Showing posts with label ಹೆಣ್ಣುಮಕ್ಕಳು. Show all posts
Showing posts with label ಹೆಣ್ಣುಮಕ್ಕಳು. Show all posts

Monday, July 28, 2014

ನಿಮ್ಮ ಮಗಳು ಏಕಾಂಗಿಯಲ್ಲ ಅನ್ನೋದನ್ನು ಆಕೆಗೆ ಮನದಟ್ಟು ಮಾಡಿ !


ಮ್ಮಾ, ಸ್ಕೂಲಿಗೆ ಹೋಗ್ಬರ್ತೀನಿ

ಹಾಗಂತ ಹೇಳಿ ಮಗಳು ಹೊರಡುತ್ತಾಳೆ. ಅಮ್ಮ ಮಗಳನ್ನು ಬಸ್‌ ಹತ್ತಿಸಿ ಟೀವಿ ಆನ್‌ ಮಾಡಿದರೆ ಬೆಂಗಳೂರು ಕರಾಳ ನಗರ, ಕಾಮುಕರ ನಗರ ಎಂಬ ಸುದ್ದಿ ಬಿತ್ತರಗೊಳ್ಳುತ್ತಿದೆ. ಸ್ಕೂಲು ಕೂಡ ಸುರಕ್ಷಿತ ಅಲ್ಲ ಅನ್ನುವುದು ಅಮ್ಮನಿಗೆ ಅರಿವಾಗಿದೆ. ರಾತ್ರಿ ಕೊಂಚ ತಡವಾದರೆ ಆತಂಕ. ಮಗಳು ಮೌನವಾಗಿದ್ದರೆ ಏನೋ ಭಯ, ಮಗಳು ಸ್ಕೂಲಿಗೆ ಹೋಗೋಲ್ಲ ಅಂದರೆ ಗುಮಾನಿ, ಲವಲವಿಕೆಯಿಂದ ಇದ್ದ ಕಂದಮ್ಮ ಕೊಂಚವೇ ಕೊಂಚ ಗಂಭೀರಳಾದರೆ ಅನುಮಾನ.
ಇದು ಕೇವಲ ಮಹಾನಗರಗಳ ಸಮಸ್ಯೆ ಮಾತ್ರವಲ್ಲ. ನಗರ, ಪಟ್ಟಣ, ತಾಲೂಕು ಕೇಂದ್ರ, ಗ್ರಾಮಗಳೂ ಇಂಥದ್ದೇ ತಲ್ಲಣ ಎದುರಿಸುತ್ತಿವೆ. ಗುಟ್ಟಾಗಿದ್ದ ಘಟನೆಗಳು ಹೊರಗೆ ಬರತೊಡಗಿವೆ. ಮುಚ್ಚಿಟ್ಟುಕೊಂಡು ಒಳಗುದಿ ಅನುಭವಿಸುತ್ತಿದ್ದ ಮಕ್ಕಳು ಎಲ್ಲವನ್ನೂ ಹೇಳಿಕೊಳ್ಳುತ್ತಿದ್ದಾರೆ. ಎಲ್ಲರನ್ನೂ ಅನುಮಾನದಿಂದ ನೋಡುತ್ತಿದ್ದಾರೆ.

ಆದರೆ ಪ್ರಶ್ನೆ ಮಾತ್ರ ಹಾಗೇ ಉಳಿದುಕೊಂಡಿದೆ. ಅದು ಎಲ್ಲ ತಾಯಂದಿರ ಪ್ರಶ್ನೆ. ನನ್ನ ಮಗಳು ಸುರಕ್ಷಿತಳಾಗಿದ್ದಾಳಾ? ಅಥವಾ ಅವಳು ಏನನ್ನೋ ಮುಚ್ಚಿಡುತ್ತಿದ್ದಾಳಾ? ಯಾರೋ ಅವಳನ್ನು ಬೆದರಿಸುತ್ತಿದ್ದಾರಾ?

ಆ ಭಯ ನಿರಾಧಾರ ಅಲ್ಲ. ಬಹಳಷ್ಟು ಸಂದರ್ಭದಲ್ಲಿ ಮಕ್ಕಳು ಮಾತಾಡುವುದೇ ಇಲ್ಲ. ತಮಗಾದ ಅವಮಾನ ಮತ್ತು ಅನ್ಯಾಯವನ್ನು ಹೇಳಿಕೊಳ್ಳುವುದಿಲ್ಲ. ಅದಕ್ಕೇ ಕಾರಣ ತನ್ನನ್ನು ಆತ ಕೊಂದುಬಿಡಬಹುದು ಎಂಬ ಭಯ. ಅಪ್ಪ ಅಮ್ಮ ತನ್ನನ್ನು ನಂಬದೇ ಹೋದರೆ ಎಂಬ ಆತಂಕ, ಎಲ್ಲರೂ ಕೀಳಾಗಿ ಕಂಡರೆ ಎಂಬ ಹೆದರಿಕೆ, ಸ್ಕೂಲು ಬಿಡಿಸಿದರೆ ಎಂಬ ಭವಿಷ್ಯದ ಚಿಂತೆ. ಅದನ್ನೂ ಮೀರಿದಂತೆ ಇದನ್ನೆಲ್ಲ ಹೇಗೆ ಹೇಳಿಕೊಳ್ಳುವುದು ಎಂಬ ಸಂಕೋಚ ಮತ್ತು ನಾಚಿಕೆ.
ನೆನಪಿಡಿ!

ನಿಮ್ಮ ಮಗಳು ಏಕಾಂಗಿಯಲ್ಲ ಅನ್ನೋದನ್ನು ಆಕೆಗೆ ಮನದಟ್ಟು ಮಾಡಿ. ಅವಳನ್ನು ಕಾಯುವುದಕ್ಕೆ ಒಂದು ಸೈನ್ಯವೇ ಇದೆ ಅನ್ನುವುದನ್ನು ಅವಳಿಗೆ ತಿಳಿಸಿ ಹೇಳಿ. ಸುತ್ತಮುತ್ತಲೂ ಅವಳ ರಕ್ಷಣೆಗೆ ಸಿದ್ಧರಾದ ನೂರಾರು ಸಾವಿರಾರು ಮಂದಿ ಇದ್ದಾರೆ. ಅವರನ್ನು ಎದುರಿಸಿ ಒಬ್ಬ ದುರಾತ್ಮ ಗೆಲ್ಲಲಾರ ಅನ್ನುವ ಭರವಸೆ ಕೊಡಿ. ಅವಳಲ್ಲಿ ಆತ್ಮವಿಶ್ವಾಸ ತುಂಬಿ. ಅವಳಿಗೆ ಪ್ರತಿಭಟಿಸುವುದಕ್ಕೆ ಹೇಳಿ. ಕಿರುಚಿಕೊಳ್ಳುವುದನ್ನು, ಹೋರಾಡುವುದನ್ನು ಕಲಿಸಿಕೊಡಿ. ಯಾರಾದರೂ ಬಂದು ಹೆದರಿಸಿದರೆ, ಅವನಿಗಿಂತ ಜೋರಾಗಿ ಅಬ³ರಿಸಿ, ಅವನನ್ನು ದೂರಕ್ಕೆ ಅಟ್ಟುವುದನ್ನು ಹೇಳಿಕೊಡಿ. ನೆರವು ಕೂಗಳತೆಯ ದೂರದಲ್ಲಿದೆ ಅನ್ನೋದನ್ನು ಮರೆಯಬೇಡಿ. ಹೆಲ್ಪ್ ಅಂತ ಒಮ್ಮೆ ಕೂಗು ಹಾಕಿದರೆ ಸಾಕು, ಸೈನ್ಯ ಓಡೋಡಿ ಬರುತ್ತದೆ ಅನ್ನುವ ನಂಬಿಕೆ ಅವಳಲ್ಲಿ ಮೂಡುವಂತೆ ಮಾಡಿ.

ಪೊಲೀಸು, ಕಾನೂನು ನಂತರದ ಹೆಜ್ಜೆ. ನಮ್ಮ ಸಾಮಾಜಿಕ ರಕ್ಷಣಾ ಬೇಲಿ ಎಷ್ಟು ಬಲವಾಗಿದೆ ಎಂದರೆ ಒಬ್ಬಳು ಹೆಣ್ಮಗಳ ಸುತ್ತ ಅವಳ ಅಪ್ಪ ಅಮ್ಮ, ಶಿಕ್ಷಕರು, ಗೆಳೆಯರು, ಸಂಬಂಧಿಕರು, ಸೋದರ ಸಂಬಂಧಿಗಳು, ಅಕ್ಕಂದಿರು, ಅಣ್ಣಂದಿರು ಇದ್ದೇ ಇರುತ್ತಾರೆ. ಅವರಲ್ಲಿ ಒಬ್ಬರಿಗೆ ವಿಷಯ ತಿಳಿಸಿದರೂ ಸಾಕು, ಸೈನ್ಯ ಜಾಗೃತವಾಗುತ್ತದೆ. ಅನ್ಯಾಯದ ವಿರುದ್ಧ ಸಿಡಿದು ನಿಲ್ಲುವುದು ಅವಮಾನವೂ ಅಲ್ಲ, ಅಪರಾಧವೂ ಅಲ್ಲ. ಅದು ಹಕ್ಕು. ಹಾಗಂತ ಮಕ್ಕಳಿಗೆ ಅರ್ಥವಾಗಬೇಕು.
ಸ್ಪರ್ಶ, ವಿಶೇಷ ಕಾಳಜಿ, ಗುಟ್ಟಾಗಿ ಹೇಳಿಕೊಡುತ್ತೇನೆ ಎಂಬ ಅನುಕಂಪ, ನೀನು ದಡ್ಡಿಯಾಗಿದ್ದೀಯಾ, ಆದರೂ ನಾನು ಹೆಚ್ಚು ಅಂಕ ಕೊಡುತ್ತೇನೆ ಎಂಬ ಆಮಿಷ, ಬಡತನದಲ್ಲಿರೋ ನಿನ್ನನ್ನು ಶ್ರೀಮಂತಳನ್ನಾಗಿಸುತ್ತೇನೆ ಎಂಬ ಮಾತು ಇವಕ್ಕೆಲ್ಲ ಬಲಿಯಾಗಬೇಡಿ. ಕೊಲ್ಲುತ್ತೇನೆ, ನಾಶ ಮಾಡುತ್ತೇನೆ ಎಂಬ ಬೆದರಿಕೆಗೂ ಜಗ್ಗಬೇಡಿ. ಅದ್ಯಾರು ಏನು ಹೇಳಿದರೂ ಅದನ್ನು ನನಗೆ ಹೇಳು ಅಂತ ಸುತ್ತಲಿರುವ ಎಲ್ಲರೂ ಮಕ್ಕಳಿಗೆ ಹೇಳಿ. ಮಕ್ಕಳ ಪ್ರತಿಯೊಂದು ಚಲನ ವಲನ ಕೂಡ ನಿಮಗೆ ಗೊತ್ತಿರಲಿ.ನಿಮ್ಮ ಮಗಳ ಮುಖ ನೋಡಿ. ಅಲ್ಲಿ ಬದಲಾವಣೆಯ ಕುರುಹು ಕಾಣಿಸಿದರೆ ಎಚ್ಚೆತ್ತುಕೊಳ್ಳಿ. ನೆನಪಿಡಿ, ಮೊದಲ ರಕ್ಷಣಾ ಕೋಟೆ ಹೆತ್ತವರಾದ ನೀವೇ.

ಯೂ ಆರ್‌ ದಿ ಪ್ರೊಟೆಕ್ಟರ್‌.

ಅಮ್ಮ

(ಬೆಸ್ಟ್‌ ಸೈಕಾಲಜಿಸ್ಟ್‌. ಸಣ್ಣ ಬದಲಾವಣೆಯನ್ನೂ ಗುರುತಿಸಬಲ್ಲ ಸೂಕ್ಷ್ಮತೆ ಅಮ್ಮಂದಿರಿಗಿದೆ. ಏನೇ ಆದರೂ ಅಮ್ಮನಿಗೇ ಮೊದಲು ಗೊತ್ತಾಗುತ್ತದೆ.)

1. ಬದಲಾವಣೆ ಗಮನಿಸಿ: ಮಗಳು ಮೌನಿಯಾಗಿದ್ದಾಳೆ, ತುಂಟಾಟ ಕಡಿಮೆಯಾಗಿದೆ. ಸ್ಕೂಲಿಗೆ ಹೋಗುವ ಉತ್ಸಾಹ ಕುಗ್ಗಿದೆ. ಗೆಳತಿಯರ ಜೊತೆ ಆಟ ಆಡುತ್ತಿಲ್ಲ. ನಿದ್ದೆಯಲ್ಲಿ ಭಯಬೀಳುತ್ತಾಳೆ, ಹಾಸಿಗೆ ಒದ್ದೆ ಮಾಡ್ಕೊàತಾಳೆ, ಪಾನಿಪೂರಿ ಬೇಡ ಅಂತಾಳೆ- ಹೀಗೆ ಏನೋ ಒಂದು ಬದಲಾಗಿರುತ್ತೆ. ಕಣ್ಣಿಟ್ಟು ನೋಡಿ.

2. ಕಿವಿಗೊಡಿ: ಅವಳನ್ನು ಕರೆದು ಮಾತಾಡಿ. ಬೇರೆಯವರ ಧೈರ್ಯದ ಕತೆ ಹೇಳಿ. ನಿಂಗೇನಾಗಿದೆ ಅಂತ ಕೇಳಿ. ನಿಮ್ಮ ಬಾಲ್ಯದಲ್ಲಿ ನೀವು ಹೇಗೆ ಎಲ್ಲವನ್ನೂ ಧೈರ್ಯವಾಗಿ ಎದುರಿಸಿದಿರಿ ಅನ್ನೋದನ್ನು ಕತೆ ಕಟ್ಟಿ ಹೇಳಿ. ಅವಳ ಮಾತು ಕೇಳಿಸ್ಕೊಳ್ಳಿ.

3. ಧೈರ್ಯಗೆಡಬೇಡಿ: ಧೈರ್ಯಗೆಡುವಂಥದ್ದೇನೂ ಆಗಿಲ್ಲ ಅಂತ ಅವಳು ಅರ್ಥಮಾಡಿಕೊಳ್ಳಲಿ. ಅದು ತಪ್ಪಲ್ಲ ಅಂತ ಅರ್ಥಮಾಡಿಸಿ. ಅನ್ಯಾಯವನ್ನು ತನ್ನದೇ ಅಪರಾಧ ಅಂತ ಅಂದುಕೊಳ್ಳಬಾರದು ಎಂದು ಹೇಳಿ.

4. ಧೈರ್ಯ ತುಂಬಿ: ಮುಂದೇನು ಅನ್ನೋ ಚಿಂತೆ ಬೇಡ. ಎಲ್ಲ ರೋಗಕ್ಕೂ ಔಷಧಿ ಇದೆ ಅನ್ನೋದನ್ನು ಮನದಟ್ಟು ಮಾಡಿಸಿ. ಕಾನೂನಿನ ಶಕ್ತಿಯ ಬಗ್ಗೆ ಹೇಳಿ.

5. ಆತ್ಮವಿಶ್ವಾಸ ಕುದುರಿಸಿ: ಮಲಾಲಾ, ನಿರ್ಭಯ ಮುಂತಾದವರ ಕತೆಗಳನ್ನು ಹೇಳಿ. ಎದುರಿಸಿ ನಿಲ್ಲುವ ಸ್ಥೈರ್ಯ ತುಂಬಿ. ನಿಮ್ಮ ಮಗಳು ಮತ್ತೂಂದು ಮಗುವಿಗೂ ಧೈರ್ಯ ತುಂಬುವಷ್ಟು ಆತ್ಮವಿಶ್ವಾಸ ಬೆಳೆಸಿಕೊಳ್ಳಲಿ.

ಅಪ್ಪ

(ಮಗಳು ನಂಬುವ ಮೊದಲ ಹೀರೋ. ಮಕ್ಕಳಲ್ಲಿ ಧೈರ್ಯ ತುಂಬುವಲ್ಲಿ ಅಪ್ಪನ ಪಾತ್ರ ದೊಡ್ಡದು. ಮಕ್ಕಳು ತಪ್ಪು ಮಾಡಿವೆ ಅಂದುಕೊಂಡಾಗ ಅಪ್ಪನ ಕಣ್ಣಲ್ಲಿ ಕಣ್ಣಿಟ್ಟು ನೋಡೋದನ್ನು ತಪ್ಪಿಸುತ್ತವೆ. ನೀವು ಗಮನಿಸಲೇಬೇಕು)

1. ಕೋಪಿಸ್ಕೋಬೇಡಿ: ಬಹುತೇಕ ಮಕ್ಕಳು ಲೈಂಗಿಕ ದೌರ್ಜನ್ಯಕ್ಕೆ ಒಳಗಾದರೆ ಅಪ್ಪನ ಹತ್ರ ಹೇಳಲು ಹಿಂಜರಿಯುತ್ತವೆ. ಗೊತ್ತಾಗುವಾಗ ಸ್ವಲ್ಪ ತಡವಾಗಬಹುದು. ಆಗ ನೀವು ಕೋಪಿಸಿಕೊಳ್ಳಬಾರದು. ಮೊದಲೇ ಹೇಳಲು ಏನಾಗಿತ್ತು ನಿನಗೆ ಅಂತ ಗದರುವುದು ಬೇಡ. ನೀವವಳ ಹೀರೋ, ನೆನಪಿಟ್ಕೊಳ್ಳಿ.

2. ನಂಬಿ: ಮಗು ಈ ಕುರಿತಂತೆ ಸುಳ್ಳು ಹೇಳುವುದಿಲ್ಲ. ನಿಮ್ಮ ಹತ್ತಿರದ ಸಂಬಂಧಿ ನನಗೆ ಕಾಟ ಕೊಡುತ್ತಿದ್ದಾನೆ ಅಂತ ಹೇಳಿದರೆ ಅವಳನ್ನು ಅವಮಾನಿಸಬೇಡಿ. ನಂಬಿ ಅವಳ ಮಾತನ್ನು. ಹತ್ತಿರ ಕೂರಿಸಿ ನಾನಿದ್ದೇನೆ ಅಂತನ್ನಿಸುವಂತೆ ಮಾಡಿ. ಅವಳಿಗೆ ಬೆಟ್ಟದಷ್ಟು ಧೈರ್ಯ ಸಿಗುತ್ತದೆ.

3. ಮಗಳ ಪರ ನಿಲ್ಲಿ: ಏನೇನಾಯಿತು ಅಂತ ತಾಳ್ಮೆಯಿಂದ ಕೇಳಿ. ತಪ್ಪಿಯೂ ಅವಳಲ್ಲಿ ಅಪರಾಧಿ ಭಾವನೆ ಮೂಡಬಾರದಂತೆ ನೋಡಿಕೊಳ್ಳಬೇಕು. ಯಾವತ್ತೂ ಅಪ್ಪ ಮಗು ಜೊತೆ ಇದ್ದೇ ಇರ್ತಾನೆ ಅಂತ ಹೇಳಿ. ಅವಳ ಕಣ್ಣು ಬೆಳಗುತ್ತದೆ.

4. ಎಲ್ಲವನ್ನೂ ಎದುರಿಸಿ: ಜಗತ್ತು ಪ್ರಶ್ನೆಯಾಗಬಹುದು. ಅವರಿವರು ಕಿರಿಕಿರಿ ಮಾಡಬಹುದು. ಅಂಥಾ ಹೊತ್ತಲ್ಲಿ ಏನೇನಾಗುತ್ತದೋ ಅಂತ ಎದೆಗುಂದಬಾರದು. ಸಮಸ್ಯೆಯನ್ನು ತಾಳ್ಮೆಯಿಂದ ಎದುರಿಸಬೇಕು.

5. ಆಲ್‌ ಇಸ್‌ ವೆಲ್‌: ತುಂಬಾ ಧೈರ್ಯದಿಂದ ಇರಬೇಕಾದವರು ನೀವು. ಇಂಥದ್ದೇ ಸಮಸ್ಯೆ ಎದುರಿಸಿ ಪಾರಾದವರ ಕತೆಗಳನ್ನು ಕೇಳಿಕೊಳ್ಳಿ. ಮಗಳು ತುಂಬಾ ನೊಂದಿದ್ದರೆ ಕೌನ್ಸಿಲರ್‌ ಹತ್ತಿರ ಕರೆದೊಯ್ಯಿರಿ. ಸದಾ ಅವಳ ಜೊತೆ ಇದ್ದು ಎಲ್ಲಾ ಸರಿಯಾಗತ್ತೆ ಅಂತ ತಿಳಿಹೇಳಿ.

ಫ್ರೆಂಡುÕ

(ಫ್ರೆಂಡುÕ ಅಂದ್ರೆ ಜಗತ್ತೇ ಎದುರಾಗಿದ್ದಾಗಲೂ ಪಕ್ಕದಲ್ಲಿ ನಿಂತು ಕೈ ಹಿಡ್ಕೊಂಡು ಧೈರ್ಯ ತುಂಬೋ ಜೀವಗಳು. ಫ್ರೆಂಡ್ಸ್‌ ಹತ್ರ ಮಾತ್ರ ಎಲ್ಲವನ್ನೂ ನಾವು ಹೇಳಿಕೊಳ್ಳಬಲ್ಲೆವು.)

