Showing posts with label ಹುನ್ನಾರ. Show all posts
Showing posts with label ಹುನ್ನಾರ. Show all posts

Thursday, October 17, 2013

'ಇಂಗಳೆ ಮಾರ್ಗ' ಸಿನೇಮಾ ಮಾಡುವ ಮುನ್ನ.....

ಡಾ. ಸಿದ್ರಾಮ ಕಾರಣಿಕ
ದೇವರಾಯ ಇಂಗಳೆಯವರ ಬಗ್ಗೆ 'ಇಂಗಳೆ ಮಾರ್ಗ' ಎನ್ನುವ ಕನ್ನಡ ಸಿನೇಮಾವೊಂದು ರೂಪುಗೊಳ್ಳುತ್ತಿರುವುದು ಖುಷಿಯ ಸಂಗತಿ. ಅಂಥ ಪ್ರಯತ್ನ ಮಾಡುತ್ತಿರುವವರು ನಿಜಕ್ಕೂ ಶ್ಲಾಘನೀಯರು. 
ಆದರೆ ವಾಸ್ತವ ಇತಿಹಾಸವನ್ನು ಮರೆಮಾಚಿ, ಸುಳ್ಳನ್ನು ತುಂಬಿ ಬಿಡುವ ಮಂದಿ ಬಹಳ ಇದ್ದಾರೆ ಎಂಬುದನ್ನು ಚಿತ್ರದ ನಿರ್ದೇಶಕರು ತಿಳಿಯುವುದು ಉತ್ತಮ ಎಂಬುದು ನನ್ನ ಅನಿಸಿಕೆ ಮಾತ್ರವಲ್ಲ ; ದಲಿತನೊಬ್ಬನ ಇತಿಹಾಸವನ್ನು ತಿರುಚುವ ಕೆಲಸ ಆಗಬಾರದು ಎಂಬ ಕಾಳಜಿಯಾಗಿದೆ. ಬಹುಶಃ ನಿರ್ದೇಶಕರು ಇನ್ನೂ ಕೆಲವು ಸಂಗತಿಗಳನ್ನು ತಿಳಿದುಕೊಳ್ಳಬೇಕಾದ ಅವಶ್ಯಕತೆ ಇದೆ. ಅದು ಸಿನೇಮಾಗೆ ರೋಚಕತೆಯನ್ನೂ ಇತಿಹಾಸದ ದುರಂತವನ್ನೂ ಕಟ್ಟಿಕೊಡಲು ಸಾಧ್ಯವಾಗುತ್ತದೆ. ಚೇಳು ಕಡಿಸಿಕೊಂಡವನಿಗೆ ಮಾತ್ರ ಅದರ ಉರಿ ಗೊತ್ತಿರುತ್ತದೆ ಎಂಬ ವಿಚಾರವೂ ಮನಸ್ಸಿನಲ್ಲಿರಲಿ.

