Showing posts with label Dalit. Show all posts
Showing posts with label Dalit. Show all posts

Tuesday, September 22, 2015

नेपाल के संविधान लिखने की कलम : दलित महिला कृष्णा कुमारी परियार

दलित महिला लिख रही है संविधान
संजय ढकाल


बीबीसी संवाददाता, नेपाल
 मंगलवार, 10 अप्रैल, 2012 को 11:37 IST तक के समाचार

कृष्णा कुमार पेरियार आज नेपाल में सांसद हैं लेकिन दलित परिवार में पैदा होना उनके लिए मुश्किलों का सबब बना
पैंतालिस साल की कृष्णा कुमारी परियार एक आम नेपाली महिला दिखती हैं. रंगीन साड़ी, सिंदूर से भरी मांग, गले में लाल रंग की माला, हाथों में चूड़िया.. पहले इन हाथों में सिलाई मशीन घूमती रहती थी अब इन उंगलियों ने नेपाल के संविधान लिखने की कलम थामी है .
Krishnakumari Pariyar
नेपाल के सबसे ज़्यादा पिछड़े और दलित वर्ग में पैदा हुई कृष्णा कुमारी परियार आज नेपाल में सांसद हैं और संविधान निर्माण में अहम भूमिका निभा रही हैं.
इस जगह पहुंचने के लिए कृष्णा ने बहुत मुश्किल सफ़र तय किया है.
कृष्णा ने बीबीसी को बताया, “मैने बचपन से भेदभाव झेला है. स्कूल में मेरे कुछ साथी कहते थे कि मैं अछूत हूं. पर इस व्यवहार ने मुझे प्रेरित किया राजनीति में आने औऱ इस तरह की परंपराओं को उखाड़ फेंकने के लिए. मैं उन्हे कहती थी मेरे औऱ तुम्हारे ख़ून में कोई फर्क नहीं है. मैं कभी हतोत्साहित नहीं हुई.”
कृष्णा कुमार पेरियार की ये राजनीतिक यात्रा दरअसल दस साल की उम्र में ही शुरू हो गई जब वो अपने पिता के साथ राजनीतिक आंदोलनों में हिस्सा लेने जाया करती थीं लेकिन राजनीति ने उनकी निजी ज़िंदगी पर ख़ासा असर डाला.
कृष्णा के पति ने उनका साथ छोड़ दिया क्योंकि पति की इच्छा थी कि कृष्णा राजनीति छोड़ दें.
राजनीतिक समझ
"मैने बचपन से भेदभाव झेला है. स्कूल में मेरे कुछ साथी कहते थे कि मैं अछूत हूं. पर इस व्यवहार ने मुझे प्रेरित किया राजनीति में आने औऱ इस तरह की परंपराओं को उखाड़ फेंकने के लिए. मैं उन्हे कहती थी मेरे औऱ तुम्हारे ख़ून में कोई फर्क नहीं है. "

कृष्णा कुमारी परियार
एक दलित परिवार में पैदा होने के सच ने ज़िदगी में जो अनुभव कराए, कृष्णा को अपने राजनैतिक जीवन में उससे फ़ायदा हुआ क्योंकि वो अब बेहतर जानती थीं कि उन्हें क्या करना है.
नेपाली कांग्रेस की सांसद कृष्णा को चार साल पहले पार्टी द्वारा संविधान लिखने के काम के लिए मनोनीत किया गया. वे उस दिन हर जगह अखबार की सुर्खियों में थी. सिलाई मशीन के साथ उनकी तस्वीर हर जगह छपी पर अब उनकी पहचान बदल गई है.
कृष्णा दलितों को मुख्य धारा में जोड़ने के बारे में बहुत साफ़ तौर पर कहती हैं, “मेरी समझ से सिर्फ़ कोटा निश्चित करने से कुछ नहीं होगा. पिछड़ों औऱ दलितों को मुख्यधारा में शामिल करने और कोटा देने के लिए एक ठोस नीति और आनुपातिक प्रतिनिधित्व की ज़रूरत है. ये दरअसल आर्थिक रूप से क़मज़ोर लोगों को ही मिलना चाहिए. जिस दिन संविधान सभा नया संविधान बना लेगी वो मेरे लिए बहुत ख़ुशी का दिन होगा. मैं समझूंगी मैने वो ज़िम्मेदारी पूरी की जो लोगों ने मुझे सौंपी थी.”
निजी ज़िंदगी
राजनैतिक ख्वाबों को पूरा करने की दिशा में तो कृष्णा कुमारी परियार आगे बढ़ रही हैं लेकिन निजी ज़िंदगी में जो ख़ालीपन है उसके बारे में क्या सोचती हैं कृष्णा.
ख़ासकर तब जब उनके पति ने फिर एक होने की इच्छा भी ज़ाहिर की है तो क्या कृष्णा इस बारे में सोचने के लिए तैयार हैं?
कृष्णा कुछ शिकायत भरे लहजे में कहती हैं, "मैं सचमुच चाहती थी कि कोई उस वक्त मेरे साथ होता जब मेरे पति ने मुझे छोड़ना का फ़ैसला किया. वो भी तब जब मुझे देर रात लौटने के बाद अपने बच्चों को खाना खिलाना पड़ता था. उसने मुझे उस वक्त अकेले छोड़ दिया. अब मुझे उससे कुछ लेना देना नहीं है.”
कृष्णा अब भी सिंदूर लगाती जरूर है लेकिन उनके लिए अब निजी जीवन के कथित सुख के आगे बड़ा उद्देश्य है- दलितों को नेपाल के संविधान के ज़रिए समान अधिकार दिलाने की लंबी लड़ाई.


Sunday, August 31, 2014

ಡಾ. ಬಾಬಾಸಾಹೇಬ ಅಂಬೇಡ್ಕರ್ ಅವರ ಹೆಸರು ಕೆಡಿಸುವ ಹುನ್ನಾರ !





ದಲಿತರ ವಿಷಯವನ್ನು ಎತ್ತಿಕೊಂಡು ರಾಜ್ಯ ಸರಕಾರವನ್ನು ವಿರೋಧಿಸಿ ಒಂದು ಪಕ್ಷದ ಪರಿಶಿಷ್ಟ ಜಾತಿ ಮೋರ್ಚಾ ಧಾರವಾಡದ ಜಿಲ್ಲಾಧಿಕಾರಿ ಕಚೇರಿಯ ಎದುರು ಪ್ರತಿಭಟನೆ ಮಾಡಿ ಕೆಲವು ಸಮಸ್ಯೆಗಳ ಬಗ್ಗೆ ಸರಕಾರ ತೀವ್ರವಾಗಿ ಪರಿಹಾರ ಒದಗಿಸಬೇಕು ಎಂದು ಮನವಿ ಮಾಡಿಕೊಂಡಿದ್ದು ಸರಿಯಾದರೂ ಅಲ್ಲಿರುವ ಮುಖಂಡರ ಹೇಳಿಕೆ ಡಾ. ಬಾಬಾಸಾಹೇಬ ಅಂಬೇಡ್ಕರ್ ಅವರ ಹೆಸರಿನಲ್ಲಿ ಇಲ್ಲಸಲ್ಲದ ಹೇಳಿಕೆ ನೀಡಿದ್ದು ಸರಿಯಲ್ಲ. ವಿಜಯ ಕರ್ನಾಟಕ ಪತ್ರಿಕೆಯಲ್ಲಿ (ದಿನಾಂಕ : 28-08-2014 : ನಮ್ಮ ಮಹಾನಗರ) ಈ ಸುದ್ದಿ ಪ್ರಕಟವಾಗಿದೆ.
‘ಗೋಮಾತೆಯನ್ನು ಪೂಜ್ಯನೀಯವಾಗಿ ಕಾಣುವ ಪರಂಪರೆಯನ್ನು ಹೊಂದಿರುವ ಭಾರತದಲ್ಲಿ ಗೋಹತ್ಯೆಗೆ ಅವಕಾಶ ನೀಡಬಾರದು ಎಂದು ಡಾ. ಬಿ.ಆರ್. ಅಂಬೇಡ್ಕರ್ ಸ್ಪಷ್ಟವಾಗಿ ಉಲ್ಲೇಖಿಸಿದ್ದಾರೆ. ಆದರೂ ಕೂಡ ಗೋ ಹತ್ಯೆ ನಿಷೇಧ ಜಾರಿಗೆ ಬಂದಿಲ್ಲ. ಕಾರಣ ರಾಜ್ಯ ಸರಕಾರ ಆದಷ್ಟು ಬೇಗ ಗೋಹತ್ಯೆ ನಿಷೇಧ ಕಾಯ್ದೆ ಜಾರಿಗೆ ತರಬೇಕು’ ಎಂದು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ. ಆದರೆ ಡಾ. ಬಾಬಾಸಾಹೇಬ ಅಂಬೇಡ್ಕರ್ ಅವರು ‘ಗೋಹತ್ಯೆ ನಿಷೇಧ'ದ ಬಗ್ಗೆ ಎಲ್ಲಿಯೂ ಹೇಳಿದ ಬಗ್ಗೆ ನಮಗಂತೂ ಗೊತ್ತಿಲ್ಲ. ಪ್ರತಿಭಟನೆ ಮಾಡಿದ ಪಕ್ಷದವರು ಅದನ್ನು ಹೇಳಿದರೆ ನಮಗೆ ಒಂದಿಷ್ಟು ಜ್ಞಾನ ಲಭ್ಯವಾಗುತ್ತದೆ. ಇಲ್ಲವಾದರೆ ಸುಳ್ಳು ಹೇಳುವ ಮೂಲಕ ಡಾ. ಬಾಬಾಸಾಹೇಬ ಅಂಬೇಡ್ಕರ್ ಅವರಿಗೆ ಅವಮಾನ ಮಾಡುವ
ಅವಶ್ಯಕತೆಯಿಲ್ಲ ; ಹಾಗೇನಾದರೂ ಮಾಡಿದರೆ ಇತಿಹಾಸವನ್ನು ಮರೆಮಾಚುವ ಮಂದಿಯ ವಿರುದ್ಧ ಕೆಂಡ ಕಾರಲೇ ಬೇಕಾಗುತ್ತದೆ. ಯಾವ ಹಿಂದೂ ಧರ್ಮವನ್ನು ಪ್ರತಿಭಟಿಸಿ, ವಿರೋಧಿಸಿ, ಹೊಸದೊಂದು ಇತಿಹಾಸ ನಿರ್ಮಿಸಿದ ಡಾ. ಬಾಬಾಸಾಹೇಬ ಅಂಬೇಡ್ಕರ್ ಅವರ ಹೆಸರು ಹೇಳಿಕೊಂಡು, ಅವರು ಹೇಳದೇ ಇರುವ ಸಂಗತಿಗಳನ್ನು ಅವರ ತಲೆಗೆ ಕಟ್ಟಿ ಅಪಪ್ರಚಾರ ಮಾಡುವ ಉಮೇದಿನಲ್ಲಿ
ಇರುವ ಮಂದಿಯನ್ನು ತಹಬಂದಿಗೆ ತರುವ ಹೋರಾಟ ಇನ್ನಷ್ಟು ತೀವ್ರವಾಗುವ ಅನಿವಾರ್ಯತೆ ಇದೆ.