1. ಗಮನಿಸಿ ಅವಳನ್ನು: ಅವಳು ಏನನ್ನೋ ಮುಚ್ಚಿಡುವಂತಿರುವಂತೆ ಅನ್ನಿಸುತ್ತಿದೆ. ಒಳಗೊಳಗೆ ಒದ್ದಾಡುತ್ತಿದ್ದಾಳೆ. ಹೇಳ್ಳಿಕ್ಕೂ ಆಗದೆ, ನುಂಗ್ಲಿಕ್ಕೂ ಆಗದೆ ನೋಯುತ್ತಿದ್ದಾಳೆ. ಫ್ರೆಂಡು ಮನಸ್ಸು ಜಾಗೃತವಾಗಬೇಕು. ಅವಳೊಳಗಿಂದ ರಹಸ್ಯವನ್ನು ಹೊರಹಾಕಿಸಬಹುದಾದ ಏಕೈಕ ಜೀವ ನೀವೇ.

2. ನಾನಿದ್ದೇನೆ ಕಣೇ: ಹತ್ತಿರ ಕೂರಿಸಿ ಕೇಳಿದಾಗ ಅವಳು ಅಳಬಹುದು. ಎಲ್ಲಾ ಮುಗೀತು ಅಂತ ಮಾತಾಡಬಹುದು. ಆಗ ನೀವು ಆಕಾಶ ತಲೆ ಮೇಲೆ ಬಿತ್ತು ಅನ್ನುವ ಥರ ಆಡಬಾರದು. ಸಮಾಧಾನ ಮಾಡಬೇಕು. ನಾನಿದ್ದೇನೆ ಕಣೇ ಅಂತ ಹೇಳಿ ನೀವು ಅವಳ ಜೊತೆಯಿದ್ದೀರಿ ಅಂತ ಭರವಸೆ ಹುಟ್ಟಿಸಬೇಕು.

3. ಸಮಸ್ಯೆಯನ್ನು ಅರ್ಥ ಮಾಡ್ಕೊಳ್ಳಿ: ಪೂರ್ತಿಯಾಗಿ ಕೇಳಿ ಈಗ ಏನು ಮಾಡಬಹುದು ಅಂತ ಯೋಚಿಸಿ. ಅಪ್ಪ ಅಮ್ಮನ ಜೊತೆ ಮಾತಾಡಬಹುದಾ ಅಂತ ನೋಡಿಕೊಂಡು ಕೂಲಾಗಿ ಅವರಿಗೆ ವಿವರಿಸಿ. ಏನೇ ಆದರೂ ನೀವು ಅವಳು ಸಮಾಧಾನ ಆಗೋತನಕ ನಿಮ್ಮ ಫ್ರೆಂಡ್‌ ಜೊತೆಗಿರಿ.

4. ನಿಮ್ಮ ಮಾತೇ ಅವಳ ಶಕ್ತಿ: ಜಗತ್ತಿಗೆ ಹೆದರಿ ಅವಳು ಕುಗ್ಗಬಹುದು. ಎಲ್ಲರೂ ಅವಳಿಂದ ದೂರ ಹೋಗುವ ಸಾಧ್ಯತೆಯೂ ಇಲ್ಲದಿಲ್ಲ. ಇಂಥಾ ಸಮಯದಲ್ಲಿ ಎಲ್ಲರನ್ನೂ ಹತ್ತಿರ ಕರೆದುತರಬೇಕು ನೀವು. ಅವಳ ತಪ್ಪಿಲ್ಲ ಎಂದು ಅರ್ಥ ಮಾಡಿಸಬೇಕು. ಅವಳನ್ನು ಬೆಚ್ಚಗೆ ನೋಡ್ಕೊàಬೇಕು.

ಸಂಬಂಧಿಕರು

(ತುಂಬಾ ಸಲ ಹೆಣ್ಮಗು ಅಪ್ಪ, ಅಮ್ಮಂಗೆ ಹತ್ತಿರಾಗದಿದ್ದರೂ ಚಿಕ್ಕಮ್ಮನನ್ನೋ, ಮಾವನನ್ನೋ ತುಂಬಾ ಹಚೊRಂಡಿರ್ತಾಳೆ. ಆ ಮಗುವಿಗೆ ಇವರ ಮಾತು ವೇದವಾಕ್ಯವಾಗಿರುತ್ತದೆ. ಅವರಿಗೆ ಇವಳು ಅರ್ಥವಾಗುತ್ತಾಳೆ, ಬೇಗ.)

1. ಅವಳಲ್ಲಿ ಬದಲಾವಣೆ: ಹುಡ್ಗಿ ಪದೇ ಪದೇ ಮನೆಗೆ ಬರುತ್ತಿದ್ದವಳು ಒಮ್ಮಿಂದೊಮ್ಮೆಲೆ ಮನೆಗೆ ಬರುತ್ತಿಲ್ಲ. ಬಾ ಅಂದರೂ ತಿರಸ್ಕರಿಸುತ್ತಿದ್ದಾಳೆ. ಈಗ ನೀವು ಜಾಗೃತರಾಗಬೇಕು. ನೀವೇ ಅವಳ ಹತ್ತಿರ ಹೋಗಿ ಕೂತು ಮಾತನಾಡಬೇಕು. ಸೂಕ್ಷ್ಮವಾಗಿ ಬದಲಾವಣೆ ಗಮನಿಸಬೇಕು.

2. ನೊಂದುಕೊಳ್ಳದಿರಲಿ: ಅವಳು ಒಮ್ಮೆಲೇ ನಿಮ್ಮ ಮುಂದೆ ಹೇಳಿಕೊಳ್ಳಬಹುದು. ಆಗ ನೀವು ಅವಳಿಗೆ ಧೈರ್ಯ ತುಂಬಬೇಕು. ನಿಂದೇನೂ ತಪ್ಪಿಲ್ಲಮ್ಮಾ ಅಂತ ಹೇಳಿ ಜಗತ್ತನ್ನು ವಿವರಿಸಿ. ನಿಮ್ಮ ಮಾತು ಕೇಳ್ತಾಳೆ ಮಗು.

3. ಜೊತೆಗಿರಿ: ನಿಮ್ಮ ಹತ್ತಿರದ ಸಂಬಂಧಿ ಹುಡ್ಗಿಗೆ ತೊಂದರೆ ಕೊಟ್ಟಿದ್ದು ಜಗಜ್ಜಾಹೀರಾದರೆ ಮೊದಲು ನೀವು ಆ ಕುಟುಂಬದ ಸಹಾಯಕ್ಕೆ ಹೋಗಬೇಕು. ಎಲ್ಲರೂ ವಿಚಿತ್ರವಾಗಿ ನೋಡುತ್ತಿರುವಂತೆ ಅವರಿಗನ್ನಿಸಬಹುದು. ಜೊತೆಗಿದ್ದು ಹಾಗನ್ನಿಸದಂತೆ ಮಾಡಿ.

4. ತಿಳಿಗೊಳಿಸಿ: ಕೋಪ, ಜಗಳ, ಗಲಾಟೆ ನಡೆಯಬಹುದು. ಆದಷ್ಟೂ ವಾತಾವರಣ ತಿಳಿಗೊಳಿಸಲು ಪ್ರಯತ್ನಿಸಿ. ಅವಳು ನಮ್ಮನೆ ಮಗಳು ಅನ್ನೋದು ಮನಸ್ಸಲ್ಲಿರಲಿ.

ಶಿಕ್ಷಕರು

(ಮೇಷ್ಟ್ರು, ಟಿಚರ್‌ ಎಂದರೆ ನಂಬಿಕೆ. ಅವರ ಮೇಲೆ ಅತೀವ ಭರವಸೆ ಇಟ್ಟು ಮಕ್ಕಳನ್ನು ಕಳಿಸುತ್ತಾಳೆ ಅಮ್ಮ. ಹಾಗೆ ನೋಡಿದರೆ ಮೇಷ್ಟ್ರು ಅಥವಾ ಟೀಚರ್‌ ಮಕ್ಕಳ ಎರಡನೇ ಅಮ್ಮ.)

1. ಕ್ಲಾಸಿಗೆ ಬರುತ್ತಿಲ್ಲ: ತುಂಬಾ ಜಾಣೆ ಹುಡ್ಗಿಗೆ ಮಂಕು ಕವಿದಿದೆ. ಈಗೀಗ ನಗುತ್ತಿಲ್ಲ. ಮಾತಿಲ್ಲ ಕತೆಯಿಲ್ಲ. ಶಿಕ್ಷಕರಿಗೆ ಅರ್ಥವಾಗಬೇಕು. ಯಾಕೆಂದರೆ ಶಾಲೆಯಲ್ಲಿ ಅವರಿಗಿಂತ ಒಳ್ಳೆಯ ಸೈಕಾಲಜಿಸ್ಟ್‌ಗಳಿಲ್ಲ.

2. ಮಗಳಂತೆ ನೋಡಿ: ನಿಮ್ಮ ವಿದ್ಯಾರ್ಥಿನಿ ನಿಮ್ಮದೇ ಮಗು. ಅದನ್ನು ಅವಳಿಗೆ ಅರ್ಥವಾಗುವಂತೆ ಹೇಳಿ. ನಿಮ್ಮ ಮಗಳನ್ನು ಹೇಗೆ ನೋಡಿಕೊಳ್ಳುತ್ತೀರಿ ಅಂತ ವಿವರಿಸಿ. ಅವಳು ಎಲ್ಲವನ್ನೂ ಹೇಳಲಿ. ಪ್ರೀತಿಯಿಂದ ಕೇಳಿ. ಹೇಯ್‌ ನಾನಿದ್ದೇನೆ ಕಣೇ ಮಗೂ ಅಂತ ಸಮಾಧಾನಿಸಿ.

3. ಹೂವಂತೆ ನೋಡಿಕೊಳ್ಳಿ: ಯಾವುದೇ ಕಾರಣಕ್ಕೂ ಅವಳಿಗೆ ಅವಮಾನ ಅಂತನ್ನಿಸೋ ಥರ ಮಾಡಬಾರದು. ಮೊದಲೇ ನೊಂದಿರೋ ಹೂವು ಮತ್ತಷ್ಟು ಬಾಡುತ್ತದೆ. ಮಗು ಮನಸ್ಸು ಅರಳಬೇಕು. ಕತೆ ಹೇಳಿ. ಧೈರ್ಯ ತುಂಬಿ. ಅವಳಲ್ಲಿರೋ ಗಿಲ್ಟ್, ಭಯ ಹೊಡೆದೋಡಿಸಿ.

4. ಫೋಷಕರಿಗೂ ಧೈರ್ಯ ತುಂಬಿ: ಟೀಚರ್‌ ಅಥವಾ ಮೇಷ್ಟ್ರು ಎಂದರೆ ಪೋಷಕರಿಗೆ ಗೌರವ ಇರುತ್ತದೆ. ನಿಮ್ಮ ಮಾತಿಗೆ ಅವರು ಮನ್ನಣೆ ನೀಡುತ್ತಾರೆ. ಅವರನ್ನು ಕರೆಸಿ ಧೈರ್ಯ ತುಂಬಿ. ನೀವೂಂಚೂರು ಸೈಕಾಲಜಿ ಕಲಿತು ಕೌನ್ಸಿಲರ್‌ ಆಗಿ. ಅವರನ್ನು ಜಗತ್ತನ್ನು ಎದುರಿಸಲು ಸಜ್ಜುಗೊಳಿಸಿ.

ಈ ಪುಟ ಸದಾ ನಿಮ್ಮ ಕಣ್ಣೆದುರೇ ಇಟ್ಟುಕೊಳ್ಳಿ!!!!!!
 
Thanks to - Sudhakar Byatroy'

Thursday, March 07, 2013

8 ಮಾರ್ಚ್ : ಒಂದೆರಡು ಮಾತುಗಳು !

ಡಾ. ಸಿದ್ರಾಮ ಕಾರಣಿಕ

8 ಮಾರ್ಚ್ ವಿಶ್ವ ಮಹಿಳಾ ದಿನ. ನಾವೆಲ್ಲ ಒಬ್ಬರಿಗೊಬ್ಬರು ವಿಶ್ ಮಾಡುತ್ತ ಖುಷಿಯಿಂದ ಕಳೆಯುತ್ತೇವೆ. ಆದರೆ ಇಂದಿಗಾದರೂ ಹೆಣ್ನುಮಕ್ಕಳ ಪಾಡು ಬದಲಾಗಿದೆಯೇ ? ಎಷ್ಟೋ ಹೋರಾಟಗಳು ನಡೆದರೂ ಸ್ತ್ರೀ ಇನ್ನೂ ಪುರುಷ ಪ್ರಧಾನ ಸಾಮಾಜಿಕ ಬಂಧನದಿಂದ ಬಿಡುಗಡೆ ಹೊಂದಿಯೇ ಇಲ್ಲ. ಮುಕ್ತವಾಗಲು ಆಕೆಗೆ ಅವಕಾಶಗಳೇ ಇಲ್ಲ. ದಿಲ್ಲಿಯಲ್ಲಿ ಅತ್ಯಾಚಾರ ನಡೆದಾಗ ಅದು ವಿಶ್ವವ್ಯಾಪಿಯಾಗಿ ಗಮನ ಸೆಳೆಯಿತು. ಪ್ರತಿಭಟನೆಗಳು ನಡೆದವು. ಆದರೆ ಫಲ ಮಾತ್ರ ಸೊನ್ನೆ ! ಯಾಕೆಂದರೆ ಅಂತಹ ಪ್ರಕರಣಗಳು ಮೇಲಿಂದ ಮೇಲೆ ಇನ್ನೂ ಹೆಚ್ಚಾಗಿಯೇ ವರದಿಯಾಗುತ್ತಿವೆ. ವರದಿಯಾದ ಪ್ರಕರಣಗಳನ್ನು ಬಿಟ್ಟು ಇನ್ನೂ ಎಷ್ಟೋ ಪ್ರಕರಣಗಳು ಹೇಳ ಹೆಸರಿಲ್ಲದಂತೆ ಈ ದೇಶದಲ್ಲಿ ನಡೆಯುತ್ತಲೇ ಇವೆ. ಇವೆಲ್ಲವುಗಳಿಗೆ ಕೊನೆ ಎಂಬುದೇ ಇಲ್ಲವೆ ಎನಿಸುತ್ತದೆ. ಹಾಗಾದರೆ ನಮ್ಮ ಪ್ರತಿಭಟನೆ, ಹೋರಾಟಗಳಿಗೆ ಇಂಥ ಸಾಮಾಜಿಕ ಜಾಡ್ಯವನ್ನು ಕೊನೆಗೊಳಿಸುವ ಶಕ್ತಿಯೇ ಇಲ್ಲವೆ ? ನಾವೆಲ್ಲ ಮೊಸಳೆ ಕಣ್ಣೀರು ಸುರಿಸುತ್ತಿದ್ದೇವೆಯೇ ? ಯಾಕೆ ಹೀಗಾಗುತ್ತದೆ ? ಮನುಷ್ಯರು ಮನುಷ್ಯರೇ ಅಲ್ಲವೇನೋ ಎಂಬಂತೆ ವರ್ತಿಸುವುದ್ಯಾಕೆ ? ನಮ್ಮ ಮನಸ್ಸುಗಳು ಇನ್ನೂ ಕೊಳಕುತನಗಳನ್ನು ಕಳೆದುಕೊಂಡಿಲ್ಲವೆ ? ಎಲ್ಲಿಯವರೆಗೆ ಸುಮ್ಮನಿರಬೇಕು ? ಮಾರ್ಚ್ ಎಂಟರಂದು ವಿಶ್ ಮಾಡುವ ಮೂಲಕವೋ ವೇದಿಕೆಗಳಲ್ಲಿ ದೊಡ್ಡ ದೊಡ್ಡ ಮಾತನಾಡುವ ಮೂಲಕವೋ ಸಮಾನತೆಯ ವ್ಯಂಗ್ಯ ಮಾಡುತ್ತಿದ್ದೇವೆಯೇ ? ಯಾಕೆ ನಮ್ಮನ್ನೇ ನಾವು ಪ್ರಶ್ನಿಸಿಕೊಳ್ಳುವುದಿಲ್ಲ ? ಯಾಕೆ ನಮ್ಮಲ್ಲಿ ನೈತಿಕ ಉಳಿದೇ ಇಲ್ಲವೇ ?

Friday, March 01, 2013

ಅತ್ಯಾಚಾರ : ಮಾನವೀಯ ಮೌಲ್ಯಗಳ ಅಧಃಪತನ !


ಸರೋವರ್ ಬೆಂಕೀಕೆರೆ

ಮಗುವು ತಾಯಿಂದ ಜನ್ಮ ಪಡೆದಾಗ ಅದು ಹೆಣ್ಣಾಗಲಿ, ಗಂಡಾಗಲಿ ಸಹಜವಾಗಿಯೇ ಯಾವುದೇ ಹಣೆಪಟ್ಟಿಗಳಿಲ್ಲದೆ ಬೆಳೆದಿರುತ್ತದೆ. ಆ ರೀತಿ ಬೆಳೆದ ಗಂಡು ಮಗುವಿಗೆ, ‘ನೀನು ಬೆಳೆದು ಮುಂದೊಂದು ದಿನ ಅತ್ಯಾಚಾರವೆಸಗುವ ಮೃಗವಾಗಬೇಕೆಂದಾಗಲಿ’ ಅಥವಾ ಹೆಣ್ಣುಮಗುವಿಗೆ ‘ನೀನು ಅಧೈರ್ಯಳಾಗಿ ಗಂಡಿಗೆ ತಗ್ಗಿ ಬಗ್ಗಿ ಹೆದರಿ ಬದುಕಬೇಕೆಂದಾಗಲಿ’ ಅವರ ತಲೆಯಲ್ಲಿ ಯಾರು ತುಂಬಿ ಕಳಿಸಿರುವುದಿಲ್ಲ. ಹಾಗಾದರೆ ಇಂತಹ ಅತ್ಯಾಚಾರಗಳು ನಡೆಯಲು ನಮ್ಮ ಸಮಾಜದ ಅನಾರೋಗ್ಯಕರ ವಾತಾವರಣ ಮತ್ತು ಈ ವ್ಯವಸ್ಥೆ ಎಂದಾಯ್ತು ತಾನೇ?
ನಾವು ಗಮನಿಸಬೇಕಾದ ಒಂದು ಅಂಶವಿದೆ, ದೇಶದಲ್ಲೆ ಅತ್ಯಾಚಾರ ಪ್ರಕರಣದಲ್ಲಿ ಮುಂದಿರುವ ರಾಜ್ಯಾ ಹರಿಯಾಣ. ಇಲ್ಲಿನ ಅಂಕಿಯಾಂಶ ಗಮನಿಸಿದರೆ 80 ರಿಂದ 90 ರಷ್ಟು ಅತ್ಯಾಚಾರ ನಡೆದಿರುವುದು ದಲಿತರ ಮೇಲೆಯೇ ಆಗಿದೆ. ಇದನ್ನು ನಡೆಸುವವರು ಮೇಲುವರ್ಗದವರು ಅಥವಾ ಅಧಿಕಾರದಲ್ಲಿರುವವರು, ಅಥವಾ ಆರ್ಥಿಕವಾಗಿ ಸಬಲರಾಗಿರುವವರು. ಅತ್ಯಾಚಾರ ನಡೆಯುವುದು ಯಾವುದೇ ಒಂದು ಪ್ರಚೋದನಕಾರಿ ಉಡುಪಿನಿಂದಾಗಾಲಿ ಅಥವಾ ಮಹಿಳೆಯ ನಡತೆಯಿಂದಲ್ಲ. ಇದರ ಹಿಂದೆ ಮಾನಸಿಕ ವ್ಯಗ್ರತೆಯ ಅಪರಾಧಿತನ ಇದೆ.
ಇನ್ನು ನಮ್ಮ ಧರ್ಮ, ಧರ್ಮ ಗುರುಗಳು ಹೇಳುವಂತೆ ಹೆಣ್ಣು ಬಾಲ್ಯದಲ್ಲಿ ತಂದೆಯ, ಯೌವನದಲ್ಲಿ ಗಂಡನ ಮತ್ತು ಮುಪ್ಪಿನಲ್ಲಿ ಮಗನನ್ನು ಆಶ್ರಯಿಸಬೇಕು ಎನ್ನುತ್ತದೆ. (ಎಲ್ಲ ಧರ್ಮಗ್ರಂಥಗಳೂ ಪುರುಷನೆ ಬರೆದಿರುವುದನ್ನು ಗಮನಿಸಬೇಕಿದೆ) ವಾಸ್ತವವಾಗಿ ದಿಲ್ಲಿಯ ಪ್ರಕರಣವನ್ನೇ ತೆಗುದುಕೊಂಡರೆ “ಯುವತಿ ತಾನು ಮದುವೆಯಾಗಬೇಕ್ಕಿದ್ದ ಹುಡುಗನ ಆಶ್ರಯದಲ್ಲಿದ್ದೇ ಇಂತಹ ಹೇಯ ಕೃತ್ಯ ನಡೆದುಹೋಗಿತ್ತು.! ಈ ಅತ್ಯಾಚಾರ ಒಂದು ಹೆಣ್ಣಿನ ಮೇಲೆ ಆದದ್ದಲ್ಲ. ಬದಲಿಗೆ ಅಕ್ಷರಶಃ ನಮ್ಮ ಕಾನೂನಿನ ಮೇಲೆ, ಪ್ರಜಾಪ್ರಭುತ್ವದ ಮೇಲೆ, ಮಾನವೀಯ ಮೌಲ್ಯಗಳ ಮೇಲೆ ನಡೆದಿದ್ದಾಗಿದೆ!!
ಅರಾಸಾರಾ ಬಾಬಾ ಹಾಗೂ ಇನ್ನಿತರ ಸಂಘಟನೆಗಳ ಹೆಣ್ಣುದ್ವೇಷಿ ಪದಾಧಿಕಾರಿಗಳೆಲ್ಲ ಹೆಣ್ಣು ಸಂಜೆ ಆರು ಘಂಟೆಯೊಳಗೆ ಮನೆ ಸೇರಬೇಕು, ಮೈ ತುಂಬ ಬಟ್ಟೆ ತೊಡಬೇಕು, ಅತ್ಯಾಚಾರ ಮಾಡಲು ಬಂದವರಿಗೆ ಅಣ್ಣ, ಅಪ್ಪ ಎಂದು ವಿನಂತಿಸಬೇಕೆಂದು ಹೇಳುತಾರೆಂದರೆ, ನಾವು ಇಂಥವರ ಅನುಯಾಯಿಗಳಿಂದ ಅತ್ಯಾಚಾರಗಳನ್ನು ನಿರೀಕ್ಷಿಸಬಹುದೇನೋ(?!). ಮಹಿಳೆಯರು ಯಾವಾಗ ಬೇಕಂದಾಗ ಒಡಾಡಿದರೆ ನಾವು ರಕ್ಷಣೆ ಕೊಡಲು ಹೇಗೆ ಸಾಧ್ಯ ಎಂದು ಪೋಲಿಸರೆ ಕೇಳುತ್ತಾರೆಂದರೆ ಏನರ್ಥ ? ಅತ್ಯಾಚಾರಿಗಳನ್ನು ಅಪರಾಧಿಗಳಾಗಿ ನೋಡುವ ಬದಲು, ಅತ್ಯಾಚಾರಕ್ಕೆ ಒಳಗಾದವರನ್ನೆ ಅಪರಾಧಿಗಳಂತೆ ನೋಡಿ ಹೆಣ್ಣನ್ನೇ ಹದ್ದುಬಸ್ತಿನಲ್ಲಿ ಇಡಲು ಯತ್ನಿಸುತ್ತಾರೆ...!
ಆರೋಪಿಗಳನ್ನು ನಪಂಪಸಕರನ್ನಾಗಿಸಿ, ಅಥವಾ ಉಗ್ರ ಶಿಕ್ಷೆಯನ್ನು ಕೊಡಬೇಕೆಂಬ ವಾದಗಳಿವೆ. ಇದರಿಂದ ಪರಿಹಾರ ಸಾಧ್ಯವೇ ? ಖಂಡಿತ ಇಲ್ಲ. ಹೆಣ್ಣನ್ನು ಮನಷ್ಯಳಂತೆ, ತನ್ನಂತೆ ಎಲ್ಲ ಹಕ್ಕುಗಳನ್ನು ಹೊಂದಿರುವ ನಾಗರಿಕಳೆಂದು ಸಮಾಜ ಪರಿಗಣಿಸಬೇಕು. ಇಂತಹ ನೈತಿಕ, ಮಾನವೀಯ ಮೌಲ್ಯಗಳು ಸಮಾಜದಲ್ಲಿ ಬೆರೆತಾಗ ಮಾತ್ರ ಪರಿಹಾರ ಸಾಧ್ಯ. ಪಠ್ಯದಲ್ಲಿ ಧರ್ಮೋಪದೇಶಗಳನ್ನು ತುರುಕುವ ಬದಲು ಇಂತಹ ಮಾನವೀಯ ಮೌಲ್ಯಗಳನ್ನು ಸೇರಿಸಬೇಕೆಂದು ಅನಿಸುತ್ತದೆ.
                          