ಡಾ. ಬಾಬಾಸಾಹೇಬ ಅಂಬೇಡ್ಕರರ ವಿಚಾರಧಾರೆಯನ್ನೇ ಬುಡಮೇಲಾಗಿಸುವ ಪ್ರಸಂಗಗಳು ಮೇಲಿಂದ ಮೇಲೆ ಜರಗುತ್ತಿವೆ. ನಿಜವಾದ ದಲಿತರು (ಅಲ್ಪಸಂಖ್ಯಾತರನ್ನೂ ಒಳಗೊಂಡಂತೆ ಹಿಂದುಳಿದವರು, ಅಸ್ಪೃಶ್ಯರು, ಇತ್ಯಾದಿ ಜನಾಂಗ) ಧ್ವನಿ ಎತ್ತಬೇಕಾದ ಅವಶ್ಯಕತೆ ಇದೆ ಎನ್ನುವುದಕ್ಕಿಂತ ಅನಿವಾರ್ಯತೆ ಇದೆ. ದಲಿತರಲ್ಲದವರು ದಲಿತರ ಹೆಸರು ಹೇಳಿಕೊಂಡು, ಕೆಲವು ದಲಿತರನ್ನು ಒಳಗು ಮಾಡಿಕೊಂಡು ಬೆಳೆದದ್ದು ಸಾಕು. ಈಗಲೂ ನಾವು ಬಾಯಿ ಬಿಡದಿದ್ದರೆ ನಮಗೆ ಉಳಿಗಾಲವಿಲ್ಲ. ಪೇಶ್ವಾಯಿ ಹುಳಗಳಿಗೆ ನಾವು ಪಾಠ ಕಲಿಸಲೇಬೇಕು. ವೇದಿಕೆಯೊಂದು ಸಿದ್ಧವಾಗಬೇಕಾದ ತುರ್ತು ಮ್ಮ ಮುಂದೆ ಇದೆ. ಆಗ ನಾನು ಮತ್ತು ನನ್ನಂತೆಯೇ ಇರುವವರು ವಾಸ್ತವದ ಬಗ್ಗೆ ಹೇಳಲು ಮುಂದಾಗುತ್ತಾರೆ. ನಾನಂತೂ ದೇವರಾಯ ಇಂಗಳೆಯವರ ಮೂರು ಪೆಟ್ಟಿಗೆಗಳ ರಹಸ್ಯವನ್ನೂ ಬಿಚ್ಚಿಡುತ್ತೇನೆ. (ಇದನ್ನು ಸುಮಾರು ಎರಡು ವರ್ಷಗಳ ಹಿಂದೆಯೇ ಗುಲ್ಬರ್ಗ ವಿಶ್ವವಿದ್ಯಾಲಯದ ವೇದಿಕೆಯ ಮೇಲೆ ನಿಂತು ಸಾರಿದ್ದೇನೆ) ಬಲಿತ ದಲಿತರನ್ನೂ ದರಿದ್ರ ದಲಿತರನ್ನೂ ಬಿಟ್ಟು ಬೇರೆ ವಿಚಾರ ಮಾಡಬೇಕಿದೆ. ಅಂಬೇಡ್ಕರ್ ಬಿಟ್ಟು ಹೋದ ರಥವನ್ನು ಹಿಂದಕ್ಕೆ ಒಯ್ಯುವವರ ನಡ ಮುರಿಯಬೇಕಿದೆ.

Tuesday, September 03, 2013

ಬೆಳಗಾವಿಯ ದಲಿತ ಸಂಘಟನೆಗಳಿಗೆ, ದಲಿತ ಪಕ್ಷಗಳಿಗೆ ನನ್ನ ಧಿಕ್ಕಾರ !

 
ಬೆಳಗಾವಿಯ ದಲಿತ ಬಂಧುಗಳು ಮಾಡುವ ಕಿತಾಪತಿ ಇದು !
---------------------------------------------------------------