Tuesday, March 04, 2014

ವಡ್ಡರ ವೇದನೆಯ ಎರಡು ಪ್ರಸಂಗಗಳು

ವಡ್ಡರ ವೇದನೆ (ಕಾದಂಬರಿ)
ಮೂಲ ಮರಾಠಿ : ಲಕ್ಷ್ಮಣ ಗಾಯಕವಾಡ
ಕನ್ನಡಕ್ಕೆ : ಡಾ. ಸಿದ್ರಾಮ ಕಾರಣಿಕ
---------------------------------------------
ದಿನಗಳು ಉರುಳುತ್ತಲೇ ಇದ್ದವು. ಈಗಾಗಲೆ ಅವರಿಬ್ಬರೂ ಪರಸ್ಪರ ನೋಡದಿದ್ದರೆ ಒಬ್ಬರಿಗೂ ನೆಮ್ಮದಿ ಎನಿಸುತ್ತಿರಲಿಲ್ಲ. ಒಂದು ದಿನ ಕ್ಲಾಸುಗಳೆಲ್ಲ ಮುಗಿದಿದ್ದವು. ತುಕಾರಾಮನನ್ನು ಭೇಟಿಯಾದ ಆಕೆ ತನಗೆ ಲೆಕ್ಕವೊಂದು ಬರುತ್ತಿಲ್ಲ ; ತಿಳಿಸಿಕೊಡಬೇಕು ಎಂದಳು. ಕಾಲೇಜಿನ ಬೆಲ್ ಆಗಿ ಅಳಿದುಳಿದವರು ಹೋದ ಮೇಲೆ ತುಕಾರಾಮ ಕ್ಲಾಸ್ ರೂಮಿನ ಕೊನೆಯ ಬೆಂಚಿನ ಮೇಲೆ ಅಭ್ಯಾಸ ಮಾಡುತ್ತಿರುವನಂತೆ ನಟಿಸುತ್ತ ಕುಳಿತ. ಎಲ್ಲ ಗೆಳತಿಯರ ಕಣ್ಣು ತಪ್ಪಿಸಿ ಸುನೀತಾ ಅಲ್ಲಿಗೆ ಬಂದು ತುಕಾರಾಮ ಹಿಡಿದುಕೊಂಡಿದ್ದ ಪುಸ್ತಕವನ್ನು ಕಿತ್ತಿಸೆದಳು. “ಯಾಕೋ ತುಕಾರಾಮ, ಯಾರ ಹಾದಿ ಕಾಯಕತ್ತಿ ?” ಎಂದು ನಕ್ಕಳು. ಆತ ಕೂಡ ನಗುತ್ತಲೆ, “ಅಲ್ಲss ನಿನ್ನ ಬಿಟ್ಟ ನಾ ಬ್ಯಾರೆ ಯಾರ್ ಹಾದಿ ಕಾಯ್ಲಿ ಹೇಳಲಾ ? ನಿನ್ನ ಆದೇಸ ಪಾಲ್ಸಾಕ ನಿನ್ನss ಕಾಯ್ಕೋತ ಕುಂತ್ಯಾನ ನೋಡ” ಎಂದ. ಕ್ಲಾಸ್ ರೂಮಿನ ಬಾಗಿಲು ಮುಂದೆ ಮಾಡಿ, ಕಿಟಕಿಗಳನ್ನೆಲ್ಲ ಬಂದ್ ಮಾಡಿ ಇಬ್ಬರೂ ಹಿಂದಿನ ಬೆಂಚಿನಲ್ಲಿ ಹೋಗಿ ಕುಳಿತರು. ಯಾರಾದರೂ ಬಂದರೆ ಅಭ್ಯಾಸ ಮಾಡುತ್ತಿರುವಂತೆ ಇರಬೇಕೆಂದು ಗಣಿತದ ಪುಸ್ತಕ, ವಹಿ, ಪೆನ್ನು ತೆಗೆದು ಬೆಂಚಿನ ಮೇಲೆ ಇಟ್ಟರು !
ಇಡೀ ಕಾಲೇಜು ಸ್ಮಶಾನದಂತೆ ಮೌನವಾಗಿತ್ತು. ಇಬ್ಬರೂ ಕೈಕೈ ಹಿಚುಕುತ್ತ, ಕಾಲನ್ನು ಕಾಲಿನಿಂದ ಕೆರೆಯುತ್ತ ಕುಳಿತುಕೊಂಡಿದ್ದರು ! “ತುಕಾರಾಮಾ, ನೀ ಭಾssಳ ಮಸ್ತ ಅದಿ. ಕಲ್ಲಿನಂಥಾ ನಿನ್ನ ಮೈಯ್ಯಿ, ಗಟ್ಟಿಮುಟ್ಟಾಗಿರೋ ನಿನ್ನ ತೋಳು ನಂಗ ಭಾssಳ ಹಿಡಿಸ್ಯಾವು” ಎಂದ ಆಕೆ ಮೆಲ್ಲಗೆ ತನ್ನ ತುಟಿಯನ್ನು ಮುಂದೆ ತಂದು ಆತನ ಗಲ್ಲಕ್ಕೆ ಒತ್ತಿದಳು. ಆತನ ಮೈಯೆಲ್ಲ ಕರೆಂಟ್ ಹೊಡೆದಂತಹ ಅನುಭವವಾಯಿತು. ಆತ ತಡೆದುಕೊಳ್ಳದೇ ಆಕೆಯನ್ನು ಬಿಗಿಯಾಗಿ ತಬ್ಬಿಕೊಂಡು, “ಸುನೀತಾ, ನಿನ್ನ ಮೈ, ಬಿಡಿಸಿಟ್ಟ ಹತ್ತಿಗತೇ ಎಟ್ಟ ಮೆತ್ತಗ ಏತ್ಯೇ ? ನಿನ್ನ ಹೊಗಳಾಕ ನಂಗ ಬರೂದುಲ್ಲ. ಜಗತ್ತಿನ್ಯಾಗಿನ ಎಲ್ಲಾ ಚೆಲುವ ನಿನ್ನೊಳಗss ತುಂಬಕೊಂಡೇತಿ’ ಎಂದ
ಪ್ರೇಮದ ಕಾವು ಏರಿ ಕಾಮವಾಗಿ ಕೈ ಬೀಸಿ ಕರೆಯತೊಡಗಿತ್ತು ! ಆತ ಮೆಲ್ಲಗೆ ಆಕೆಯ ಮೊಲೆಗಳ ಮೇಲೆ ಕೈ ಇಟ್ಟು ಸವರಿದ ! ಗುಂಡುಗುಂಡಾಗಿದ್ದ ಅವು ಭೂಗೋಳದಲ್ಲಿ ಹೇಳುವ ಗೋಲಾಕಾರದ ಸಣ್ಣ ಸಣ್ಣ ಭೂಮಿಯಂತಿವೆ ಎಂದೆನಿಸಿತು. ಮೊಲೆಗಳನ್ನು ಸವರುತ್ತಿದ್ದವನು ಮೆಲ್ಲಗೆ ಒಳ ಕೈ ಹಾಕಿ ಹಿಚುಕತೊಡಗಿದ ! ಆಕೆಯ ಮೊಲೆಗಳ ಸ್ಪರ್ಷದ ಅಮಲಿನಲ್ಲಿ ಆತ ತನ್ನನ್ನೇ ಮರೆತುಬಿಟ್ಟ ! ಸುನೀತಾಳನ್ನು ಮೇಲೆಳೆದುಕೊಂಡು ಬಿಗಿಯಾಗಿ ತಬ್ಬಿಕೊಂಡ. ಆತನ ಕೈಗಳು, ಕೈ ಬೆರಳುಗಳು ಆಕೆಯ ಪ್ರತಿಯೊಂದು ಅಂಗವನ್ನು ತಡಕಾಡುತ್ತ, ಮುಟ್ಟುತ್ತ, ಹಿಚುಕುತ್ತ ಜಗ್ಗುತ್ತ ಆನಂದವನ್ನು ಅನುಭವಿಸುತ್ತಿದ್ದವು !
ತುಕಾರಾಮ ಮತ್ತು ಸುನೀತಾ ಪ್ರೇಮ-ಕಾಮದ ಪಾಕದಲ್ಲಿ ಎಷ್ಟೊಂದು ಮೈ ಮರೆತ್ತಿದ್ದರೆಂದರೆ ಕಾಲೇಜಿನ ಸಿಪಾಯಿ ಬಂದು ಕ್ಲಾಸ್ ರೂಮಿನ ಬಾಗಿಲಿಗೆ ಕೀಲಿ ಜಡಿದು ಹೋದದ್ದು ಕೂಡ ಅವರಿಗೆ ಗೊತ್ತಾಗಲಿಲ್ಲ. ಅವರಿಬ್ಬರೂ ಸಮಯ, ಸಮಾಜ, ಸಂಬಂಧಗಳೆಲ್ಲವನ್ನೂ ಮರೆತು, ಪ್ರಕೃತಿಯ ಇಚ್ಚೆಗೆ ಬದ್ಧರಾಗಿ ಪ್ರೇಮ-ಕಾಮದ ಆನಂದ ಪಡೆಯುವ ಉತ್ತುಂಗ ಶಿಖರವನ್ನೇರ ತೊಡಗಿದ್ದರು !