Thursday, February 07, 2013

ಮನುಸ್ಮೃತಿ ಇನ್ನೂ ಸುಟ್ಟಿಲ್ಲ ಸುಡಬೇಕಿದೆ !

ಡಾ. ಸಿದ್ರಾಮ ಕಾರಣಿಕ

ಈ ದೇಶದಲ್ಲಿ ಸ್ತ್ರೀಯರನ್ನು ‘ದೇವತೆ’ ಎಂದೇ ತಿಳಿಯಲಾಗುತ್ತದೆ ಎಂದು ಷರಾ ಬರೆಯತ್ತಲೇ ಆ ‘ದೇವತೆ’ಯ ಮೇಲೆ ನಿರಂತರವಾಗಿ ಅತ್ಯಾಚಾರ ನಡೆಸಲಾಗುತ್ತದೆ. ಪುರುಷ ಪ್ರಧಾನ ಸಮಾಜದಲ್ಲಿ ಆಕೆ ಇನ್ನೂ ಮೇಲೆರಲು ಸಾಧ್ಯವಾಗಿಯೇ ಇಲ್ಲ. ಯಾಕೆಂದರೆ ಆ ‘ದೇವತೆ’ ಹೀಗೇ ಇರಬೇಕು ; ಇದನ್ನೇ ತೊಡಬೇಕು ; ಇದನ್ನೇ ಉಣ್ಣಬೇಕು ; ಇಂಥದ್ದನ್ನೇ ಮಾಡಬೇಕು ಮತ್ತು ಇಂಥದ್ದನ್ನು ಮಾಡಬಾರದು ಎಂಬ ಬಿಗಿಯಾದ ಕಟ್ಟಳೆಗಳು ಈ ದೇಶದಲ್ಲಿವೆ. ಈ ದೇಶದಲ್ಲಿ ಆ ‘ದೇವತೆ’ಯನ್ನು ಮೂರ್ಖಳು ಎಂದು ಭಾವಿಸಲಾಗುತ್ತದೆ ; ತಿಳುವಳಿಕೆ ಇಲ್ಲದವಳು ಎಂದು ಹಂಗಿಸಲಾಗುತ್ತದೆ ! ಈ ದೇಶದಲ್ಲಿ ಆ ‘ದೇವತೆ’ಯನ್ನು ಕೇವಲ ಹೇರುವ ಯಂತ್ರವನ್ನಾಗಿ ಮಾತ್ರ ನೋಡಲಾಗುತ್ತದೆ ; ಪುರುಷರ ದೈಹಿಕ ಹಸಿವನ್ನು ತೀರಿಸಿಕೊಳ್ಳಲು ಇರುವ ಒಂದು ಸಾಧನವನ್ನಾಗಿ ಪರಿಗಣಿಸಲಾಗುತ್ತದೆ ! 

ಹೀಗಾಗಿಯೇ ಆ ‘ದೇವತೆ’ಯ ಮೇಲೆ ನಿರಂತರ ಶೋಷಣೆಗಳು ನಡೆಯುತ್ತವೆ ; ಹೇಯವಾದ ಅತ್ಯಾಚಾರಗಳಾಗುತ್ತವೆ ! ಯಾವತ್ತೂ ಪುರುಷರ ಆಧೀನದಲ್ಲಿಯೇ ಆ ‘ದೇವತೆ’ ಇರಬೇಕು ಎಂಬ ಮನೋಭಾವ ತುಂಬಿಕೊಂಡಿದೆ ; ಏನೇ ಆದರೂ ‘ತಾಳಿ’ಕೊಳ್ಳಬೇಕು ಎಂಬ ತತ್ವಗಾರಿಕೆ ಇದೆ ! ಹೀಗಾಗಿಯೇ ಆ ‘ದೇವತೆ’ ಇಂದು ಮಾರಾಟದ ಸರಕಾಗಿದ್ದಾಳೆ ; ಭ್ರೂಣದಲ್ಲಿಯೇ ಸಾಯುತ್ತಿದ್ದಾಳೆ !

ಹೌದು, ಇದು ನನ್ನದು ಎಂದು ಹೇಳಿಕೊಳ್ಳುತ್ತಿರುವ ದೇಶದಲ್ಲಿಯೇ ನಡೆಯುತ್ತದೆ ! ಯಾಕೆಂದರೆ ಮನುಷ್ಯ ಸಂಬಂಧಗಳನ್ನೇ ಪರಗಣಿಸದ ವೈದಿಕಶಾಹಿ ವ್ಯವಸ್ಥೆ ಇನ್ನೂ ಜೀವಂತವಾಗಿದೆ ; ಡಾ. ಬಾಬಾಸಾಹೇಬ ಅಂಬೇಡ್ಕರ್‍ರು ಅಂದು ಸುಟ್ಟು ಹಾಕಿದ ಮನುಸ್ಮೃತಿ ಇನ್ನೂ ಬೂದಿಯಾಗಿಯೇ ಇಲ್ಲ ; ಅದು ಈ ದೇಶದಲ್ಲಿ ಇನ್ನೂ ಉರಿಯುತ್ತಲೇ ಇದೆ ! ಸಾಮಾಜಿಕ ಅಸಮಾನತೆಗೆ ಕಾರಣವಾಗಿ, ಬ್ರಾಹ್ಮಣ್ಯಶಾಹಿಯನ್ನು ಈ ದೇಶದ ಜನರ ಮೇಲೆ ಹೇರಿ ಯಜಮಾನಿಕೆ ವಿಕೃತಿಯನ್ನು ಮುಂದುವರಿಸುವ ಮೂಲವೇ ಮನುಸ್ಮೃತಿ ! 

ಇದನ್ನು ಅರಿತುಕೊಂಡ ಡಾ. ಬಾಬಾಸಾಹೇಬ ಅಂಬೇಡ್ಕರ್‍ರು 1927 ಡಿಸೆಂಬರ್ 20 ರಂದು ಆ ಮನುಸ್ಮೃತಿಯನ್ನು ಬಹಿರಂಗವಾಗಿ ಸುಟ್ಟು ಹಾಕಿದರು ; ಇಡೀ ಜಗತ್ತು ಒಂದಾಗಿ ಬದುಕಬೇಕಾದ ಸಂದೇಶವನ್ನು ರವಾನಿಸಿದರು. ಆದರೆ ಡಾ. ಬಾಬಾಸಾಹೇಬ ಅಂಬೇಡ್ಕರ್‍ರ ನಂತರ ಕೆಲವೇ ದಿನಗಳಲ್ಲಿ ಆ ಮನುಸ್ಮೃತಿ ಮತ್ತೇ ಚಿಗಿತುಕೊಳ್ಳತೊಡಗಿತ್ತು ! ಯಾಕೆಂದರೆ ಅದಾಗಲೇ ಈ ದೇಶದ ಎಲ್ಲರ ತಲೆಯಲ್ಲಿ ಬೀಜವನ್ನು ಬಿತ್ತಿ ರಾಶಿ ಮಾಡುವ ಹವಣಿಕೆಯಲ್ಲಿತ್ತು ! ಹೀಗಾಗಿಯೇ ಮರಾಠಿಯ ಪ್ರಗತಿಪರ ಬರಹಗಾರ ಪ್ರದೀಪ ದೇಶಪಾಂಡೆ ಹೇಳುತ್ತಾರೆ ; ‘ಮನುಸ್ಮೃತಿ ಅಜೂನಹೀ ಜಾಳತೇಚ ಆಹೆ !’ (ಮನುಸ್ಮೃತಿ ಇಂದಿಗೂ ಉರಿಯುತ್ತಲೇ ಇದೆ !)
 
ಈ ಮಾತನ್ನು ಸ್ಪಷ್ಟೀಕರೀಸಲು ಮನುಸ್ಮೃತಿಯಲ್ಲಿ ಹೇಳಿದ ಕೆಲವು ಮಾತುಗಳನ್ನು ಇಲ್ಲಿ ಉದ್ದರಿಸುತ್ತಿರುವೆ. (ಧಾರವಾಡದ ಸಮಾಜ ಪುಸ್ತಕಾಲಯ 2003 ರಲ್ಲಿ ಮೂರನೇ ಮುದ್ರಣವಾಗಿ ಪ್ರಕಟಿಸಿರುವ ಶೇಷ ನವರತ್ನ ಅವರು ಅನುವಾದಿಸಿರುವ ಮನುಸ್ಮೃತಿಯಿಂದ ಇಲ್ಲಿಯ ಉದ್ಧರಣೆಗಳನ್ನು ನೀಡಲಾಗಿದೆ) ಮನುಸ್ಮೃತಿಯ ಎರಡನೇ ಅಧ್ಯಾಯದ 213 ಮತ್ತು 214ನೇ ಶ್ಲೋಕಗಳು ಹೆಣ್ಣುಮಕ್ಕಳ ಬಗ್ಗೆ ಕೆಟ್ಟದಾಗಿ ವ್ಯಾಖ್ಯಾನ ಮಾಡುತ್ತವೆ ;

ಸ್ವಭಾವ ಏಷ ನಾರೀಣಾಮಿಹ ದೂಷಣಂ I
ಅತೋರ್ಥಾನ್ನ ಪ್ರಮಾದ್ಯಂತಿ ಪ್ರಮದಾಸು ವಿಪಶ್ಚಿತಃ’ II213 II

ಎಂದರೆ ಪುರುಷರ ಮನಸ್ಸನ್ನು ಕೆಡಿಸುವುದೇ ನಾರಿಯರ ಸ್ವಭಾವವಾಗಿದೆ. ಆದ್ದರಿಂದ ತಿಳುವಳಿಕೆಯುಳ್ಳ ಪ್ರಾಜ್ಞರು ಸ್ತ್ರೀಯರ ವಿಷಯದಲ್ಲಿ ಎಚ್ಚರ ತಪ್ಪಿ ನಡೆಯುವುದಿಲ್ಲ ಎನ್ನುವುದು ಇಲ್ಲಿಯ ಅರ್ಥ !

‘ಅವಿದ್ಯಾಂಸಮಲಂ ಲೋಕೇ ವಿದ್ವಾಂಸಮಪಿ ವಾ ಪುನಃ I
ಪ್ರಮದಾ ಹ್ಯುತ್ಪಥಂ ನೇತು ಕಾಮಕ್ರೋಧವಶಾನುಗಂ’ II214 II

ಅಂದರೆ ಕಾಮ ಕ್ರೋಧಗಳಿಂದ ವಶನಾದ ಮನುಷ್ಯನನ್ನು ಅವನು ಪಂಡಿತನೇ ಇರಲಿ, ಪಾಮರನೇ ಇರಲಿ, ದಾರಿ ತಪ್ಪಿಸಲು ಸ್ತ್ರೀಯರು ಸಮರ್ಥರಾಗಿರುತ್ತಾರೆ ಎನ್ನಲಾಗಿದೆ !

‘ಸ್ತ್ರೀಯೋ ರತ್ನಾನ್ಯಥೋ ವಿದ್ಯಾ ಧರ್ಮಃ ಶೌಚ ಸುಭಾಷಿತಂ I
ವಿವಿಧಾನಿ ಚ ಶಿಲ್ಪ ಸಮಾದೇಯಾನಿ ಸರ್ವತಃ’ II229 II

ಸ್ತ್ರೀಯರು, ರತ್ನಗಳು, ಧರ್ಮ, ಶೌಚ, ಸುಭಾಷಿತ, ಶಿಲ್ಪಗಳು ಇವು ಎಲ್ಲಿದ್ದರೂ ಸಹ ಅವನ್ನು ಪಡೆದುಕೊಳ್ಳಲು ಮುಂದಾಗಬೇಕು ಎಂಬುದು ಮೇಲಿನ ಶ್ಲೋಕಕ್ಕೆ ನೀಡಿರುವ ಅರ್ಥವಾಗಿದೆ.

ಇವೆಲ್ಲವುಗಳನ್ನೂ ಹೇಳಿದ ಮೇಲೆ ಮೂರನೇ ಅಧ್ಯಾಯದಲ್ಲಿ,

‘ಯತ್ರ ನಾರ್ಯಸ್ತು ಪೂಜ್ಯಂತೇ ರಮಂತೇ ತತ್ರ ದೇವತಾಃ I
ಯತ್ರೈತಾಸ್ತು ನ ಪೂಜಂತೇ ಸರ್ವಾಸ್ತತ್ರಾಫಲಾಃ ಕ್ರಿಯಾಃ’ II56 II

ಎಲ್ಲಿ ಸ್ತ್ರೀಯರಿಗೆ ಗೌರವ ಸನ್ಮಾನಗಳು ದೊರೆಯುತ್ತವೆಯೋ ಅಲ್ಲಿ ದೇವತೆಗಳು ಪ್ರಸನ್ನರಾಗುತ್ತಾರೆ. ಯಾವ ಮನೆಯಲ್ಲಿ ಸ್ತ್ರೀಯರು ಗೌರವಿಸಲ್ಪಡುವುದಿಲ್ಲವೋ ಅಲ್ಲಿ ಮಾಡುವ ಎಲ್ಲ ಯಜ್ಞ-ಪೂಜೆಗಳು ನಿಷ್ಫಲವಾಗುತ್ತವೆ !’ ಎಂದು ಹೇಳಿಕೊಂಡಿರುವುದು ಇದು ತಿಪ್ಪೆ ಸಾರಿಸುವ ಕೆಲಸವಲ್ಲದೆ ಮತ್ತೇನೂ ಅಲ್ಲ ! 

ಇಂಥ ಮನುಸ್ಮೃತಿ ಈ ದೇಶದ ಜನರೆಲ್ಲರ ಮನಸ್ಸನ್ನು ಕೆಡಿಸಿ ಹಾಕಿದೆ.
ಸಂವಿಧಾನಬದ್ಧವಾಗಿರುವ ಈ ದೇಶದ ಆಡಳಿತ ಕೂಡ ಮನುಸ್ಮøತಿಯ ನೆರಳಿನಲ್ಲಿಯೇ ಇಂದಿಗೂ ಸಾಗಿ ಬಂದಿರುವುದು ನಮ್ಮ ದೇಶದ ದುರಂತವೇ ಸರಿ. ಬರೀ ಆಡಳಿತಗಾರರು, ಸನಾತನಿ ಪುರೋಹಿತಶಾಹಿಗಳು ಮಾತ್ರವಲ್ಲ ಈ ದೇಶದ ಪ್ರತಿಶತ ತೊಂಬತ್ತರಷ್ಟು ಜನ ಮನುಸ್ಮೃತಿಯ ಪ್ರಕಾರವೇ ಬದುಕು ನಡೆಸುತ್ತಿದ್ದಾರೆ. ಇಂದಿಗೂ ಭಾರತೀಯ ಸಾಮಾಜಿಕ ಮತ್ತು ಸಾಂಸ್ಕøತಿಕ ಬದುಕು ಮನುಸ್ಮೃತಿಯ ಚೌಕಟ್ಟಿನಲ್ಲಿಯೇ ಬಂಧಿಯಾಗಿದೆ ಎನ್ನುವುದರಲ್ಲಿ ಯಾವುದೇ ಅತಿಶಯೋಕ್ತಿ ಇಲ್ಲ ! 

ಹೀಗಾಗಿಯೇ ಈ ದೇಶದ ದೀನ-ದಲಿತರು, ಮಹಿಳೆಯರು ಪ್ರತಿನಿತ್ಯ ಶೋಷಣೆಗೆ ಈಡಾಗಿ ನೋವು ಉಣ್ಣುತ್ತಿದ್ದಾರೆ ! ದಲಿತರ ಮೇಲೆ ನಡೆಯುವ ದೌರ್ಜನ್ಯಗಳು, ಬಹಿಷ್ಕಾರಗಳು, ಮಹಿಳೆಯರ ಮೇಲೆ ನಡೆಯುವ ಹಲ್ಲೆಗಳು, ಅತ್ಯಾಚಾರಗಳು, ಅನಾಗರಿಕ ವರ್ತನೆಗಳು ಈ ಕಾರಣಕ್ಕಾಗಿಯೇ ಇಂದು ಹೆಚ್ಚಾಗುತ್ತಲೇ ಇವೆ !
ಈ ದೇಶದ ಹೆಣ್ಣುಮಕ್ಕಳು ಇಂದು ಎಲ್ಲ ರಂಗಗಳಲ್ಲಿಯೂ ಮುಕ್ತವಾಗಿ ಭಾಗವಹಿಸುವ ಆಸಕ್ತಿಯನ್ನು ಹೊಂದಿದ್ದಾರೆ. ಶಿಕ್ಷಣದ ಮೂಲಕ ಹೊಸ ಹೊಸ ಅವಕಾಶಗಳೊಂದಿಗೆ ಹೊಸ ಬದುಕನ್ನು ಕಟ್ಟಿಕೊಳ್ಳುವ ಹವಣಿಕೆಯಲ್ಲಿ ಇದ್ದಾರೆ. ಕೆಲವು ಜನ ಇದರಲ್ಲಿ ಯಶಸ್ಸನ್ನೂ ಪಡೆದಿದ್ದಾರೆ. ಭಾರತೀಯ ಸಮಾಜ ಇಂದು ಬದಲಾಗಿದೆ ಎಂದು ಎದೆ ತಟ್ಟಿಕೊಂಡು ಭಾಷಣ ಬಿಗಿಯುವ ಮಂದಿಯೂ ನಮ್ಮ ನಡುವೆಯೂ ಇದ್ದಾರೆ. ಆದರೆ ಬದಲಾವಣೆ ಎನ್ನುವುದು ಹೊರಗಿನ ರೂಪ ಮಾತ್ರ ! ಹೆಣ್ಣುಮಕ್ಕಳ ವಿಷಯದಲ್ಲಿ ಇಂದಿಗೂ ಅದೇ ಹಳೆಯ ಮನೋಭಾವಗಳು ನಮ್ಮಲ್ಲಿ ಇಂದಿಗೂ ಜೀವಂತವಾಗಿವೆ ! ಯಾಕೆಂದರೆ ಈ ದೇಶದಲ್ಲಿ ಮನುಸ್ಮೃತಿ ಪೂರ್ಣವಾಗಿ ಸುಟ್ಟು ಹೋಗಿಲ್ಲ !

