾಯಕನ ಪಾತ್ರವೇ ಕಾರಣ ಎನ್ನುವವರೂ ಇದ್ದಾರೆ. ಈ ಆರೋಪವನ್ನು ಮಾಡುವ ಅಣ್ಣಾತಂಡದ ಸದಸ್ಯರು ಮತ್ತು  ಬೆಂಬಲಿಗರು  ಕೊನೆದಿನಗಳಲ್ಲಿ ಮಾಧ್ಯಮಗಳ ನಿರ್ಲಕ್ಷ್ಯ ಮತ್ತು ಟೀಕೆಗಳನ್ನು ಉದಹರಿಸುತ್ತಿದ್ದಾರೆ.


ಇದು ಮಾಧ್ಯಮಗಳನ್ನು ಅರ್ಥಮಾಡಿಕೊಳ್ಳಲಾಗದ ಅವರ ಅಜ್ಞಾನವನ್ನಷ್ಟೇ ತೋರಿಸುತ್ತದೆ. ಕೊನೆದಿನಗಳ ನಿರ್ಲಕ್ಷ್ಯಗಿಂತಲೂ  ಅಣ್ಣಾಚಳವಳಿಗೆ ಹೆಚ್ಚು ಹಾನಿ ಉಂಟು ಮಾಡಿದ್ದು ಪ್ರಾರಂಭದ ದಿನಗಳ ಅತಿಪ್ರಚಾರ.


ಕಣ್ಣುಕಟ್ಟಿನ ಪ್ರಚಾರ ವೈಖರಿ ಮೂಲಕ ಉಪವಾಸ ಶಿಬಿರದ ಮುಂದೆ ಸೇರಿದ್ದ ಸಾವಿರ ಜನರನ್ನು  ಲಕ್ಷವಾಗಿ, ಲಕ್ಷ ಜನರನ್ನು ಕೋಟಿಯಾಗಿ ಮಾಧ್ಯಮಗಳು ಬಿಂಬಿಸಿದ್ದನ್ನು ನಿಜವೆಂದೇ ನಂಬಿದ ಅಣ್ಣಾತಂಡದ ಸದಸ್ಯರು ದೇಶದ 120 ಕೋಟಿ ಜನ ತಮ್ಮ ಬೆನ್ನಹಿಂದೆ ಇದ್ದಾರೆ ಎಂದು ಭ್ರಮಿಸಿಬಿಟ್ಟರು.

 
ಮೂರೂಹೊತ್ತು ಟಿವಿ ಪರದೆಗಳಲ್ಲಿ, ಪತ್ರಿಕೆಗಳ ಪುಟಗಳಲ್ಲಿ ಕಾಣಿಸುವ ತಮ್ಮ ಮುಖಗಳನ್ನು ಪ್ರೀತಿಸುತ್ತಾ ಆತ್ಮರತಿಗೆ ಜಾರಿಬಿಟ್ಟರು. ಮಾಧ್ಯಮರಂಗ ವಾಣಿಜ್ಯೀಕರಣಗೊಂಡ ಬದಲಾದ ಪರಿಸ್ಥಿತಿಯಲ್ಲಿ ಮುಖ್ಯವಾಗಿ ಟಿವಿ ಚಾನೆಲ್‌ಗಳು ಹುಟ್ಟು-ಸಾವುಗಳೆರಡನ್ನು ಸಂಭ್ರಮದಿಂದ ಆಚರಿಸುತ್ತದೆ.

ಈ ಭರದಲ್ಲಿ ಸರಿ-ತಪ್ಪು ಇಲ್ಲವೆ ಒಳ್ಳೆಯದು-ಕೆಟ್ಟದನ್ನು ಗುರುತಿಸುವ ನ್ಯಾಯಪ್ರಜ್ಞೆ ಜನಪ್ರಿಯತೆಯ ಪ್ರವಾಹದಲ್ಲಿ ಕೊಚ್ಚಿಕೊಂಡುಹೋಗುತ್ತದೆ. ಮಾಧ್ಯಮಗಳಿಂದ ಪ್ರಚಾರ ಬಯಸುವವರಿಗೆ ಇದನ್ನು ಅರ್ಥಮಾಡಿಕೊಳ್ಳುವ ಶಕ್ತಿ ಇಲ್ಲದೆ ಇದ್ದರೆ ಅಣ್ಣಾತಂಡಕ್ಕಾದ ಗತಿಯೇ ಆಗುತ್ತದೆ.

ಮಾಧ್ಯಮಗಳ ಪ್ರಚಾರದ ಊರುಗೋಲಿನ ಬಲದಿಂದ ಎದ್ದುನಿಂತದ್ದು, ಆ ಊರುಗೋಲನ್ನು ಕಿತ್ತುಕೊಂಡ ಕೂಡಲೇ ಕುಸಿದುಬೀಳುತ್ತದೆ. ಹಾಗೆಯೇ ಆಯಿತು.

ಇವರೆಲ್ಲರ ಬಗ್ಗೆ ಚರ್ಚಿಸುತ್ತಿರುವ ಸಂದರ್ಭದಲ್ಲಿ ಅಣ್ಣಾಚಳವಳಿಯ ವೈಫಲ್ಯದಲ್ಲಿ ಖಳನಾಯಕರ ಪಾತ್ರವಹಿಸಿದ್ದ ಬಹುಮುಖ್ಯವಾದ ಸಮುದಾಯವನ್ನು ಎಲ್ಲರೂ ಮರೆತುಬಿಟ್ಟಿದ್ದಾರೆ. ಅದು ಚಳವಳಿಗೆ ಸೇರುತ್ತಿದ್ದ ಜನ. ಜಯಪ್ರಕಾಶ್ ನಾರಾಯಣ್ ನೇತೃತ್ವದ `ಸಂಪೂರ್ಣ ಕ್ರಾಂತಿ`ಯ ನಂತರದ ದಿನಗಳಲ್ಲಿ ಒಂದು ಚಳವಳಿಯಲ್ಲಿ ಇಷ್ಟೊಂದು ಸಂಖ್ಯೆಯಲ್ಲಿ ಜನ ಎಂದೂ ಭಾಗವಹಿಸಿರಲಿಲ್ಲ.