*****
ಶಂಕರ ದಯನೀಯವಾಗಿ, ಪರಿಪರಿಯಿಂದ ವಿನಂತಿ ಮಾಡಿಕೊಂಡ. “ಮಾಸ್ತರ, ನಮ್ಮ ಹುಡ್ಗ್ನ ಕಡಿಂದ ತಪ್ಪಾಗಿದ್ರ ಹೊಟ್ಟ್ಯಾಗ ಹಾಕ್ಕೋರ್ರಿ. ಹಕನಾಕss ಅಂವ್ನ ಬದ್ನಾಮಿ ಮಾಡಬ್ಯಾಡ್ರಿ. ಅಂವ್ಯಾನಭೀ ತಪ್ಪss ಮಾಡಿಲ್ಲssತ ನಾ ಹೇಳೂದುಲ್ರಿ ... ಅಲ್ರಿ ಮಾಸ್ತರ, ಅಂವ್ನ ಜೋಡಿ ಇದ್ದ ಪೋರಿನ ಯಾಕ ಕರಿಸಿಲ್ರಿ ನೀವಾ ? ಇದ್ಯಾನ ಬರೋಬ್ಬರಿ ಅಲ್ಲ ತೆಗಿರಿ... ನಾವ ಹೊಟ್ಟಿ-ಬಟ್ಟಿ ಅನೂಲಿ ಮಾಡಕೊಂದ ನನ್ನ ಮಗ್ಗ ಸಾಲಿ ಕಲ್ಸತೇವ್ರಿ…. ಯ್ಯಾನರೇ ಇರ್ಲಿ ಬಿಡ್ರಿ ... ... ಇದೊಂದು ಸತೀ ನನ್ನ ಮಗನ ಮಾಫ ಮಾಡ್ರಿ. ನನ್ನ ಮಗ್ಗ ಕಾಲೇಜ್ ಕಲ್ಯಾಕ ಅನವ ಮಾಡ್ಯಕೊಡ್ರಿ... ...“ ಎಂದು ಬಾಯಿಗೆ ಬಂದುದ್ದನೆಲ್ಲ ಶಂಕರ ಮಾತನಾಡುತ್ತಲೇ ಇದ್ದ.
ನಡುವೆಯೇ ಬಾಯಿ ಹಾಕಿದ ಪ್ರಿನ್ಸಿಪಾಲ್, “ನೋಡ್ರಿ, ಮೀಟಿಂಗನ್ಯಾಗ ಎಲ್ಲಾ ಡಿಸ್ಕಸ್ ಮಾಡಿ ತೀರ್ಮಾನ ಮಾಡೇ ನಿಮ್ಮ ಮಗನ ಕಡೀ ತಪ್ಪದ ಮಾಡಬಾರ್ದಂಥಾ ದೊಡ್ಡ ಗುನ್ಹಾ ಅದು. ಅಂವ್ಗ ದಂಡಾ ಹಾಕಿ, ಶಿಕ್ಷಾ ಕೊಡಲಿಲ್ಲಂದ್ರ ನಮ್ಮ ಕಾಲೇಜನ್ಯಾಗ ಶಿಸ್ತ ಅನ್ನೂದss ಉಳಿಯುದಿಲ್ಲ. ದಂಡಾ ತುಂಬ್ರ್ರಿ ; ಇಲ್ಲಂದ್ರ ಮಗನ ಕರ್ಕೊಂಡ ಮನಿಗಿ ಹೋಗ್ರಿ” ಎಂದು ದಬಾಯಿಸತೊಡಗಿದ. ಹೊರಗೆ ಕಿಟಕಿ ಸುತ್ತೆಲೆಲ್ಲ ವಿದ್ಯಾರ್ಥಿಗಳು ಮುತ್ತಿಕೊಂಡು ಒಳಗೆ ನಡೆದಿರುವ ಪ್ರಸಂಗವನ್ನು ಕುತೂಹಲದಿಂದ ನೋಡುತ್ತಿದ್ದರು. ತುಕಾರಾಮ ಕೂಡ ಬಾಗಿಲ ಹೊರಗೆ ಚಿಂತೆಯಲ್ಲಿ ನಿಂತಿದ್ದ !
ಪ್ರಿನ್ಸಪಾಲ್‍ನ ಮಾತು ಕೇಳಿ ಶಂಕರನ ಸಿಟ್ಟು ನೆತ್ತಿಗೇರುತ್ತಿತ್ತು. ಅದನ್ನು ತಡೆದುಕೊಳ್ಳುವ ಪ್ರಯತ್ನದಲ್ಲಿಯೇ ಆತ, “ಮಾಸ್ತರ್ರ, ಹಲ್ಕಟ್ ಕೆಲ್ಸಾ ಮಾಡಿದ ಅಪವಾದ ಹೊರ್ಸಿ ನನ್ನ ಮಗ್ಗ ಆssಟ ಯಾಕ ದಂಡಾ ಹಾಕ್ತೇರಿ ? ... ಮಾಸ್ತರ್ರss ಶಾರದಾಗಿನ ಹಿಕ್ಮತ್ ನಂಗೂ ಗೊತ್ತೇತಿ... ಈಗ್ಯಾನ ... ಐದನೂರಾ ಐವತ್ತೊಂದ ರುಪಾಯಿ ತುಂಬಾಕss ಬೇಕssತ ನಿಣ್ರ್ಯಾ ಮಾಡೇರಿ ?...” ಎಂದಾಗ ಪ್ರಿನ್ಸಿಪಾಲ್, “ಹೌದರಿ, ಅದss ಕೋನಿ ನಿರ್ಣಯಾ. ದಂಡಾ ಕಟ್ಟೂಲ್ಲದ ನಿಮ್ಮ ಹುಡುಗ ಕ್ಲಾಸಿಗೀ ಕುಂತಕೊಳ್ಳು ಹಾಂಗಿಲ್ಲ” ಎಂದ.
“ನೋಡ್ರಿ ಮಾಸ್ತರ್ರ, ನಾ ನಿಮ್ಮಗತೆ ಕಲ್ತಾಂವೂ ಅಲ್ಲ ; ತಿಳಿದಾಂವೂ ಅಲ್ಲ. ನಾ ಒಬ್ಬ ಬಡುವ ವಡ್ರ ಅಡಾನಿ ಮನಿಸ್ಯಾ. ಆದರ ನಂಗ ಯ್ಯಾನಭೀ ಹೇಳಿದರ ನಡಿತೇತಿ ಅssತ ತಿಳ್ಕೂಬ್ಯಾಡ್ರಿ. ನಂಗೂ ಎಲ್ಲಾ ಗೊತ್ತೇತಿ... ಹೋಗ್ಲಿ ಬಿಡ್ರಿ, ನಾ ದಂಡಾ ತುಂಬಾಕ ಕಬೂಲಿ ಅದ್ಯಾನ... ಆದರ ನನ್ನ ಮಗ್ಗ ನೀವೆಲ್ಲಾರೂ ಸೇರಿ ಅರ್ಧೂಟ್ ಮಾಡೇರಿ ! ಅದಕ್ಕ ಯ್ಯಾನ ಮಾಡ್ತೇರಿ ?” ಎಂದು ಶಂಕರ ದಿಟ್ಟತನದಿಂದಲೇ ಹೇಳಿದ. ಪ್ರಿನ್ಸಿಪಾಲ್‍ನಿಗೆ ಏನೊಂದೂ ತಿಳಿಯದೇ “ಅರ್ಧೂಟ ಅಂದ್ರ ಏನ್ರಿ ? ಈ ನಿಮ್ಮ ಭಾಷಾ ನಮಗ ಆರ್ಥ ಆಗೂದಿಲ್ಲ. ಒಂದೀಸ ತಿಳಿಯಾಂಗ ಹೇಳ್ರಿ” ಎಂದ.
“ಮಾಸ್ತರ್ರss ನಾವ ಎತ್ತಕ ನೀರ ಕುಡಸಾಕ ಹೋಳಿಗೆ ಕರ್ಕೋಂಡ್ ಹೋಗತ್ಯಾವರಿ ! ಹೊಳ್ಯಾಗ ಇಳ್ದ ನೀರಡಿಸಿದ ಎತ್ತಾ ನೀರಡಿಕಿ ಇಂಗೂತಕಾ ಕುಡಿತೇತಿ. ಆಗ ಯಾರರೆ ನೀರಾಗ ಕಲ್ಲ ಒಗದ್ರ, ಗದ್ಲಾ ಮಾಡ್ಯರ ಎತ್ತಾ ಅಂಜಿಕಿಸಿ ನೀರ ಕುಡ್ಕೋದ ಬಿಟ್ಟ ಓಡಿ ಹೋತೇತ್ರಿ. ಅದರ ನೀರಡಿಕೀ ಇನ್ನಾ ಇಂಗಿರುದುಲ್ಲ. ನಾವ ಮತ್ತ ಅದನ ಜುಲುಮಿಲೆ ಕರ್ಕೊಂಡ್ ಬಂದ ನೀರ ಕುಡ್ಸಬೇಕಾತೇತಿ. ಅದ ನೀರ ಕುಡ್ಯಾಗ, ಯಾರರೇ ಮತ್ತss ನೀರಾಗ ಕಲ್ಲ ಒಗಿದಾಂಗ, ಗದ್ಲಾ ಮಾಡದಾಂಗ ಕಾಯ್ಬೇಕಾತೇತಿ. ಆವಾಗ ಎತ್ತಾ ಹೊಟ್ತುಂಬ ನೀರ ಕುಡ್ದ, ತನ್ನಿಂತಾನss ಹೊಳಿ ಬಿಟ್ಟ ಮ್ಯಾಗ ಬರ್ತೇತಿ. ಎತ್ತಗ ಹೆಂಗ ಬುಚಕುಳಾ (ಅರ್ಧೂಟ್) ಆಗತೇತ್ಯಲಾ ಹಂಗ ನಮ್ಮ ಹುಡಗ್ಗss ಆಗೇತಿ. ನಮ್ಮ ಹುಡ್ಗ ಮತ್ತ ಆ ಪೋರಿ ಒಳಗ ಇರಬೇಕಾರ ನೀವ ಬಾಕ್ಲಾ ತಗ್ದ ಅಡ್ಡಗಾಲ ಹಾಕಿ, ನನ್ನ ಮಗ್ಗ ಬುಚಕುಳಾ ಮಾಡೇರಿ. ಅದಕ್ಕ ಐದ್ನೂರಾ ಐವತ್ತೊಂದು ರುಪಾಯಿ ದಂಡಾ ಕಟ್ಟ ಅಂತಿರಿ ! ನನ್ನ ಮಗಾ ಹೇಳ್ತಾನು, ತಾ ಪೋರಿ ಸಂಗಾಟ ಯ್ಯಾನಭೀ ಮಾಡಲ್ಲಿssತ ! ನೀವಂತಿರೀ ಅಂವಾ ಮಾಡ್ಯಾನ ದಂಡಾ ಕಟ್ರಿ ಅssತ ! ಮಾಸ್ತರ್ರ, ನಾ ತಿಳಿದಾಂವ ಅಲ್ಲ, ಆದ್ರಭಿ ನನ್ನ ಅನುನಕೀ ಹಿಂಗೇತ್ಯಲಾ, ನನ್ನ ಮಗಾ ಯ್ಯಾನಭೀ ಮಾಡೂಲ್ಲದss ಆ ಪೋರಿ ಸಂಗಾಟ ಖೋಲ್ಯಾಗ ಇರಾನಾ ದಂಡಾ ಹಾಕ್ಕ್ಯರಲಾ ? ಒಂದ್ ಸಲಾ ಖೋಲ್ಯಾಗ ಇರಾಕss ನೀವ ಅssಟ್ ದಂಡಾ ಹಾಕತೇರ್ಯಲಾ ? ಹಂಗಾರ ನಾ ಹೇಳ್ಕೇಳಿ ವಡ್ರ ಮನಸ್ಯಾ, ಮಾಯಲೇ ಬಂದ್ರ ತಲಿಮ್ಯಾಗಿನ ಪಟಗಾ ಸುದ್ದಾ ಕುಡತ್ಯಾನ ! ನಾವ್ ಒಮ್ಮೀ ಜಿದ್ದಿಗಿ ಬಿದ್ದ್ಯೂ ಅಂದ್ರ ಏಕ್ ಮಾರ್ ದೋ ತುಕಾಡಾ ! ನೋಡ್ರಿ ಮಾಸ್ತರ, ನಾ ಇನ್ನಾ ಐದ್ನೂರಾ ಐವತ್ತೊಂದ ರುಪಾಯಿ ಹೆಚ್ಚss ಕುಡತ್ಯಾನ ತುಗೋರಿ ! ಆದರ ಇನ್ನೊಮ್ಮಿ ಆ ಪೋರಿ ಮತ್ತ ನನ್ನ ಮಗನ್ನ ಅದss ಖೋಲ್ಯಾಗ ಬಿಟ್ಟ ಕೀಲಿ ಹಾಕ್ರಿ ! ಮಗಾ ಯ್ಯಾನಾ ಮಾಡೋದೇತಿ ಅದ್ನ ಮಾಡಿ ಸಮಾಧಾನ್ರೇ ಆಗ್ಲಿ ! ಆದದ್ದss ಇನ್ನೊಮ್ಮಿ ಆಗ್ಲಿ. ನಾ ಡಬಲ್ ರೊಕ್ಕಾ ಕುಡಾಕ ತಯಾರಿದ್ಯಾನ. ಆದ್ರ ಸುಮ್ಮ ಸುಮ್ಮ ಯ್ಯಾನೂ ಮಾಡೂಲ್ಲದss ನಮ್ಮ ಮಗನ ಮಯ್ ಮ್ಯಾಲ ಹೇಲ ಚಲ್ಲೂದಕ ನಾ ಬಿಡು ಪೈಕಿಯಲ್ಲ” ಎಂದು ಒಂದೇ ಸಮನೇ ಮಾತನಾಡಿದ.