‘ವರ್ಣಾಶ್ರಮ ಮತ್ತು ಜಾತಿ ವ್ಯವಸ್ಥೆಯಿಂದ ಬಿಗಿಯಲ್ಪಟ್ಟ ಬಂಧನದಲ್ಲಿಯೇ ಇಂದಿಗೂ ನಾವು ಬದುಕು ನಡೆಸುತ್ತಿದ್ದೇವೆ … … ಸ್ಥಳಾಂತರದ ಜೊತೆಗೆ ವೃತ್ತಿಯಾಂತರವನ್ನೂ ಮಾಡಲಾಗಿದೆ ಎಂಬುದೇನೋ ನಿಜ. ಆದರೆ ಮದುವೆ ಮಾಡುವಾಗ ಮಾತ್ರ ಇಂದಿಗೂ ಜಾತಿಯೇ ಪ್ರಧಾನ ಪಾತ್ರವಹಿಸುತ್ತದೆ. ಈ ದೃಷ್ಟಿಕೋನ ಮನುಸ್ಮೃತಿಯ ಪ್ರಭಾವದಿಂದಲೇ ಚಾಲ್ತಿಯಲ್ಲಿದೆ’ ಎನ್ನುವ ಪ್ರದೀಪ ದೇಶಪಾಂಡೆಯವರ ಮಾತುಗಳನ್ನು ಗಮನಿಸಿದಾಗ ಮನುಸ್ಮೃತಿಯ ಬೇರುಗಳು ಎಷ್ಟೊಂದು ಆಳಕ್ಕಿಳಿದು ನಮ್ಮನ್ನು ಆಳುತ್ತಿವೆ ಎಂಬುದರ ಅರಿವಾಗುತ್ತದೆ.

ಪ್ರದೀಪ ದೇಶಪಾಂಡೆಯವರ ಮಾತುಗಳನ್ನೇ ಮುಂದುವರಿಸಿ ಹೇಳುವುದಾದರೆ ಹೆಣ್ಣುಮಕ್ಕಳನ್ನು ತಮ್ಮ ಆಧೀನ ಎಂದುಕೊಳ್ಳುವ ಪ್ರವೃತ್ತಿ ಇಂದು ನಮ್ಮನ್ನೆಲ್ಲ ಆವರಿಸಿಕೊಂಡು ಬಿಟ್ಟಿದೆ. ‘ಗಂಡು’ ಶ್ರೇಷ್ಠ – ಹೆಣ್ಣು ಕನಿಷ್ಠ ಎನ್ನುವ ವಿಚಾರಗಳು ನಮ್ಮ ತಲೆಯಲ್ಲಿಯೂ ಹಾಗೆಯೇ ಉಳಿದುಕೊಂಡಿವೆ. ಮದುವೆಯ ಸಂದರ್ಭದಲ್ಲಿ ಮದುಮಗನ ಕಡೆಯವರೇ ಎಲ್ಲ ಗೌರವಕ್ಕೂ ಅರ್ಹರು ; ಹೆಣ್ಣಿನ ಕಡೆಯವರು ಗೌಣ ! ಮದುವೆಯಾದ ನಂತರ ವಧುವಿನ ಹೆಸರು ಬದಲಾಗುತ್ತದೆ ; ಅಡ್ಡಹೆಸರೂ ಬದಲಾಗುತ್ತದೆ ! ಮಕ್ಕಳಾದಾಗಲೂ ಹೀಗೆಯೇ ನಮ್ಮ ವರ್ತನೆ ಇರುತ್ತದೆ – ಗಂಡು ಹುಟ್ಟಿದರೆ ಫೇಡೆ ಹಮಚುತ್ತೇವೆ ; ಹೆಣ್ಣುಮಗುವಾಗಿದ್ದರೆ ಜಿಲೇಬಿ ಅಥವಾ ಬರ್ಫಿ ಹಂಚುತ್ತೇವೆ (ಕೆಲವು ಸಲ ಅದೂ ಇಲ್ಲ !) ಮನೆಯಲ್ಲಿ ಹೆಂಡತಿಯಾದಾಕೆ ಗಂಡನನ್ನು ‘ರೀ’ ಎಂದೇ ಕರೆಯಬೇಕು ; ಗಂಡನಾದವನು ಮಾತ್ರ ಹೆಂಡತಿಯನ್ನು ‘ಏಯ್’ ಎಂದೇ ಮಾತನಾಡಿಸುತ್ತಾನೆ !
 
ಗಂಡಸರು ಏನು ಮಾಡಿದರೂ ‘ಅಂವಾ ಗಂಡ್ಸು ; ಮಾಡಿದರ ನಡೀತದ ಬಿಡ’ ಅನ್ನುವ ಮಾತು ಸಾಮಾನ್ಯ ; ಅದೇ ಹೆಂಗಸು ಒಂದು ಸಣ್ಣ ತಪ್ಪು ಮಾಡಿದರೂ ಕೂಡ ‘ಗಂಡುಭೀರಿ’ ಎನಿಸಿಕೊಳ್ಳುತ್ತಾಳೆ ; ವ್ಯಭಿಚಾರಿಣಿ ಪಟ್ಟ ಕಟ್ಟಲಾಗುತ್ತದೆ ! ಅನೈತಿಕ ಸಂಬಂಧ ಮಾಡಿದ ಕೆಟ್ಟ ಹುಳು ಎಂದು ದೂರೀಕರಿಸುತ್ತೇವೆ ! ನಮ್ಮ ದೇಶದಲ್ಲಿ ಹೆಣ್ಣುಮಕ್ಕಳು ಶವ ಸಂಸ್ಕಾರ ಮಾಡುವಂತಿಲ್ಲ ; ವಿಧವೆಯಾದರೆ ಪೂಜೆ-ಪುನಸ್ಕಾರ-ಮದುವೆ-ಮುಂಜಿ-ಸಾರ್ವಜನಿಕ ಸಮಾರಂಭಗಳಲ್ಲಿ ಭಾಗವಹಿಸುವಂತಿಲ್ಲ ; ಎರಡನೆಯ ಮದುವೆಗೂ ನೂರಾರು ವಿಘ್ನ ! ಗಂಡಸಾದರೆ ಆತ ವಿಧುರನಾದರೂ ಎಲ್ಲದರಲ್ಲೂ ಭಾಗವಹಿಸಬಹುದು ; ಎರಡನೆಯ ಮದುವೆಯನ್ನೂ (ಯಾಕೆ ಮೂರನೆಯ ಮದುವೆಯನ್ನೂ) ಮಾಡಿಕೊಳ್ಳಬಹುದು – ಇದಕ್ಕೆ ಯಾವುದೇ ತಕರಾರುಗಳು ಇಲ್ಲ ! ಮನೆಯಲ್ಲಿ ಗಂಡನಾದವನು ಆರಾಮಾಗಿ ಕುಳಿತಾಗ ಹೆಂಡತಿಯಾದವಳು ಮನೆಯ ಕೆಲಸವನ್ನೆಲ್ಲ ಅಚ್ಚಕಟ್ಟಾಗಿ ಮಾಡಿ ಮುಗಿಸಬೇಕು ; ಹೆಚ್ಚು-ಕಡಿಮೆಯಾದರೆ ಬೈಗುಳಗಳ ಸುರಿಮಳೆ ; ಬುದ್ಧಿಯಿಲ್ಲದವಳು ಎಂಬ ತೆಗಳಿಕೆ !

ಈ ಎಲ್ಲ ಕಾರಣಗಳಿಂದಲೇ ಕೆಲವು ಮುಖಂಡರು, ಸನ್ಯಾಸಿಗಳು ಹೆಣ್ಣಿನ ಬಗ್ಗೆ ಬಾಯಿಗೆ ಬಂದಂತೆ ಮಾತನಾಡತೊಡಗಿದ್ದಾರೆ. ಯಾರೋ ಒಬ್ಬರು ಹೆಣ್ಣುಮಕ್ಕಳು ಹೊರಗೆ ಹೋಗಬಾರದು ; ತಗ್ಗಿ-ಬಗ್ಗಿ ನಡೆಯಬೇಕು. ಯಾವುದೇ ಅಲಂಕಾರ ಮಾಡಿಕೊಳ್ಳಬಾರದು ; ಹೊಸ ಬದುಕಿಗೆ ಹಾತೊರೆಯಬಾರದು ; ಬಟ್ಟೆಗಳನ್ನು ಮೈ ತುಂಬ ಧರಿಸಬೇಕು ಎಂದು ಮೊದಲಾಗಿ ಒದರಿ, ಹೆಣ್ಣುಮಕ್ಕಳು ಹೀಗಿದ್ದರೆ ಅವರ ಮೇಲೆ ಅತ್ಯಾಚಾರಗಳು ನಡೆಯುವುದಿಲ್ಲ ಎಂದು ಭವಿಷ್ಯ ನುಡಿದರು. ನಗರಗಳಲ್ಲಿ ಹೆಣ್ಣುಮಕ್ಕಳು ವಿದೇಶಿ ಸಂಸ್ಕೃತಿಯಿಂದ ಪ್ರಭಾವಿತರಾಗಿರುವುದರಿಂದ ಚೆಲ್ಲು ಚೆಲ್ಲಾಗಿರುತ್ತಾರೆ. ಹೀಗಾಗಿ ಸಹಜವಾಗಿಯೇ ಅತ್ಯಾಚಾರ ಪ್ರಮಾಣ ಹೆಚ್ಚು ಎಂದು ಕರಬುತ್ತಾರೆ ! ಯಾಕೆ ಹಳ್ಳಿಗಳಲ್ಲಿಯೂ ಹೆಣ್ಣುಮಕ್ಕಳ ಮೇಲೆ ಅತ್ಯಾಚಾರ ನಡೆಯುವುದಿಲ್ಲವೆ ! ಅಲ್ಲಿ ಪ್ರಚಾರ ಸಿಗುವುದಿಲ್ಲ ; ನಗರಗಳಲ್ಲಿ ಸುದ್ದಿ ಬಹುಬೇಗ ಹಬ್ಬುತ್ತದೆ ಅಷ್ಟೆ ! ಹಾಗೆ ನೋಡಿದರೆ ಇಂಥ ಎಲ್ಲಿ ವಿಕೃತಿ ಇರುತ್ತದೆಯೋ ಅಂಥಲ್ಲೆಲ್ಲ ಇವು ನಡೆಯುತ್ತಲೇ ಇರುತ್ತವೆ.

ಇನ್ನೊಬ್ಬರು ಬಾಯಿ ಬಾಯಿ ಪಡೆದುಕೊಂಡು ಅತ್ಯಾಚಾರಿಗಳು ಎದುರಿಗೆ ಬಂದಾಗ ಹೆಣ್ಣುಮಕ್ಕಳು ಅವರಿಗೆ ಕೈ ಮುಗಿದು. ‘ಅಣ್ಣಾ, ಅಪ್ಪಾ’ ಎನ್ನಬೇಕು. ಆಗ ಅತ್ಯಾಚಾರಿಗಳ ಮನಃಪರಿವರ್ತನೆಯಾಗುತ್ತದೆ ಎಂಬುದಾಗಿ ಪ್ರವಚನ ಹೇಳತೊಡಗಿದರು ! ಹೆಣ್ಣನ್ನು ಎಷ್ಟೊಂದು ಹೀನಾಯವಾಗಿ ನಡೆಯಿಸಿಕೊಳ್ಳುತ್ತದೆಯಲ್ಲ ಈ ದೇಶ ! ವಿಕೃತ ಮನಸ್ಸಿನವರ ಮುಂದೆ ಕೈ ಕಾಲು ಹಿಡಿದು ಕಾಪಾಡಿ ಎಂದರೆ ರಕ್ಷಣೆ ಸಿಗಲು ಸಾಧ್ಯವೆ ! ಇಂಥ ಮಾತುಗಳೆಲ್ಲ ಹೆಣ್ಣುಮಕ್ಕಳನ್ನು ಇನ್ನೊಂದಿಷ್ಟು ಭ್ರಮಾವಲಯದಲ್ಲಿ ಕೆಡವಲು ಮಾಡುವ ಹುನ್ನಾರಗಳೇ ಆಗಿವೆ ! ಇದಕ್ಕೆಲ್ಲ ಮೂಲ ಕಾರಣ ಮನುಸ್ಮೃತಿ ಇನ್ನೂ ಉರಿಯುತ್ತಲೇ ಇದೆ ! ಅದನ್ನು ಮತ್ತೊಮ್ಮೆ ನಾವೆಲ್ಲ ಸೇರಿ ನಮ್ಮ ಮನೆಗಳಿಂದ-ಮನಗಳಿಂದ ಹೊರ ತಂದು ಸಂಪೂರ್ಣವಾಗಿ ಸುಡಬೇಕಿದೆ ; ಸುಟ್ಟು ಇನ್ನೆಂದೂ ಚಿಗಿಯದಂತೆ ಬೂದಿ ಮಾಡಬೇಕಿದೆ.

Thursday, November 22, 2012

ಪತ್ರಕರ್ತ `ಸಾಕ್ಷಿ'ಯಾಗಬೇಕೆ, `ರಕ್ಷಕ'ನಾಗಬೇಕೆ?

                                   - ದಿನೇಶ ಮೀನಮಟ್ಟು 
ಆತ್ಮಹತ್ಯೆ ಮಾಡಿಕೊಳ್ಳುವಂತಹ ಅಪರಾಧವನ್ನು ಅವನೇನು ಮಾಡಿರಲಿಲ್ಲ. ವೃತ್ತಿಯಲ್ಲಿ ಆತ ಒಬ್ಬ ಪತ್ರಿಕಾ ಛಾಯಾಗ್ರಾಹಕನಾಗಿದ್ದ. ಜಗತ್ತಿನ ಅತಿದೊಡ್ಡ ಪತ್ರಿಕೆಗಳು ಆತನ ಪೋಟೋಗಳನ್ನು ಪ್ರಕಟಿಸಲು ತುದಿಗಾಲಲ್ಲಿ ನಿಂತಿದ್ದವು. ಪ್ರತಿಷ್ಠಿತ ಪುಲಿಟ್ಜರ್ ಪ್ರಶಸ್ತಿ ಒಲಿದು ಬಂದಿತ್ತು.

ಎಲ್ಲಕ್ಕಿಂತಲೂ ಮುಖ್ಯವಾಗಿ ಆತನ ವಯಸ್ಸು ಕೇವಲ ಮೂವತ್ತಮೂರು ಆಗಿತ್ತು. ಆ ವಯಸ್ಸಿಗೆ ಸಿಕ್ಕ ಯಶಸ್ಸು, ಮನ್ನಣೆಯನ್ನು ಗಮನಿಸಿದರೆ ವೃತ್ತಿಯಲ್ಲಿ ಆತನ ಭವಿಷ್ಯ ಉಜ್ವಲವಾಗಿತ್ತು ಎನ್ನುವುದಕ್ಕೆ ಅನುಮಾನವೇ ಇರಲಿಲ್ಲ. ಹೀಗಿದ್ದರೂ ಬದುಕುವ ಆಸೆಯನ್ನೇ ಕಳೆದುಕೊಂಡ ಆತ ಆತ್ಮಹತ್ಯೆ ಮಾಡಿಕೊಂಡ. ಆತನ ಹೆಸರು ಕೆವಿನ್ ಕಾರ್ಟರ್.

ಇಷ್ಟು ಹೇಳಿದರೆ ಬಹಳಷ್ಟು ಮಂದಿಗೆ ಗುರುತು ಹತ್ತಲಾರದು. ಆತ ಜಗತ್ತಿಗೆ ಪರಿಚಯವಾಗಿದ್ದೇ ಒಂದು ಫೋಟೊದ ಮೂಲಕ. ದಕ್ಷಿಣ ಆಫ್ರಿಕಾದವನಾಗಿದ್ದ ಕಾರ್ಟರ್ ಬರಗಾಲ ಮತ್ತು ಬಂಡುಕೋರರ ಹಿಂಸಾಚಾರದಿಂದ ನಲುಗಿಹೋಗಿದ್ದ ಸೂಡಾನ್‌ಗೆ ಹೋಗಿದ್ದಾಗ ಅಲ್ಲೊಂದು ಹೃದಯವಿದ್ರಾವಕ ದೃಶ್ಯವನ್ನು ಕಾಣುತ್ತಾನೆ. ತಕ್ಷಣ ಆತನೊಳಗಿದ್ದ ಕಸಬುದಾರ ಛಾಯಾಗ್ರಾಹಕ ಜಾಗೃತನಾಗುತ್ತಾನೆ.

ಹಸಿವಿನಿಂದಾಗಿ ಮೂಳೆಚಕ್ಕಳವಾಗಿ ಹೋಗಿದ್ದ ಮಗುವೊಂದು ಸಂತ್ರಸ್ತರ ಶಿಬಿರದಲ್ಲಿರುವ ಗಂಜಿ ಕೇಂದ್ರದ ಕಡೆ ತೆವಳುತ್ತಾ ಹೋಗುತ್ತಿರುವುದು ಮತ್ತು ಅದರ ಹಿಂದೆಯೇ ಒಂದು ರಣಹದ್ದು ಆ ಮಗುವಿನ ಮೇಲೆ ಎರಗಿಬೀಳಲು ಕಾಯುತ್ತಿರುವ ದೃಶ್ಯ ಅದು.

ಸದ್ದು ಮಾಡಿದರೆ ಹದ್ದು ಹಾರಿಹೋಗುತ್ತೇನೋ ಎಂಬ ಭಯದಿಂದ ಕಾರ್ಟರ್ ಕೂಡಾ ತೆವಳುತ್ತಾ ಸಾಧ್ಯ ಇರುವಷ್ಟು  ಹತ್ತಿರ ಹೋಗಿ ಫೋಟೊ ತೆಗೆಯುತ್ತಾನೆ. ಅದಕ್ಕಿಂತ ಮೊದಲು ಹದ್ದು ರೆಕ್ಕೆ ಬಿಚ್ಚಬಹುದೇನೋ ಎಂಬ ನಿರೀಕ್ಷೆಯಿಂದ ಆತ 20 ನಿಮಿಷ ಕಾದಿದ್ದನಂತೆ.

ಆ ಫೋಟೊ ಮೊದಲು `ದಿ ನೂಯಾರ್ಕ್ ಟೈಮ್ಸ` ಮತ್ತು `ದಿ ಮೇಲ್ ಆ್ಯಂಡ್ ಗಾರ್ಡಿಯನ್` ಪತ್ರಿಕೆಗಳಲ್ಲಿ ಪ್ರಕಟವಾಗುತ್ತದೆ. ಅದರ ನಂತರ  ಹಲವಾರು ಪತ್ರಿಕೆಗಳು ಅದನ್ನು ಮರುಮುದ್ರಿಸಿದ್ದವು. ಜಗತ್ತಿನಾದ್ಯಂತ ಓದುಗರು ಅದಕ್ಕೆ ಪ್ರತಿಕ್ರಿಯಿಸಿದ್ದರು.  ಬರಗಾಲ ಮತ್ತು ಬಂಡುಕೋರರ ವಿರುದ್ಧ ಹೋರಾಟ ನಡೆಸುತ್ತಿದ್ದ ಸೂಡಾನ್ ಸರ್ಕಾರಕ್ಕೆ ವಿಶ್ವದ ಎಲ್ಲ ಕಡೆಗಳಿಂದಲೂ ನೆರವು ಹರಿದುಬಂದಿತ್ತು.

ಆದರೆ ಬಹಳಷ್ಟು ಓದುಗರು ನೋವು, ದುಃಖ, ಆಕ್ರೋಶಗಳಿಂದ ಪ್ರತಿಕ್ರಿಯಿಸಿದ್ದರು. ಕೆಲವರು ಛಾಯಾಗ್ರಾಹಕನ ಅಸಂವೇದನಾಶೀಲತೆಯನ್ನು ಟೀಕಿಸಿದ್ದರು. `..ಒಬ್ಬ ಛಾಯಾಗ್ರಾಹಕ ಕೇವಲ ಒಂದು ಫೋಟೊ ಸಂಪಾದನೆಯನ್ನಷ್ಟೇ ನೋಡದೆ, ಮೊದಲು ಹದ್ದನ್ನು ಅಲ್ಲಿಂದ ಓಡಿಸಿ ಮಗುವನ್ನು ರಕ್ಷಿಸಬೇಕಿತ್ತು. ವೃತ್ತಿ ಏನೇ ಇರಲಿ ಆತ ಮೊದಲು ಮನುಷ್ಯನಾಗಬೇಕು..` ಎಂದೆಲ್ಲ ಜನ ಪ್ರತಿಕ್ರಿಯಿಸಿದ್ದರು.