`ನಾನೇ ಅಣ್ಣಾ` ಎಂದು ತಲೆಪಟ್ಟಿ ಕಟ್ಟಿಕೊಂಡು, ಎದೆಮೇಲೆ ಬರೆಸಿಕೊಂಡು, ಹಗಲುಹೊತ್ತಿನಲ್ಲಿ ಘೋಷಣೆ ಕೂಗುತ್ತಾ, ರಾತ್ರಿಹೊತ್ತು ಕ್ಯಾಂಡಲ್ ಹಚ್ಚುತ್ತಾ ಫೇಸ್‌ಬುಕ್ ಮತ್ತು ಟ್ವಿಟರ್‌ಗಳಲ್ಲಿ ಕ್ರೀಯಾಶೀಲರಾಗಿ `ಅರಬ್ ವಸಂತ` ಇನ್ನೇನು ಭಾರತದಲ್ಲಿ ಪ್ರಾರಂಭವಾಗಿಯೇ ಬಿಟ್ಟಿತೆನ್ನುವ ಭ್ರಮಾಲೋಕವನ್ನು ಸೃಷ್ಟಿಸುತ್ತಿದ್ದವರು ಚಳವಳಿಯಲ್ಲಿ ಭಾಗವಹಿಸಿದ್ದ ಜನ.

ಅಣ್ಣಾಹಜಾರೆ ಅವರ ಮೊದಲೆರಡು ಉಪವಾಸಗಳ ಕಾಲದಲ್ಲಿ ಸಕ್ರಿಯವಾಗಿದ್ದ ಈ ಜನಸಮೂಹ ನಂತರದ ಎರಡು ಉಪವಾಸಗಳ ಕಾಲಕ್ಕೆ ಆಸಕ್ತಿಯನ್ನು ಕಳೆದುಕೊಂಡುಬಿಟ್ಟಿತು.

ಹಿಂದಿನಷ್ಟು ಜನ ಸೇರುತ್ತಿಲ್ಲ ಎಂದು ಗೊತ್ತಾದ ಕೂಡಲೇ ಆಡಳಿತಾರೂಢ ಪಕ್ಷ ಚಳವಳಿಗಾರರನ್ನು ಕರೆಸಿ ಮಾತನಾಡಲು ಕೂಡಾ ಹೋಗದೆ ಸುಮ್ಮನಾಯಿತು, ಜನ ಕಡಿಮೆ ಸೇರುತ್ತಿದ್ದಾರೆ ಎಂದು ಗೊತ್ತಾದ ಕೂಡಲೇ ಮಾಧ್ಯಮಗಳು ಕೂಡಾ ಹಿಂದೆ ಸರಿದುಬಿಟ್ಟವು. ಅಣ್ಣಾತಂಡ ಯುದ್ಧಮುಗಿಯವ ಮೊದಲೇ ಶಸ್ತ್ರತ್ಯಾಗ ಮಾಡಲು ಮುಖ್ಯ ಕಾರಣ ತಮ್ಮ ಹಿಂದೆ ಲಕ್ಷಲಕ್ಷ ಸಂಖ್ಯೆಯಲ್ಲಿದ್ದೇವೆ ಎಂಬ ನಂಬಿಕೆ ಹುಟ್ಟಿಸಿದ್ದ ಜನ ದೂರವಾಗಿದ್ದು.

ಈ ಜನ ಹೀಗೆ ಯಾಕೆ ವರ್ತಿಸಿದರು ಎನ್ನುವುದನ್ನು ವಿಶ್ಲೇಷಿಸುವ ಮೊದಲು ಇವರು ಯಾರು ಎನ್ನುವುದನ್ನು ತಿಳಿದುಕೊಳ್ಳಬೇಕಾಗುತ್ತದೆ. ನಮ್ಮಲ್ಲಿ ನಡೆಯುವ ಚಳವಳಿಗಳನ್ನು ಒಂದು ನಿರ್ದಿಷ್ಟವಾದ ಆವರಣದೊಳಗೆ ಸೇರಿಸುವುದು ಕಷ್ಟವಾದರೂ ಸ್ಥೂಲವಾಗಿ ಇವುಗಳನ್ನು ರಾಜಕೀಯ ಮತ್ತು ರಾಜಕೀಯೇತರ  ಎಂದು ಗುರುತಿಸಬಹುದು.

ಈ ವ್ಯಾಖ್ಯಾನ ಕೂಡಾ ಚಳವಳಿಗಳ ಸ್ಪಷ್ಟ ಚಿತ್ರವನ್ನು ನೀಡುವುದಿಲ್ಲ. ರಾಜಕೀಯ ಉದ್ದೇಶದ ಚಳವಳಿಗಳ ಬಗ್ಗೆ ಯಾವುದೇ ಗೊಂದಲ ಇಲ್ಲ. ಉದಾಹರಣೆಗೆ ಕಾಂಗ್ರೆಸ್,ಬಿಜೆಪಿ, ಕಮ್ಯುನಿಸ್ಟ್ ಇತ್ಯಾದಿ ಪಕ್ಷಗಳು ನಡೆಸುವ ಚಳವಳಿಗಳು.