ಈ ಮಾತು ಕೇಳಿ ಸಭೆಯಲ್ಲಿ ಇದ್ದವರ ಬುಡ ಬೆದರಿದವು !

Thursday, January 16, 2014

ಮರಾಠಿ ದಲಿತ ಕವಿ ; ಸಂಘಟಕ ನಾಮದೇವ ಢಸಾಳರಿಗೆ ಶ್ರದ್ಧಾಂಜಲಿ

ಪದ್ಮಶ್ರೀ ನಾಮದೇವ ಢಸಾಳ

ಡಾ. ಸಿದ್ರಾಮ ಕಾರಣಿಕ
ಮರಾಠಿಯ ಬಹುದೊಡ್ಡ ದಲಿತ ಬರಹಗಾರ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ನಾಮದೇವ ಢಸಾಳರು ನಿನ್ನೆ (15-01-2014) ಬಾಂಬೆ ಆಸ್ಪತ್ರೆಯಲ್ಲಿ ತೀರಿಕೊಂಡರು. ಮಹಾರಾಷ್ಟ್ರದ ಪುಣೆ ಸಮೀಪದ ಒಂದು ಹಳ್ಳಿಯಲ್ಲಿ 15-02-1949 ರಲ್ಲಿ ಜನಿಸಿದ ನಾಮದೇವರು ಆನಂತರ ತಮ್ಮ ತಂದೆಯೊಂದಿಗೆ ಮುಂಬಾಯಿಗೆ ಬಂದರು. ಅಲ್ಲಿ ಗೋಲಪೀಠಾ ಎನ್ನುವ ರೆಡ್ ಲೈಟ್ ಪ್ರದೇಶದ ಜೋಪಡಿಯಲ್ಲಿ ಬೆಳೆದರು. ಕೇವಲ ಮ್ಯಾಟ್ರಿಕ್ (ಎಸ್.ಎಸ್.ಎಲ್.ಸಿ) ವರೆಗೆ ಮಾತ್ರ ಶಿಕ್ಷಣ ಪಡೆದ ಅವರು ತಮ್ಮ ಹರಿತವಾದ ಲೇಖನಿಯ ಮೂಲಕ ಮರಾಠಿ ದಲಿತ ಸಾಹಿತ್ಯ ಸಂವೇದನೆಯನ್ನು ತೀವ್ರವಾಗಿ ಹಿಡಿದಿಟ್ಟವರು. ಕೆಲವು ಕಾಲ ಮುಂಬಾಯಿಯಲ್ಲಿ ಟ್ಯಾಕ್ಸಿ ಚಾಲಕರಾಗಿ ದುಡಿದ ಅವರು ಆನಂತರದಲ್ಲಿ ಅಂಬೇಡ್ಕರ್ ಚಳುವಳಿಯಲ್ಲಿ ಗುರುತಿಸಿಕೊಂಡು, ಅಮೇರಿಕೆಯ 'ಬ್ಯಾಕ್ ಪ್ಯಾಂಥರ್' ಪ್ರೇರಣೆಯಿಂದ ಮಹಾರಾಷ್ಟ್ರದಲ್ಲಿ 'ದಲಿತ ಪ್ಯಾಂಥರ್' ಹುಟ್ಟು ಹಾಕಿದರು. ಕಾಲಾನಂತರದಲ್ಲಿ ಆ 'ಪ್ಯಾಂಥರ್' ಕೂಡ ಹೋಳಾಯಿತು. ಒಂದು ಗುಂಪಿಗೆ ಇವರೇ ನಾಯಕರಾಗಿದ್ದರು. ಕೆಲವು ಕಾಲಗಳಿಂದ ಮಾಯಸ್ಥೇನಿಯಾ ಗ್ರ್ಯಾವೀಸ್ ಎನ್ನುವ ಕ್ಯಾನ್ಸರ್ ರೋಗ ಅವರನ್ನು ಬಾಧಿಸುತ್ತಿತ್ತು. ಆದರೂ ಕ್ರಿಯಾಶೀಲರಾಗಿದ್ದರು.
ಬುಧವಾರ (15-01-2014) ನಸುಕಿನ ನಾಲ್ಕು ಗಂಟೆ ಸುಮಾರಿಗೆ ತೀರಿಕೊಂಡ ನಾಮದೇವ ಢಸಾಳರನ್ನು ಇಂದು (16-01-2014) ಚೈತ್ಯಭೂಮಿಯಲ್ಲಿ ಅಂತ್ಯ ಸಂಸ್ಕಾರ ಮಾಡಲಾಯಿತು.
ನಾಮದೇವ ಢಸಾಳರ ಸಾವು ದಲಿತ ಹೋರಾಟಕ್ಕೆ, ಬಂಡಾಯದ ಕೆಚ್ಚಿಗೆ ಮತ್ತು ಬಂಡಾಯ ಸಾಹಿತ್ಯಕ್ಕೆ ತುಂಬಲಾರದ ಹಾನಿ. ಅವರ ಪ್ರೇರಣೆ ಸದಾ ನಮ್ಮ ಮೇಲೆ ಇರಲಿ. ಅವರಿಗೆ ಗೌರವದ ವಂದನೆ.