ಕೆಲವು ಪತ್ರಿಕೆಗಳು ಕಾರ್ಟರ್ ಕೂಡಾ ಒಬ್ಬ ರಣಹದ್ದು ಎಂದು ಬಣ್ಣಿಸಿ `ಎರಡು ಹದ್ದುಗಳ ನಡುವೆ ಮಗು ಇತ್ತು` ಎಂದು ಬರೆದಿದ್ದವು. ಕೊನೆಗೆ `ನೂಯಾರ್ಕ್ ಟೈಮ್ಸ`ನ ಸಂಪಾದಕರು ವಿವರಣೆ ಕೊಡಬೇಕಾಯಿತು.

ಸತ್ಯಸಂಗತಿ ಏನೆಂದರೆ ಫೋಟೊ ತೆಗೆದ ಕೂಡಲೇ ಕಾರ್ಟರ್ ಹದ್ದನ್ನು ಅಲ್ಲಿಂದ ಓಡಿಸಿ ಆ ಹೆಣ್ಣುಮಗುವನ್ನು ತಕ್ಷಣದ ಅಪಾಯದಿಂದ ಪಾರು ಮಾಡಿದ್ದ. ಅದರ ನಂತರ ಮಗುವಿನ ಗತಿಯೇನಾಯಿತು ಎನ್ನುವುದು ಆತನಿಗೂ ತಿಳಿದಿರಲಿಲ್ಲ. ಬರಗಾಲಪೀಡಿತ ಸೂಡಾನ್‌ನಲ್ಲಿ ಮುಕ್ತಪತ್ರಿಕಾ ಸ್ವಾತಂತ್ರ್ಯ ಇರಲಿಲ್ಲ.

ಅಲ್ಲಿದ್ದ ಬರಪೀಡಿತ ಮನುಷ್ಯರ ಫೋಟೊ ತೆಗೆಯುವುದು ಅಲ್ಲಿನ ಪ್ರಭುತ್ವಕ್ಕೆ ಇಷ್ಟದ ಕೆಲಸವೂ ಆಗಿರಲಿಲ್ಲ. ಬರಪೀಡಿತ ವ್ಯಕ್ತಿಗಳು ಸಾಂಕ್ರಾಮಿಕ ರೋಗದಿಂದ ಬಳಲುತ್ತಿರುವ ಸಾಧ್ಯತೆ ಇರುವುದರಿಂದ ಅವರನ್ನು ಮುಟ್ಟುವುದಕ್ಕೆ ನಿರ್ಬಂಧ ಕೂಡಾ ಇತ್ತು. ಒಂದು ಫೋಟೊವನ್ನಷ್ಟೇ ನೋಡಿ ಕಾರ್ಟರ್ ಮನುಷ್ಯನೇ ಅಲ್ಲ ಎಂದು ತೀರ್ಮಾನಿಸಿದ ಅಮಾಯಕ ಜನರಿಗೆ ಈ ಎಲ್ಲ ವಿವರಗಳು ಗೊತ್ತಿರುವ ಸಾಧ್ಯತೆಗಳು ಕಡಿಮೆ. ಇದು ಎಲ್ಲ  ಕಾಲದ ಸತ್ಯ.

`ಆ ಬಾಲಕಿಯ ಫೋಟೊ ತೆಗೆದ ನಂತರ ಕಾರ್ಟರ್ ಮನಸ್ಸು ಕಲಕಿಹೋಗಿತ್ತು. ಆತ ಸಮೀಪದ ಮರವೊಂದರ ನೆರಳಲ್ಲಿ ಕೂತು ಸಿಗರೇಟ್ ಸೇದುತ್ತಾ ದೇವರ ಹತ್ತಿರ ಮಾತನಾಡಿದ್ದ. ಅವನು ಎಷ್ಟೊಂದು ದುಃಖಿತನಾಗಿದ್ದನೆಂದರೆ `ನನಗೆ ನನ್ನ ಮಗಳನ್ನು ಆಲಿಂಗಿಸಬೇಕೆನಿಸುತ್ತದೆ` ಎಂದು ಬಡಬಡಿಸುತ್ತಿದ್ದ` ಎಂದು ಆ ಸಮಯದಲ್ಲಿ ಕಾರ್ಟರ್ ಜತೆಯಲ್ಲಿದ್ದ ಸ್ನೇಹಿತ ಸಿಲ್ವಾ ನಂತರದ ದಿನಗಳಲ್ಲಿ ಬರೆದಿದ್ದ.

ಈ ವಿವಾದಗಳ ನಂತರವೂ ಆ ಚಿತ್ರಕ್ಕಾಗಿ ಕೆವಿನ್ ಕಾರ್ಟರ್  ಪ್ರತಿಷ್ಠಿತ `ಪುಲಿಟ್ಜರ್` ಪ್ರಶಸ್ತಿ ಪಡೆಯುತ್ತಾನೆ. ರಾಯಿಟರ್ ಸುದ್ದಿ ಸಂಸ್ಥೆಯಲ್ಲಿ ಆಕರ್ಷಕ ಸಂಬಳದ ಉದ್ಯೋಗ ಪಡೆಯುತ್ತಾನೆ. ಆದರೆ ಆತ ಎಂದೂ ಸಂತೋಷವಾಗಿರಲಿಲ್ಲ.

ಕೆವಿನ್ ಕಾರ್ಟರ್‌ನ ಬದುಕನ್ನು ಸಾವು ಕೊನೆಗೊಳಿಸಿದರೂ, ಆ ಸಾವಿನಿಂದ ಹುಟ್ಟಿಕೊಂಡ ಅನೇಕ ಪ್ರಶ್ನೆಗಳು ಇಂದು ಕೂಡಾ ಮಾಧ್ಯಮಕ್ಷೇತ್ರದ ಮುಂದೆ ಇವೆ. `ಒಬ್ಬ ಪತ್ರಕರ್ತ ಸಾಕ್ಷಿಯಾಗಬೇಕೇ, ಇಲ್ಲವೇ ರಕ್ಷಕನಾಗಬೇಕೇ?` ಎನ್ನುವುದು ಮೊದಲ ಪ್ರಶ್ನೆ. 

ಮಂಗಳೂರಿನ `ಸ್ಟೇಹೋಂ` ಮೇಲೆ ದಾಳಿ ನಡೆಸಿ ಅಲ್ಲಿದ್ದ ಯುವಕ - ಯುವತಿಯರ ಜತೆ ಅಸಭ್ಯವಾಗಿ ವರ್ತಿಸಿದ್ದ ದುಷ್ಕರ್ಮಿಗಳ ಕೃತ್ಯವನ್ನು ವರದಿ ಮಾಡಿದ್ದ ಸುದ್ದಿವಾಹಿನಿಯ ವರದಿಗಾರ ನವೀನ್ ಸೂರಿಂಜೆಯ ಬಂಧನ ಕೆವಿನ್ ಕಾರ್ಟರ್ ಬಿಟ್ಟುಹೋಗಿರುವ ಪ್ರಶ್ನೆಗಳನ್ನು ಮತ್ತೆ ಕೇಳುವಂತೆ ಮಾಡಿದೆ.

ಅಂತರರಾಷ್ಟ್ರೀಯ ಖ್ಯಾತಿಯ ಪತ್ರಿಕಾಛಾಯಾಗ್ರಾಹಕ ರಘು ರಾಯ್ ಇತ್ತೀಚಿನ ಇಂತಹ ವಿವಾದಗಳ ಬಗ್ಗೆ ಪ್ರತಿಕ್ರಿಯಿಸುತ್ತಾ `ಶೂಟ್ ಮಾಡಿ ಚಿತ್ರ ಪಡೆಯುವುದು ಅದರ ಮೂಲಕ ಘಟನೆಗೆ ಸಾಕ್ಷ್ಯ ಒದಗಿಸುವುದು ಅಷ್ಟೇ ಒಬ್ಬ ಕ್ಯಾಮೆರಾಮೆನ್ ಕೆಲಸ` ಎಂದಿದ್ದರು. ಎಲ್ಲರೂ ಈ ಅಭಿಪ್ರಾಯವನ್ನು ಒಪ್ಪುವುದಿಲ್ಲ.

ಇದಕ್ಕೆ ರೋಚಕತೆಯ ಬೆನ್ನುಹತ್ತಿ ದಾರಿ ತಪ್ಪುತ್ತಿರುವ ಕೆಲವು ಸುದ್ದಿವಾಹಿನಿಗಳು ಮುಖ್ಯ ಕಾರಣ. `ಪತ್ರಿಕಾ ಸ್ವಾತಂತ್ರ್ಯವನ್ನು ದುರುಪಯೋಗಪಡಿಸಿಕೊಳ್ಳುತ್ತಿರುವ ಇಂತಹ ಮಾಧ್ಯಮಗಳಿಗೆ ಮೂಗುದಾರ ಹಾಕಬೇಕು` ಎಂದು ಜನ ಬಹಿರಂಗವಾಗಿಯೇ ಮಾತನಾಡತೊಡಗಿದ್ದಾರೆ. ವೃತ್ತಿನಿಷ್ಠ ಮಾಧ್ಯಮಗಳನ್ನು ಎಂದೂ ಬಯಸದ ಪ್ರಭುತ್ವ, ಹಾದಿ ತಪ್ಪಿರುವ ಕೆಲವು ಸುದ್ದಿವಾಹಿನಿಗಳನ್ನು ಉಲ್ಲೇಖಿಸಿ ಒಟ್ಟು ಪತ್ರಿಕಾ ಸ್ವಾತಂತ್ರ್ಯವನ್ನೇ ಹತ್ತಿಕ್ಕುವ ಪ್ರಯತ್ನ ನಡೆಸುತ್ತಿದೆ.

ಅದು  ಪಶ್ಚಿಮ ಬಂಗಾಳದ ಮಮತಾ ಬ್ಯಾನರ್ಜಿ ಸರ್ಕಾರದಿಂದ ಕರ್ನಾಟಕದ ಬಿಜೆಪಿ ಸರ್ಕಾರದವರೆಗೆ ಎಲ್ಲೆಡೆ ವ್ಯವಸ್ಥಿತವಾಗಿ ಪ್ರಾರಂಭವಾಗಿದೆ. ಆದುದರಿಂದ `ಪತ್ರಿಕಾ ಸ್ವಾತಂತ್ರ್ಯದ ದುರುಪಯೋಗ` ಮತ್ತು `ಪತ್ರಿಕಾ ಸ್ವಾತಂತ್ರ್ಯದ ಹರಣ`ವನ್ನು ಪ್ರತ್ಯೇಕವಾಗಿ ಇಟ್ಟುಕೊಂಡು ಚರ್ಚೆ ನಡೆಸಬೇಕಾಗಿದೆ. ಇವೆರಡನ್ನೂ ಸಾಮಾನ್ಯೀಕರಿಸುವುದರಿಂದ ಅಪಾಯ ಪತ್ರಕರ್ತರಿಗೆ ಮಾತ್ರ ಅಲ್ಲ, ಪ್ರಜಾಪ್ರಭುತ್ವಕ್ಕೂ ಇದೆ.

ಪತ್ರಕರ್ತರು, ಪತ್ರಿಕಾಛಾಯಾಗ್ರಾಹಕರು ಮತ್ತು ಕ್ಯಾಮೆರಾಮೆನ್‌ಗಳು `ಸಾಕ್ಷಿಗಳಾಗಬೇಕೆ, ರಕ್ಷಕರಾಗಬೇಕೆ?` ಎನ್ನುವುದು ಇತ್ತೀಚಿನವರೆಗೆ ಕೇವಲ ನೈತಿಕ ಪ್ರಶ್ನೆಯಾಗಿತ್ತು. ಆದುದರಿಂದ ರಕ್ಷಕರಾಗದೆ ಸಾಕ್ಷಿಗಳಾಗಲಷ್ಟೇ ಹೊರಟವರನ್ನು ಪೊಲೀಸರು ಬಂಧಿಸುತ್ತಿರಲಿಲ್ಲ.

ಈಗಲೂ ಇದನ್ನು ನೈತಿಕ ಪ್ರಶ್ನೆಯಾಗಿಯೇ ಇಟ್ಟುಕೊಂಡು ಚರ್ಚೆ ನಡೆಯಲಿ, ನಡೆಯಲೇಬೇಕು. ಆದರೆ ಪೊಲೀಸರು ಈಗ ಇದನ್ನು ಕಾನೂನಿನ ಪ್ರಶ್ನೆಯನ್ನಾಗಿ ಮಾಡಿಕೊಳ್ಳಲು ಹೊರಟಿದ್ದಾರೆ. `ಪತ್ರಕರ್ತರಿಗೆ `ಸಾಕ್ಷಿದಾರನ ಕರ್ತವ್ಯ`ವಷ್ಟೇ ಮುಖ್ಯ ಅಲ್ಲ, ಆತನಿಗೆ `ರಕ್ಷಕನ ಜವಾಬ್ದಾರಿ`ಯೂ ಇರಬೇಕು, ಪತ್ರಕರ್ತನೊಬ್ಬ ರಕ್ಷಕನಾಗದೆ ಕೇವಲ ಸಾಕ್ಷಿಯಾದರೆ ಆತ ಅಪರಾಧಿ` ಎಂದು ಪೊಲೀಸರು ಹೇಳುತ್ತಿದ್ದಾರೆ. 

ತನ್ನ ವರದಿ ಇಲ್ಲವೇ ಚಿತ್ರವನ್ನು ಸಾಕ್ಷಿಯಾಗಿ ಒದಗಿಸುವ ಮೂಲಕವೇ ಪತ್ರಕರ್ತ ರಕ್ಷಕನಾಗುತ್ತಾನೆ ಎಂಬುದನ್ನು ಪೊಲೀಸರು ಮರೆತಿದ್ದಾರೆ. ನವೀನ್ ಮತ್ತು ಗೆಳೆಯರು `ಹೋಂಸ್ಟೇ` ದಾಳಿಯನ್ನು ಮಾಧ್ಯಮಗಳ ಮೂಲಕ ಬಯಲುಗೊಳಿಸದೆ ಇದ್ದಿದ್ದರೆ ಅಲ್ಲಿನ ಕೋಮುವಾದಿಗಳ ಅಟ್ಟಹಾಸ ಮತ್ತು ಪೊಲೀಸರ ನಿಷ್ಕ್ರಿಯತೆ ಖಂಡಿತ ಬಯಲಾಗುತ್ತಿರಲಿಲ್ಲ. ಈ ದುಷ್ಕೃತ್ಯವನ್ನು ಸಾಕ್ಷಿಸಮೇತ ಬಯಲುಗೊಳಿಸುವ ಮೂಲಕ ನವೀನ್ ಮತ್ತು ಗೆಳೆಯರು ಮುಂದೆ ಇನ್ನಷ್ಟು ಯುವಕ-ಯುವತಿಯರು ಈ ರೀತಿಯ ದಾಳಿಗೊಳಗಾಗದಂತೆ ರಕ್ಷಿಸಿದ್ದಾರೆ.

`ಒಬ್ಬ ವೃತ್ತಿನಿಷ್ಠ, ಸಂವೇದನಾಶೀಲ ಮತ್ತು ಪ್ರಾಮಾಣಿಕನಾದ ಪತ್ರಕರ್ತ ಇಲ್ಲವೇ ಪತ್ರಿಕಾಛಾಯಾಗ್ರಾಹಕ ಯಾವ ದೇಶ ಇಲ್ಲವೇ ಕಾಲದಲ್ಲಿ  ಸಂತೋಷ-ನೆಮ್ಮದಿಯಿಂದ ಬದುಕಲು ಸಾಧ್ಯವೇ?` ಎನ್ನುವ ಎರಡನೆ ಪ್ರಶ್ನೆಯನ್ನು ಕೂಡಾ ಕೆವಿನ್ ಕಾರ್ಟರ್ ಬಿಟ್ಟುಹೋಗಿದ್ದಾನೆ. ಆತನ ಆತ್ಮಹತ್ಯೆಗೆ ಸೂಡಾನ್ ಬಾಲಕಿಯ ಫೋಟೊವೊಂದೇ ಕಾರಣ ಅಲ್ಲ.

ವರ್ಣದ್ವೇಷ ಅದರ ಉತ್ತುಂಗದಲ್ಲಿರುವ ದಿನಗಳಲ್ಲಿ ದಕ್ಷಿಣ ಆಫ್ರಿಕಾದ ಮಧ್ಯಮ ವರ್ಗದ ಬಿಳಿಯರ ಕುಟುಂಬದಲ್ಲಿ ಹುಟ್ಟಿದ್ದ ಕಾರ್ಟರ್ ಬಾಲ್ಯದಿಂದಲೇ ಕಪ್ಪುಜನಾಂಗದವರ ಮೇಲೆ ಬಿಳಿಯರು ನಡೆಸುತ್ತಿದ್ದ ದೌರ್ಜನ್ಯಗಳಿಗೆ ಸಾಕ್ಷಿಯಾಗಿದ್ದವ. ಅವಕಾಶ ಸಿಕ್ಕಿದಾಗಲೆಲ್ಲ ಅದರ ವಿರುದ್ಧ ಪ್ರತಿಭಟನೆ ನಡೆಸಿದವ. `ದಿ ಬ್ಯಾಂಗ್ ಬ್ಯಾಂಗ್ ಕ್ಲಬ್` ಎಂದು ಕರೆಯಲಾಗುತ್ತಿದ್ದ ನಾಲ್ಕು ಬಿಳಿಯ ಪತ್ರಿಕಾಛಾಯಾಗ್ರಾಹಕರ ಸಂಘಟನೆಯಲ್ಲಿ ಕಾರ್ಟರ್ ಒಬ್ಬನಾಗಿದ್ದ.

ದಕ್ಷಿಣ ಆಫ್ರಿಕಾದಲ್ಲಿ ಬಿಳಿಯ ದುಷ್ಕರ್ಮಿಗಳು ಕಪ್ಪುಜನಾಂಗಕ್ಕೆ ಸೇರಿದ ವ್ಯಕ್ತಿಗಳ ಕುತ್ತಿಗೆಗೆ ಟಯರ್‌ಗಳನ್ನು ತೂಗುಹಾಕಿ ಬೆಂಕಿಹಚ್ಚಿ ಸಾಯಿಸುವುದು ಸಾಮಾನ್ಯವಾಗಿತ್ತು. ಇದಕ್ಕೆ `ನೆಕ್ಲೆಸಿಂಗ್` ಎಂದು ಕರೆಯುತ್ತಿದ್ದರು. ಇಂತಹ ಮೊದಲ ಘಟನೆಯ ಚಿತ್ರ ತೆಗೆದು ಪತ್ರಿಕೆಯಲ್ಲಿ ಪ್ರಕಟಣೆಗೆ ಕೊಟ್ಟವ ಕಾರ್ಟರ್. ಈ ರೀತಿಯ ಹಲವಾರು ಅಮಾನುಷ ಘಟನೆಗಳ ಚಿತ್ರಗಳನ್ನು ಕಾರ್ಟರ್ ತೆಗೆದಿದ್ದ. ವೃತ್ತಿಜೀವನದಲ್ಲಿ ಎದುರಿಸಿದ ಇಂತಹ ಘಟನೆಗಳಿಂದ ಆತ ನೊಂದುಹೋಗಿದ್ದ.

 ಅಷ್ಟೊತ್ತಿಗೆ ಆತನ ಜೀವದ ಗೆಳೆಯ ಮತ್ತು `ದಿ ಬ್ಯಾಂಗ್‌ಬ್ಯಾಂಗ್ ಕ್ಲಬ್`ನ ಸದಸ್ಯ ಕೆನ್ ಊಸ್ಟರ್‌ಬ್ರೋಕ್ ಫೋಟೊ ತೆಗೆಯುತ್ತಿದ್ದಾಗಲೇ ಪೊಲೀಸರ ಗುಂಡಿಗೆ ಬಲಿಯಾಗುತ್ತಾನೆ. ಸಾವಿನ ಸಮಯದಲ್ಲಿ ಗೆಳೆಯನ ಸಮೀಪವೇ ಕಾರ್ಟರ್ ಇದ್ದ. ಆತನ ಮನೋಕ್ಲೇಶಕ್ಕೆ ಈ ಘಟನೆ ಕೂಡಾ ಕಾರಣ. ನಂತರದ ದಿನಗಳಲ್ಲಿ ಕುಡಿತದ ದಾಸನಾಗಿ ಹೋಗಿದ್ದ, ಮಾದಕ ವ್ಯಸನಿಯೂ ಆಗಿದ್ದ.

ಕೊನೆಕೊನೆಗೆ ತಾನು ತೆಗೆದ ಚಿತ್ರಗಳೆಲ್ಲವೂ ಎದ್ದುಬಂದು ಆತನನ್ನು ಕಾಡತೊಡಗಿ ಬದುಕಿನ ನೆಮ್ಮದಿಯನ್ನೇ ಕಸಿದುಕೊಂಡುಬಿಟ್ಟಿದ್ದವು.  ಸಾಯುವ ಮೊದಲು ಬರೆದಿಟ್ಟಿದ ಪತ್ರ ಕೂಡಾ ಇದನ್ನೇ ಹೇಳುತ್ತಿದೆ:  `....ಹತ್ಯೆಗಳು... ಹೆಣಗಳು.. ಕೋಪ, ನೋವು... ಹಸಿವು ಮತ್ತು ಗಾಯದಿಂದ ನರಳುತ್ತಿರುವ ಮಕ್ಕಳು... ಹಿಂಸಾವಿನೋದಿ ಹುಚ್ಚು ಪೊಲೀಸರು... -ಈ ಎಲ್ಲ ನೆನಪುಗಳು ನನ್ನನ್ನು ಕಾಡುತ್ತಿವೆ. ನಾನು ನನ್ನ ಗೆಳೆಯ ಕೆನ್‌ನನ್ನು ಭೇಟಿಯಾಗಲು ಹೋಗುತ್ತಿದ್ದೇನೆ, ಆದೃಷ್ಟಶಾಲಿಯಾಗಿದ್ದರೆ ಆತನ ಭೇಟಿಯಾಗಬಹುದು....` ಎಂದು ಕಾರ್ಟರ್ ಆ ಪತ್ರದಲ್ಲಿ ಬರೆದಿದ್ದ.