ಇಲ್ಲಿ ಎಲ್ಲವೂ ಪಾರದರ್ಶಕ. ಸಮಸ್ಯೆ ರಾಜಕೀಯೇತರ ಚಳವಳಿಗಳದ್ದು. ನಿರ್ದಿಷ್ಟವಾದ ರಾಜಕೀಯ ಸಿದ್ಧಾಂತವನ್ನು ಹೊಂದಿಯೂ ಚುನಾವಣಾ ರಾಜಕೀಯದಿಂದ ದೂರವಾಗಿರುವ ರಾಜಕೀಯೇತರ ಚಳವಳಿಗಳಿವೆ.

ಇದೇ ರೀತಿ  ರಾಜಕೀಯೇತರ ಚಳವಳಿಗಳಾಗಿ ಪ್ರಾರಂಭಗೊಂಡು ಕ್ರಮೇಣ ನೇರ ಚುನಾವಣೆಯಲ್ಲಿ ಪಾಲ್ಗೊಂಡ ಚಳವಳಿಗಳೂ ಇವೆ. ಇದಕ್ಕೆ ಉತ್ತಮ ಉದಾಹರಣೆ ಕರ್ನಾಟಕವೂ ಸೇರಿದಂತೆ ದೇಶದ ಬೇರೆಬೇರೆ ಭಾಗಗಳಲ್ಲಿನ ರೈತ ಮತ್ತು ದಲಿತ ಚಳವಳಿಗಳು. ರಾಜಕೀಯ ಚಳವಳಿಗಳಲ್ಲಿ ಭಾಗವಹಿಸಿದವರು ಒಂದು ಪಕ್ಷದ ಸಿದ್ಧಾಂತಕ್ಕೆ ಬದ್ದರಾಗಿರುವವರು.

ರಾಜಕೀಯೇತರ ಚಳವಳಿಗೆ ವಿಶಾಲವಾದ ಹರಹು ಇರುತ್ತದೆ. ಕಾರ್ಮಿಕರು, ದಲಿತರು, ಮಹಿಳೆಯರು, ವಿದ್ಯಾರ್ಥಿಗಳು ಇಲ್ಲವೆ ಭೂಮಿ ಕಳೆದುಕೊಂಡವರು, ಮನೆ ಕಳೆದುಕೊಂಡವರು,ಅನ್ಯಾಯಕ್ಕೀಡಾದವರು...

ಹೀಗೆ ಬೇರೆಬೇರೆ ಜನವರ್ಗವನ್ನು ನಿರ್ದಿಷ್ಟವಾಗಿ ಗುರಿಯಾಗಿಟ್ಟುಕೊಂಡು ಈ ಚಳವಳಿಗಳು ನಡೆಯುತ್ತಿರುತ್ತವೆ. ಈ ಎರಡೂ ಬಗೆಯ ಚಳವಳಿಗಳಿಗೆ ಸ್ಪಷ್ಟವಾದ ಐಡೆಂಟಿಟಿ ಇರುತ್ತದೆ. ಇದರಿಂದಾಗಿ ಚಳವಳಿಯ ನಾಯಕರಿಗೆ ಕೂಡಾ ತಮ್ಮ ಉದ್ದೇಶ ಮತ್ತು ಸಾಗುವ ದಾರಿಯ ಬಗ್ಗೆ ಸ್ಪಷ್ಟತೆ ಇರುತ್ತದೆ.

 ಆದರೆ ಬಹಳ ದೊಡ್ಡ ಕ್ಯಾನ್‌ವಾಸ್ ಇಟ್ಟುಕೊಂಡು ಪ್ರಾರಂಭವಾದ ಅಣ್ಣಾಚಳವಳಿಗೆ ಒಂದು ನಿರ್ದಿಷ್ಟ ಐಡೆಂಟಿಟಿ ಇರಲಿಲ್ಲ. ಇದು ಈ ಚಳವಳಿಯ ಶಕ್ತಿಯೂ ಹೌದು, ದೌರ್ಬಲ್ಯ ಕೂಡಾ. ಯಾವುದೇ ರಾಜಕೀಯ ಪಕ್ಷದ ಜತೆಗೆ ಗುರುತಿಸಿಕೊಳ್ಳದವರು ಮಾತ್ರವಲ್ಲ, ಗುರುತಿಸಿಕೊಂಡವರು ಕೂಡಾ ಎದೆಮೇಲಿದ್ದ ಪಕ್ಷದ ಬ್ಯಾಡ್ಜ್‌ಗಳನ್ನು ಕಿಸೆಯಲ್ಲಿಟ್ಟುಕೊಂಡು ಅಣ್ಣಾಬ್ಯಾಡ್ಜ್ ಧರಿಸಿ ಉಪವಾಸ ಕೂತಿದ್ದರು.

ಭ್ರಷ್ಟಾಚಾರ ಎನ್ನುವುದು ಈ ದೇಶದ ಬಡವನಿಂದ ಹಿಡಿದು ಶ್ರಿಮಂತರವರೆಗೆ, ಅಶಿಕ್ಷಿತರಿಂದ ಹಿಡಿದು ಶಿಕ್ಷಿತರವರೆಗೆ ಎಲ್ಲರನ್ನೂ ಆವರಿಸಿರುವ ಸಮಸ್ಯೆಯಾಗಿರುವ ಕಾರಣ ನಮ್ಮ ಗುರಿ ದೇಶದ 120 ಕೋಟಿ ಜನ ಎಂದು ಅಣ್ಣಾತಂಡ ತಿಳಿದುಕೊಂಡುಬಿಟ್ಟಿತು.