Wednesday, January 15, 2014

ಅಂಬೇಡ್ಕರ್ ಅವರ ಮೊಮ್ಮಕ್ಕಳ ಬ್ರಾಹ್ಮಣತ್ವ ಸ್ವೀಕಾರ ?

ಡಾ. ಬಾಬಾಸಾಹೇಬ ಅಂಬೇಡ್ಕರ್
ಡಾ. ಸಿದ್ರಾಮ ಕಾರಣಿಕ
ಡಾ. ಬಾಬಾಸಾಹೇಬ ಅಂಬೇಡ್ಕರ್ ಅವರ ಪ್ರಖರ ವೈಚಾರಿಕತೆಯ ಅರಿವು ಅವರ ಜೊತೆಗೆಯೇ ಹೋಯಿತೇನೋ ಎನಿಸುತ್ತದೆ. 'ಇಲ್ಲಿಯವರೆಗೆ ನಾನು ಎಳೆದು ತಂದಿರುವ ರಥವನ್ನು ಸಾಧ್ಯವಾದರೆ ಮುಂದಕ್ಕೆ ಒಯ್ಯಿರಿ. ಇಲ್ಲವಾದರೆ ಅದನ್ನು ಅಲ್ಲಿಯೇ ಬಿಟ್ಟು ಬಿಡಿ. ಆದರೆ ದಯವಿಟ್ಟು ಹಿಂದಕ್ಕೆ ಮಾತ್ರ ತಳ್ಳಬೇಡಿ' ಎಂಬ ವಿಚಾರ ಕೇವಲ ವೇದಿಕೆಯ ಮಾತಾಗಿ ಇಂದು ಉಳಿದುಕೊಂಡಿದೆಯೇನೋ ಎಂಬ ಆತಂಕ ಕಾಡುತ್ತಿದೆ. ಡಾ. ಬಾಬಾಸಾಹೇಬ ಅಂಬೇಡ್ಕರ್ ಅವರ ಹೆಸರು ಹೇಳಿಕೊಂಡು ಬೆಳೆದ ಎಷ್ಟೋ ಮಂದಿ ಇಂದು ಆ ಹೆಸರಿಗೆ ಕಳಂಕ ತರುವ ರೀತಿಯಲ್ಲಿ ನಡೆದುಕೊಳ್ಳುತ್ತಿದ್ದಾರೆ. ಬೇರೆಯವರು ಯಾಕೆ ಡಾ. ಬಾಬಾಸಾಹೇಬ ಅಂಬೇಡ್ಕರ್ ಅವರ ಮೊಮ್ಮಕ್ಕಳೇ ಇಂದು ಬ್ರಾಹ್ಮಣತ್ವವನ್ನು ಪೋಷಿಸುತ್ತಿದ್ದಾರೆ. ದೇವಾಲಯಗಳಲ್ಲಿ ಹೋಮ-ಹವನ, ಪೂಜೆ ಮಾಡುವುದಷ್ಟೇ ಅಲ್ಲ ; 'ರಾಜಗೃಹ'ದಲ್ಲೂ ಆ ಚಟುವಟಿಕೆಗಳನ್ನು ನಡೆಸುತ್ತಿದ್ದಾರೆ ಎಂಬ ಮಾಹಿತಿ ತಿಳಿದು ಮನಸ್ಸು ಸಂತಾಪಿತಗೊಳ್ಳುತ್ತಿದೆ.
 
ಇಂಥ ಸಂಗತಿಗಳನ್ನು ಖಂಡಿಸಲೇ ಬೇಕಿದೆ. ಡಾ. ಬಾಬಾಸಾಹೇಬ ಅಂಬೇಡ್ಕರ್ ಅವರು ಹಾಕಿಕೊಟ್ಟ ಹಾದಿ ಬೇಡವಾಗಿದ್ದರೆ ಅವರ ಹೆಸರನ್ನೂ ಬಳಸಿಕೊಳ್ಳುವ ಅವಶ್ಯಕತೆಯಿಲ್ಲ !

Saturday, December 07, 2013

ಡಾ. ಬಾಬಾಸಾಹೇಬ ಅಂಬೇಡ್ಕರ್ ಅವರನ್ನು ನೆನಪಿಸಿಕೊಳ್ಳುತ್ತ... ...