 ಪತ್ರಕರ್ತರು ಸಂವೇದನಾಶೀಲರಾಗಿರಕೆಂದು ಸಮಾಜ ಬಯಸುತ್ತದೆ, ಸರ್ಕಾರವೂ ಅದನ್ನೇ ಹೇಳುತ್ತಿದೆ. ಆದರೆ ರಾಕ್ಷಸ ರೂಪ ಪಡೆಯುತ್ತಿರುವ ಸರ್ಕಾರ ಮತ್ತು ಸಂವೇದನೆಯನ್ನೇ ಕಳೆದುಕೊಳ್ಳುತ್ತಿರುವ ಸಮಾಜದ ಮಧ್ಯೆ ಪತ್ರಕರ್ತ ಸಂವೇದನಾಶೀಲನಾಗಿ ಉಳಿಯಲು ಹೇಗೆ ಸಾಧ್ಯ? ಬಹಳಷ್ಟು ಸಂದರ್ಭಗಳಲ್ಲಿ ವೃತ್ತಿನಿಷ್ಠೆ ಮತ್ತು ಪ್ರಾಮಾಣಿಕತೆಯಿಂದ ಕೆಲಸ ಮಾಡಬೇಕೆಂದು ಹೊರಟ ಪತ್ರಕರ್ತ ಹತಾಶನಾಗುತ್ತಾನೆ, ಸಿನಿಕನಾಗುತ್ತಾನೆ, ದುರ್ಬಲ ಮನಸ್ಸಿನವನಾಗಿದ್ದರೆ ಕೊನೆಗೆ ಕೆವಿನ್ ಕಾರ್ಟರ್‌ನಂತೆ ಆತ್ಮಹತ್ಯೆ ಮಾಡಿಕೊಳ್ಳಬಹುದು.

ಮತ್ತೆ ಮೊದಲಿನ ಪ್ರಶ್ನೆಗೆ ಬರುವುದಾದರೆ ಕೆವಿನ್ ಕಾರ್ಟರ್ ಆತ್ಮಹತ್ಯೆ ಮಾಡಿಕೊಳ್ಳುವಂತಹ ಯಾವ ಅಪರಾಧ ಮಾಡಿದ್ದ? ಇದನ್ನೇ ಇನ್ನು ಸ್ವಲ್ಪ ಬದಲಾಯಿಸಿ ಕೇಳುವುದಾದರೆ ನವೀನ್ ಸೂರಿಂಜೆ ಎಂಬ ಪತ್ರಕರ್ತ ಬಂಧನಕ್ಕೊಳಗಾಗುವಂತಹ ಯಾವ ಅಪರಾಧ ಮಾಡಿದ್ದ? ಅಪರಾಧ ಮಾಡದೆ ಇದ್ದಿದ್ದರೆ ಬಂಧಿತ ಪತ್ರಕರ್ತನ ವೃದ್ದ ತಂದೆ-ತಾಯಿಯ ನೋವು ನಮ್ಮದು ಕೂಡಾ ಎಂದು ಸಮಾಜಕ್ಕೆ ಯಾಕೆ ಅನಿಸುವುದಿಲ್ಲ?

ಕೃಪೆ : ಪ್ರಜಾವಾಣಿ

Sunday, September 02, 2012

Kaksparsh : Potential Wasted ( Marathi Movie Review)

Kaksparsh is easily one of the most promoted Marathi films in recent times. Zee Talkies having taken up the distribution have gone all out in securing the film a good release in cinema halls as well. The film has entered the 3rd week and still the shows are running housefull which is certainly a rarity for a marathi movie. Though it is heartening to see a marathi film getting such publicity what it also does is half convince the people about the film even before watching it.

I have had a rather hectic last half a month or so which has actually helped me keep a little distance from the heavy publicity and thus maintain my objectivity. And I feel that the film is definitely not as good as its makers are proclaiming it to be or even the general consensus amongst the people tells you.
Kaksparsh is a period film set in the 1930s-1950s Konkan Mahrashtra.  Haridada, the patriarch of a Brahmin family, is like a father to his kid brother Mahadev. He decides to get Mahadev married off to a very young Durga who is later renamed by Mahadev as Uma. But tragedy strikes as Mahadev dies even before consummating their marriage.
According to Hindu rituals, as a part of last rites a bowl of rice and sesame seeds is offered to a crow which is supposed to represent the deceased soul. The soul of the departed is only supposed to receive ‘mukti’ when the crow actually eats out from food the offered. During Mahadev’s last rites, as no crow seems to be willing to touch or eat the food offered, Haridada murmurs something and a crow does finally oblige. We come to know what Haridada actually murmured only towards the end in the film.
As per the custom prevalent in Pre-Independence days a widow is supposed to shave off her hair. But Haridada objects to Uma’s hair being shaven off without giving an explanation of this decision of his, much to the disappointment and anger of the society at large. He then over a period of time keeps taking decisions with respect to the widowed Uma which keeps baffling his family and makes everybody and even the audience believe(rather misleadingly) that he has developed feelings for the young Uma.
The plot surely is interesting but then the director Mahesh Manjrekar or even the scriptwriter Girish Joshi doesn’t deserve credit for it as the film is an adaptation of the book by the same name written by Usha Datar. Rather an opportunity to make a truly memorable film has been wasted.
The biggest issue with the film, especially the first half, is that it feels rushed. The film is like a saga across generations unfolding on the screen. However, such tales work only when they take their own sweet time to develop the plot and its characters. Mahesh Manjrekar, here, seems to be a lot worried about the attention span of his audience and swiftly proceeds forward from one scene to another. Also, at times it feels as if the movie has been re-edited to fit into the 2 hour bracket just to suit the need of the multiplexes and other exhibitors.
Girish Joshi’s script narrates the film in flashbacks which don’t always seem smooth. It also has a tendency to spoon feed the audience. The character played by Vaibhav Mangale as the Upadhyay of the village is almost a caricature.
What works in the favor of the film is primarily the pre-independence Konkan set-up. Ajit Reddy’s camerawork deserves major credit for it. The costumes, the language all are quite authentic and you do feel transported to a bygone era.  Another major plus of the film is the performances. Sachin Khedekar as the patriarch of the family is simply brilliant. So is Megha Manjrekar who plays his wife. Others like Savita Malpekar who plays the bitter old widow(Namu Attya) and Haridada’s friend Balwant played Sanjay Khapare are also impressive. But Ketaki Mategaonkar, who is steadily developing a fan following, isn’t that convincing as the very young bride turned widow. Also, there are some interesting things that you learn from the film like in those times marriage was supposed to be consummated only on an auspicious occasion.
The film also does have a few memorable scenes like the one where the old widow Namu Attya tries to make Uma understand how fortunate she is as Haridada treats her in a much better manner than what widows in those times were normally subjected to. Another striking scene is that of Uma, a widow completely deprived of any sexual pleasure, secretly enjoying the sound of Haridada’s newly married son Sankarshan and his wife making love to each other.
Though the above points make the film worth a watch the cons of the film surely outweigh the pros. For me personally the wasted potential is what majorly makes the film a dampener. The film has enough material to blow you away but the makers are content with scratching the surface. Now, another project which Zee Talkies is associated with after Natrang will be added to my list of the most overrated marathi films of recent times.

Marathi, Regional Tadka — By Rasik on May 22, 2012

Tuesday, July 31, 2012

ಮಂಗಳೂರ ಹಿಂಸೆಯಲ್ಲಿ ನಮ್ಮ ಪಾಲುದಾರಿಕೆ…



                                                                  -ಬಿ. ಶ್ರೀಪಾದ್ ಭಟ್ 

ಮಂಗಳೂರಿನಲ್ಲಿ ಅಟ್ಟಹಾಸ ಮೆರೆದ ‘ನೈತಿಕ ಪೊಲೀಸರು’

ನಿನ್ನೆ ಮಂಗಳೂರಿನಲ್ಲಿ ಹಿಂದೂ ಸಂಘಟನೆಯ ಹುಡುಗರು ಹೆಣ್ಣುಮಕ್ಕಳ ಮೇಲೆ ನಡೆಸಿದ ಹಲ್ಲೆ ಅಮಾನವೀಯವಾದದ್ದು ಹಾಗೂ ಅತ್ಯಂತ ಕ್ರೌರ್ಯವಾದದ್ದು. ಆದರೆ ಇದು ಹೊಸದಾಗಿ ನಡೆಯುತ್ತಿದೆ ಎಂದು ನಾವು ಗಾಬರಿಗೊಂಡರೆ ಅದು ನಮ್ಮ ಆತ್ಮವಂಚನೆಯಷ್ಟೆ. ಕಳೆದ ಇಪ್ಪತ್ತು ವರ್ಷಗಳಲ್ಲಿ ಇದು ದೇಶಾದ್ಯಾಂತ ನೂರಾರು ಬಾರಿ ನಡೆದಿದೆ. ಈ ಮತೀಯವಾದಿ ಆರೆಸ್ಸೆಸ್ ಸಂಘಟನೆ “ಗರ್ವ್ ಸೆ ಕಹೋ ಹಂ ಹಿಂದೂ ಹೈ” ಎನ್ನುವ ಘೋಷಣೆಯನ್ನು ಹುಟ್ಟು ಹಾಕಿದಾಗಲೇ ಈ ಹಲ್ಲೆಯ ಕ್ರೌರ್ಯದ ಬೀಜಗಳು ಮೊಳಕೆಯೊಡೆದದ್ದು.. ನಂತರ “ಏಕ್ ಧಕ್ಕ ಔರ್ ದೋ” ಎನ್ನುವ ಫ್ಯಾಸಿಸ್ಟ್ ಮನಸ್ಥಿತಿ ಚಲನಶೀಲಗೊಂಡಾಗ ಈ ಕ್ರೌರ್ಯದ ಅನೇಕ ಮುಖಗಳು ಅನಾವರಣಗೊಂಡವು. ಈ ಬಗೆಯ ಕ್ರೌರ್ಯಕ್ಕೆ ನೀರೆರೆದು ಪೋಷಿಸಿದ ಅಡ್ವಾನಿ ಹಾಗೂ ಮತ್ತೊಬ್ಬ ಫ್ಯಾಸಿಸ್ಟ್ ನರೇಂದ್ರ ಮೋದಿ ಇಂದು ಭವಿಷ್ಯದ ಪ್ರಧಾನಿ ಪಟ್ಟದ ಸ್ಪರ್ಧೆಗಳು. ಇವರನ್ನು ಹಾಗೂ ಇವರ ಫ್ಯಾಸಿಸ್ಟ್ ಮಾತೃ ಪಕ್ಷ ಆರೆಸ್ಸೆಸ್ ಅನ್ನು ಸಹಿಸಿಕೊಂಡ ಘೋರವಾದ ತಪ್ಪಿಗೆ ಸಮಾಜ ಈ ಬಗೆಯ ಹಲ್ಲೆಗಳನ್ನು ಕಾಲಕಾಲಕ್ಕೆ ಎದುರುನೋಡಬಹುದು. ಇವರ ಹಿಂದುತ್ವದ ಕ್ರೌರ್ಯದ ಹುಸಿಚಿಂತನೆಗೆ ದೇಶವೊಂದರ, ರಾಜ್ಯವೊಂದರ ಸಾಂಸ್ಕೃತಿಕ ಸಮಾಜ ಹಾಗೂ ಪ್ರಜಾಪ್ರಭುತ್ವವನ್ನು ಒಪ್ಪಿಕೊಂಡ ವ್ಯವಸ್ಥೆ ತೆರಬೇಕಾದ ಬೆಲೆ ಅಪಾರವಾದದ್ದು. ಚಿಂತಕ ಗ್ರಾಮ್ಷಿ ಹೇಳಿದ ಹಾಗೆ “ನಾವು ಮೇಲ್ನೋಟಕ್ಕೆ ವೇದಾಂತಿಗಳಾಗಿಯೂ,ಸಿದ್ಧಾಂತವಾದಿಗಳಾಗಿ ಕಾಣಿಸಿಕೊಳ್ಳುತ್ತೇವೆ. ಆದರೆ ಈ ಮುಗ್ಧ ವೇದಾಂತಗಳೇ ನಮ್ಮಲ್ಲಿ ನಮಗೆ ಗೊತ್ತಿಲ್ಲದ ಹಾಗೆ ನಮ್ಮೊಳಗೆ ಫ್ಯಾಸಿಸ್ಟ್ ಸಂಸೃತಿಯನ್ನು ಹುಟ್ಟಿಹಾಕುತ್ತವೆ”. ಈ ಮಾತುಗಳು ನಾಗರಿಕ ಸಮಾಜದಲ್ಲಿ ಅತ್ಯಂತ ಕ್ರೌರ್ಯದಿಂದ ಅಸಹಾಯಕ ಹೆಣ್ಣುಮಕ್ಕಳ ಮೇಲೆ ಅನಾಗರಿಕವಾಗಿ ಹಲ್ಲೆ ನಡೆಸಿದ ಆ ಘಾತುಕ ಹುಡುಗರಿಗೂ ಅನ್ವಯಿಸುತ್ತದೆ, ಈ ಅಮಾನವೀಯ,ಅನಾಗರೀಕ ಹಲ್ಲೆಯನ್ನು ಹಿಂದೂ ಸಂಸ್ಕೃತಿಯ ಹೆಸರಿನಲ್ಲಿ ಸಮರ್ಥಿಸಿಕೊಳ್ಳುತ್ತಿರುವ ಜನಸಾಮಾನ್ಯರಿಗೂ ಅನ್ವಯಿಸುತ್ತದೆ, ನಮ್ಮ ಕಾಲಘಟ್ಟದಲ್ಲಿ ಈ ತರಹದ ಅನಾಗರಿಕ ಘಟನೆಗಳು ನಡೆದಾಗಲೆಲ್ಲ ಅಸಹಾಯಕತೆಯಿಂದ ಪತ್ರಿಕಾ ಹೇಳಿಕೆಗಳ ಮೂಲಕ, ಲೇಖನಗಳ ಮೂಲಕ ಖಂಡಿಸುವ ನಮಗೂ ಅನ್ವಯಿಸುತ್ತದೆ.
ಈ ಫ಼್ಯಾಸಿಸ್ಟ್ ಧೋರಣೆಗಳಿಂದ ಮುಕ್ತಿಗಾಗಿ ರಾಜಕೀಯ ಚಿಂತಕ ’ಗ್ರಾಮ್ಷಿ’ ಯು “ಸಾಂಸ್ಕೃತಿಕ ಯಜಮಾನ್ಯ”ವನ್ನು ಪ್ರತಿಪಾದಿಸುತ್ತಾನೆ (Cultural hegemony). ಈ ಸಾಂಸ್ಕೃತಿಕ ಯಜಮಾನ್ಯದಲ್ಲಿ ಗ್ರಾಮ್ಷಿಯು ದುಡಿಯುವ ವರ್ಗಗಳು ಕೇವಲ ಆರ್ಥಿಕ ಬೆಳವಣಿಗೆಯ ಮುಖಾಂತರವಾಗಲೀ, ಕೇವಲ ರಾಜಕೀಯ ಅಧಿಕಾರದ ಮುಖಾಂತರವಾಗಲೀ ಒಂದು ಸಮಾಜವನ್ನು ಕಟ್ಟಲು ಸಾಧ್ಯವಿಲ್ಲ, ಬದಲಾಗಿ ಈ ದುಡಿಯುವ ಜನತೆ ಸಾಂಸ್ಕೃತಿಕವಾಗಿ ಬುದ್ಧಿಜೀವಿಗಳಾಗಿಯೂ ರೂಪಗೊಂಡಾಗ ಆಗ ವ್ಯವಸ್ಥೆಯಲ್ಲಿ ಸಮತೋಲನ, ಸಹನೆ ಒಡಮೂಡುತ್ತದೆ ಎಂದು ಚಿಂತಿಸುತ್ತಾನೆ. ಇಲ್ಲದೇ ಹೋದಲ್ಲಿ ಪಟ್ಟಭದ್ರ ಹಿತಾಸಕ್ತಿಯುಳ್ಳ ಪ್ರಭುತ್ವವು ತನ್ನದೇ ಆದ ಬೂರ್ಜ್ವಾ ಯಜಮಾನಿಕೆಯನ್ನು ಸಂಸ್ಕೃತಿಯ ಹೆಸರಿನಲ್ಲಿ ಸಮಾಜದ ಮೇಲೆ ಹೇರುತ್ತದೆ ಎಂದು ಗ್ರಾಮ್ಷಿಯ ಖಚಿತವಾದ ಅಭಿಪ್ರಾಯ.
ಇಂದು ದೇಶದಲ್ಲಿ, ನಿನ್ನೆ ಹಾಗೂ ನಿರಂತರವಾಗಿ ಕೆಲವು ವರ್ಷಗಳಿಂದ ಮಂಗಳೂರು ಹಾಗು ಮಂಗಳೂರು ಮತ್ತು ಉಡುಪಿ ಜಿಲ್ಲೆಯಲ್ಲಿ ಸಂಸ್ಕೃತಿಯ ಹೆಸರಿನಲ್ಲಿ ನಡೆದ ಹಲ್ಲೆಯ ಹಿಂದಿನ ಕ್ರೌರ್ಯದ ಮನಸ್ಥಿತಿಯನ್ನು ಈ ಸಾಂಸ್ಕೃತಿಕ ಯಜಮಾನ್ಯದ ಪರಿಭಾಷೆಯಲ್ಲಿ ಅರ್ಥೈಸಬೇಕು. ನಾವೆಲ್ಲ ನಮ್ಮ ನೆಲದ ಮಾನವೀಯ ಸಂಸ್ಕೃತಿಯನ್ನು, ಜೀವಪರವಾದ ಅವೈದಿಕ ಸಂಸ್ಕೃತಿಯ ಯಜಮಾನ್ಯವನ್ನು ವ್ಯವಸ್ಥೆಯೊಳಗೆ ಚಲನಶೀಲವಾಗಿ, ನಿರಂತರವಾಗಿ ನೆಲೆಗೊಳ್ಳಲು ಪ್ರಯತ್ನಿಸಿಲ್ಲದ ತಪ್ಪಿಗಾಗಿ ಇಂದು ಸಂಘಪರಿವಾರದ ವಿಕೃತಿ ಚಿಂತನೆಯನ್ನು ಮೈಗೂಡಿಸಿಕೊಂಡ ಹಿಂದೂ ಸಂಸ್ಕೃತಿಯ ಹೆಸರಿನಲ್ಲಿ ನಿರಂತರವಾದ ಹಲ್ಲೆ ಇಂದು ನಮ್ಮ ಕಣ್ಣೆದುರಿಗೆ ನಡೆಯುತ್ತಿದೆ. ಇಲ್ಲಿ ಆಧುನಿಕ ಬುದ್ಧಿಜೀವಿಗಳು ಕೇವಲ ಮಾತುಗಾರರಾಗದೆ ಬಹಿರಂಗವಾಗಿ ಸಾಮಾನ್ಯ ಜನತೆಯೊಂದಿಗೆ ಬೆರೆತು ಅವರನ್ನು ಬುದ್ಧಿಜೀವಿಗಳನ್ನಾಗಿ ರೂಪಿಸುವಲ್ಲಿ ಸೋತಂತಹ ಜಾಗದಲ್ಲಿ ಸಂಘಪರಿವಾರದ ವಿಕೃತಿ ಚಿಂತನೆಗಳು ಆ ಖಾಲಿಯಾದ ಜಾಗವನ್ನು ಆಕ್ರಮಿಸಿಕೊಳ್ಳುತ್ತವೆ ಹಾಗೂ ತಮ್ಮ ಯಜಮಾನಿಕೆಯನ್ನು ಪ್ರತಿಷ್ಠಾಪಿಸುತ್ತವೆ. ಇಂದು ಅಸಹಾಯಕ ಹೆಣ್ಣುಮಕ್ಕಳ ಮೇಲೆ ಹಲ್ಲೆ ಮಾಡಿದ ಆ ಅನಾಗರಿಕ ಯುವಕರು, ಹಿಂದೂ ಸಂಘಟನೆಗಳು ಮತ್ತು ಜನಸಾಮಾನ್ಯರು ಆ ದುಷ್ಕೃತ್ಯವನ್ನು ಹಿಂದೂ ಸಂಸ್ಕೃತಿಯ ಹೆಸರಿನಲ್ಲಿ ಪದೇ ಪದೇ ಸಮರ್ಥಿಸಿಕೊಳ್ಳುತ್ತಿರುವುದಕ್ಕೆ ಕಾರಣ ನಮ್ಮೆಲ್ಲರ ಸಾಂಸ್ಕೃತಿಕ ನಿಷ್ಕ್ರಿಯತೆ ಮತ್ತು ಸಿನಿಕತೆ. ನಾವೆಲ್ಲ ಸಾಂಸ್ಕೃತಿಕವಾಗಿ ನಿಷ್ಕ್ರಿಯಗೊಂಡಾಗ ಸಂಘಪರಿವಾರ ಪ್ರೇರಿತ ಬಲು ಸುಲಭವಾಗಿ ಸರಳೀಕೃತಗೊಂಡ ದೇವರುಗಳನ್ನು, ನಂಬಿಕೆಗಳನ್ನು ಒಳಗೊಂಡ ಏಕರೂಪಿ ಕಲ್ಪಿತ ಹಿಂದೂ ಸಂಸ್ಕೃತಿ ಬಂದು ನೆಲೆಯೂರುತ್ತದೆ. ಇಂತಹ ವ್ಯವಸ್ಥೆಯಲ್ಲಿ ಒಂದು ಬಗೆಯ ಒಪ್ಪಿತ ಗುಲಾಮಿಗಿರಿ ನೆಲೆಗೊಳ್ಳುತ್ತದೆ. ಈ ಗುಲಾಮಿಗಿರಿ ಧರ್ಮವನ್ನು ಸಾರ್ವಜನಿಕವಾಗಿ ಚರ್ಚಿಯನ್ನು ಆರಂಭಿಸಲು ಪ್ರೇರೇಪಿಸುತ್ತದೆ. ಈ ಬಗೆಯ ಪಟ್ಟಭದ್ರ ನೆಲೆಯಲ್ಲಿ ಚರ್ಚೆಗೊಂಡ ಧಾರ್ಮಿಕತೆಯು ಕಡೆಗೆ ಸನಾತನ ಧರ್ಮಗಳ ಸಂಕೇತಗಳಾಗಿ ರೂಪಗೊಂಡು ಕ್ರಮೇಣವಾಗಿ ಜೀವವಿರೋಧಿ ಸಂಕೇತಗಾಗಿ ಬಿಡುತ್ತವೆ. ಆಗಲೇ ಗ್ರಾಮ್ಷಿ ಹೇಳಿದ ಹಾಗೆ ನಮ್ಮ ಕಾಲ ಬುಡದಲ್ಲಿ ನೆಲ ಕುಸಿಯುತ್ತಿದ್ದರೂ ನಾವು ಅದನ್ನು ಅರಿಯಲಾರದಷ್ಟು ಮೈಮರೆತಿರುತ್ತೇವೆ. ಆಗ ಈ ಜೀವ ವಿರೋಧಿ ಕ್ಷುಲ್ಲಕತನದ ಧಾರ್ಮಿಕತೆಯು ಕ್ರಮೇಣವಾಗಿ ಇಡೀ ಸಮಾಜವನ್ನು ವ್ಯಾಪಕವಾಗಿ ಆಕ್ರಮಿಸಿಕೊಂಡುಬಿಡುತ್ತದೆ. ಇದರ ಸಾಕ್ಷಿಯಾಗಿ ಮಂಗಳೂರಿನಲ್ಲಿ ನಡೆದ ಹಲ್ಲೆಯನ್ನು ಜನತೆಯು ಸಮರ್ಥಿಸಿಕೊಳ್ಳುವಂತಹ ಅನಾಗರಿಕ ಮಾನವವಿರೋಧಿ ವ್ಯವಸ್ಥೆ ಸೃಷ್ಟಿಗೊಂಡಿರುವುದು. ಇಲ್ಲಿ ’ದಯವೇ ಧರ್ಮದ ಮೂಲವಯ್ಯ’ ಎಂದು ಹೇಳಿದ ವಚನಕಾರರ ಜೀವಪರ ಮಾತುಗಳು ನಾಮಾವಶೇಷಗೊಳ್ಳುತ್ತವೆ. ಆಗ ಸಮಾಜದಲ್ಲಿ ಪ್ರಗತಿಪರರಾಗುವ ಹಂಬಲ ಮತ್ತು ತುಡಿತ ಕ್ರಮೇಣವಾಗಿ ಕಣ್ಮರೆಯಾಗುತ್ತದೆ.
ಇಂದು ಈ ಬಿಜೆಪಿ ಪಕ್ಷದ ಫ್ಯಾಸಿಸ್ಟ್ ಧೋರಣೆಗೆ, ಅದರ ದಿಕ್ಕು ತಪ್ಪಿದ ಭ್ರಷ್ಟ ಆಡಳಿತಕ್ಕೆ ವ್ಯಾಪಕವಾಗಿ ಖಂಡನೆಗಳು ವ್ಯಕ್ತವಾಗುತ್ತಿದೆ. ಆದರೆ ಈ ಅಸಹನೆ ಒಂದು ಜನಪರ ಚಳುವಳಿಯಾಗಿ ರೂಪಿತವಾಗುತ್ತಿಲ್ಲ. ಇದರ ದುರ್ಲಾಭವನ್ನು ಆಡಳಿತ ಪಕ್ಷಗಳು ಮತ್ತು ಸಮಾಜದ ಲುಂಪೆನ್ ಗುಂಪುಗಳು ಸರಿಯಾಗಿಯೇ ದುರುಪಯೋಗಪಡಿಸಿಕೊಳ್ಳುತ್ತವೆ. ನಾಗರಿಕ ಸಮಾಜದ ಈ ನಿಷ್ಕ್ರಿಯತೆಯ ಫಲವಾಗಿಯೇ ಮಂಗಳೂರಿನಲ್ಲಿ ಇಂತಹ ಅನಾಗರಿಕ ಕೃತ್ಯ ನಡೆದರೂ ಇಲ್ಲಿನ ಸೋ ಕಾಲ್ಡ್ ಸಂಭಾವಿತ ಮುಖ್ಯಮಂತ್ರಿ ನಗುತ್ತಲೇ ಸಮಾಧಾನದಿಂದ ಉತ್ತರಿಸುತ್ತಾರೆ. ಇಲ್ಲಿನ ಭ್ರಷ್ಟ ಗೃಹಮಂತ್ರಿಗಳು ಇದೇನು ಅಂತಹ ದೊಡ್ಡ ವಿಷಯವೇ ಎಂಬಂತೆ ಜಾರಿಕೊಳ್ಳುತ್ತಾರೆ. ಈ ಅಧಪತನಕ್ಕೆ ನಾವೆಲ್ಲ ನಮ್ಮೊಳಗಿನ ಭಯವನ್ನು, ಹಿಂಜರಿಕೆಯನ್ನು ಮತ್ತು ಸಿನಿಕತನವನ್ನು ಕಿತ್ತೊಗೆಯುವ ಮೂಲಕ ಉತ್ತರಿಸಬೇಕಾಗಿದೆ. ಇಲ್ಲಿ ಗಾಂಧಿ ಹೇಳಿದಂತೆ ಅಹಿಂಸೆಯೆಂದರೆ, ಮಾನವೀಯತೆಯೆಂದರೆ ಹಿಂಸಾಕೃತ್ಯಗಳಲ್ಲಿ ತೊಡಗದಿರುವುದಷ್ಟೇ ಅಲ್ಲ, ಈ ಹಿಂಸೆಯನ್ನು ವಿರೋಧಿಸುವುದು ಸಹ ಅಹಿಂಸೆಯಾಗುತ್ತದೆ. ಇಲ್ಲದಿದ್ದರೆ ಈ ಮೌನವು ಆ ದುಷ್ಕೃತ್ಯದಲ್ಲಿ ಪಾಲ್ಗೊಳ್ಳುವಿಕೆಯ ಲಕ್ಷಣವೂ ಆಗುತ್ತದೆ. ಇಂತಹ ಸಂದರ್ಭದಲ್ಲಿ ನಿರ್ಲಿಪ್ತತೆ ಎಂದರೆ ಮೂಕ ಸಾಕ್ಷಿಗಳು ಮಾತ್ರವಲ್ಲ, ಈ ಹಿಂಸೆಯಲ್ಲಿ ಪಾಲುದಾರರೂ ಸಹ.