ತಂಡದ ಸದಸ್ಯರು ಎಲ್ಲರನ್ನೂ ಬನ್ನಿಬನ್ನಿ ಎಂದು ಕೈಬೀಸಿ ಕರೆಯಲಾರಂಭಿಸಿದರು. ಹೀಗೆ ಬಂದವರಲ್ಲಿ ಬಹುಸಂಖ್ಯಾತರು ಮಧ್ಯಮವರ್ಗಕ್ಕೆ ಸೇರಿರುವ ನಗರ ಕೇಂದ್ರಿತ, ಉದ್ಯೋಗಸ್ಥ, ಸದಾ ಸುರಕ್ಷತೆಯ ಕಕ್ಷೆಯೊಳಗೆ ಇರಬೇಕೆಂದು ಬಯಸುವ ಮತ್ತು ಯಾವುದೇ ಚಳವಳಿಯಲ್ಲಿ ಭಾಗವವಹಿಸಿ ಕಷ್ಟ-ನಷ್ಟ ಅನುಭವಿಸದವರು.

ತುರ್ತುಪರಿಸ್ಥಿತಿಯ ನಂತರದ ದಿನಗಳಲ್ಲಿ ಹುಟ್ಟಿದ ಮತ್ತು ಆರ್ಥಿಕ ಉದಾರೀಕರಣದ ಯುಗದಲ್ಲಿ ಕಣ್ಣುಬಿಟ್ಟ 25-35 ವಯಸ್ಸಿನ ಆಜುಬಾಜಿನ ಈ ಯುವವರ್ಗ  ಲಾಭ-ನಷ್ಟದ ಲೆಕ್ಕಾಚಾರ ಇಟ್ಟುಕೊಂಡೇ ಮುಂದೆ ಹೆಜ್ಜೆ ಇಡುವವರು. `ಸೋಡಾಗ್ಯಾಸ್` ರೀತಿ ಒಮ್ಮೆಲೇ ಚಿಮ್ಮಿದ ಈ `ಯುವಬೆಂಬಲವನ್ನು ಅಣ್ಣಾತಂಡ ನಂಬಿತು. ನಂಬಿಕೆ ಕೈಕೊಟ್ಟಿತು.

 ಈ ಮಧ್ಯಮ ವರ್ಗ ಭಾರತದಲ್ಲಿ ಮಾತ್ರವಲ್ಲ ಪ್ರಪಂಚದ ಯಾವುದೇ ದೇಶದಲ್ಲಿ ರಾಜಕೀಯ ಇಲ್ಲವೆ ಸಾಮಾಜಿಕ ಬದಲಾವಣೆಯಲ್ಲಿ ಭಾಗವಹಿಸಿಲ್ಲ. ಇದನ್ನು ಹೇಳಿದಾಗ ಕೆಲವರು ಅರಬ್‌ರಾಷ್ಟ್ರಗಳಲ್ಲಿನ ಇತ್ತೀಚಿನ ಬೆಳವಣಿಗೆಗಳ ಉದಾಹರಣೆ ಕೊಡಬಹುದು. ಅಲ್ಲಿನ ಮಧ್ಯಮವರ್ಗದಿಂದಲೇ ಚಳವಳಿ ಪ್ರಾರಂಭವಾದರೂ ಅದು ಅನ್ಯಾಯಕ್ಕೀಡಾದ ಎಲ್ಲ ವರ್ಗಗಳನ್ನು ಜತೆಯಲ್ಲಿ ಕಟ್ಟಿಕೊಂಡು ಬೆಳೆಯುತ್ತಾಹೋಯಿತು.

ಆ ದೇಶಗಳಲ್ಲಿ ಸರ್ವಾಧಿಕಾರದಿಂದ ನಲುಗಿಹೋದ ಸಾಮಾನ್ಯ ಜನ ಅದರಲ್ಲಿ ಭಾಗವಹಿಸಿದ್ದರು. ಪ್ರಾಣವೊಂದನ್ನು ಬಿಟ್ಟು ಕಳೆದುಕೊಳ್ಳಲು ಬೇರೆ ಏನೂ ಇಲ್ಲದವರು ಅವರು. ಇಲ್ಲಿ ಹಾಗಾಗಲಿಲ್ಲ. ಅಣ್ಣಾಚಳವಳಿ ಎತ್ತಿದ ಭ್ರಷ್ಟಾಚಾರದ ವಿಷಯ ಎಲ್ಲರಿಗೆ ಸಂಬಂಧಿಸಿದ್ದೇ ಆಗಿದ್ದರೂ ಅದರ ತೀವ್ರತೆಯ ಅನುಭವ ಬೇರೆಬೇರೆ ವರ್ಗದ ಜನರಿಗೆ ಬೇರೆಬೇರೆ ರೀತಿಯದಾಗಿದೆ.

ಬೆಳೆದ ಬೆಳೆಗೆ ಸೂಕ್ತ ಬೆಲೆ ಸಿಗುತ್ತಿಲ್ಲ ಎನ್ನುವ ರೈತ, ಹೆಚ್ಚು ಸಂಬಳ ಸಿಗುತ್ತಿಲ್ಲ ಎನ್ನುವ ಕಾರ್ಮಿಕ, ಲಿಂಗತಾರತಮ್ಯ  ನಡೆಯುತ್ತಿದೆ ಎನ್ನುವ ಮಹಿಳೆ, ಜಾತಿತಾರತಮ್ಯದಿಂದಾಗಿ ದೌರ್ಜನ್ಯ ನಡೆಯುತ್ತಿದೆ ಎನ್ನುವ ದಲಿತರು, ಉದ್ಯೋಗ ಸಿಗುತ್ತಿಲ್ಲ ಎನ್ನುವ ಯುವಕರು..ಹೀಗೆ ಸಮಸ್ಯೆಗಳು ಹತ್ತಾರು.

ಇವರ ಕಷ್ಟಗಳ ಪಟ್ಟಿಯಲ್ಲಿ ಭ್ರಷ್ಟಾಚಾರ  ಇದ್ದರೂ ಅದು ಮೊದಲ ಸ್ಥಾನದಲ್ಲಿ ಇಲ್ಲ. ಭ್ರಷ್ಟಾಚಾರ ನಿರ್ಮೂಲನೆ ಇವರ ಕಷ್ಟಪರಿಹಾರಕ್ಕೆ ನೆರವಾಗಲೂಬಹುದು. ಆದರೆ ಇದನ್ನು ಯಾರೂ ಅವರಿಗೆ ಮನವರಿಕೆ ಮಾಡಿಕೊಟ್ಟಿಲ್ಲ.