ಡಾ. ಸಿದ್ರಾಮ ಕಾರಣಿಕ

‘ಪ್ರಜಾಪ್ರಭುತ್ವವು ಸಫಲವಾಗಬೇಕಾದರೆ ಸಮಾಜದಲ್ಲಿ ಕಣ್ಣು ಕುಕ್ಕುವ ಅಸಮಾನತೆ ಇರಬಾರದು. ದಬ್ಬಾಳಿಕೆ ಮಾಡುವ ವರ್ಗವಿರಬಾರದು. ದಮನಕ್ಕೆ ಒಳಗಾದ ವರ್ಗವೂ ಇರಬಾರದು. ಎಲ್ಲ ಸೌಲಭ್ಯಗಳನ್ನು ಹೊಂದಿ ಬರೀ ಸುಖದಲ್ಲೇ ಇರುವಂಥವರೂ ಇರಬಾರದು ಮತ್ತು ಕೇವಲ ಕಷ್ಟಗಳನ್ನೇ ಅನುಭವಿಸುವಂಥವರೂ ಇರಬಾರದು’ ಎನ್ನುವ ಮೂಲಕ ಸಾಮಾಜಿಕ ಸಮಾನತೆಯ ಕ್ರಾಂತಿಯನ್ನು ಮೊಳಗಿಸಿದ ಡಾ. ಬಾಬಾಸಾಹೇಬ ಅಂಬೇಡ್ಕರರು ನೆನಪಾಗುವುದು ಅವರ ಕ್ರಾಂತಿಯ ಇಂಥ ನಡೆ ಮತ್ತು ನುಡಿಗಳಿಂದಲೇ. ನೋವಿನಲ್ಲೂ ನಲಿವು ಕಂಡ ಈ ದೇಶದ ಮಹಾನ್ ಪುರುಷ ಅವರು. ಸುಸಂಬದ್ಧವಾದ ಸಂವಿಧಾನವನ್ನು ಈ ದೇಶಕ್ಕೆ ನೀಡಿದ ಮಹಾನ್ ಚೇತನ ಅವರು. ಸ್ವಾಭಿಮಾನವನ್ನೇ ಉಸಿರಾಗಿಸಿಕೊಂಡು ಬದುಕಿದ ಕೆಚ್ಚೆದೆಯ ಹೋರಾಟಗಾರ ಅವರು. ಅವರ ದಿಟ್ಟತನದ ಹೋರಾಟ, ದಣಿವರಿಯದ ಚಳುವಳಿ ಇಂದಿಗೂ ಹೋರಾಟಗಾರರ ದಾರಿದೀಪ.
ಇಂಥ ಹೋರಾಟಗಾರನ ಬದುಕಿನಲ್ಲಿ ಬಹುಪಾಲು ನೋವುಗಳೇ ತುಂಬಿದ್ದವು. ಅವು ಯಾವಾಗಲೂ ಅವರನ್ನು ಕಾಡುತ್ತಲೇ ಇದ್ದವು. ಕೆಲವು ಸಲ ಅವರು ಮಾನಸಿಕವಾಗಿ ಜರ್ಜಿರಿತರಾಗಿದ್ದರು. 1908 ರಲ್ಲಿ ಮಾತೋಶ್ರೀ ರಮಾಯಿಯೊಂದಿಗೆ ವಿವಾಹವಾಯಿತು. ಮುಂದೆ ಹುಟ್ಟಿದ ಐದು ಮಕ್ಕಳಲ್ಲಿ ನಾಲ್ಕು ಮಕ್ಕಳು ಒಂದು, ಒಂದುವರೆ ವರ್ಷಗಳಲ್ಲೇ ತೀರಿಕೊಂಡಿದ್ದು ಅವರಿಗೆ ಆಘಾತವನ್ನುಂಟು ಮಾಡಿತ್ತು. ಮೊದಲ ಮಗ ಯಶವಂತನನ್ನು ಹೊರತುಪಡಿಸಿದರೆ, ರಮೇಶ, ಇಂದುಮತಿ, ಗಂಗಾಧರ, ರಾಜರತ್ನ ಇನ್ನಿಲ್ಲವಾಗಿದ್ದರು. ಹಾಗಾಗಿಯೇ ಯಶವಂತನನ್ನು ಡಾ. ಬಾಬಾಸಾಹೇಬ ಅಂಬೇಡ್ಕರ್‍ರು ಯಾವುದಕ್ಕೂ ಹೆಚ್ಚು ಒತ್ತಾಯಿಸಲಿಲ್ಲ. ಇರುವ ಒಬ್ಬ ಮಗನಾದರೂ ಕಣ್ಣಮುಂದೆ ಸುಖವಾಗಿ ಇರಲಿ ಎಂಬುದು ಅವರ ಆಶಯವಾಗಿತ್ತು. 1935 ರಲ್ಲಿ ಮಾತೋಶ್ರೀ ರಮಾಯಿ ತೀರಿಕೊಂಡಾಗಲಂತೂ ಡಾ. ಬಾಬಾಸಾಹೇಬ ಅಂಬೇಡ್ಕರ್‍ರ ತಲೆ ಮೇಲೆ ಆಕಾಶವೇ ಕಳಚಿ ಬಿದ್ದಂತಾಗಿತ್ತು. ತಾನು ನೆಚ್ಚಿದ ಹೆಂಡತಿ, ತನ್ನನ್ನು, ತನ್ನ ಸಂಸಾರವನ್ನು ಸಂಭಾಳಿಸಿದ ಮಹಾಮಾತೆ ಇನ್ನಿಲ್ಲವಾದಾಗ ಅವರ ರೋಧನ ಮುಗಿಲು ಮುಟ್ಟಿತ್ತು. ಎಷ್ಟೋ ಸಲ ರಮಾಯಿಯನ್ನು ಅಂತ್ಯಸಂಸ್ಕಾರ ಮಾಡಿದ ಸ್ಥಳಕ್ಕೆ ಹೋಗಿ ಮನಸ್ಸು ಬಿಚ್ಚಿ ಕಣ್ಣೀರು ಹಾಕುತ್ತಿದ್ದರು. ಆನಂತರದಲ್ಲಿ ಸುಧಾರಿಸಿಕೊಂಡ ಡಾ. ಬಾಬಾಸಾಹೇಬ ಅಂಬೇಡ್ಕರ್‍ರು ಮತ್ತೇ ಹೋರಾಟದ ಹಾದಿಗೆ ಮರಳಿದರು.
ದಲಿತರು ಸ್ವಾಭಿಮಾನಿಯಾಗಿ ಬದುಕಬೇಕು. ಸಾಮಾಜಿಕವಾಗಿ ಸಮಾನತೆಯಿಂದ ನಳಿನಳಿಸಬೇಕು ಎಂಬ ವಿಚಾರದಿಂದ ಬಿಡುವಿಲ್ಲದ ಹೋರಾಟ ಅವರದಾಗಿತ್ತು. ಕೆಲವು ಸಂಘಟನೆಗಳನ್ನು ಕಟ್ಟಿ ಬೆಳೆಸಿದಂತೆ ರಾಜಕೀಯ ಪಕ್ಷಗಳನ್ನೂ ಕಟ್ಟಿದರು. ಕೇಂದ್ರ ಸರಕಾರದಲ್ಲಿ ಮಂತ್ರಿಯೂ ಆದರು. ಆದರೆ ಪಟ್ಟಭದ್ರರ ಸಚಿವ ಸಂಪುಟದಲ್ಲಿ ಅವರು ಬಹಳ ಕಾಲ ಇರಲಾಗಲಿಲ್ಲ. ರಾಜಕೀಯ ಮತ್ತು ಸಾಮಾಜಿಕ ಹೋರಾಟಗಳಲ್ಲಿ ಸಂಪ್ರದಾಯಿಕ ಜನರನ್ನು ಅವರು ಎದುರಿಸಿದರು. ಇನ್ನೊಂದು ಮಹತ್ವದ ವಿಚಾರವೆಂದರೆ ಡಾ. ಬಾಬಾಸಾಹೇಬ ಅಂಬೇಡ್ಕರ್‍ರ ಜೊತೆ ಹೆಜ್ಜೆ ಹಾಕಬೇಕಾದ ಎಷ್ಟೋ ದಲಿತ-ದಮನಿತರೂ ದ್ವೇಷವನ್ನು ಸಾಧಿಸತೊಡಗಿದ್ದು ! ಎರಡೂ ಕಡೆಯ ವಿರೋಧಕ್ಕೆ ಡಾ. ಬಾಬಾಸಾಹೇಬ ಅಂಬೇಡ್ಕರ್‍ರು ತಕ್ಕ ಪ್ರತಿಕ್ರಿಯೆ ನೀಡುತ್ತಲೇ ದೃಢವಾಗಿ ನಿಂತರು. ಕೆಲವರು ಡಾ. ಬಾಬಾಸಾಹೇಬ ಅಂಬೇಡ್ಕರ್‍ರ ವಿರುದ್ಧ ನಿರಂತರವಾಗಿ ಮಸಲತ್ತು ನಡೆಸಿಯೇ ಇದ್ದರು. ಆದರೆ ಯಾವುದಕ್ಕೂ ಡಾ. ಬಾಬಾಸಾಹೇಬ ಅಂಬೇಡ್ಕರ್‍ರು ಧೃತಿಗೆಡಲಿಲ್ಲ. ಆದರೂ ಚುನಾವಣೆಗಳಲ್ಲಿ ಅವರು ಸೋಲು ಅನುಭವಿಸಬೇಕಾಯಿತು.
ಈ ಎಲ್ಲ ಸಂಗತಿಗಳ ಜೊತೆಗೆ ಡಾ. ಬಾಬಾಸಾಹೇಬ ಅಂಬೇಡ್ಕರ್‍ರ ಆರ್ಥಿಕ ಪರಿಸ್ಥಿತಿ ಕೂಡ ತುಂಬ ಹದಗೆಟ್ಟಿತ್ತು. ಆದರೂ ಹೋರಾಟದ ಹಾದಿಯನ್ನು ಬಿಡದೇ ಸಾಲ ಮಾಡಿಕೊಂಡೇ ದಲಿತ-ದಮನಿತರ ಹಕ್ಕಿಗಾಗಿ ಹೋರಾಟ ನಡೆಸಿದರು ; ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡರು.
ದಲಿತ-ದಮನಿತರ ಆಶಾಕಿರಣವಾಗಿದ್ದ ಡಾ. ಬಾಬಾಸಾಹೇಬ ಅಂಬೇಡ್ಕರ್‍ರು 6ನೆಯ ಡಿಸೆಂಬರ್ 1956 ರಂದು ದೆಹಲಿಯಲ್ಲಿ ತೀರಿಕೊಂಡಾಗ ಅವರು ಮಂತ್ರಿ ಪದವಿಗೆ ರಾಜೀನಾಮೆ ಕೊಟ್ಟು ಐದು ವರ್ಷಗಳೂ ಗತಿಸಿರಲಿಲ್ಲ. ಅವರ ಪಾರ್ಥಿವ ಶರೀರವನ್ನು ಮುಂಬಾಯಿಗೆ ತೆಗೆದುಕೊಂಡು ಹೋಗಲು ಮನೆಯಲ್ಲಿ ಹಣವೇ ಇರಲಿಲ್ಲ ! ಈ ದೇಶದ ಸಂವಿಧಾನ ರಚಿಸಿದ ಮಹಾನ್ ಚಿಂತಕ ಎಂಬುದನ್ನೂ ಲಕ್ಷ್ಯಕ್ಕೆ ತೆಗೆದುಕೊಳ್ಳದ ಅಂದಿನ ಸಾರಿಗೆ ಮತ್ತು ಸಂಪರ್ಕ ಖಾತೆಯ ಮಂತ್ರಿಗಳು ದೇಹ ಸಾಗಿಸಲು ಹಣ ಬರಿಸುವಂತೆ ಕೇಳಿದ್ದರು ; ಆ ಮಂತ್ರಿ ಕೂಡ ದಲಿತರೇ ಆಗಿದ್ದರು ಎಂಬುದು ಮಾತ್ರ ಇತಿಹಾಸದ ವ್ಯಂಗ್ಯ ! ಇದು ಈ ದೇಶದ ರಾಜಕೀಯ ಸಂವಿಧಾನಶಿಲ್ಪಿಗೆ ತೋರಿದ ಅಗೌರವ ಕೂಡ.
‘ಜನರು ಆದರ್ಶಗಳಿಗಾಗಿ ಭವಿಷ್ಯದತ್ತ ನೋಡುವ ಬದಲು ಇತಿಹಾಸದತ್ತ ನೋಡಬೇಕು. ಜನರು ಸ್ವತಂತ್ರವಾಗಿ ಚಿಂತನೆ ಮಾಡದೆ, ಅನುಭವಗಳಿಂದ ಪಾಠ ಕಲಿಯದೇ ಕರಾಳಮಾರ್ಗದಲ್ಲಿ ನಡೆಯುತ್ತಿರುವುದು ಅಜ್ಞಾನವೇ ಸರಿ. ಇದು ಪ್ರಜಾಪ್ರಭುತ್ವದ ದುರಂತ’ ಎನ್ನುವ ಡಾ. ಬಾಬಾಸಾಹೇಬ ಅಂಬೇಡ್ಕರ್‍ರ ಮಾತುಗಳು ಇಂದಿಗೂ ನಮ್ಮ ಅರಿವಿನ ಪರಿಧಿಯನ್ನು ವಿಸ್ತರಿಸಬಲ್ಲವು.
ಡಾ. ಬಾಬಾಸಾಹೇಬ ಅಂಬೇಡ್ಕರ್‍ರು ಕ್ರಾಂತಿಸೂರ್ಯ. ತಮ್ಮನ್ನೇ ಸುಟ್ಟುಕೊಂಡು ಜಗತ್ತಿಗೆ ಬೆಳಕು ನೀಡಿದ ನಿಜಸೂರ್ಯ. 65ನೆಯ ವಯಸ್ಸಿನಲ್ಲಿಯೇ ಅವರ ಮಹಾಪರಿನಿರ್ವಾಣವಾಯಿತು. ಕ್ರಾಂತಿಸೂರ್ಯ ಅಸ್ತಂಗತನಾದಾಗ ದಲಿತ-ದಮನಿತರ ಪಾಲಿಗೆ ಕತ್ತಲೆ ಕವಿಯಿತು. ಆದರೆ ಡಾ. ಬಾಬಾಸಾಹೇಬ ಅಂಬೇಡ್ಕರ್‍ರ ವಿಚಾರಗಳು ಇಂದಿಗೂ ನಮ್ಮೆಲ್ಲರ ಪಾಲಿನ ಸ್ಫೂರ್ತಿಯ ಸೆಲೆಗಳಾಗಿವೆ. ಆ ಮೂಲಕ ಅವರು ಇಂದಿಗೂ ನಮ್ಮೊಂದಿಗೆ ಇದ್ದಾರೆ ಎಂದುಕೊಳ್ಳುವ ಮನಸ್ಸು ನಮ್ಮದಾಗಬೇಕು. 