ಕೃಪೆ : ವರ್ತಮಾನ : (ಫೋಟೋ : ವಿಜಯ ಕರ್ನಾಟಕ)

Monday, December 19, 2011

ಮಹಾತಾಯಿ ರಮಾಬಾಯಿ ಭೀಮರಾವ್ ಅಂಬೇಡ್ಕರ್ ಅವರ ಭಾಷಣಗಳು

ಮೂಲ ಮರಾಠಿಯಲ್ಲಿ ರಾಜರತ್ನ ಠೋಸರ ಅವರು ಸಂಪಾದಿಸಿರುವ ಈ ಭಾಷಣಗಳನ್ನು ಮುಂಬಾಯಿಯ ವಿನಿಮಯ ಪ್ರಕಾಶನದವರು 06-12-2010 ರಂದು ಪ್ರಕಟಿಸಿದ್ದಾರೆ. ಅವುಗಳನ್ನು ನಾನು ಕನ್ನಡೀಕರಿಸಿ ನೀಡುತ್ತಿದ್ದೇನೆ.

                                                                     *****
ದಲಿತರ ಅವ್ವ : ರಮಾಯಿ ಅಂಬೇಡ್ಕರ್ ಮಾಡಿದ ಮೊಟ್ಟಮೊದಲ ಸಾರ್ವಜನಿಕ ಭಾಷಣ

    ಆ ದಿನದ ಬೆಳಗು ತುಂಬ ಉತ್ಸಾಹದಿಂದಲೇ ಮೂಡಿಬಂತು. ಇಂದು ಮಹಾಮಾತೆ ರಮಾಯೀ ಭೀಮರಾವ್ ಅಂಬೇಡ್ಕರ್ ಸಮಾಜದ ಮಹಿಳಾ ಮಂಡಲದಲ್ಲಿ ಭಾಷಣ ಮಾಡುವವರಿದ್ದರು. ಮನೆಯ ಎಲ್ಲ ಕೆಲಸಗಳನ್ನು ಮುಗಿಸಿದ ರಮಾಯಿ ಸಂಜೆ ಆಗಮಿಸಿದ ಮಹಿಳಾ ಮಂಡಳದ ಇಬ್ಬರು ಹೆಣ್ಣುಮಕ್ಕಳೊಂದಿಗೆ ನಡೆದಳು. ಹಾಗೆ ಹೋಗುವುದಕ್ಕಿಂತ ಮುಂಚೆ ಆಕೆ ತನ್ನ ಮಾವನ (ಸುಬೇದಾರ ರಾಮಜೀ) ಪ್ರತಿಮೆಗೆ ನಮಸ್ಕರಿಸಿ ಆಶೀರ್ವಾದ ಪಡೆದುಕೊಂಡಳು. ಮನಸ್ಸಿನಲ್ಲಿಯೇ ತನ್ನ ಪತಿ ಡಾ. ಬಾಬಾಸಾಹೇಬ ಅಂಬೇಡ್ಕರ್ ಅವರನ್ನು ಸ್ಮರಿಸಿದಳು. ಮಹಿಳಾ ಮಂಡಲದ ಸಭೆಯ ವೇದಿಕೆಯೇರಿದ ರಮಾಯಿ ಮಾತನಾಡತೊಡಗಿದಳು.

    "ನನ್ನ ಆತ್ಮೀಯ ತಾಯಂದಿರೆ ಮತ್ತು ಸಹೋದರಿಯರೆ,
    ಇಂದು ನಾನು ಮೊಟ್ಟಮೊದಲ ಬಾರಿಗೆ ಮಾತನಾಡಲು ನಿಂತಿದ್ದೇನೆ. ಮಾತಾಡುವಾಗ ಏನಾದರೂ ತಪ್ಪು-ತಡೆಗಳುಂಟಾದರೆ ತಿದ್ದಿಕೊಳ್ಳಿ. ನಾವು ಪ್ರತಿನಿತ್ಯದ ಬದುಕಿನಲ್ಲಿ ನೋಡುವುದೇನೆಂದರೆ, ಪತಿ ಯಾವ ಕಾರ್ಯದ ಭಾರವನ್ನು ತನ್ನ ಹೆಗಲ ಮೇಲೆ ಹೊತ್ತುಕೊಂಡಿರುತ್ತಾನೋ ಆ ಭಾರವನ್ನು ಸಹಧರ್ಮಿಣಿಯಾಗಿ ಪತ್ನಿಯರೂ ಹೆಗಲು ಕೊಟ್ಟು ಹೊತ್ತುಕೊಳ್ಳಬೇಕಾಗುತ್ತದೆ. ಇಂಥ ಅನುಭವಗಳು ನನ್ನ ಬದುಕಿನಲ್ಲಿ ಸಾಕಷ್ಟು ಇವೆ ಎಂದು ನನಗನ್ನಿಸುತ್ತದೆ. (ಜನಸಮುದಾಯದ ಕರತಾಡನ)
    ನನ್ನಂತಹ ಮದುವೆಯಾಗಿರುವ ಹೆಣ್ಣಿಗೆ ಪತಿಸೇವೆಯ ಹೊರತು ಈ ಜಗತ್ತಿನಲ್ಲಿ ಮತ್ತೇ ಕೆಲವು ಸೇವಾಕಾರ್ಯಗಳು ಇವೆ ಎಂಬ ಅರಿವು ಇಲ್ಲಿಯವರೆಗೆ ನನಗಿರಲಿಲ್ಲ. ಆದರೆ ಇಂದು ಈ ಭವ್ಯ ವೇದಿಕೆಯ ಮೇಲೆ ನಿಂತು, ಸೇರಿರುವ ಬಹುದೊಡ್ಡ ಸಂಖ್ಯೆಯ ಜನಸಮುದಾಯವನ್ನು ಕಂಡಾಗ ನನಗನ್ನಿಸುತ್ತಿದೆ ; 'ಸಕಲರಲ್ಲೂ ಅರಿವು ತುಂಬಿಯೇ ಬಿಡಬೇಕು' (ಶಹಾಣೆ ಕರೂಣಿ ಸೋಡಾವೆ ಸಕಲಜನ)..... (ಜನಸಮುದಾಯ ಉತ್ಸಾಹದಿಂದ ಚಪ್ಪಾಳೆ ತಟ್ಟುತ್ತಲೇ ಘೋಷಣೆ ಕೂಗತೊಡಗಿದರು ; ಮಾತೋಶ್ರೀ ರಮಾಬಾಯಿ ಅಂಬೇಡ್ಕರ್ ಅವರಿಗೆ ಜಯವಾಗಲಿ)
    ನನಗೆ ಇಂತಹ ಜೈಕಾರ ಹಾಕಬೇಡಿ. ಇನ್ನೂ ನಾನು ನಿಮಗಾಗಿ ಏನನ್ನೂ ಮಾಡಿದವಳಲ್ಲ. ಆ ಬಗ್ಗೆ ನನಗೆ ವಿಷಾದವೆನಿಸುತ್ತದೆ. ಇರಲಿ. ನಮ್ಮೆಲ್ಲರ ಮುಂದಾಳು ಡಾ. ಬಾಬಾಸಾಹೇಬ ಅಂಬೇಡ್ಕರರು ಮೇಲಿಂದ ಮೇಲೆ ಹೇಳುತ್ತಿರುತ್ತಾರೆ ; ನಾವು ಹೆಣ್ಣುಮಕ್ಕಳೆಲ್ಲ ಮುಂದೆ ಬಂದು, ಸಮಾಜದ ಕ್ರಾಂತಿ-ಚಳುವಳಿಯಲ್ಲಿ, ಮುಂದೆ ತೆಗೆದುಕೊಳ್ಳಬೇಕಾದ ನಿರ್ಧಾರಗಳಲ್ಲಿ ಭಾಗಿಯಾಗಬೇಕು. ಯಾಕೆಂದರೆ ಹೆಣ್ಣುಮಕ್ಕಳು ಏಕನಿಷ್ಠರಾಗಿರುತ್ತಾರೆ. ಯಾವುದೇ ಚಳುವಳಿಯಲ್ಲಿ ಹೆಣ್ಣುಮಕ್ಕಳು ಸಹಭಾಗಿಯಾಗಬೇಕು. ಇದರ ಹೊರತಾಗಿ ಚಳುವಳಿಯ ಹೆಜ್ಜೆ ಮುಂದೆ ಸಾಗುವುದಿಲ್ಲ. ........ (ಜನರಿಂದ ಪ್ರಚಂಡ ಕರತಾಡನ)
    ಜಗತ್ತಿನ ಕ್ರಾಂತಿ-ಚಳುವಳಿ ಯಾವುದರ ಮೇಲೆ ನಡೆಯುತ್ತವೆ ? ತ್ಯಾಗದ ಮೇಲೆ ..... ಅದು ಎಂಥದ್ದೇ ತ್ಯಾಗ ಇರಲಿ ....  ಚಳುವಳಿಗಾರರು ಎಷ್ಟೋ ಅಗ್ನಿದಿವ್ಯ ಹಾದು ಬರಬೇಕಾಗುತ್ತದೆ. ಇಲ್ಲದಿದ್ದರೆ ಬಯಸಿದ ಬಂಗಾರ ದೊರೆಯಲಾರದು. ಈ ಬಗ್ಗೆ ಒಮ್ಮೆ ಡಾ. ಅಂಬೇಡ್ಕರ ಅವರು ಹೇಳಿದ ಒಂದು ಸಂಗತಿಯನ್ನು ನಾನು ನಿಮಗೆ ಹೇಳುತ್ತೇನೆ. ಇದು ಗ್ರೀಕ್ ಪುರಾಣದಲ್ಲಿ ಬರುವ ಕತೆ.
    ಡಿಮೇಟರ್ ಹೆಸರಿನ ದೇವತೆಯೊಬ್ಬಾಕೆ ಮನುಷ್ಯರೂಪ ಧರಿಸಿ ಭೂಮಿಗೆ ಬಂದಳು. ಆಕೆಯನ್ನು ಅಲ್ಲಿಯ ರಾಣಿಯೊಬ್ಬಳು ದಾಸಿಯನ್ನಾಗಿ ಇಟ್ಟುಕೊಂಡು ತನ್ನ ಬಾಲಕ ಮಗನ ಉಸ್ತುವಾರಿ ನೋಡಿಕೊಂಡಿರಲು ಹೇಳಿದಳು. ರಾಣಿಯ ಆ ಮಗನನ್ನು 'ದೇವ'ನನ್ನಾಗಿಸಬೇಕು ಎಂಬ ಹಂಬಲ ಆ ದೇವತೆಗೆ ಉಂಟಾಯಿತು. ಹೀಗಾಗಿ ಆಕೆ ದಿನವೂ ರಾತ್ರಿ ಎಲ್ಲರೂ ಮಲಗಿಕೊಂಡ ಮೇಲೆ ಎಲ್ಲ ಬಾಗಿಲು-ಕಿಟಕಿಗಳನ್ನು ಮುಚ್ಚುತ್ತಿದ್ದಳು. ತೊಟ್ಟಿಲಲ್ಲಿ ಮಲಗಿದ ಮಗುವನ್ನು ಹೊರತೆಗೆದು, ಅದರ ಮೈಮೇಲಿನ ಬಟ್ಟೆಗಳನ್ನೆಲ್ಲ ಬಿಚ್ಚಿ ಹಾಕಿ ಬಿಸಿ ಬೂದಿಯ ಮೇಲೆ ಒಂದಿಷ್ಟು ಕಾಲ ಆ ಮಗುವನ್ನು ಮಲಗಿಸುತ್ತಿದ್ದಳು ! ಕ್ರಮೇಣ ಬೆಂಕಿಯ ಬಿಸಿಯನ್ನು ತಡೆದುಕೊಳ್ಳುವ ಸಾಮರ್ಥ್ಯ ಆ ಮಗುವಿಗೆ ಬಂತು. ಅದರ ಬಲ ವೃದ್ಧಿಸತೊಡಗಿತು. ಆ ಮಗುವಿನಲ್ಲಿ ಅತ್ಯಂತ ತೇಜಸ್ವಿಯಾದ ದೈವೀ ಅಂಶ ವಿಕಸಿತವಾಗತೊಡಗಿತ್ತು. ಆದರೆ ಒಂದು ರಾತ್ರಿ ಆ ಮಗುವಿನ ತಾಯಿ ರಾಣಿ ಅಚಾನಕ್ಕಾಗಿ ಆ ಕೋಣೆಯನ್ನು ಹೊಕ್ಕಳು. ಅಲ್ಲಿ ನಡೆಯುತ್ತಿದ್ದುದ್ದನ್ನೆಲ್ಲ ಕಣ್ಣಾರೆ ಕಂಡ ಆಕೆ ತುಂಬ ನೊಂದುಕೊಂಡಳು. ಆಕೆ ತಕ್ಷಣ ತನ್ನ ಮಗುವನ್ನು ಒಲೆಯ ಮೇಲಿನಿಂದ ಎತ್ತಿ ಎದೆಗವಚಿಕೊಂಡಳು. ಆ ರಾಣಿಗೆ ಆಕೆಯ ಮಗುವೇನೋ ದೊರೆಯಿತು. ಆದರೆ ಸಾಮರ್ಥ್ಯಶಾಲಿ ದೇವನಾಗಬೇಕಿದ್ದ ದೇವನನ್ನೇ ಆಕೆ ಕಳೆದುಕೊಂಡಳು ..... !
    ಈ ಕತೆಯ ತಾತ್ಪರ್ಯ ಇಷ್ಟೆ ; ಕುಲುಮೆಯಲ್ಲಿ ಕಾಯದೆ ದೇವತನ ಬರುವುದಿಲ್ಲ. ಬೆಂಕಿ, ಮನುಷ್ಯನನ್ನು ಶುದ್ಧಿಗೊಳಿಸುತ್ತದೆ ಮತ್ತು ಮನುಷ್ಯನಲ್ಲಿ ಶಕ್ತಿಯನ್ನು ತುಂಬುತ್ತದೆ. ಆದ್ದರಿಂದ ಅಸ್ಪೃಶ್ಯ ಎನಿಸಿಕೊಂಡಿರುವವರು ಕಡುಕಷ್ಟ ಮತ್ತು ತ್ಯಾಗದ ಅಗ್ನಿದಿವ್ಯ ಸಹಿಸದೇ ಉದ್ಧಾರವಾಗಲಾರರು. ನೀವು ನಿಮ್ಮನ್ನು ಅಸ್ಪೃಶ್ಯ, ಕೀಳು ಎಂದುಕೊಳ್ಳಬೇಡಿ. ಮನೆಯನ್ನು ಸ್ವಚ್ಚವಾಗಿಟ್ಟುಕೊಳ್ಳಿ. ನಿಮ್ಮ ಮಕ್ಕಳಿಗೆ ಶಿಕ್ಷಣ ನೀಡಿ. 'ಮಗನಾಗಬೇಕು ತೇಜ ; ಮೂರು ಲೋಕದಲ್ಲೂ ಇರಬೇಕು ಆತನದೇ ಧ್ವಜ' ಎಂಬ ಆಶಯವನ್ನು ಮನಸ್ಸಿನಲ್ಲಿಟ್ಟುಕೊಂಡು ಇನ್ನುಮುಂದೆ ನಮ್ಮ ಮಕ್ಕಳನ್ನು ಬೆಳೆಸಬೇಕು. ಅದರಲ್ಲೇ ನಮ್ಮ ಉದ್ಧಾರವಿದೆ. ಇಷ್ಟು ಹೇಳಿ ನಾನು ನನ್ನ ಭಾಷಣವನ್ನು ಮುಗಿಸುತ್ತೇನೆ" (ಪ್ರಚಂಡ ಕರತಾಡನ. ಜಯಘೋಷ 'ಮಾತೋಶ್ರೀ ರಮಾಬಾಯಿ ಅಂಬೇಡ್ಕರ್ ಅವರಿಗೆ ಜಯವಾಗಲಿ)