ಸಾಮಾಜಿಕ ನ್ಯಾಯದಡಿ ಕೆಲಸ ಮಾಡುತ್ತಿರುವ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಕುಲಪತಿ ಬಿ.ಆರ್‌. ಅನಂತನ್ಅವರ ವಿರುದ್ಧ ಕೆಲ ಪಟ್ಟಭದ್ರ ಹಿತಾಸಕ್ತಿಗಳು ಇಲ್ಲ ಸಲ್ಲದ ಆರೋಪ ಮಾಡಿ ಅವರಿಗೆ ಮಾನಸಿಕ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ದಲಿತ ಸಂಘಟನೆಗಳು ಹಾಗೂ ಆರ್ಪಿಐ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು
ಮಂಗಳವಾರ ವಿಟಿಯು ಆವರಣದಲ್ಲಿ ಪ್ರತಿಭಟನೆ ನಡೆಸಿದ ಾರ್ಯಕರ್ತರು, ವಿಟಿಯು ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಗಮಿಸಿದ್ದ ಉನ್ನತ ಶಿಕ್ಷಣ ಸಚಿವ ಆರ್‌.ವಿ.ದೇಶಪಾಂಡೆ ಅವರಿಗೆ ಮನವಿ ಸಲ್ಲಿಸಿದರು
ಆರ್ಪಿಐ ಮತ್ತು ದಲಿತ ಮುಖಂಡರು ಮಾತನಾಡಿ, ಕುಲಪತಿ ಅನಂತನ್ಸಾಮಾಜಿಕ ನ್ಯಾಯದ ಪರಿಕಲ್ಪನೆಯಲ್ಲಿ ಕೆಲಸ ಮಾಡಿ ವಿಶ್ವವಿದ್ಯಾಲಯವನ್ನು ಅಭಿವೃದ್ದಿ ಪಡಿಸುತ್ತಿದ್ದಾರೆ. ವಿವಿಯಲ್ಲಿ ನಡೆಯುತ್ತಿರುವ ನೇಮಕಾತಿಯನ್ನು ಅತ್ಯಂತ ಪಾರದರ್ಶಕವಾಗಿ ಮಾಡುತ್ತಿದ್ದಾರೆ. ಆದರೆ ಕೆಲ ಪಟ್ಟಭದ್ರ ಹಿತಾಸಕ್ತಿಗಳು ಅವರ ವಿರುದ್ಧ ಇಲ್ಲ ಸಲ್ಲದ ಆರೋಪ ಮಾಡಿ ಅವರಿಗೆ ಮಾನಸಿಕ ಹಿಂಸೆ ನೀಡುತ್ತಿದ್ದಾರೆ. ಸರಕಾರ ಅವರ ವಿರುದ್ಧ ಬರುತ್ತಿರುವ ಆರೋಪಗಳಿಗೆ ಕಿವಿಗೊಡದೆ ಅವರಿಗೆ ಮುಕ್ತವಾಗಿ ಕೆಲಸ ಮಾಡುವ ವಾತಾವರಣ ಕಲ್ಪಿಸಬೇಕು ಎಂದು ಒತ್ತಾಯಿಸಿದರು
ಮನವಿ ಸ್ವೀಕರಿಸಿ ಮಾತನಾಡಿದ ಸಚಿವ ದೇಶಪಾಂಡೆ, ಸರಕಾರ ಕೇವಲ ನಿರಾಧಾರ ಆರೋಪಗಳಿಂದ ಯಾರ ವಿರುದ್ಧ ಕ್ರಮ ಜರುಗಿಸುವುದಿಲ್ಲ. ಯಾರಿಗೂ ಅನ್ಯಾಯ ಮಾಡುವುದಿಲ್ಲ. ಎಲ್ಲರ ಹಿತ ಕಾಪಾಡುತ್ತದೆ ಎಂದು ಭರವಸೆ ನೀಡಿದರು. (ಉದಯವಾಣಿ ಸುದ್ದಿ : 19/06/2013)
*******************
ಸುದ್ದಿಯನ್ನು ಯಾರಾದರೂ ನಂಬುತ್ತೀರಾ ? ರಾಣಿ ಚೆನ್ನಮ್ಮ ವಿ.ವಿ. ಹಗರಣಗಳು ಎಲ್ಲರಿಗೂ ಗೊತ್ತು ; ಆದರೆ ಯಾರೂ ಬಗ್ಗೆ ಚಕಾರ ಎತ್ತುತ್ತಿಲ್ಲ. ಅದನ್ನು ಈಗ ನಾನು ಆರಂಭ ಮಾಡುತ್ತಿದ್ದೇನೆ. ಕುಲಪತಿ ಅನಂತನ್ ಅವರನ್ನು ಹೊಗಳಿದ ಕೆಲ ದಲಿತ ಸಂಘಟನೆಗಳಿಗೆ, ಆರ್.ಪಿ.. ದಂತಹ ದಲಿತ ಪಕ್ಷಗಳಿಗೆ ನನ್ನ ಧಿಕ್ಕಾರ !

ದಾಸಿಮಯ್ಯನ ವಚನ

ಒಡಲುಗೊಂಡವ ಹಸಿವ;  ಒಡಲುಗೊಂಡವ ಹುಸಿವ  ಒಡಲುಗೊಂಡವನೆಂದು  ನೀನೆನ್ನ ಜರಿದೊಮ್ಮೆ ನುಡಿಯದಿರ ನೀನೆನ್ನಂತೆ ಒಮ್ಮೆ ಒಡಲುಗೊಂಡು ನೋಡ ರಾಮನಾಥ.