Thursday, October 17, 2013

ಬಲಿತ ದಲಿತರೂ ಮತ್ತು ದರಿದ್ರ ದಲಿತರೂ....






ಬಲಿತ ದಲಿತರ ಬಗ್ಗೆ ಮತ್ತು ದರಿದ್ರ ದಲಿತರ ಬಗ್ಗೆ ಡಾ. ಬಾಬಾಸಾಹೇಬ ಅಂಬೇಡ್ಕರ್ ಅವರಿಗೆ ತುಂಬ ಖೇದವಿತ್ತು. ಅದಕ್ಕೇ ಅವರು ಹೇಳುತ್ತಿದ್ದರು : ನಾನು ಮುನ್ನಡಿಸಿಕೊಂಡ ರಥವನ್ನು ಸಾಧ್ಯವಾದರೆ ಮುಂದೆ ತೆಗೆದುಕೊಂಡು ಹೋಗಿ. ಸಾಧ್ಯವಾಗದಿದ್ದರೆ ಅದನ್ನು ಅಲ್ಲಿಯೇ ಬಿಟ್ಟು ಬಿಡಿ. ಆದರೆ ಹಿಂದಕ್ಕೆ ಮಾತ್ರ  ಎಳೆಯಬೇಡಿ ; ಸರಿಸಬೇಡಿ ! ಈ ಚಿತ್ರದ ಮೂಲಕ ಆ ಮಾತಿಗೊಂದು ಮೂರ್ತರೂಪ :

'ಇಂಗಳೆ ಮಾರ್ಗ' ಸಿನೇಮಾ ಮಾಡುವ ಮುನ್ನ.....

ಡಾ. ಸಿದ್ರಾಮ ಕಾರಣಿಕ
ದೇವರಾಯ ಇಂಗಳೆಯವರ ಬಗ್ಗೆ 'ಇಂಗಳೆ ಮಾರ್ಗ' ಎನ್ನುವ ಕನ್ನಡ ಸಿನೇಮಾವೊಂದು ರೂಪುಗೊಳ್ಳುತ್ತಿರುವುದು ಖುಷಿಯ ಸಂಗತಿ. ಅಂಥ ಪ್ರಯತ್ನ ಮಾಡುತ್ತಿರುವವರು ನಿಜಕ್ಕೂ ಶ್ಲಾಘನೀಯರು. 
ಆದರೆ ವಾಸ್ತವ ಇತಿಹಾಸವನ್ನು ಮರೆಮಾಚಿ, ಸುಳ್ಳನ್ನು ತುಂಬಿ ಬಿಡುವ ಮಂದಿ ಬಹಳ ಇದ್ದಾರೆ ಎಂಬುದನ್ನು ಚಿತ್ರದ ನಿರ್ದೇಶಕರು ತಿಳಿಯುವುದು ಉತ್ತಮ ಎಂಬುದು ನನ್ನ ಅನಿಸಿಕೆ ಮಾತ್ರವಲ್ಲ ; ದಲಿತನೊಬ್ಬನ ಇತಿಹಾಸವನ್ನು ತಿರುಚುವ ಕೆಲಸ ಆಗಬಾರದು ಎಂಬ ಕಾಳಜಿಯಾಗಿದೆ. ಬಹುಶಃ ನಿರ್ದೇಶಕರು ಇನ್ನೂ ಕೆಲವು ಸಂಗತಿಗಳನ್ನು ತಿಳಿದುಕೊಳ್ಳಬೇಕಾದ ಅವಶ್ಯಕತೆ ಇದೆ. ಅದು ಸಿನೇಮಾಗೆ ರೋಚಕತೆಯನ್ನೂ ಇತಿಹಾಸದ ದುರಂತವನ್ನೂ ಕಟ್ಟಿಕೊಡಲು ಸಾಧ್ಯವಾಗುತ್ತದೆ. ಚೇಳು ಕಡಿಸಿಕೊಂಡವನಿಗೆ ಮಾತ್ರ ಅದರ ಉರಿ ಗೊತ್ತಿರುತ್ತದೆ ಎಂಬ ವಿಚಾರವೂ ಮನಸ್ಸಿನಲ್ಲಿರಲಿ.

ಡಾ. ಬಾಬಾಸಾಹೇಬ ಅಂಬೇಡ್ಕರರ ವಿಚಾರಧಾರೆಯನ್ನೇ ಬುಡಮೇಲಾಗಿಸುವ ಪ್ರಸಂಗಗಳು ಮೇಲಿಂದ ಮೇಲೆ ಜರಗುತ್ತಿವೆ. ನಿಜವಾದ ದಲಿತರು (ಅಲ್ಪಸಂಖ್ಯಾತರನ್ನೂ ಒಳಗೊಂಡಂತೆ ಹಿಂದುಳಿದವರು, ಅಸ್ಪೃಶ್ಯರು, ಇತ್ಯಾದಿ ಜನಾಂಗ) ಧ್ವನಿ ಎತ್ತಬೇಕಾದ ಅವಶ್ಯಕತೆ ಇದೆ ಎನ್ನುವುದಕ್ಕಿಂತ ಅನಿವಾರ್ಯತೆ ಇದೆ. ದಲಿತರಲ್ಲದವರು ದಲಿತರ ಹೆಸರು ಹೇಳಿಕೊಂಡು, ಕೆಲವು ದಲಿತರನ್ನು ಒಳಗು ಮಾಡಿಕೊಂಡು ಬೆಳೆದದ್ದು ಸಾಕು. ಈಗಲೂ ನಾವು ಬಾಯಿ ಬಿಡದಿದ್ದರೆ ನಮಗೆ ಉಳಿಗಾಲವಿಲ್ಲ. ಪೇಶ್ವಾಯಿ ಹುಳಗಳಿಗೆ ನಾವು ಪಾಠ ಕಲಿಸಲೇಬೇಕು. ವೇದಿಕೆಯೊಂದು ಸಿದ್ಧವಾಗಬೇಕಾದ ತುರ್ತು ಮ್ಮ ಮುಂದೆ ಇದೆ. ಆಗ ನಾನು ಮತ್ತು ನನ್ನಂತೆಯೇ ಇರುವವರು ವಾಸ್ತವದ ಬಗ್ಗೆ ಹೇಳಲು ಮುಂದಾಗುತ್ತಾರೆ. ನಾನಂತೂ ದೇವರಾಯ ಇಂಗಳೆಯವರ ಮೂರು ಪೆಟ್ಟಿಗೆಗಳ ರಹಸ್ಯವನ್ನೂ ಬಿಚ್ಚಿಡುತ್ತೇನೆ. (ಇದನ್ನು ಸುಮಾರು ಎರಡು ವರ್ಷಗಳ ಹಿಂದೆಯೇ ಗುಲ್ಬರ್ಗ ವಿಶ್ವವಿದ್ಯಾಲಯದ ವೇದಿಕೆಯ ಮೇಲೆ ನಿಂತು ಸಾರಿದ್ದೇನೆ) ಬಲಿತ ದಲಿತರನ್ನೂ ದರಿದ್ರ ದಲಿತರನ್ನೂ ಬಿಟ್ಟು ಬೇರೆ ವಿಚಾರ ಮಾಡಬೇಕಿದೆ. ಅಂಬೇಡ್ಕರ್ ಬಿಟ್ಟು ಹೋದ ರಥವನ್ನು ಹಿಂದಕ್ಕೆ ಒಯ್ಯುವವರ ನಡ ಮುರಿಯಬೇಕಿದೆ.

Sunday, September 15, 2013

डॉ. बाबासाहेब आंबेडकरांना बौध्द सोडून इतर दलितांनी स्वीकारले आहे का..?