ಆದುದರಿಂದ ಅವರಲ್ಲಿ ಹೆಚ್ಚಿನ ಮಂದಿ ಭ್ರಷ್ಟಾಚಾರ ವಿರೋಧಿ ಚಳವಳಿಯಿಂದ ದೂರವೇ ಉಳಿದುಬಿಟ್ಟರು. ಅವರನ್ನು ಹತ್ತಿರಕ್ಕೆ ಕರೆದುಕೊಂಡು ಬರುವ ಪ್ರಯತ್ನವನ್ನೂ ಯಾರೂ ಮಾಡಲಿಲ್ಲ. ಈ ಕಾರಣದಿಂದಾಗಿಯೇ ಜನಲೋಕಪಾಲರ ನೇಮಕಕ್ಕಾಗಿ ನಡೆದ ಹೋರಾಟ ನಿಜವಾದ ಅರ್ಥದಲ್ಲಿ ಜನಚಳವಳಿ ಆಗಲೇ ಇಲ್ಲ.

ಅಣ್ಣಾಚಳವಳಿ ವಿಫಲಗೊಂಡ ಮಾತ್ರಕ್ಕೆ ಮುಂದಿನ ಎಲ್ಲ ದಾರಿಗಳು ಮುಚ್ಚಿಹೋಗಿವೆ ಎಂದರ್ಥ ಅಲ್ಲ. ರಾಷ್ಟ್ರೀಯ ಪಕ್ಷಗಳು ನಿಧಾನವಾಗಿ ಮರೆಗೆ ಸರಿದು ಪ್ರಾದೇಶಿಕ ಪಕ್ಷಗಳು ವಿಜೃಂಭಿಸುತ್ತಿರುವ ಈಗಿನ ರಾಜಕಾರಣದಿಂದಲೂ ಚಳವಳಿಗಾರರೂ ಕಲಿಯಬೇಕಾದ ಪಾಠ ಇದೆ.

ಬಹುಶಃ ರಾಷ್ಟ್ರಮಟ್ಟದ ಒಂದು ಚಳವಳಿಯನ್ನು ಇನ್ನುಮುಂದೆ ನಡೆಸಿಕೊಂಡು ಹೋಗುವುದು ಸಾಧ್ಯ ಇಲ್ಲವೇನೋ? ಇದರಿಂದ ನಿರಾಶರಾಗಬೇಕಾಗಿಲ್ಲ, ಈಗಲೂ ದೇಶದ ನಾನಾಭಾಗಗಳಲ್ಲಿ ನೀರು, ಭೂಮಿ, ಉದ್ಯೊಗ, ಶಿಕ್ಷಣ, ಆರೋಗ್ಯ, ಆತ್ಮಗೌರವ... ಹೀಗೆ ನಾನಾ ಉದ್ದೇಶದ ಚಳವಳಿಗಳು ತಮ್ಮ ಮಿತಿಯಲ್ಲಿ ನಡೆಯುತ್ತಿರುತ್ತವೆ.

ಪ್ರಜಾಪ್ರಭುತ್ವವನ್ನು ಜೀವಂತವಾಗಿ ಮತ್ತು ಆರೋಗ್ಯಪೂರ್ಣವಾಗಿ ಇಟ್ಟಿರುವ ಈ ಸಣ್ಣಸಣ್ಣ ಚಳವಳಿಗಳೇ ಭವಿಷ್ಯದ ಭರವಸೆಗಳು. ದೊಡ್ಡ ಚಳವಳಿಗಳ ಕಾಲ ಮುಗಿದುಹೋಗಿದೆ.
 
ಕೃಪೆ : ಪ್ರಜಾವಾಣಿ

Thursday, July 12, 2012

शोधिशी मानवा !

 उत्तम कांबळे



पृथ्वी सूर्याभोवती फिरतेय हा सिद्धान्त मांडला गेला तेव्हा काय काय घडलं आठवा... निसर्गातला देव माणसानं स्वत-त आणून अहंब्रह्म म्हटलं तेव्हा काय काय घडलं आठवा... एवढंच काय, देवाच्या दर्शनासाठी कुठं पाणी पेटलं आणि कुठं इमारत हलली, हेही आठवा गड्यांनू...

रोज नऊ वाजता येणारी मोलकरीण आज तब्बल दीड तास उशिरा, म्हणजे साडेदहा वाजता, आली...आता काय होणार, याचा अंदाज यायला वेळ नाही लागला...मोलकरणीला होणाऱ्या उशिरातून झालेली अनेक महायुद्धं मी स्वत- पाहिली होती...आता हे आजचं महायुद्ध कितवं... हजारावं, दोन हजारावं...सांगता येत नव्हतं...पण मोलकरीण मोठी हुशार, आत पाऊल टाकताच ती म्हणाली, ""ताई, देवाला जाऊन आले. वाटंतच भंडारा होता... ही ।। गर्दी देवासाठी... देवधर्म कुणाला सुटलाय का ताई..?''

तिच्या उशिरावरून होणाऱ्या संभाव्य महायुद्धाची चाहूल न ऐकताच ती बोलू लागली...बोलता बोलता काम करू लागली...ताईनं एक शब्दही काढला नाही. कारण, मोलकरणीनं आज थेट देवाचं अस्त्र वापरलं होतं. तसं आपलं जीवन मोलकरणीशी जसं जोडलंय, तसं देवा-धर्माशीही जोडलं गेलंय. अलीकडं बायकाही मोलकरीण आली, की "बरं झालं बाबा जणू देवच आला', असं म्हणत सुटकेचा श्‍वास सोडतात...नाहीतर आपले काही देवही जातातच, की जातं ओढायला, भांगलायला, चिखल तुडवायला...