                                    *****


ದಲಿತರ ಅವ್ವ : ರಮಾಯಿಯ ಎರಡನೆಯ ಮತ್ತು ಅಂತಿಮ ಭಾಷಣ :

    ಆ ದಿನ 29ನೇ ಜನೇವರಿ 1932 !
    ಡಾ. ಬಾಬಾಸಾಹೇಬ ಅಂಬೇಡ್ಕರರು ಕುಳಿತ್ತಿದ್ದ ಲಂಡನ್ನಿನ ಹಡಗು ಬೆಳಿಗ್ಗೆ ಸರಿಯಾಗಿ ಆರು ಗಂಟೆಗೆ ಮುಂಬಾಯಿಯ ಬಂದರಿಗೆ ಬಂದು ತಲುಪಿತು. ಸೇರಿದ ಸಾವಿರಾರು ಅನುಯಾಯಿಗಳ ಹೃದಯ ಆನಂದದಿಂದ ತುಂಬಿ ತುಳುಕಿತು !
    ಆ ದಿನ ನಸುಕಿನಿಂದಲೇ ಡಾ. ಬಾಬಾಸಾಹೇಬ ಅಂಬೇಡ್ಕರರ ನಿಷ್ಟಾವಂತ ಅನುಯಾಯಿಗಳೂ, ಸಂಬಂಧಿಕರೂ ಹಾಗೂ ಹಿತಚಿಂತಕರು ಡಾ. ಬಾಬಾಸಾಹೇಬ ಅಂಬೇಡ್ಕರರ ಹಾದಿಯನ್ನು ತುಂಬ ಉತ್ಸಾಹಿತರಾಗಿಯೇ ಕಾಯುತ್ತಿದ್ದರು. ಪ್ರತಿಯೊಬ್ಬರೂ ಕೈಯಲ್ಲಿ ಹೂಮಾಲೆ-ಹೂಗುಚ್ಛ ಹಿಡಿದುಕೊಂಡು ನಸುಕಿನ ಚಳಿಗೂ ಅಂಜದೆ ಶಾಂತವಾಗಿಯೇ ಕಾಲಿಡಲೂ ಜಾಗವಿಲ್ಲದಂತೆ ಕಿಕ್ಕಿರಿದು ನಿಂತಿದ್ದರು.
    ಆ ಜನಸಂದಣಿಯಲ್ಲಿಯೇ ಡಾ. ಬಾಬಾಸಾಹೇಬ ಅಂಬೇಡ್ಕರರ ಧರ್ಮಪತ್ನಿ ದಲಿತರ ಅವ್ವ ರಮಾಯಿ ನಿಂತಿದ್ದಳು !
    ಸುವಾಸಿತ ಹೂವಿನಿಂದ ಮಾಡಲ್ಪಟ್ಟ ಮಾಲೆಯನ್ನು ಆಕೆ ಹಿಡಿದುಕೊಂಡು ತನ್ನ 'ಸಾಹೇಬ'ರನ್ನು ಎದುರುಗೊಳ್ಳಲು ನಿಂತಿದ್ದಳು !
    ತನ್ನ ಸಾಹೇಬನನ್ನು ಯಾವಾಗ ಕಣ್ಣು ತುಂಬಿಕೊಳ್ಳುತ್ತೇನೆಯೋ ಎಂಬ ಕಾತರದಲ್ಲಿ ಆಕೆ ಇದ್ದಳು !
    ಅಷ್ಟರಲ್ಲಿ ಗದ್ದಲ, ಜಯಕಾರ ಸುರುವಾದವು. ಡಾ. ಬಾಬಾಸಾಹೇಬ ಅಂಬೇಡ್ಕರರು ಹಡಗಿನಿಂದ ಇಳಿದು ಬರುತ್ತಿದ್ದರು. ಗಗನಭೇದಿ ಘೋಷಣೆ ಮುಳುಗತೊಡಗಿದವು !
    'ಡಾ.  ಬಾಬಾಸಾಹೇಬ ಅಂಬೇಡ್ಕರ ಕೀ ಜೈ !
    ಅಂಬೇಡ್ಕರ್ ಅಂಬೇಡ್ಕರ್ ... ದಲಿತರ ದೇವ ಅಂಬೇಡ್ಕರ್ !!
    ಮೊಟ್ಟಮೊದಲು ಸಮತಾ ಸೈನಿಕ ದಳವು ಡಾ. ಬಾಬಾಸಾಹೇಬ ಅಂಬೇಡ್ಕರರಿಗೆ ಹಾರ ಹಾಕಿ ಗೌರವ ವಂದನೆ ಸಲ್ಲಿಸಿತು.
    ನೋಡು ನೋಡುವಷ್ಟರಲ್ಲಿಯೇ ಹೂಮಾಲೆಗಳನ್ನು ಹಿಡಿದು ನಿಂತಿದ್ದ ಜನಸಮೂಹ ನಾ ಮುಂದು ತಾ ಮುಂದು ಎಂದು ಡಾ. ಬಾಬಾಸಾಹೇಬ ಅಂಬೇಡ್ಕರರನ್ನು ಸುತ್ತುವರಿಯಿತು ! ಅಪರಿಮಿತ ಭಕ್ತಿ, ಪ್ರೇಮ ಮತ್ತು ನಿಷ್ಟೆಯ ಸಂಕೇತವಾಗಿ ಹೂಮಾಲೆಗಳು ಡಾ. ಬಾಬಾಸಾಹೇಬ ಅಂಬೇಡ್ಕರರ ಕೊರಳನ್ನು ಅಲಂಕರಿಸಿದವು. ರಮಾಯಿ ಮಾತ್ರ ಈ ಎಲ್ಲ ಗದ್ದಲದಿಂದ ಒಂದಿಷ್ಟು ದೂರವೇ ಉಳಿದಿದ್ದಳು ! ತನ್ನ 'ಸಾಹೇಬ'ನ ಮೇಲೆ ಸೂಸುತ್ತಿದ್ದ ಅಪಾರ ಜನರ ಅಪರಿಮಿತ ಪರಿಶುದ್ಧ ಪ್ರೇಮವನ್ನು ಆಕೆ ಮೊದಲ ಬಾರಿ ನೋಡುತ್ತಿದ್ದಳು ! ನೋಡುತ್ತ ನೋಡುತ್ತ ಆಕೆಯ ಕಣ್ಣಾಲಿಗಳು ತುಂಬಿದವು ! ಆನಂದಭಾಷ್ಟ ಉದರಿದವು !
    ಎಲ್ಲರೂ ಮಾಲೆ ಹಾಕಿ ಮುಗಿದಾದ ಮೇಲೆ ರಮಾಯಿ ಕೊನೆಯವಳಾಗಿ ಡಾ. ಬಾಬಾಸಾಹೇಬ ಅಂಬೇಡ್ಕರರ ಬಳಿಗೆ ಹೋದಳು !
ಅಖಂಡವಾಗಿ ನಿಂತ ಡಾ. ಬಾಬಾಸಾಹೇಬ ಅಂಬೇಡ್ಕರರು !
    ರಮಾಯಿ ತಲೆಯೆತ್ತಿ ಕೂಡ ನೋಡಲಿಲ್ಲ !
    ಕೈಯಲ್ಲಿರುವ ಸುವಾಸಿತ ಮಾಲೆಯನ್ನು ಆಕೆ ಡಾ. ಬಾಬಾಸಾಹೇಬ ಅಂಬೇಡ್ಕರರ ಕೊರಳಿಗೆ ಹಾಕಿದಳು !
    ಆದರೆ ಆಕೆ ದೃಷ್ಟಿ ಮಾತ್ರ ಅವರ ಪದತಲದಲ್ಲಿಯೇ ಇತ್ತು !
    ಹಗಲು-ರಾತ್ರಿಯೆನ್ನದೆ ಯಾವ ಮೂರ್ತಿಯ ಸೇವೆಯನ್ನು ಮಾಡಿದ್ದಳೋ ಅದೇ ಇಂದು ಎದುರಿಗೇ ನಿಂತಿದ್ದರೂ ಆಕೆ ಕಣ್ಣೆತ್ತಿಯೂ ಕೂಡ ನೋಡಲಿಲ್ಲ !
ಹಾಗೆ ನೋಡುವುದಕ್ಕೆ ಆಕೆಯ ನಾಚಿಕೆ ಸ್ವಭಾವ ಮತ್ತು ಆಕೆ ಬಾಳಿದ ಸಂಸ್ಕಾರಗಳು ಅನುಮತಿಸಿರಲಿಕ್ಕಿಲ್ಲ !
    ಆದರೆ....... !
    ಈ ಹೃದಯಂಗಮವಾದ ಪ್ರಸಂಗವನ್ನು ನೋಡಿದ ಆಗ ಜನತಾ ಪತ್ರಿಕೆಯ ಸಂಪಾದಕರಾಗಿದ್ದ ಸಹಸ್ರಬುದ್ಧೆಯವರ ಚಾಣಾಕ್ಷ ಕಣ್ಣುಗಳು ಮರೆಯಲು ಸಾಧ್ಯವೇ ಇರಲಿಲ್ಲ !
    ಸಹಸ್ರಬುದ್ಧೆಯವರು ಸಹಜವಾಗಿಯೇ ಡಾ. ಬಾಬಾಸಾಹೇಬ ಅಂಬೇಡ್ಕರರಿಗೆ ಕೊನೆಯಲ್ಲಿ ಮಾಲೆ ಹಾಕಿದ್ದು ಮತ್ತು ಮಾಲೆ ಹಾಕುವಾಗ ತಲೆಯೆತ್ತಿ ನೋಡದಿರುವುದಕ್ಕೆ ಕಾರಣ ಏನು ಎಂದು ರಮಾಯಿಗೆ ಕೇಳಿಯೇ ಬಿಟ್ಟರು !
    ರಮಾಯಿಗೆ ಏನು ಹೇಳಬೇಕೆಂದು ಒಂದು ಕ್ಷಣ ತೋಚಲಿಲ್ಲ ! ಸಭೆಯಲ್ಲಿ ಮಾತನಾಡಬೇಕೆಂದರೆ ತನಗೆ ಸರಿಯಾಗಿ ಮಾತನಾಡಲೂ ಬರುವುದಿಲ್ಲ ! ಮಾತನಾಡದಿದ್ದರೆ ಡಾ. ಬಾಬಾಸಾಹೇಬ ಅಂಬೇಡ್ಕರರ ಪ್ರತಿಷ್ಠೆಗೆ ಧಕ್ಕೆ ಬರಬಹುದು ! ಹಾಗೆ ನೋಡಿದರೆ ರಮಾಯಿಯೇನೂ ಅರಿಯದ ಹೆಣ್ಣುಮಗಳಲ್ಲ ! ಆಕೆ ನಿಜವಾಗಿಯೂ ಚತುರಳೂ ಬುದ್ಧಿವಂತಳೂ ಆಗಿದ್ದಳು ! ಮರುಕ್ಷಣವೇ ಆಕೆಯ ಮೈಯಲ್ಲಿ ಮಿಂಚು ಹರಿದಾಡಿದ ಅನುಭವವಾಯಿತು. ಆಗ ಆಕೆ ತಡ ಮಾಡಲಿಲ್ಲ ; ತಟ್ಟನೇ ಎದ್ದು ಬಂದು ಮಾತನಾಡಲು ಆರಂಭಿಸಿದಳು !
    "ಅಧ್ಯಕ್ಷಮಹೋದಯರೇ, ನನ್ನ ಪತಿಮಹಾದೇವರೆ ಹಾಗೂ ಇಲ್ಲಿ ಸೇರಿರುವ ನನ್ನ ಬಂಧು-ಭಗಿನಿಯರೆ,
    ಈಗ ತಾನೆ ಸಹಸ್ರಬುದ್ಧೆ ಸಾಹೇಬರು ನನಗೆ ಕೇಳಿರುವ ಎರಡು ಪ್ರಶ್ನೆಗಳಿಗೆ ಉತ್ತರ ನೀಡಲು ನಾನು ಮಾತನಾಡಲೇಬೇಕಿದೆ. ಅದಕ್ಕಾಗಿಯೇ ಎದ್ದಿರುವೆ. ಯಾರು ಸಾಹೇಬರನ್ನು ಯಾವಾಗಲೋ ಒಮ್ಮೆ ಕ್ವಚಿತ್ತಾಗಿ ನೋಡುತ್ತಾರೋ ಅವರೆಲ್ಲ ಅವರನ್ನು ನೋಡಲಿ ... ನಾನೋ ಹಗಲು-ರಾತ್ರಿ ಸಾಹೇಬರ ದರ್ಶನ ಪಡೆದು ತೃಪ್ತಳಾದವಳು. ಆದ್ದರಿಂದ ಎಲ್ಲರೂ ಮೊದಲು ಮಾಲೆ ಹಾಕಿದ ಮೇಲೆ ನಾನು ಕೊನೆಯಲ್ಲಿ ಮಾಲೆ ಹಾಕಿದೆ. ಇದು ನಿಮಗೆಲ್ಲ ಗೊತ್ತು. ಇನ್ನು ಡಾ. ಅಂಬೇಡ್ಕರ್ ಸಾಹೇಬರು ಬಡಬಗ್ಗರ-ದೀನದಲಿತರ ಉದ್ದಾರಕ್ಕಾಗಿ ಪಣ ತೊಟ್ಟು ನಿಂತವರು. ನಾನು ಅವರ ಧರ್ಮಪತ್ನಿ. ಅವರ ಸಾಧನೆಗೆ ನನ್ನ ದೃಷ್ಟಿ ತಾಗಬಾರದೆಂಬ ಒಂದೇ ಉದ್ದೇಶದಿಂದ ನಾನು ಅವರ ಮುಖವನ್ನು ನೋಡದೇ ಬರೀ ಅವರ ಪಾದಗಳನ್ನು ಕಣ್ಣು ತುಂಬಿಕೊಂಡೆ.
ಈಗ ಹೇಳಿ ಬಂಧುಗಳೇ, ನಾನು ನೀಡಿದ ಉತ್ತರ ಸರಿಯೇ ? ಸರಿಯಾಗಿಯೇ ಇದ್ದೀತು ಮತ್ತು ಅದು ನಿಮ್ಮೆಲ್ಲರ ಜೊತೆ ಸಹಸ್ರಬುದ್ಧೆಯವರಿಗೂ ಸರಿತೋರಿದೆ ಎಂದು ನಂಬಿ ನಾನು ನನ್ನ ಈ ಭಾಷಣವನ್ನು ಮುಗಿಸುತ್ತೇನೆ. (ಪ್ರಚಂಡ ಕರತಾಡನ ಮತ್ತು ಜಯಕಾರ)
    ರಮಾಯಿಯ ಭಾಷಣ ಮುಗಿದ ಮೇಲೆ ಡಾ. ಬಾಬಾಸಾಹೇಬ ಅಂಬೇಡ್ಕರರು ಕೆಲವು ಮಾತುಗಳನ್ನಾಡಲು ಎದ್ದು ನಿಂತರು. ಸರಿಯಾಗಿಯೇ ಮಾತನ್ನು ಆರಂಭಿಸಿದ ಅವರು ಹೇಳತೊಡಗಿದರು ;
    "ಬಂಧುಗಳೇ, ದುಂಡುಮೇಜು ಪರಿಷತ್ತಿನಲ್ಲಿ ಸಾಧಿಸಿದ ಸಾಧನೆ ನನ್ನದಲ್ಲ ; ಅದು ಇಲ್ಲಿ ಸೇರಿರುವ ನನ್ನ ಎಲ್ಲ ಅಸಂಖ್ಯಾತ ಬಂಧು-ಭಗಿನಿಯರ ಸಾಧನೆ. ದುಂಡು ಮೇಜು ಪರಿಷತ್ತಿನಲ್ಲಿ ನಾನು ನಿರ್ವಹಿಸಿದ ಪಾತ್ರ ಕುರಿತು ಹಿಂದೂಗಳ ಭಾವಿ ಸಂತತಿ ನನ್ನನ್ನು ರಾಷ್ಟ್ರದ್ರೋಹಿ ಎಂದು ಬಗೆಯಬಹುದು ಎಂಬುದನ್ನು ಬಲ್ಲೆ. ಈಗ ನಾನು ಏನನ್ನೂ ಹೆಚ್ಚು ಹೇಳುವುದಿಲ್ಲ. ಆದರೂ ಈ ಮೊದಲು ಮಾತನಾಡಿದ ಸೌ. ಮೋಹಿತೆಬಾಯಿಯವರು ಸೌ. ರಮಾಬಾಯಿ ಬಗ್ಗೆ ಸಾಕಷ್ಟು ಹೇಳಿದ್ದಾರೆ. ಆದರೆ ನಾನು ಇಲ್ಲಿ ಒಂದು ಮಾತನ್ನು ಸ್ಪಷ್ಟಪಡಿಸುವುದು ಒಳಿತು ; ಇಂದಿಗೂ ಸೌ. ಮೋಹಿತೆಬಾಯಿಯವರು ಹೇಳಿದರಲ್ಲಿ ಒಂದನ್ನೂ ನನಗೆ ಈ ನಿಮ್ಮ ಆಯೀಸಾಹೇಬ ಹೇಳಿಲ್ಲ..... (ನಗು) ........ ನಿಮ್ಮ ಆಯೀಸಾಹೇಬರು ಬಹುದೊಡ್ಡ ಭಾಗೀರಥಿಯಾಗಿದ್ದಾರೆ ಎಂಬುದು ನನಗೆ ಇದೀಗಲೇ ಗೊತ್ತಾಗಿದ್ದು. ಅದು ಸರಿಯೇ ನಿಮ್ಮ  ಆಯೀಸಾಹೇಬರು ನಿಜವಾಗಿಯೂ ಭಾಗ್ಯದ ಭಾಗೀರಥಿಯೇ ಆಗಿದ್ದಾರೆ ! ..... (ನಗು.... ಸಮೂಹದ ಕರತಾಡನ ಮತ್ತು ಪ್ರಚಂಡವಾದ ಜಯಘೋಷ ನಿರಂತರವಾಗಿತ್ತು : ಡಾ. ಬಾಬಾಸಾಹೇಬ ಅಂಬೇಡ್ಕರ ಕೀ ಜೈ ! ದಲಿತರ ಅವ್ವ ರಮಾಯಿಗೆ ಜಯವಾಗಲಿ !)
ಅನುವಾದ : ಡಾ. ಸಿದ್ರಾಮ ಕಾರಣಿಕ

ದಾಸಿಮಯ್ಯನ ವಚನ

ಒಡಲುಗೊಂಡವ ಹಸಿವ;  ಒಡಲುಗೊಂಡವ ಹುಸಿವ  ಒಡಲುಗೊಂಡವನೆಂದು  ನೀನೆನ್ನ ಜರಿದೊಮ್ಮೆ ನುಡಿಯದಿರ ನೀನೆನ್ನಂತೆ ಒಮ್ಮೆ ಒಡಲುಗೊಂಡು ನೋಡ ರಾಮನಾಥ.