निलेश ठेगे

डॉ. बाबासाहेब आंबेडकरांनी अनेक आघाडयांवरून संघर्ष केला. प्रचंड लिखाण केले. वारंवार भारतात आलेल्या कमिशनना निवेदने सादर केली. अस्पृश्यांना अन्यायाच्या विरोधी लढा देण्यासाठी तयार केले. साऊथबरो कमिटी, सायमन कमिशन, गोलमेज परिषदांना त्यांनी सादर केलेली निवेदने जर बघितली तर अस्पृश्यांच्या सबळीकरणासाठी विकासासाठी त्यांची बांधीलकी तळमळ लक्षात येते. अस्पृश्यांना डिप्रेसड वर्गाना गुलामीच्या लाचारीच्या गर्तेतून बाहेर काढून अन्यायाविरुध्द लढाईस तयार करणे हे त्यांच्या लढयाचे मुख्य उद्दिष्ट होते. सामाजिक स्वातंत्र्य आणि राजकीय सबळीकरण विकास या तीन बाबी मागासलेल्या समुहांना मिळाल्या पाहीजेत यासाठी बाबासाहेबांनी प्रयत्न केले. 

अनु.जाती, जमाती, गरीब,अल्पसंख्यांक महिलांच्या सर्वसमावेशक विकासासाठी बाबासाहेबांनी १९१९ ते १९५४ दरम्यान वेळोवेळी शासनाला निवेदन देऊन जातीच्या आधारावरून होत असलेल्या भेदभावावर तोडगा काढण्यात यावा असे सुचविले. मे १९२८ ला सायमन कमिशनला दोन निवेदने दिली. गोलमेज परिषदेत दोन १९३०-१९३२ अस्पृश्यांच्या मागण्यासंबंधी अभ्यासपूर्ण निवेदने दिली. १९४० च्या दरम्यान आजच्या आरक्षण धोरणाचा आधार डॉ. आंबेडकरांनी तयार केला भारत स्वतंत्र झाल्यानंतर आरक्षण धोरणाला मूर्त स्वरुप प्राप्त झाले. बाबासाहेबांनी भारत देशाची जलनीती ( water policy ) नौकानयन विकासाचे सर्वसमावेशक प्रारुप ( inclusive development model ) मांडले ते राबविले. भारताच्या लोकसंख्या धोरणविषयीचे विचार १९३७ ला मांडले वाढत्या लोकसंख्येची समस्या हाताळण्यासाठी उपाय योजना सूचविल्या. ते देशाच्या सर्वसमावेशक विकासाचे शिल्पकार होते. अशी 'व्हिजन'आणि 'सर्वस्पर्शी परिप्रेक्ष्य' असतानाही त्यांना देशातील सर्व जनतेने स्विकारले का? हा खरा कळीचा मुद्दा आहे. 

भारतीय घटनेचे शिल्पकार, दलितांचे एवं पिछडे वर्गोंके मसीहा याच विचाराने लोक त्यांना संबोधतात. महाराष्ट्रात ५९ अनु जाती आहेत. त्यातील प्रमुख जाती म्हणजे महार (नवबौध्द) मातंग, चांभार, ढोर आणि होलर या आहेत. बौध्द वगळता इतर चार जातीनी बाबासाहेबांना सामुदायीक पातळीवरुन मान्य केले का? याचे उत्तर दुदैवाने नकारार्थी आहे. पण त्याची कारणे आपण समजून घ्यायला हवीत. बाबासाहेबांच्या महापरिनिर्वाणानंतर त्यांची मंडळी तीन विशिष्ट प्रकारे आठवण काढतात. ) सरकारी-दरबारी त्यांची आठवण निघते. भारतीय घटनेचे ते शिल्पकार होते. दलितांचे कैवारी उध्दारकर्ते होते अशी बोळवण केली जाते. समता, स्वातंत्र्य, बंधुभाव सामाजिक न्यायाच्या तत्वानुसार भारतीय समाजाची पुनर्बाधणी करण्यासाठीचे त्यांचे योगदान याकडे जाणीवपूर्वक डोळेझाक केली जाते. त्यांना victim of reductionism केले जाते. हे दलितेत्तर मंडळीकडून होते हे वेगळे सांगायला नको. बाबासाहेबंची जयंती साजरी करणे म्हणजे एक ritual चा भाग झाला आहे. ) डावे-उजवे, भगवे या राजकीय पक्षांना बाबासाहेबांच्या विचारप्रणालीची ' Allergy ' झाली आहे. डावे पक्ष बाबासाहेबांना Caste leader म्हणूनच संबोधतात. उजव्या पक्षांनी डॉ. आंबेडकरांना हिंदुत्वाच्या माहोलमध्ये Co-opt करण्याचा प्रयत्न केला. त्यांच्या नावाचे राजकारण केलं गेलं. राष्ट्र उभारणीच्या त्यांच्या विचारांची थट्टा केली गेली. ) तिस-या प्रकारात बाबासाहेबांची आठवण काढणारी दलित मंडळी आहेत. बाबासाहेबांना ते ' Symbol of revolt ' म्हणूनच स्वीकारतात. देशपातळीवर दलित जनतेनी त्यांना स्विकारले आहे. ही जनता आंबेडकरांच्या योगदानाचा, सिध्दांताचा विचारांचा वापर करतात. त्यांच्या छोटया मोठया प्रश्नांची तड लावण्यासाठी आंबेडकरी प्रेरणा हीच त्यांची शक्ती आहे. खऱ्या अर्थाने ही सामान्य जनता बाबासाहेबांची अनुयाची आहे. बाकीच्या अनुयायांविषयी बोललेलच बरं

महाराष्ट्रातील बौध्देत्तर दलितांनी बाबासाहेबांची विचारप्रणाली नेतृत्त्व स्विकारले का? याचे उत्तर 'हो' आणि 'नाही' असेच आहे. डॉ. आंबेडकरांना का स्विकारले नाही? या उत्तरासाठी आपल्याला मातंग, ढोर, चांभार होलर या प्रमुख जातींचे जाती व्यवस्थेच्या उतरंडीमध्ये 'स्थान' काय होते हे बघावे लागेल. वरील चार जातींना गावगाडयात पारंपारिक व्यवसाय होता. पारंपारिक कला कुसर हाती असल्याने आर्थिक आधार त्यांना होता. म्हणून 'जात आणि व्यवसाय' यांच्यात सातत्य राहिले. त्यामुळे त्यांचे स्थलांतर mass based वर झाले नाही. या जातींनी 'सांस्कृतिकरणाची' प्रक्रिया अवलंबवीली. या उलट नवबौध्दांनी बाबासाहेबांच्या लढयाला नेतृत्वाला विद्युतगतीने सामुदायीक समुच्चयाने प्रतिसाद दिला. दर्जा वाढविण्यासाठी सांस्कृतीकरणाच्या प्रक्रिये ऐवजी political means वापरले. परिणामी, त्यांच्या सामाजिक गतीशिलतेसाठी, इतर घटकांव्यतिरिक्त, डॉ. बाबासाहोंचा role महत्वाचा घटक राहीला आहे. यावर खूप संशोधन झाले आहे. वरील प्रकारच्या तपशीलात गेल्यास तीन प्रकारच्या images निर्माण झाल्याचे लक्षात येते.महार/नवबौध्दांनी अंगीकारलेली Aggressive strategy ,ढोर-चांभारांची imitative strategy आणि मातंगाची depressive revivalist strategy. बौध्द समुदाय प्रत्येक front वर आक्रमक Aggressive राहिला म्हणून सामाजिक गतीशिलता जास्त प्रमाणात आली.चांभार-मातंग समुदायात सामाजिक गतीशिलता हिंदू समाज व्यवस्थेच्या मुल्य व्यवस्थेच्या आधीन राहूनच आली.

बौध्दांनी डॉ.आंबेडकरांकडे Role Model म्हणूनच बघितले. 'शिका, संघटीत व्हा संघर्ष करा' या घोषणेला भरभरून प्रतिसाद दिला.अनेक संघर्षात त्यानी खूप किमंतही मोजली.पण अन्यायाविरूध्द समुच्चयाने लढण्याची ताकद त्याच्यात निर्माण झाली.आपण अन्यायाविरूध्द लढू शकतो ही मनाची तयारी झाली. हे केवळ आंबेडकरांच्या नेतृत्वामुळे शक्य झाले आहे. ज्या मंडळींनी सामुहीक समुच्चयाने डॉ.आंबेडकरांना स्वीकारले त्यांनी आंबेडकरीचे आज किती वाटे पाडलेत? तरी ते स्वतःला आपण बिनीचे आंबेडकरवादी आहोत असे समजतात ना? बौध्देत्तर दलितांच्या आंबेडकरी निष्ठा पदोपदी तपासण्यासाठी ते परीक्षकाची भूमिका घेतात. हा असा अधिकार त्यांना कसा काय प्राप्त होतो? हा एक वेगळा संशोधनाचा विषय आहे. दुदैव हे आहे की, ना सवर्णानी ना दलित अनुयायांनी बाबासाहेबांना digest केलं. digest केलं नाही तर कृतीकार्यक्रम व्यवहारात कसा आणणार? फक्त ritual म्हणून किंवा भावनात्मक पातळीवर बाबासाहेब स्विकारण्याचे दिवस केव्हाचे संपले आहेत, हे लोकांना का कळत नाही ही फार मोठी शोकांतिका आहे.

From : Prabodhan, marathi Magazine 

ದಾಸಿಮಯ್ಯನ ವಚನ

ಒಡಲುಗೊಂಡವ ಹಸಿವ;  ಒಡಲುಗೊಂಡವ ಹುಸಿವ  ಒಡಲುಗೊಂಡವನೆಂದು  ನೀನೆನ್ನ ಜರಿದೊಮ್ಮೆ ನುಡಿಯದಿರ ನೀನೆನ್ನಂತೆ ಒಮ್ಮೆ ಒಡಲುಗೊಂಡು ನೋಡ ರಾಮನಾಥ.