मोलकरणीनं आज वापरलेलं देवास्त्र थोडं वेगळं वाटलं मला. कारण, चारच दिवसांपूर्वी स्वित्झर्लंडमध्ये असंख्य शास्त्रज्ञांनी मिळून चाळीस वर्षांच्या अथक्‌ प्रयोगानंतर देवकण शोधून काढल्याची बातमी थडकली. माणसाचं एक बरंय, त्याला कणात, मनात, रेणूत, अणूत, पाल्यात, फळात, मातीत, दगडात कुठंही देव सापडतो. खरं तर सहजपणे देव सापडण्यामागं माणसाचीच तशी सोय असते. त्याच्या सोयीनुसार तो सारं काही घडवत राहतो. देवाच्या शोधासाठी तो जटा वाढवून कोणत्या तरी डोंगराच्या टक्कुऱ्यावरही बसतो. स्फोट घडवून बघतो. पृथ्वीचा गर्भ चिरून बघतो. समुद्राचा तळ शोधून बघतो आणि काहीच न करता कणात, मनातही देव सापडल्याचा दावा करतो. स्वत-तही देव बघतो. दुसऱ्यातही बघतो, पशू-पक्ष्यांतही देव बघतो... बघता बघता त्याचा वराह-अवतारही होतो...माणूस स्वत- सारं काही मिळवतो आणि सारं काही देवाचं आहे, असं जाहीर करतो. पूर्वी वारणेच्या खोऱ्यातला दरोडेखोरही दरोडा टाकायला जाताना देवाचा आशीर्वाद मागायचा आणि आता चंद्रावर जाणारा माणूस, पृथ्वीच्या बेंबीचं टोक शोधणारा माणूसही देवाचा आशीर्वाद मागतो. सारं काही देवाचं आहे, तोच हलवतो, तोच चालवतो, तोच बोलवतो, एवढंच काय, त्याच्या आज्ञेवाचून झाडाचं पान हलत नाही, की ते खाली पडत नाही...काय काय करून ठेवलंय माणसानं या देवाचं...देवासाठी तो काहीही करू शकतो...महायुद्धं घडवू शकतो, धर्मस्थळं पाडू शकतो, कुठंही अतिक्रमण करून देवाची प्रतिष्ठापना करू शकतो आणि एवढंच काय, कुणी तरी पुढं जाऊन स्वत-लाच देव जाहीर करून बसतो...अनादी कालापासून देवाच्या कल्पनेचा हा खेळ चालू आहे. कुणी त्याला निर्गुण, निराकार म्हणतं, कुणी द्वैत-अद्वैतात बसवतं...कुणी त्याचा प्रतिनिधी म्हणून अवतरतं...कुणी त्याचा सेवक होऊन स्वत-लाच देवाचा अंश म्हणून जाहीर करतं, तर कुणी देवाला चॅलेंज देण्याच्या प्रयत्नात प्राण गमावून बसतं...पृथ्वी सूर्याभोवती फिरतेय हा सिद्धान्त मांडला गेला तेव्हा काय काय घडलं आठवा...निसर्गातला देव माणसानं स्वत-त आणून अहंब्रह्म म्हटलं तेव्हा काय काय घडलं आठवा...देवाची वाणी न ऐकणाऱ्यांचं काय काय झालं आठवा...एवढंच काय, देवाच्या दर्शनासाठी कुठं पाणी पेटलं आणि कुठं इमारत हलली, हेही आठवा गड्यांनू...

साला, काय अस्त्र वापरलं आज मोलकरणीनं! ग्रेटच आहे ही बाई...मीही या अस्त्राचा विचार करू लागलो... असं अस्त्र, की एका महायुद्धाला जन्मापूर्वीच मारणारं...भ्रूणहत्येप्रमाणं युद्धहत्या करणारं...

खूप विचार करू लागलो देवाचा...पुन्हा पुन्हा विचार करू लागलो...विचार करत करत माणूस चार पायांवरून दोन पायांवर आला...त्यानं आपले पुढचे दोन पाय हे हात म्हणून वापरायला सुरवात केली, तिथंपर्यंत पोचलो...माणूस निसर्गातून बाहेर पडला होता आणि निसर्गाबाहेर जगण्यासाठी त्याला निसर्गाइतकी महाशक्ती हवी होती. निसर्गात जे जे महान आहे, शक्तिमान आहे, त्याची शक्ती कुठून येते आणि ती आपल्याला कधी मिळंल, याचा विचार तो करू लागला...आपल्यापेक्षा काही तरी प्रचंड शक्तिमान आहे, जे क्षय पावत नाही, मरत नाही, ते ते त्याला हवं होतं... त्याला सूर्याप्रमाणं तेजोमय, डोंगरासारखं अचल, सागरासारखं विशाल व्हायचं होतं; पण ते शक्‍य नव्हतं...कारण, माणसाला मरण आहे... सजीवाला मरण आहे... मरण चुकवायचं कसं, शक्तिमान व्हायचं कसं, याची उत्तरं शोधू लागला माणूस...महाशक्तींना शरण जाऊ लागला माणूस...या शक्तींसाठी माणसानं एक शब्द शोधून काढला - देव..! मग देवाचं ठिकाण शोधण्याचा प्रयत्न तो करू लागला...त्याला ते ठिकाण सापडलं स्वर्गात...मग स्वर्गात पोचण्यासाठी माणसानं आत्मा काढला शोधून...आता माणूस मरणार नव्हता... मरणानंतरही आत्म्याच्या रूपानं जगणार होता...त्याचं मरणोत्तर जीवन सुरू होणार होतं...मेल्यानंतर कोणता जन्म मिळणार, याची गणितंही मांडू लागला माणूस...सारे सारे पुनर्जन्म कैद करून त्यानं भरले कोणत्या तरी डेथ किंवा रिबर्थ साइटवर...आता स्क्रीनवरच्या माऊसचा वापर करून क्‍लिक करून तो शोधू शकतो स्वत-चा पुनर्जन्म... प्रश्‍न एवढाच, की मरणानंतर कुणीही हे सारं सांगायला आणि चौकात राहून भाषण करायला परत नाही येत...मला नेहमीच एक प्रश्‍न पडत आलाय...अर्थात, तो साऱ्यांनाच पडतो...वय वाढायला लागलं, की त्याची तीव्रता वाढायला लागते...प्रश्‍न असा, की माणसाला मरण नसतं तर?.. किती छोटा प्रश्‍न; पण उत्तरं आभाळाएवढी...

एक - त्याला देवा-धर्माची गरज भासली असती काय?
दोन - आत्म्याचा विषय जन्माला असता काय?
तीन - स्वर्ग-नरक जन्माला आले असते काय?
चार - मी देवाची भेट घडवून देतो, असा दावा करणारी व्यवस्था जन्माला आली असती काय?
पाच - सोच, साथ क्‍या जानेवाला है, असं चकवा देणारं वाक्‍य जन्माला आलं असतं काय?
सहा - नशिबाची कल्पना जन्माला असती काय?
आणि सात - जितना तेरा है उतनाही तेरा है, असं वाक्‍य कुणी उच्चारलं असतं काय?
अजूनही काही प्रश्‍न आहेतच आहेत... साऱ्यांकडंच ते आहेत...

जगण्याच्या शर्यतीत काही जण ते तुडवत जातात; तर काही जण याच प्रश्‍नांचा इव्हेंट तयार करतात... झालंच तर स्पिरिच्युअल इकॉनॉमी तयार करतात...

पूर्वी काही मुलाखतींत प्रश्‍न विचारले जायचे... देव आहे, की नाही? एका वाक्‍यात उत्तर द्या... उत्तर असायचं, ज्याचा विश्‍वास आहे, त्याच्यासाठी देव आहे आणि ज्याचा विश्‍वास नाही, त्याच्यासाठी देव नाही...

देवावरच्या प्रश्‍नांचं असं उत्तर देऊन मोठे झालेले अनेक बाबू आहेत... टेबलावरच्या काचेखाली देवाचा फोटो ठेवून दोन नंबरचा व्यवहार करणारेही आहेत... माणूस असा दुभंगलेला... देव आहे आणि नाही असं एकाच वेळी सांगणारा... देवाला घाबरणारा आणि न घाबरणारा... देवाकडून महाशक्ती घेऊन स्वत- अमर्त्य होऊ पाहणारा...एकाच वेळी देवाला राजकारणातल्या मतांत आणि मंदिरात बंदिस्त करू पाहणारा माणूस...खरं तर देवाऐवजी "जय हो माणूस!' असंच म्हणायला हवं... माणसानं देवाला गळ्यातील ताइतात, बोटातल्या अंगठीत, लग्नातल्या सुपारीत, तुळशीच्या पानात, कपाळावरल्या कुंकू-भंडाऱ्यात जसं बंदिस्त केलं, तसं वेगवेगळ्या व्याख्यांमध्येही केलं बंदिस्त... व्याख्या तर बघा देवासाठी केलेल्या...

-विश्‍वाचं अस्तित्व इतकं तरल, की त्याचं वर्णनच अशक्‍य आहे. जे काही वर्णन आहे, ती केवळ कल्पना आहे.
(ताओवाद)

- ईश्‍वर हे जगाच्या निर्मितीचं कारण मानल्यास मानवी इच्छेचं स्वातंत्र्य आणि मानवी प्रयत्न याला वाव राहत नाही.
(बौद्ध तत्त्वज्ञान - संदर्भ डॉ. आ. ह. साळुंखे)

-माझा उगम कुणीच जाणू शकत नाही. ज्याला आदि नाही, अंत नाही, अशा सर्व भ्रमांपासून, अनिष्टांपासून मी आहे मुक्त.(भगवद्‌गीता)

-प्रारंभी शब्द होता. शब्द देवासह होता. शब्द देव होता, तोच प्रारंभी देवासह होता. सर्व काही त्याच्याद्वारे झालं आणि जे काही झालं, ते त्याच्यावाचून झालं नाही.
(नवा करार जॉनकृत शुभ वर्तमान अध्याय - 1-1 - 3)

-तू असं केवळ तत्त्व आहेस आणि तुझ्यातूनच हे सर्व अस्तित्व दृश्‍यमान झालं आहे.(सूफी पंथ)

-एकच असं ते चिरंतन, सार्वत्रिक सत्य आहे. सर्व दृश्‍य-अदृश्‍यांचा निर्माता कालातीत, द्वेषरहित, स्वनिर्मित असे ते "सत्त्व' आहे.(गुरुग्रंथ साहिब)

-सुरवातीला देवानं स्वर्ग व पृथ्वी निर्माण केली. कोणत्या पोकळीतून ती निर्माण केलेली नाही, तर जिथं राहता येईल, अशा रीतीनं ती निर्माण केली आहे. हा निर्माता एकमेव आहे.(यहुदी)

या सगळ्या व्याख्या वाचत पुन्हा एकदा "बिग बॅंग'च्या प्रयोगाकडं पाहू लागलो... प्रयोगकर्ते म्हणतात, कण सापडला आहे... जेव्हा एक कण सापडतो, तेव्हा त्याचा अर्थ अद्याप महापर्वत सापडायचा असतो. मेघ कसे दाटतात? पाऊस कसा येतो? बासरीतून सूर कसे बाहेर पडतात? पाकळ्या बाजूला सारून गंध कसा हसतो? अशा आशयाचं गाणंही मराठीत आहे...पुन्हा तेही परमेश्‍वराच्या शोधाचाच एक भाग आहे... शेवटी पुन्हा तोच प्रश्‍न... परमेश्‍वर कणात, मनात, हृदयात, स्फोटात, प्रयोगात, की आणखी कुठं शोधायचा? मोलकरणीनं आणलेल्या भंडाऱ्यातील प्रसादात... उशिरा येऊनही तिच्याशी भांडण न करण्याच्या वृत्तीत, की आणखी कुठं शोधायचा परमेश्‍वर...? मुळात तो शोधायचा का आणि शोधायचाच असंल, तर त्याचा संबंध आपल्या (माणसाच्या) स्वार्थाशी, दुर्बलतेशी, की आणखी कशाशी आहे, याचाही शोध घ्यायला हवा... पण असे प्रयोग झालेले नाहीत, होणारही नाहीत... माणूस आणि त्याचं न दिसणारं भावविश्‍व शोधण्याचे प्रयोग होत नाहीत... आपलं खरं रूप माणसाला दाखवायचं नसतं...भीती वाटते त्याला... स्वित्झर्लंडमध्ये जे झालं ते नीट समजून घ्यायला हवं. तिथं देवकण नाही सापडला, तर देवाच्या कल्पनेप्रमाणं सर्वव्यापी असलेला कण सापडला...त्याला नाव मिळालंय "देव'कण... याचा अर्थ देव शोधण्याची मोहीम संपलेली नाही... ती चालू ठेवायची, की नाही आणि खरंच उद्या देव सापडला, तर काय करायचं, हा ज्याचा त्याचा प्रश्‍न आहे... 

by - उत्तम कांबळे uttam.kamble@esakal.com

Thursday, December 29, 2011

Why You Should Not Support Anna Hazare’s LokPal Bill


Compromise with Abhay Kumar
Explaining Postmodernism by Dr. Stephen Hicks »

As an Indian, I am not in favor of Anna Hazare‘s Lokpal bill in any form.

Anna Hazare wants to form an autonomous authority that will monitor the activities of politicians and bureaucrats (i.e., the existing government) and hold them accountable for their actions.

Anti-Anna Hazare

In essence, that’s creating a powerful, autonomous, non-representative authority, with a leader at the helm, who will literally have access to the monopoly power of the judiciary and law-enforcement over the democratic government.

In other words, Anna Hazare wants to institute yet another government and bureaucratic body (a non-elected one) to monitor the current, elected government. This is simply creating an extra-governmental body to do the functions which a proper government should be doing anyway as part of its very reason for existing. When a government goes bad, one should not simply institute another government body on top of it! One should work to fix the current government we have.

Moreover, Anna Hazare’s authoritative body can be susceptible to same risks of corruption and bribery that the central government is mired in.

More importantly, however, his solution has the potential to produce a more insidious form of dictatorial corruption of power because of its non-elective, autonomous, and non-accountable nature.

There is no other solution to corruption other than denying the politicians and bureaucrats a monopoly on the “supply” of the goods and services that they currently control. Which means, we need to kick the government out of every aspect of our private affairs and release the supply of goods and services into private, competitive hands. This will ensure that there is no political monopoly on the services or goods provided and the people will decide what to purchase and at what price (such as driver’s licenses, etc.)

The government should have no role to play in cricket, commonwealth games, building metros, railways, banks, hospitals, religion, marriage, etc.

THE SOLUTION TO CORRUPTION: GET RID OF THE GOVERNMENT FROM PRIVATE MATTERS OF CITIZENS. Ask for LESS GOVERNMENT not MORE GOVERNMENT!

It is frustrating to see this nation plunged into anarchy by the right-wing fascist dictator Anna Hazare.

His strong-arm tactics cloaked in “Gandhian” garb are shamelessly of the grammar of blackmailers. He is holding a democratically elected government ransom to his demands, effectively undermining the process by which we the people of India chose to elect our representatives in the government–thereby not only insulting us in our face but also mocking the entire process of democracy itself.

How can laws be introduced and passed in a nation if conflicting and contradictory sides both sit on suicide-fasting missions? Who does the government bear the responsibility of saving from death?

Those who think Anna Hazare’s tactics are peaceful do not have a clue about who their hero is. He is the man who encourages punishing alcoholics in his village by flogging them in public; he condones chopping off hands of thieves; he believes cable television should be banned because of its “corrupting” influence on the people. Here is an excerpt from an interview with Anna Hazare:

“…in many things, along with Gandhi we have to look towards Shivaji. Patel committed a mistake, and Shivaji had the man’s hands cut off. This policy of Chhatrapati, in many ways, we have to think about. Hundred per cent non-violence is not possible. Sometimes, even this has to be done, and that is why I have been saying that [corrupt] people should be hanged…” Anna

Read more of where this came from: Open Magazine’s brilliant article Spare Us the Gandhian Halo.

I highly recommend the following articles for their clarity of thought and analysis, which is unfortunately missing from the current crop of un-thinking, uncritical Anna followers. 

ದಾಸಿಮಯ್ಯನ ವಚನ

ಒಡಲುಗೊಂಡವ ಹಸಿವ;  ಒಡಲುಗೊಂಡವ ಹುಸಿವ  ಒಡಲುಗೊಂಡವನೆಂದು  ನೀನೆನ್ನ ಜರಿದೊಮ್ಮೆ ನುಡಿಯದಿರ ನೀನೆನ್ನಂತೆ ಒಮ್ಮೆ ಒಡಲುಗೊಂಡು ನೋಡ ರಾಮನಾಥ.